Subscribe to Updates
Get the latest creative news from FooBar about art, design and business.
- ದ್ವೇಷ ಭಾಷಣ ಮಸೂದೆಗೆ ಕೇಂದ್ರ ಗೃಹ ಸಚಿವಾಲಯ ಬ್ರೇಕ್: ಕರ್ನಾಟಕ ಸರ್ಕಾರಕ್ಕೆ ಭಾರಿ ಹಿನ್ನಡೆ!
- ಮುಳ್ಳಯ್ಯನಗಿರಿಯಲ್ಲಿ ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿದ ಟಿಟಿ: 13 ಪ್ರವಾಸಿಗರು ಅದೃಷ್ಟವಶಾತ್ ಪಾರು!
- ಥಿಯೇಟರ್ ಗಳಲ್ಲಿ ಹೊಸ ತಮಿಳು ಸಿನಿಮಾಗಳಿಗೆ ದಿನಕ್ಕೆ 5 ಶೋ ಪ್ರದರ್ಶನ: ಸಿಎಂ ವಿಜಯ್ ಮಹತ್ವದ ಆದೇಶ
- ರಾಜ್ಯದಲ್ಲಿ ಸಿಎಂ ಬದಲಾವಣೆ ಇಲ್ಲ: ಸ್ಪಷ್ಟನೆ ನೀಡಿದ ಆರ್.ವಿ.ದೇಶಪಾಂಡೆ
- ಇಂಧನ ದರ ಏರಿಕೆ: ರಾಜಕೀಯ ಮಾಡದೆ ವ್ಯಾಟ್ ಕಡಿಮೆ ಮಾಡಿ; ಸಿಎಂ ಸಿದ್ದರಾಮಯ್ಯಗೆ ಆರ್.ಅಶೋಕ್ ಒತ್ತಾಯ
- ಸಂಸ್ಕರಿಸದೆ ನದಿಗೆ ತ್ಯಾಜ್ಯ ಹರಿಸಿದರೆ ಕ್ರಿಮಿನಲ್ ಮೊಕದ್ದಮೆ: ಅರಣ್ಯ ಸಚಿವ ಈಶ್ವರ ಖಂಡ್ರೆ ಖಡಕ್ ಎಚ್ಚರಿಕೆ!
- ಬೇಸಿಗೆ ಕಾಲದಲ್ಲಿ ಲಿಂಬೆಹಣ್ಣುಗಳನ್ನು ದೀರ್ಘಕಾಲದವರೆಗೆ ತಾಜಾವಾಗಿಡುವುದು ಹೇಗೆ?
- ವಿಶ್ವದ ಅತ್ಯಂತ ದೊಡ್ಡ ಶಕ್ತಿ ತಾಯಿ: ಪರಿಷತ್ ಸದಸ್ಯ ಆರ್.ರಾಜೇಂದ್ರ ರಾಜಣ್ಣ
Author: admin
ಸರಕು ಸಾಗಣೆ ರೈಲಿನ ಚಕ್ರಗಳ ನಡುವಿನ ಜಾಗದಲ್ಲಿ ಅಡಗಿ ಕುಳಿತು, ಸುಮಾರು 100 ಕಿಲೋ ಮೀಟರ್ ಪ್ರಯಾಣಿಸಿದ್ದ ಅಸಹಾಯಕ ಬಾಲಕನನ್ನು, ರೈಲ್ವೆ ಪೊಲೀಸ್ ಅಧಿಕಾರಿಯೊಬ್ಬರು ರಕ್ಷಿಸಿರುವ ಘಟನೆ ಉತ್ತರಪ್ರದೇಶದ ಹರ್ದೋಯಿ ಜಿಲ್ಲೆಯಲ್ಲಿ ನಡೆದಿದೆ. ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಸುಮಾರು 100 ಕಿಲೋ ಮೀಟರ್ ದೂರ ಪ್ರಯಾಣಿಸಿದ್ದ ಬಾಲಕನನ್ನು ಕೊನೆಗೂ ರೈಲ್ವೆ ಪ್ರೊಟೆಕ್ಷನ್ ಫೋರ್ಸ್ ಅಧಿಕಾರಿ ರಕ್ಷಿಸಿದ್ದಾರೆ. ಆದರೆ ಸುಡು ಬಿಸಿಲಿನ ಶಾಖದ ನಡುವೆ ರೈಲಿನ ವ್ಹೀಲ್ ಸೆಟ್ ನಡುವೆ ಬಾಲಕ ಕುಳಿತುಕೊಂಡು ಪ್ರಯಾಣಿಸಿರುವುದು ಊಹಿಸಲು ಸಾಧ್ಯವಾಗುತ್ತಿಲ್ಲ ಎಂದು ಅಧಿಕಾರಿ ತಿಳಿಸಿದ್ದಾರೆ. ಬಾಲಕನನ್ನು ಆರ್ ಪಿಎಫ್ ಕಾನ್ಸ್ ಟೇಬಲ್ ಹೊರ ಕರೆತರುತ್ತಿರುವ ದೃಶ್ಯ ವಿಡಿಯೋದಲ್ಲಿದೆ. ಇಡೀ ದೇಹವೆಲ್ಲಾ ಕಪ್ಪು ಮಸಿಯಿಂದ ತುಂಬಿ ಹೋಗಿದ್ದ ಬಾಲಕನನ್ನು ರಕ್ಷಿಸಿದ ಕಾನ್ಸ್ ಟೇಬಲ್ ಕರ್ತವ್ಯಕ್ಕೆ ಎಲ್ಲರೂ ಮೆಚ್ಚುಗೆ ಸೂಚಿಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ಹುಬ್ಬಳ್ಳಿಯ ವಿದ್ಯಾರ್ಥಿನಿ ನೇಹಾ ಹಿರೇಮಠ ಹತ್ಯೆ ಪ್ರಕರಣ ಪ್ರೀತಿ, ಪ್ರೇಮದ ಹಿನ್ನೆಲೆಯನ್ನು ಹೊಂದಿಲ್ಲ. ಇದು ಪಕ್ಕಾ ಲವ್ ಜಿಹಾದ್. ಜನಸಂಖ್ಯೆ ಹೆಚ್ಚಿಗೆ ಮಾಡುವ ಲವ್ ಜಿಹಾದ್ ಇದಾಗಿದೆ. ಇದಕ್ಕೆ ಒಪ್ಪದಿದ್ದಕ್ಕೆ ನೇಹಾಳನ್ನು ಕೊಲೆ ಮಾಡಲಾಗಿದೆ. ಹಿಂದೂ ಹುಡುಗಿಯರು ಎಚ್ಚರಿಕೆಯಿಂದ ಇರಬೇಕು ಎಂದು ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಹೇಳಿದ್ದಾರೆ. ಈಗಾಗಲೇ ಕೇರಳದಲ್ಲಿ ಕಳೆದ 2 ವರ್ಷದಲ್ಲಿ 3 ಸಾವಿರ ಹಿಂದೂ ಯುವತಿಯರ ಮತಾಂತರ ಮಾಡಲಾಗಿದೆ. ಪ್ರೀತಿ ಬೇಡ ಎಂದ್ಮೇಲೆ ನೇಹಾ ಹತ್ಯೆ ಮಾಡಲಾಗಿದೆ. ಅದು ಕೂಡ ನೇಹಾಳನ್ನು 14 ಬಾರಿ ಚುಚ್ಚಿ ಹತ್ಯೆ ಮಾಡಲಾಗಿದೆ. ಇದುವೇ ಇಸ್ಲಾಂ ಪ್ರಕ್ರಿಯೆ ಆಗಿದೆ. ಇದರ ಹಿಂದೆ ದೊಡ್ಡ ಜಾಲ ಇದೆ ಎಂದು ಆರೋಪಿಸಿದರು. ಧಾರವಾಡದ ಅಂಜುಮನ್ ಇಸ್ಲಾಂ ಸಂಸ್ಥೆಯು ಅರ್ಧ ದಿನ ಹೋರಾಟ ಮಾಡುವ ನಾಟಕ ಮಾಡಿದೆ. ಆದರೆ, ಇದು ಮೊಸಳೆ ಕಣ್ಣೀರು ಆಗಿದೆ. ಮದರಸಾಗಳಲ್ಲಿ ಇಸ್ಲಾಂನ ಭಾಗವಾಗಿ ಲವ್ ಜಿಹಾದ್ ಕಲಿಸಲಾಗುತ್ತಿದ್ದು, ಇದು ನಿಲ್ಲಬೇಕು. ಆರೋಪಿ ಫಯಾಜ್ ಕುಟುಂಬಸ್ಥರಿಗೆ ಪತ್ವಾ ಹೊರಡಿಸಬೇಕು.…
ವಯನಾಡಿನ ಹಾಲಿ ಸಂಸದ ರಾಹುಲ್ ಗಾಂಧಿ ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಅದೇ ಕ್ಷೇತ್ರದಿಂದ ಸ್ಪರ್ಧಿಸುತ್ತಿದ್ದಾರೆ. ಇತ್ತ ಸಿಪಿಎಂ ಹಾಗೂ ಬಿಜೆಪಿ ಕೂಡ ಪ್ರಬಲ ಅಭ್ಯರ್ಥಿಗಳನ್ನೇ ಕಣಕ್ಕಿಳಿಸಿದೆ. ತೀವ್ರಿ ಜಿದ್ದಾಜಿದ್ದಿನ ಕಣವಾಗಿರುವ ವಯನಾಡಿನಲ್ಲಿ ಇದೀಗ ಕಾಂಗ್ರೆಸ್ ಗೆ ಶಾಕ್ ಎದುರಾಗಿದೆ. ಚುನಾವಣೆ ಸಮೀಪಿಸುತ್ತಿದ್ದಂತೆ ವಯನಾಡು ಕಾಂಗ್ರೆಸ್ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಪಿಎಂ ಸುಧಾಕರನ್ ಬಿಜೆಪಿ ಸೇರಿಕೊಂಡಿದ್ದಾರೆ. ಕಾಂಗ್ರೆಸ್ ತೊರೆದು ಬಿಜೆಪಿ ಸೇರಿದ ಬೆನ್ನಲ್ಲೇ ಕಾಂಗ್ರೆಸ್ ಹಾಗೂ ರಾಹುಲ್ ಗಾಂಧಿ ವಿರುದ್ಧ ಪಿಎಂ ಸುಧಾಕರನ್ ವಾಗ್ದಾಳಿ ನಡೆಸಿದ್ದಾರೆ. ಕಾಂಗ್ರೆಸ್ ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾಗಿದ್ದ ನನಗೆ ರಾಹುಲ್ ಗಾಂಧಿ ಸಿಗುತ್ತಿಲ್ಲ. ವಯನಾಡು ಕಾಂಗ್ರೆಸ್ ನ ಹಲವು ಮುಖಂಡರಿಗೆ ರಾಹುಲ್ ಗಾಂಧಿಯನ್ನು ಭೇಟಿಯಾಗಲು ಸಾಧ್ಯವಾಗಿಲ್ಲ. ಹೀಗಿರುವಾಗ ಜನಸಾಮಾನ್ಯರಿಗೆ ರಾಹುಲ್ ಗಾಂಧಿ ಸಿಗುತ್ತಾರಾ? ಎಂದು ಪಿಎಂ ಸುಧಾಕರನ್ ಪ್ರಶ್ನಿಸಿದ್ದಾರೆ. ಸದ್ಯದ ಸಮಾಜಕ್ಕೆ ಬಿಜೆಪಿ ಪಕ್ಷದ ಅವಶ್ಯಕತೆ ಇದೆ. ಪ್ರಧಾನಿ ಮೋದಿಯ ಅಭಿವೃದ್ಧಿ ಯೋಜನೆಗಳು ಕೇರಳಕ್ಕೆ ಬೇಕಾಗಿದೆ. ಕೇಂದ್ರದ ಅಭಿವೃದ್ಧಿ ಯೋಜನೆಗಳು ಕೇರಳದಲ್ಲಿ ಅನುಷ್ಠಾನಕ್ಕೆ ಬರಲು ಇಲ್ಲಿಂದ ಸಂಸದರನ್ನು…
ಸಾಧು ಸಂತರಂತೆ ಕಾವಿ ಧರಿಸಿ ಮನೆಯೊಂದಕ್ಕೆ ಬಂದು, ಮಹಿಳೆಯ ಪ್ರಜ್ಞೆ ತಪ್ಪಿಸಿ ಚಿನ್ನಾಭರಣ ಕಳ್ಳತನ ಮಾಡಿದ ಘಟನೆ ಚಿಕ್ಕಮಗಳೂರಿನ ತರೀಕೆರೆಯಲ್ಲಿ ನಡೆದಿದೆ. ನಾಲ್ವರು ಕಾವಿಧಾರಿಗಳು ಮಹಿಳೆಯ ಮನೆಗೆ ಬಂದಿದ್ದಾರೆ. ಬಳಿಕ ಪೂಜೆ ಮಾಡುವುದಾಗಿ ನಂಬಿಸಿ ಮಹಿಳೆಯ ಎಚ್ಚರ ತಪ್ಪಿಸಿ, ಮಹಿಳೆ ಧರಿಸಿದ್ದ ಚಿನ್ನಾಭರಣ ದೋಚಿ ಪರಾರಿಯಾಗಿದ್ದಾರೆ ಎನ್ನಲಾಗಿದೆ. ಮಹಿಳೆಗೆ ಎಚ್ಚರವಾದ ಮೇಲೆ ಕಳ್ಳತನವಾಗಿರುವುದು ಗೊತ್ತಾಗಿದೆ. ಈ ವೇಳೆ ಮಹಿಳೆ ನೆರೆಹೊರೆಯವರಿಗೆ ನಡೆದ ಘಟನೆ ತಿಳಿಸಿದ್ದಾರೆ. ಕಳ್ಳರನ್ನು ಹುಡುಕಿ ಹೋದ ಜನ, ರಸ್ತೆಯಲ್ಲಿ ಹೋಗುತ್ತಿದ್ದ ಅಮಾಯಕ ಬುಡುಬುಡುಕೆ ಕಾವಿಧಾರಿ ಒಬ್ಬರ ಮೇಲೆ ಹಲ್ಲೆ ನಡೆಸಿದ್ದಾರೆ. ಹಲ್ಲೆ ನಡೆಸಿದ ಬಳಿಕ ಆತ ತಪ್ಪಿತಸ್ಥನಲ್ಲ ಎಂಬುದು ತಿಳಿದು ಬಂದಿದೆ. ಈ ಸಂಬಂಧ ತರೀಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಗಳ ಪತ್ತೆಗೆ ಪೊಲೀಸರು ಬಲೆ ಬೀಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ಲೋಕಸಭೆ ಚುನಾವಣೆಗೂ ಮುನ್ನ ಬಿಜೆಪಿ ಗೆಲುವಿನ ಖಾತೆ ತೆರೆದಿದ್ದು, ಸೂರತ್ ನಲ್ಲಿ ಚುನಾವಣೆಗೂ ಮುನ್ನವೇ ಬಿಜೆಪಿ ಅಭ್ಯರ್ಥಿ ಗೆಲುವು ಸಾಧಿಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಚುನಾವಣೆಗೂ ಮುನ್ನವೇ ಸೂರತ್ ಕ್ಷೇತ್ರ ಬಿಜೆಪಿ ಖಾತೆಗೆ ಬಂದಿದೆ. ಬಿಜೆಪಿ ಅಭ್ಯರ್ಥಿ ಮುಖೇಶ್ ದಲಾಲ್ ಅವಿರೋಧವಾಗಿ ಗೆಲುವು ಸಾಧಿಸಿದ್ದಾರೆ. ಸೂರತ್ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ನೀಲೇಶ್ ಕುಂಭಾಣಿ ಅವರ ನಾಮಪತ್ರ ತಿರಸ್ಕೃತವಾಗಿದ್ದು, ಅದರ ನಂತರ ಎಲ್ಲಾ ಸ್ವತಂತ್ರ ಅಭ್ಯರ್ಥಿಗಳು ತಮ್ಮ ನಾಮಪತ್ರವನ್ನು ಹಿಂಪಡೆದಿದ್ದಾರೆ. ಹೀಗಾಗಿ ಮುಖೇಶ್ ದಲಾಲ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎನ್ನಲಾಗಿದೆ. ಸೂರತ್ ಕ್ಷೇತ್ರದಲ್ಲಿ ಬಿಜೆಪಿ ವಿರುದ್ಧದ 8 ಅಭ್ಯರ್ಥಿಗಳ ಪೈಕಿ 7 ಅಭ್ಯರ್ಥಿಗಳು ತಮ್ಮ ಅರ್ಜಿಯನ್ನು ಹಿಂಪಡೆದಿದ್ದಾರೆ. ಹಾಗಾಗಿ ಬಿಜೆಪಿಯ ಮುಖೇಶ್ ದಲಾಲ್ ಅವರನ್ನು ಅವಿರೋಧ ಆಯ್ಕೆಯಾಗಿರುವುದಾಗಿ ಘೋಷಿಸಲಾಗಿದೆ. ಕಾಂಗ್ರೆಸ್ ಅಭ್ಯರ್ಥಿ ನೀಲೇಶ್ ಕುಂಭಾಣಿ ಅವರ ನಾಮಪತ್ರ ತಿರಸ್ಕೃತಗೊಂಡಿದೆ. ಕುಂಭಣಿ ಮತ್ತು ಪಡಸಾಲ ಅವರು ಸಲ್ಲಿಸಿದ್ದ ಮೂರು ನಾಮಪತ್ರಗಳಲ್ಲಿ ಮಾಡಿರುವ ಸಹಿಯಲ್ಲಿ, ಮೇಲ್ನೋಟಕ್ಕೆ ವ್ಯತ್ಯಾಸಗಳು ಕಂಡು ಬಂದ ಹಿನ್ನೆಲೆಯಲ್ಲಿ ತಿರಸ್ಕರಿಸಲಾಗಿದೆ. ಈ ಮೂಲಕ ಸೂರತ್…
ರಾಜ್ಯದಲ್ಲಿರುವ ಅಥವಾ ದೇಶದಲ್ಲಿರುವ ರೈತರು ಸರಕಾರದ ಯಾವುದೇ ಯೋಜನೆಯನ್ನು ಪಡೆಯಬೇಕಾದರೆ ಆಧಾರ್ ಕಾರ್ಡ್ ಮತ್ತು ಹೊಲದ ಪಾಣಿ ಬಹು ಮುಖ್ಯ ಪಾತ್ರವನ್ನು ವಹಿಸುತ್ತದೆ. ಇವೆರಡು ಇಲ್ಲದೆ ಸರಕಾರದ ಯಾವುದೇ ಸವಲತ್ತು ಮತ್ತು ಸೌಲಭ್ಯಗಳು ಅವರಿಗೆ ದೊರಕುವುದಿಲ್ಲ. ಇದರಿಂದಾಗಿ ಹಾಗೂ ಯತೇಚ್ಛವಾಗಿ ನಡೆಯುವ ಭೂ ಹಗರಣ ತಡೆಯಲು ಸರ್ಕಾರ ಹೊಸ ಆದೇಶ ಹೊರಡಿಸಿದ್ದು ಆಧಾರ್ ಕಾರ್ಡ್ಅನ್ನು ಪಹಣಿಗೆ(RTC) ಲಿಂಕ್ ಮಾಡುವುದು ಕಡ್ಡಾಯ ಎಂದು ತಿಳಿಸಿದೆ. ಇಂದು ಆಸ್ತಿ, ಜಮೀನು ವಿಚಾರವಾಗಿ ಅನೇಕ ಮೋಸ, ವಂಚನೆಗಳು ನಡೆಯುತ್ತಿವೆ. ಮೃತಪಟ್ಟವರ ಹೆಸರಿನ ಪಾಣಿ ಪಡೆದು ಅನೇಕರು ಹಲವು ರೈತರನ್ನು ಯಾಮಾರಿಸುತ್ತಿದ್ದಾರೆ. ಸರಿಯಾದ ದಾಖಲೆ ಇಲ್ಲದೆ ಅನೇಕ ಭೂಗಳ್ಳರು ಹುಟ್ಟಿಕೊಂಡಿದ್ದಾರೆ. ಇದೆಲ್ಲದರ ನಿವಾರಣೆಗಾಗಿ ಸರ್ಕಾರ ಆಧಾರ್ ಕಾರ್ಡ್ ಅನ್ನು ಪಹಣಿಗೆ ಲಿಂಕ್ ಮಾಡುವುದು ಕಡ್ಡಾಯ ಎಂದು ಆದೇಶ ಹೊರಡಿಸಿದೆ. ಆಧಾರ್ ಕಾರ್ಡಿಗೆ ಪಹಣಿಯನ್ನು ಲಿಂಕ್ ಮಾಡುವ ಯಾವುದೇ ವ್ಯಕ್ತಿಯು ನಾವು ಕೆಳಗೆ ಕೊಟ್ಟಿರುವ ಮೇಲೆ ಕ್ಲಿಕ್ ಮಾಡಬೇಕು. ನಂತರ ಅಲ್ಲಿ ನಿಮ್ಮ ಆಧಾರ್ ಕಾರ್ಡ್ ನೊಂದಿಗೆ ಜೋಡಣೆ…
ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡುತ್ತಿರುವ ಕೆ.ಎಸ್. ಈಶ್ವರಪ್ಪ ಅವರನ್ನು ನಿನ್ನೆಯಷ್ಟೇ ಬಿಜೆಪಿ ಪಕ್ಷ 6 ವರ್ಷ ಉಚ್ಛಾಟನೆ ಮಾಡಿದೆ. ಈ ಕುರಿತು ಇದೀಗ ಈಶ್ವರಪ್ಪ ಮೊದಲ ಪ್ರತಿಕ್ರಿಯೆ ನೀಡಿದ್ದಾರೆ. ಬಿಜೆಪಿಯಿಂದ ಉಚ್ಛಾಟನೆ ಮಾಡಿರುವುದಕ್ಕೆ ಹೆದರುವುದಿಲ್ಲ. ಉಚ್ಛಾಟನೆ ಮಾಡಿರುವ ಆದೇಶ ನನಗೆ ಸಿಕ್ಕಿಲ್ಲ. ಮಾಧ್ಯಮಗಳಿಂದ ಇದು ಗೊತ್ತಾಗಿದೆ” ಎಂದು ಹೇಳಿದ್ದಾರೆ. ಮೋದಿ ಮೂರನೇ ಬಾರಿಗೆ ಪ್ರಧಾನಿಯಾಗಲು ಕೈ ಎತ್ತುವೆ, ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧೆ ಮಾಡುವುದು ನಿಶ್ಚಿತ. ನಾಮಪತ್ರ ವಾಪಸ್ ಪಡೆಯದೇ ಕಣದಲ್ಲಿ ಉಳಿದಿದ್ದೇನೆ. ನಾಳೆಯಿಂದ ಪ್ರಚಾರ ಕಾರ್ಯವನ್ನು ಮತ್ತಷ್ಟು ಬಿರುಸಾಗಿ ಕೈಗೊಳ್ಳುವೆ ಎಂದು ಅವರು ಹೇಳಿದರು. ಯಡಿಯೂರಪ್ಪ ಮತ್ತು ಮಕ್ಕಳ ಕೈಯಲ್ಲಿರುವ ಪಕ್ಷವನ್ನು ಮುಕ್ತ ಮಾಡಲು ನಾನು ಚುನಾವಣೆಗೆ ಸ್ಪರ್ಧಿಸಿದ್ದೇನೆ ಎಂದು ಹೇಳಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ದಾಂಡಿಯಾ ನೃತ್ಯಗಾರರನ್ನು ಗಮನಿಸುವುದಾದರೆ ಅವರು ನೃತ್ಯ ಮಾಡುತ್ತಾ ಖುಷಿ ಪಡುತ್ತಿರುತ್ತಾರೆ. ಹೀಗಾಗಿ ದಾಂಡಿಯಾ ಮಾನಸಿಕ ಒತ್ತಡವನ್ನು ಕಡಿಮೆ ಮಾಡುತ್ತದೆ. ಒಂಬತ್ತು ರಾತ್ರಿ ದಾಂಡಿಯಾ ಆಡಿದ ನಂತರ. ಇದರಿಂದ ಮನಸ್ಸು ಪ್ರಶಾಂತವಾಗುತ್ತದೆ. ದಾಂಡಿಯಾ ಆಡುವುದರಿಂದ ಮಾನಸಿಕ ಒತ್ತಡ ಕಡಿಮೆಯಾಗುತ್ತದೆ ಎನ್ನುತ್ತಾರೆ ಮನೋವಿಜ್ಞಾನಿಗಳು. ದಾಂಡಿಯಾ ಆಡುವಾಗ ಮೆದುಳಿನಲ್ಲಿ ಎಂಡಾರ್ಫಿನ್ ಹಾರ್ಮೋನ್ ಬಿಡುಗಡೆಯಾಗುತ್ತದೆ. ಇವು ಒತ್ತಡ ಮತ್ತು ಆತಂಕದಂತಹ ಮಾನಸಿಕ ಸಮಸ್ಯೆಗಳನ್ನು ನಿವಾರಿಸುತ್ತದೆ ಮತ್ತು ದೇಹ ಮತ್ತು ಮನಸ್ಸನ್ನು ಶಾಂತಗೊಳಿಸುತ್ತದೆ. ದಾಂಡಿಯಾ ಉತ್ತಮ ಏರೋಬಿಕ್ಸ್ ಎಕ್ಸಸೈಜ್ ನಂತೆ ಕೆಲಸ ಮಾಡುತ್ತದೆ. ದಾಂಡಿಯಾ ನೃತ್ಯವನ್ನು ಸರಿಯಾಗಿ ಗಮನಿಸಿದರೆ ತಲೆಯಿಂದ ಪಾದದವರೆಗೆ ಚಲನೆ ಇರುತ್ತದೆ. ಅಂದರೆ ಇಡೀ ದೇಹವು ಉತ್ತಮವಾದ ಬಿಲ್ಲಿನಂತೆ ಬಾಗುತ್ತದೆ ಮತ್ತು ತುಂಬಾ ಆಹ್ಲಾದಕರವಾಗಿರುತ್ತದೆ. ದಾಂಡಿಯಾ ದೇಹದ ಎಲ್ಲಾ ಅಂಗಗಳಿಗೆ ಉತ್ತಮ ಟಾನಿಕ್ ಆಗಿ ಕಾರ್ಯನಿರ್ವಹಿಸುತ್ತದೆ. ರಕ್ತ ಪರಿಚಲನೆ ಸರಿಯಾಗಿ ನಡೆಯುತ್ತದೆ ಮತ್ತು ನೋವು ನಿವಾರಕವಾಗಿಯೂ ಇದು ಕೆಲಸ ಮಾಡುತ್ತದೆ. ದಾಂಡಿಯಾವನ್ನು ವೇಗವಾಗಿ ಆಡಿದರೆ, ಹೃದಯ ಬಡಿತವೂ ಹೆಚ್ಚಾಗುತ್ತದೆ ಮತ್ತು ಹೃದಯವನ್ನು ಆರೋಗ್ಯವಾಗಿಡುತ್ತದೆ. ದಾಂಡಿಯಾ ಮಾಡುವುದರಿಂದ…
ಹಾಸನ: ಜಿಲ್ಲೆ ಚನ್ನರಾಯಪಟ್ಟಣದ ನ್ಯಾಷನಲ್ ಕ್ಲಾಸಿಕಲ್ ಡ್ಯಾನ್ಸ್ ಅಕಾಡೆಮಿ ಮತ್ತು ಮೈಸೂರು ನಾಡ ದೇವತೆ ಶ್ರೀ ಚಾಮುಂಡೇಶ್ವರಿ ದೇವಸ್ಥಾನ ಇವರ ಸಂಯುಕ್ತ ಆಶ್ರಯದಲ್ಲಿ ನಡೆಯುತ್ತಿರುವ 61ನೇ ರಾಷ್ಟ್ರೀಯ ನೃತ್ಯೋತ್ಸವ ಕಾರ್ಯಕ್ರಮ ಏಪ್ರಿಲ್ 20 ಮತ್ತು 21ರಂದು ಬೆಳಗ್ಗೆ 8 ಗಂಟೆಯಿಂದ ಸಂಜೆ 6ವರೆಗೆ ನಡೆದ ಎರಡು ದಿನ ಈ ಕಾರ್ಯಕ್ರಮದಲ್ಲಿ ಭಾರತ ದೇಶದ ಚೆನ್ನೈ, ಆಂಧ್ರ ಪ್ರದೇಶ್, ಒರಿಸ್ಸಾ ಗುಜರಾತ್ , ಬಿಹಾರ್ , ಉತ್ತರ ಪ್ರದೇಶ್ ಸೇರಿದಂತೆ ಕರ್ನಾಟಕದ ಹಲವಾರು ಜಿಲ್ಲೆಗಳಿಂದ ಆಗಮಿಸಿದ್ದ ಕಲಾವಿದರು ಭರತನಾಟ್ಯ, ಕುಚುಪುಡಿ, ಓಡಿಸಿ, ಕಥಕ್ ಸೇರಿದಂತೆ ವಿವಿಧ ನೃತ್ಯಗಳನ್ನು ಪ್ರದರ್ಶನ ನೀಡಿ ದೇವಾಲಯಕ್ಕೆ ಬಂದಿದ್ದ ಸಾವಿರಾರು ಭಕ್ತಾದಿಗಳ ಮನಸೆಳೆದರು. ನಿರಂತರ ಎರಡು ದಿನಗಳ ಕಾಲ ಬೆಳಗ್ಗೆಯಿಂದ ಸಂಜೆವರೆಗೆ ನಡೆದ ನೃತ್ಯೋತ್ಸವ ಕಾರ್ಯಕ್ರಮ ಜನ ಮೆಚ್ಚುಗೆ ಪಾತ್ರವಾಯಿತು . ಭಾರತೀಯ ಸಂಸ್ಕೃತಿಯ ಕಲೆಯಲ್ಲಿ ಶಾಸ್ತ್ರೀಯ ನೃತ್ಯಕ್ಕೆ ವಿಶೇಷ ಸ್ಥಾನಮಾನವಿದೆ, ರಾಷ್ಟ್ರೀಯ ಶಾಸ್ತ್ರೀಯ ನೃತ್ಯ ಅಕಾಡೆಮಿಯು ಪ್ರಸಿದ್ಧ ದೇವಾಲಯಗಳಲ್ಲಿ ಕಾರ್ಯಕ್ರಮಗಳನ್ನು ಆಯೋಜನೆ ಮಾಡುವ ಮೂಲಕ ಕಲಿಯುವ ಕಲಿಯುತ್ತಿರುವ…
ತುಮಕೂರು: ಇಂದು ಎಐಡಿಎಸ್ ಓ ತುಮಕೂರು ಜಿಲ್ಲಾ ಸಮಿತಿಯಿಂದ ಸಾರ್ವತ್ರಿಕ ಲೋಕಸಭಾ ಚುನಾವಣೆ ಹಿನ್ನಲೆಯಲ್ಲಿ ವಿದ್ಯಾರ್ಥಿಗಳು ಎದುರಿಸುತ್ತಿರುವ ಸಮಸ್ಯೆಗಳ ಕುರಿತು ಚರ್ಚಿಸಲು SUCI ಕಮ್ಯುನಿಸ್ಟ್ ಪಕ್ಷದ ತುಮಕೂರು ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಎಸ್.ಎನ್. ಸ್ವಾಮಿ ರವರಿಗೆ ಬಿಡುಗಡೆ ಮಾಡಿರುವ ವಿದ್ಯಾರ್ಥಿ ಪ್ರಣಾಳಿಕೆ ನೀಡಲಾಯಿತು. ಅಪ್ರಜಾತಾಂತ್ರಿಕವಾಗಿ ಹೇರಿರುವ ಎನ್.ಇ.ಪಿಯನ್ನು ಹಿಂಪಡೆಯಬೇಕು, ಸರ್ಕಾರಿ ಶಿಕ್ಷಣ ಸಂಸ್ಥೆಗಳನ್ನು ಬಲಪಡಿಸಬೇಕು, ನಾಲ್ಕು ವರ್ಷದ ಪದವಿಯನ್ನು ಹಿಂಪಡೆಯಬೇಕು, ಸರ್ಕಾರಿ ಎಂಜಿನಿಯರಿಂಗ್ ಕಾಲೇಜು ಸ್ಥಾಪಿಸಬೇಕು ಹಾಗೂ ಇನ್ನಿತರ ಆಗ್ರಹಗಳನ್ನೊಳಗೊಂಡ ವಿದ್ಯಾರ್ಥಿ ಪ್ರಣಾಳಿಕೆಯ ಬಗ್ಗೆ ಚರ್ಚಿಸಲು ಮನವಿ ಮಾಡಲಾಯಿತು. ಪ್ರಣಾಳಿಕೆ ನೀಡಿ ಮಾತನಾಡಿದ ಎಐಡಿಎಸ್ ಓ ಜಿಲ್ಲಾ ಕಾರ್ಯದರ್ಶಿ ಲಕ್ಕಪ್ಪ, ಎಲ್ಲಾ ಸರ್ಕಾರಗಳು ದೇಶದ ನೈಜ ಸಮಸ್ಯೆಗಳನ್ನು ಮರೆಮಾಚುತ್ತಿವೆ. ತಮ್ಮ ರಾಜಕೀಯ ಬೇಳೆ ಬೇಯಿಸಿಕೊಳ್ಳಲು ಜಾತಿ-ಧರ್ಮದ ವಿಷಯಗಳನ್ನು ಮುನ್ನಲೆಗೆ ತರಲು ಯತ್ನಿಸುತ್ತಿವೆ. ಇಂತಹ ಸಂದರ್ಭದಲ್ಲಿ ವಿದ್ಯಾರ್ಥಿಗಳು ಪ್ರಜ್ಞಾವಂತಿಕೆ ಯಿಂದ ವಿದ್ಯಾರ್ಥಿಗಳು ಎದುರಿಸುತ್ತಿರುವ ಸಮಸ್ಯೆಗಳ ಕುರಿತು ಸಂಸತ್ ನಲ್ಲಿ ಚರ್ಚೆಮಾಡುವ ರೀತಿ ಧ್ವನಿಯೆತ್ತಬೇಕಿದೆ ಎಂದರು. ದೇಶದ ಮಹಾನ್ ಕ್ರಾಂತಿಕಾರಿಗಳಾದ ಭಗತ್ ಸಿಂಗ್ ಹಾಗೂ…