Author: admin

ಚಿಕ್ಕಮಗಳೂರು: ನಗರದ IG ರಸ್ತೆಯ ಸಾರಗೋಡು ಆರ್ಕೆಡ್ ​ನಲ್ಲಿರುವ ಕರ್ನಾಟಕ ಬ್ಯಾಂಕ್ ​ನ ಶಾಖೆಯ ಕೆಳಭಾಗದಲ್ಲಿರುವ ATM ಬೆಂಕಿಗೆ ಆಹುತಿಯಾಗಿದ್ದು, ಎಟಿಎಂ ಯಂತ್ರದಲ್ಲಿದ್ದ 5 ಲಕ್ಷ ಹಣ ಸೇರಿದಂತೆ 15 ಲಕ್ಷ ಮೌಲ್ಯದ ಎಟಿಎಂ ಯಂತ್ರ ಸಂಪೂರ್ಣ ಭಸ್ಮವಾಗಿದೆ. ಶಾರ್ಟ್ ಸರ್ಕ್ಯೂಟ್ ​ನಿಂದ ಎಟಿಎಂಗೆ ಬೆಂಕಿ ತಗುಲಿರುವ ಸಾಧ್ಯತೆ ಇದೆ ಎನ್ನಲಾಗಿದೆ. ಎಟಿಎಂಗೆ ಬೆಂಕಿ ಹೊತ್ತಿಕೊಂಡ ವಿಚಾರ ಮಾಹಿತಿ ದೊರಕಿದ ಕೂಡಲೆ ಸ್ಥಳಕ್ಕೆ ಧಾವಿಸಿದ ಚಿಕ್ಕಮಗಳೂರು ಅಗ್ನಿಶಾಮಕ ದಳ ಸಿಬ್ಬಂದಿ ಬೆಂಕಿಯನ್ನು ನಂದಿಸಿದ್ದಾರೆ. ಚಿಕ್ಕಮಗಳೂರು ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296  

Read More

ತುಮಕೂರು: ಬಿಜೆಪಿಯವರು ನೇಹಾ ವಿಚಾರವನ್ನ ರಾಜಕೀಯಕ್ಕೆ ತಿರುಗಿಸಿದ್ದಾರೆ. ನನ್ನ ಮಾತಿನಿಂದ ಹೆಣ್ಣು ಮಗುವಿನ ತಂದೆಗೆ ನೋವಾಗಿದ್ರೆ ನಾನು ವಿಷಾಧಿಸುತ್ತೇನೆ ಎಂದು ಹೇಳಿದ್ದೇನೆ ಎಂದು ಗೃಹ ಸಚಿವ ಪರಮೇಶ್ವರ್ ತಿಳಿಸಿದ್ದಾರೆ. ತುಮಕೂರಿನಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು ಬಿಜೆಪಿಯವರು ನನ್ನ ಹಾಗೂ ಮುಖ್ಯಮಂತ್ರಿ ಹೇಳಿಕೆಯನ್ನ ಕಟುವಾಗಿ ಟೀಕೆ ಮಾಡ್ತಾ ಇದ್ದಾರೆ. ಅದು ಅವರ ಸಂಸ್ಕೃತಿಯನ್ನ ತೋರಿಸುತ್ತೆ ಎಂದರು. ಅವರಿಗೆ ಬಹಳ ನಿರಾಸೆಯಾಗಿದೆ. ಹಾಗಾಗಿ ಈ ಘಟನೆ ರಾಜಕೀಯಕ್ಕೆ ತರುತ್ತಿದ್ದಾರೆ. ಸರ್ಕಾರ ಈ ಘಟನೆಯನ್ನು ಸಿಓಡಿಗೆ ಕೊಡೋಕೆ ತೀರ್ಮಾನ ಮಾಡಿದೆ ಎಂದರು. ಮುಖ್ಯಮಂತ್ರಿ ಅವರು ಹಾಗೂ ನಾನು ತೀರ್ಮಾನ ಮಾಡಿ ಆದೇಶ ನೀಡಿದ್ದೇವೆ. ಸಿಓಡಿ ಟೀಂ ಇವತ್ತು ಹುಬ್ಬಳ್ಳಿ ಹೋಗಿ ಟೇಕ್ ಓವರ್ ಮಾಡ್ತಾರೆ ಎಂದರು. ಅವರ ತಂದೆ ಇನ್ನೂ ನಾಲ್ಕು ಜನ ಕೊಲೆ ಹಿಂದೆ ಇದ್ದಾರೆ ಎಂದು ಹೇಳಿದ್ದಾರೆ. ಏನೇ ಇದ್ರು ಸಿಓಡಿ ಅವರು ಹತ್ತು ದಿನದ ಒಳಗೆ ವರದಿ ಕೊಡುವಂತೆ ಹೇಳಿದೆ. ಆದೇಶ ಈಗಾಗಲೇ ಹೊರಡಿಸಿದೆ. ತಂದೆ ತಾಯಿಗಳಿಗೆ ನ್ಯಾಯ ಸಿಗುತ್ತೆ ಸತ್ಯ…

Read More

ಬೆಂಗಳೂರು: ಬಿಜೆಪಿಯವರು ಮುಸ್ಲಿಂರಿಗೆ ಚಿತ್ರ ಹಿಂಸೆ ಕೊಡುತ್ತಿದ್ದಾರೆ ಎಂಬ ಡಿಸಿಎಂ ಡಿ ಕೆ ಶಿವಕುಮಾರ್‌ ಮಾತಿಗೆ ಮಾಜಿ ಸಿಎಂ ಬಿ ಎಸ್‌ ಯಡಿಯೂರಪ್ಪ ಏಕವಚನದಲ್ಲೇ ಚಾಟಿ ಬೀಸಿದ್ದಾರೆ. ಹಾಸನದಲ್ಲಿ ಮಾತನಾಡಿದ ಅವರು, ‘ ಅವನ ತಲೆ ತಿರುಕ ಮಾತಿಗೆ ಕವಡೆ ಕಾಸಿನ ಕಿಮ್ಮತ್ತಿಲ್ಲ, ಬಿಜೆಪಿ ಎಂದಿಗೂ ಈ ದೇಶದಲ್ಲಿ ಹಿಂದೂ, ಮುಸ್ಲಿಂ, ಕ್ರಿಸ್ಚಿಯನ್‌ ಸಮುದಾಯದವರು ಒಂದೇ ತಾಯಿಯ ಮಕ್ಕಳಂತೆ ಬಾಳಬೇಕು ಎಂದು ಹೇಳುವ ಪಕ್ಷ. ಇಂತಹ ಕ್ಷುಲ್ಲಕ ಹೇಳಿಕೆ ಕೊಟ್ಟು ಮುಸ್ಲಿಂಮರ ಮನವೊಲಿಸುವ ಭ್ರಮೆಯಲ್ಲಿದ್ದಾರೆ. ಆದರೆ ಈ ಬಾರಿ ದೊಡ್ಡ ಪ್ರಮಾಣದಲ್ಲಿ ಮುಸ್ಲಿಂ ಬಂಧುಗಳ ಕೂಡ ಎನ್‌ಡಿಎಗೆ ಮತ ಹಾಕಲಿದ್ದಾರೆ’ ಎಂದು ಬಿಎಸ್‌ವೈ ಹೇಳಿದರು. ಇನ್ನು ಚುನಾವಣಾ ಪ್ರಚಾರದ ಬಗ್ಗೆ ಮಾತನಾಡಿದ ಬಿಎಸ್‌ವೈ ಹೆಚ್‌ ಡಿ ದೇವೆಗೌಡರ ಅವರ ಶ್ರಮವನ್ನು ಶ್ಲಾಘಿಸಿದ್ದಾರೆ. ದೇವೆಗೌಡರು ಬಿಜೆಪಿಯವರ ಜೊತೆ ಒಟ್ಟಾಗಿ ಓಡಾಡುತ್ತಿರುವುದರಿಂದ ನಮ್ಮ ಬಲ ಹೆಚ್ಚಿದೆ, ಎಲ್ಲರ ಪರಿಶ್ರಮದಿಂದ ನಮ್ಮ ಅಭ್ಯರ್ಥಿಗಳು ಭಾರಿ ಅಂತರದಲ್ಲಿ ಗೆಲ್ಲುತ್ತಾರೆ , ಎಂದು ಬಿಎಸ್‌ ವೈ ಹೇಳಿದರು. ನಮ್ಮತುಮಕೂರಿನ…

Read More

ರಾಮನಗರ: ಬಿಜೆಪಿ ಜೆಡಿಎಸ್‌ ಕಾರ್ಯರ್ತರ ಮಧ್ಯ ಹೊಂದಾಣಿಕೆ ಇಲ್ಲ, ಚುನಾವಣೆ ಬಳಿಕ ಅಲ್ಲೊಂದು ಮಹಾಯುದ್ಧ ನಡೆಯಲಿದೆ ಎಂದು ಡಿಸಿಎಂ ಡಿ ಕೆ ಶಿವಕುಮಾರ್‌ ಭವಿಷ್ಯ ನುಡಿದಿದ್ದಾರೆ. ಚನ್ನಪಟ್ಟಣದಲ್ಲಿ ನಡೆದ ಪ್ರಚಾರ ಸಭೆಯಲ್ಲಿ ಮಾತನಾಡಿದ ಡಿ ಕೆ ಶಿವಕುಮಾರ್‌ ಜೆಡಿಎಸ್‌ ನಾಯಕ ಹೆಚ್‌.ಡಿ. ಕುಮಾರಸ್ವಾಮಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಈ ಮೊದಲು ಕಾಂಗ್ರೆಸ್‌ ಜೆಡಿಎಸ್‌ ಸೇರಿ ಅನಿತಾ ಕುಮಾರಸ್ವಾಮಿಯವರನ್ನು ಚುನಾವಣೆಗೆ ನಿಲ್ಲಿಸಿದ್ದೆವು ಆಗ ಅವರು ಗೆದ್ದಿದ್ದರು. ಆದರೆ ಈಗ ಜೆಡಿಎಸ್‌ ಕಾರ್ಯಕರ್ತರಿಗೆ ಬಿಜೆಪಿ ಜೊತೆ ಹೊಂದಾಣಿಕೆ ಆಗಲ್ಲ. ಬಿಜೆಪಿ ಅವರಿಗೂ ಜೆಡಿಎಸ್‌ ಜೊತೆ ಹೊಂದಾಣಿಕೆ ಇಲ್ಲ. ಚುನಾವಣೆ ಬಳಿಕ ಇಲ್ಲೊಂದು ಮಹಾಯುದ್ಧ ಶುರುವಾಗಲಿದೆ ಎಂದು ಡಿಕೆಶಿ ಹೇಳಿದರು. ಜೆಡಿಎಸ್‌ ಪಕ್ಷ ಉಳಿಬೇಕು, ಜಾತ್ಯಾತೀತತೆ ಉಳಿಯಬೇಕು ಎಂಬ ಕಾರಣಕ್ಕೆ ಜೆಡಿಎಸ್‌ಗೆ ಬೆಂಬಲ ಕೊಟ್ಟು ಮುಖ್ಯಮಂತ್ರಿ ಸ್ಥಾನ ಕೊಟ್ಟಿದ್ದೆವು ಆದರೆ ಅದನ್ನು ಉಳಿಸಿಕೊಳ್ಳಲು ಆಗಲಿಲ್ಲ. ಇದೇ ಯೋಗೇಶ್ವರ್‌ ಅವತ್ತು ಹೆಚ್‌ಡಿಕೆಯನ್ನುಸಿಎಂ ಸ್ಥಾನದಿಂದ ಇಳಿಸಲು ಯತ್ನಿಸಿದ್ದರು. ಬಿ ಎಸ್‌ ಯಡಿಯೂರಪ್ಪ, ಗೋಪಾಲಯ್ಯ, ಅಶ್ವತ್ಥನಾರಾಯಣ್, ಅಶೋಕ್‌ ಎಲ್ಲಾ ಕುಮಾರಸ್ವಾಮಿಯನ್ನು…

Read More

ಈ ಪಾನೀಯಗಳನ್ನು ಕುಡಿದರೆ ಯಕೃತ್ತು ನಿರ್ವಿಷಗೊಂಡು ಸಮಸ್ಯೆಗಳು ದೂರ ಆಗುತ್ತವೆ: ದೇಹದಲ್ಲಿ ಹೊಟ್ಟೆಯ ಎಡಭಾಗದಲ್ಲಿ ನೋವು ಇದ್ದರೆ, ಅದು ಯಕೃತ್ತಿನ ಸಮಸ್ಯೆಯಾಗಿರಬಹುದು. ಕೆಲವು ಪಾನೀಯಗಳು ಯಕೃತ್ತನ್ನು ನಿರ್ವಿಷಗೊಳಿಸಲು ಸಹಾಯ ಮಾಡುತ್ತದೆ. ಬೆಳಗ್ಗೆ ಖಾಲಿ ಹೊಟ್ಟೆಯಲ್ಲಿ ಒಂದು ಲೋಟ ಬಿಸಿ ನೀರಿಗೆ ನಿಂಬೆರಸ ಬೆರೆಸಿ ಕುಡಿಯಿರಿ. ಇದರಲ್ಲಿರುವ ವಿಟಮಿನ್ ಸಿ ಲಿವರ್ ಡಿಟಾಕ್ಸ್ ಕಿಣ್ವಗಳನ್ನು ಉತ್ತೇಜಿಸುತ್ತದೆ. ಹಸಿರು ಚಹಾವು ಕ್ಯಾಟೆಚಿನ್‌ಗಳನ್ನು ಹೊಂದಿರುತ್ತದೆ. ಅವು ಶಕ್ತಿಯುತವಾದ ಉತ್ಕರ್ಷಣ ನಿರೋಧಕ. ಇದು ಯಕೃತ್ತಿಗೆ ಹಾನಿಯಾಗದಂತೆ ಸಹಾಯ ಮಾಡುತ್ತದೆ. ರಾತ್ರಿ ಹೊತ್ತಲ್ಲಿ ಈ ಆಹಾರಗಳನ್ನು ಸೇವಿಸದಿರುವುದು ಉತ್ತಮ: ರಾತ್ರಿ ಹೊತ್ತಲ್ಲಿ ಲಘು ಆಹಾರದ ಸೇವನೆ ಮಾಡುವುದು ಆರೋಗ್ಯಕ್ಕೆ ಉತ್ತಮ. ರಾತ್ರಿ ಹೊತ್ತಲ್ಲಿ ಬೇಗ ಜೀರ್ಣಿಸಿಕೊಳ್ಳುವಂತಹ ಆಹಾರಗಳನ್ನು ಸೇವಿಸಿಬೇಕು. ಆದಷ್ಟು ಬೇಗನೆ ರಾತ್ರಿ ಹೊತ್ತಲ್ಲಿ ಊಟ ಮಾಡುವುದನ್ನು ರೂಡಿಸಿಕೊಳ್ಳಬೇಕು. ರಾತ್ರು ವೇಳೆಯಲ್ಲಿ ಐಸ್‌ಕ್ರೀಂ, ಹಣ್ಣುಗಳು, ಮಾಂಸ, ಮೊಸರು, ರೊಟ್ಟಿ, ಸಿಹಿ ಪದಾರ್ಥಗಳು ಸೇರಿದಂತೆ ಜೀರ್ಣಕ್ರಿಯೆಗೆ ಹೆಚ್ಚಿನ ಸಮಯ ತೆಗೆದುಕೊಳ್ಳುವ ಆಹಾರಗಳನ್ನು ಸೇವಿಸದಿರುವುದು ಉತ್ತಮ. ಇವುಗಳನ್ನು ಸೇವಿಸುವುದರಿಂದ ಆರೋಗ್ಯದ ಮೇಲೆ…

Read More

ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ನಗರದ ಹೊರವಲಯದ ಪಾಲನಜೋಗಹಳ್ಳಿ‌ ಕೆರೆಯಲ್ಲಿ ವ್ಯಕ್ತಿಯೊಬ್ಬ ಮೀನು ಹಿಡಿಯಲು ಹೋಗಿ ‌ ನೀರು ಪಾಲಾಗಿರುವ ಘಟನೆ ನಡೆದಿದೆ. ಪ್ರಕಾಶ್ ಮೃತ ದುರ್ದೈವಿಯಾಗಿದ್ದಾರೆ. ಪ್ರಕಾಶ್ ಮೀನು ಹಿಡಿಯಲು ಸ್ನೇಹಿತನ ಜೊತೆ ಕೆರೆಯ ಬಳಿ ಹೋಗಿದ್ದಾನೆ. ಮೀನು ಹಿಡಿಯಲು ಕೆರೆಯ ಅರ್ಧಭಾಗಕ್ಕೆ ಹೋಗಿದ್ದು, ಈ ವೇಳೆ ಈಜು ಬಾರದೆ ನೀರಲ್ಲಿ ಮುಳುಗಿ ಸಾವನ್ನಪ್ಪಿದ್ದಾನೆ. ವಿಚಾರ ತಿಳಿಯುತ್ತಿದ್ದಂತೆ ಸ್ಥಳಕ್ಕಾಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಕಾರ್ಯಾಚರಣೆ ನಡೆಸಿದ್ದು, ಮೃತದೇಹವನ್ನು ಕೆರೆಯಿಂದ ಹೊರತೆಗೆದಿದ್ದಾರೆ. ಈ ಘಟನೆ ದೊಡ್ಡಬಳ್ಳಾಪುರ ಗ್ರಾಮಾಂತರ ಪೋಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

Read More

ಗಾಜಾ: ಗಾಜಾದ ಆಸ್ಪತ್ರೆ ಯೊಂದರಲ್ಲಿ 200ಕ್ಕೂ ಅಧಿಕ ಮೃತದೇಹಗಳು ಪತ್ತೆಯಾಗಿವೆ. ಇಸ್ರೇಲ್​ ಆರು ತಿಂಗಳಿಗಿಂತ ಹೆಚ್ಚು ಕಾಲ ಗಾಜಾದ ಮೇಲೆ ನಿರಂತರ ದಾಳಿ ನಡೆಸಿತ್ತು. ಏಪ್ರಿಲ್​ 7ರಂದು ಇಸ್ರೇಲಿ ಮಿಲಿಟರಿ ತನ್ನ ಸೇನೆಯನ್ನು ಹಿಂಪಡೆದಿದೆ. ಇದಾದ ಬಳಿಕ ಎಲ್ಲೆಡೆ ರಕ್ಷಣಾ ಸಿಬ್ಬಂದಿಗಳು ಜನರನ್ನು ಹುಡುಕುವ ಪ್ರಯತ್ನವನ್ನು ಮುಂದುವರೆಸಿದ್ದು, ಆಗ ಮಕ್ಕಳು, ಯುವಕರು, ಮಹಿಳೆಯರು ಸೇರಿದಂತೆ 180ಕ್ಕೂ ಅಧಿಕ ಮೃತದೇಹಗಳು ಪತ್ತೆಯಾಗಿವೆ. ಇಸ್ರೇಲಿ ಪಡೆಗಳು ಅಲ್​-ಶಿಫಾ ಆಸ್ಪತ್ರೆ ಮೇಲೆ ದಾಳಿ ನಡೆಸಿದ್ದವು. ಈ ಆಸ್ಪತ್ರೆಯ ಕೆಳಗೆ ಸುರಂಗಗಳಲ್ಲಿ ಹಮಾಸ್ ಕಮಾಂಡ್ ಸೆಂಟರ್ ಇತ್ತು. ಇದೀಗ ಇರಾನ್ ಹಾಗೂ ಇಸ್ರೇಲ್​ ನಡುವೆ ಯುದ್ಧ ನಡೆಯುತ್ತಿದೆ. ಮೊದಲು ಇರಾನ್ ಇಸ್ರೇಲ್ ಮೇಲೆ ಕ್ಷಿಪಣಿಗಳನ್ನು ಹಾರಿಸಿತ್ತು. ಬಳಿಕ ಇಸ್ರೇಲ್ ಕೂಡ ಇರಾನ್ ಮೇಲೆ ದಾಳಿ ನಡೆಸಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

Read More

ಬೆಂಗಳೂರು: ಬೆಂಗಳೂರು- ತುಮಕೂರು ಹೈವೆಯ ಮಾದಾವರ ಟೋಲ್ ಬಳಿ ರಾತ್ರಿ 10 ಗಂಟೆ ಸುಮಾರಿಗೆ ಓಮ್ನಿ ಕಾರಿಗೆ ಬಲೆನೋ ಕಾರು ಹಿಂಬದಿಯಿಂದ ಡಿಕ್ಕಿಯೊಡೆದ ಪರಿಣಾಮ ಓಮ್ನಿ‌ಕಾರು ಪಲ್ಟಿಯಾಗಿ ಬೆಂಕಿಗಾಹುತಿಯಾದ ಘಟನೆ ನಡೆದಿದೆ. ಕಾರಿನಲ್ಲಿ ಒಟ್ಟು 8 ಜನ ಪ್ರಯಾಣ ಮಾಡ್ತಿದ್ರು. ಏಳು ಜನಕ್ಕೆ ಸುಟ್ಟ ಗಾಯಗಳಾಗಿದ್ರೇ 15 ವರ್ಷದ ಹುಡುಗಿಯೊಬ್ಬಳು ಸಜೀವ ದಹನವಾಗಿದ್ದಾಳೆ. ಓಮ್ನಿ ಕಾರಿನಲ್ಲಿ ಪ್ರಯಾಣ ಮಾಡ್ತಿದ್ದ 8 ಜನರಲ್ಲಿ ದಿವ್ಯಾ ಸಾವನ್ನಪ್ಪಿದ್ರೆ ಮಾಯಾಂಕ್, ಮಂಜುಳ, ಸುನಿತಾ, ತರುಣ್, ಮಹೇಶ್, ನಮನ್ ಹಾಗೂ ಶಾಂತಿಲಾಲ್ ಗಾಯಾಳುಗಳಾಗಿದ್ದಾರೆ. ಇವರಲ್ಲಿ ನಮನ್, ಸುನಿತಾ, ಮಾಯಾಂಕ್ ಸ್ಥಿತಿ ಗಂಭೀರವಾಗಿದೆ. ಮಾದಾವರದ ಖಾಸಗಿ ಆಸ್ಪತ್ರೆಯಲ್ಲಿ ಗಾಯಾಳುಗಳು ಚಿಕಿತ್ಸೆ ಪಡೆಯುತ್ತಿದ್ದಾರೆ. ಗಾಯಾಳುಗಳುಗಳೆಲ್ಲರೂ ಗುಜರಾತಿ ಮೂಲದ ಕುಟುಂಬದವರು. ಬೆಂಗಳೂರು ಗ್ರಾಮಾಂತರ ಎಸ್. ಪಿ ಮಲ್ಲಿಕಾರ್ಜುನ್ ಬಾಲಾದಂಡಿ ಸ್ಥಳಕ್ಕೆ ಭೇಟಿ ಕೊಟ್ಟು ಪರಿಶೀಲನೆ ನಡೆಸಿದ ನಂತರ ಘಟನೆಯ ಬಗ್ಗೆ, ತುಮಕೂರು ರಸ್ತೆ ಹೈವೇಯಲ್ಲಿ 10ಗಂಟೆ ರಾತ್ರಿಯಲ್ಲಿ ಘಟನೆ ನಡೆದಿದ್ದು, ಬಲೆನೋ ಕಾರು ಹಿಂದಿನಿಂದ ಡಿಕ್ಕಿ ಹೊಡೆದಿದೆ. ಮುಂದಿದ್ದ ಕಾರು ಎರಡು ಮೂರು…

Read More

ತುಮಕೂರು: ನೇಹಾ ಹತ್ಯೆ ಖಂಡಿಸಿ ತುಮಕೂರಿನಲ್ಲಿ ಬಿಜೆಪಿ-ಜೆಡಿಎಸ್ ಪಕ್ಷದ ವತಿಯಿಂದ ಬಿಜೆಪಿ ರಾಜ್ಯಾಧ್ಯಕ್ಷ ಆರ್. ಅಶೋಕ್ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ ಮೆರವಣಿಗೆ ನಡೆಸಲಾಯಿತು. ಜಿಲ್ಲಾಧಿಕಾರಿ ಕಚೇರಿ ಬಳಿ ಆರ್. ಅಶೋಕ್ ಮಾತನಾಡಿ, “ನೇಹಾ ಹತ್ಯೆ ಪ್ರಕರಣ ಇಡೀ ರಾಜ್ಯವೇ ತಲೆತಗ್ಗಿಸುವಂತಹ ವಿಚಾರವಾಗಿದ್ದು, ಇದರಲ್ಲಿ ಯಾರೂ ರಾಜಕೀಯ ಮಾಡೋಕೆ ಬಯಸೋದಿಲ್ಲ“ ಎಂದು ಹೇಳಿದರು. ಕಾಂಗ್ರೆಸ್ ನವರಿಗೆ ತಲೆ ಇದ್ದಿದ್ದಿದ್ರೆ ತಕ್ಷಣವೇ ಕ್ರಮ ತೆಗೆದುಕೊಳ್ತೀನಿ ಅಂತಾ ಹೇಳಬೇಕಿತ್ತು. ಪರಮೇಶ್ವರ್ ಅವರು ಹೇಳ್ತಾರೆ, “ಅವರು ಲವ್ ಮಾಡಿದ್ರು ಅಂತ. ನೀವಿರೋದು ತುಮಕೂರಿನಲ್ಲಿ, ಆ ಹುಡುಗಿ ಇರೋದು ಹುಬ್ಬಳ್ಳಿಯಲ್ಲಿ. ನೀವೇನಾದ್ರು ಅವರು ಪಾರ್ಕ್ ನಲ್ಲಿ ಕೂತಿರೋದನ್ನ ನೋಡಿದ್ರ” ಎಂದು ಟೀಕಿಸಿದರು. “ಅಥವಾ ನಿಮ್ಮ ಪೊಲೀಸರೇನಾದ್ರೂ ಹೋಗಿ ವೀಡಿಯೋ ಮಾಡಿದ್ರಾ? ಮೊದಲು ತನಿಖೆ ಮಾಡ್ತೀವಿ ನಂತರ ಏನು ಅಂತಾ ಹೇಳ್ತಿವಿ ಅಂತಾ ಹೇಳಬೇಕಿತ್ತು. ನಾನು ಅವರಿಗಿಂತ ಮೊದಲು ಗೃಹ ಸಚಿವನಾಗಿದ್ದೆ. ಯಡಿಯೂರಪ್ಪ ಸರ್ಕಾರದಲ್ಲಿಯೇ ಗೃಹ ಸಚಿವನಾಗಿದ್ದರು. ಅದು ದೇಶದಲ್ಲಿಯೇ ಅತ್ಯಂತ ಶಿಸ್ತುಯುತವಾದ ಇಲಾಖೆ. ಮುಖ್ಯಮಂತ್ರಿಗಿಂತ ಹೆಚ್ಚು ಜವಾಬ್ದಾರಿ ಇರುತ್ತೆ”…

Read More

ಮಡಿಕೇರಿ: ಕೊಡಗು ಜಿಲ್ಲೆಯ ಕುಶಾಲನಗರದಲ್ಲಿ ಕುಡಿದ ಮತ್ತಿನಲ್ಲಿ ಕುಡುಕನೋರ್ವ ಬಾರ್ ಸಿಬ್ಬಂದಿಗೆ ಬಿಯರ್ ಬಾಟಲಿಯಿಂದ ಇರಿದು ಹತ್ಯೆ ಮಾಡಿರುವ ಘಟನೆ ನಡೆದಿದೆ. ಸಂತೋಷ್‌(40) ಕೊಲೆಯಾದ ಬಾರ್ ಸಿಬ್ಬಂದಿಯಾಗಿದ್ದು, ಜನತಾ ಕಾಲೋನಿಯ ಹರ್ಷ ಕೊಲೆ ಆರೋಪಿಯಾಗಿದ್ದಾನೆ. ಕುಶಾಲನಗರದ ಬಾರ್ & ರೆಸ್ಟೋರೆಂಟ್‌ ನಲ್ಲಿ ಭಾನುವಾರ ರಾತ್ರಿ ಈ ಕೃತ್ಯ ನಡೆದಿದ್ದು, ಕಂಠಪೂರ್ತಿ ಕುಡಿದಿದ್ದ ಹರ್ಷ, ಅಮಲಿನಲ್ಲಿ ಸಂತೋಷ್ ಜೊತೆಗೆ ಜಗಳ ಮಾಡಿದ್ದಾನೆ. ಇಬ್ಬರ ನಡುವೆ ಮಾತಿಗೆ ಮಾತು ಬೆಳೆದು ಪರಿಸ್ಥಿತಿ ಹದಗೆಟ್ಟು, ವಿಕೋಪಕ್ಕೆ ಹೋಗಿದೆ. ಇದರಿಂದ ಕೋಪಗೊಂಡು ಹರ್ಷ ಬಿಯರ್ ಬಾಟಲಿಯಿಂದ ಸಂತೋಷ್‌ ನ ತಲೆ ಮತ್ತು ಕುತ್ತಿಗೆಗೆ ಬಲವಾಗಿ ಇರಿದಿದ್ದಾನೆ. ತೀವ್ರ ರಕ್ತಸ್ರಾವವಾಗಿ ಗಾಯಳು ಸಂತೋಷ್ ಜೀವ ಕಳೆದುಕೊಂಡಿದ್ದಾರೆ ಎನ್ನಲಾಗಿದೆ. ಆರೋಪಿ ಹರ್ಷನನ್ನು ಬಂಧಿಸಿರುವ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಕುಶಾಲನಗರ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ…

Read More