Subscribe to Updates
Get the latest creative news from FooBar about art, design and business.
- ವಿಶ್ವದ ಅತ್ಯಂತ ದೊಡ್ಡ ಶಕ್ತಿ ತಾಯಿ: ಪರಿಷತ್ ಸದಸ್ಯ ಆರ್.ರಾಜೇಂದ್ರ ರಾಜಣ್ಣ
- ಕೊರಟಗೆರೆ: ಬಾಲಕಿಯರಿಗೆ ಸುರಕ್ಷಿತ ವಸತಿ ನಿಲಯ ಆರಂಭಕ್ಕೆ ಕ್ರಮ: ಅಪೂರ್ವ ಸಿ. ಅನಂತರಾಮು
- ಬಕ್ರೀದ್: ಶಾಂತಿಗೆ ಭಂಗ ತಂದರೆ, ಪ್ರಚೋದನೆ ನೀಡಿದ್ರೆ ಕ್ರಮ: ಕೆ.ವಿ.ಅಶೋಕ್ ಎಚ್ಚರಿಕೆ
- ವಿಶ್ವ ಕಾರ್ಮಿಕ ದಿನಾಚರಣೆ: ನೂತನ ಕಾರ್ಮಿಕ ಕಚೇರಿ ಉದ್ಘಾಟನೆ, ಹಿರಿಯ ಕಾರ್ಮಿಕರಿಗೆ ಸನ್ಮಾನ
- ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ: ನಿವೃತ್ತಿ ಅಂಚಿನಲ್ಲಿರುವ ಮುಖ್ಯೋಪಾಧ್ಯಾಯ ಅರೆಸ್ಟ್
- ನಾಳೆ ದೆಹಲಿಗೆ ಸಿಎಂ ಸಿದ್ದರಾಮಯ್ಯ ಭೇಟಿ; ನಾಯಕತ್ವ ಬದಲಾವಣೆ ಚರ್ಚೆಗಳ ನಡುವೆ ಹೈಕಮಾಂಡ್ ಬುಲಾವ್
- ಸೇಡು ತೀರಿಸಿಕೊಳ್ಳಲು ವರ್ಷದ ಬಳಿಕ ಅದೇ ಅಪ್ರಾಪ್ತೆ ಮೇಲೆ ಮತ್ತೆ ಲೈಂಗಿಕ ದೌರ್ಜನ್ಯ–ಇಬ್ಬರು ಆರೋಪಿಗಳ ಬಂಧನ
- ಭಟ್ಕಳ: ಕಪ್ಪೆಚಿಪ್ಪು ಸಂಗ್ರಹಿಸಲು ಹೋಗಿ ನೀರಲ್ಲಿ ಮುಳುಗಿ 11 ಮಂದಿ ಸಾವು!
Author: admin
ಕೊರಟಗೆರೆ: ತಾಲೂಕಿನ ಬೋಡ ಬಂಡೆನಹಳ್ಳಿ ಗ್ರಾಮದ ಸರ್ಕಾರಿ ಶಾಲೆಯ ಮತಗಟ್ಟೆಯಲ್ಲಿ ಚುನಾವಣೆಯ ಪರ್ವ ದೇಶದ ಗರ್ವ ಎಂಬ ಧ್ವಜವನ್ನು ಹಾರಿಸಿ ಮತದಾನದ ಮಹತ್ವವನ್ನು ಸಾರಲಾಯಿತು. ಮತದಾರರ ನಡೆ ಮತಗಟ್ಟೆಯ ಕಡೆ ಮತದಾನದ ಮಹತ್ವದ ಬಗ್ಗೆ ವಿಶೇಷ ಅರಿವು ಕಾರ್ಯಕ್ರಮದ ಅಂಗವಾಗಿ ಗ್ರಾಮದ ಅಶ್ವಥ್ ಕಟ್ಟೆಯ ಬಳಿ ಅಧಿಕಾರಿಗಳು ಹಾಗೂ ಗ್ರಾಮದ ಪ್ರಜ್ಞಾವಂತ ಮತದಾರರು, ಮತದಾನದ ಪ್ರತಿಜ್ಞೆ ಮಾಡುವ ಮೂಲಕ ಮತದಾನದ ಅರಿವು ಮೂಡಿಸಿದರು. ಸಂವಿಧಾನವು ನಮಗಾಗಿ ಕೊಟ್ಟ ಬಳುವಳಿ ಈ ಮಹತ್ವದ ಮತದಾನ, ಆದ್ದರಿಂದ ಪ್ರತಿಯೊಬ್ಬರೂ ಕೂಡ ಮತದಾನ ಮಾಡಬೇಕು ಮತದಾನ ನಮ್ಮ ಹಕ್ಕು ನಾವು ಅದನ್ನ ಚಲಾಯಿಸಲೇಬೇಕು. ಏಪ್ರಿಲ್ 26 ರಂದು ನಡೆಯುವ ಲೋಕಸಭಾ ಚುನಾವಣೆಯಲ್ಲಿ ಬೆಳಗ್ಗೆ 7 ರಿಂದ ಸಂಜೆ 6 ಗಂಟೆಯ ತನಕ ಮತದಾನ ಮಾಡಲು ಅವಕಾಶವಿದೆ. 18 ವರ್ಷ ಮೇಲ್ಪಟ್ಟ ಎಲ್ಲಾ ಯುವಕ ಯುವತಿಯರು ಹಿರಿಯರು ಸೇರಿ ನೂರಕ್ಕೆ ನೂರರಷ್ಟು ಮತದಾನವನ್ನು ಮಾಡಲೇಬೇಕು. ತಪ್ಪದೇ ನಾವೆಲ್ಲರೂ ಮತಗಟ್ಟೆಗೆ ತೆರಳಿ ಮತದಾನ ಮಾಡಬೇಕು ಅದು ನಮ್ಮೆಲ್ಲರ ಕರ್ತವ್ಯ…
ಸರಗೂರು: ತಾಲ್ಲೂಕಿನ ಎಂ.ಸಿ. ತಳಲು ಗ್ರಾ.ಪಂ. ವ್ಯಾಪ್ತಿಯ ಚನ್ನಗುಂಡಿ ನಮ್ಮ ಮತಗಟ್ಟೆಯಲ್ಲೆ ನಾವು ಮತ ಹಾಕ್ತೀವಿ ಬೇರೆ ಊರಿಗೆ ಹೋಗುವುದಿಲ್ಲ. ನಮ್ಮೂರಲ್ಲೇ ನಮಗೆ ಮತಗಟ್ಟೆ ಕೊಡಿ ಇಲ್ಲದಿದ್ದರೆ ಲೋಕಸಭಾ ಚುನಾವಣೆಯನ್ನು ಬಹಿಷ್ಕರಿಸುತ್ತೇವೆ ಎಂದು ಹಾಡಿಯಲ್ಲಿರುವ ಆದಿವಾಸಿ ಜನರು ಎಚ್ಚರಿಕೆ ಹಿನ್ನೆಲೆಯಲ್ಲಿ ಶುಕ್ರವಾರ ತಾಲ್ಲೂಕು ಆಡಳಿತ ಅಧಿಕಾರಿಗಳು ಸಾರ್ವಜನಿಕರ ಮನವೊಲಿಸಿದರು. ಗ್ರಾ.ಪಂ. ಮಾಜಿ ಉಪಾಧ್ಯಕ್ಷ ಚಿಕ್ಕಕ್ಯಾತ ಮಾತನಾಡಿ, ನಮ್ಮ ಹಾಡಿಯಲ್ಲಿ ಮೂಲಸೌಕರ್ಯಗಳು ಇಲ್ಲದೆ ಪರದಾಡುವಂತಾದಾಗಿದೆ. ಎರಡು ಮೂರು ವರ್ಷಗಳಿಂದ ಪ್ರಕೃತಿ ವಿಕೋಪದಿಂದ ಮನೆಗಳನ್ನು ಕಳೆದುಕೊಂಡಿದ್ದೇವೆ. ಕಂದಾಯ ಇಲಾಖೆ ಅಧಿಕಾರಿಗಳು ಮನೆಗಳನ್ನು ಮಾಡಿಸಿಕೊಡುತ್ತೇವೆ ಎಂದು ಹೇಳಿ ಹೋಗಿದ್ದಾರೆ. ಇಲ್ಲಿಯವರೆಗೂ ಯಾವುದೇ ಮನೆಗಳು ಇತರೆ ಸೌಲಭ್ಯಗಳನ್ನು ನಮ್ಮ ಹಾಡಿಗೆ ನೀಡುತ್ತಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು. ನಮ್ಮ ತಾತ ಮುತ್ತಾತನ ಕಾಲದಿಂದಲೂ ನಾವು ಚನ್ನಗುಂಡಿಹಾಡಿ ಗ್ರಾಮದಲ್ಲಿ ಮತವನ್ನು ಹಾಕಿ ಬರುತ್ತಿದ್ದೇವೆ. ನಮ್ಮೂರಲ್ಲಿ ಇದ್ದ ಮತಗಟ್ಟೆಯನ್ನು ತೆಗೆದು ಹಾಕಿ ಪಕ್ಕದ ಅರಳಹಳ್ಳಿ ಗ್ರಾಮಕ್ಕೆ ವರ್ಗಾಯಿಸಿದ್ದಾರೆ. ಅರಳಹಳ್ಳಿ ಗ್ರಾಮಕ್ಕೆ ಹೋಗಿ ಮತ ಹಾಕಬೇಕು ಎಂದು ಹೇಳುತ್ತಿದ್ದಾರೆ. ನಮ್ಮಲ್ಲಿ ವಯಸ್ಸಾದ ವೃದ್ಧರಿದ್ದಾರೆ.…
ಸರಗೂರು: ತಾಲ್ಲೂಕಿನ ಪಟ್ಟಣದ ಗ್ರಂಥಾಲಯದ ಮುಂಭಾಗದಲ್ಲಿ ರಾತ್ರಿ ಸುರಿದ ಮಳೆಯಿಂದಾಗಿ ಗ್ರಂಥಾಲಯದ ಸುತ್ತ ನೀರು ಆವರಿಸಿದ್ದು, ಸಾರ್ವಜನಿಕರು ಗ್ರಂಥಾಲಯಕ್ಕೆ ಹೋಗಲು ಪರದಾಡಿದ ಘಟನೆ ನಡೆದಿದೆ. ಪಟ್ಟಣದ ಗ್ರಂಥಾಲಯಕ್ಕೆ ಸ್ವಂತ ಕಟ್ಟಡ ಇಲ್ಲದ ಕಾರಣ ಶಾಲೆಯ ಒಂದು ಕಟ್ಟಡವನ್ನು ಗ್ರಂಥಾಲಯವಾಗಿ ಬಳಸಿಕೊಳ್ಳಲಾಗುತ್ತಿದೆ. ಮಳೆ ಬಂದರೆ ಸಾಕು ಕಟ್ಟಡದ ಮೇಲ್ಛಾವಣಿ ಸೋರಿಕೆಯಾಗುತ್ತಿದೆ. ಇದರಿಂದಾಗಿ ಗ್ರಂಥಾಲಯದ ಪುಸ್ತಕಗಳ ರಕ್ಷಣೆ ಕೂಡ ಕಷ್ಟಕರವಾಗಿದ್ದು, ಜೊತೆಗೆ ಸಾರ್ವಜನಿಕರಿಗೆ ಗ್ರಂಥಾಲಯದಲ್ಲಿ ಕುಳಿತು ಓದಲು ಕಷ್ಟಕರವಾಗಿದೆ. ಈ ಬಗ್ಗೆ ಪಟ್ಟಣ ಪಂಚಾಯತ್ ಹಾಗೂ ಸಂಬಂಧಪಟ್ಟ ಅಧಿಕಾರಿಗಳ ಗಮನಕ್ಕೆ ತಂದರೂ ಯಾವುದೇ ಕ್ರಮಕೈಗೊಂಡಿಲ್ಲ, ಗ್ರಂಥಾಲಯಕ್ಕೆ ಹೊಸ ಕಟ್ಟಡ ನಿರ್ಮಾಣ ಮಾಡುವಂತೆ ಹಲವು ಮಾಡಿ ಸಂಸದರು ಹಾಗೂ ಶಾಸಕರಿಗೆ ಮನವಿ ಮಾಡಿದರೂ ಯಾವುದೇ ಪ್ರಯೋಜನವಾಗಿಲ್ಲ, ಅಧಿಕಾರಿಗಳ ನಿರ್ಲಕ್ಷ್ಯದ ವರ್ತನೆಯಿಂದಾಗಿ ಗ್ರಂಥಾಲಯ ದುಸ್ಥಿತಿಗೆ ತಲುಪಿದೆ ಎಂದು ಸಾರ್ವಜನಿಕರು ದೂರಿದ್ದಾರೆ. ಮಳೆ ಬಂದಾಗ ಚರಂಡಿ ನೀರು ಗ್ರಂಥಾಲಯದ ಮುಂಭಾಗದಲ್ಲಿ ಶೇಖರಣೆಯಾಗುತ್ತಿದೆ. ಗ್ರಂಥಾಲಯದ ಸಮೀಪದಲ್ಲೇ ಕೋಳಿ ಅಂಗಡಿ ಕೂಡ ಕಾರ್ಯಾಚರಿಸುತ್ತಿದ್ದು, ಸಾರ್ವಜನಿಕರು ಮೂಗು ಮುಚ್ಚಿಕೊಂಡು ಗ್ರಂಥಾಲಯದೊಳಗೆ ಕುಳಿತುಕೊಳ್ಳುವಂತಾಗಿದೆ. ವಾರ್ಡ್…
ತುಮಕೂರು: ಬೆಳಗ್ಗೆ ಎಳನೀರು ಮಾರಾಟ, ರಾತ್ರಿ ದ್ವಿಚಕ್ರವಾಹನಗಳ ಕಳ್ಳತನದ ಕಳ್ಳಾಟ ನಡೆಸಿರೋ ಘಟನೆ ತುಮಕೂರಲ್ಲಿ ನಡೆದಿದೆ. ತುಮಕೂರಿನಲ್ಲಿ ಬೈಕ್ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿ, 4.6 ಲಕ್ಷ ರೂ ಮೌಲ್ಯದ ದ್ವಿಚಕ್ರವಾಹನಗಳನ್ನು ಪೊಲೀಸ್ ರು ವಶಕ್ಕೆ ಪಡಿಸಿಕೊಂಡಿದ್ದಾರೆ. ತುಮಕೂರು ತಾಲೂಕು ನಾಗವಲ್ಲಿಯ ಗಂಗರಾಜು ಎಂಬವರ ಹೋಂಡಾ ಶೈನ್ ಬೈಕ್ ಕದ್ದಿದ್ದ ಬೈಕ್ ಕಳ್ಳರು ಸಿಕ್ಕಿ ಬಿದ್ದಿದ್ದು, ಎನ್ ಆರ್ ಕಾಲೋನಿಯ ಸುದೀಪ್ (24 ), ರಾಮಮೂರ್ತಿ ಹಾಗೂ ಕಂಬತ್ತನಳ್ಳಿಯ ರಂಗನಾಥ್ ಎಂಬವ ಮೂವರನ್ನು ಹೆಬ್ಬೂರು ಪೊಲೀಸರು ಬಂಧಿಸಿದ್ದಾರೆ. ಬಂಧಿತರ ವಿರುದ್ಧ ತುಮಕೂರು ಜಿಲ್ಲೆಯ ಹೆಬ್ಬೂರು ಪೊಲೀಸ್ ಠಾಣೆಯ 1, ಕ್ಯಾತಸಂದ್ರ ಪೊಲೀಸ್ ಠಾಣೆಯ 1, ಜಯನಗರ ಪೊಲೀಸ್ ಠಾಣೆಯ 1, ತಿಲಕ್ ಪಾರ್ಕ್ ಪೊಲೀಸ್ ಠಾಣೆಯ 1. ಹೊಸ ಬಡಾವಣೆ ಪೊಲೀಸ್ ಠಾಣೆಯ 1 ಹಾಗೂ ತುಮಕೂರು ನಗರ ಪೊಲೀಸ್ ಠಾಣೆಯಲ್ಲಿ 2 ಪ್ರಕರಣ ದಾಖಲಾಗಿದೆ. ಆರೋಪಿಗಳಾದ ಸುದೀಪ್ ಮತ್ತು ರಂಗನಾಥ ವಿರುದ್ಧ ತುಮಕೂರು ನಗರ, ಗ್ರಾಮಾಂತರ …
ಚುನಾವಣಾ ಬಾಂಡ್ ಪ್ರಕರಣದಲ್ಲಿ ಮರುಪರಿಶೀಲನೆಯ ಸಾಧ್ಯತೆಯನ್ನು ಕೇಂದ್ರ ಸರ್ಕಾರ ಕೋರಿದೆ. ಕಪ್ಪುಹಣವನ್ನು ರಾಜಕೀಯದಿಂದ ಹೊರಗಿಡಲು ಚುನಾವಣಾ ಬಾಂಡ್ ವ್ಯವಸ್ಥೆಯು ಸರಿಯಾದ ಪರಿಶ್ರಮದಿಂದ ಮುಂದುವರಿಯಲು ಅವಕಾಶ ನೀಡಬೇಕು ಎಂದು ವಾದಿಸಲಾಗುತ್ತದೆ. ಚುನಾವಣೆ ಪ್ರಕ್ರಿಯೆ ಮುಗಿದ ಕೂಡಲೇ ಮನವಿ ಸಲ್ಲಿಸಲು ನಿರ್ಧರಿಸಲಾಗಿದೆ. ಫೆಬ್ರವರಿ 15, 2024 ರಂದು, ಸುಪ್ರೀಂ ಕೋರ್ಟ್ ಚುನಾವಣಾ ಬಾಂಡ್ ಯೋಜನೆಯನ್ನು ರದ್ದುಗೊಳಿಸಿತು, ಚುನಾವಣಾ ಬಾಂಡ್ಗಳು, ವ್ಯಕ್ತಿಗಳು ಮತ್ತು ಕಂಪನಿಗಳು ರಾಜಕೀಯ ಪಕ್ಷಗಳಿಗೆ ಅನಾಮಧೇಯವಾಗಿ ದೇಣಿಗೆ ನೀಡುವ ಕಾರ್ಯವಿಧಾನವಾಗಿದೆ, ಇದು ಅಸಂವಿಧಾನಿಕವಾಗಿದೆ. ಲೋಕಸಭೆ ಚುನಾವಣೆ ಸಂದರ್ಭದಲ್ಲಿ ಸುಪ್ರೀಂ ಕೋರ್ಟ್ ತೀರ್ಪು ಕೇಂದ್ರ ಸರ್ಕಾರಕ್ಕೆ ಭಾರೀ ಹೊಡೆತ ನೀಡಿತ್ತು. ದೇಶದಲ್ಲಿ ಎಲೆಕ್ಟೋರಲ್ ಬಾಂಡ್ ಅನ್ನು ಪ್ರಾಮಿಸರಿ ನೋಟ್ ನಂತೆ ಬಳಸಲಾಗುತ್ತಿದೆ ಎಂಬ ಕೇಂದ್ರದ ವಾದಕ್ಕೆ ಸುಪ್ರೀಂ ಕೋರ್ಟ್ ಬೆಲೆ ನೀಡಲಿಲ್ಲ. ಚುನಾವಣಾ ಬಾಂಡ್ ವ್ಯವಹಾರದಲ್ಲಿ ಭಾಗಿಯಾಗಿರುವ ಪಕ್ಷಗಳ ಬಗ್ಗೆ ಯಾವುದೇ ಮಾಹಿತಿಯನ್ನು ಪಡೆಯದಿರುವುದು ಕಾನೂನುಬಾಹಿರ ಎಂದು ನ್ಯಾಯಾಲಯ ಅಭಿಪ್ರಾಯಪಟ್ಟಿದೆ. ಮರುಪರಿಶೀಲನಾ ಅರ್ಜಿಯ ಮೂಲಕ ನ್ಯಾಯಾಲಯ ಎತ್ತಿರುವ ಆಕ್ಷೇಪಣೆಗಳನ್ನು ಸ್ವೀಕರಿಸಿ ವ್ಯವಸ್ಥೆಯನ್ನು ಮರುಸಂಘಟಿಸಲು ಸಿದ್ಧ…
ತಮಿಳುನಾಡಿನ ನಟ ಮತ್ತು ತಮಿಳಗಂ ವೆಟ್ರಿ ಕಳಗಂ (ಟಿವಿಕೆ) ಅಧ್ಯಕ್ಷ ವಿಜಯ್ ವಿರುದ್ಧ ಕೇಸ್ ದಾಖಲಾಗಿದ್ದು, ನಿಯಮ ಉಲ್ಲಂಘಿಸಿ ಮತದಾನದ ದಿನ ಜನಸಂದಣಿಯೊಂದಿಗೆ ಮತಗಟ್ಟೆಗೆ ಆಗಮಿಸಿದ ಹಿನ್ನೆಲೆ ಪ್ರಕರಣ ದಾಖಲಾಗಿದೆ. ಜನರು ಗುಂಪುಗುಂಪಾಗಿ ಮತಗಟ್ಟೆಗೆ ಬಂದು ಜನರಿಗೆ ತೊಂದರೆ ಕೊಡುತ್ತಾರೆ ಎಂಬ ದೂರಿನ ಮೇರೆಗೆ ಪ್ರಕರಣ ದಾಖಲಿಸಲಾಗಿದೆ. ಚೆನ್ನೈ ಸಿಟಿ ಪೊಲೀಸ್ ಕಮಿಷನರ್ ಅವರು ಸ್ವೀಕರಿಸಿದ ದೂರಿನ ಆಧಾರದ ಮೇಲೆ ಪ್ರಕರಣ ದಾಖಲಾಗಿದೆ. ವಿಜಯ್ ಅವರು ಚೆನ್ನೈನ ನೀಲಂಗರರೈ ಮತಗಟ್ಟೆಗೆ ಮತ ಹಾಕಲು ಬಂದಾಗ 200ಕ್ಕೂ ಹೆಚ್ಚು ಜನರನ್ನು ತನ್ನೊಂದಿಗೆ ಕರೆತಂದು ಸಾರ್ವಜನಿಕರಿಗೆ ಅಡ್ಡಿಪಡಿಸಿದ್ದಾರೆ ಎಂದು ಆರೋಪಿಸಿ ದೂರು ನೀಡಲಾಗಿದೆ. ವಿಜಯ್ ಮತ ಚಲಾಯಿಸಲು ಆಗಮಿಸಿದ ವೇಳೆ ವಿಜಯ್ ಅವರನ್ನು ನೋಡಲು ಅಭಿಮಾನಿಗಳು ಮತಗಟ್ಟೆಗೆ ನುಗ್ಗಿದರು. ನಂತರ ಪೊಲೀಸರು ಆಗಮಿಸಿ ಪರಿಸ್ಥಿತಿ ನಿಯಂತ್ರಿಸಿದ್ದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ಕಿವೀಸ್ ಅನ್ನು ನಿಯಮಿತವಾಗಿ ಸೇವಿಸುವುದರಿಂದ ಆಸ್ತಮಾದ ಉಸಿರಾಟದ ರೋಗಲಕ್ಷಣಗಳ ತೀವ್ರತೆಯನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ ಎಂದು ಅಧ್ಯಯನಗಳು ತೋರಿಸುತ್ತವೆ. ವಿಟಮಿನ್ ಸಿ ಅಂಶ ಮತ್ತು ಇತರ ಪ್ರಯೋಜನಕಾರಿ ಸಂಯುಕ್ತಗಳ ಕಾರಣದಿಂದಾಗಿರಬಹುದು. ಡೆಂಗ್ಯೂ ಅಥವಾ ವೈರಲ್ ಜ್ವರದಲ್ಲಿ ಪ್ಲೇಟ್ಲಿಟ್ಗಳು ಕಡಿಮೆಯಾದಾಗ ಹೆಚ್ಚು ಕಿವಿ ಹಣ್ಣುಗಳನ್ನು ತೆಗೆದುಕೊಳ್ಳಲು ಸಲಹೆ ನೀಡಲಾಗುತ್ತದೆ. ಆದಾಗ್ಯೂ, ಈ ಕಿವಿಗಳು ಕಡಿಮೆ ಕ್ಯಾಲೋರಿಗಳನ್ನು ಹೊಂದಿರುತ್ತವೆ. ಆದರೆ, ಇದು ಜೀವಸತ್ವಗಳು, ಖನಿಜಗಳು ಮತ್ತು ಉತ್ಕರ್ಷಣ ನಿರೋಧಕಗಳಲ್ಲಿ ಸಮೃದ್ದವಾಗಿದೆ. ವಿಟಮಿನ್ ಸಿ, ವಿಟಮಿನ್ ಕೆ, ವಿಟಮಿನ್ ಇ, ಪೊಟ್ಯಾಸಿಯಮ್ ಮತ್ತು ಫೋಲೇಟ್ ಸಮೃದ್ಧವಾಗಿದೆ. ಕಿವೀಸ್ ಆಹಾರದ ಫೈಬರ್ ಅನ್ನು ಸಹ ನೀಡುತ್ತದೆ. ಇದು ಜೀರ್ಣಕ್ರಿಯೆಗೆ ಪ್ರಯೋಜನಕಾರಿ. ಕಿವೀಸ್ ಸೇವನೆಯಿಂದ ಆಗುವ ಹಲವಾರು ಆರೋಗ್ಯ ಪ್ರಯೋಜನಗಳ ಬಗ್ಗೆ ಈಗ ತಿಳಿಯೋಣ. ಕಿವಿ ಹಣ್ಣು ವಿಟಮಿನ್ ಸಿ ಅನ್ನು ಹೊಂದಿರುತ್ತದೆ. ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸಲು ಸಹಾಯ ಮಾಡುತ್ತದೆ. ಆರೋಗ್ಯಕರ ಚರ್ಮ ಮತ್ತು ಬಲವಾದ ಅಂಗಾಂಶಗಳಿಗೆ ಕಾಲಜನ್ ಉತ್ಪಾದನೆಯನ್ನು ಉತ್ತೇಜಿಸುತ್ತದೆ. ಕಿವೀಸ್ ವಿಟಮಿನ್ ಸಿ, ವಿಟಮಿನ್…
ಖ್ಯಾತ ನಟಿ ಮಲೈಕಾ ಅರೋರಾ ಕಾರ್ಯಕ್ರಮ ಒಂದನ್ನು ನಡೆಸಿಕೊಟ್ಟಿದ್ದು, ಇದರಲ್ಲಿ ಮಲೈಕಾ ಜೊತೆ ಅವರ ಮಗ ಅರ್ಹಾನ್ ಕೂಡ ಇದ್ದರು. ಈ ವೇಳೆ ಮಲೈಕಾ ತನ್ನ ಮಗನಿಗೆ ವರ್ಜಿನಿಟಿ ಬಗ್ಗೆ ನೀನು ಯಾವಾಗ ಅದನ್ನು ಕಳಕೊಂಡೆ ಪ್ರಶ್ನೆ ಮಾಡಿದ್ದಾರೆ. ಪಾಡ್ ಕಾಸ್ಟ್ ನ(Podcast) ಟೀಸರ್ ರಿಲೀಸ್ ಆಗಿದೆ. ಅರ್ಹಾನ್ ಖಾನ್ ಹಾಗೂ ಮಲೈಕಾ ಅರೋರ ಅನೇಕ ವಿಚಾರಗಳ ಬಗ್ಗೆ ಚರ್ಚೆ ಮಾಡಿದ್ದಾರೆ. ವೈಯಕ್ತಿಕ ವಿಷಯಗಳ ಬಗ್ಗೆ ಕೂಡ ಅಮ್ಮ–ಮಗ ಸಿಕ್ಕಾಪಟ್ಟೆ ಬೋಲ್ಡ್ ಆಗಿ ಮಾತಾಡಿದ್ದಾರೆ. ಟೀಸರ್ ಸೋಶಿಯಲ್ ಮೀಡಿಯಾದಲ್ಲಿ ಫುಲ್ ವೈರಲ್ ಆಗಿದೆ. ಮಲೈಕಾ ತನ್ನ ಮಗ ಅರ್ಹಾನ್ ಗೆ ಮೊದಲ ಬಾರಿಗೆ ನೀನು ಯಾವಾಗ ಲೈಂಗಿಕತೆಯಲ್ಲಿ ತೊಡಗಿಕೊಂಡೆ ಎಂದು ಪ್ರಶ್ನೆ ಮಾಡಿದ್ದಾರೆ. ಜೊತೆಗೆ ನೀನು ಯಾವಾಗ ವರ್ಜಿನಿಟಿ ಕಳೆದುಕೊಂಡೆ ಅಂತಾನು ಕೇಳಿ ಶಾಕ್ ಕೊಟ್ಟಿದ್ದಾರೆ. ತಾಯಿ ಮಲೈಕಾಳ ಪ್ರಶ್ನೆಗೆ ಅರ್ಹಾನ್ ಫುಲ್ ಸೈಲೆಂಟ್ ಆಗಿದ್ದಾನೆ. ಸರಿಯಾದ ಮತ್ತು ಪ್ರಾಮಾಣಿಕ ಉತ್ತರ ಕೊಡು ಎಂದು ಮಗನಿಗೆ ತಾಕೀತು ಮಾಡಿದ್ದಾರೆ. ಆದರೆ, ಅರ್ಹಾನ್…
ಶಿಕ್ಷಕರ ವರ್ಗಾವಣೆಗೆ ಶಿಕ್ಷಕರು ಮಾಹಿತಿ ಸಲ್ಲಿಸಲು ನಿಗದಿಪಡಿಸಿದ್ದ ದಿನಾಂಕ ಪರಿಷ್ಕರಿಸಲಾಗಿದ್ದು, ವಲಯವಾರು ಶಿಕ್ಷಕರ ವರ್ಗಾವಣೆಗೆ ಅರ್ಹರ ಅಂತಿಮ ಪಟ್ಟಿಯನ್ನು ಏ.24ರಂದು ಶಿಕ್ಷಣ ಇಲಾಖೆ ಪ್ರಕಟಿಸಲಿದೆ. ಇಲಾಖೆಯು ನೀತಿ ಸಂಹಿತೆ ಮೊದಲೇ ವರ್ಗಾವಣೆಗೆ ಅರ್ಜಿ ಆಹ್ವಾನಿಸಿ ಮಾರ್ಗಸೂಚಿ ಬಿಡುಗಡೆ ಮಾಡಿದೆ. ಈ ಹಿಂದೆಯೇ ಶಿಕ್ಷಕರ ಮಾಹಿತಿಯನ್ನು ಅಪ್ ಲೋಡ್ ಮಾಡುವುದಕ್ಕೆ ಏ.18ರವರೆಗೆ ಅವಕಾಶ ನೀಡಿತ್ತು. ಇದನ್ನು ಒಂದು ದಿನದ ಮಟ್ಟಿಗೆ ವಿಸ್ತರಿಸಿದ್ದು, ಶಿಕ್ಷಕರ ತಾತ್ಕಾಲಿಕ ಕರಡು ಪಟ್ಟಿಯನ್ನು ಏ.20ರಂದು ಪ್ರಕಟಿಸಲಿದೆ. ಆಕ್ಷೇಪಣೆಗಳಿದ್ದಲ್ಲಿ ಶಿಕ್ಷಕರು ಏ.22ರೊಳಗೆ ಸಲ್ಲಿಸಬೇಕಿದೆ. ಏ.23ರಂದು ಆಕ್ಷೇಪಣೆಗಳನ್ನು ಪರಿಶೀಲಿಸಿದ ಬಳಿಕ ಏ.24ರಂದು ವಲಯವಾರು ವರ್ಗಾವಣೆಗೆ ಅರ್ಹರಾದ ಶಿಕ್ಷಕರ ಅಂತಿಮ ಪಟ್ಟಿಯನ್ನು ಶಿಕ್ಷಣ ಇಲಾಖೆಯು ಪ್ರಕಟಿಸಲಿದೆ. ಶಾಲೆ ಆರಂಭವಾಗುವ ಮೊದಲು ಕೌನ್ಸೆಲಿಂಗ್ ಹೊರತಾಗಿ ಉಳಿಯುವ ಎಲ್ಲ ಕೆಲಸವನ್ನು ಮುಗಿಸಿ, ನೀತಿ ಸಂಹಿತೆ ಬಳಿಕ ಕೌನ್ಸೆಲಿಂಗ್ ನಡೆಸಲು ಶಿಕ್ಷಣ ಇಲಾಖೆ ನಿರ್ಧರಿಸಿದೆ. ಶೇ.4ರಷ್ಟು (ಶೈಕ್ಷಣಿಕ ತಾಲೂಕಿನ ಒಳಗೆ) ವಲಯವಾರು, ಜಿಲ್ಲೆಯ ಒಳಗೆ ಶೇ.7ರಷ್ಟು ಕೋರಿಕೆ ವರ್ಗಾವಣೆ, ಶೇ.2ರಷ್ಟು ವಿಭಾಗವಾರು ವರ್ಗಾವಣೆ, ವಿಭಾಗದ ಹೊರಗೆ ಶೇ.2ರಷ್ಟು…
ನನ್ನ ಮಗಳು ಹೊಲಸು ಕೆಲಸ ಮಾಡಿಲ್ಲ. ಆತ ಆಕೆಯ ಹಿಂದೆ ಬಿದ್ದಿದ್ದ ಎಂದು ನೇಹಾಳ ತಾಯಿ ಗೀತಾ ಹಿರೇಮಠ ಹೇಳಿದ್ದಾರೆ. ಯಾರ ಕ್ಷಮೆ ಪಡೆದುಕೊಂಡು ಏನು ಮಾಡಲಿ. ನನ್ನ ಮಗಳು ವಾಪಸ್ಸು ಬರಲ್ಲವಲ್ಲ ಎಂದು ತಮ್ಮ ನಿವಾಸದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ್ದಾರೆ. ನನ್ನ ಮಗಳು ಬೋಲ್ಡ್ ಆಗಿದ್ದಳು. ಆದರೆ ನನ್ನ ಮಗಳು ಅಂಥವಳಲ್ಲ. ಒಂದೇ ಕಾಲೇಜಿನಲ್ಲಿ ಒಟ್ಟಿಗೆ ಓದುತ್ತಿದ್ದರು. ಮದುವೆ ಕುರಿತು ಮಾತನಾಡಿಲ್ಲ ಆತ. ಈಗಿನ ತಂತ್ರಜ್ಞಾನದಲ್ಲಿ ಫೋಟೋ ಹೇಗೆ ಬೇಕಾದರೂ ಎಡಿಟ್ ಮಾಡಲಾಗುತ್ತದೆ ಎಂದು ಹೇಳಿದ್ದಾರೆ. ನನ್ನ ಮಗಳಿಗೆ ಶಾಂತಿ ಸಿಗಬೇಕಾದರೆ ಆತ ಸಾಯಬೇಕು. ಆತನನ್ನು ಜೈಲಿನಲ್ಲಿಟ್ಟು ಏನು ಪ್ರಯೋಜನ? ಆತನನ್ನು ಜನರ ಕೈಗೆ ಕೊಡಿ. ಕಾಲೇಜಿಗೆ ಮೂರು ಗೇಟ್ ಇದೆ. ಯಾರು ಬರುತ್ತಾರೆ ಹೋಗುತ್ತಾರೆ? ಗೊತ್ತಿಲ್ಲ. ಈ ಘಟನೆ ನನ್ನ ಕಣ್ಣ ಮುಂದೆ ನಡೆಯಿತು. ಹತ್ತು ಹೆಜ್ಜೆ ದೂರ ಅಷ್ಟೇ ಇದ್ದೆ. ಕಲಿಯಲು ಕಳಿಸಿದರೆ ಹೆಣವಾಗಿ ಬರುತ್ತಾರೆ. ಹೆಣ್ಣು ಮಕ್ಕಳಿಗೆ ರಕ್ಷಣೆಯಿಲ್ಲ ಎಂದು ನೇಹಾ ತಾಯಿ ಹೇಳಿದ್ದಾರೆ. ನಮ್ಮತುಮಕೂರಿನ ಕ್ಷಣ…