Author: admin

ಲೋಕಸಭಾ ಚುನಾವಣೆ ಹತ್ತಿರವಾಗುತ್ತಿದ್ದಂತೆ ಚುನಾವಣಾಧಿಕಾರಿಗಳು ಎಲ್ಲೆಡೆ ತಪಾಸಣೆ ಹೆಚ್ಚಿಸಿದ್ದಾರೆ. ಈ ಮಧ್ಯೆ ಬೆಂಗಳೂರು ಚುನಾವಣಾಧಿಕಾರಿಗಳು ಬಾರ್ & ರೆಸ್ಟೋರೆಂಟ್‌ ಗಳಿಗೆ ನೋಟೀಸ್ ನೀಡಿ ಬಿಸಿ ಮುಟ್ಟಿಸಿದ್ದಾರೆ. ಅವಧಿ ಮೀರಿ ಬಾರ್ ಓಪನ್ ಮಾಡಿರುವ ಒಂದು ಸಾವಿರಕ್ಕೂ ಹೆಚ್ಚು ಬಾರ್ & ರೆಸ್ಟೋರೆಂಟ್‌ಗಳಿಗೆ ನೋಟಿಸ್ ನೀಡಿದ್ದಾರೆ. ದಾಖಲೆ ಇಲ್ಲದೇ ಮದ್ಯ ಮಾರಾಟ ಮಾಡ್ತಾ ಇದ್ದವರ ವಿರುದ್ಧ ಕಾನೂನು ಕ್ರಮಕ್ಕೆ ಮುಂದಾಗಿದ್ದಾರೆ. ಚುನಾವಣಾ ಹಿನ್ನೆಲೆ ಬಾರ್ & ರೆಸ್ಟೋರೆಂಟ್‌ಗಳಿಗೆ ಚುನಾವಣಾ ಆಯೋಗ ಕೆಲವೊಂದು ನಿಯಮ ಪಾಲನೆಗೆ ಸೂಚಿಸಿದೆ. ಅದನ್ನ ಜಿಲ್ಲಾ ಚುನಾವಣಾಧಿಕಾರಿಗಳು ಗಮನಿಸುತ್ತದ್ದಾರೆ ಎನ್ನಲಾಗಿದೆ. ಅದೇ ರೀತಿಯಲ್ಲಿ ಬೆಂಗಳೂರು ನಗರದಲ್ಲಿ ಬಾರ್ & ರೆಸ್ಟೋರೆಂಟ್‌ಗಳು, ಎಂಆರ್‌ ಪಿಗಳು ನಿಯಮ ಉಲ್ಲಂಘನೆ ಮಾಡುತ್ತಿವೆ. ಸಮಯ ಮುಗಿದಿದ್ದರೂ ಬಾರ್ ಓಪನ್ ಮಾಡಿ ವ್ಯಾಪಾರ ವ್ಯವಹಾರ ಮಾಡುತ್ತಿದ್ದಾರೆ. ನಿಯಮಕ್ಕೆ ವಿರುದ್ಧವಾಗಿ ನಡೆದುಕೊಳ್ಳುತ್ತಿವೆ. ಹೀಗಾಗಿ ಜಿಲ್ಲಾ ಚುನಾವಣಾಧಿಕಾರಿಗಳು ಒಂದು ಸಾವಿರಕ್ಕೆ ಹೆಚ್ಚು ಪ್ರಕರಣಗಳನ್ನ ದಾಖಲಿಸಿಕೊಂಡು ಬಾರ್ & ರೆಸ್ಟೋರೆಂಟ್‌ಗಳಿಗೆ ನೋಟಿಸ್ ನೀಡಲಾಗಿದೆಯಂತೆ. ಎಂಆರ್‌ಪಿ ಶಾಪ್‌ಗಳು ಕೂಡ ನಿಯಮಕ್ಕೆ ವಿರುದ್ಧವಾಗಿ ನಡೆದುಕೊಳ್ಳುತ್ತಿದ್ದಾರೆ.…

Read More

ಹುಬ್ಬಳ್ಳಿ ನೇಹಾ ಹಿರೇಮಠ್‌ ಹತ್ಯೆ ಪ್ರಕರಣದ ಕುರಿತು ನಟಿ ರಚಿತಾ ರಾಮ್‌ ಪ್ರತಿಕ್ರಿಯೆ ನೀಡಿದ್ದಾರೆ. ಕೊಲೆಗಾರನಿಗೆ ತಕ್ಕ ಶಿಕ್ಷೆ ಆಗಬೇಕು ಆದರೆ, ಗಲ್ಲಿಗೇರಿಸುವ ಬದಲು ಜನಸಾಮಾನ್ಯರ ಕೈಗೆ ಒಪ್ಪಿಸಿ ಎಂದಿದ್ದಾರೆ. ಪ್ರಕರಣ ಕುರಿತು ಇನ್‌ಸ್ಟಾಗ್ರಾಂ ನಲ್ಲಿ ಪೋಸ್ಟ್‌ ಹಾಕಿರುವ ರಚಿತಾ ರಾಮ್‌, ಈ ರೀತಿಯ ಕೃತ್ಯ ಮಾಡುವವರನ್ನು ಗಲ್ಲಿಗೇರಿಸುವ ಬದಲು ಜನಸಾಮಾನ್ಯರ ಕೈಗೆ ಒಪ್ಪಿಸಿ ಎಂದಿದ್ದಾರೆ. ಜಾತಿ, ಧರ್ಮ ಯಾವುದೇ ಆಗಿರಲಿ. ಮೊದಲು ನಾವು ಮಾನವರು. ನಾನು ಈ ಪೋಸ್ಟ್‌ ಹಾಕಲು ಕಾರಣ ಆಕೆಗೆ (ನೇಹಾ) ಆಗಿರುವ ಅನ್ಯಾಯ. ತಪ್ಪು ಯಾರೇ ಮಾಡಿದರು ತಪ್ಪೆ ಎಂದು ನಟಿ ಅಭಿಪ್ರಾಯಪಟ್ಟಿದ್ದಾರೆ. ಸರ್ಕಾರಕ್ಕೆ ನನ್ನ ಒಂದು ಮನವಿ! ರಾಜಕೀಯ ಆಯಾಮದಲ್ಲಿ ಈ ವಿಷಯವನ್ನು ತರಬೇಡಿ. ಆಗಿರೋದು ಅನ್ಯಾಯ. ಈಗ ನ್ಯಾಯ ಬೇಕಾಗಿದೆ ಅಷ್ಟೆ. ಈ ರೀತಿಯ ಕೃತ್ಯ ಮಾಡುವವರನ್ನು ಗಲ್ಲಿಗೇರಿಸುವ ಬದಲು ಅವರನ್ನು ಜನಸಾಮಾನ್ಯರ ಕೈಗೆ ಒಪ್ಪಿಸಿ ಎಂದು ಒತ್ತಾಯಿಸಿದ್ದಾರೆ. ಅಲ್ಲದೇ #wewantjustice ಎಂದು ಟ್ಯಾಗ್‌ ಹಾಕಿ ನೇಹಾಗೆ ರಚಿತಾ ರಾಮ್ ಪೋಸ್ಟ್ ಹಂಚಿಕೊಂಡಿದ್ದಾರೆ.…

Read More

ಯಾವುದೇ ಸರ್ಕಾರಿ ಬಸ್‌ ಗಳಲ್ಲಿ ನಿಯಮದ ಪ್ರಕಾರ ಟಿಕೆಟ್‌ ಇಲ್ಲದೆ ಪ್ರಯಾಣ ಮಾಡುವಂತಿಲ್ಲ. ಆದರೂ ಇತ್ತೀಚಿನ ದಿನಗಳಲ್ಲಿ ಈ ನಿಯಮವನ್ನು ಉಲ್ಲಂಘಿಸುವವರ ಸಂಖ್ಯೆ ಹೆಚ್ಚಾಗಿದೆ. ಅದರಲ್ಲೂ ಪ್ರಮುಖವಾಗಿ ಬೆಂಗಳೂರಿನಲ್ಲಿ. ಇನ್ನು ಬಿಎಂಟಿಸಿ ಬಸ್‌ ಗಳಲ್ಲಿ ಮಾರ್ಚ್‌ ತಿಂಗಳಲ್ಲಿ ಟಿಕೆಟ್ ರಹಿತವಾಗಿ ಪ್ರಯಾಣಿಸಿದ 3,840 ಪ್ರಯಾಣಿಕರಿಗೆ ದಂಡ ವಿಧಿಸಲಾಗಿದೆ. ಕಳೆದ ಮಾರ್ಚ್‌ ತಿಂಗಳಿನಲ್ಲಿ ಬಿಎಂಟಿಸಿ ಬಸ್‌ಗಳಲ್ಲಿ 17,900 ಟ್ರಿಪ್‌ಗಳನ್ನು ತಪಾಸಣೆ ಮಾಡಲಾಗಿದ್ದು, ಟಿಕೆಟ್‌ ಇಲ್ಲದೆ ಪ್ರಯಾಣ ಮಾಡಿದ್ದ 3,840 ಮಂದಿ ಪತ್ತೆ ಸಿಕ್ಕಿಬಿದ್ದಿದ್ದರು. ಇನ್ನು ಇವರಿಂದ 7,65,090 ರೂಪಾಯಿ ದಂಡ ವಸೂಲಿ ಮಾಡಲಾಗಿದ್ದು, ಮತ್ತೊಂದೆಡೆ ಕರ್ತವ್ಯ ಲೋಪವೆಸಗಿದ ಹಿನ್ಬೆಲೆ ಬಿಎಂಟಿಸಿ ಸಂಸ್ಥೆಯು 1,101 ನಿರ್ವಾಹಕರ ವಿರುದ್ಧವೂ ಪ್ರಕರಣ ದಾಖಲಿಸಿದೆ ಎಂದು ತಿಳಿದುಬಂದಿದೆ. ಇನ್ನು ಮಹಿಳಾ ಪ್ರಯಾಣಿಕರಿಗೆಂದೇ ಮೀಸಲಾಗಿರುವ ಆಸನಗಳಲ್ಲಿ ಕುಳಿತು ಪ್ರಯಾಣ ಮಾಡಿದ 530 ಪುರುಷ ಪ್ರಯಾಣಿಕರಿಗೆ 53,000 ರೂಪಾಯಿ ದಂಡ ವಿಧಿಸಲಾಗಿದೆ ಎಂದು ಬಿಎಂಟಿಸಿ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ ಎಂದು ವರದಿ ತಿಳಿಸಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು…

Read More

ಹುಲಿ ದಾಳಿಯಿಂದ ಮರಿ ಆನೆ ಸಾವಿಗೀಡಾದ ಘಟನೆ ಬಂಡೀಪುರ ಅರಣ್ಯದಲ್ಲಿ ನಡೆದಿದೆ. ಇನ್ನು ತಾಯಿ ಆನೆಯು ಸಾವನ್ನಪ್ಪಿದ ಮರಿ ಆನೆಯ ಶವ ಬಿಟ್ಟು ಕದಲದೇ ಕಾದು ಕುಳಿತಿದ್ದು, ಈ ದೃಶ್ಯ ಮನಕಲಕುವಂತಿದೆ. ಈ ಘಟನೆ ಎಪ್ರಿಲ್ 20ರ ಮಧ್ಯಾಹ್ನದ ವೇಳೆಗೆ ನಡೆದಿದೆ. ಹೆತ್ತವರಿಗೆ ಹೆಗ್ಗಣವು ಮುದ್ದು ಎಂಬಂತೆ, ಪ್ರಾಣಿಗಳು ಕೂಡ ತಮ್ಮ ಮರಿಗಳ ರಕ್ಷಣೆ ಮಾಡುತ್ತವೆ. ಇನ್ನು ಇದೀಗ ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆ ತಾಲೂಕಿನ ಬಂಡೀಪುರ ಹುಲಿ ಸಂರಕ್ಷಿತ ಅರಣ್ಯದಲ್ಲಿ ಹುಲಿ ದಾಳಿಯಿಂದ ಮರಿ ಆನೆ ಸಾವನ್ನಪ್ಪಿದೆ. ಬಳಿಕ ಸ್ಥಳಕ್ಕೆ ಆಗಮಿಸಿದ ತಾಯಿ ಆನೆ ತನ್ನ ಮರಿಯ ಶವವನ್ನು ಬಿಟ್ಟು ಕದಲದೆ ಕಣ್ಣೀರಾಕುತ್ತಾ ಕುಳಿತಿರುವ ಮನಕಲಕುವ ದೃಶ್ಯ ಇದೀಗ ಎಲ್ಲೆಡೆ ವೈರಲ್‌ ಆಗುತ್ತಿದೆ. ಇನ್ನು ಇದನ್ನು ಕಂಡ ಸಾವಿರಾರು ಪ್ರಯಾಣಿಕರು, ಅಲ್ಲಿ ನೆರೆದಿದ್ದ ಜನರು ಕೂಡ ಕಣ್ಣಿರಿಟ್ಟ ಘಟನೆ ನಡೆದಿದೆ. ಮತ್ತೊಂದೆಡೆ ರಸ್ತೆ ಪಕ್ಕದಲ್ಲೇ ಆನೆ ಮರಿ ಸಾವನ್ನಪ್ಪಿರುವ ಹಿನ್ನೆಲೆ ಬಂಡೀಪುರ ಅರಣ್ಯ ವ್ಯಾಪ್ತಿಯ ಮೈಸೂರು ಊಟಿ ರಸ್ತೆ ಸಂಚಾರ ಅಸ್ತವ್ಯಸ್ತವಾಗಿದ್ದು,…

Read More

ಲೋಕ ಸಭಾ ಚುನಾವಣೆಯ ಫಲಿತಾಂಶ ಹೊರಬಿದ್ದ ಬೆನ್ನಲ್ಲೇ ರಾಜ್ಯದ ಮುಖ್ಯಮಂತ್ರಿ ಕುರ್ಚಿ ಅಲುಗಾಡಲಿದೆ ಎಂದು ಮಾಜಿ ಮುಖ್ಯಮಂತ್ರಿ ಡಿ.ವಿ. ಸದಾನಂದ ಗೌಡ ಹೇಳಿದ್ದಾರೆ. ಕುಶಾಲನಗರದ ಗೌಡ ಸಮಾಜದ ಆವರಣದಲ್ಲಿ ಮೈಸೂರು– ಕೊಡಗು ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಯದುವೀರ್ ಪರ ನಡೆದ ಪ್ರಚಾರ ಸಭೆಯಲ್ಲಿ ಮಾತನಾಡಿ, ರಾಜ್ಯ ಸರಕಾರ‌ದ ಗ್ಯಾರಂಟಿ ಯೋಜನೆ ಸರಕಾರದ ಖಜಾನೆ ಖಾಲಿಯಾದ ಅನಂತರ ಬಂದ್‌ ಆಗಲಿದೆ. ಪ್ರಧಾನಮಂತ್ರಿ ನರೇಂದ್ರ ಮೋದಿ ಅವರದ್ದು ಶಾಶ್ವತ ಯೋಜನೆ ಎಂದರು. ಕಾಂಗ್ರೆಸ್‌ ಅಪಪ್ರಚಾರದ ಆಧಾರದಲ್ಲಿ ಗೆಲುವಿಗೆ ಶತ ಪ್ರಯತ್ನ ಮಾಡುತ್ತಿದೆ. ರಾಜ್ಯದಲ್ಲಿ ಕಾಂಗ್ರೆಸ್‌ ಸರಕಾರ ಬಂದಿರುವುದು ಜನರ ದುರ್ದೈವ. ಈ ಬಾರಿಯ ಚುನಾವಣೆ ವಿಭಿನ್ನವಾಗಿದ್ದು, ಜಾತಿ ಲೆಕ್ಕಾಚಾರ ನಡೆಯದು. ಮೋದಿ ಅವರ ಕಾರ್ಯವೈಖರಿ ಜನಪರವಾಗಿದ್ದು, 3ನೇ ಅವಧಿಗೆ ಕೇಂದ್ರದಲ್ಲಿ ಮುಂದುವರೆಸಲು ಅಗತ್ಯ ಬೆಂಬಲ ನೀಡಬೇಕಿದೆ ಎಂದರು. ಈ ಚುನಾವಣೆಯಲ್ಲಿ ದೇಶದ ಬಹಳಷ್ಟು ಕ್ಷೇತ್ರಗಳಲ್ಲಿ ಸ್ಪರ್ಧಿಸದ ಕಾಂಗ್ರೆಸ್‌ ನವರು ತಾವೇ ದೇಶದ ಆಳ್ವಿಕೆ ಮಾಡುತ್ತೇವೆ ಎಂದು ಹೇಳಿಕೊಳ್ಳುತ್ತಿರುವುದು ತಮಾಷೆಯ ಸಂಗತಿ ಎಂದು ಲೇವಡಿ ಮಾಡಿದರು.…

Read More

ಮಹಿಳೆಯೊಬ್ಬರು ತನಗೆ ಕಚ್ಚಿದ ಹಾವನ್ನೇ ಕೊಂದು ಬಳಿಕ ಅದನ್ನು ಆಸ್ಪತ್ರೆಗೆ ತೆಗೆದುಕೊಂಡು ಬಂದು ಆಸ್ಪತ್ರೆಗೆ ದಾಖಲಾದ ಘಟನೆಯೊಂದು ಹೈದರಾಬಾದ್ ನ ವೆಂಕಟಾಪುರಂ ನೂಗೂರು ಮಂಡಲದ ಮುಕುನೂರುಪಾಲೆಂ ಗ್ರಾಮದಲ್ಲಿ ಬೆಳಕಿಗೆ ಬಂದಿದೆ. ಶಾಂತಮ್ಮ ಎಂಬಾಕೆ ಉದ್ಯೋಗ ಖಾತ್ರಿ ಯೋಜನೆಯಲ್ಲಿ ಕೆಲಸ ಮಾಡುತ್ತಿದ್ದಾರೆ, ಅದರಂತೆ ಹಳ್ಳಿಯೊಂದರಲ್ಲಿ ಕೆಲಸಕ್ಕೆ ಹೋಗಿದ್ದ ಶಾಂತಮ್ಮಗೆ ಹಾವೊಂದು ಕಚ್ಚಿದೆ. ಕೂಡಲೇ ಚಿಕಿತ್ಸೆ ಪಡೆಯಲು ಮುಂದಾಗಿದ್ದಾರೆ. ಆದರೆ ಇದರ ನಡುವೆ ಶಾಂತಮ್ಮ ಅವರಿಗೆ ಒಂದು ಪ್ರಶ್ನೆ ಮೂಡಿದೆ ಆಸ್ಪತ್ರೆಯಲ್ಲಿ ವೈದ್ಯರು ಯಾವ ಹಾವು ಕಚ್ಚಿರುವುದು ಎಂದು ಕೇಳಿದರೆ ಯಾವ ಹಾವು ಎಂದು ಹೇಳುವುದು ಎಂದು ತಿಳಿದ ಅವರು ಕೂಡಲೇ ತನ್ನ ಜೊತೆಗಿದ್ದ ಸಹೋದ್ಯೋಗಿಗಳ ಸಹಾಯದಿಂದ ಹಾವನ್ನು ಕೊಂದು ಅದನ್ನು ಹಿಡಿದುಕೊಂಡು ಆಸ್ಪತ್ರೆಗೆ ಧಾವಿಸಿದ್ದಾರೆ. ಆಸ್ಪತ್ರೆಗೆ ಬಂದ ಮಹಿಳೆಯನ್ನು ಕಂಡ ವೈದ್ಯರು ಒಮ್ಮೆ ಬೆಚ್ಚಿ ಬಿದ್ದಿದ್ದಾರೆ, ಯಾಕೆಂದರೆ ಮಹಿಳೆಯ ಕೈಯಲ್ಲಿ ಹಾವು ಇರುವುದನ್ನು ಕಂಡು ಗಾಬರಿಗೊಂಡ ಆಸ್ಪತ್ರೆ ಸಿಬಂದಿ ಕೂಡಲೇ ಮಹಿಳೆಯ ಚಿಕಿತ್ಸೆಗೆ ಮುಂದಾಗಿದ್ದಾರೆ. ಮಹಿಳೆಯ ಸಮಯಪ್ರಜ್ಞೆ, ವೈದ್ಯರು ನೀಡಿದ ಸೂಕ್ತ ಚಿಕಿತ್ಸೆಯಿಂದ…

Read More

ಪ್ರಧಾನಿ ನರೇಂದ್ರ ಮೋದಿಗೆ ಚೊಂಬು ತೋರಿಸಲು ಯತ್ನಿಸಿದ ಯುವ ಕಾಂಗ್ರೆಸ್ ಮುಖಂಡ ಮೊಹಮದ್‌ ನಲಪಾಡ್ ರನ್ನು ಪೊಲೀಸರು ವಶಕ್ಕೆ ಪಡೆದಿರುವ ಘಟನೆ ನಡೆದಿದೆ. ಬೆಂಗಳೂರು ಅರಮನೆ ಮೈದಾನದಲ್ಲಿ ನಡೆದ ಬಿಜೆಪಿ-ಜೆಡಿಎಸ್ ಮೈತ್ರಿ ಪಕ್ಷದ ವಿಜಯ ಸಂಕಲ್ಪ ಸಮಾವೇಶದಲ್ಲಿ ಮೋದಿ ಪಾಲ್ಗೊಂಡಿದ್ದರು. ಸಮಾವೇಶದ ಬಳಿಕ ಮೋದಿ ಹಿಂದಿರುಗುತ್ತಿದ್ದರು, ಈ ವೇಳೆ ಮೇಖ್ರಿ ಸರ್ಕಲ್ ಬಳಿ ಚೊಂಬು ಪ್ರದರ್ಶನಕ್ಕೆ ಕಾಂಗ್ರೆಸ್ ಮುಖಂಡರು ಯತ್ನಿಸಿದ್ದರು. ಯುವ ಕಾಂಗ್ರೆಸ್ ಮುಖಂಡ ನಲಪಾಡ್ ನೇತೃತ್ವದಲ್ಲಿ ಮೋದಿಗೆ ಚೊಂಬು ತೋರಿಸುವ ಮೂಲಕ ಪ್ರತಿಭಟನೆಗೆ ಮುಂದಾಗಿದ್ದರು. ಈ ವೇಳೆ ನಲಪಾಡ್ ಸೇರಿದಂತೆ ಇಬ್ಬರು ಕಾಂಗ್ರೆಸ್ ಮುಖಂಡರನ್ನು ಪೊಲೀಸರು ವಶಕ್ಕೆ ಪಡೆದರು. ಈ ವೇಳೆ ಪೊಲೀಸರೊಂದಿಗೆ ವಾಗ್ವಾದಕ್ಕಿಳಿದ ನಲಪಾಡ್‌ ಚೊಂಬು ಪ್ರದರ್ಶನ ಮಾಡೋದು ತಪ್ಪಾ ಅಂತಾ ಆಕ್ರೋಶ ಹೊರಹಾಕಿದ್ರು. ಮೋದಿ ತೆರಳುವ ರಸ್ತೆ ಮಾರ್ಗದಲ್ಲಿ (ಮೇಖ್ರಿ ಸರ್ಕಲ್‌) ಅರ್ಧಗಂಟೆ ಮುಂಚೆಯೇ ಬಂದಿದ್ದ ನಲಪಾಡ್‌ ನಂಬರ್‌ ಇಲ್ಲದ ಕಾರಿನಲ್ಲಿ ಕಾದು ಕುಳಿತಿದ್ದರು. ಕಪ್ಪು ಬಣ್ಣದ ಲ್ಯಾಂಡ್ರೋವರ್ ಡಿಫೆಂಡರ್ ಕಾರಿನಲ್ಲಿ ನಲಪಾಡ್‌ ಜೊತೆಗೆ 8 ಜನ…

Read More

102 ಲೋಕಸಭಾ ಕ್ಷೇತ್ರಗಳಿಗೆ ನಡೆಯಲಿರುವ ಚುನಾವಣೆಯಲ್ಲಿ ಪ್ರತಿಯೊಬ್ಬರೂ ತಮ್ಮ ಹಕ್ಕು ಚಲಾಯಿಸುವಂತೆ ಪ್ರಧಾನಿ ನರೇಂದ್ರ ಮೋದಿ ಕರೆ ನೀಡಿದ್ದಾರೆ. ಸ್ಥಳೀಯ ಭಾಷೆಗಳಲ್ಲಿ ಮತದಾನ ಮಾಡುವಂತೆ ಪ್ರಧಾನಿ ಮನವಿ ಮಾಡಿದರು. ಪ್ರತಿ ಮತ, ಪ್ರತಿ ಧ್ವನಿ ಮುಖ್ಯ. ದಾಖಲೆ ಮತದಾನ ಮಾಡುವಂತೆ ಕೋರಲಾಗಿದೆ ಎಂದರು. ಯುವಕರು ಮತ್ತು ಮೊದಲ ಬಾರಿಗೆ ಮತದಾರರು ತಮ್ಮ ಮತದಾನದ ಹಕ್ಕನ್ನು ಚಲಾಯಿಸುವಂತೆ ಪ್ರಧಾನಿ ಕೇಳಿಕೊಂಡಿದ್ದಾರೆ. ಪ್ರತಿ ಮತಕ್ಕೂ ಮೌಲ್ಯವಿದೆ ಎಂದು ಪ್ರಧಾನಿ ನೆನಪಿಸಿದರು. ಇದು ಪ್ರಜಾಪ್ರಭುತ್ವದ ಅತಿದೊಡ್ಡ ಹಬ್ಬಕ್ಕೆ ನಾಂದಿಯಾಗಿದೆ ಎಂದು ಪ್ರಧಾನಿ ಹೇಳಿದರು. ವಿವಿಧ ಭಾಷೆಗಳಲ್ಲಿ ಮತದಾನ ಮಾಡುವಂತೆ ಪ್ರಧಾನಿ ಕರೆ ನೀಡಿದ್ದಾರೆ. ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಅವರು ಎಲ್ಲಾ ಮತದಾರರು ತಮ್ಮ ಒಪ್ಪಿಗೆಯ ಹಕ್ಕನ್ನು ಚಲಾಯಿಸುವಂತೆ ಕರೆ ನೀಡಿದರು. ಚುನಾವಣೆಗೆ ಎಲ್ಲ ಸಿದ್ಧತೆಗಳು ಪೂರ್ಣಗೊಂಡಿದ್ದು, ಚುನಾವಣೆಗೆ ಎರಡು ವರ್ಷಗಳ ಸಿದ್ಧತೆ ನಡೆಸಲಾಗಿದೆ ಎಂದು ಮುಖ್ಯ ಚುನಾವಣಾ ಆಯುಕ್ತರು ಸೂಚಿಸಿದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್…

Read More

ತುಮಕೂರು: ಜಿಲ್ಲೆಯ ಆಮ್ ಆದ್ಮಿ ಪಾರ್ಟಿಯ ಯಾವೊಬ್ಬ ಪದಾಧಿಕಾರಿಯೂ ಬಿಜೆಪಿ ಸೇರ್ಪಡೆಯಾಗಿಲ್ಲ ಎಂದು ಎಎಪಿ ನಗರಾಧ್ಯಕ್ಷ ಮೊಹಮ್ಮದ್ ಗೌಸ್ ಸ್ಪಷ್ಟಪಡಿಸಿದ್ದಾರೆ. ರಾಷ್ಟ್ರ ಮಟ್ಟದಲ್ಲಿ ಆಗಿರುವ ಇಂಡಿಯಾ ಮಹಾ ಘಟ್ ಬಂಧನ್ ಮೈತ್ರಿ ಕೂಟದಲ್ಲಿ ಆಮ್ ಆದ್ಮಿ ಪಾರ್ಟಿ ಕೂಡ ಪ್ರಮುಖ ಪಕ್ಷವಾಗಿದ್ದು, ಈ ಮೈತ್ರಿ ಧರ್ಮದಂತೆ ಜಿಲ್ಲೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳ ಗೆಲುವಿಗೆ ಆಮ್ ಆದ್ಮಿ ಪಾರ್ಟಿಯ ಪದಾಧಿಕಾರಿಗಳು, ಕಾರ್ಯಕರ್ತರು ಹಾಗೂ ಅಭಿಮಾನಿಗಳು ಹಗಲಿರುಳು ಶ್ರಮಿಸುತ್ತಿದ್ದಾರೆ ಎಂದು ತಿಳಿಸಿದ್ದಾರೆ. ಆದರೆ ಸೋಲಿನ ಭೀತಿಯಲ್ಲಿರುವ ಜಿಲ್ಲಾ ಬಿಜೆಪಿ ಕಳೆದ ಹತ್ತು ವರ್ಷಗಳ ಹಿಂದೆ ನಮ್ಮ ಪಕ್ಷದಲ್ಲಿದ್ದು, ನಂತರ ನಾಪತ್ತೆಯಾಗಿದ್ದ ಮುನಿಯಪ್ಪ ಎಂಬುವರನ್ನು ಹುಡುಕಿ ಜಿಲ್ಲಾ ಎಎಪಿ ಖಜಾಂಚಿ ಬಿಜೆಪಿ ಸೇರ್ಪಡೆ ಆಗಿದ್ದಾರೆ ಎಂದು ಮಾಧ್ಯಮಗಳಿಗೆ ಮಾಹಿತಿ ನೀಡಿದೆ. ಇದು ಸತ್ಯಕ್ಕೆ ದೂರ. ಅಸಲಿ ವಿಷಯವೆಂದರೆ ನಮ್ಮ ಜಿಲ್ಲಾ ಎಎಪಿಯಲ್ಲಿ ಈವರೆಗೆ ಖಜಾಂಚಿ ಹುದ್ದೆಯೇ ಇಲ್ಲ ಎಂದು ಎ ಎ ಪಿ ಮುಖಂಡರು ತಿರುಗೇಟು ನೀಡಿದ್ದಾರೆ. ನಮ್ಮ ಆಮ್ ಆದ್ಮಿ ಪಾರ್ಟಿಯ ಅತ್ಯುನ್ನತ ನಾಯಕರಾದ ಅರವಿಂದ್…

Read More

ಮೈಸೂರು: ಪ್ರತಿಪಕ್ಷಗಳು ನೇಹಾ ಕುಲಕರ್ಣಿ ಪ್ರಕರಣವನ್ನು ರಾಜಕೀಯಕ್ಕೆ ಬಳಸುತ್ತಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಮೈಸೂರಿನ ತಮ್ಮ ನಿವಾಸದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನೇಹಾ ಕುಲಕರ್ಣಿ ಕೊಲೆಯನ್ನು ನಾನು ತೀವ್ರವಾಗಿ ಖಂಡಿಸುತ್ತೇನೆ ಎಂದರು. ಕೊಲೆಗಾರರನ್ನು ಕೂಡಲೇ ಬಂಧಿಸಲಾಗಿದೆ. ಇದು ಲವ್ ಜಿಹಾದ್ ಪ್ರಕರಣವಲ್ಲ. ಸರ್ಕಾರ ತನಿಖೆಯನ್ನು ಗಂಭೀರವಾಗಿ ಕೈಗೊಂಡಿದ್ದು. ಕೊಲೆಗಾರನಿಗೆ ಉಗ್ರ ಶಿಕ್ಷೆ ನೀಡಲು ಪ್ರಯತ್ನ ಮಾಡಲಾಗುವುದು ಎಂದರು. ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ ಎಂಬ ಬಗ್ಗೆ ಮಾತನಾಡಿ ಎಲ್ಲಾ ಕಾಲದಲ್ಲಿಯೂ ಕೊಲೆಗಳಾಗಿವೆ. ಹಾಗೆಂದು ಕಾನೂನು ಸುವ್ಯವಸ್ಥೆಯನ್ನು ಗಂಭೀರವಾಗಿ ಪರಿಗಣಿಸಿಲ್ಲ ಎಂದಲ್ಲ. ಕರ್ನಾಟಕದಲ್ಲಿ ಇರುವಷ್ಟು ಶಾಂತಿ ಸುವ್ಯವಸ್ಥೆ ಬೇರೆ ರಾಜ್ಯಗಳಲ್ಲಿಲ್ಲ. ನಾವು ಯಾವುದೇ ಕೃತ್ಯ ನಡೆದರೂ, ಅದನ್ನು ತೀವ್ರವಾಗಿ ಖಂಡಿಸಿ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳುತ್ತೇವೆ. ರಾಜಕೀಯಕ್ಕಾಗಿ ಒಬ್ಬರ ಸಾವನ್ನು ಬಳಸಿಕೊಳ್ಳುವುದು ದುರ್ದೈವ. ಖಂಡನೀಯ ಎಂದರು. ರಾಜ್ಯಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳಿಂದ ಸರ್ಕಾರದ ಮೇಲೆ ಪರಿಣಾಮ ಬೀರುವುದಿಲ್ಲ ಎಂದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.…

Read More