Author: admin

ಬೀದರ್‌: ಬೀದರ್‌ ಜಿಲ್ಲೆಯಲ್ಲೂ ಶುಕ್ರವಾರ ಭರ್ಜರಿ ಮಳೆಯಾಗಿದ್ದು, ತಾಲೂಕಿನ ಬರೂರು ಗ್ರಾಮದಲ್ಲಿ ಜಮೀನಿಗೆ ತೆರಳಿದ್ದ ಓರ್ವ ಮಹಿಳೆ ಸಿಡಿಲು ಬಡಿದು ಮೃತಪಟ್ಟಿರುವ ಘಟನೆ ನಡೆದಿದೆ. ಪುಷ್ಪಲತಾ(50) ಮೃತಪಟ್ಟ ದುರ್ದೈವಿಯಾಗಿದ್ದಾರೆ. ಗುಡುಗು, ಮಿಂಚು ಸಮೇತ ಭಾರೀ ಮಳೆಯಾಗಿದ್ದು, ಕೆಲಸಕ್ಕೆಂದು ಜಮೀನಿಗೆ ಹೋಗಿದ್ದ ಮಹಿಳೆ ಸಿಡಿಲು ಬಡಿದು ಸಾವನ್ನಪ್ಪಿದ್ದಾರೆ. ಮಹಿಳೆಯ ಸಾವಿನಿಂದ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

Read More

ರಾಜ್ಯ ರಾಜಕಾರಣದಲ್ಲಿ ಭಾರೀ ಸದ್ದು ಮಾಡುತ್ತಿರುವ ಖಾಲಿ ಚೊಂಬು ಜಾಹಿರಾತಿಗೆ ಮಾಜಿ ಪ್ರಧಾನಿ ಎಚ್‌ ಡಿ ದೇವೇಗೌಡ ತಿರುಗೇಟು ನೀಡಿದ್ದಾರೆ. ಚಿಕ್ಕಬಳ್ಳಾಪುರದಲ್ಲಿ ಆಯೋಜಿಸಲಾಗಿದ್ದ ಸಮಾರಂಭದಲ್ಲಿ ಕಾಂಗ್ರೆಸ್‌ ಜಾಹೀರತನ್ನು ಪ್ರದರ್ಶಿಸಿದ ಅವರು, ಪ್ರಧಾನಿ ನರೇಂದ್ರ ಮೋದಿ ಅವರ ಗುಣಗಾನ ಮಾಡಿದರು. 2014ರಲ್ಲಿ ಡಾ. ಮನಮೋಹನ್‌ ಸಿಂಗ್‌ ಸರ್ಕಾರ ಖಾಲಿ ಚೊಂಬನ್ನು, ನರೇಂದ್ರ ಮೋದಿ ಅವರಿಗೆ ನೀಡಿತ್ತು. ಆದರೆ ಮೋದಿ ಖಾಲಿ ಚೊಂಬನ್ನೇ ಬಳಸಿಕೊಂಡು ಅಕ್ಷಯ ಪಾತ್ರೆಯನ್ನಾಗಿಸಿದ್ದಾರೆ. ಕಾಂಗ್ರೆಸ್ ಸರ್ಕಾರ ಸಾಲು ಸಾಲು ಹಗರಣಗಳನ್ನು ಮಾಡಿ ಹಣವನ್ನು ಲೂಟಿ ಹೊಡೆದು ನರೇಂದ್ರ ಮೋದಿ ಅವರಿಗೆ ಖಾಲಿ ಚೊಂಬನ್ನು ನೀಡಿತ್ತು. ಹತ್ತು ವರ್ಷ ಖಾಲಿ ಚೊಂಬನ್ನೇ ಅಕ್ಷಯ ಪಾತ್ರೆಯನ್ನಾಗಿಸಿದ ಹೆಗ್ಗಳಿಕೆ ನರೇಂದ್ರ ಮೋದಿಯವರದ್ದಾಗಿದೆ ಎಂದು ಮಾಜಿ ಪ್ರಧಾನಿ ಎಚ್‌ ಡಿಡಿ ತಿಳಿಸಿದ್ದಾರೆ. ಚಿಕ್ಕಬಳ್ಳಾಪುರದಲ್ಲಿ ನಡೆದ ಎನ್‌ ಡಿಎ ಚುನಾವಣಾ ಪ್ರಚಾರದಲ್ಲಿ ಮಾಜಿ ಪ್ರಧಾನಿ ಎಚ್‌ಡಿ ದೇವೇಗೌಡ, ಪ್ರದರ್ಶನ ಮಾಡಿದರು. ರಾಜ್ಯದ ಕಾಂಗ್ರೆಸ್‌ ಸರ್ಕಾರ ಖಾಲಿ ಚೊಂಬನ್ನು ನೀಡಿತ್ತು. ಖಾಲಿ ಚೊಂಬನ್ನು ನೀಡಿದ್ದು ಯಾರು ಎಂದು ದೇವೇಗೌಡ…

Read More

ಕೊರಟಗೆರೆ: ಬಿಜೆಪಿ ಪಕ್ಷವು ದಲಿತ ವಿರೋಧಿಯಾಗಿದ್ದು, ದಲಿತ ನಾಯಕ ಮಂದಕೃಷ್ಣ ಮಾದಿಗರವರನ್ನು ದಾರಿ ತಪ್ಪಿಸಿ ಸುಳ್ಳು ಹೇಳಿಸಿ ದಲಿತರನ್ನು ಒಡೆದು ಆಳುವ ನೀತಿಯನ್ನು ಮಾಡುತ್ತಿದೆ ಎಂದು ಮಾಜಿ ನಗರಸಭಾ ಉಪಾದ್ಯಕ್ಷ ಜಿಲ್ಲಾ ದಲಿತ ಮುಖಂಡ ವಾಲೆ ಚಂದ್ರಯ್ಯ ಹೇಳಿದರು. ಪಟ್ಟಣದ ರಾಜೀವ ಭವನದಲ್ಲಿ ಪತ್ರಿಕಾಗೋಷ್ಟಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ನಮ್ಮ ಮಾದಿಗ ಜನಾಂಗದ ರಾಷ್ಟೀಯ ಅಧ್ಯಕ್ಷರಾದ ಮಂದಕೃಷ್ಣ ಮಾದಿಗರವರು ಕಾಂಗ್ರೆಸ್ ಸದಾಶಿವ ಆಯೋಗದ ವಿರೋಧಿ ಎಂದು ಕೆಲವು ಬಿಜೆಪಿ ರಾಜಕಾರಣಿಗಳ ಜೊತೆಗೂಡಿ ಹೇಳಿದ್ದಾರೆ. ಆದರೆ ಬಿಜೆಪಿ ಪಕ್ಷವು ಮೀಸಲಾತಿಯನ್ನೆ ತೆಗೆದು ಹಾಕುವ ಹುನ್ನಾರದಲ್ಲಿದೆ. ಸಂವಿಧಾನದ ವಿರೋಧಿ ಧೋರಣೆಯನ್ನು ಬಿಜೆಪಿ ಪಕ್ಷವು ಮಾಡುತ್ತಿದ್ದು, ದಲಿತರನ್ನು ಒಡೆದು ಅವರನ್ನು ತುಳಿಯುವ ಕೆಲಸವನ್ನು ಬಿಜೆಪಿ ಮಾಡುತ್ತಿದೆ. ಮುಂಬರುವ ದಿನಗಳಲ್ಲಿ ಬಿಜೆಪಿ ಸರ್ಕಾರ ಮೀಸಲಾತಿಯನ್ನೇ ತೆಗೆದು ಹಾಕುವಾಗ ಇನ್ನು ಒಳಮೀಸಲಾತಿ ನೀಡುತ್ತಾರೆ ಎನ್ನುವ ಮಂದಕೃಷ್ಣ ಮಾದಿಗರವರ ಹೇಳಿಕೆ ತಪ್ಪು ಗ್ರಹಿಕೆಯಿಂದ ಅವರನ್ನು ದಾರಿ ತಪ್ಪಿಸುವ ಕೆಲಸವನ್ನು ಬಿಜೆಪಿ ಪಕ್ಷ ಮಾಡಿದೆ. ದಲಿತರ ಮೀಸಲಾತಿಗೆ ಮತ್ತು ಒಳಮೀಸಲಾತಿಗೆ ಪಕ್ಷದ…

Read More

ಸರಗೂರು: ತಾಲ್ಲೂಕಿನ ನರಸೀಪುರ ಗ್ರಾಮದ ಜಿಪಂ ಮಾಜಿ ಸದಸ್ಯ ಪಿ. ರವಿ ರವರ ತೋಟದ ಮನೆಯಲ್ಲಿ ಸಮಾಜ ಕಲ್ಯಾಣ ಸಚಿವ ಹಾಗೂ ಮೈಸೂರು ಉಸ್ತುವಾರಿ ಸಚಿವ ಎಚ್.ಸಿ. ಮಹದೇವಪ್ಪ ರವರ ಹುಟ್ಟು ಹಬ್ಬವನ್ನು ಶಾಸಕ ಅನಿಲ್ ಚಿಕ್ಕಮಾದು ರವರು ಕೇಕ್ ಕತ್ತರಿಸುವ ಮೂಲಕ ಆಚರಿಸಲಾಯಿತು. ಎಚ್.ಸಿ. ಮಂಜುನಾಥ್, ರವಿ, ನಂದಿನಿ ಚಂದ್ರಶೇಖರ, ಬಸವರಾಜು, ಸಿದ್ದರಾಜು, ಮಹೇಶ್ ಶಂಭುಲಿಂಗನಾಯಕ, ಚಿಕ್ಕಣ್ಣ, ಇನ್ನೂ ಮುಖಂಡರು ಸೇರಿದಂತೆ ಹಾಜರಿದ್ದರು. ವರದಿ: ಚಂದ್ರ ಹಾದನೂರು ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296  

Read More

ಸರಗೂರು: ಎಲ್ಲಾ ಸಮುದಾಯದ ನಾಯಕರಿಗೆ ಸಮಾನತೆ ನೀಡಿದ್ದು ನಮ್ಮ ಕಾಂಗ್ರೆಸ್ ಸರ್ಕಾರ.  ನಮ್ಮ ಕಾಂಗ್ರೆಸ್ ಸರ್ಕಾರ ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದು, ಸರ್ಕಾರ ನುಡಿದಂತೆ ನಡೆದಿದ್ದೇವೆ ಎಂದು ಶಾಸಕ ಅನಿಲ್ ಚಿಕ್ಕಮಾದು, ಸುನೀಲ್ ಬೋಸ್ ಪರವಾಗಿ ಮತಯಾಚನೆ ಮಾಡಿದರು. ತಾಲ್ಲೂಕಿನ ಜಿಲ್ಲಾ ಪಂಚಾಯಿತಿ ವ್ಯಾಪ್ತಿಯ ಹಂಚೀಪುರ ಬಿ ಮಟಕೆರೆ, ಹೆಗ್ಗನೂರು, ಸಾಗರೆ, ಬಿದರಹಳ್ಳಿ, ಕೊತ್ತೇಗಾಲ ಗ್ರಾಮ ಪಂಚಾಯಿತಿಗಳಲ್ಲಿ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರ ಸಭೆಯಲ್ಲಿ ಶನಿವಾರ ದಂದು ಮತಯಾಚನೆಯಲ್ಲಿ ಮಾತನಾಡಿದರು. ನಮ್ಮ ಕಾಂಗ್ರೆಸ್ ಸರ್ಕಾರ, ಮುಖ್ಯಮಂತ್ರಿ ಸಿದ್ದರಾಮಯ್ಯ ರವರು ಐದು ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದಿದ್ದು. ಬಡಜನರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಯೋಜನೆ ಜಾರಿಗೊಳಿಸಿದ್ದಾರೆ. ಇದರಿಂದ ಅದನ್ನು ಮನದಲ್ಲಿ ಇಟ್ಟುಕೊಂಡು ಕಾಂಗ್ರೆಸ್ ಅಭ್ಯರ್ಥಿ ಸುನೀಲ್ ಬೋಸ್ ಅವರಿಗೆ ಮತ ನೀಡಿ ಎಂದು ತಿಳಿಸಿದರು. ಕೇಂದ್ರದಲ್ಲಿ ನಮ್ಮ ಸರ್ಕಾರ ಅಧಿಕಾರಕ್ಕೆ ಬಂದರೆ ಮಹಿಳೆಯರಿಗೆ ವರ್ಷಕ್ಕೆ ಒಂದು ಲಕ್ಷ ರೂಪಾಯಿಗಳನ್ನು ಕೊಡಲಾಗುವುದು. ಮತ್ತು ರೈತರು ಸಾಲವನ್ನು ಮನ್ನಾ ಮಾಡಲಾಗುತ್ತದೆ. ಕಾಂಗ್ರೆಸ್ ಸರ್ಕಾರ ಇರುವುದು ಬಡವರಿಗೆ ಪೂರಕವಾಗಿರುತ್ತದೆ. ಅದರೆ…

Read More

ನಾವು ಬೆಳಿಗ್ಗೆ ಎದ್ದ ತಕ್ಷಣ ತೋಟ ಹಾಗೂ ಹೊಲ-ಗದ್ದೆಗಳಿಗೆ ಹೋದ ಸಂದರ್ಭದಲ್ಲಿ ಅಥವಾ ಮನೆಯ ಅಕ್ಕ-ಪಕ್ಕದಲ್ಲಿಯೇ ಹೆಚ್ಚಾಗಿ ನವಿಲುಗಳನ್ನು ನೋಡುತ್ತೇವೆ. ಇದರಿಂದ ನಮಗೆ ಶುಭವೋ ಅಶುಭವೋ ನೋಡೋಣ. ಕೆಲವು ಪ್ರಾಣಿ ಪಕ್ಷಿಗಳನ್ನು ಕಂಡಾಗ ಏನಾದ್ರೂ ಆಗುತ್ತದೆ, ಇದು ಶುಭ, ಅಶುಭ ಎಂದು ಕೆಲವರು ಹೇಳುವುದುಂಟು. ಆದರೆ ಹೆಚ್ಚಿನವರು ಬೆಳ್ಳಂಬೆಳಗ್ಗೆ ನವಿಲುಗಳನ್ನು ನೋಡುತ್ತಾರೆ ಎಂದು ಹೇಳುವುದುನ್ನು ನಾವು ಕೇಳಿದ್ದೇವೆ. ಇದರಿಂದ ಏನದಾರು ಒಳಿತುಂಟಾಗುವುದೇ ಎಂಬುದು ಹಲವರ ಪ್ರಶ್ನೆ. ಎಸ್ ಖಂಡಿತವಾಗಿಯು ಇದು ನಮಗೆ ಶುಭವನ್ನು ತರುತ್ತದೆ. ಹಿಂದೂ ಧರ್ಮದಲ್ಲಿ ನವಿಲನ್ನು ಬಹಳ ಮಂಗಳಕರವೆಂದು ಪರಿಗಣಿಸಲಾಗಿದೆ. ನವಿಲನ್ನು ನೋಡುವುದು ನಮಗೆ ಅನೇಕ ರೀತಿಯ ಸೂಚನೆಗಳನ್ನ ನೀಡುತ್ತದೆ ಎಂದು ಧರ್ಮಗ್ರಂಥಗಳಲ್ಲಿ ಹೇಳಲಾಗಿದೆ. ಅಂತೆಯೇ ಒಬ್ಬ ವ್ಯಕ್ತಿಯು ಬೆಳಿಗ್ಗೆ ಅಚಾನಕ್ ಆಗಿ ನವಿಲನ್ನು ನೋಡಿದರೆ, ಅದನ್ನು ಬಹಳ ಶುಭ ಸಂಕೇತವೆಂದು ಹೇಳಲಾಗುತ್ತೆ. ಆ ದಿನ ನಿಮಗೆ ಎಲ್ಲವೂ ಒಳ್ಳೆಯದೇ ನಡೆಯುತ್ತೆ. ಮುಂಜಾನೆ ನೀವು ನವಿಲು ನೋಡಿದರೆ ನಿಮ್ಮ ಕೆಲಸದ ಸ್ಥಳದಲ್ಲಿಯೂ ಅನೇಕ ಪ್ರಯೋಜನಗಳನ್ನು ಪಡೆಯುತ್ತೀರಿ. ಇಡೀ ದಿನವು…

Read More

ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಕರಾವಳಿ ಭಾಗದಲ್ಲಿ ಅಬ್ಬರದ ಮಳೆ ಸುರಿಯುತ್ತಿದ್ದು, ಭಟ್ಕಳದಲ್ಲಿ ಅರಬ್ಬಿ ಸಮುದ್ರದಲ್ಲಿ ಮೀನುಗಾರಿಕೆಗೆ ತೆರಳಿದ್ದ ಬೋಟ್ ಮುಳುಗಡೆಯಾಗಿದ್ದು, ಬೋಟ್‌ ನಲ್ಲಿದ್ದ ನಾಲ್ಕು ಜನ ಮೀನುಗಾರರನ್ನು ರಕ್ಷಣೆ ಮಾಡಲಾಗಿದೆ. ಘಟನೆಯಿಂದ ಲಕ್ಷಾಂತರ ರೂ. ಹಾನಿ ಸಂಭವಿಸಿದೆ. ಕರಾವಳಿ ಭಾಗದ ಕಾರವಾರ, ಅಂಕೋಲ, ಕುಮಟಾ, ಭಟ್ಕಳ ಭಾಗದಲ್ಲಿ ಗುಡುಗು ಸಹಿತ ಮಳೆ ಪ್ರಾರಂಭವಾಗಿದ್ದು, ಕರಾವಳಿಯಲ್ಲಿ ಬಿಸಿಲಿನ ಅಬ್ಬರಕ್ಕೆ ಸ್ವಲ್ಪ ಶಮನ ಸಿಕ್ಕಿದಂತಾಗಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

Read More

ಮಹಾರಾಷ್ಟ್ರ: ಗಗನ್‌ ಯಾನ್‌ ಯೋಜನೆಯತ್ತ ಇಡೀ ದೇಶದ ಚಿತ್ತವೇ ನೆಟ್ಟಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಮಹಾರಾಷ್ಟ್ರದ ಪರ್ಭಾನಿಯಲ್ಲಿ ಸಾರ್ವಜನಿಕ ಸಭೆಯಲ್ಲಿ ಮಾತನಾಡಿದ ಮೋದಿ, ಭಾರತವನ್ನು ಮೂರನೇ ಅತಿದೊಡ್ಡ ಆರ್ಥಿಕ ಶಕ್ತಿಯನ್ನಾಗಿ ಮಾಡುವುದು ಈ ಬಾರಿಯ ಚುನಾವಣೆಯ ಅಜೆಂಡಾ ಎಂದರು. ನಮ್ಮ ಸರ್ಕಾರ ಜನಪರ ಕೆಲಸಗಳನ್ನು ಮಾಡುತ್ತಾ ಬಂದಿದ್ದು, ಕೊರೋನಾ ಸಮಯದಲ್ಲಿ ಶಕ್ತಿ ಮೀರಿ ದೇಶದ ಹಿತಕ್ಕಾಗಿ ದುಡಿದಿದ್ದೇವೆ. ಆ ಮುಖಾಂತರ ಇದೇ ವಿಶ್ವವೇ ನಮ್ಮನ್ನು ಒಂದು ಸ್ವಾವಲಂಬಿ ದೇಶವೆಂದು ನೋಡಲಾರಂಭಿಸಿದೆ. ಇದಷ್ಟೇ ಅಲ್ಲದೆ ನಾವು ಚಂದ್ರಯಾನವನ್ನು ಯಶಸ್ವಿಗೊಳಿಸಿ ಇದೀಗ ಗಗನಯಾನದ ಯಶಸ್ಸಿನತ್ತ ಶ್ರಮಿಸುತ್ತಿದ್ದೇವೆ. ಕೇವಲ ಹತ್ತು ವರ್ಷಗಳಲ್ಲಿ ದೇಶ ಅಭಿವೃದ್ಧಿಯಲ್ಲಿ ಪಥದಲ್ಲಿ ದಾಪುಗಾಲಿಟ್ಟು ಮುನ್ನುಗ್ಗುತ್ತಿದೆ ಎಂದ ಮೋದಿ, ತಾವು ಲೋಕಸಭೆ ಚುನಾವಣೆಗೆ ಸ್ಪರ್ಧಿಸಿದ್ದಾಗ ಮಾಧ್ಯಮಗಳಲ್ಲಿ ಪ್ರತಿದಿನ ಉಗ್ರರ ದಾಳಿ, ಬಾಂಬ್ ಸ್ಫೋಟದ ಸುದ್ದಿ ಬರುತ್ತಿತ್ತು. ಆದರೆ, 2019ರಿಂದ ಗಡಿಯಾಚೆಯಿಂದ ಭಯೋತ್ಪಾದಕರ ಒಳನುಸುಳುವಿಕೆ ಕೂಡ ಸ್ಥಗಿತಗೊಂಡಿದೆ. ಸರ್ಜುಕಲ್‌ ಸ್ಟ್ರೈಕ್ ಮುಖಾಂತರ ಅವೆಲ್ಲದಕ್ಕೂ ಉತ್ತರ ಕೊಟ್ಟಿದ್ದೇವೆ ಎಂದು ತಮ್ಮ ಜರ್ನಿಯ ಬಗ್ಗೆ…

Read More

ಬೆಂಗಳೂರು: ಮಲ್ಲೇಶ್ವರ ಪೊಲೀಸ್ ಠಾಣೆಯಲ್ಲಿ ಬಿಜೆಪಿ ನಾಯಕ ಬಿವೈ ವಿಜಯೇಂದ್ರ ವಿರುದ್ಧ ಎಫ್ ಐಆರ್ ದಾಖಲಾಗಿದೆ. ಧರ್ಮ, ಭಾಷೆ ಜಾತಿ, ಸೌಹಾರ್ದ್ಯತೆ ವಿಚಾರದಲ್ಲಿ ಸಮಾಜದ ಸ್ವಾಸ್ಥ್ಯ ಕೆಡಿಸುತ್ತಿದ್ದಾರೆ ಎಂದು ಆರೋಪಿಸಿ ದೂರು ದಾಖಲಾದ ಹಿನ್ನೆಲೆ ಬಿ.ವೈ. ವಿಜಯೇಂದ್ರ ವಿರುದ್ಧ ಎಫ್​ಐಆರ್​ ದಾಖಲಾಗಿದೆ. ಶಿಕಾರಿಪುರ ವಿಧಾನಸಭಾಕ್ಷೇತ್ರದ ಶಾಸಕರು ಆಗಿರುವ ವಿಜಯೇಂದ್ರ ಹಾಗೂ ಬಿಜೆಪಿ ಎಕ್ಸ್ ಖಾತೆ ಉಸ್ತುವಾರಿ ವಹಿಸಿಕೊಂಡಿರುವವರ ವಿರುದ್ಧ ಗಾಂಧಿನಗರದ ಚುನಾವಣಾ ನೊಡೆಲ್ ಅಧಿಕಾರಿ ಅರ್ಜುನ್ ಆಯೂರ್ ಎಂಬುವರು ನೀಡಿದ ದೂರಿನ ಮೇರೆಗೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

Read More

ಕಾಂತಾರ ಸಿನಿಮಾ ಸೂಪರ್ ಹಿಟ್ ಆಗಿದ್ದು ಎಲ್ಲರಿಗೂ ಗೊತ್ತಿದೆ. ಭರ್ಜರಿಯಾಗಿ ಸದ್ದು ಮಾಡಿದ್ದ ಸಿನಿಮಾದ ಎರಡನೇ ಭಾಗವೂ ಆದಷ್ಟು ಬೇಗ ತೆರೆಗೆ ಬರುವ ನಿರೀಕ್ಷೆ ಇಟ್ಟುಕೊಳ್ಳಲಾಗಿದೆ. ಈ ನಡುವೆ ಚಿತ್ರದ ಶೂಟಿಂಗ್ ನಡೆಯುತ್ತಿದೆ. ಕೆಲವು ದಿನಗಳ ಹಿಂದೆ ಹೊರ ಬಿದ್ದ ಫಸ್ಟ್‌ ಲುಕ್‌ ಪೋಸ್ಟರ್‌ ದೇಶದ ಗಮನ ಸೆಳೆದಿತ್ತು. ಇದನ್ನೂ ಹೊಂಬಾಳೆ ಫಿಲ್ಮ್ಸ್‌ ನಿರ್ಮಿಸಲಿದ್ದು, ಅಂದಾಜು 125 ಕೋಟಿ ರೂ. ಬಜೆಟ್ ನಲ್ಲಿ ತಯಾರಾಗುತ್ತಿದೆ ಎನ್ನಲಾಗಿದೆ. ಈಗ ರಿಷಬ್ ಶೆಟ್ಟಿ ಅವರು ಮಲಯಾಳಂನ ಖ್ಯಾತ ನಟ ಮೋಹನ್​ ಲಾಲ್ ಅವರನ್ನು ಭೇಟಿ ಮಾಡಿದ್ದಾರೆ. ‘ಕಾಂತಾರ 2’ ಸಿನಿಮಾದಲ್ಲಿ ಮೋಹನ್​ ಲಾಲ್ ನಟಿಸಲಿದ್ದಾರಾ ಎಂಬ ಕುತೂಹಲ ಸಿನಿ ರಸಿಕರಲ್ಲಿ ಹೆಚ್ಚಾಗಿದೆ. “ಲೆಜೆಂಡರಿ ಮೋಹನ್ ​ಲಾಲ್ ಅವರನ್ನು ಭೇಟಿ ಮಾಡಿದ್ದು ಖುಷಿ ಇದೆ’ ಎಂದು ರಿಷಬ್ ಶೆಟ್ಟಿ ಹೇಳಿದ್ದಾರೆ. ಸದ್ಯ ಈ ಫೋಟೋ ವೈರಲ್ ಆಗುತ್ತಿದೆ. ಈ ಮೊದಲು ರಿಷಬ್ ಶೆಟ್ಟಿ ಅವರು ಮಲಯಾಳಂ ಸಿನಿಮಾದಲ್ಲಿ ನಟಿಸಲಿದ್ದಾರೆ ಎಂದು ವರದಿ ಆಗಿತ್ತು. ಇದಕ್ಕೆ ರಿಷಬ್…

Read More