Subscribe to Updates
Get the latest creative news from FooBar about art, design and business.
- ಕೊರಟಗೆರೆ: ಬಾಲಕಿಯರಿಗೆ ಸುರಕ್ಷಿತ ವಸತಿ ನಿಲಯ ಆರಂಭಕ್ಕೆ ಕ್ರಮ: ಅಪೂರ್ವ ಸಿ. ಅನಂತರಾಮು
- ಬಕ್ರೀದ್: ಶಾಂತಿಗೆ ಭಂಗ ತಂದರೆ, ಪ್ರಚೋದನೆ ನೀಡಿದ್ರೆ ಕ್ರಮ: ಕೆ.ವಿ.ಅಶೋಕ್ ಎಚ್ಚರಿಕೆ
- ವಿಶ್ವ ಕಾರ್ಮಿಕ ದಿನಾಚರಣೆ: ನೂತನ ಕಾರ್ಮಿಕ ಕಚೇರಿ ಉದ್ಘಾಟನೆ, ಹಿರಿಯ ಕಾರ್ಮಿಕರಿಗೆ ಸನ್ಮಾನ
- ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ: ನಿವೃತ್ತಿ ಅಂಚಿನಲ್ಲಿರುವ ಮುಖ್ಯೋಪಾಧ್ಯಾಯ ಅರೆಸ್ಟ್
- ನಾಳೆ ದೆಹಲಿಗೆ ಸಿಎಂ ಸಿದ್ದರಾಮಯ್ಯ ಭೇಟಿ; ನಾಯಕತ್ವ ಬದಲಾವಣೆ ಚರ್ಚೆಗಳ ನಡುವೆ ಹೈಕಮಾಂಡ್ ಬುಲಾವ್
- ಸೇಡು ತೀರಿಸಿಕೊಳ್ಳಲು ವರ್ಷದ ಬಳಿಕ ಅದೇ ಅಪ್ರಾಪ್ತೆ ಮೇಲೆ ಮತ್ತೆ ಲೈಂಗಿಕ ದೌರ್ಜನ್ಯ–ಇಬ್ಬರು ಆರೋಪಿಗಳ ಬಂಧನ
- ಭಟ್ಕಳ: ಕಪ್ಪೆಚಿಪ್ಪು ಸಂಗ್ರಹಿಸಲು ಹೋಗಿ ನೀರಲ್ಲಿ ಮುಳುಗಿ 11 ಮಂದಿ ಸಾವು!
- ಪ್ರೀತಿ ಹೆಸರಲ್ಲಿ ಅಪ್ರಾಪ್ತ ವಯಸ್ಸಿನ ಬಾಲಕಿಗೆ ಲೈಂಗಿಕ ದೌರ್ಜನ್ಯ: ಆರೋಪಿ ವಿರುದ್ಧ ಪೋಕ್ಸೋ ಕೇಸ್ ದಾಖಲು
Author: admin
ಬೆಂಗಳೂರು: ಮಹಿಳೆಯರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿಗೆ ಹೈಕೋರ್ಟ್ ಬಿಗ್ ರಿಲೀಫ್ ನೀಡಿದೆ. ಗ್ಯಾರಂಟಿ ಯೋಜನೆಗಳಿಂದ ಹಳ್ಳಿ ಹೆಣ್ಣುಮಕ್ಕಳು ದಾರಿ ತಪ್ಪುತ್ತಿದ್ದಾರೆ ಎಂಬ ಹೇಳಿಕೆ ಮೂಲಕ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ವಿವಾದ ಸೃಷ್ಟಿಸಿದ್ದರು. ಹೆಚ್.ಡಿ.ಕುಮಾರಸ್ವಾಮಿ ವಿರುದ್ಧ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮೀ ಸ್ವಯಂ ಪ್ರೇರಿತ ದೂರು ದಾಖಲಿಸಿಕೊಂಡು ನೋಟೀಸ್ ಜಾರಿ ಮಾಡಿದ್ದರು. ಮಹಿಳೆಯರ ಘನತೆ ಹಾಗೂ ಚಾರಿತ್ರ್ಯಕ್ಕೆ ಧಕ್ಕೆಯುಂಟುಮಾಡುವಂತಹ ಹೇಳಿಕೆ ನೀಡಿದ ಹಿನ್ನೆಲೆಯಲ್ಲಿ 7 ದಿನಗಳ ಒಳಗಾಗಿ ಮಹಿಳಾ ಆಯೋಗದ ಮುಂದೆ ಖುದ್ದು ಹಾಜರಾಗಿ ತಮ್ಮ ಹೇಳಿಕೆ ಬಗ್ಗೆ ಸ್ಪಷ್ಟೀಕರಣ, ವಿವರಣೆ ನೀಡುವಂತೆ ಸೂಚಿಸಿದ್ದರು. ಇದನ್ನು ಪ್ರಶ್ನಿಸಿ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಹೈಕೋರ್ಟ್ ಮೆಟ್ಟಿಲೇರಿದ್ದರು. ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್, ಮಾಜಿ ಸಿಎಂ ಕುಮಾರಸ್ವಾಮಿ ವಿರುದ್ಧ ಮಹಿಳಾ ಆಯೋಗ ನೀಡಿದ್ದ ನೋಟೀಸ್ ಗೆ ತಡೆಯಾಜ್ಞೆ ನೀಡಿದೆ. ಅಲ್ಲದೇ ದೂರುಗಳಿಲ್ಲದೇ ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಿಕೊಂಡು ಮಹಿಳಾ ಆಯೋಗದ ಅಧ್ಯಕ್ಷೆ ಸ್ವತಃ ಸ್ಪಷ್ಟೀಕರಣ ಕೇಳಿ ನೋಟೀಸ್…
ಇನ್ನೇನು ಕೆಲವೇ ದಿನಗಳಲ್ಲಿ ಲೋಕಸಭಾ ಚುನಾವಣೆ ನಡೆಯಲಿದೆ. ಈ ಹಿನ್ನಲೆಯಲ್ಲಿ ಚುನಾವಣಾ ಆಯೋಗ ಈಗಾಗಲೇ ಮತದಾರರ ಪಟ್ಟಿಯನ್ನು ಸಿದ್ಧಗೊಳಿಸಿದೆ. 18 ವರ್ಷ ಮೇಲ್ಪಟ್ಟ ಎಲ್ಲರೂ ಮತದಾನ ಮಾಡಲು ಅರ್ಹರಾಗಿದ್ದು, ನೀವು ಮತದಾನ ಮಾಡಬೇಕೆಂದರೆ ನಿಮ್ಮ ಹೆಸರು ಮತದಾರರ ಪಟ್ಟಿಯಲ್ಲಿ ಇರುವುದು ಕಡ್ಡಾಯ. ಮತದಾನ ಮಾಡುವುದು ನಮ್ಮ ಹಕ್ಕು ಮಾತ್ರವಲ್ಲದೆ ನಮ್ಮ ಜವಾಬ್ದಾರಿಯು ಹೌದು. ಚುನಾವಣಾ ಆಯೋಗವು ಕ್ಷೇತ್ರವಾರು ಮತದಾರರ ಪಟ್ಟಿಯನ್ನು ಸಿದ್ಧಪಡಿಸುತ್ತದೆ, ಇದರಲ್ಲಿ ಮತ ಚಲಾಯಿಸಲು ಅರ್ಹರಾಗಿರುವ ಎಲ್ಲಾ ವ್ಯಕ್ತಿಗಳನ್ನು ಪಟ್ಟಿಮಾಡಲಾಗಿರುತ್ತದೆ. ಮತದಾರರು ತಮ್ಮ ವಿವರಗಳ ಪರಿಶೀಲನೆಯನ್ನು ಖಚಿತಪಡಿಸಲು ಮತ್ತು ಅವರು ಯಾವ ಚುನಾವಣಾ ಜಿಲ್ಲೆ ಅಥವಾ ಮತಗಟ್ಟೆಗೆ ನಿಯೋಜಿಸಲಾಗಿದೆ ಎಂಬುದನ್ನು ಪರಿಶೀಲಿಸಲು ಮತದಾರರ ಪಟ್ಟಿ ಡೌನ್ ಲೋಡ್ ಮಾಡಿಕೊಳ್ಳಬಹುದು. ನಿಮ್ಮ ಹೆಸರು ಮತದಾರರ ಪಟ್ಟಿಯಲ್ಲಿ ಇದೆಯೇ ಎಂಬುದನ್ನು ತಿಳಿಯಲು ಈ ಕೆಳಗಿನ ಹಂತಗಳನ್ನು ಅನುಸರಿಸಿ: ಮೊದಲ ಹಂತದಲ್ಲಿ ನಿಮ್ಮ ಹೆಸರು ಮತದಾರರ ಪಟ್ಟಿಯಲ್ಲಿ ಇದೆಯೇ ಎಂಬುದನ್ನು ತಿಳಿಯಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ https://ceo.karnataka.gov.in/FinalRoll_2023/Dist_List.aspx ಎರಡನೇ ಹಂತದಲ್ಲಿ ನೀವು…
ತುಮಕೂರು: ವಿರಾಜಪೇಟೆ ಭಾಗದಲ್ಲಿ ಮೂರು ಬಿಜೆಪಿ ಕಾರ್ಯಕರ್ತರ ಮೇಲೆ ಕಾಂಗ್ರೆಸ್ ಕಾರ್ಯಕರ್ತರು ಹಲ್ಲೆ ನಡೆಸಿದ್ದಾರೆ. ಗಾಯಗೊಂಡವರನ್ನು ಮೈಸೂರು ಜಿಲ್ಲಾಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲು ಮಾಡಲಾಗಿದೆ. ಕಾಂಗ್ರೆಸ್ ಗೆ ಈ ಚುನಾವಣೆಯಲ್ಲಿ ಜನರೇ ತಕ್ಕ ಪಾಠ ಕಲಿಸಲಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ತಿಳಿಸಿದ್ದಾರೆ. ಮಧುಗಿರಿಯಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು ಈ ಮೂಲಕ ಈ ಚುನಾವಣೆಯಲ್ಲಿ ಬಿಜೆಪಿ ಕಾರ್ಯಕರ್ತರನ್ನು ಹೆದರಿಸುವ ಕೆಲಸವನ್ನು ಕಾಂಗ್ರೆಸ್ ಮಾಡುತ್ತಿದೆ ಎಂದು ಆರೋಪಿಸಿದರು. ರಾಮನ ಹೆಸರನ್ನು ಹೇಳುವವರ ಮೇಲೆ ಹಲ್ಲೆ ಮಾಡುವುದು, ತೆಂಗಿನ ತೋಟಕ್ಕೆ ಬೆಂಕಿ ಇಡುವುದು ಇಂತಹ ಹಳೆ ಚಾಳಿ ಕೆಲಸಗಳನ್ನು ಕಾಂಗ್ರೆಸ್ ಪ್ರಾರಂಭ ಮಾಡಿದೆ ಎಂದು ದೂರಿದರು. ಜಾಹೀರಾತುಗಳಲ್ಲಿ ಕಾಂಗ್ರೆಸ್ ಪಕ್ಷವು ಕೀಳು ಅಭಿರುಚಿಯೊಂದಿಗೆ ಚೊಂಬಿನ ಚಿತ್ರಗಳನ್ನು ತೋರಿಸುತ್ತಿದೆ. ಆದರೆ ಅವರು ರಾಜ್ಯವನ್ನು ಲೂಟಿ ಮಾಡುತ್ತಿರುವುದನ್ನು ಕೂಡ ತೋರಿಸಲಿ ಎಂದು ಟೀಕಿಸಿದರು. ಕರ್ನಾಟಕದಲ್ಲಿ ರಾಜ್ಯದ ಜನರು ಕಟ್ಟಿರುವ ತೆರಿಗೆ ಹಣವನ್ನು ಕಾಂಗ್ರೆಸ್ ನವರು ಲೂಟಿ ಮಾಡುತ್ತಿದ್ದಾರೆ ಅಂತಹ ವ್ಯಂಗ್ಯ ಚಿತ್ರವನ್ನು ತೋರಿಸಲಿ ಎಂದು ಹೇಳಿದರು.…
ತುಮಕೂರು: ರಾಜ್ಯದ ಜನತೆಗೆ ಗೃಹ ಸಚಿವನಾಗಿ ಭರವಸೆ ಕೊಡಲು ಬಯಸುತ್ತೇನೆ. ಯಾರೇ ಆದರೂ ಕಾನೂನಿಗೆ ವಿರುದ್ಧವಾಗಿ ನಡೆದುಕೊಂಡರೆ ರಕ್ಷಣೆ ಮಾಡುವಂತಹ ಪ್ರಮೇಯವೇ ಇಲ್ಲ ಎಂದು ಗೃಹ ಸಚಿವ ಜಿ. ಪರಮೇಶ್ವರ್ ತಿಳಿಸಿದ್ದಾರೆ. ತುಮಕೂರಿನಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಅವರು ಯಾರೇ ಆಗಲಿ. ಬೆಂಗಳೂರಿನಲ್ಲಿ ನಡೆದ ಘಟನೆ ದುರದೃಷ್ಟಕರವಾದುದಾಗಿದೆ. ಶ್ರೀರಾಮನ ನವಮಿ ದಿನ ಜೈ ಶ್ರೀರಾಮ್ ಘೋಷಣೆ ಕೂಗೋದು ಸಹಜ. ಅದಕ್ಕೆ ಇನ್ನೊಬ್ಬರು ಬೇರೆ ಸ್ಲೋಗನ್ ಕೂಗಿದ್ದಾರೆ. ಘಟನೆ ನಡೆದ ಬಳಿಕ ಅವರನ್ನು ರಕ್ಷಣೆ ಮಾಡಿ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ತಿಳಿಸಿದರು. ಅದರಲ್ಲಿ ಯಾರನ್ನೂ ರಕ್ಷಣೆ ಮಾಡೋದಾಗಲಿ, ಓಲೈಸೋದಾಗಲಿ ನಾವು ಮಾಡೋದಿಲ್ಲ. ಕಾನೂನು ಕ್ರಮವನ್ನು ಯಾವುದೇ ಮುಲಾಜಿಲ್ಲದೇ ತೆಗೆದುಕೊಳ್ಳುತ್ತೇವೆ ಎಂದರು. ಹುಬ್ಬಳ್ಳಿ ಘಟನೆ: ಹುಬ್ಬಳ್ಳಿಯಲ್ಲಿ ಕಾಲೇಜು ಯುವತಿ ಕೊಲೆ ವಿಚಾರದಲ್ಲಿ, ಲವ್ ಆಫೆರ್ ಇತ್ತು ಇಬ್ಬರು ಒಟ್ಟಿಗೆ ಕೆಲಸ ಮಾಡ್ತಾ ಇದ್ದರು. ಪರಸ್ಪರ ಒಬ್ಬರನೊಬ್ಬರು ಪ್ರೀತಿಸ್ತಾ ಇದ್ದರು. ನಂತರ ಇದ್ದಕಿದ್ದ ಹಾಗೆ ಆ ಹೆಣ್ಣು ಮಗಳು ದೂರ ಆಗೋದಕ್ಕೆ ಪ್ರಯತ್ನಿಸಿದಾಗ ಘಟನೆ…
ಪ್ರತಿದಿನ ಪಾಲಕ್ ಜ್ಯೂಸ್ ಕುಡಿಯುವುದರ ಪ್ರಯೋಜನಗಳು: ಬೆಳಗಿನ ಹೊತ್ತಿಗೆ ಹಲವು ರೀತಿಯ ಹಸಿರು ಜ್ಯೂಸ್ ಗಳನ್ನು ಕುಡಿದರೆ ಆರೋಗ್ಯಕ್ಕೆ ಒಳಿತು. ಅಂಥದ್ದೇ ಹಸಿರು ಜ್ಯೂಸ್ ಗಳ ಪೈಕಿ ಒಂದು ಪಾಲಕ್ ಸೊಪ್ಪಿನದ್ದು. ರುಚಿಗೆ ಬೇಕಿದ್ದರೆ ಶುಂಠಿ, ನಿಂಬೆ ರಸಗಳನ್ನೆಲ್ಲ ಬೆರೆಸಿಕೊಂಡರೆ ಹಸಿರು ಜ್ಯೂಸ್ ಗಳು ಬಾಯಿಗೂ ರುಚಿ ದೇಹಕ್ಕೂ ಹಿತ ನೀಡುತ್ತದೆ. ಹಲವು ರೀತಿಯ ಉತ್ಕರ್ಷಣ ನಿರೋಧಕಗಳು, ಕಬ್ಬಿಣ, ಕ್ಯಾಲ್ಸಿಯಂನಂಥ ಅಗತ್ಯ ಖನಿಜಗಳು, ಎ, ಸಿ, ಇ ನಂಥ ಮಹತ್ವದ ಜೀವಸತ್ವಗಳನ್ನು ಒಳಗೊಂಡ ಈ ಸೊಪ್ಪಿನಲ್ಲಿ ನಾರು ಸಹ ಹೇರಳವಾಗಿದೆ. ತುಳಸಿಯಲ್ಲಿದೆ ಹಲವು ಔಷಧೀಯ ಗುಣಗಳು…! ತುಳಸಿಯಲ್ಲಿ ಅನೇಕ ಔಷಧೀಯ ಗುಣಗಳಿವೆ. ತುಳಸಿಯನ್ನು ಆಹಾರ ರೂಪದಲ್ಲಿ ಸೇವಿಸಿದರೆ ಆರೋಗ್ಯ ಪ್ರಯೋಜನಗಳನ್ನು ಪಡೆಯಬಹುದು. ಬೆಳಗ್ಗೆ ಮಾಡುವ ಚಹಾಗೆ ತುಳಸಿಯ ತಾಜಾ ಎಲೆಗಳನ್ನು ಹಾಕಿ ಬಿಸಿ ಬಿಸಿಯಾಗಿ ಕುಡಿದರೆ ನೆಗಡಿ ಹಾಗೂ ಕಟ್ಟಿದ ಮೂಗು ಸರಾಗವಾಗುತ್ತದೆ. ತುಳಸಿಯ ಪಾನಕ ಮಾಡಿ ಸಹ ಕುಡಿಯಬಹುದು. ಇತರ ಹಣ್ಣಿನ ಜ್ಯೂಸ್ ಗಳಿಗೆ ತುಳಸಿಯ ಎಲೆಗಳನ್ನು ಬೆರೆಸಿ ಕುಡಿಯಬಹುದು.…
102 ಲೋಕಸಭಾ ಕ್ಷೇತ್ರಗಳಿಗೆ ನಡೆಯಲಿರುವ ಚುನಾವಣೆಯಲ್ಲಿ ಪ್ರತಿಯೊಬ್ಬರೂ ತಮ್ಮ ಹಕ್ಕು ಚಲಾಯಿಸುವಂತೆ ಪ್ರಧಾನಿ ನರೇಂದ್ರ ಮೋದಿ ಕರೆ ನೀಡಿದ್ದಾರೆ. ಸ್ಥಳೀಯ ಭಾಷೆಗಳಲ್ಲಿ ಮತದಾನ ಮಾಡುವಂತೆ ಪ್ರಧಾನಿ ಮನವಿ ಮಾಡಿದರು. ಪ್ರತಿ ಮತ, ಪ್ರತಿ ಧ್ವನಿ ಮುಖ್ಯ. ದಾಖಲೆ ಮತದಾನ ಮಾಡುವಂತೆ ಕೋರಲಾಗಿದೆ ಎಂದರು. ಪ್ರತಿ ಮತಕ್ಕೂ ಮೌಲ್ಯವಿದೆ ಎಂದು ಪ್ರಧಾನಿ ನೆನಪಿಸಿದರು. ಇದು ಪ್ರಜಾಪ್ರಭುತ್ವದ ಅತಿದೊಡ್ಡ ಹಬ್ಬಕ್ಕೆ ನಾಂದಿಯಾಗಿದೆ ಎಂದು ಪ್ರಧಾನಿ ಹೇಳಿದರು. ವಿವಿಧ ಭಾಷೆಗಳಲ್ಲಿ ಮತದಾನ ಮಾಡುವಂತೆ ಪ್ರಧಾನಿ ಕರೆ ನೀಡಿದ್ದಾರೆ. ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಅವರು ಎಲ್ಲಾ ಮತದಾರರು ತಮ್ಮ ಒಪ್ಪಿಗೆಯ ಹಕ್ಕನ್ನು ಚಲಾಯಿಸುವಂತೆ ಕರೆ ನೀಡಿದರು. ಚುನಾವಣೆಗೆ ಎಲ್ಲ ಸಿದ್ಧತೆಗಳು ಪೂರ್ಣಗೊಂಡಿದ್ದು, ಚುನಾವಣೆಗೆ ಎರಡು ವರ್ಷಗಳ ಸಿದ್ಧತೆ ನಡೆಸಲಾಗಿದೆ ಎಂದು ಮುಖ್ಯ ಚುನಾವಣಾ ಆಯುಕ್ತರು ಸೂಚಿಸಿದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ಅಲ್ಲು ಅರ್ಜುನ್ ನಟನೆಯ ಪುಷ್ಪ 2 ಸಿನಿಮಾ ಇದೇ ಆಗಸ್ಟ್ 15ರಂದು ಬಿಡುಗಡೆ ಮಾಡುವುದಾಗಿ ಈಗಾಗಲೇ ಚಿತ್ರತಂಡ ಘೋಷಣೆ ಮಾಡಿದೆ. ‘ಪುಷ್ಪ 2’ ಸಿನಿಮಾ ಭಾರತೀಯ ಸಿನಿಮಾ ರಂಗದಲ್ಲಿ ದಾಖಲೆಗೆ ಕಾರಣವಾಗುತ್ತಿದೆ. ಈ ಸಿನಿಮಾದ ಡಿಜಿಟೆಲ್ ರೈಟ್ಸ್ ಬರೋಬ್ಬರಿ 275 ಕೋಟಿ ರೂಪಾಯಿ ಸೇಲ್ ಆಗಿದೆ ಎನ್ನುವ ಮಾಹಿತಿ ಸಿಗುತ್ತಿದೆ. ಈ ಹಣ ಸಿನಿಮಾ ರಿಲೀಸ್ ಆದ ನಂತರ ಮತ್ತಷ್ಟು ಏರಿಕೆಯೂ ಆಗಲಿದೆಯಂತೆ ಎನ್ನಲಾಗಿದೆ. ಇಷ್ಟೊಂದು ಮೊತ್ತದ ಹಣವನ್ನು ಕೊಟ್ಟು ಇದೇ ಮೊದಲ ಬಾರಿಗೆ ಡಿಜಿಟೆಲ್ ಹಕ್ಕುಗಳನ್ನು ಖರೀದಿಸಲಾಗಿದೆಯಂತೆ. ಪುಷ್ಪ 2 ಸಿನಿಮಾ ಸಾಕಷ್ಟು ಸದ್ದು ಮಾಡುತ್ತಿದೆ. ಲೆಕ್ಕಾಚಾರದಂತೆ ಸಾವಿರಾರು ಕೋಟಿ ರೂಪಾಯಿ ವ್ಯಾಪಾರ ಮಾಡುವ ಶಕ್ತಿ ಈ ಚಿತ್ರಕ್ಕಿದೆಯಂತೆ. ಅಲ್ಲದೇ, ದೊಡ್ಡ ಮಟ್ಟದಲ್ಲಿ ಮತ್ತು ಹಲವು ಭಾಷೆಗಳಲ್ಲಿ ಈ ಚಿತ್ರವನ್ನು ತೆರೆಗೆ ತರಲು ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ನೈರೋಬಿ: ಮಿಲಿಟರಿ ಹೆಲಿಕಾಪ್ಟರ್ ಪತನವಾಗಿದ್ದು, ಅಪಘಾತದಲ್ಲಿ ಕೀನ್ಯಾದ ರಕ್ಷಣಾ ಮುಖ್ಯಸ್ಥರು ಮತ್ತು ಇತರ ಒಂಬತ್ತು ಉನ್ನತ ಅಧಿಕಾರಿಗಳು ಸಾವನ್ನಪ್ಪಿದ್ದಾರೆ ಎಂದು ಅಧ್ಯಕ್ಷ ವಿಲಿಯಂ ರುಟೊ ತಿಳಿಸಿದ್ದಾರೆ. ಹೆಲಿಕಾಪ್ಟರ್ ಟೇಕ್ ಆಫ್ ಆದ ಸ್ವಲ್ಪ ಸಮಯದ ನಂತರವೇ ಹೆಲಿಕಾಪ್ಟರ್ ಪತನಗೊಂಡಿದ್ದು, ರಾಜಧಾನಿ ನೈರೋಬಿಯ ವಾಯುವ್ಯಕ್ಕೆ 400 ಕಿಲೋಮೀಟರ್ ದೂರದಲ್ಲಿರುವ ಎಲ್ಜಿಯೊ ಮರಕ್ವೆಟ್ ಕೌಂಟಿಯಲ್ಲಿ ಹೆಲಿಕಾಪ್ಟರ್ ಪತನವಾಯಿತು. ಅವಘಡಕ್ಕೆ ಕಾರಣ ತಿಳಿಯಲು ಕೀನ್ಯಾ ವಾಯುಪಡೆಯು ತನಿಖಾ ತಂಡವನ್ನು ಕಳುಹಿಸಿ ತನಿಖೆ ಮುಂದುವರಿಸಲಾಗಿದೆ ಎಂದು ರುಟೊ ಹೇಳಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ಗದಗ: ದಾಸರ ಓಣಿಯಲ್ಲಿ ಮಲಗಿದ್ದಲ್ಲೇ ಒಂದೇ ಕುಟುಂಬದ ನಾಲ್ವರ ಬರ್ಬರ ಹತ್ಯೆಯಾಗಿರುವ ಘಟನೆ ನಡೆದಿದೆ. ನಗರಸಭೆ ಉಪಾಧ್ಯಕ್ಷೆ ಸುನಂದಾ ಬಾಕಳೆ ಪುತ್ರ ಕಾರ್ತಿಕ್ ಬಾಕಳೆ(27), ಪರಶುರಾಮ(55) ಪತ್ನಿ ಲಕ್ಷ್ಮಿ(45), ಪುತ್ರಿ ಆಕಾಂಕ್ಷಾ(16) ಕೊಲೆಯಾದ ದುರ್ದೈವಿಗಳಾಗಿದ್ದಾರೆ. ಕೊಲೆ ಮಾಡಿದ್ದ ದುಷ್ಕರ್ಮಿಗಳು ಪರಾರಿಯಾಗಿದ್ದಾರೆ. ಮೃತ ನಾಲ್ವರ ಪೈಕಿ ಮೂವರು ದಾಸರ ಓಣಿಯಲ್ಲಿ ತಮ್ಮ ಮನೆಯ ಮೊದಲ ಮಹಡಿಯಲ್ಲಿ ಮಲಗಿದ್ದರು. ಈ ಮೂವರು ಮೂಲತಃ ಕೊಪ್ಪಳ ಜಿಲ್ಲೆಯವರು. ಏಪ್ರಿಲ್ 17 ರಂದು ಪ್ರಕಾಶ್ ಬಾಕಳೆ ಪುತ್ರ ಕಾರ್ತಿಕ್ ನ ಮದುವೆ ಸಹ ನಡೆದಿತ್ತು. ವಿವಾಹ ಕಾರ್ಯಕ್ರಮಕ್ಕಾಗಿ ಸಂಬಂಧಿಕರು ಆಗಮಿಸಿದ್ದರು ಎಂದು ಹೇಳಲಾಗಿದೆ. ಆದರೆ, ದಂಪತಿ ಬಾಗಿಲು ತೆಗೆಯದೆ ಪೊಲೀಸರಿಗೆ ಫೋನ್ ಮಾಡಿದ್ದಾರೆ. ಪೊಲೀಸರಿಗೆ ಫೋನ್ ಮಾಡುತ್ತಿದ್ದಂತೆ ದುಷ್ಕರ್ಮಿಗಳು ಹಿಂಬಾಗಿಲಿನಿಂದ ಪರಾರಿಯಾಗಿದ್ದಾರೆ. ಕೃತ್ಯಕ್ಕೆ ಬಳಸಿದ ಮಾರಕಾಸ್ತ್ರಗಳನ್ನು ದುಷ್ಕರ್ಮಿಗಳು ಚರಂಡಿಯಲ್ಲಿ ಬಿಸಾಕಿದ್ದಾರೆ. ಸದ್ಯ ಸ್ಥಳಕ್ಕೆ ಶ್ವಾನದಳ, ವಿಧಿ ವಿಜ್ಞಾನ ಪ್ರಯೋಗಾಲಯದ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಎಸ್ಪಿ ಬಿ.ಎಸ್ ನೇಮಗೌಡ, ಹೆಚ್ಚುವರಿ ಎಸ್ಪಿ ಎಂ.ಬಿ ಸಂಕದ, ಡಿವೈಎಸ್ಪಿ,…
ಪ್ರೀತಿ ನಿರಾಕರಿಸಿದಳೆಂದು ಮುಸ್ಲಿಂ ಯುವಕನೋರ್ವ ಹಿಂದೂ ಯುವತಿಯ ಕುತ್ತಿಗೆ ಚಾಕುವಿನಿಂದ ಭೀಕರವಾಗಿ ಇರಿದು ಹತ್ಯೆ ಮಾಡಿದ ದುರ್ಘಟನೆಯೊಂದು ಹುಬ್ಬಳ್ಳಿಯ ಬಿವಿಬಿ ಕ್ಯಾಂಪಸ್ನಲ್ಲಿ ನಡೆದಿದೆ. ನೇಹಾ ಹಿರೇಮಠ, ಹತ್ಯೆಯಾದ ಯುವತಿ. ಫಯಾಜ್ ಎಂಬಾತನೇ ಹತ್ಯೆ ಮಾಡಿದ ಆರೋಪಿ. ಬೆಳಗಾವಿ ಜಿಲ್ಲೆಯ ಸವದತ್ತಿಯ ನಿವಾಸಿ ಈ ಆರೋಪಿ. ಈತ ಹುಡುಗಿಯ ಕುತ್ತಿಗೆ ಒಂಭತ್ತು ಬಾರಿ ಮನಬಂದಂತೆ ಚಾಕುವಿನಿಂದ ಇರಿದಿದ್ದಾನೆ. ರಕ್ತದ ಮಡುವಿನಲ್ಲಿದ್ದ ಯುವತಿಯನ್ನು ಕೂಡಲೇ ಅಲ್ಲಿದ್ದವರು ಆಸ್ಪತ್ರೆಗೆ ದಾಖಲು ಮಾಡಿದ್ದರೂ, ಚಿಕಿತ್ಸೆ ಫಲಿಸದೇ ಆಕೆ ಮೃತ ಹೊಂದಿದ್ದಾಳೆ. ನಗರದ ಕಾರ್ಪೋರೇಟರ್ ಮಗಳಾದ ಮೃತ ಯುವತಿ ನೇಹಾ ಹಿರೇಮಠ, ಈಕೆ ಈ ಕಾಲೇಜಿನಲ್ಲಿ ಎಂಸಿಎ ಓದುತ್ತಿದ್ದಳು. ಆರೋಪಿ ಕೂಡಾ ಅದೇ ಕಾಲೇಜಿನಲ್ಲಿ ಬಿಸಿಎ ಓದುತ್ತಿದ್ದ. ಫಯಾಜ್ ಕೆಲವು ದಿನಗಳಿಂದ ಪ್ರೀತಿ ಮಾಡುವಂತೆ ಹಿಂದೆ ಬಿದ್ದಿದ್ದ. ದಿನೇ ದಿನೇ ಟಾರ್ಚರ್ ಕೊಡುತ್ತಿದ್ದ. ಇಂದು ಕೂಡಾ ಫಾಲೋ ಮಾಡಿದ್ದ ಆರೋಪಿ ಯುವತಿ ಖಡಾಖಂಡಿತವಾಗಿ ನಿರಾಕರಣೆ ಮಾಡಿದ್ದಕ್ಕೆ ಹೀನಾಯವಾಗಿ ಕೊಲೆ ಮಾಡಿದ್ದಾನೆ ಎನ್ನಲಾಗಿದೆ. ಕಾಲೇಜು ಕ್ಯಾಂಪಸ್ ನಲ್ಲಿಯೇ ಯುವತಿಯ ಬರ್ಬರ…