Subscribe to Updates
Get the latest creative news from FooBar about art, design and business.
- ಕೊರಟಗೆರೆ: ಬಾಲಕಿಯರಿಗೆ ಸುರಕ್ಷಿತ ವಸತಿ ನಿಲಯ ಆರಂಭಕ್ಕೆ ಕ್ರಮ: ಅಪೂರ್ವ ಸಿ. ಅನಂತರಾಮು
- ಬಕ್ರೀದ್: ಶಾಂತಿಗೆ ಭಂಗ ತಂದರೆ, ಪ್ರಚೋದನೆ ನೀಡಿದ್ರೆ ಕ್ರಮ: ಕೆ.ವಿ.ಅಶೋಕ್ ಎಚ್ಚರಿಕೆ
- ವಿಶ್ವ ಕಾರ್ಮಿಕ ದಿನಾಚರಣೆ: ನೂತನ ಕಾರ್ಮಿಕ ಕಚೇರಿ ಉದ್ಘಾಟನೆ, ಹಿರಿಯ ಕಾರ್ಮಿಕರಿಗೆ ಸನ್ಮಾನ
- ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ: ನಿವೃತ್ತಿ ಅಂಚಿನಲ್ಲಿರುವ ಮುಖ್ಯೋಪಾಧ್ಯಾಯ ಅರೆಸ್ಟ್
- ನಾಳೆ ದೆಹಲಿಗೆ ಸಿಎಂ ಸಿದ್ದರಾಮಯ್ಯ ಭೇಟಿ; ನಾಯಕತ್ವ ಬದಲಾವಣೆ ಚರ್ಚೆಗಳ ನಡುವೆ ಹೈಕಮಾಂಡ್ ಬುಲಾವ್
- ಸೇಡು ತೀರಿಸಿಕೊಳ್ಳಲು ವರ್ಷದ ಬಳಿಕ ಅದೇ ಅಪ್ರಾಪ್ತೆ ಮೇಲೆ ಮತ್ತೆ ಲೈಂಗಿಕ ದೌರ್ಜನ್ಯ–ಇಬ್ಬರು ಆರೋಪಿಗಳ ಬಂಧನ
- ಭಟ್ಕಳ: ಕಪ್ಪೆಚಿಪ್ಪು ಸಂಗ್ರಹಿಸಲು ಹೋಗಿ ನೀರಲ್ಲಿ ಮುಳುಗಿ 11 ಮಂದಿ ಸಾವು!
- ಪ್ರೀತಿ ಹೆಸರಲ್ಲಿ ಅಪ್ರಾಪ್ತ ವಯಸ್ಸಿನ ಬಾಲಕಿಗೆ ಲೈಂಗಿಕ ದೌರ್ಜನ್ಯ: ಆರೋಪಿ ವಿರುದ್ಧ ಪೋಕ್ಸೋ ಕೇಸ್ ದಾಖಲು
Author: admin
ಅನೇಕ ಕಾರಣಗಳಿಂದಾಗಿ ‘ಕೊರಗಜ್ಜ’ ಸಿನಿಮಾ ಕೌತುಕ ಮೂಡಿಸಿದೆ. ಈ ಸಿನಿಮಾ ಸೆಟ್ಟೇರಿದಾಗಿನಿಂದಲೂ ಸಾಕಷ್ಟು ಅಡೆತಡೆಗಳು ಉಂಟಾದರೂ ಅವುಗಳನ್ನೆಲ್ಲ ನಿವಾರಿಸಿಕೊಂಡು ಚಿತ್ರತಂಡ ಮುನ್ನುಗ್ಗುತ್ತಿದೆ. ಆದರೀಗ ಅಚ್ಚರಿ ಎಂಬಂತೆ ಈ ಕೊರಗಜ್ಜ ಚಿತ್ರೀಕರಣದ ವೇಳೆ ಅಗೋಚರವಾದ ಶಕ್ತಿಯೊಂದು ಕಾಣಿಸಿದೆ. ಚಿತ್ರೀಕರಣದ ವೇಳೆ ನಿರ್ದೇಶಕ ಸುಧೀರ್ ಅತ್ತಾವರ್ ರನ್ನು ಅಗೋಚರ ಶಕ್ತಿಯೊಂದು ಬಲವಾಗಿ ತಳ್ಳಿ ಏಳೆಂಟು ಗಜ ದೂರಕ್ಕೆಸೆಯಲ್ಪಟ್ಟ ಘಟನೆ ನಡೆದಿದ್ದು, ಚಿತ್ರ ತಂಡವನ್ನು ಬೆಚ್ಚಿಬೀಳಿಸಿದೆ. ಎಲ್ಲೂ ಎಡವಿ ಬೀಳದೆ, ಜಾರದೆ ಇದ್ದರೂ, ಏಕಾಏಕಿ ಬಲವಾಗಿ ತಳ್ಳಿದಂತೆ ವೇಗ ಪಡೆದುಕೊಂಡು ನಿರ್ದೇಶಕರು ಎಸೆಯಲ್ಪಟ್ಟ ವಿಲಕ್ಷಣ ಘಟನೆ, ಸುಮಾರು ಮುನ್ನೂರಕ್ಕಿಂತಲೂ ಹೆಚ್ಚಿದ್ದ ಚಿತ್ರತಂಡದ ಎದುರಲ್ಲೇ ಘಟನೆ ನಡೆದಿದೆ. ಬಹು ನಿರೀಕ್ಷಿತ ಕೊರಗಜ್ಜ ಚಿತ್ರದ ಚಿತ್ರೀಕರಣವು ಕೊಚ್ಚಿ ಮತ್ತು ಮುಂಬೈನ ಪೋಸ್ಟ್ ಪ್ರೊಡಕ್ಷನ್ ನಡೆಯುತ್ತಿತ್ತು. ಈ ವೇಳೆ ದೈವ ನರ್ತನದ ಪ್ರಮುಖ ದ್ರಶ್ಯವೊಂದನ್ನು ಶೂಟ್ ಮಾಡುತ್ತಿದ್ದು, ನಿನ್ನೆ ಮಧ್ಯರಾತ್ರಿ ನೂರಾರು ಉರಿವ ಪಂಜುಗಳನ್ನು ಧರಿಸಿಕೊಂಡ ಕೇರಳದ ತೆಯ್ಯಂ ಕಲಾವಿದರ ಮತ್ತು ಮಾಸ್ ಮಾದ ಅವರ ಮೈ ನವಿರೇಳಿಸುವ ಸಾಹಸ…
ಮತದಾನ ನಡೆಯುವ ಎರಡು ದಿನದಂದು ರಜೆ ನೀಡದ ಕಂಪನಿಗಳ ವಿರುದ್ಧ ಕಾರ್ಮಿಕ ಕಾಯ್ದೆ ಪ್ರಕಾರ ಕ್ರಮ ಕೈಗೊಳ್ಳಲಾಗುವುದು ಎಂದು ಕರ್ನಾಟಕ ಮುಖ್ಯ ಚುನಾವಣಾಧಿಕಾರಿ ಮನೋಜ್ ಕುಮಾರ್ ಮೀನಾ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ನಾವು ಐಟಿ ವಲಯ ಸೇರಿದಂತೆ ಖಾಸಗಿ ಕಂಪನಿಗಳನ್ನು ಸಂಪರ್ಕ ಮಾಡಿದ್ದು, ಅಲ್ಲಿನ ಸಿಇಒ ಮತ್ತು ಮ್ಯಾನೇಜ್ ಮೆಂಟ್ ಗಳನ್ನು ಭೇಟಿಯಾಗಿ ಮತ ಚಲಾಯಿಸಲು ಸಿಬ್ಬಂದಿಗೆ ಉತ್ತೇಜಿಸುವಂತೆ ಹೇಳಿದ್ದೇವೆ ಎಂದು ತಿಳಿಸಿದರು. ಶೇ35 ಅಥವಾ ಇದಕ್ಕಿಂತ ಕಡಿಮೆ ಮತದಾನವಾಗಿರುವ ಬಿಬಿಂಪಿ ವ್ಯಾಪ್ತಿಯ 1800 ಮತ್ತು ರಾಜ್ಯದ 5000 ಮತಗಟ್ಟೆಗಳನ್ನು ಗುರುತಿಸಿದ್ದೇವೆ. ನಾವು ಮನೆ ಮನೆಗೆ ತೆರಳಿ ಮತದಾನದ ಬಗ್ಗೆ ಅರಿವು ಮೂಡಿಸುತ್ತಿದ್ದೇವೆ. ಹಾಗೆ ಅಪಾರ್ಟ್ಮೆಂಟ್ ಅಸೋಸಿಯೇಷನ್ ಗಳು ಮತ್ತು ರೆಸಿಡೆಂಟ್ ವೆಲ್ ಫೇರ್ ಅಸೋಸಿಯೇಷನ್ ಗಳನ್ನು ಸಂಪರ್ಕಿಸಿ ಮತದಾನದ ಬಗ್ಗೆ ತಿಳಿಸಿದ್ದೇವೆ. ಆದರೆ ನಾವು ಯಾರನ್ನೂ ಒತ್ತಾಯಿಸಲು ಸಾಧ್ಯವಿಲ್ಲ. ಏಪ್ರಿಲ್ 26 ಶುಕ್ರವಾರ ಆಗಿದ್ದು, ಮೊದಲು ಮತದಾನ ಮಾಡಿ ನಂತರ ರಜೆ ತೆಗೆದುಕೊಳ್ಳಬೇಕು ಅಂತ ಜನರಲ್ಲಿ…
ನಮ್ಮ ಸಂಪ್ರದಾಯಗಳಲ್ಲಿ ಬೆಳ್ಳಿಗೆ ವಿಶೇಷ ಸ್ಥಾನವಿದೆ. ಭಾರತೀಯ ಮಹಿಳೆಯರು ಧರಿಸುವ ಅನೇಕ ಆಭರಣಗಳನ್ನು ಬೆಳ್ಳಿ ಇರುತ್ತದೆ. ಜ್ಯೋತಿಷ್ಯಶಾಸ್ತ್ರದ ಪ್ರಕಾರ, ಬೆಳ್ಳಿಯನ್ನು ಮನಸ್ಸಿಗೆ ಸಂಬಂಧಿಸಿದ ಲೋಹ ಎಂದು ಹೇಳಲಾಗುತ್ತದೆ. ಈ ಆಭರಣಗಳು ಮನಸ್ಸನ್ನು ಸ್ಥಿರವಾಗಿಡಲು, ಭಾವನೆಗಳನ್ನು ನಿಯಂತ್ರಿಸಲು ಮತ್ತು ಮನಸ್ಸನ್ನು ಶಾಂತವಾಗಿಡಲು ಧರಿಸಲಾಗುತ್ತದೆ. ಆದರೆ ಕೆಲವೊಮ್ಮೆ ಮಾರುಕಟ್ಟೆಯಲ್ಲಿ ನಕಲಿ ಬೆಳ್ಳಿಯೂ ಮಾರಾಟವಾಗುತ್ತಿದ್ದು, ಈ ಕುರಿತು ನಮಗೆ ಅರಿವಿರುವುದಿಲ್ಲ. ನಿಜವಾದ ಬೆಳ್ಳಿ ಮತ್ತು ನಕಲಿ ಬೆಳ್ಳಿಯ ನಡುವೆ ವ್ಯತ್ಯಾಸವನ್ನು ಕಂಡುಹಿಡಿಯುವುದು ತುಂಬಾ ಕಷ್ಟ. ಈ ಸುಲಭ ವಿಧಾನಗಳ ಮೂಲಕ ನೀವು ಮೂಲ ಬೆಳ್ಳಿಯ ಆಭರಣಗಳನ್ನು ಕ್ಷಣಾರ್ಧದಲ್ಲಿ ಗುರುತಿಸಲು ಸಾಧ್ಯ. ಬನ್ನಿ ಅದೇಗೆ ತಿಳಿಯೋಣ. ಚಿನ್ನದಂತೆ, ಬೆಳ್ಳಿ ಆಭರಣಗಳು ಸಹ ಅಧಿಕೃತ ವಿಶಿಷ್ಟ ಲಕ್ಷಣದೊಂದಿಗೆ ಬರುತ್ತದೆ. ಈ ಗುರುತು ಯಾವಾಗಲೂ ಆಭರಣದ ಮೇಲೆ ಎಲ್ಲೋ ಗುರುತಿಸಲ್ಪಡುತ್ತದೆ. ಅದು ಅಕ್ಷರ, ಚಿಹ್ನೆ ಅಥವಾ ಸಂಖ್ಯೆಯಾಗಿರಬಹುದು. ಇದನ್ನು ನೋಡಲು ಲೆನ್ಸ್ ಕೂಡ ಬೇಕಾಗಬಹುದು. ನೀವು ಪ್ರಸಿದ್ಧ ಬ್ರಾಂಡ್ನಿಂದ ಆಭರಣಗಳನ್ನು ಖರೀದಿಸಿದರೂ, ಅದರ ಸತ್ಯಾಸತ್ಯತೆಯನ್ನು ಪರಿಶೀಲಿಸಬೇಕು. ಬೆಳ್ಳಿಯು ಎಂದಿಗೂ ಆಯಸ್ಕಾಂತದಿಂದ…
ಕೊರಟಗೆರೆ: ಪ್ರಧಾನಿ ನರೇಂದ್ರ ಮೋದಿಯವರು ರೈತರ ಸಾಲ ಮನ್ನಾ ಮಾಡದೆ, ಅದಾನಿ, ಅಂಬಾನಿಯವರಂತಹ ಶ್ರೀಮಂತರ ಸಾಲ ಮನ್ನಾ ಮಾಡ್ತಾರೆ. ಈ ದೇಶದ ರೈತರು ಮೋದಿ ಅವರ ಕಣ್ಣಿಗೆ ಕಾಣಲ್ಲ ಎಂದು ಬಿಜೆಪಿ ಪಕ್ಷದ ವಿರುದ್ಧ ಗೃಹ ಸಚಿವ ಡಾ.ಜಿ. ಪರಮೇಶ್ವರ್ ಆಕ್ರೋಶ ವ್ಯಕ್ತಪಡಿಸಿದರು. ತಾಲೂಕಿನ ಪುರವರ, ವಡ್ಡಗೆರೆ, ಹೊಳವನಹಳ್ಳಿ, ಕೋಳಾಲ, ತೋವಿನಕೆರೆ ಸೇರಿದಂತೆ ಕೋರ ಹೋಬಳಿಗಳಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಮುದ್ದಹನುಮೇಗೌಡರ ಪರ ಪ್ರಚಾರ ಸಭೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ತುಮಕೂರು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಸೋಮಣ್ಣ ನರೇಂದ್ರ ಮೋದಿಯವರ ಹೆಸರು ಹೇಳಿಕೊಂಡು ಮತ ಕೇಳುತ್ತಿದ್ದಾರೆ. ಸರಿಯಾದ ಕ್ಷೇತ್ರ ಸಿಗದೇ ರಾಜ್ಯಾದ್ಯಂತ ಓಡಾಡುತ್ತಿದ್ದಾರೆ. ಆದರೆ ಮುದ್ದಹನುಮೇಗೌಡರು ಇಲ್ಲೇ ಹುಟ್ಟಿ ಬೆಳೆದು ನ್ಯಾಯಾಧೀಶರಾಗಿ ಕೆಲಸ ಮಾಡಿ, ನಿಮ್ಮಗಳ ಸೇವೆ ಮಾಡುತ್ತಿದ್ದಾರೆ. ಈ ಹಿಂದೆ ಮುದ್ದ ಹನುಮೇಗೌಡರಿಗೆ 35,000 ಮತಗಳ ಅಂತರದಿಂದ ಗೆಲ್ಲಿಸಿದ್ರಿ. ತುಮಕೂರು ಲೋಕಸಭಾ ಕ್ಷೇತ್ರದ ಅಭಿವೃದ್ಧಿಗಾಗಿ ಮುದ್ದಹನುಮೇಗೌಡರನ್ನು ಮತ್ತೊಮ್ಮೆ ಗೆಲ್ಲಿಸಬೇಕಾಗಿದೆ. ಲೋಕಸಭೆಯಲ್ಲಿ 5 ಬಾರಿ ಗೆದ್ದಂತಹ ಜಿಎಸ್ ಬಸವರಾಜು…
ಕೋಲಾರ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯು ಕೋಲಾರ ಜಿಲ್ಲೆಯ ಅಂಗನವಾಡಿಗಳಲ್ಲಿ ಖಾಲಿ ಇರುವ ಬರೋಬ್ಬರಿ 513 ಹುದ್ದೆಗಳನ್ನು ಭರ್ತಿ ಮಾಡಲು ಅಧಿಸೂಚನೆ ಹೊರಡಿಸಿದೆ. ಇದು ಅಂಗನವಾಡಿ ಕಾರ್ಯಕರ್ತೆ ಮತ್ತು ಅಂಗನವಾಡಿ ಸಹಾಯಕಿ ಹುದ್ದೆಗಳಾಗಿದ್ದು, ಎಸ್ಸೆಸ್ಸೆಲ್ಸಿ ಮತ್ತು ದ್ವಿತೀಯ ಪಿಯುಸಿ ತೇರ್ಗಡೆಯಾದವರು ಅರ್ಜಿ ಸಲ್ಲಿಸಬಹುದು. ಆಸಕ್ತರು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬೇಕಿದ್ದು, ಕೊನೆಯ ದಿನಾಂಕ ಏಪ್ರಿಲ್ 19 ಎಂದು ತಿಳಿಸಲಾಗಿದೆ. ಅಂಗನವಾಡಿ ಕಾರ್ಯಕರ್ತೆ- 120, ಅಂಗನವಾಡಿ ಸಹಾಯಕಿ- 393 ಹುದ್ದೆಗಳಿವೆ. ಅಂಗನವಾಡಿ ಕಾರ್ಯಕರ್ತೆ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕನಿಷ್ಠ ಪಿಯುಸಿ ತೇರ್ಗಡೆಯಾಗಿರಬೇಕು. ಎಸ್ಸೆಸ್ಸೆಲ್ಸಿಯಲ್ಲಿ ಕನ್ನಡವನ್ನು ಪ್ರಥಮ ಅಥವಾ ದ್ವಿತೀಯ ಭಾಷೆಯಾಗಿ ಅಧ್ಯಯನ ಮಾಡಿರಬೇಕು. ಜತೆಗೆ ಡಿ.ಎಸ್.ಇ.ಆರ್.ಟಿ.ಯಿಂದ ಇ.ಸಿ.ಸಿ.ಇ. ಡಿಪ್ಲೋಮಾ ಕೋರ್ಸ್, ಜೆ.ಒ.ಸಿ. ಕೋರ್ಸ್, ಎನ್.ಟಿ.ಟಿ. ಕೋರ್ಸ್ ಮತ್ತು ಅಂಗನವಾಡಿ ಚಟುವಟಿಕೆಗಳಿಗೆ ಸಂಬಂಧಿಸಿದ ಡಿಪ್ಲೋಮಾ ನ್ಯೂಟ್ರಿಶಿಯನ್, ಹೋಂ ಸೈನ್ಸ್ ಸರ್ಟಿಫಿಕೆಟ್ ಕೋರ್ಸ್, ಒಂದು ವರ್ಷದ ನರ್ಸರಿ ಅಥವಾ ಪೂರ್ವ ಪ್ರಾಥಮಿಕ ತರಬೇತಿ ಪಡೆದು ಪ್ರಮಾಣ ಪತ್ರ ಹೊಂದಿರುವವರಿಗೆ ಆದ್ಯತೆ ಲಭಿಸಲಿದೆ. ಅಂಗನವಾಡಿ…
ಕೋಲಾರ: ಕೋಲಾರ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಕೆವಿ ಗೌತಮ್ ಪರ ಪ್ರಚಾರ ನಡೆಸಿದ ರಾಹುಲ್ ಗಾಂಧಿ, ಸಂವಿಧಾನಕ್ಕೆ ಧಕ್ಕೆ ಉಂಟಾಗಿದ್ದು, ಇಂಡಿಯಾ ಮೈತ್ರಿಕೂಟವನ್ನು ಅಧಿಕಾರಕ್ಕೆ ತರದಿದ್ದರೆ ಜನತೆ ಸಮಸ್ಯೆ ಎದುರಿಸಬೇಕಾಗುತ್ತದೆ ಎಂದಿದ್ದಾರೆ. ಜತೆಗೆ, ಕೇಂದ್ರದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ರಾಷ್ಟ್ರವ್ಯಾಪಿ ಜಾತಿ ಗಣತಿ ನಡೆಸಲಾಗುವುದು. ಇದರಿಂದ ಅಗತ್ಯವಿರುವವರಿಗೆ ಪ್ರಯೋಜನವಾಗಲಿದೆ ಎಂದು ಭರವಸೆ ನೀಡಿದ್ದಾರೆ. ತಮ್ಮ ಅಜ್ಜಿ ಹಾಗೂ ಮಾಜಿ ಪ್ರಧಾನಿ ಇಂದಿರಾ ಗಾಂಧಿಯವರೊಂದಿಗೆ ಕೋಲಾರದ ಭಾರತ್ ಗೋಲ್ಡ್ ಮೈನ್ಸ್ ಲಿಮಿಟೆಡ್ ಗೆ (ಬಿಜಿಎಂಎಲ್) ಭೇಟಿ ನೀಡಿದ್ದನ್ನು ಅವರು ನೆನಪಿಸಿಕೊಂಡಿದ್ದಾರೆ. ದೇಶದಲ್ಲಿ ಪಕ್ಷಪಾತ ತಾಂಡವವಾಡುತ್ತಿದ್ದು, ಎನ್ಡಿಎ ಸರ್ಕಾರದಲ್ಲಿ ಕೇವಲ 20 ಉದ್ಯಮಿಗಳು 70 ಕೋಟಿ ಜನರ ಸಂಪತ್ತನ್ನು ಸಂಗ್ರಹಿಸಿದ್ದಾರೆ ಎಂದು ಆರೋಪಿಸಿದ್ದಾರೆ. ಮೋದಿ ಸರಕಾರ ಆಯ್ದ ಉದ್ಯಮಿಗಳ 16 ಲಕ್ಷ ಕೋಟಿ ರೂ.ಗಳ ಸಾಲವನ್ನು ಮನ್ನಾ ಮಾಡಿದೆ. ಬೆರಳೆಣಿಕೆಯಷ್ಟು ಬಂಡವಾಳಶಾಹಿಗಳಿಗೆ ಸಹಾಯ ಮಾಡಲು ಪ್ರಧಾನಿ ನರೇಂದ್ರ ಮೋದಿ ಯಾವುದೇ ಹಂತಕ್ಕೂ ಹೋಗುತ್ತಾರೆ ಎಂದು ಅವರು ಟೀಕಿಸಿದ್ದಾರೆ. ಪ್ರಭಾವಿ ಉದ್ಯಮಿಗಳಿಗೆ ಅನುಕೂಲ ಮಾಡಿಕೊಡಲು ಇಡಿ,…
ಬೆಂಗಳೂರು: 9 ವರ್ಷದ ಬಾಲಕಿಯನ್ನು ಅಪಹರಿಸಿಕೊಂಡು ಹೋಗಿ, ಅವರ ಪೋಷಕರಿಂದ ತಮ್ಮ ಹೆಸರಲ್ಲಿ ಆಸ್ತಿ ಬರೆಸಿಕೊಂಡಿದ್ದಾರೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ವಿರುದ್ಧ ಆರೋಪ ಹೊರಿಸಿದ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ ವಿರುದ್ಧ ಸಂಸದ ಡಿ.ಕೆ. ಸುರೇಶ್ ಕಿಡಿಕಾರಿದ್ದಾರೆ. ಈ ಬಗ್ಗೆ ಮಾತನಾಡಿದ ಡಿ.ಕೆ. ಸುರೇಶ್, ಅಪಹರಿಸಿ ಆಸ್ತಿ ಬರೆಸುವ ಪರಿಸ್ಥಿತಿ ನಮಗೆ ಬಂದಿಲ್ಲ. ಕ್ಷುಲ್ಲಕ ರಾಜಕಾರಣದಲ್ಲಿ ದೇವೇಗೌಡರು ಹೆಸರುವಾಸಿ. ಅವರು ಹಿರಿಯರು, ಹಾಗಾಗಿ ಹೆಚ್ಚು ಮಾತನಾಡಲ್ಲ. ಅವರ ಆರೋಪಕ್ಕೆ ಮುಂದಿನ ದಿನಗಳಲ್ಲಿ ಉತ್ತರಿಸುತ್ತೇವೆ ಎಂದು ಹೇಳಿದ್ದಾರೆ. ಡಿಕೆಶಿ ವಿರುದ್ಧ ವಾಗ್ದಾಳಿ ನಡೆಸುತ್ತಾ ಹಳೆ ವಿಚಾರವೊಂದನ್ನು ಬಯಲಿಗೆ ತಂದ ಹೆಚ್ ಡಿಡಿ, ಅಮೆರಿಕದಲ್ಲಿ ಹಣ ಸಂಪಾದನೆ ಮಾಡಿ ಸ್ವದೇಶಕ್ಕೆ ವಾಪಸಾದ ವ್ಯಕ್ತಿಯೊಬ್ಬರ ಜಮೀನನ್ನು ಕಬಳಿಸಲು ಡಿ.ಕೆ. ಶಿವಕುಮಾರ್ ಅವರ 9 ವರ್ಷದ ಮಗಳನ್ನು ಅಪಹರಿಸಿದ್ದರು ಎಂದು ಗಂಭೀರ ಆರೋಪ ಮಾಡಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ಸ್ಯಾಂಡಲ್ ವುಡ್ ನ ನಟ-ನಿರ್ದೇಶಕ ನಿರೂಪಕ ಮಾಸ್ಟರ್ ಆನಂದ್ ಅವರ ಮಗಳ ಮೊದಲ ಸಿನಿಮಾ ಬಿಡುಗಡೆಗೆ ಸಜ್ಜಾಗಿದೆ. ಇದು ಮಕ್ಕಳ ಸಿನಿಮಾ ಅಲ್ಲ. ಹಾರರ್ ಕಥಾಹಂದರವಿರುವ ಸಿನಿಮಾ. ಈ ಸಿನಿಮಾದಲ್ಲಿ ಹೊಸಬರು ಸೇರಿದಂತೆ ಖ್ಯಾತ ನಟಿ ರಚನಾ ಇಂದರ್ ಅವರು ಇದ್ದಾರೆ. ಯುವ ನಟ ಗೌತಮ್ ಆರ್ ಅವರು ಈ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಹಾರರ್ ಥ್ರಿಲ್ಲರ್ ಕಥಾಹಂದರ ಹೊಂದಿರುವ ನಾಲ್ಕನೇ ಆಯಾಮ ಸಿನಿಮಾಗೆ ಅರ್ಜುನ್ ಜನ್ಯ ಸಂಗೀತ ನೀಡಿದ್ದಾರೆ. ಅರುಣ್ ಛಾಯಾಗ್ರಹಣ, ಉಗ್ರಂ ಶ್ರೀಕಾಂತ್ ಸಂಕಲನವಿದೆ. ಟ್ರೇಲರ್ ಹಾಡುಗಳ ಮೂಲಕ ಭಾರೀ ನಿರೀಕ್ಷೆಯನ್ನು ಮೂಡಿಸಿರುವ ಈ ಸಿನಿಮಾ ರಾಜ್ಯಾದ್ಯಂತ ಎ.19 ರಂದು ಬಿಡುಗಡೆಯಾಗಲಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ಮಂಡ್ಯ: ಐಸ್ ಕ್ರೀಂ ತಿಂದ ಬಳಿಕ ಅವಳಿ ಕಂದಮ್ಮಗಳು ಸಾವನ್ನಪ್ಪಿದ ದಾರುಣ ಘಟನೆ ಶ್ರೀರಂಗಪಟ್ಟಣ ತಾಲ್ಲೂಕಿನ ಬೆಟ್ಟಹಳ್ಳಿ ಗ್ರಾಮದಲ್ಲಿ ನಡೆದಿದೆ. ಒಂದೂವರೆ ವರ್ಷದ ತ್ರಿಶುಲ್ ಹಾಗೂ ತ್ರಿಶಾ ಸಾವನ್ನಪ್ಪಿದ ಮಕ್ಕಳಾಗಿದ್ದಾರೆ. ಮಧ್ಯಾಹ್ನ ಹೊತ್ತಿನಲ್ಲಿ ತಳ್ಳುವ ಗಾಡಿಯಲ್ಲಿ ಐಸ್ ಕ್ರೀಂ ತೆಗೆದುಕೊಂಡು ತಾಯಿ ಪೂಜಾ ಸೇರಿದಂತೆ ಇಬ್ಬರು ಮಕ್ಕಳು ಕೂಡ ಸೇವಿಸಿದ್ದಾರೆ. ಆ ನಂತರ ಮಕ್ಕಳು ಅಸ್ವಸ್ಥವಾಗಿದ್ದರು ಎಂದು ಆರೋಪಿಸಲಾಗಿದೆ. ಇನ್ನು ಗ್ರಾಮದಲ್ಲಿ ಬೇರೆ ಮಕ್ಕಳು ಕೂಡ ಅದೇ ಐಸ್ ಕ್ರೀಂ ತಿಂದಿದ್ದರು. ಆದರೆ, ಬೇರೆ ಯಾರಿಗೂ ತೊಂದರೆ ಆಗಿಲ್ಲ. ಕಂದಮ್ಮಗಳ ಸಾವಿಗೆ ಇದುವರೆಗೂ ನಿಖರ ಕಾರಣ ತಿಳಿದು ಬಂದಿಲ್ಲ. ಮರಣೋತ್ತರ ಪರೀಕ್ಷೆ ನಂತರ ನಿಖರ ಕಾರಣ ತಿಳಿದು ಬರಬೇಕಿದೆ. ಸದ್ಯ ಮಿಮ್ಸ್ ಆಸ್ಪತ್ರೆಗೆ ಮೃತದೇಹಗಳನ್ನು ರವಾನೆ ಮಾಡಲಾಗಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ತುಮಕೂರು: ಜಿಲ್ಲೆಯ ಕುಣಿಗಲ್ ತಾಲೂಕಿನ ಗೊಲ್ಲರಹಟ್ಟಿಯಲ್ಲಿ ರಾಮ ನವಮಿಯಂದು ಮಜ್ಜಿಗೆ ಹಾಗೂ ಪಾನಕ ಸೇವಿಸಿದ್ದ 45 ಜನರು ಅಸ್ವಸ್ಥರಾದ ಘಟನೆ ನಡೆದಿದೆ. ನಿನ್ನೆ(ಏ.17) ರಾಮ ನವಮಿಯಂದು ಸುಬ್ರಹ್ಮಣ್ಯ ದೇಗುಲದಲ್ಲಿ ಮಜ್ಜಿಗೆ, ಪಾನಕವನ್ನ ಗ್ರಾಮಸ್ಥರು ಸೇವಿಸಿದ್ದರು. ಬಳಿಕ ಮಧ್ಯರಾತ್ರಿಯಿಂದ ವಾಂತಿ-ಭೇದಿ ಶುರುವಾಗಿದ್ದು, ಬೆಳಗ್ಗೆ ಎಡೆಯೂರಿನ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ದಾಖಲಾಗಿದ್ದರು. ಆದರೆ, ಆರೋಗ್ಯ ಸುಧಾರಿಸದ ಹಿನ್ನೆಲೆ ಕುಣಿಗಲ್ ತಾಲೂಕು ಆಸ್ಪತ್ರೆಗೆ ಸ್ಥಳಾಂತರ ಮಾಡಲಾಗಿದೆ ಎಂದು ತಿಳಿದು ಬಂದಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296