Subscribe to Updates
Get the latest creative news from FooBar about art, design and business.
- ಕೊರಟಗೆರೆ: ಬಾಲಕಿಯರಿಗೆ ಸುರಕ್ಷಿತ ವಸತಿ ನಿಲಯ ಆರಂಭಕ್ಕೆ ಕ್ರಮ: ಅಪೂರ್ವ ಸಿ. ಅನಂತರಾಮು
- ಬಕ್ರೀದ್: ಶಾಂತಿಗೆ ಭಂಗ ತಂದರೆ, ಪ್ರಚೋದನೆ ನೀಡಿದ್ರೆ ಕ್ರಮ: ಕೆ.ವಿ.ಅಶೋಕ್ ಎಚ್ಚರಿಕೆ
- ವಿಶ್ವ ಕಾರ್ಮಿಕ ದಿನಾಚರಣೆ: ನೂತನ ಕಾರ್ಮಿಕ ಕಚೇರಿ ಉದ್ಘಾಟನೆ, ಹಿರಿಯ ಕಾರ್ಮಿಕರಿಗೆ ಸನ್ಮಾನ
- ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ: ನಿವೃತ್ತಿ ಅಂಚಿನಲ್ಲಿರುವ ಮುಖ್ಯೋಪಾಧ್ಯಾಯ ಅರೆಸ್ಟ್
- ನಾಳೆ ದೆಹಲಿಗೆ ಸಿಎಂ ಸಿದ್ದರಾಮಯ್ಯ ಭೇಟಿ; ನಾಯಕತ್ವ ಬದಲಾವಣೆ ಚರ್ಚೆಗಳ ನಡುವೆ ಹೈಕಮಾಂಡ್ ಬುಲಾವ್
- ಸೇಡು ತೀರಿಸಿಕೊಳ್ಳಲು ವರ್ಷದ ಬಳಿಕ ಅದೇ ಅಪ್ರಾಪ್ತೆ ಮೇಲೆ ಮತ್ತೆ ಲೈಂಗಿಕ ದೌರ್ಜನ್ಯ–ಇಬ್ಬರು ಆರೋಪಿಗಳ ಬಂಧನ
- ಭಟ್ಕಳ: ಕಪ್ಪೆಚಿಪ್ಪು ಸಂಗ್ರಹಿಸಲು ಹೋಗಿ ನೀರಲ್ಲಿ ಮುಳುಗಿ 11 ಮಂದಿ ಸಾವು!
- ಪ್ರೀತಿ ಹೆಸರಲ್ಲಿ ಅಪ್ರಾಪ್ತ ವಯಸ್ಸಿನ ಬಾಲಕಿಗೆ ಲೈಂಗಿಕ ದೌರ್ಜನ್ಯ: ಆರೋಪಿ ವಿರುದ್ಧ ಪೋಕ್ಸೋ ಕೇಸ್ ದಾಖಲು
Author: admin
ದೃಷ್ಟಿ ಸುಧಾರಿಸಲು ಸಹಾಯ ಮಾಡುತ್ತೆ ಮಾವಿನ ಕಾಯಿ ಮಾವಿನ ಕಾಯಿಯಲ್ಲಿ ವಿಟಮಿನ್ ಸಿ ಸಮೃದ್ಧವಾಗಿದೆ. ಹಿಮೋಫಿಲಿಯಾ ಮತ್ತು ರಕ್ತಹೀನತೆಯ ಅಪಾಯವನ್ನು ಕಡಿಮೆ ಮಾಡುವಲ್ಲಿ ಇದು ಪ್ರಮುಖ ಪಾತ್ರ ವಹಿಸುತ್ತದೆ ಎಂದು ವೈದ್ಯರು ಹೇಳುತ್ತಾರೆ. ರಕ್ತ ಹೆಪ್ಪುಗಟ್ಟುವುದನ್ನು ತಡೆಯುತ್ತದೆ. ಮಾವಿನ ಕಾಯಿ ಕ್ಯಾರೊಟಿನಾಯ್ಡ್ಗಳಲ್ಲಿ ಸಮೃದ್ಧವಾಗಿವೆ, ಇದು ದೃಷ್ಟಿ ಸುಧಾರಿಸಲು ಸಹಾಯ ಮಾಡುತ್ತದೆ. ಬೇಸಿಗೆಯಲ್ಲಿ ಮಾವಿನ ಕಾಯಿ ತಿನ್ನುವುದರಿಂದ ನಿರ್ಜಲೀಕರಣವನ್ನು ತಡೆಯಬಹುದು ಎನ್ನುತ್ತಾರೆ ವೈದ್ಯರು. ಈ ಹಣ್ಣು ಸೇವನೆ ಮಾಡಿದರೆ ತೂಕ ಕಡಿಮೆ ಮಾಡಿಕೊಳ್ಳಬಹುದು! ಸಪೋಟಾದಲ್ಲಿರುವ ಕ್ಯಾಲ್ಸಿಯಂ ಮತ್ತು ಫಾಸ್ಪರಸ್ ಮೂಳೆಗಳನ್ನು ಬಲಪಡಿಸುತ್ತದೆ. ಈ ಹಣ್ಣುಗಳು ನಮ್ಮ ಜೀರ್ಣಕ್ರಿಯೆಯನ್ನು ಸುಲಭಗೊಳಿಸಲು ಸಹಾಯ ಮಾಡುತ್ತದೆ. ಹೊಟ್ಟೆಗೆ ಸಂಬಂಧಿಸಿದ ಸಮಸ್ಯೆ ಇರುವವರು ವೈದ್ಯರ ಸಲಹೆಯಂತೆ ಆಹಾರದಲ್ಲಿ ಸಪೋಟಾ ಹಣ್ಣನ್ನು ಸೇರಿಸಿಕೊಳ್ಳಬಹುದು. ಇತರ ಹಣ್ಣುಗಳಿಗೆ ಹೋಲಿಸಿದರೆ ಸಪೋಟಾ ಹಣ್ಣಿನಲ್ಲಿ ಕ್ಯಾಲೋರಿ ಕಡಿಮೆ. ಇದರೊಂದಿಗೆ ನೀವು ರುಚಿಯನ್ನು ಆನಂದಿಸುತ್ತಾ ಸುಲಭವಾಗಿ ತೂಕವನ್ನು ಕಳೆದುಕೊಳ್ಳಬಹುದು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್…
ಹಾಸನ: ಸಾಕಷ್ಟು ಜನರ ಮೇಲೆ ದಾಳಿ ಮಾಡಿದ್ದ ನರ ಹಂತಕ ಕಾಡಾನೆ ಕರಡಿ ಕಡೆಗೂ ಸೆರೆ ಆಗಿದೆ. ಬೇಲೂರು ತಾಲ್ಲೂಕಿನ ವಾಟೇಹಳ್ಳಿಯ ಐಬಿಸಿ ಕಾಫಿ ತೋಟದಲ್ಲಿ ಅಭಿಮನ್ಯು ನೇತೃತ್ವದಲ್ಲಿ ಅರಣ್ಯ ಇಲಾಖೆ ತಂಡ ಹಂತಕ ಕಾಡಾನೆಯನ್ನು ಸೆರೆ ಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ. ಅಭಿಮನ್ಯು, ಪ್ರಶಾಂತ, ಸುಗ್ರೀವ, ಕರ್ನಾಟಕ ಭೀಮ, ಅಶ್ವತ್ಥಾಮ, ಮಹೇಂದ್ರ ಸೇರಿ ಎಂಟು ಆನೆಗಳಿಂದ ಭರ್ಜರಿ ಕಾರ್ಯಾಚರಣೆ ಮೂಲಕ ಕಾಡಾನೆ ಕರಡಿಯನ್ನು ಯಶಸ್ವಿಯಾಗಿ ಸೆರೆ ಹಿಡಿಯಲಾಗಿದೆ. ಬೇಲೂರು ತಾಲ್ಲೂಕಿನ ಮತ್ತಾವರ ಬಳಿ, ಜನವರಿ 4 ರಂದು ಕಾರ್ಮಿಕ ವಸಂತ್ ನನ್ನು ಕರಡಿ ಕಾಡಾನೆ ದಾಳಿ ಮಾಡಿ ಕೊಂದಿದ್ದು, ಬಳಿಕ ಬೇಲೂರು ಸಕಲೇಶಪುರ ಭಾಗದಲ್ಲಿ ಹಲವರ ಮೇಲೆ ದಾಳಿ ಮಾಡಿ ಈ ಒಂಟಿಸಲಗ ಆತಂಕ ಸೃಷ್ಟಿ ಮಾಡಿತ್ತು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ಬಾಗಲಕೋಟೆ: ಅಣ್ಣನೊಬ್ಬ, ಮಲಗಿದ್ದ ತಮ್ಮನ ಮುಖಕ್ಕೆ ಕೊಡಲಿಯಿಂದ ಹೊಡೆದು ಕೊಲೆ ಮಾಡಿರುವ ಘಟನೆ ಜಿಲ್ಲೆಯ ಮುಧೋಳ್ ನಗರದ ಗಾಂಧಿ ಚೌಕ್ ನಲ್ಲಿ ನಡೆದಿದೆ. ಸುನಿಲ್ ರಜಪೂತ(24) ಮೃತ ದುರ್ದೈವಿಯಾಗಿದ್ದಾರೆ. ಅಣ್ಣ ಸುಖೇನ್ ಸಿಂಗ್ ರಜಪೂತ್ ಆರೋಪಿಯಾಗಿದ್ದಾರೆ. ಆರೋಪಿ ಅಣ್ಣ ಸುಖೇನ್ ಸಿಂಗ್ ರಜಪೂತ್ ತಮ್ಮ ಸುನಿಲ್ ರಾತ್ರಿ ನಿದ್ದೆಯಲ್ಲಿದ್ದಾಗ ಕೊಲೆ ಮಾಡಿದ್ದಾನೆ. ಬಳಿಕ ಅಲ್ಲಿಂದ ಸುಖೇನ್ ಸಿಂಗ್, ಸ್ಮಶಾನಕ್ಕೆ ಹೋಗಿ ಪಕ್ಕದಲ್ಲಿನ ಘಟಪ್ರಭಾ ನದಿಯಲ್ಲಿ ಸ್ನಾನ ಮಾಡಿದ್ದಾನೆ. ಅಷ್ಟು ಮಾತ್ರ ವಲ್ಲದೆ ಹಣೆಗೆ ಭಸ್ಮ ಹಾಕಿಕೊಂಡು ಚೇಷ್ಟೆ ಮಾಡಿದ್ದಾನೆ. ಅಷ್ಟೇ ಅಲ್ಲ, ಅಲ್ಲಿನ ಕೆಲಸಗಾರರಿಗೆ ನನ್ನ ತಮ್ಮನ ಮೃತದೇಹ ಬರುತ್ತದೆ ಎಂದು ಹೇಳಿದ್ದಾನೆ. ಸುಖೇನ್ ಸಿಂಗ್ ರಜಪೂತ್ ಹಾಗೂ ಸುನಿಲ್ ಇಬ್ಬರು ಅಣ್ಣ-ತಮ್ಮಂದಿರು, ಸುಖೇನ್ ಕಳೆದ ಐದಾರು ವರ್ಷದಿಂದ ಮಾನಸಿಕ ಖಿನ್ನತೆಗೆ ಒಳಗಾಗಿದ್ದ. ಮನೆಯಲ್ಲಿ ಕೆಲಸ ಮಾಡದೆ ಹುಚ್ಚುನಂತೆ ವರ್ತನೆ ತೋರುತ್ತಿದ್ದ. ತಂದೆ-ತಾಯಿ ಆತನಿಗೆ ಬೈದು ಬುದ್ದಿ ಹೇಳುತ್ತಿದ್ದರು. ಇನ್ನು ತಂದೆ-ತಾಯಿ, ಅಜ್ಜಿ ಎಲ್ಲರೂ ತೊಟ್ಟಿಲು ಕಾರ್ಯಕ್ಕೆ ಎಂದು ಎಪ್ರಿಲ್ 15 ರಂದು ರಾಯಚೂರಿಗೆ…
ಮಹಾರಾಷ್ಟ್ರ: ಮಹಾರಾಷ್ಟ್ರದ ನಾಗಸಾಪಾಟ ಬಳಿ ಮದುವೆಗೆ ಎಂದು ಹೊರಟಿದ್ದ ಕ್ರೂಜರ್ ಹಾಗೂ ಖಾಸಗಿ ಬಸ್ ನಡುವೆ ಭೀಕರ ಅಪಘಾತ ಸಂಭವಿಸಿ ಸ್ಥಳದಲ್ಲೇ ನಾಲ್ವರು ಸಾವನ್ನಪ್ಪಿರುವ ಘಟನೆ ನಡೆದಿದೆ. ಮೃತರು ಬಾಗಲಕೋಟೆ ಜಿಲ್ಲೆಯವರಾಗಿದ್ದಾರೆ ಎಂದು ತಿಳಿದು ಬಂದಿದೆ. ಬಾಗಲಕೋಟೆ ಜಿಲ್ಲೆಯ ಭಾಗ್ಯಶ್ರೀ ಅಂಬೇಕರ್(18), ನಿವೇದಿತ(17), ಉಜ್ವಲ ಶಿಂದೆ(19) ಮೃತ ದುರ್ದೈವಿಗಳಾಗಿದ್ದಾರೆ. ವಿಜಯಪುರ ಜಿಲ್ಲೆಯ ಅನುಸೂಯ ಮೊರೆ(56) ಎನ್ನುವ ಮಹಿಳೆ ಕೂಡ ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ. ಮೃತರು ಮದುವೆಗೆ ಎಂದು ಹೊರಟಿದ್ದರು. ಈ ವೇಳೆ ಖಾಸಗಿ ಬಸ್ ಹಾಗೂ ಕ್ರೂಸರ್ ನಡುವೆ ಭೀಕರ ಅಪಘಾತ ಸಂಭವಿಸಿದೆ ಎನ್ನಲಾಗಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ಸರಗೂರು: ತಾಲ್ಲೂಕಿನ ಎಂ.ಸಿ. ತಳಲು ಗ್ರಾ.ಪಂ. ವ್ಯಾಪ್ತಿಯ ಚನ್ನಗುಂಡಿ ನಮ್ಮ ಮತಗಟ್ಟೆಯಲ್ಲೆ ನಾವು ಮತ ಹಾಕ್ತೀವಿ. ಬೇರೆ ಊರಿಗೆ ಹೋಗುವುದಿಲ್ಲ. ನಮ್ಮೂರಲ್ಲೇ ನಮಗೆ ಮತಗಟ್ಟೆ ಕೊಡಿ. ಇಲ್ಲದಿದ್ದರೆ ಲೋಕಸಭಾ ಚುನಾವಣೆಯನ್ನು ಬಹಿಷ್ಕರಿಸುತ್ತೇವೆ ಎಂದು ಹಾಡಿಯಲ್ಲಿರುವ ಆದಿವಾಸಿ ಜನರು ಎಚ್ಚರಿಕೆ ನೀಡಿದ್ದಾರೆ. “ಏಪ್ರಿಲ್ 26 ರಂದು ನಡೆಯುವ ಚಾಮರಾಜನಗರ ಲೋಕಸಭಾ ಕ್ಷೇತ್ರದ ಚುನಾವಣೆಯನ್ನು ಬಹಿಷ್ಕರಿಸಿದ್ದಾರೆ. ನಮ್ಮ ತಾತ ಮುತ್ತಾತನ ಕಾಲದಿಂದಲೂ ನಾವು ಚನ್ನಗುಂಡಿಹಾಡಿ ಗ್ರಾಮದಲ್ಲಿ ಮತವನ್ನು ಹಾಕಿ ಬರುತ್ತಿದ್ದೇವೆ. ನಮ್ಮೂರಲ್ಲಿ ಇದ್ದ ಮತಗಟ್ಟೆಯನ್ನು ತೆಗೆದು ಹಾಕಿ, ಪಕ್ಕದ ಅರಳಹಳ್ಳಿ ಗ್ರಾಮಕ್ಕೆ ವರ್ಗಾಯಿಸಿದ್ದಾರೆ. ಅರಳಹಳ್ಳಿ ಗ್ರಾಮಕ್ಕೆ ಹೋಗಿ ಮತ ಹಾಕಬೇಕು ಎಂದು ಹೇಳುತ್ತಿದ್ದಾರೆ. ನಮ್ಮಲ್ಲಿ ವಯಸ್ಸಾದ ವೃದ್ಧರು, ಅಂಗವಿಕಲರು, ಗರ್ಭಿಣಿಯರು ಹಾಗೂ ಬಾಣಂತಿಯರಿದ್ದಾರೆ. ಸುಮಾರು 5 ಕಿಲೋ ಮೀಟರ್ ದೂರ ನಡೆದುಕೊಂಡು ಹೋಗಿ ಮತವನ್ನು ಹಾಕಲು ನಮ್ಮಿಂದ ಸಾಧ್ಯವಿಲ್ಲ” ಎಂದು ಅಧಿಕಾರಿಗಳಿಗೆ ತಿಳಿಸಿದರೂ ಯಾವುದೇ ಪ್ರಯೋಜನವಾಗಿಲ್ಲ ಎಂದು ಗ್ರಾಮಸ್ಥರು ದೂರಿದ್ದಾರೆ. ಕಳೆದ ವಿಧಾನಸಭಾ ಚುನಾವಣೆಯಲ್ಲಿ ಅರಳಹಳ್ಳಿ ಗ್ರಾಮಕ್ಕೆ ಹೋಗಿ ಮತವನ್ನು ಚಲಾಯಿಸಿದ್ದೇವೆ. ಸಂಚಾರಕ್ಕೆ ಯಾವುದೇ…
ರಸ್ತೆ ಅಪಘಾತಗಳ ಸಂಖ್ಯೆಯನ್ನು ತಗ್ಗಿಸಲು ಉತ್ತರ ಪ್ರದೇಶ ಸಾರಿಗೆ ಇಲಾಖೆಯು ಹೊಸ ಕಾರ್ಯತಂತ್ರವೊಂದನ್ನು ರೂಪಿಸಿದೆ ಎಂದು ವರದಿ ತಿಳಿಸಿದೆ. “ವಾಣಿಜ್ಯ ವಾಹನಗಳು ಹಾಗೂ ರಾಜ್ಯ ಸಾರಿಗೆ ಬಸ್ ಗಳ ಚಾಲಕರು ತಮ್ಮ ಕುಟುಂಬದ ಫೋಟೊವನ್ನು ಡ್ಯಾಶ್ ಬೋರ್ಡ್ ಮೇಲೆ ಇರಿಸಿ”ಕೊಳ್ಳುವಂತೆ ರಾಜ್ಯ ಸಾರಿಗೆ ಆಯುಕ್ತ ಚಂದ್ರ ಭೂಷಣ್ ಸಿಂಗ್ ಮನವಿ ಮಾಡಿದ್ದಾರೆ. ಚಾಲಕರು ತಮ್ಮ ಕುಟುಂಬದ ಫೋಟೊಗಳನ್ನು ಪ್ರದರ್ಶಿಸುವ ಉಪಾಯವನ್ನು ಆಂಧ್ರಪ್ರದೇಶದಿಂದ ಅಳವಡಿಸಿಕೊಳ್ಳಲಾಗಿದೆ ಎಂದು ತಿಳಿಸಿದ್ದಾರೆ. ಚಾಲಕರು ತಮ್ಮ ಮುಂದೆ ತಮ್ಮ ಕುಟುಂಬದ ಫೋಟೊ ಪ್ರದರ್ಶಿಸುವಂತೆ ಮಾಡುವ ಈ ವಿನೂತನ ಉಪಾಯವು ಚಾಲಕರಲ್ಲಿ ರಸ್ತೆ ಸುರಕ್ಷತೆಯ ಬಗ್ಗೆ ಭಾವನಾತ್ಮಕ ಸಂವೇದನೆಯನ್ನು ರೂಪಿಸುವ ಗುರಿ ಹೊಂದಿದೆ ಎಂದು ಇಲಾಖೆಯ ಅಧಿಕಾರಿ ಹೇಳಿದ್ದಾರೆ. ಸಾರಿಗೆ ಆಯುಕ್ತರ ಪ್ರಕಾರ, ಈ ಕ್ರಮದಿಂದ ಆಂಧ್ರಪ್ರದೇಶದಲ್ಲಿ ಯಶಸ್ವಿಯಾಗಿ ರಸ್ತೆ ಅಪಘಾತ ಪ್ರಮಾಣವನ್ನು ತಗ್ಗಿಸಲಾಗಿದೆ ಎಂದು ಹೇಳಿಕೊಂಡಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ತಮ್ಮಲ್ಲಿದ್ದ 200 ಕೋಟಿ ರೂಪಾಯಿ ಆಸ್ತಿ ದೇಣಿಗೆ ನೀಡಿ ಸನ್ಯಾಸ ಸ್ವೀಕರಿಸಿದ ಗುಜರಾತ್ ನ ಈ ಜೈನ ದಂಪತಿ ಸುದ್ದಿಯಾಗಿದ್ದಾರೆ. ಅದರಲ್ಲೂ ಅವರು ಸನ್ಯಾಸ ಸ್ವೀಕರಿಸುವ ಮೊದಲು ಮೆರವಣಿಗೆ ಮಾಡಿ ಇದ್ದ ನಗದನ್ನೆಲ್ಲಾ ಜನರ ಮೇಲೆ ಸುರಿದಿದ್ದಾರೆ. ಆ ವೀಡಿಯೊ ವೈರಲ್ ಆಗಿದೆ. ತಮ್ಮ 200ಕೋಟಿ ಮೌಲ್ಯದ ಆಸ್ತಿಯನ್ನು ದೇಣಿಗೆ ನೀಡಿ ಸನ್ಯಾಸ ಸ್ವೀಕರಿಸಿದ ಗುಜರಾತ್ ನ ಶ್ರೀಮಂತ ಜೈನ ದಂಪತಿಗಳನ್ನು ನೋಡಿದರೆ ನಿಜಕ್ಕೂ ಆಚ್ಚರಿಯಾಗುತ್ತದೆ. ಭವೇಶ್ ಭಂಡಾರಿ ಅವರು ಕಟ್ಟಡ ನಿರ್ಮಾಣ ಉದ್ಯಮಿಯಾಗಿದ್ದು, ಇವರು ಸಬರ್ಕಾಂತ ಮತ್ತು ಅಹಮದಾಬಾದ್ ಎರಡರಲ್ಲೂ ತಮ್ಮ ಕೆಲಸ ನಿರ್ವಹಿಸುತ್ತಿದ್ದರು. ಈ ದಂಪತಿಗೆ ಇಬ್ಬರು ಮಕ್ಕಳಿದ್ದು, ಅವರು 2022ರಲ್ಲಿ ಸನ್ಯಾಸತ್ವ ಸ್ವೀಕರಿಸಿದ್ದಾರೆ. ಇದೀಗ ಭಂಡಾರಿ ಮತ್ತು ಅವರ ಪತ್ನಿ ತನ್ನ ಐಷಾರಾಮಿ ಜೀವನವನ್ನು ತ್ಯಜಿಸಿ ಸನ್ಯಾಸಿಯಾಗಲು ನಿರ್ಧರಿಸಿದ್ದಾರೆ. ಅದಕ್ಕಾಗಿ ದಂಪತಿ ಗುಜರಾತ್ ನ ಸಬರ್ ಕಾಂತ ಜಿಲ್ಲೆಯಲ್ಲಿ ಟ್ರಕ್ ಅನ್ನು ರಥದಂತೆ ಅಲಂಕರಿಸಿ ಸಾಂಪ್ರದಾಯಿಕ ಉಡುಪುಗಳನ್ನು ಧರಿಸಿ ವಾಹನದ ಮೇಲೆ ನಿಂತು ಮೆರವಣಿಗೆ ನಡೆಸಿದ್ದಾರೆ.…
ದಕ್ಷಿಣ ಭಾರತ ಸಿನಿಮಾಗಳಲ್ಲಿ ಆರಂಭದ ದಿನಗಳಲ್ಲಿ ಹೊಸ ಭರವಸೆ ಮೂಡಿಸಿದ್ದ ಮಂಗಳೂರು ಮೂಲದ ಚೆಲುವೆ ಕೃತಿ ಶೆಟ್ಟಿ ನಟನೆಯ ಕೆಲ ತೆಲುಗು ಸಿನಿಮಾಗಳು ಒಂದರ ಹಿಂದೊಂದು ಫ್ಲಾಪ್ ಆಗಿದ್ದವು. ಈಗಂತೂ ಯಾವ ಆಫರ್ ಗಳಿಲ್ಲದೆ ನಟಿ ಮನೆಯಲ್ಲೇ ಕೂರುವ ಸ್ಥಿತಿ ಬಂದಿದೆ. ಆದರೀಗ ಅಚ್ಚರಿ ಎಂಬಂತೆ ನಟಿ ಎಲ್ಲಾ ನಿರ್ಮಾಪಕರಿಗೆ ಬಿಗ್ ಆಫರ್ ನೀಡಿದ್ದು ತಾನು ಬೋಲ್ಡ್ ಸೀನ್ ಗಳಲ್ಲಿ ನಟಿಸಲು ರೆಡಿ ಎಂದಿದ್ದಾರೆ. ಬಿಕಿನಿ’ಯಲ್ಲಿ ಕಾಣಿಸಿಕೊಳ್ಳಬೇಕೆಂದರೆ ಎರಡಲ್ಲ ”ಐದು ಕೋಟಿ”ಯನ್ನ ಕೊಡಬೇಕೆಂದು, ಕೃತಿ ಶೆಟ್ಟಿ ಹಿಂದೆ ಪಟ್ಟು ಹಿಡಿದಿದ್ದು, ಆಂಧ್ರದಲ್ಲಿ ಈ ವಿಚಾರವಾಗಿ ಸಿಕ್ಕಾಪಟ್ಟೆ ಚರ್ಚೆಗೀಡಾಗಿದ್ದ ಕೃತಿ ಶೆಟ್ಟಿ ಇದಕ್ಕೆ ತಕ್ಕ ಶಿಕ್ಷೆ ಅನುಭವಿಸಿದರು. ಈಕೆಗೆ ಹಣದ ಮೇಲೆ ಇರುವ ”ಪ್ರೀತಿ”ಯನ್ನ ಕಂಡು ಟಾಲಿವುಡ್ ಗೆ ಟಾಲಿವುಡ್ಡೇ ಬೆಚ್ಚಿ ಬಿದ್ದಿತ್ತು. ಈ ‘ಮೋಹ-ದಾಹ’ವೇ ಈಕೆಯನ್ನು ಮೂಲೆ ಗುಂಪಾಗಿಸಿತು. ಇದೀಗ ಎಲ್ಲದರಿಂದಲೂ ಸರಿಯಾಗಿ ಬುದ್ಧಿ ಕಲಿತಿರುವ ನಟಿ ಓಪನ್ ಆಗಿ ನಿರ್ಮಾಪಕರಿಗೆ ಆಫರ್ ನೀಡಿ ತಾನು ಎಲ್ಲಾ ಪಾತ್ರಕ್ಕೂ ರೆಡಿ, ತುಂಡುಡುಗೆಯನ್ನೂ…
ಶ್ರೀ ರಾಮನವಮಿಯ ದಿನದಂದು ಜೈ ಶ್ರೀರಾಮ ಎಂದು ಮೂವರು ಹಿಂದೂ ಯುವಕರು ಕಾರಿನಲ್ಲಿ ಘೋಷಣೆ ಕೂಗಿದ್ದು, ಆ ಸಂದರ್ಭದಲ್ಲಿ ಕಾರನ್ನು ಅಡ್ಡಗಟ್ಟಿದ ಮುಸ್ಲಿಂ ಯುವಕರ ಗುಂಪು ಇಲ್ಲಿ ಶ್ರೀರಾಮ್ ಎನ್ನಂಗಿಲ್ಲ, ಓನ್ಲಿ ಅಲ್ಲಾ…ಅಲ್ಲಾ ಹು ಅಕ್ಬರ್ ಎನ್ನಬೇಕು ಎಂದು ಹೇಳಿ ಹಲ್ಲೆ ಮಾಡಿದ ಘಟನೆಯೊಂದು ನಡೆದಿದೆ. ಈ ಘಟನೆ ನಡೆದಿರುವುದು ಬೆಂಗಳೂರಿನ ಚಿಕ್ಕಬೆಟ್ಟಹಳ್ಳಿಯಲ್ಲಿ. ಬುಧವಾರ ಮಧ್ಯಾಹ್ನ ಮೂವರು ಬಾಲಕರು ಕಾರಿನಲ್ಲಿ ಹೋಗುತ್ತಿರುವಾಗ ಜೈ ಶ್ರೀರಾಮ್ ಎಂದು ಕೂಗಿದ್ದಾರೆ. ಆವಾಗ ಬೈಕ್ ನಲ್ಲಿ ಹೋಗುತ್ತಿದ್ದ ಯುವಕರು ಕಾರನ್ನು ಅಡ್ಡಗಟ್ಟಿ, ಗಲಾಟೆ ಪ್ರಾರಂಭ ಮಾಡಿದ್ದಾರೆ. ಕಾರಿನ ಬಳಿಗೆ ಬಂದ ಯುವಕರು ಏನು ನೀವು ಜೈ ಶ್ರೀರಾಮ್ ಎಂದು ಹೇಳಬೇಕಾ? ಇಲ್ಲಿ ಜೈ ಶ್ರೀರಾಮ್ ಇಲ್ಲ.. ಓನ್ಲೀ ಅಲ್ಲಾ.. ಅಲ್ಲಾಹು ಅಕ್ಕಬರ್ ಎಂದು ಹೇಳಬೇಕು ಎಂದು ಹೇಳುತ್ತಾ ಅವಾಚ್ಯ ಶಬ್ದಗಳಿಂದ ನಿಂದನೆ ಮಾಡಿರುವ ಕುರಿತು ವರದಿಯಾಗಿದೆ. ನಮ್ಮ ಹಬ್ಬ ನಾವು ಏನಾದ್ರೂ ಮಾಡ್ತೀವಿ. ನಿಮ್ಮ ಹಬ್ಬದಲ್ಲಿ ಹೀಗೆ ಬಂದು ನಾವೇನಾದರೂ ಮಾಡ್ತೀವಾ? ಎಂದು ಪ್ರಶ್ನೆ ಮಾಡಿದ್ದಾರೆ…
ತುರುವೇಕೆರೆ: ಹೇಮಾವತಿ ನಾಲೆಯ ಲಿಂಕ್ ಕೆನಾಲ್ ಎಕ್ಸ್ ಪ್ರೆಸ್ ಲೈನ್ ಬಗ್ಗೆ ರೈತರಿಗೆ ಯಾವುದೇ ಮಾಹಿತಿ ಕೊಡದೆ ಏಕಾಏಕಿ ಸರ್ಕಾರದವರು ಕಾಮಗಾರಿಯನ್ನು ಪ್ರಾರಂಭ ಮಾಡಿದ್ದಾರೆ” ಎಂದು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ತುರುವೇಕೆರೆ ತಾಲೂಕು ಅಧ್ಯಕ್ಷ ತಾಳ್ಕೆರೆ ನಾಗೇಂದ್ರ ನೇರ ಆರೋಪ ಮಾಡಿದ್ದಾರೆ. ಪಟ್ಟಣದ ಹೇಮಾವತಿ ಕಚೇರಿಯ ಸಭಾಂಗಣದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಮ್ಮ ಮುದ್ದಹನುಮೇಗೌಡರು, “ಯಾವುದೇ ಕಾಮಗಾರಿ ನಡೆದಿಲ್ಲ. ಟೆಂಡರ್ ಪ್ರಕ್ರಿಯೆ ನಡೆದಿಲ್ಲ. ಶಂಕು ಸ್ಥಾಪನೆ ಮಾಡಿದ ತಕ್ಷಣ ಅದು ಜಾರಿಯಾಗುವುದಿಲ್ಲ ಪೈಪ್ ಗಳ ಮೂಲಕ ಭೂಮಿಯಲ್ಲಿ ನೀರು ತೆಗೆದುಕೊಂಡು ಹೋಗುತ್ತೇವೆ ಎಂದು ಹೇಳುತ್ತಿರುವುದನ್ನು ನಾವು ಒಪ್ಪುವುದಿಲ್ಲ. ಅವರು ಜಿಲ್ಲೆಯ ಜನರನ್ನು ದಾರಿತಪ್ಪಿಸುತ್ತಿದ್ದಾರೆ. ಈ ಕಾಮಗಾರಿಯ ಬಗ್ಗೆ ಅವರಿಗೆ ಮಾಹಿತಿ ಇಲ್ಲವಾ? ಜಿಲ್ಲೆಯ ರೈತರ ಬಗ್ಗೆ ಹಾಗೂ ಕುಡಿಯುವ ನೀರಿನ ಬಗ್ಗೆ ಇವರಿಗೆ ಕಾಳಜಿ ಹಾಗೂ ಸ್ಪಷ್ಟತೆಯಿಲ್ಲ. ರಾಜಕಾರಣಿಗಳು ಜಿಲ್ಲೆಯ ರೈತರನ್ನು ಅಧೋಗತಿಗೆ ತಳ್ಳುತ್ತಿದ್ದಾರೆ ಎಂದು ಆರೋಪಿಸಿದರು. ಕಾಮಗಾರಿ ನಡೆದಿರುವುದು ಸತ್ಯ. ನಾನು ಇದನ್ನು ಮಾಡಲು…