Subscribe to Updates
Get the latest creative news from FooBar about art, design and business.
- ಕೊರಟಗೆರೆ: ಬಾಲಕಿಯರಿಗೆ ಸುರಕ್ಷಿತ ವಸತಿ ನಿಲಯ ಆರಂಭಕ್ಕೆ ಕ್ರಮ: ಅಪೂರ್ವ ಸಿ. ಅನಂತರಾಮು
- ಬಕ್ರೀದ್: ಶಾಂತಿಗೆ ಭಂಗ ತಂದರೆ, ಪ್ರಚೋದನೆ ನೀಡಿದ್ರೆ ಕ್ರಮ: ಕೆ.ವಿ.ಅಶೋಕ್ ಎಚ್ಚರಿಕೆ
- ವಿಶ್ವ ಕಾರ್ಮಿಕ ದಿನಾಚರಣೆ: ನೂತನ ಕಾರ್ಮಿಕ ಕಚೇರಿ ಉದ್ಘಾಟನೆ, ಹಿರಿಯ ಕಾರ್ಮಿಕರಿಗೆ ಸನ್ಮಾನ
- ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ: ನಿವೃತ್ತಿ ಅಂಚಿನಲ್ಲಿರುವ ಮುಖ್ಯೋಪಾಧ್ಯಾಯ ಅರೆಸ್ಟ್
- ನಾಳೆ ದೆಹಲಿಗೆ ಸಿಎಂ ಸಿದ್ದರಾಮಯ್ಯ ಭೇಟಿ; ನಾಯಕತ್ವ ಬದಲಾವಣೆ ಚರ್ಚೆಗಳ ನಡುವೆ ಹೈಕಮಾಂಡ್ ಬುಲಾವ್
- ಸೇಡು ತೀರಿಸಿಕೊಳ್ಳಲು ವರ್ಷದ ಬಳಿಕ ಅದೇ ಅಪ್ರಾಪ್ತೆ ಮೇಲೆ ಮತ್ತೆ ಲೈಂಗಿಕ ದೌರ್ಜನ್ಯ–ಇಬ್ಬರು ಆರೋಪಿಗಳ ಬಂಧನ
- ಭಟ್ಕಳ: ಕಪ್ಪೆಚಿಪ್ಪು ಸಂಗ್ರಹಿಸಲು ಹೋಗಿ ನೀರಲ್ಲಿ ಮುಳುಗಿ 11 ಮಂದಿ ಸಾವು!
- ಪ್ರೀತಿ ಹೆಸರಲ್ಲಿ ಅಪ್ರಾಪ್ತ ವಯಸ್ಸಿನ ಬಾಲಕಿಗೆ ಲೈಂಗಿಕ ದೌರ್ಜನ್ಯ: ಆರೋಪಿ ವಿರುದ್ಧ ಪೋಕ್ಸೋ ಕೇಸ್ ದಾಖಲು
Author: admin
ಅಬುಧಾಬಿ: ಯುನೈಟೆಡ್ ಅರಬ್ ಎಮಿರೇಟ್ಸ್ನಾದ್ಯಂತ ಧಾರಾಕಾರ ಮಳೆಯಾಗುತ್ತಿದ್ದು, ಮರುಭೂಮಿ ದೇಶದ ಸುತ್ತಲೂ ವ್ಯಾಪಕವಾದ ಪ್ರವಾಹವನ್ನು ಉಂಟು ಮಾಡಿದೆ. ದುಬೈನ ಪ್ರಮುಖ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನೀರು ತುಂಬಿದ್ದು ಕೆರೆಯಂತಾಗಿತ್ತು. ನಿಲ್ದಾಣದಲ್ಲೇ ನದಿಯಂತೆ ನೀರು ಹರಿಯುತ್ತಿದ್ದರಿಂದ ವಿಮಾನ ಕಾರ್ಯಾಚರಣೆ ಸ್ಥಗಿತಗೊಳಿಸಲಾಗಿದೆ. ವಿಶ್ವದ ಅತ್ಯಂತ ಜನನಿಬಿಡ ವಿಮಾನ ನಿಲ್ದಾಣಗಳಲ್ಲಿ ಒಂದಾದ ದುಬೈ ವಿಮಾನ ನಿಲ್ದಾಣದಿಂದ ಭಾರತ, ಪಾಕಿಸ್ತಾನ, ಸೌದಿ ಮತ್ತು ಯುನೈಟೆಡ್ ಕಿಂಗ್ ಡಮ್ ಸೇರಿದಂತೆ ಹಲವು ದೇಶಗಳಿಗೆ ಏಪ್ರಿಲ್ 16 ರಂದು ವಿಮಾನಗಳ ಕಾರ್ಯಾಚರಣೆ ವಿಳಂಬವಾಗಿತ್ತು. ಇದರಿಂದ ಪ್ರಯಾಣಿಕರು ಪರದಾಡುವಂತಾಯಿತು. ಮರುಭೂಮಿ ರಾಷ್ಟ್ರದಾದ್ಯಂತ ವ್ಯಾಪಕವಾದ ಪ್ರವಾಹ ಉಂಟುಮಾಡಿದ ಭಾರೀ ಮಳೆಯು ಭಾಗಶಃ ಮೋಡ ಬಿತ್ತನೆಯಿಂದ ಉಂಟಾಗಿದೆ. ಯುಎಇ ಮತ್ತು ಬಹ್ರೇನ್ನಾದ್ಯಂತ ಪ್ರವಾಹಕ್ಕೆ ಕಾರಣವಾದ ಧಾರಾಕಾರ ಮಳೆಯಿಂದ ಮಧ್ಯಪ್ರಾಚ್ಯದ ಆರ್ಥಿಕ ಕೇಂದ್ರವಾದ ದುಬೈ ನಿಷ್ಕ್ರಿಯಗೊಂಡಿದೆ. ಭಾನುವಾರ ಮತ್ತು ಸೋಮವಾರ ಒಮಾನ್ನಲ್ಲಿ 18 ಮಂದಿ ಸಾವನ್ನಪ್ಪಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್…
ಬೆಂಗಳೂರು: ಕನ್ನಡ ಸೇವೆಯನ್ನು ಮಾಡಿದ ಅಪರೂಪದ ನಟ ದ್ವಾರಕೀಶ್ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ರವೀಂದ್ರ ಕಲಾಕ್ಷೇತ್ರದಲ್ಲಿ ಖ್ಯಾತ ಚಲನಚಿತ್ರ ನಟ ನಿರ್ಮಾಪಕ ದಿ. ದ್ವಾರಕೀಶ್ ರವರ ಪ್ರಾರ್ಥಿವ ಶರೀರಕ್ಕೆ ಅಂತಿಮ ಗೌರವ ಸಲ್ಲಿಸಿದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು. ಅಪಾರ ಸೇವೆ ಹಾಗೂ ಕೊಡುಗೆ: ಕನ್ನಡ ಚಿತ್ರರಂಗದಕ್ಕೆ ನಟ, ನಿರ್ದೇಶಕರಾಗಿ ಹಾಗೂ ನಿರ್ಮಾಪಕರಾಗಿ ದ್ವಾರಕೀಶ್ ಅವರು ಅಪಾರ ಕೊಡುಗೆ ಹಾಗೂ ಸೇವೆಯನ್ನು ಸಲ್ಲಿಸಿದ್ದಾರೆ. ಅವರ ಸೇವೆಯನ್ನು ಮರೆಯಲು ಸಾಧ್ಯವಿಲ್ಲ. ಹಾಸ್ಯನಟರಾಗಿ ಅಲ್ಲದೆ ನಾಯಕ ನಟರಾಗಿಯೂ ಉತ್ತಮ ಅಭಿನಯ ನೀಡಿದವರು ಅವರು ಎಂದರು. ಡಾ. ರಾಜ್ ಕುಮಾರ್ ಮತ್ತು ಅವರ ಜೋಡಿ ಬಹಳ ಚೆನ್ನಾಗಿತ್ತು. ವಿಷ್ಣುವರ್ಧನ್ ಹಾಗೂ ಅಂಬರೀಶ್ ಅವರ ಚಿತ್ರಗಳಲ್ಲಿಯೂ ಅಭಿನಯಿಸಿದ್ದರು. ಜೀವನದಲ್ಲಿ ಬಹಳಷ್ಟು ಏಳುಬೀಳುಗಳನ್ನು ಕಂಡಿದ್ದಾರೆ. ಆದರೂ ಕನ್ನಡ ಚಿತ್ರ ನಿರ್ಮಾಣ, ನಟನೆಯನ್ನು ಬಿಟ್ಟಿರಲಿಲ್ಲ. ಕಷ್ಟಗಳನ್ನು ಸಹಿಸಿ ಕನ್ನಡ ಚಿತ್ರರಂಗ ಬೆಳೆಯಲು ಕೊಡುಗೆ ನೀಡಿದ್ದಾರೆ. ಮೈಸೂರಿನ ಹುಣಸೂರಿನಲ್ಲಿ ಹುಟ್ಟಿದವರು. ತವರಿನ ಬಗ್ಗೆ ಬಹಳ ಪ್ರೇಮವಿತ್ತು. ಒಮ್ಮೆ ಮೈಸೂರಿಗೆ…
ಬೆಂಗಳೂರು: ಇಂದು ಕೊಪ್ಪಳದ ಬಿಜೆಪಿಯ ಮಾಜಿ ಸಂಸದ ಕರಡಿ ಸಂಗಣ್ಣ ಅವರು ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಅಧಿಕೃತವಾಗಿ ಕಾಂಗ್ರೆಸ್ ಪಕ್ಷ ಸೇರ್ಪಡೆಯಾದರು. ಈ ಸಂದರ್ಭದಲ್ಲಿ ಮಾತನಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್, ಸೋಲಿನ ಭಯದಿಂದಲೇ ಬಿಜೆಪಿಯೊಂದಿಗೆ ಜೆಡಿಎಸ್ ಮೈತ್ರಿ ಮಾಡಿಕೊಂಡಿದೆ ಎಂದು ವಾಗ್ದಾಳಿ ನಡೆಸಿದರು. ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಕರಡಿ ಸಂಗಣ್ಣ ಪಕ್ಷ ಸೇರ್ಪಡೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ನಮ್ಮ ಕಾರ್ಯಕ್ರಮ ಬಿಜೆಪಿಯನ್ನು ತೊಳೆಯುತ್ತದೆ. ರಾಜ್ಯದಲ್ಲಿ ಕಾಂಗ್ರೆಸ್ ಹಾಗೂ ಗ್ಯಾರಂಟಿಯ ದೊಡ್ಡ ಅಲೆ ಇದೆ ಬಿಜೆಪಿಯಲ್ಲಿ ಸುಮಾರು ನೂರು ಸಂಸದರಿಗೆ ಟಿಕೆಟ್ ಕೊಟ್ಟಿಲ್ಲ ಸರ್ವೆಯಲ್ಲಿ ಗೆಲ್ಲಲ್ಲ ಅಂತ ಸಂಸದರಿಗೆ ಟಿಕೆಟ್ ನಿರಾಕರಿಸಿದ್ದಾರೆ ಎಂದರು. ಎನ್ ಡಿ ಎ ಪರಿಸ್ಥಿತಿ ಏನು ಅಂತ ಇದರಲ್ಲೇ ಗೊತ್ತಾಗುತ್ತದೆ. ಸಂವಿಧಾನ ಬದಲಾವಣೆ ಸಾಧ್ಯವಿಲ್ಲ ಅಂತ ಮೋದಿ ಹೇಳುತ್ತಾರೆ. ಆದರೆ ಅವರ ಪಕ್ಷಕರು ಸಂವಿಧಾನ ಬದಲಿಸುತ್ತೇವೆ ಎಂದಿದ್ದಾರೆ ಎಂದು ಬಿಜೆಪಿ ನಾಯಕರ ವಿರುದ್ಧ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ತೀವ್ರ ವಾಗ್ದಾಳಿ ನಡೆಸಿದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು…
ಬೆಂಗಳೂರು: ವೀಡಿಯೋ ಚಿತ್ರೀಕರಣ ಮಾಡಲು ನಿರ್ಭಂಧಿತ ಪ್ರದೇಶ ಆಗಿದ್ದರೂ ಯೂಟ್ಯೂಬರ್ ಒಬ್ಬ ಏರ್ ಪೋರ್ಟ್ನ ನಿರ್ಭಂಧಿತ ಪ್ರದೇಶದಲ್ಲಿ ವೀಡಿಯೋ ಚಿತ್ರೀಕರಣ ಮಾಡಿ ಯೂಟ್ಯೂಬ್ ಚಾನಲ್ ನಲ್ಲಿ ವೀಡಿಯೋ ಹಂಚಿಕೊಂಡಿದ್ದಾನೆ. ಇದೀಗ ಆ ಯೂಟ್ಯೂಬರ್ ನನ್ನು ಏರ್ ಪೋರ್ಟ್ ಪೊಲೀಸರು ಬಂಧಿಸಿದ್ದು ಆತನ ವಿರುದ್ದ ಎಫ್ ಐಆರ್ ದಾಖಲಿಸಿದ್ದಾರೆ. ವಿಕಾಸ್ ಗೌಡ ಬಂಧಿತ ವ್ಯಕ್ತಿಯಾಗಿದ್ದು, ಯಲಹಂಕ ಮೂಲದವನಾಗಿದ್ದಾನೆ. ವಿಮಾನದಲ್ಲಿ ಪ್ರಯಾಣಿಸಲು ಟಿಕೇಟ್ ಖರೀದಿಸಿ ವಿಮಾನ ನಿಲ್ದಾಣಕ್ಕೆ ಪ್ರವೇಶಿಸಿದ್ದ ವಿಕಾಸ್, ವಿಮಾನದಲ್ಲಿ ಪ್ರಯಾಣಿಸದೇ ಸುಮಾರು ನಾಲ್ಕೈದು ಗಂಟೆಗಳ ಕಾಲ ಏರ್ಪೋರ್ಟ್ನಲ್ಲೇ ಇದ್ದುಕೊಂಡು ವೀಡಿಯೋ ಚಿತ್ರೀಕರಣಕ್ಕೆ ನಿರ್ಬಂಧಿತ ಪ್ರದೇಶವಾದ ರನ್ ವೇ ಚಿತ್ರೀಕರಿಸಿದ್ದಾನೆ, ಚಿತ್ರೀಕರಿಸಿದ್ದಲ್ಲದೇ ತನ್ನ ಯೂಟ್ಯೂಬ್ ಚಾನಲ್ ನಲ್ಲೂ ಹಂಚಿಕೊಂಡಿದ್ದ. ಈ ವೀಡಿಯೋ ಹಂಚಿಕೊಳ್ಳುವಾಗ ವಿಮಾನ ನಿಲ್ದಾಣಕ್ಕೆ ಟಿಕೇಟ್ ಖರೀದಿಸದೇ ಎಲ್ಲಾ ಅಧಿಕಾರಿಗಳು ಮತ್ತು ಸಿಬ್ಬಂದಿಗಳ ಕಣ್ತಪ್ಪಿಸಿ ಪ್ರವೇಶಿಸಿರುವುದಾಗಿ ಮತ್ತು ಕಳೆದ 24 ಗಂಟೆಗಳ ಕಾಲ ವಿಮಾನ ನಿಲ್ದಾಣದಲ್ಲೇ ಇದ್ದೆ ಎಂದಿದ್ದಾನೆ. ಈ ವೀಡಿಯೋ ವೈರಲ್ ಆಗುತ್ತಿದ್ದಂತೆ ಅಧಿಕಾರಿಗಳು ಈ ವೀಡಿಯೋವನ್ನು ಖುದ್ದು ವೀಕ್ಷಿಸಿ ವಿಕಾಸ್…
ತುಮಕೂರು: ಜಿಲ್ಲೆಯ ಪಾವಗಡ ತಾಲೂಕು ನಿಡಗಲ್ಲು ಹೋಬಳಿ ಮತ್ತು ಗ್ರಾಮದಲ್ಲಿ ಮೊದಲನೇ ಬಾರಿಗೆ ಭಾರತ ರತ್ನ, ಸಂವಿಧಾನ ಶಿಲ್ಪಿ, ವಿಶ್ವ ನಾಯಕ, ಡಾಕ್ಟರ್ ಬಿ.ಆರ್.ಅಂಬೇಡ್ಕರ್ ಅವರ 133 ನೇ ಜಯಂತಿಯನ್ನು ಆಚರಿಸಲಾಯಿತು. ಪರಿಶಿಷ್ಟ ಸಮುದಾಯದ ಎಲ್ಲಾ ಮನೆಗಳಿಗೂ ಬುದ್ಧ, ಡಾ.ಬಿ ಆರ್. ಅಂಬೇಡ್ಕರ್ ಅವರ ಫೋಟೋ ತೆಗೆದುಕೊಂಡು ಹೋಗಿ ಸಂವಿಧಾನದ ಪೀಠಿಕೆ ಪ್ರತಿಜ್ಞೆ ಮಾಡುವ ಮುಖಾಂತರ ಸರಳವಾಗಿ ಆಚರಣೆ ಮಾಡಲಾಯಿತು. ಈ ಸಂದರ್ಭದಲ್ಲಿ ಮುಖ್ಯ ಅತಿಥಿಗಳಾಗಿ ಸರ್ಕಲ್ ಇನ್ಸ್ಪೆಕ್ಟರ್ ಎಸ್.ಆರ್.ರಾಘವೇಂದ್ರ ಕಾರ್ಯಕ್ರಮ ಉದ್ಘಾಟನೆ ಮಾಡಿ ಮಾತನಾಡಿದರು. ಭಾರತೀಯ ಪರಿವರ್ತನ ಸಂಘ ತುಮಕೂರು ಜಿಲ್ಲಾಧ್ಯಕ್ಷರಾದ ಚಿಕ್ಕತಿಮ್ಮನಹಟ್ಟಿ ಗ್ರಾಮದ ಎಚ್.ಕೆಂಚರಾಯ ಮಾತನಾಡಿ, ಭಾರತದಲ್ಲಿ ಶಿಕ್ಷಣ ವ್ಯವಸ್ಥೆ ಸಂವಿಧಾನಕ್ಕಿಂತ ಮುಂಚೆ ಹೇಗಿತ್ತು, ಯಾರೆಲ್ಲಾ ವಿದ್ಯಾಭ್ಯಾಸ ಪಡೆಯುತ್ತಿದ್ದರು ಹಾಗೂ ವೋಟಿನ ಹಕ್ಕನ್ನು ಬಾಬಾ ಸಾಹೇಬರು ಮಹಿಳೆಯರನ್ನು ಒಳಗೊಂಡಂತೆ ಎಲ್ಲಾ ಸಮುದಾಯದ ಜನರಿಗೂ ತಂದುಕೊಡಲು 1918 ರಿಂದ 1932ರವರೆಗೆ ಹೋರಾಟ ಮಾಡಿದ ಪರಿಣಾಮ 1935 ರ ಕಾಯ್ದೆಯಲ್ಲಿ ಎಲ್ಲರಿಗೂ ಓಟಿನ ಹಕ್ಕು ದೊರೆಯಿತು ಹಾಗೂ ವೋಟಿನ ಮಹತ್ವವನ್ನು ತಿಳಿಸಿದರು.…
ನವದೆಹಲಿ: ಅಯೋಧ್ಯೆಯಲ್ಲಿ ಬಾಲರಾಮ ಪ್ರಾಣ ಪ್ರತಿಷ್ಠಾಪನೆ ಬಳಿಕ ಮೊದಲ ರಾಮನವಮಿ ಬಂದಿದೆ. ಇಂದು ರಾಮನವಮಿ ಹಿನ್ನೆಲೆಯಲ್ಲಿ ಬಾಲರಾಮನ ಕಣ್ತುಂಬಿಕೊಳ್ಳಲು ದೇಶದ ಹಲವೆಡೆಯಿಂದ ಭಕ್ತ ಸಾಗರವೇ ಹರಿದುಬಂದಿದೆ. ಈ ದಿನದ ವಿಶೇಷ ಎಂಬಂತೆ ಇಂದು ಮಧ್ಯಾಹ್ನ 12:16ರ ಸುಮಾರಿಗೆ ಸೂರ್ಯಕಿರಣಗಳು ಬಾಲರಾಮನ ಮೂರ್ತಿಗೆ ಮುತ್ತಿಕ್ಕಲಿವೆ. ಸುಮಾರು 5 ನಿಮಿಷಗಳ ಕಾಲ ಸೂರ್ಯ ರಶ್ಮಿ ಬಾಲರಾಮನ ಮೇಲಿರಲಿದೆ. ಸುಮಾರು 17 ಲಕ್ಷ ಭಕ್ತರು ಅಯೋಧ್ಯೆಯತ್ತ ಬರುವ ನಿರೀಕ್ಷೆಯಿದೆ. ಹೀಗಾಗಿ ಮಂದಿರದ ವಿವಿಐಪಿ ಹಾಗೂ ವಿಐಪಿ ದರ್ಶನ ರದ್ದು ಮಾಡಲಾಗಿದೆ. ಬೆಳಗ್ಗೆ 3:30ರಿಂದ ರಾತ್ರಿ 11 ಗಂಟೆಯವರೆಗೆ ನಿರಂತರ ದರ್ಶನಕ್ಕೆ ಅವಕಾಶ ನೀಡಲಾಗಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ಬೆಂಗಳೂರು: ಕರ್ನಾಟಕದಲ್ಲಿ ದಿನದಿಂದ ದಿನಕ್ಕೆ ಬಿಸಿಲಿನ ತಾಪಮಾನ ಏರಿಕೆಯಾಗುತ್ತಿದೆ. ಇದರಿಂದಾಗಿ ಪ್ರವಾಸೋದ್ಯಮಕ್ಕೂ ಭಾರೀ ಹೊಡೆತ ನೀಡುತ್ತಿದೆ. ವಿಶ್ವ ಪರಂಪರೆಯ ತಾಣವಾದ ಹಂಪಿಯಲ್ಲಿ ಪ್ರವಾಸಿಗರ ಸಂಖ್ಯೆ ಭಾರೀ ಇಳಿಕೆಯಾಗಿದೆ. 10 ವರ್ಷಗಳಲ್ಲೇ ಅತೀ ಕಡಿಮೆ ಪ್ರವಾಸಿಗರು ಹಂಪಿಗೆ ಭೇಟಿ ನೀಡುತ್ತಿದ್ದಾರೆ. ಸಾಮಾನ್ಯವಾಗಿ ದಿನಕ್ಕೆ 5,000 ಪ್ರವಾಸಿಗರು ಭೇಟಿ ನೀಡುತ್ತಾರೆ. ಆದರೆ ಇದೀಗ ಈ ಸಂಖ್ಯೆ ಕೇವಲ 150ಕ್ಕೆ ಇಳಿಕೆಯಾಗಿದೆ. ಪ್ರವಾಸಿಗರ ಸಂಖ್ಯೆಯಲ್ಲಿ ಇಳಿಕೆಯಾಗಿರುವುದರಿಂದ ಮಾರಾಟಗಾರರು, ಸಣ್ಣ ಅಂಗಡಿಗಳ ವರ್ತಕರ ಜೀವನೋಪಾಯದ ಮೇಲೆ ಹೆಚ್ಚು ಪರಿಣಾಮ ಬೀರುತ್ತಿದೆ. ಇಲ್ಲಿನ ಹೊಟೇಲ್ ಉದ್ಯಮದ ಮೇಲೆ ಕೂಡ ಇದು ಪರಿಣಾಮ ಬೀರಿದೆ. ಹಂಪಿಯ ಹೋಟೆಲ್ ಗಳಲ್ಲಿ ಕೊಠಡಿ ಬುಕಿಂಗ್ ಶೇಕಡಾ 20 ಕ್ಕೆ ಕುಸಿದಿದೆ. ಸಾಮಾನ್ಯವಾಗಿ ನಮ್ಮಲ್ಲಿರುವ 200 ಕೊಠಡಿಗಳಲ್ಲಿ 180 ಕೊಠಡಿಗಳು ಭರ್ತಿಯಾಗುತ್ತಿದ್ದವು. ಈಗ ಅವುಗಳಲ್ಲಿ ಕೇವಲ 30 ಬುಕ್ ಆಗಿವೆ ಎಂದು ಹೊಟೇಲ್ ಮಾಲಿಕರು ಹೇಳುತ್ತಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.…
ಬೆಂಗಳೂರು: ಬಿರು ಬಿಸಿಲಿನ ಹಿನ್ನೆಲೆಯಲ್ಲಿ ಜಿಲ್ಲಾ, ವಿಚಾರಣಾಧೀನ ನ್ಯಾಯಾಲಯಗಳಲ್ಲಿ ವಕೀಲರು ‘ಕಪ್ಪು ಕೋಟ್’ ಧರಿಸುವುದರಿಂದ ಹೈಕೋರ್ಟ್ ವಿನಾಯಿತಿ ನೀಡಿದೆ. ಏಪ್ರಿಲ್ 18 ರಿಂದ ಮೇ 31, 2024 ರವರೆಗೆ ಬೇಸಿಗೆ ಅವಧಿಯಲ್ಲಿ ವಿಚಾರಣೆಗೆ ಹಾಜರಾಗುವಾಗ ರಾಜ್ಯಾದ್ಯಂತ ಜಿಲ್ಲಾ ಮತ್ತು ವಿಚಾರಣಾ ನ್ಯಾಯಾಲಯಗಳಲ್ಲಿ ಅಭ್ಯಾಸ ಮಾಡುವ ವಕೀಲರಿಗೆ ಕಪ್ಪು ಕೋಟ್ ಧರಿಸುವುದರಿಂದ ಕರ್ನಾಟಕ ಹೈಕೋರ್ಟ್ ವಿನಾಯಿತಿ ನೀಡಿದೆ. ಬದಲಾಗಿ, ವಕೀಲರು ಯಾವುದೇ ಸಮಚಿತ್ತದ ಬಿಳಿ ಶರ್ಟ್ / ಬಿಳಿ ಸಲ್ವಾರ್ ಕಮೀಜ್ / ಯಾವುದೇ ಸಮಚಿತ್ತದ ಬಣ್ಣದ ಸೀರೆಯನ್ನು ಧರಿಸಬಹುದು. ಸಾಮಾನ್ಯ ನಿಗದಿತ ಉಡುಪಿನ ಬದಲಿಗೆ ಸಾದಾ ಬಿಳಿ ನೆಕ್ ಬ್ಯಾಂಡ್ಗಳನ್ನು ಧರಿಸಬಹುದು ಎಂದು ಹೈಕೋರ್ಟ್ ನ ರಿಜಿಸ್ಟ್ರಾರ್ ಜನರಲ್ ಕೆಎಸ್ ಭರತ್ ಕುಮಾರ್ ಅವರು ಮಂಗಳವಾರದಂದು ಹೊರಡಿಸಿದ ಸುತ್ತೋಲೆಯಲ್ಲಿ ತಿಳಿಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ಮಧುಗಿರಿ: ಪಟ್ಟಣದ ಏಕಶಿಲಾ ಬೆಟ್ಟದ ತಪ್ಪಲಿನಲ್ಲಿರುವ ಶ್ರೀಕೋಟೆ ಕೋದಂಡರಾಮಸ್ವಾಮಿ ದೇವಸ್ಥಾನದಲ್ಲಿ ರಾಮೋತ್ಸವದ ಅಂಗವಾಗಿ ಏ.17 ರ ಬುಧವಾರ ಬೆಳಿಗ್ಗೆ ಶ್ರೀ ಸ್ವಾಮಿ ಅವರಿಗೆ ಪಂಚಾಮೃತ ಅಭಿಷೇಕ, ಅಲಂಕಾರ, ಅರ್ಚನೆ, ಮಹಾಮಂಗಳಾರತಿ ಹಾಗೂ ತೀರ್ಥ ಪ್ರಸಾದ ವಿನಿಯೋಗ ಇರುತ್ತದೆ. ಶ್ರೀ ರಾಮನವಮಿ ಅಂಗವಾಗಿ ಸಂಜೆ ಬೆಂಗಳೂರಿನ ಪ್ರಶಾಂತ ಭಾರ್ಗವ ಅವರಿಂದ ಭಕ್ತಿಗೀತೆಗಳ ಕಾರ್ಯಕ್ರಮ ಇರುತ್ತದೆ. ಈ ಎಲ್ಲಾ ಕಾರ್ಯಕ್ರಮಗಳಲ್ಲಿ ಭಕ್ತಾದಿಗಳು ಸಕಾಲದಲ್ಲಿ ಭಾಗವಹಿಸಿ, ಸ್ವಾಮಿಯ ಕೃಪೆಗೆ ಪಾತ್ರರಾಗಬೇಕಾಗಿ ಭಕ್ತ ಮಂಡಳಿ ಪ್ರಕಟಣೆಯಲ್ಲಿ ತಿಳಿಸಿದೆ. ವರ್ಣಾ ಅಲಂಕಾರ: ಮಧುಗಿರಿ ಪಟ್ಟಣದಲ್ಲಿರುವ ಸರ್ವ ಜನಾಂಗದ ಭಕ್ತಾದಿಗಳ ಸಹಕಾರದೊಂದಿಗೆ ದೇವಸ್ಥಾನದ ಗೋಪುರ, ಪ್ರಾಂಗಣ, ಒಳಭಾಗದಲ್ಲಿ ವರ್ಣ ಅಲಂಕಾರ ಮಾಡಿ ವಿಶೇಷ ಮೆರಗು ಬಂದಿದೆ. ಬ್ರಹ್ಮರಥೋತ್ಸವ: ಮಧುಗಿರಿ ಪಟ್ಟಣದ ಸಾರ್ವಜನಿಕ ಆಸ್ಪತ್ರೆ ರಸ್ತೆಯಲ್ಲಿರುವ ಶ್ರೀ ವೀರಾಂಜನೇಯ ಸ್ವಾಮಿಗೆ ಏಪ್ರಿಲ್ 17ರಿಂದ 20ರ ವರೆಗೂ ಬ್ರಹ್ಮರಥೋತ್ಸವದ ಧಾರ್ಮಿಕ ಕಾರ್ಯಕ್ರಮಗಳು ನಡೆಯಲಿದೆ ಏ.8 ಗುರುವಾರ ರಂದು ಮಧ್ಯಾಹ್ನ 12:30ಕ್ಕೆ ಬ್ರಹ್ಮರಥೋತ್ಸವ ನಡೆಯಲಿದೆ ಬ್ರಹ್ಮರಥೋತ್ಸವ: ಮಧುಗಿರಿ ಇತಿಹಾಸ ಪ್ರಸಿದ್ಧ ಶ್ರೀ ಪ್ರಸನ್ನ ಪಾರ್ವತಿ…
ದ್ವಾರಕೀಶ್ ಅವರ ಮೂಲ ಹೆಸರು ಬುಂಗ್ಲೆ ಶರ್ಮಾ ರಾವ್. ಸ್ಯಾಂಡಲ್ ವುಡ್ ನ ನಿರ್ಮಾಪಕ ಮತ್ತು ನಿರ್ದೇಶಕರಾಗಿದ್ದ ಸಿ.ವಿ.ಶಿವಶಂಕರ್ ಅವರು ಬುಂಗ್ಲೆ ಶರ್ಮಾ ರಾವ್ ಗೆ ದ್ವಾರಕೀಶ್ ಎಂದು ಹೆಸರಿಟ್ಟಿದ್ದರು. ಸ್ಯಾಂಡಲ್ ವುಡ್ ನ ಪ್ರಚಂಡ ಕುಳ್ಳ ದ್ವಾರಕೀಶ್ ಅವರು ಮೈಸೂರಿನ ಇಟ್ಟಿಗೆಗೂಡುವಿನಲ್ಲಿ 1942ರ ಆಗಸ್ಟ್ 19ರಂದು ಜನಿಸಿದರು. ಆರಂಭಿಕ ಶಿಕ್ಷಣವನ್ನು ಶಾರದಾ ವಿಲಾಸ್ ಮತ್ತು ಬಾನುಮಯ್ಯ ಸ್ಕೂಲ್ ನಲ್ಲಿ ಪಡೆದರು. ಸಿಪಿಸಿ ಪಾಲಿಟೆಕ್ನಿಕ್ ನಲ್ಲಿ ಮೆಕ್ಯಾನಿಕಲ್ ಎಂಜಿನಿಯರಿಂಗ್ ನಲ್ಲಿ ಡಿಪ್ಲೊಮಾ ಪಡೆದರು. ಶಿಕ್ಷಣ ಪೂರ್ಣಗೊಂಡ ಬಳಿಕ ಇವರ ಸಹೋದರ ವಾಹನ ಬಿಡಿಭಾಗಗಳ ಬಿಸ್ನೆಸ್ ಆರಂಭಿಸಿದರು. ಭಾರತ್ ಆಟೋ ಸ್ಪೇರ್ ಹೆಸರಿನ ಶಾಪ್ ಅನ್ನು ಮೈಸೂರಿನಲ್ಲಿ ತೆರೆದಿದ್ದರು. ಮಾವ ಹುಣಸೂರು ಕೃಷ್ಣಮೂರ್ತಿ ನೆರವಿನಿಂದ ಸಿನಿಮಾರಂಗ ಪ್ರವೇಶಿಸಿದರು. 24ನೇ ವರ್ಷದಲ್ಲಿ ಪ್ರೊಡ್ಯುಸರ್: ದಿವಂಗತ ದ್ವಾರಕೀಶ್ ಅವರು ತನ್ನ 24ನೇ ವಯಸ್ಸಿನಲ್ಲಿ ನಿರ್ಮಾಪಕರಾದರು. 1966ರಲ್ಲಿ ಇವರು ಮಮತೆಯ ಬಂಧನ ಎಂಬ ಸಿನಿಮಾದ ಸಹ ನಿರ್ಮಾಪಕರಾದರು. ತುಂಬಾ ಫಿಕ್ಚರ್ಸ್ ನಡಿ ಈ ಸಿನಿಮಾ ತೆರೆಕಂಡಿತ್ತು. ಇದಾದ…