Subscribe to Updates
Get the latest creative news from FooBar about art, design and business.
- ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ: ನಿವೃತ್ತಿ ಅಂಚಿನಲ್ಲಿರುವ ಮುಖ್ಯೋಪಾಧ್ಯಾಯ ಅರೆಸ್ಟ್
- ನಾಳೆ ದೆಹಲಿಗೆ ಸಿಎಂ ಸಿದ್ದರಾಮಯ್ಯ ಭೇಟಿ; ನಾಯಕತ್ವ ಬದಲಾವಣೆ ಚರ್ಚೆಗಳ ನಡುವೆ ಹೈಕಮಾಂಡ್ ಬುಲಾವ್
- ಸೇಡು ತೀರಿಸಿಕೊಳ್ಳಲು ವರ್ಷದ ಬಳಿಕ ಅದೇ ಅಪ್ರಾಪ್ತೆ ಮೇಲೆ ಮತ್ತೆ ಲೈಂಗಿಕ ದೌರ್ಜನ್ಯ–ಇಬ್ಬರು ಆರೋಪಿಗಳ ಬಂಧನ
- ಭಟ್ಕಳ: ಕಪ್ಪೆಚಿಪ್ಪು ಸಂಗ್ರಹಿಸಲು ಹೋಗಿ ನೀರಲ್ಲಿ ಮುಳುಗಿ 11 ಮಂದಿ ಸಾವು!
- ಪ್ರೀತಿ ಹೆಸರಲ್ಲಿ ಅಪ್ರಾಪ್ತ ವಯಸ್ಸಿನ ಬಾಲಕಿಗೆ ಲೈಂಗಿಕ ದೌರ್ಜನ್ಯ: ಆರೋಪಿ ವಿರುದ್ಧ ಪೋಕ್ಸೋ ಕೇಸ್ ದಾಖಲು
- ಬಾಲಕನ ಬಲಿ ಪಡೆದಿದ್ದ ಚಿರತೆ ಕೊನೆಗೂ ಸೆರೆ: 14 ದಿನಗಳ ಕಾರ್ಯಾಚರಣೆ ಬಳಿಕ ಸ್ಥಳೀಯರು ನಿಟ್ಟುಸಿರು
- ದಿಢೀರ್ ಹವಾಮಾನ ಬದಲಾವಣೆಗೆ AI ಡೇಟಾ ಸೆಂಟರ್ ಕಾರಣ ಆಗ್ತಾ ಇದೆಯೇ?
- ಗೃಹಲಕ್ಷ್ಮಿ, ಗೃಹಜ್ಯೋತಿ ಫಲಾನುಭವಿಗಳ ಪಟ್ಟಿ ಪರಿಷ್ಕರಣೆಗೆ ರಾಜ್ಯ ಸರ್ಕಾರ ನಿರ್ಧಾರ: ಅನರ್ಹರಿಗೆ ಕೋಕ್!
Author: admin
ಪಾವಗಡ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ತುಮಕೂರು ತಾಲ್ಲೂಕು ಆಡಳಿತ, ತಾಲ್ಲೂಕು ಸ್ವೀಪ್ ಸಮಿತಿ ಪಾವಗಡ ವತಿಯಿಂದ ಇಂದು ರೈತರ ಎತ್ತಿನ ಗಾಡಿ ಮತ್ತು ಟ್ರಾಕ್ಟರ್ ರ್ಯಾಲಿ ಗೆ ತಹಶೀಲ್ದಾರ್ ಸಂತೋಷ್ ಕುಮಾರ್ ತಾಪಂ ಕಾರ್ಯನಿರ್ವಾಹಕ ಅಧಿಕಾರಿ ಜಾನಕೀರಾಮ್ ರವರು ಚಾಲನೆ ನೀಡಿದರು. ನಂತರ ಪಟ್ಟಣದ ಪ್ರಮುಖ ರಸ್ತೆಗಳಲ್ಲಿ ಮತದಾನ ಜಾಗೃತಿ ಮಾಡುವ ಮೂಲಕ ಮತದಾನ ಜಾಗೃತಿ ಕಾರ್ಯಕ್ರಮವನ್ನು ನಡೆಸಲಾಯಿತು. ಈ ಜಾಥಾದಲ್ಲಿ ಘೋಷವಾಕ್ಯಗಳನ್ನು ಕೂಗುತ್ತಾ ಬ್ಯಾನರ್, ಪ್ಲೇ ಕಾರ್ಡ್ಸ್ ಹಿಡಿದು ಗ್ರಾಮದ ಪ್ರಮುಖ ರಸ್ತೆಗಳಲ್ಲಿ ಜಾಥಾವು ಸಂಚರಿಸಿತು. ಈ ಕಾರ್ಯಕ್ರಮದಲ್ಲಿ ತಾಲ್ಲೂಕು ಮಟ್ಟದ ಎಲ್ಲ ಅಧಿಕಾರಿಗಳು ಭಾಗವಹಿಸಿದ್ದರು.ನಂತರ ಮತದಾನ ಪ್ರತಿಜ್ಞಾವಿಧಿ ಬೋಧಿಸಲಾಯಿತು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8123382149ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DwpZfHgaZak34xk58taiWR ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA
ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರಿಗೆ ಇಂದು ನಿರ್ಣಾಯಕವಾಗಿದೆ. ಕಸ್ಟಡಿ ಅವಧಿಯನ್ನು ಪೂರ್ಣಗೊಳಿಸುತ್ತಿರುವ ಅರವಿಂದ್ ಕೇಜ್ರಿವಾಲ್ ಅವರನ್ನು ಇಂದು ದೆಹಲಿಯ ರೋಸ್ ಅವೆನ್ಯೂ ಕೋರ್ಟ್ಗೆ ಹಾಜರುಪಡಿಸಲಾಗುತ್ತದೆ. ನ್ಯಾಯಮೂರ್ತಿಗಳಾದ ಸಂಜೀವ್ ಖನ್ನಾ ಮತ್ತು ದೀಪಂಕರ್ ದತ್ತಾ ಅವರನ್ನೊಳಗೊಂಡ ಪೀಠವು ಅರ್ಜಿಯನ್ನು ಪರಿಗಣಿಸಲಿದೆ. ಇಂದು ಸಂಜೆ ಬಿಹಾರ ಜೈಲಿನಲ್ಲಿರುವ ಕೇಜ್ರಿವಾಲ್ ಅವರನ್ನು ಭೇಟಿ ಮಾಡಲು ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಣಿ ಅವರಿಗೆ ಅನುಮತಿ ನೀಡಲಾಗಿದೆ. ಇದೇ ವೇಳೆ ಸಿಬಿಐ ಕೂಡ ಕೇಜ್ರಿವಾಲ್ ವಿರುದ್ಧ ಕ್ರಮಗಳನ್ನು ತೀವ್ರಗೊಳಿಸುವ ಸೂಚನೆಗಳೂ ಇವೆ. ಕಸ್ಟಡಿಯಲ್ ಬಿಆರ್ಎಸ್ ನಾಯಕಿ ಕೆ ಕವಿತಾ ಅವರಿಗೆ ಸಿಬಿಐನ ಹೆಚ್ಚಿನ ಪ್ರಶ್ನೆಗಳು ಮದ್ಯ ಹಗರಣದಲ್ಲಿ ಅರವಿಂದ್ ಕೇಜ್ರಿವಾಲ್ ಪಾತ್ರದ ಬಗ್ಗೆ. ಕಸ್ಟಡಿ ಅವಧಿಯನ್ನು ಪೂರ್ಣಗೊಳಿಸುತ್ತಿರುವ ಕೆ ಕವಿತಾಳನ್ನೂ ಸಿಬಿಐ ಇಂದು ರೋಸ್ ಅವೆನ್ಯೂ ನ್ಯಾಯಾಲಯಕ್ಕೆ ಹಾಜರುಪಡಿಸಲಿದೆ. ಕವಿತಾ ವಿಚಾರಣೆಗೆ ಸಹಕರಿಸುತ್ತಿಲ್ಲ ಎಂಬುದು ಸಿಬಿಐ ಮೂಲಗಳಿಂದ ಸಿಕ್ಕಿರುವ ಮಾಹಿತಿ. ಹೆಚ್ಚಿನ ಸಾಕ್ಷ್ಯಾಧಾರಗಳನ್ನು ಸಂಗ್ರಹಿಸಲು ಸಿಬಿಐ ಇನ್ನೂ ಮೂರು ದಿನಗಳ ಕಸ್ಟಡಿಗೆ ಕೇಳುವ ಸೂಚನೆಗಳಿವೆ. ನಮ್ಮತುಮಕೂರು.ಕಾಂನ ಕ್ಷಣ…
ಲೋಕಸಭಾ ಚುನಾವಣೆಗೆ ಸಂಬಂಧಿಸಿದ ಎಲ್ಲ ಅಧಿಕಾರಿಗಳು ಸಕ್ರಿಯವಾಗಿ ಕಾರ್ಯನಿರ್ವಹಿಸಬೇಕೆಂದು ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದ ಸಾಮಾನ್ಯ ವೀಕ್ಷಕರಾದ ವಾಣಿ ಮೋಹನ್ ಸೂಚಿಸಿದರು. ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಜಿಲ್ಲಾಧಿಕಾರಿಗಳ ಕಚೇರಿಯ ನ್ಯಾಯಾಂಗಣ ಸಭಾಂಗಣದಲ್ಲಿ ನಡೆದ ಸಭೆ ಉದ್ದೇಶಿಸಿ ಮಾತನಾಡಿದ ಅವರು, ಎಸ್. ಎಸ್. ಟಿ ಹಾಗೂ ಎ. ಎಸ್. ಟಿ ತಂಡಗಳು 3 ಪಾಳಿಗಳಲ್ಲಿ ಕಾರ್ಯನಿರ್ವಹಿಸುತ್ತಿದ್ದು, ಎಲ್ಲರೂ ಸಕ್ರಿಯವಾಗಿ ಕಾರ್ಯನಿರ್ವಹಿಸಬೇಕೆಂದು ತಿಳಿಸಿದರು. ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಬರುವ 8 ವಿಧಾನಸಭಾ ಕ್ಷೇತ್ರಗಳ ಸಹಾಯಕ ಚುನಾವಣಾ ಅಧಿಕಾರಿಗಳು ಕಾನೂನು ಮತ್ತು ಸುವ್ಯವಸ್ಥೆಯಲ್ಲಿ ಯಾವುದೇ ರೀತಿಯ ಉಲ್ಲಂಘನೆಯಾಗದಂತೆ ಎಚ್ಚರಿಕೆ ವಹಿಸಬೇಕೆಂದು ಸಾಮಾನ್ಯ ವೀಕ್ಷಕರಾದ ವಾಣಿ ಮೋಹನ್ ನಿರ್ದೇಶನ ನೀಡಿದರು. ಜಿಲ್ಲಾಧಿಕಾರಿಗಳ ಕಚೇರಿಯ ನ್ಯಾಯಾಂಗಣ ಸಭಾಂಗಣದಲ್ಲಿ ನಡೆದ ಸಭೆ ಉದ್ದೇಶಿಸಿ ಮಾತನಾಡಿದರು. ಚುನಾವಣಾಧಿಕಾರಿ ಕೆ. ಎ. ದಯಾನಂದ ಮಾತನಾಡಿ, ದಾಖಲೆಗಳಿಲ್ಲದ ಹಣ, ಮದ್ಯ, ಮಾದಕದ್ರವ್ಯಗಳ ಮೇಲೆ ನಿಗಾವಹಿಸಲಾಗುತ್ತಿದೆ ಎಂದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ…
ಕೆನಡಾದಲ್ಲಿ ಭಾರತೀಯ ವಿದ್ಯಾರ್ಥಿಯನ್ನು ಗುಂಡಿಕ್ಕಿ ಹತ್ಯೆ ಮಾಡಲಾಗಿದೆ ಹರ್ಯಾಣ ಮೂಲದ 24 ವರ್ಷದ ಯುವಕ ಮೃತಪಟ್ಟಿದ್ದಾನೆ. ನಿರಂತರ ದಾಳಿಯಿಂದ ಭಾರತೀಯ ಸಮುದಾಯ ಆತಂಕಕ್ಕೆ ಒಳಗಾಗಿದೆ. ವ್ಯಾಂಕೋವರ್ ಪೊಲೀಸ್ ಇಲಾಖೆಯು ಪತ್ರಿಕಾ ಪ್ರಕಟಣೆಯು ಸಾವನ್ನು ದೃಢಪಡಿಸಿದೆ. ಶುಕ್ರವಾರ ರಾತ್ರಿ 11 ಗಂಟೆ ಸುಮಾರಿಗೆ ವಾಹನದೊಳಗೆ ಯುವಕನ ಮೃತದೇಹ ಪತ್ತೆಯಾಗಿದೆ. ಚಿರಾಗ್ ಅಂತಿಲ್ ಎಂಬ ಭಾರತೀಯ ಮೃತಪಟ್ಟಿರುವುದನ್ನು ಪೊಲೀಸರು ಪತ್ತೆ ಹಚ್ಚಿದ್ದಾರೆ. ರಾತ್ರಿ ಗುಂಡಿನ ಸದ್ದು ಕೇಳಿಸುತ್ತಿದೆ ಎಂದು ಸ್ಥಳೀಯರು ಮಾಹಿತಿ ನೀಡಿದ ಬಳಿಕ ಪೊಲೀಸರು ಪರಿಶೀಲನೆ ನಡೆಸಿ ಕಾರಿನೊಳಗಿದ್ದ ಮೃತದೇಹವನ್ನು ಹೊರತೆಗೆದಿದ್ದಾರೆ. 2022ರಲ್ಲಿ ಓದಲು ವ್ಯಾಂಕೋವರ್ಗೆ ಬಂದಿದ್ದ ಚಿರಾಗ್ ಇತ್ತೀಚೆಗೆ ಎಂಬಿಎ ಮುಗಿಸಿದ್ದರು. ಮೃತದೇಹವನ್ನು ಮನೆಗೆ ತರುವ ಪ್ರಯತ್ನ ನಡೆಯುತ್ತಿದೆ.ಯುವಕನ ಹತ್ಯೆಯ ಹಿಂದಿನ ನಿಖರ ಕಾರಣ ಇನ್ನು ತಿಳಿದುಬಂದಿಲ್ಲ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8123382149ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DwpZfHgaZak34xk58taiWR ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA
ಎಲ್ಲರಿಗೂ ತಿಳಿದಿರುವಂತೆ ರೇಷನ್ ಕಾರ್ಡ್ ಎನ್ನುವುದು ನಮ್ಮ ವಾಸ ಸ್ಥಳದ ಬಗ್ಗೆ ನೀಡಲಾಗುವ ಪ್ರಮುಖ ದಾಖಲೆಯಾಗಿದೆ. ಮನೆಯಲ್ಲಿ ಇರುವ ಪ್ರತಿಯೊಬ್ಬ ಸದಸ್ಯರ ಹೆಸರನ್ನು ಕೂಡ ರೇಷನ್ ಕಾರ್ಡ್ ನಲ್ಲಿ ಸೇರಿಸಿ ಸರ್ಕಾರದ ಎಲ್ಲಾ ರೀತಿಯ ಯೋಜನೆಗಳ ಪ್ರಯೋಜನವನ್ನು ಪಡೆದುಕೊಳ್ಳಬಹುದು. ರೇಷನ್ ಕಾರ್ಡ್ ಅಂದ ತಕ್ಷಣ ಬಿಪಿಎಲ್ ಕಾರ್ಡ್ ಮಾತ್ರ ನೆನಪಿಗೆ ಬರುತ್ತೆ, ಆದರೆ ಬಡತನ ರೇಖೆಗಿಂತ ಮೇಲೆ ಇರುವವರಿಗೆ ಎಪಿಎಲ್ ಕಾರ್ಡ್ ಹಾಗೂ ಬಡತನ ರೇಖೆಗಿಂತ ಇನ್ನೂ ಕೆಳಗಿನವರೆಗೆ ಅಂತ್ಯೋದಯ ರೇಷನ್ ಕಾರ್ಡ್ ಕೂಡ ವಿತರಣೆ ಮಾಡಲಾಗುತ್ತದೆ. ರಾಜ್ಯ ಸರ್ಕಾರ ರೇಷನ್ ಕಾರ್ಡ್ ಗೆ ಸಂಬಂಧಪಟ್ಟಂತೆ ಬಹಳ ಕಟ್ಟು ನಿಟ್ಟಿನ ಕ್ರಮವನ್ನು ಕೈಗೊಳ್ಳುತ್ತಿದೆ ಈಗಾಗಲೇ ಕಳೆದ ಆರು ತಿಂಗಳುಗಳಿಂದ ಯಾರು ರೇಷನ್ ಪಡೆದುಕೊಂಡಿಲ್ಲವೋ ಅಂತವರ ರೇಷನ್ ಕಾರ್ಡ್ ಅಮಾನತ್ತು ಗೊಳಿಸಿದೆ. ಒಂದಷ್ಟು ರೇಷನ್ ಕಾರ್ಡ್ ಗಳು ರದ್ದಾಗಿದ್ದರೆ, ಇನ್ನೊಂದಿಷ್ಟು ರೇಷನ್ ಕಾರ್ಡ್ ಗಳು ಅಮಾನತ್ತು ಗೊಂಡಿದೆ. ಒಟ್ಟಿಗೆ 3.26 ಲಕ್ಷ ರೇಷನ್ ಕಾರ್ಡ್ ಬಗ್ಗೆ ರಾಜ್ಯ ಸರ್ಕಾರ ಕಠಿಣ ಕ್ರಮ ಕೈಗೊಂಡಿದೆ.…
ಜಂಟಿ ಪೊಲೀಸ್ ಆಯುಕ್ತ (ಅಪರಾಧ ವಿಭಾಗ) ಲಕ್ಷ್ಮಿ ಗೌತಮ್ ಮತ್ತು ಎನ್ಕೌಂಟರ್ ಸ್ಪೆಷಲಿಸ್ಟ್ ದಯಾ ನಾಯಕ್ ಸೇರಿದಂತೆ ಮುಂಬೈ ಪೊಲೀಸ್ ಅಧಿಕಾರಿಗಳ ತಂಡವು ಬಾಲಿವುಡ್ ನಟ ಸಲ್ಮಾನ್ ಖಾನ್ ಅವರ ಮನೆಯ ಹೊರಗೆ ಕಾಣಿಸಿಕೊಂಡಿದ್ದಾರೆ. ಭಾನುವಾರ ಮುಂಜಾನೆ, ಬೈಕ್ನಲ್ಲಿ ಬಂದ ಇಬ್ಬರು ಅಪರಿಚಿತ ವ್ಯಕ್ತಿಗಳು ಖಾನ್ ಅವರ ಮನೆಯ ಹೊರಗೆ ಗುಂಡು ಹಾರಿಸಿದ್ದರು. ಈ ಪ್ರಕರಣದ ವಿಚಾರಣೆ ಹೊಣೆ ಇದೀಗ ದಯಾ ನಾಯಕ್ ವಹಿಸಲಾಗಿದೆ ಎಂದು ಹೇಳಲಾಗುತ್ತಿದೆ. ಪೊಲೀಸರು ಅವರ ನಿವಾಸದ ಸುತ್ತಲೂ ಭದ್ರತೆ ಹೆಚ್ಚಿಸಿದ್ದಾರೆ. ಈ ವೇಳೆ ದಯಾನಾಯಕ್ ಸ್ಥಳದಲ್ಲಿ ಪರಿಶೀಲನೆ ನಡೆಸಿದ್ದಾರೆ. ನಟ ವಾಸಿಸುವ ಮುಂಬೈನ ಬಾಂದ್ರಾ ಪ್ರದೇಶದ ಗ್ಯಾಲಕ್ಸಿ ಅಪಾರ್ಟ್ಮೆಂಟ್ ಹೊರಗೆ ಬೆಳಿಗ್ಗೆ 5 ಗಂಟೆ ಸುಮಾರಿಗೆ ಇಬ್ಬರು ವ್ಯಕ್ತಿಗಳು ಕನಿಷ್ಠ ನಾಲ್ಕು ಸುತ್ತು ಗುಂಡು ಹಾರಿಸಿ ಸ್ಥಳದಿಂದ ಪರಾರಿಯಾಗಿದ್ದಾರೆ ಎಂದು ಪ್ರಾಥಮಿಕ ತನಿಖೆಯ ನಂತರ ಪೊಲೀಸರು ತಿಳಿಸಿದ್ದಾರೆ. ಘಟನೆಯ ನಂತರ ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರು ಸಲ್ಮಾನ್ ಖಾನ್ ಅವರೊಂದಿಗೆ ದೂರವಾಣಿ ಸಂಭಾಷಣೆ ನಡೆಸಿದರು.…
ತುಮಕೂರು(ಕೆ.ಬಿ.ಕ್ರಾಸ್): ಕನ್ನಡಿಗರಿಗೆ ಕೇಂದ್ರ ಸರ್ಕಾರದಿಂದ ಅನ್ಯಾಯವಾದರೂ ಒಂದು ದಿನ ಬಿಜೆಪಿಯ ಸಂಸದರು ಈ ವಿಚಾರಗಳ ಬಗ್ಗೆ ಪ್ರಸ್ತಾಪ ಮಾಡಿದ್ದಾರೆಯೇ? ಮಾತನಾಡ ಡಿದ್ದರೆ ಇವರು ಲೋಕಸಭೆಗೆ ಯಾಕೆ ಹೋಗಬೇಕು? ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನಿಸಿದರು. ಅವರು ತುಮಕೂರು ಲೋಕಸಭಾ ಚುನಾವಣೆಯ ತಮ್ಮ ಪಕ್ಷದ ಅಭ್ಯರ್ಥಿಯಾದ ಮುದ್ಧುಹನುಮೇಗೌಡ ಅವರ ಪರ ಪ್ರಜಾಧ್ವನಿ -02 ಲೋಕಸಭಾ ಚುನಾವಣಾ ಪ್ರಚಾರ ಸಭೆಯಲ್ಲಿ ಭಾಗವಹಿಸಿ ನಂತರ ತಮ್ಮ ಅಭ್ಯರ್ಥಿಯ ಪರ ಮತದಾರರಲ್ಲಿ ಮತಯಾಚನೆ ಮಾಡಿ ಮಾತನಾಡಿದರು. ಕಳೆದ ಲೋಕಸಭಾ ಚುನಾವಣೆಯಲ್ಲಿ 25 ಸದಸ್ಯರು ಆಯ್ಕೆಯಾಗಿದ್ದರು. ಅದರಲ್ಲಿ ಬಸವರಾಜ್ ಕೂಡ ಒಬ್ಬರು ಈಗ ಸುಮಲತಾ ಅಂಬರೀಶ್ ಹಾಗು ಜೆಡಿಎಸ್ ನಿಂದ ಗೆದ್ದ ಪ್ರಜ್ವಲ್ ಗೌಡ ಸೇರಿ 27 ಜನ ಆಗಿದ್ದಾರೆ. ಕರ್ನಾಟಕಕ್ಕೆ ಅನ್ಯಾಯವಾಗಿದೆ . ಬರಗಾಲ ಬಂದರೂ ಒಂದು ರೂಪಾಯಿ ಬಿಡುಗಡೆ ಮಾಡಿಲ್ಲ. ಕರ್ನಾಟಕಕ್ಕೆ 15 ನೇ ಹಣಕಾಸು ಆಯೋಗ ಶಿಫಾರಸು ಮಾಡಿದ್ದ ಹಣವನ್ನೂ ಕೊಡಲಿಲ್ಲ. ಅವರೇ ಬಜೆಟ್ ನಲ್ಲಿ ಭದ್ರಾ ಮೇಲ್ದಂಡೆ ಯೋಜನೆ ಗೆ 5300 ಕೋಟಿ ಕೊಡುತ್ತೇವೆ…
ಕನ್ನಡದ ಚೆಲುವೆ ಪೂಜಾ ಹೆಗ್ಡೆ ಸದ್ಯ ಬಾಲಿವುಡ್ ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ. ಇದೀಗ ಮುಂಬೈನಲ್ಲಿ ನಟಿ ಐಷಾರಾಮಿ ಮನೆಯೊಂದನ್ನು ಖರೀದಿಸಿದ್ದಾರೆ. ಮುಂಬೈನ ಬಾಂದ್ರಾದಲ್ಲಿ 45 ಕೋಟಿ ರೂ. ಮೌಲ್ಯದ ಮನೆ ಖರೀದಿ ಮಾಡಿದ್ದಾರೆ. ಮನೆಯ ವಿಸ್ತೀರ್ಣ 4000 ಚದರ ಅಡಿ ಎಂದು ಹೇಳಲಾಗ್ತಿದೆ. ಬಾಲಿವುಡ್ ಸ್ಟಾರ್ ನಟಿ- ನಟಿಯರು ವಾಸಿಸುವ ಏರಿಯಾದಲ್ಲಿಯೇ ಮನೆ ಖರೀದಿ ಮಾಡಿದ್ದಾರೆ. ಟಾಲಿವುಡ್ ನಲ್ಲಿ ರಶ್ಮಿಕಾ, ಶ್ರೀಲೀಲಾ ಹವಾ ಜಾಸ್ತಿ ಆದ್ಮೇಲೆ ಬಾಲಿವುಡ್ ನತ್ತ ನಟಿ ಮುಖ ಮಾಡಿದ್ದರು. ಹಿಂದಿ ಸಿನಿಮಾಗಳಲ್ಲಿ ಅವಕಾಶಗಳು ಅರಸಿ ಬರುತ್ತಿದ್ದಂತೆ ಈಗ ತೆಲುಗಿನಲ್ಲಿಯೂ ನಟಿಗೆ ಕರೆ ಬರುತ್ತಿದೆ. ಶಾಹಿದ್ ಕಪೂರ್ ಜೊತೆ ಹೊಸ ಸಿನಿಮಾ, ಸುನೀಲ್ ಶೆಟ್ಟಿ ಪುತ್ರನಿಗೆ ನಾಯಕಿಯಾಗಿ ಹೊಸ ಪ್ರಾಜೆಕ್ಟ್ ಮಾಡುತ್ತಿದ್ದಾರೆ. ನಾಗಚೈತನ್ಯ ಮುಂಬರುವ ಸಿನಿಮಾಗೆ ಪೂಜಾ ಹೆಗ್ಡೆ ನಾಯಕಿಯಾಗಿ ಸೆಲೆಕ್ಟ್ ಆಗಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ಐತಿಹಾಸಿಕ ಬೆಂಗಳೂರು ಕರಗ ಉತ್ಸವಕ್ಕೆ ಇಂದು ಚಾಲನೆ ದೊರೆಯಲಿದೆ. ಏ.15ರಿಂದ 23ರ ವರೆಗೆ ಕರಗ ಮಹೋತ್ಸವ ನಡೆಯಲಿದೆ. ಏ.23ರ ಚೈತ್ರ ಪೌರ್ಣಮಿಯಂದು ಕರಗ ಮಹೋತ್ಸವ ಕೊನೆಗೊಳ್ಳಲಿದೆ. ಪ್ರತಿ ವರ್ಷದಂತೆ ಈ ಬಾರಿಯ ಕರಗ ಮಹೋತ್ಸವವನ್ನು ಅದ್ದೂರಿಯಾಗಿ ನೆರವೇರಿಸಲು ಧರ್ಮರಾಯಸ್ವಾಮಿ ದೇವಾಲಯದ ಆಡಳಿತ ಮಂಡಳಿ ಸಕಲ ಸಿದ್ಧತೆ ಮಾಡಿಕೊಂಡಿದೆ.ಈ ಬಾರಿಯೂ ಕರಗವನ್ನು ಕರಗದ ಪೂಜಾರಿ ಎ.ಜ್ಞಾನೇಂದ್ರ ದೇವರನ್ನು ಹೊತ್ತು ಸಾಗಲಿದ್ದಾರೆ. ಅವರನ್ನು ಮುಜರಾಯಿ ಇಲಾಖೆ ಮತ್ತು ಧರ್ಮರಾಯ ಸ್ವಾಮಿ ದೇವಾಲಯದ ಆಡಳಿತ ಮಂಡಳಿ ಆಯ್ಕೆ ಮಾಡಿದೆ ಎನ್ನಲಾಗಿದೆ. ಈ ಬಾರಿ ಜ್ಞಾನೇಂದ್ರ ಹದಿಮೂರನೇ ಸಲ ಕರಗ ಹೊರುತ್ತಿರುವುದಾಗಿದೆ.ಕರಗ ಕಾರ್ಯಕ್ರಮದ ವೇಳಾಪಟ್ಟಿ ಹೀಗಿದ್ದು, ಏ.15ರ ರಾತ್ರಿ 10ಕ್ಕೆ ರಥೋತ್ಸವ ಧ್ವಜಾರೋಹಣ, ಏ.16ರಿಂದ 19 ಪ್ರತಿ ದಿನ ವಿಶೇಷ ಪೂಜೆ ಮತ್ತು ಮಂಗಳಾರತಿ, ಏ.21ಕ್ಕೆ ಹಸಿ ಕರಗ ಆಯೋಜನೆ, ಏ.23 ರಂದು ಕರಗ ಶಕ್ತ್ಯೋತ್ಸವ ಮತ್ತು ಧರ್ಮರಾಯ ರಥೋತ್ಸವ, ಏ.24 ರಂದು ದೇವಸ್ಥಾನದಲ್ಲಿ ಗಾವು ಪೂಜೆ, ಏ.25 ಕ್ಕೆ ಕೊನೆಯ ದಿನದ ವಸಂತೋತ್ಸವ ಧ್ವಜಾರೋಹಣ ನೆರವೇರಲಿದೆ…
ಜಲಪಾತ ವೀಕ್ಷಣೆಗೆ ತೆರಳಿದ್ದ ಪ್ರವಾಸಿಗರ ಮೇಲೆ ಜೇನು ಹುಳುಗಳು ದಾಳಿ ಮಾಡಿದ ಘಟನೆ ಉತ್ತರಕನ್ನಡ ಜಿಲ್ಲೆಯ ಯಲ್ಲಾಪುರದ ಸಾತೊಡ್ಡಿ ಜಲಪಾತದಲ್ಲಿ ಘಟನೆ ನಡೆದಿದೆ. ಕಳೆದ ಎರಡು ದಿನಗಳಲ್ಲಿ 30ಕ್ಕೂ ಅಧಿಕ ಪ್ರವಾಸಿಗರಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಗಂಭೀರ ಗಾಯಗೊಂಡಿದ್ದ ನಾಲ್ವರು ಪ್ರವಾಸಿಗರಿಗೆ ಹುಬ್ಬಳ್ಳಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಬೇಸಿಗೆ ಹಿನ್ನೆಲೆಯಲ್ಲಿ ನೀರಲ್ಲಿ ಆಟವಾಡಲು ಸಾತೊಡ್ಡಿ ಫಾಲ್ಸ್ಗೆ ಹೆಚ್ಚಿನ ಸಂಖ್ಯೆಯಲ್ಲಿ ಪ್ರವಾಸಿಗರು ಭೇಟಿ ನೀಡುತ್ತಿದ್ದಾರೆ. ಜಲಪಾತದ ಬಳಿಯೇ ಪ್ರವಾಸಿಗರ ಮೇಲೆ ಜೇನುಹುಳಗಳ ದಾಳಿ ಮಾಡಿವೆ. ಸದ್ಯ ಜೇನುಹುಳುಗಳ ದಾಳಿ ಹಿನ್ನೆಲೆಯಲ್ಲಿ ಜಲಪಾತ ವೀಕ್ಷಣೆಗೆ ಅರಣ್ಯ ಇಲಾಖೆಗೆ ನಿರ್ಬಂಧ ಹೇರಿದೆ. ಬಿಸಗೋಡ ಕ್ರಾಸ್ನಲ್ಲಿ ಬ್ಯಾನರ್ ಅಳವಡಿಸಿ ಪ್ರವಾಸಿಗರಿಗೆ ಸೂಚನೆ ನೀಡಿದೆ. ಏ.14ರಿಂದ ಅನಿರ್ದಿಷ್ಟ ಕಾಲದವರೆಗೆ ಜಲಪಾತ ವೀಕ್ಷಣೆಯನ್ನು ನಿರ್ಬಂಧಿಸಲಾಗಿದೆ ಎಂದು ಬ್ಯಾನರ್ ಹಾಕಲಾಗಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296