Author: admin

ಕೊಡಗು: ಮೀನು ಹಿಡಿಯಲು ಹಾಕಿದ ಬಲೆಯೊಳಗೆ ಸಿಲುಕಿ ವ್ಯಕ್ತಿಯೋರ್ವ ಸಾವನ್ನಪ್ಪಿರುವ ದಾರುಣ ಘಟನೆ ಈ ದುರ್ಘಟನೆ ಕೊಡಗು ಜಿಲ್ಲೆಯ ಕುಶಾಲನಗರ ತಾಲೂಕಿನ ಹೆರೂರು ಬಳಿ‌ ಇರುವ ಹಾರಂಗಿ ಹಿನ್ನೀರಿನಲ್ಲಿ ನಡೆದಿದೆ. ಮೃತಪಟ್ಟವನನ್ನು ಬಾಲು(40) ಎಂದು ಗುರುತಿಸಲಾಗಿದೆ. ಬಿಸಿಲ ಬೇಗೆಯ ಹಿನ್ನಲೆ ಈಜಲು ತೆರಳಿದಾಗ ಈ ದುರ್ಘಟನೆ ನಡೆದಿದೆ. ಇದೀಗ ಸ್ಥಳೀಯರು ಮೃತದೇಹವನ್ನು ಹೊರತೆಗೆದಿದ್ದಾರೆ. ಈ ಕುರಿತು ಶುಂಠಿಕೊಪ್ಪ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

Read More

ಕಾರು ಉತ್ಪಾದಕ ಕ್ಷೇತ್ರದಲ್ಲಿ ತನ್ನದೇ ಆದ ಹೆಸರು ಸಂಪಾದಿಸಿರುವ ಮಾರುತಿ ಸುಜುಕಿ ಕಂಪನಿ ತಮ್ಮ ಗ್ರಾಹಕರಿಗೆ ಸಿಹಿ ಸುದ್ದಿಯನ್ನು ನೀಡುತ್ತಿದೆ. ಹೊಸ ತಲೆಮಾರಿನ ಜನರಿಗಾಗಿ ಮಾರುತಿ ಸ್ವಿಫ್ಟ್ ಕಾರು ಇದೀಗ ಭಾರಿ ಬದಲಾವಣೆಯೊಂದಿಗೆ ಮಾರುಕಟ್ಟೆಗೆ ಲಗ್ಗೆಯಿಡುತ್ತಿದೆ. ಹೊಸ ತಲೆಮಾರಿನ ಸ್ವಿಫ್ಟ್ ಮಾದರಿಯನ್ನು ಅಂತಾರಾಷ್ಟ್ರೀಯ ಮಾರುಕಟ್ಟೆಗಳಲ್ಲಿ ಈಗಾಗಲೇ ಬಿಡುಗಡೆ ಮಾಡಿರುವ ಸುಜುಕಿ ಕಂಪನಿಯು ಪ್ರಮುಖ ಬದಲಾವಣೆಗಳೊಂದಿಗೆ ದೇಶಿಯ ಮಾರುಕಟ್ಟೆಗೂ ಪರಿಚಯಿಸುತ್ತಿದ್ದು, ಹೊಸ ಕಾರು ಈ ತಿಂಗಳಾಂತ್ಯಕ್ಕೆ ಅಧಿಕೃತವಾಗಿ ಮಾರುಕಟ್ಟೆ ಪ್ರವೇಶಿಸಬಹುದಾಗಿದೆ. ಸ್ವಿಫ್ಟ್ ಹೊಸ ಮಾದರಿಯು ಈ ಬಾರಿ ಪ್ರತಿಸ್ಪರ್ಧಿ ಮಾದರಿಗಳಿಗೆ ಪೈಪೋಟಿಯಾಗಿ ಹಲವಾರು ಬದಲಾವಣೆಗಳನ್ನು ಪಡೆದುಕೊಂಡಿದೆ. ಇದರಲ್ಲಿ ಐಷಾರಾಮಿ ಲುಕ್ ಹೊಂದಿರುವ ಹೊರ ಭಾಗದ ವಿನ್ಯಾಸದೊಂದಿಗೆ ಕಾರಿನ ಒಳಭಾಗದಲ್ಲೂ ಹಲವಾರು ಸುಧಾರಿತ ಫೀಚರ್ಸ್ ಗಳನ್ನು ನೀಡಲಾಗಿದೆ. ಹೊಸ ಕಾರಿನಲ್ಲಿ ಈ ಬಾರಿ 16 ಇಂಚಿನ ಅಲಾಯ್ ವ್ಹೀಲ್ಸ್, ಎಲ್ ಇಡಿ ಹೆಡ್ ಲೈಟ್ಸ್ ಮತ್ತು ಟೈಲ್ ಲೈಟ್ಸ್ ಜೊತೆ ಎಲ್ ಇಡಿ ಡಿಆರ್ ಎಲ್ಎಸ್ ನೀಡಲಾಗಿದ್ದು, ಕಾರಿನ ಒಳಭಾಗದಲ್ಲಿ 9 ಇಂಚಿನ ಟಚ್…

Read More

ಪ್ಯಾರಾ ಈಜು ಪಟು ಬೆಂಗಳೂರಿನ ನಿರಂಜನ್ ಮುಕುಂದ್ ನಾರ್ವೆಯಲ್ಲಿ ನಡೆದಿರುವ ಅಂತಾರಾಷ್ಟ್ರೀಯ ಈಜು ಸ್ಪರ್ಧೆಯಲ್ಲಿ ನಾಲ್ಕು ಚಿನ್ನದ ಪದಕ ಸೇರಿದಂತೆ ಒಟ್ಟು ಏಳು ಪದಕ ಗೆಲ್ಲುವ ಮೂಲಕ ಭರ್ಜರಿ ಸಾಧನೆ ಮಾಡಿದ್ದಾರೆ. ಅಂತಾರಾಷ್ಟ್ರೀಯ ಪದಕಗಳ ಗೊಂಚಲನ್ನೇ ಗೆದ್ದ ಹೆಮ್ಮೆಯ ಕನ್ನಡಿಗರಾಗಿ ಮಿಂಚಿದ್ದಾರೆ. ನಿರಂಜನ್ ಮುಕುಂದ್ ಪ್ಯಾರಾ ಈಜು ಪಟುವಾಗಿ ಟೋಕಿಯೋ ಪ್ಯಾರಾ ಒಲಿಂಪಿಕ್ಸ್ ಸೇರಿದಂತೆ ವಿಶ್ವದ ಹಲವಾರು ಅಂತಾರಾಷ್ಟ್ರೀಯ ಹಾಗೂ ರಾಷ್ಟ್ರೀಯ ಮಟ್ಟದ ಕ್ರೀಡಾಕೂಟದಲ್ಲಿ ಮಿಂಚಿದ್ದಾರೆ. ನಿರಂಜನ್ ಅವರ ಬದುಕಿನ ಹಾದಿ ಹೂವಿನ ಹಾಸಿಗೆ ಆಗಿರಲಿಲ್ಲ. ಅವರ ಬದುಕು ನೋವಿನ ಕಿಡಿಯಾಗಿ ಹೊತ್ತಿಕೊಂಡಿತ್ತು. ಅಗ್ನಿ ಜ್ವಾಲೆಯಾಗಿ ಹೊತ್ತಿ ಉರಿದು ಬದುಕನ್ನೇ ಸುಟ್ಟು ಹಾಕುವ ಸ್ಥಿತಿಗೆ ಬಂದು ತಲುಪಿತ್ತು. ಒಂದಲ್ಲ ಎರಡಲ್ಲ ಬರೋಬ್ಬರಿ ಬೆನ್ನು ಹಾಗೂ ಕಾಲಿಗೆ 19 ಸಲ ಶಸ್ತ್ರಚಿಕಿತ್ಸೆಗೆ ನಿರಂಜನ್ ಒಳಗಾದರು. ಹಾಗಂತ ಅವರು ಬದುಕಿನಲ್ಲಿ ಎಂದಿಗೂ ಕೊರಗುತ್ತಾ ಕೂರಲಿಲ್ಲ. ಸತತ ಶಸ್ತ್ರಚಿಕಿತ್ಸೆಗೆ ತನ್ನನ್ನು ತಾನು ಒಡ್ಡಿಕೊಂಡಿದ್ದರೂ ಬದುಕಿನಲ್ಲಿ ಅತ್ಯದ್ಭುತಗಳನ್ನು ಸಾಧನೆ ಮಾಡಿ ತೋರಿಸಿದರು. ಈ ಮೂಲಕ ಬದುಕಿನಲ್ಲಿ ದೃಢ…

Read More

ಬೆಂಗಳೂರು ಮತ್ತು ಕರ್ನಾಟಕದ ಹಲವು ಜಿಲ್ಲೆಗಳು ಮಾತ್ರವಲ್ಲದೆ ಪ್ರಪಂಚದ ವಿವಿಧೆಡೆ ಅನೇಕ ನಗರಗಳು ಈ ಬಾರಿಯ ಬಿಸಿಲಿಗೆ ತೀವ್ರ ನೀರಿನ ಕೊರತೆ ಎದುರಿಸುತ್ತಿವೆ. ದಕ್ಷಿಣ ಅಮೆರಿಕದ ಕೊಲಂಬಿಯಾದ ಬೊಗೋಟಾ ನಗರವಂತೂ ಗಂಭೀರ ಸ್ಥಿತಿಯಲ್ಲಿದೆ ಎನ್ನಲಾಗಿದೆ. ಹಾಗಾಗಿ ನೀರು ಮಿತವ್ಯಯಕ್ಕೆ ಅಲ್ಲಿನ ಮೇಯರ್‌, ಜನರಿಗೆ ವಿಚಿತ್ರ ಕರೆ ನೀಡಿದ್ದಾರೆ. ಜನರು ಜೋಡಿಯಾಗಿ(ಸಂಗಾತಿ ಜತೆ) ಸ್ನಾನ ಮಾಡಬೇಕು  ಎಂದು ಹೇಳಿದ್ದಾರೆ ಎನ್ನಲಾಗಿದೆ. ಇತ್ತೀಚೆಗೆ ನಗರದ ಪ್ರಮುಖ ಪ್ರದೇಶಗಳಲ್ಲಿ ನೀರು ಪೂರೈಕೆಯನ್ನು ತಡೆಯಲಾಗಿದೆ. ಈ ಹಿನ್ನೆಲೆಯಲ್ಲಿ ಬೊಗೋಟಾ ಮೇಯರ್‌ ಕಾರ್ಲೋಸ್‌ ಫ‌ರ್ನಾಂಡೊ ಗ್ಯಾಲನ್‌ ಅವರು, “ಜೋಡಿಯಾಗಿ ಸ್ನಾನ ಮಾಡುವುದು ನೀರು ಮಿತವ್ಯಯ ಬಳಕೆಯ ಅಭ್ಯಾಸ ಎಂದು ಭಾವಿಸಿಕೊಳ್ಳಬೇಕು. ಈ ರೀತಿಯಾಗಿ ಮಾಡುವುದರಿಂದ ನೀರು ಉಳಿಯಾತವಾಗಿ ಸಾಕಷ್ಟು ಸಹಾಯವಾಗಲಿದೆ’ ಎಂದು ಹೇಳಿದ್ದಾರೆ. ಜೋಡಿಯಾಗಿ ಸ್ನಾನ ಮಾಡಿ ಎಂದ ಕರೆ ನೀಡಿರುವ ಮೇಯರ್‌, ಒಂದೊಮ್ಮೆ ಮನೆಯಲ್ಲೇ ಇರುವುದಾದರೆ ಸ್ನಾನವನ್ನೇ ಮಾಡಬೇಡಿ ಎಂದೂ ಜನರಿಗೆ ಹೇಳಿದ್ದಾರೆ ಎನ್ನಲಾಗಿದೆ. “ರವಿವಾರ ಅಥವಾ ವಾರದ ಇನ್ನಾವುದೇ ನೀವು ಹೊರಗಡೆ ಎಲ್ಲಿಗೂ ಹೋಗುವುದಿಲ್ಲ ಎಂದಾದರೆ…

Read More

ಕೊರಟಗೆರೆ : ತುಮಕೂರು ಕಾಂಗ್ರೆಸ್ ಲೋಕಸಭಾ ಅಭ್ಯರ್ಥಿ ಮುದ್ದಹನುಮೇಗೌಡ ಗೆದ್ದರೇ ರಾಯದುರ್ಗ ರೈಲ್ವೆಗೆ ಮತ್ತೆ ಮರುಜೀವ ಬರುತ್ತೆ,  ಜನಸ್ನೇಹಿ ಜನನಾಯಕ ಎಸ್‌ ಪಿ ಎಂ ಗೆದ್ದರೇ ಗ್ರಾಮೀಣ ಪ್ರದೇಶದ ಬಡವರ ಸಮಸ್ಯೆ ಆಲಿಸ್ತಾರೇ. ಬಿಜೆಪಿಯವ್ರು ಗೆದ್ದರೇ ನಾವು ಬೆಂಗಳೂರಿಗೆ ಹೋಗಬೇಕಾಗುತ್ತೆ ಎಂದು ಮಧುಗಿರಿ ಶೈಕ್ಷಣಿಕ ಜಿಲ್ಲೆಯ ಮಾಜಿ ಜಿಲ್ಲಾಧ್ಯಕ್ಷ ಪುಟ್ಟರಾಜು ತಿಳಿಸಿದರು. ಕೊರಟಗೆರೆ ತಾಲೂಕು ಹೊಳವನಹಳ್ಳಿ ಹೋಬಳಿಯ ಕ್ಯಾಮೇನಹಳ್ಳಿಯ ಶ್ರೀಆಂಜನೇಯ ಸ್ವಾಮಿಗೆ ಭಾನುವಾರ ವಿಶೇಷ ಹೂವಿನ ಅಲಂಕಾರ ಮತ್ತು ಪೂಜೆ ಸಲ್ಲಿಸಿದ ನಂತರ ಹೊಳವನಹಳ್ಳಿ ಮತ್ತು ಪುರವಾರ ಹೋಬಳಿ ವ್ಯಾಪ್ತಿಯ ಗ್ರಾಮಗಳಲ್ಲಿ ಕಾಂಗ್ರೆಸ್ ಪರವಾಗಿ ಪ್ರಚಾರ ನಡೆಸಿದ ವೇಳೆ ಮಾತನಾಡಿದರು. ಕಾಂಗ್ರೆಸ್ ಅಭ್ಯರ್ಥಿ ಎಸ್‌ ಪಿಎಂ ಗೆಲುವಿಗೆ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಮತ್ತು ಸಹಕಾರಿ ಸಚಿವ ಕೆ.ಎನ್.ರಾಜಣ್ಣ ಶ್ರೀರಕ್ಷೆಯಾಗಿ ನಿಂತಿದ್ದಾರೆ. ಕೊರಟಗೆರೆ ಕ್ಷೇತ್ರದ ಕಸಬಾ, ಹೊಳವನಹಳ್ಳಿ ಮತ್ತು ಪುರವಾರ ಹೋಬಳಿಯ ಮತದಾರರ ಒಲವು ಕಾಂಗ್ರೆಸ್ ಪಕ್ಷದ ಪರವಾಗಿದೆ. ಎಸ್‌ ಪಿಎಂ ಗೆಲುವಿಗೆ ಶ್ರೀಆಂಜನೇಯ ಸ್ವಾಮಿಗೆ ವಿಶೇಷ ಪೂಜೆ ಮತ್ತು ಹೂವಿನ ಅಲಂಕಾರ…

Read More

ಔರಾದ್ : ನಾನು ಬೀದರ ಅಭಿವೃದ್ಧಿಗೆ ಪ್ರಾಮಾಣಿಕವಾಗಿ ಕೆಲಸ ಮಾಡುತ್ತೇನೆ. ನನ್ನ ಮೇಲೆ ವಿಶ್ವಾಸವಿಡಿ. ಈ ಬಾರಿ ಬೀದರ ಅಭಿವೃದ್ಧಿಗಾಗಿ ಕಾಂಗ್ರೆಸ್‌ಗೆ ಮತ ಚಲಾಯಿಸಿ  ಎಂದು ಬೀದರ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಸಾಗರ ಖಂಡ್ರೆ ಹೇಳಿದರು. ತಾಲೂಕಿನ ಬೆಳಕುಣಿ (ಚೌ), ಹೆಡಗಾಪೂರ, ಸಂತಪೂರ, ಶೆಂಬೆಳ್ಳಿ, ಲಾಧಾ, ಧೂಪತಮಾಹಾಗಾಂವ, ಕೌಠಾ (ಬಿ) ಗ್ರಾಮದಲ್ಲಿ ಮತಯಾಚನೆ ಮಾಡುವ ಮೂಲಕ ಮಾತನಾಡಿದರು. ಬಿಜೆಪಿ ಅಭ್ಯರ್ಥಿ ಭಗವಂತ ಖೂಬಾ ಅವರು ಬೀದರ ಜಿಲ್ಲೆಗೆ ಯಾವುದೇ ಅಭಿವೃದ್ಧಿ ಕಾರ್ಯ ಮಾಡಿಲ್ಲ. ಅವರ ಸಾಧನೆ ಶೂನ್ಯವಾಗಿದೆ. ಅವರನ್ನು ಜನತೆ ತಿರಸ್ಕರಿಸಲು ಕಂಕಣಬದ್ಧರಾಗಿದ್ದಾರೆ ಎಂದು ಖೂಬಾ ವಿರುದ್ಧ ವಾಗ್ದಾಳಿ ನಡೆಸಿದರು. ಎರಡು ಬಾರಿ ಸಂಸದರಾಗಿ, ಕೇಂದ್ರ ಸಚಿವರಾಗಿ ಯಾವುದೇ ಅಭಿವೃದ್ಧಿಗೊಳಿಸಿಲ್ಲ. ಶಿಕ್ಷಕರೊಬ್ಬರು ರೈತರಿಗೆ ಗೊಬ್ಬರ ಕೇಳಿದರೇ ಸಸ್ಪೆಂಡ್ ಮಾಡಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿಯ ಗೆಲುವು ಖಚಿತವಾಗಿರುವುದರಿಂದ ಅವರಲ್ಲಿ ನಡುಕ ಹುಟ್ಟಿದೆ ಎಂದರು. ಭಗವಂತ ಖೂಬಾ ಅವರಿಗೆ ಅಧಿಕಾರದ ಮದ ಏರಿದೆ. ಆದ್ದರಿಂದ ಚುನಾವಣೆಯಲ್ಲಿ ಮತದಾರರು ತಕ್ಕ ಪಾಠಸಲಿದ್ದಾರೆ. ಖೂಬಾ ನಡೆಯಿಂದ ಸ್ವಪಕ್ಷದ…

Read More

ಬೀದರ: ಔರಾದ  ತಾಲೂಕಿನ ಬೆಳಕುಣಿ ಚೌಧರಿ ಗ್ರಾಮ ಪಂಚಾಯತ್ ನಲ್ಲಿ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಜಯಂತಿ ಆಚರಿಸಲಾಯಿತು. ಈ ವೇಳೆ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಶ್ರೀಪತರಾವ PDO ಹಾಗೂ ಗ್ರಾಮ ಪಂಚಾಯತ್  ಅಧ್ಯಕ್ಷರಾದ  ಸತ್ಯವತಿ ಪರಮೇಶ್ವರ ಮೆತ್ರೆ,  ಗ್ರಾ.ಪಂ. ಸದಸ್ಯರಾದ ದೇವಿದಾಸ ಮಾಳಗೆ,  ಗ್ರಾ.ಪಂ . ಸದಸ್ಯ  ಕರಬಸಪ್ಪಾ ಸೊರಾಳೆ,  ಮಾಜಿ ಗ್ರಾ.ಪಂ. ಅಧ್ಯಕ್ಷ  ದೇವಿದಾಸ ಧೋಳೆ, ಸಂತೋಷ ರಡ್ಡಿ, ಎಂ.ಡಿ ನಯೂಮ್, ಅಲಾವುದ್ದೀನ್, ರಾಮ ಧೋಳೆ, ಶರಣಪ್ಪ, ತಾತೇರಾವ್  ಹಾಗೂ ಊರಿನ ಹಿರಿಯರು ಉಪಸ್ಥಿತಿಯಲ್ಲಿ ಇದ್ದರು. ವರದಿ: ಅರವಿಂದ ಮಲ್ಲಿಗೆ ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

Read More

ಕೊರಟಗೆರೆ: ಏರ್ಟೆಲ್ ಕಂಪನಿಯಲ್ಲೇ ಕೆಲಸ ಮಾಡಿಕೊಂಡು ಏರ್ ಟೇಲ್ ಟವರ್ ಗೆ ಕನ್ನ ಹಾಕಿದ ಖತರ್ನಾಕ್ ಕದೀಮರು ಪ್ರಕರಣ ದಾಖಲಾದ 24 ಗಂಟೆಯಲ್ಲಿ  ಪೊಲೀಸರ ಕೈಗೆ ಸಿಕ್ಕಿ ಬಿದ್ದಿದ್ದಾರೆ. ತಡರಾತ್ರಿ  ಏರ್ ಟೇಲ್ 5ಜಿ ಟವರ್ ನಲ್ಲಿ ಬಳಸುವ ಆರ್ ಆರ್ ಯು  ಕಾರ್ಡುಗಳನ್ನ ಕಳ್ಳತನ ಮಾಡುತ್ತಿದ್ದ ಕಳ್ಳರು, ಟವರ್ ಮೇಲೇರಿ 5ಜಿ ಮೆಟೀರಿಯಲ್  ದೋಚುತ್ತಿದ್ದರು. ವಿಪರ್ಯಾಸ ಏನಪ್ಪ ಎಂದರೆ,  ಏರ್ಟೆಲ್ ಕಂಪನಿಯ 4ಜಿ  ಟವರ್ ಗಳನ್ನು ಬಿಚ್ಚಿ 5ಜಿ ಟವರ್ ಗಳನ್ನ ಅಳವಡಿಸುತ್ತಿದ್ದ ಕಾರ್ಮಿಕರೇ ಈ ಕೃತ್ಯ ಎಸಗಿದ್ದು, ಹಣದ ಆಸೆಗಾಗಿ ಬಿದ್ದು  5ಜಿ ಮೆಟೀರಿಯಲ್ ಗಳನ್ನು ಬಿಚ್ಚಿ ಮಾರಾಟ ಮಾಡಲು ಮುಂದಾಗಿದ್ದರು ಎನ್ನಲಾಗಿದೆ. ಕೊರಟಗೆರೆ ಸಿಪಿಐ ಅನಿಲ್ ಮತ್ತು ಪಿಎಸೈ ಮಂಜುನಾಥ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಿ ಕಳ್ಳತನ ನಡೆದ 24 ಗಂಟೆಯಲ್ಲಿ  ಕದ್ದಿದ್ದ ಮಾಲು ಸಮೇತ ಆರೋಪಿಗಳನ್ನು ಬಂಧಿಸಲಾಗಿದೆ. ಗುಬ್ಬಿಯ ಶ್ರೀರಾಮುಲು(22), ತುಮಕೂರಿನ ಅರುಣ್(30) ಮತ್ತು ಕೊರಟಗೆರೆ ಕೃಷ್ಣಾನಂದ ಬಂಧಿತ ಆರೋಪಿಗಳಾಗಿದ್ದಾರೆ. ಕೊರಟಗೆರೆ ಪೊಲೀಸ್ ಠಾಣೆಯಲ್ಲಿ 3 ಜನ…

Read More

ತುಮಕೂರಿನ ಎನ್.ಆರ್. ಕಾಲೋನಿಯಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ರವರ ಜಯಂತಿ ಆಚರಿಸಲಾಗಿದ್ದು, ಇದೇ ವೇಳೆಯಲ್ಲಿ ಡಾ.ಜಿ. ಪರಮೇಶ್ವರ್ ರವರು ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ, ಬಳಿಕ ಸಂವಿಧಾನದ ಪೂರ್ವ ಪೀಠಿಕೆಯನ್ನು ಓದಿದರು. ಕೈ ಅಭ್ಯರ್ಥಿ ಎಸ್.ಪಿ. ಮುದ್ದಹನುಮೇಗೌಡ, ಮಾಜಿ ಶಾಸಕ ರಫೀಕ್ ಅಹ್ಮದ್, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಾಮಕೃಷ್ಣ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಚಂದ್ರಶೇಖರ್ ಗೌಡ ಸೇರಿ ಹಲವಾರು ಗಣ್ಯರು ಭಾಗಿಯಾಗಿದ್ದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

Read More

ಶಿವಮೊಗ್ಗ: ಬಿಜೆಪಿ ಬಂಡಾಯ ನಾಯಕ ಮತ್ತು ಮಾಜಿ ಉಪ ಮುಖ್ಯಮಂತ್ರಿ ಕೆ.ಎಸ್. ಈಶ್ವರಪ್ಪ ಅವರು ನಾಮಪತ್ರ ಹಿಂಪಡೆಯುತ್ತಾರೆಂಬ ವರದಿಗಳನ್ನು ಶನಿವಾರ ತಳ್ಳಿಹಾಕಿದ್ದಾರೆ. ಶಿವಮೊಗ್ಗ ಲೋಕಸಭಾ ಕ್ಷೇತ್ರದಿಂದ ಸ್ವತಂತ್ರ ಅಭ್ಯರ್ಥಿಯಾಗಿ ಈಶ್ವರಪ್ಪ ಶುಕ್ರವಾರ ನಾಮಪತ್ರ ಸಲ್ಲಿಸಿದ್ದು ಬಿಜೆಪಿಯ ಹಾಲಿ ಸಂಸದ ಮತ್ತು ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರ ಹಿರಿಯ ಪುತ್ರ ಬಿ ವೈ ರಾಘವೇಂದ್ರ ಮತ್ತು ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜಕುಮಾರ್ ವಿರುದ್ಧ ಕಣಕ್ಕಿಳಿದಿದ್ದಾರೆ. ಈ ನಡುವೆ ಈಶ್ವರಪ್ಪ ನಾಮಪತ್ರ ಹಿಂಪಡೆಯುತ್ತಾರೆಂಬ ಗುಸುಗುಸುಗಳು ಕೇಳಿ ಬರುತ್ತಿವೆ. ಈ ಹಿನ್ನೆಲೆಯಲ್ಲಿ ಸ್ಪಷ್ಟನೆ ನೀಡಿರುವ ಈಶ್ವರಪ್ಪ ಅವರು, ಪ್ರಧಾನಿ ಮೋದಿ ಅವರನ್ನು ಬಲಗೊಳಿಸುವುದು ನನ್ನ ಗುರಿಯಾಗಿದೆ. ನಾನು ನಾಮಪತ್ರ ಹಿಂಪಡೆಯುತ್ತೇನೆ ಎಂದು ಕೆಲವರು ವದಂತಿ ಹಬ್ಬಿಸುತ್ತಿದ್ದಾರೆ, ನನ್ನ ಬೆನ್ನಿಗೆ ನಿಂತವರಿಗೆ ನಾನು ಯಾವತ್ತೂ ದ್ರೋಹ ಬಗೆಯುವುದಿಲ್ಲ. ಯಾವುದೇ ಕಾರಣಕ್ಕೂ ನಾಮಪತ್ರ ವಾಪಸ್ ಪಡೆಯುವುದಿಲ್ಲ ಎಂದು ಹೇಳಿದ್ದಾರೆ. ಪುತ್ರ ಕಾಂತೇಶ್‌ ಗೆ ಹಾವೇರಿ ಬಿಜೆಪಿ ಟಿಕೆಟ್‌ ನೀಡದ್ದರಿಂದ ಬಂಡಾಯವೆದ್ದಿರುವ ಕೆಎಸ್‌ ಈಶ್ವರಪ್ಪ ಶಿವಮೊಗ್ಗದಲ್ಲಿ ಬಿವೈ…

Read More