Subscribe to Updates
Get the latest creative news from FooBar about art, design and business.
- ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ: ನಿವೃತ್ತಿ ಅಂಚಿನಲ್ಲಿರುವ ಮುಖ್ಯೋಪಾಧ್ಯಾಯ ಅರೆಸ್ಟ್
- ನಾಳೆ ದೆಹಲಿಗೆ ಸಿಎಂ ಸಿದ್ದರಾಮಯ್ಯ ಭೇಟಿ; ನಾಯಕತ್ವ ಬದಲಾವಣೆ ಚರ್ಚೆಗಳ ನಡುವೆ ಹೈಕಮಾಂಡ್ ಬುಲಾವ್
- ಸೇಡು ತೀರಿಸಿಕೊಳ್ಳಲು ವರ್ಷದ ಬಳಿಕ ಅದೇ ಅಪ್ರಾಪ್ತೆ ಮೇಲೆ ಮತ್ತೆ ಲೈಂಗಿಕ ದೌರ್ಜನ್ಯ–ಇಬ್ಬರು ಆರೋಪಿಗಳ ಬಂಧನ
- ಭಟ್ಕಳ: ಕಪ್ಪೆಚಿಪ್ಪು ಸಂಗ್ರಹಿಸಲು ಹೋಗಿ ನೀರಲ್ಲಿ ಮುಳುಗಿ 11 ಮಂದಿ ಸಾವು!
- ಪ್ರೀತಿ ಹೆಸರಲ್ಲಿ ಅಪ್ರಾಪ್ತ ವಯಸ್ಸಿನ ಬಾಲಕಿಗೆ ಲೈಂಗಿಕ ದೌರ್ಜನ್ಯ: ಆರೋಪಿ ವಿರುದ್ಧ ಪೋಕ್ಸೋ ಕೇಸ್ ದಾಖಲು
- ಬಾಲಕನ ಬಲಿ ಪಡೆದಿದ್ದ ಚಿರತೆ ಕೊನೆಗೂ ಸೆರೆ: 14 ದಿನಗಳ ಕಾರ್ಯಾಚರಣೆ ಬಳಿಕ ಸ್ಥಳೀಯರು ನಿಟ್ಟುಸಿರು
- ದಿಢೀರ್ ಹವಾಮಾನ ಬದಲಾವಣೆಗೆ AI ಡೇಟಾ ಸೆಂಟರ್ ಕಾರಣ ಆಗ್ತಾ ಇದೆಯೇ?
- ಗೃಹಲಕ್ಷ್ಮಿ, ಗೃಹಜ್ಯೋತಿ ಫಲಾನುಭವಿಗಳ ಪಟ್ಟಿ ಪರಿಷ್ಕರಣೆಗೆ ರಾಜ್ಯ ಸರ್ಕಾರ ನಿರ್ಧಾರ: ಅನರ್ಹರಿಗೆ ಕೋಕ್!
Author: admin
ವಿವೇಕಾನಂದ ಎಚ್.ಕೆ. 75 ವರ್ಷಗಳ ನಂತರ, ನೀವು ಕರಡು ಸಮಿತಿಯ ಅಧ್ಯಕ್ಷರಾಗಿ ಸಲ್ಲಿಸಿದ ಸಂವಿಧಾನದ ಅಧಿನಿಯಮಗಳಿಗೆ ಅನುಗುಣವಾಗಿ ನಡೆದುಕೊಂಡು ಬರುತ್ತಿರುವ ಭಾರತದ ಸದ್ಯದ ರಾಜಕೀಯ, ಸಾಮಾಜಿಕ, ಆರ್ಥಿಕ, ಶೈಕ್ಷಣಿಕ ವಾತಾವರಣ ಒಳಗೊಂಡ ಒಟ್ಟಾರೆ ಪ್ರಗತಿ ಮತ್ತು ವಿಫಲತೆಯ ಬಗ್ಗೆ ನಿಮಗೊಂದು ಬಹಿರಂಗ ಪತ್ರ…….. ಡಾಕ್ಟರ್ ಬಾಬಾ ಸಾಹೇಬ್ ಅಂಬೇಡ್ಕರ್ ಅವರೇ, ಭಾರತದ ಭೂಪ್ರದೇಶ ಮತ್ತು ಇಲ್ಲಿನ ಜನಜೀವನ, ಆಚಾರ ವಿಚಾರ, ನಂಬಿಕೆಗಳು, ಸಂಪ್ರದಾಯ ಎಲ್ಲವೂ ಒಂದು ಹಿಡಿತಕ್ಕೆ ಸಿಗುವಷ್ಟು ಸುಲಭವಿಲ್ಲ. ಇಲ್ಲಿನ ವೈವಿಧ್ಯತೆ ಇಡೀ ವಿಶ್ವದ ವೈವಿಧ್ಯತೆಗೆ ಹೆಚ್ಚು ಕಡಿಮೆ ಸಮ ಪ್ರಮಾಣದಲ್ಲಿದೆ ಎಂದೇ ಹೇಳಬಹುದು. ಅದು ನಮಗಿಂತ ನಿಮಗೇ ಹೆಚ್ಚು ಸ್ಪಷ್ಟವಾಗಿ ಅರ್ಥವಾಗಿರುತ್ತದೆ. ಈಗಂತೂ ಜನಸಂಖ್ಯೆಯಲ್ಲಿ ಸಹ ಭಾರತ ವಿಶ್ವದ ನಂಬರ್ ಒನ್ ದೇಶವಾಗಿದೆ….. ಬಾಬಾ ಸಾಹೇಬ್ ಜಿ, ವಿಶ್ವದ ಅತಿ ದೊಡ್ಡ ಸಂವಿಧಾನ ಹೊಂದಿರುವ, ಅತಿ ದೊಡ್ಡ ಪ್ರಜಾಪ್ರಭುತ್ವ ದೇಶ ಒಂದು ಪುಸ್ತಕದ ನೀತಿ ನಿಯಮಗಳ ಮೇಲೆ ಚಲಿಸುತ್ತಿರುವುದೇ ಒಂದು ಅದ್ಭುತ ಮತ್ತು ಆಶ್ಚರ್ಯ. ಶತಶತಮಾನಗಳಷ್ಟು ದೀರ್ಘಕಾಲದಿಂದ…
ಆರೋಗ್ಯಕರ ಜೀವನಕ್ಕೆ ನಿದ್ರೆ ಮುಖ್ಯ. ಉತ್ತಮ ನಿದ್ರೆಯು ಒಟ್ಟಾರೆ ಯೋಗಕ್ಷೇಮವನ್ನು ಸುಧಾರಿಸುತ್ತದೆ ಮತ್ತು ಮಾನವ ಜೀವಿತಾವಧಿಯನ್ನು ಹೆಚ್ಚಿಸುತ್ತದೆ. ಆದರೆ ಈಗ ಬೇಸಿಗೆ ಕಾಲ ನಡೆಯುತ್ತಿದೆ. ಬಿಸಿಲು ಉರಿಯುತ್ತಿದೆ. ಬಿರು ಬಿಸಿಲು ಹಾಗೂ ಆಲಿಕಲ್ಲು ಮಳೆ ಜನರನ್ನು ಬೆಚ್ಚಿ ಬೀಳಿಸುತ್ತಿದೆ. ರಾತ್ರಿಯಲ್ಲಿಯೂ ಗರಿಷ್ಠ ತಾಪಮಾನ ದಾಖಲಾಗುತ್ತದೆ. ಅದಕ್ಕಾಗಿಯೇ ಬೇಸಿಗೆಯಲ್ಲಿ ಗುಣಮಟ್ಟದ ನಿದ್ರೆ ಒಂದು ಸವಾಲಾಗಿದೆ. ಬೇಸಿಗೆಯಲ್ಲಿ ಹಗಲು ಸಾಮಾನ್ಯವಾಗಿ ದೀರ್ಘವಾಗಿರುತ್ತದೆ. ಅದಕ್ಕಾಗಿಯೇ ಜನರು ಬೇಗನೆ ಎಚ್ಚರಗೊಳ್ಳುತ್ತಾರೆ ಎಂದು ಸಂಶೋಧನೆ ತೋರಿಸಿದೆ. ಬೇಸಿಗೆಯಲ್ಲಿ ಹವಾಮಾನವು ಬಿಸಿಯಾಗಿರುತ್ತದೆ. ರಾತ್ರಿಯ ತಾಪಮಾನವೂ ತೀವ್ರವಾಗಿ ಏರುತ್ತದೆ. ಇದು ನಿದ್ರೆಗೆ ಭಂಗ ತರುತ್ತದೆ. ಬೇಸಿಗೆಯಲ್ಲಿ ಹಗಲು ಹೆಚ್ಚು ಸಮಯ ಇರುವುದರಿಂದ, ನಿದ್ರೆಗೆ ಪ್ರಮುಖವಾದ ಮೆಲಟೋನಿನ್ ಎಂಬ ಹಾರ್ಮೋನ್ ಕಡಿಮೆ ಬಿಡುಗಡೆಯಾಗುತ್ತದೆ. ಜೀವನಶೈಲಿಯ ಅಂಶಗಳು ನಿದ್ರಾಹೀನತೆಗೆ ಕಾರಣವಾಗುತ್ತವೆ. ಜಂಕ್ ಫುಡ್ ತಿನ್ನುವುದು, ಸಮಯಕ್ಕೆ ಸರಿಯಾಗಿ ತಿನ್ನದಿರುವುದು, ಮದ್ಯಪಾನ ಮತ್ತು ಧೂಮಪಾನದಂತಹ ಕೆಟ್ಟ ಅಭ್ಯಾಸಗಳು ನಿದ್ರೆಯ ಮೇಲೆ ನಕಾರಾತ್ಮಕ ಪರಿಣಾಮ ಬೀರುತ್ತವೆ. ಆದರೆ ಬೇಸಿಗೆಯಲ್ಲಿ ಚೆನ್ನಾಗಿ ನಿದ್ದೆ ಮಾಡಲು ಕೆಲವೊಂದು ಸಲಹೆಗಳನ್ನು ಪಾಲಿಸಬೇಕು…
ತುಮಕೂರು: ಕಾಂಗ್ರೆಸ್ ಸರ್ಕಾರ ಜಾರಿಗೆ ತಂದ ಐದು ಗ್ಯಾರಂಟಿ ಯೋಜನೆಗಳಿಂದಾಗಿ ಗ್ರಾಮೀಣ ಪ್ರದೇಶದ ಹೆಣ್ಣು ಮಕ್ಕಳು ದಾರಿ ತಪ್ಪಿದ್ದಾರೆ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಹಾಗೂ ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಅವರು ಶನಿವಾರ ಹೇಳಿದರು. ತುಮಕೂರಿನ ತುರುವೇಕೆರೆಯಲ್ಲಿ ಮೈತ್ರಿ ಅಭ್ಯರ್ಥಿ ವಿ.ಸೋಮಣ್ಣ ಪರ ಪ್ರಚಾರ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಗ್ಯಾರಂಟಿ ಯೋಜನೆಗಳನ್ನು ಟೀಕಿಸುವ ಭರದಲ್ಲಿ ಹಳ್ಳಿಯ ಹೆಣ್ಣು ಮಕ್ಕಳ ಬಗ್ಗೆ ಲಘುವಾಗಿ ಮಾತನಾಡಿದ್ದಾರೆ. ಸ್ಥಳದಲ್ಲಿ ನೆರೆದಿದ್ದ ಜನರನ್ನುದ್ದೇಶಿಸಿ ಮಾತನಾಡಿದ ಅವರು, ಸ್ವಲ್ಪ ಗಮನ ಇಟ್ಟು ಎರಡು ಮಾತುಗಳನ್ನು ಕೇಳಿ. ಇವತ್ತಿನ ಕಾಂಗ್ರೆಸ್ ಸರ್ಕಾರ ಕಳೆದ ಚುನಾವಣೆಯಲ್ಲಿ ಐದು ಗ್ಯಾರಂಟಿಗಳನ್ನು ಘೋಷಣೆ ಮಾಡಿದ್ದರಿಂದ ನನ್ನ ಹಳ್ಳಿಯ ತಾಯಂದಿರು ಸ್ವಲ್ಪ ದಾರಿ ತಪ್ಪಿದ್ದಾರೆ. ಈ ರೀತಿ ಉಚಿತ ಯೋಜನೆ ಕೊಟ್ಟರೆ ಹಳ್ಳಿಯ ತಾಯಂದಿರ ಬದುಕು ಏನಾಗಬೇಕು? ಈ ಬಗ್ಗೆ ಎಲ್ಲರೂ ಯೋಚನೆ ಮಾಡಬೇಕಿದೆ. ನಿಮ್ಮ ಕುಟುಂಬದ ಬದುಕೇನಾಗಬೇಕು ಯೋಚನೆ ಮಾಡಬೇಕಿದೆ. ಅವರಿಗೆ ಐದು ಉಚಿತ ಗ್ಯಾರಂಟಿ ಬಿಟ್ಟು ಬೇರೆ ಏನೂ ಇಲ್ಲ” ಎಂದು…
ಸರಗೂರು: ಡಾ. ಅಂಬೇಡ್ಕರ್ ಅವರು ಶಿಕ್ಷಣ ಬಹಳ ಮುಖ್ಯ ಎಂದು ನಂಬಿದ್ದರು. ಕಷ್ಟಪಟ್ಟರೂ ಸಾಕಷ್ಟು ಅಧ್ಯಯನ ಮಾಡಿ ಅಮೆರಿಕದ ಕೊಲಂಬಿಯಾ ವಿಶ್ವವಿದ್ಯಾಲಯದಿಂದ ಡಾಕ್ಟರೇಟ್ ಸೇರಿದಂತೆ ಹಲವು ಪದವಿಗಳನ್ನು ಪಡೆದರು. ಅವರ ಜ್ಞಾನ ಮತ್ತು ನಿರ್ಣಯದಿಂದ, ಅವರು ಅನ್ಯಾಯದ ಚಿಕಿತ್ಸೆ ಮತ್ತು ಜಾತಿ ಆಧಾರಿತ ತಾರತಮ್ಯದ ವಿರುದ್ಧ ಹೋರಾಡಿದರು ಎಂದು ದಸಂಸ (ಅಂಬೇಡ್ಕರ್ ವಾದ) ತಾಲ್ಲೂಕು ಸಂಚಾಲಕ ಕೂಡಗಿ ಗೋವಿಂದರಾಜು ಕಿವಿ ಮಾತು ಹೇಳಿದರು. ತಾಲ್ಲೂಕಿನ ಸಾಗರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಂದೇಗಾಲ ಗ್ರಾಮದಲ್ಲಿ ಭಾನುವಾರ ರಂದು, ಅಂಬೇಡ್ಕರ್ ಅವರ 133 ನೇ ಜಯಂತಿ ಅಂಗವಾಗಿ, ದಸಂಸ ಅಂಬೇಡ್ಕರ್ ವಾದ ಸಂಘಟನೆ ಸಹಕಾರದೊಂದಿಗೆ, ವಿಶ್ವ ಜ್ಞಾನಿ ಜ್ಞಾನ ಮಂದಿರ ಗ್ರಂಥಾಲಯವನ್ನು ಉದ್ಘಾಟನೆ ಮಾಡಿ ಹಾಗೂ ಅಂಬೇಡ್ಕರ್ ರವರ ಪೋಟೋಗೆ ಪುಷ್ಪಾರ್ಚನೆ ಸಲ್ಲಿಸಿದ ನಂತರ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು. “ಡಾ. ಅಂಬೇಡ್ಕರ್ ಅವರು ಒಂದು ದೊಡ್ಡ ಭಾರತದ ಸಂವಿಧಾನವನ್ನು ಬರೆದು, ಅವರು ಯಾರೇ ಆಗಿರಲಿ, ವಿಶ್ವದಲ್ಲಿ ಎಲ್ಲರಿಗೂ ಹಕ್ಕುಗಳನ್ನು ನೀಡುವ ಈ ಮಹತ್ವದ ದಾಖಲೆಯನ್ನು…
ನವದೆಹಲಿ: ಭಾರತೀಯ ಜನತಾ ಪಕ್ಷದ ಲೋಕಸಭಾ ಚುನಾವಣಾ ಪ್ರಣಾಳಿಕೆ ಕುರಿತು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಭಾನುವಾರ ವಾಗ್ದಾಳಿ ನಡೆಸಿದ್ದು, ಕಳೆದ 10 ವರ್ಷಗಳಲ್ಲಿ ಪ್ರಧಾನಿ ಬಡವರಿಗಾಗಿ ಏನನ್ನೂ ಮಾಡಲು ಸಾಧ್ಯವಾಗಿಲ್ಲ ಎಂದು ಹೇಳಿದ್ದಾರೆ. ಪ್ರಧಾನಿ ಮೋದಿ ರೈತರ ಆದಾಯವನ್ನು ದ್ವಿಗುಣಗೊಳಿಸುವುದಾಗಿ ಭರವಸೆ ನೀಡಿದ್ದರು. ಕನಿಷ್ಠ ಬೆಂಬಲ ಬೆಲೆಯನ್ನು ಹೆಚ್ಚಿಸುವುದಾಗಿ ಮತ್ತು ಕಾನೂನುಬದ್ಧ ಗ್ಯಾರಂಟಿ ನೀಡುವುದಾಗಿ ಹೇಳಿದ್ದರು. ಇವೆಲ್ಲವನ್ನೂ ಈಡೇರಿಸುವಂತೆ ದೇಶಾದ್ಯಂತ ರೈತರು ಒತ್ತಾಯಿಸುತ್ತಿದ್ದಾರೆ. ಈ ವರ್ಷಾರಂಭದಲ್ಲಿ ರೈತರು ಕೇಂದ್ರ ಸರ್ಕಾರ ನೀಡಿದ ಭರವಸೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಬೃಹತ್ ಪ್ರತಿಭಟನೆಯನ್ನೂ ನಡೆಸಲಾಗಿತ್ತು. ಯುವಕರು ಉದ್ಯೋಗವನ್ನು ಹುಡುಕುತ್ತಿದ್ದಾರೆ. ಹಣದುಬ್ಬರ ಹೆಚ್ಚುತ್ತಿದೆ. ಆದರೆ, ಮೋದಿ ಈ ಸಮಸ್ಯೆಗಳ ಬಗ್ಗೆ ಚಿಂತಿಸುತ್ತಿಲ್ಲ. ಅವರು ತಮ್ಮ ಅಧಿಕಾರಾವಧಿಯಲ್ಲಿ ದೇಶದ ಎಲ್ಲ ಜನರಿಗೆ ಅನುಕೂಲವಾಗುವಂತಹ ಯಾವುದೇ ಕೆಲಸವನ್ನು ಮಾಡಲಿಲ್ಲ ಎಂದು ಖರ್ಗೆ ವಾಗ್ದಾಳಿ ನಡೆಸಿದರು. ಬಿಜೆಪಿ ಪ್ರಣಾಳಿಕೆಯನ್ನು ನಂಬಬಾರದು ಎಂದು ಕಾಂಗ್ರೆಸ್ ನಾಯಕ ಖರ್ಗೆ ಹೇಳಿದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್…
ಬೆಂಗಳೂರು: ನಗರದ ಹೆಚ್ ಎಎಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕ್ಷುಲ್ಲಕ ಕಾರಣಕ್ಕೆ ಪತಿಯೊಬ್ಬ ಪತ್ನಿಯನ್ನು ಉಸಿರುಗಟ್ಟಿಸಿ ಹತ್ಯೆಗೈದ ಘಟನೆ ನಡೆದಿದೆ. ಗಿರಿಜಾ ಮೃತ ಮಹಿಳೆಯಾಗಿದ್ದಾರೆ. ಆಕೆಯ ಪತಿ ನವೀನ್ ಹತ್ಯೆಗೈದ ಆರೋಪಿಯಾಗಿದ್ದಾನೆ. ಗಿರಿಜಾ ಮತ್ತು ನವೀನ್, ಕಳೆದ 8 ತಿಂಗಳ ಹಿಂದಷ್ಟೇ ಮದುವೆ ಆಗಿದ್ದು, ಆರೋಪಿ ನವೀನ್ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ. ಪತಿ ಹಾಗೂ ಪತ್ನಿಯ ನಡುವೆ ಮಗು ಮಾಡಿಕೊಳ್ಳುವ ವಿಚಾರಕ್ಕೆ ಗಲಾಟೆ ನಡೆದಿದೆ ಎಂದು ತಿಳಿದು ಬಂದಿದ್ದು, ಇದೇ ಕಾರಣಕ್ಕೆ ಮಹಿಳೆ ಮಲಗಿದ್ದ ವೇಳೆ ಆರೋಪಿ ಆಕೆಯನ್ನು ಉಸಿರುಗಟ್ಟಿಸಿ ಹತ್ಯೆಗೈದಿದ್ದಾನೆ ಎಂದು ಆರೋಪಿಸಲಾಗಿದೆ. ಈ ಸಂಬಂಧ ಹೆಚ್ ಎಎಲ್ ಪೊಲೀಸ್ ಠಾಣೆಯಲ್ಲಿ ಕೊಲೆ ಪ್ರಕರಣ ದಾಖಲಾಗಿದ್ದು, ಪೊಲೀಸರು ಆರೋಪಿಯನ್ನು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ಬೆಂಗಳೂರು: ಹಲವು ಸಿನಿಮಾಗಳನ್ನು ನಿರ್ಮಿಸಿದ್ದ ನಿರ್ಮಾಪಕರೊಬ್ಬರು ಆತ್ಮಹತ್ಯೆಗೆ ಶರಣಾದ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ನಿರ್ಮಾಪಕ ಸೌಂದರ್ಯ ಜಗದೀಶ್ ತಮ್ಮ ಮಹಾಲಕ್ಷ್ಮೀ ಲೇಔಟ್ ನಿವಾಸದಲ್ಲಿ ಆತ್ಮಹತ್ಯೆಗೆ ಶರಣಾದವರಾಗಿದ್ದಾರೆ. ಅಪ್ಪು ಪಪ್ಪು, ಮಸ್ತ್ ಮಜಾ ಮಾಡಿ ಸೇರಿದಂತೆ ಹಲವು ಸಿನಿಮಾಗಳನ್ನು ನಿರ್ಮಿಸಿದ್ದ ನಿರ್ಮಾಪಕ ಸೌಂದರ್ಯ ಜಗದೀಶ್ ತಮ್ಮ ಮಹಾಲಕ್ಷ್ಮೀ ಲೇಔಟ್ ನಿವಾಸದಲ್ಲಿ ಆತ್ಮಹತ್ಯೆಗೆ ಶರಣಾಗಿದ್ದು, ಹಣಕಾಸಿನ ವಿಚಾರದಲ್ಲಿ ಸಂಕಷ್ಟ ಎದುರಿಸುತ್ತಿದ್ದರು ಎನ್ನಲಾಗಿದೆ. ಮೃತದೇಹವನ್ನು ರಾಜಾಜಿನಗರದ ಸುಗುಣ ಆಸ್ಪತ್ರೆಗೆ ಮರಣೋತ್ತರ ಪರೀಕ್ಷೆಗೆ ಕೊಂಡೊಯ್ಯಲಾಗಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ಹುಬ್ಬಳ್ಳಿ: ‘ಕೆಲವರು ಡಾ. ಬಿ.ಆರ್. ಅಂಬೇಡ್ಕರ್ ಅವರು ರಚಿಸಿರುವ ಸಂವಿಧಾನವನ್ನು ಬದಲಿಸುವ ಹುಚ್ಚು ಸಾಹಸಕ್ಕೆ ಮುಂದಾಗಿ, ಹೇಳಿಕೆ ನೀಡುತ್ತಿದ್ದಾರೆ. ಆದರೆ, ಪ್ರಸ್ತುತ ಲೋಕಸಭಾ ಚುನಾವಣೆಯಲ್ಲಿ ಅವರೇ ಬದಲಾಗಲಿದ್ದಾರೆ’ ಎಂದು ಶಿರಹಟ್ಟಿಯ ಫಕೀರ ದಿಂಗಾಲೇಶ್ವರ ಸ್ವಾಮೀಜಿ ಹೇಳಿದರು. ಡಾ. ಬಿ.ಆರ್. ಅಂಬೇಡ್ಕರ್ ಜಯಂತಿ ಅಂಗವಾಗಿ ನಗರದ ಡಾ. ಬಿ.ಆರ್. ಅಂಬೇಡ್ಕರ್ ವೃತ್ತದಲ್ಲಿ ಇರುವ ಅಂಬೇಡ್ಕರ್ ಮೂರ್ತಿಗೆ ಭಾನುವಾರ ಮಾಲಾರ್ಪಣೆ ಮಾಡಿ ಅವರು, ಸುದ್ದಿಗಾರರೊಂದಿಗೆ ಮಾತನಾಡಿದರು. ‘ಡಾ.ಬಿ.ಆರ್. ಅಂಬೇಡ್ಕರ್ ಅವರ ಆದರ್ಶಗಳು ಸೂರ್ಯ-ಚಂದ್ರ ಇರುವವರೆಗೂ ಇರುತ್ತವೆ. ಆದರೆ ಕೆಲವರು ಅವರ ತತ್ವಸಿದ್ದಾಂತಗಳನ್ನು ತೆಗೆದುಹಾಕುವ, ಸಂವಿಧಾನವನ್ನೇ ಬದಲಿಸುವ ಮಾತುಗಳನ್ನು ಆಡುತ್ತಿದ್ದಾರೆ. ಇದೇ ವೇದಿಕೆಯಲ್ಲಿ ಕೆಲವರು ಅಂಬೇಡ್ಕರ್ ಅವರನ್ನು ಹೊಗಳಿ ಮಾತನಾಡಿದ್ದಾರೆ. ಅವರ ಮನಸ್ಸಿನಲ್ಲಿ ಇರುವುದೇ ಬೇರೆ, ಬಾಯಲ್ಲಿ ಬರುವ ಮಾತುಗಳೇ ಬೇರೆ. ಮುಂದಿನ ದಿನಗಳಲ್ಲಿ ಮತದಾರರೇ ಇಲ್ಲಿನ ಅಗ್ರಗಣ್ಯ ನಾಯಕರನ್ನು ಮನೆಗೆ ಕಳುಹಿಸಲಿದ್ದಾರೆ’ ಎಂದು ಹೇಳಿದರು. ‘ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ, ಸ್ಪರ್ಧಾಳುವಾಗಿ ಈಗಾಗಲೇ ಮತದಾರರ ಜಾಗೃತಿ ಸಭೆಗಳನ್ನು ಅಲ್ಲಲ್ಲಿ ಆಯೋಜಿಸುತ್ತಿದ್ದೇನೆ. ಇಂದು(ಭಾನುವಾರ) ಸವಣೂರು, ಶಿಗ್ಗಾವಿಯಲ್ಲಿ ಮತದಾರರ ಸಭೆ…
ಹುಬ್ಬಳ್ಳಿ: ‘ಜನರ ಅಭಿಪ್ರಾಯಗಳನ್ನು ಪಡೆದು ಜವಾಬ್ದಾರಿಯಿಂದ ನಾವು ಪ್ರಣಾಳಿಕೆಯನ್ನು ಸಿದ್ಧಪಡಿಸಿದ್ದು, ಮತ್ತೊಮ್ಮೆ ಅದನ್ನು ಜನರ ಮುಂದಿಟ್ಟು ಚರ್ಚಿಸಲಾಗುವುದು’ ಎಂದು ಬಿಜೆಪಿ ಶಾಸಕ ಬಸವರಾಜ ಬೊಮ್ಮಾಯಿ ಹೇಳಿದರು. ನಗರದಲ್ಲಿ ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ನಾವು ಮತ್ತೊಮ್ಮೆ ಕೇಂದ್ರದಲ್ಲಿ ಅಧಿಕಾರಕ್ಕೆ ಬರುತ್ತೇವೆ. ಆ ವಿಶ್ವಾಸದ ಮೇರೆಗೆ ಜವಾಬ್ದಾರಿಯಿಂದ ಎಲ್ಲ ಸಮಾಜದವರನ್ನು ವಿಶ್ವಾಸಕ್ಕೆ ತೆಗೆದುಕೊಂಡು, ಅವರ ಸಲಹೆ ಸೂಚನೆಗಳನ್ನು ಪಡೆದು ಪ್ರಣಾಳಿಕೆ ಸಿದ್ಧಪಡಿಸಿದ್ದೇವೆ. ಅದರಲ್ಲಿ ಏನೇನಿದೆ ಎಂದು ಜನರ ಮುಂದಿಟ್ಟು, ಚರ್ಚಿಸುತ್ತೇವೆ. ಕೆಲವರು ಬೇಜವಾಬ್ದಾರಿಯಿಂದ ಪ್ರಣಾಳಿಕೆ ಸಿದ್ಧಪಡಿಸಿದ್ದಾರೆ’ ಎಂದು ಮೂದಲಿಸಿದರು. ‘ಮೋದಿ ಗ್ಯಾರಂಟಿ ಮತ್ತು ಕಾಂಗ್ರೆಸ್ ಗ್ಯಾರಂಟಿ ಕುರಿತು ನಡೆಯುತ್ತಿರುವ ಚರ್ಚೆಗೆ ಪ್ರತಿಕ್ರಿಯಿಸಿದ ಅವರು, ‘ಮೋದಿ ಗ್ಯಾರಂಟಿ ಶಾಶ್ವತ ಗ್ಯಾರಂಟಿ, ದೇಶ ಕಟ್ಟುವ ಗ್ಯಾರಂಟಿ, ಬದುಕು ಕಟ್ಟುವ ಗ್ಯಾರಂಟಿ, ಸಾಮಾಜಿಕ ನ್ಯಾಯ ನೀಡುವ ಗ್ಯಾರಂಟಿ’ ಎಂದು ಹೇಳಿದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ಮಡಿಕೇರಿ: ಹಳ್ಳಿಯ ತಾಯಂದಿರು ದಾರಿ ತಪ್ಪಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ವಿವಾದಾತ್ಮಕ ಹೇಳಿಕೆಗೆ ಸಿಎಂ ಸಿದ್ದರಾಮಯ್ಯ ಗರಂ ಆಗಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹೆಣ್ಮಕ್ಕಳ ಬಗ್ಗೆ ಅವರಿಗೆ ಇರುವ ಮನಸ್ಥಿತಿ ಅರ್ಥವಾಗುತ್ತದೆ. ಎರಡು ಬಾರಿ ಮುಖ್ಯಮಂತ್ರಿ ಆದವರು ಈ ರೀತಿ ಮಾತನಾಡಬಾರದಿತ್ತು ಎಂದು ಹೇಳಿದ್ದಾರೆ. ಬಿಜೆಪಿಯ ಪ್ರಣಾಳಿಕೆಗೆ ಕಿಡಿಕಾರಿದ ಸಿಎಂ ಸಿದ್ದರಾಮಯ್ಯ ಅವರು, “ಬಿಜೆಪಿಯವರು ಇಂದಿಗೂ ನೀಡಿದ ಭರವಸೆ ಈಡೇರಿಸಿಲ್ಲ. ಮುಂದೇನು ಮಾಡಲ್ಲ. ಎಲ್ಲಿ ಉದ್ಯೋಗ ಸೃಷ್ಟಿ ಮಾಡಿದ್ದಾರೆ” ಎಂದು ಪ್ರಶ್ನಿಸಿದ್ದಾರೆ. ವಿ.ಸೋಮಣ್ಣ ಪರ ಪ್ರಚಾರ ಭಾಷಣದಲ್ಲಿ ಮಾತನಾಡಿದ ಅವರು, ಗ್ಯಾರಂಟಿಗಾಗಿ ಯಾವ ಜೇಬಿಗೆ ಕೈ ಹಾಕಿದ್ದಾರೆ ಎಂದು ಹೇಳುತ್ತಾ, ಇವತ್ತಿನ ಸರ್ಕಾರ ಕಳೆದ ಚುನಾವಣೆಯಲ್ಲಿ ಐದು ಗ್ಯಾರಂಟಿ ಘೋಷಣೆ ಮಾಡಿ ನನ್ನ ಹಳ್ಳಿಯ ತಾಯಂದಿರು ಸ್ವಲ್ಪ ದಾರಿ ತಪ್ಪಿದ್ದಾರೆ. ಅವರ ಬದುಕು ಏನಾಗಬೇಕು ಎಂದು ಯೋಚನೆ ಮಾಡಬೇಕಿದೆ ಎಂದು ಹೆಚ್.ಡಿ.ಕುಮಾರಸ್ವಾಮಿ ಹೇಳಿಕೆ ನೀಡಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್…