Author: admin

ಲೋಕಸಭೆ ಚುನಾವಣೆ ಸಮೀಪಿಸುತ್ತಿರುವಂತೆಯೇ ಮಣಿಪುರದಲ್ಲಿ ಮತ್ತೊಂದು ಗುಂಡಿನ ಚಕಮಕಿ ನಡೆದಿದೆ. ಕಂಪೋಕ್ಪಿ ಮತ್ತು ಇಂಫಾಲ್ ಪೂರ್ವ ಉಖ್ರುಲ್ ಜಿಲ್ಲೆಗಳಲ್ಲಿ ಘರ್ಷಣೆಗಳು. ತೌಬಲ್, ತೆಂಗನೌಪಾಲ್ ಮತ್ತು ಕುಚಿಂಗ್ ಜಿಲ್ಲೆಗಳಲ್ಲಿ ಎರಡು ದಿನಗಳಿಂದ ಘರ್ಷಣೆಗಳು ಮುಂದುವರಿದಿವೆ. ನಾಳೆ ಅಮಿತ್ ಶಾ ರಾಜ್ಯಕ್ಕೆ ಭೇಟಿ ನೀಡಲಿದ್ದಾರೆ. ಕಂಪೋಕ್ಪಿಯಲ್ಲಿ ಕುಕಿ ಪಂಗಡಕ್ಕೆ ಸೇರಿದ ಇಬ್ಬರನ್ನು ಗುಂಡಿಕ್ಕಿ ಹತ್ಯೆ ಮಾಡಲಾಗಿದೆ. ಮೇಟಿ ಸಶಸ್ತ್ರ ಗುಂಪು ಗುಂಡು ಹಾರಿಸಿದೆ ಎಂದು ಆರೋಪಿಸಲಾಗಿದೆ. ಮಣಿಪುರದ ಕಂಪೋಕ್ಪಿಯಲ್ಲಿ ಕುಕಿ ಪಂಗಡಕ್ಕೆ ಸೇರಿದ ಇಬ್ಬರನ್ನು ಗುಂಡಿಕ್ಕಿ ಹತ್ಯೆ ಮಾಡಲಾಗಿದೆ. ಮೈಟಿ ವಿಭಾಗದ ಸಶಸ್ತ್ರ ಗುಂಪು ಗುಂಡು ಹಾರಿಸಿದೆ ಎಂದು ಆರೋಪಿಸಲಾಗಿದೆ. ಉಗ್ರಗಾಮಿ ಮೈತೆಯ್ ಸಂಘಟನೆ ಅಮರಮೈ ಥೆಂಗ್‌ಕೋಲ್‌ನ ಸದಸ್ಯರು ಗುಂಡು ಹಾರಿಸಿದ್ದಾರೆ ಎಂದು ಕುಕಿ ಸಂಘಟನೆಗಳು ಆರೋಪಿಸಿವೆ. ಹಳ್ಳಿಗಳನ್ನು ಕಾವಲು ಕಾಯುತ್ತಿದ್ದ ಕುಕಿ ಗ್ಯಾಂಗ್‌ನ ಸದಸ್ಯರು ಕೊಲ್ಲಲ್ಪಟ್ಟರು. ನಿನ್ನೆ ತೆಗ್ನೋಪಾಲ್‌ನಲ್ಲೂ ಕುಕಿಮೈತಿ ಬಣಗಳ ನಡುವೆ ತೀವ್ರ ಗುಂಡಿನ ಚಕಮಕಿ ನಡೆದಿದೆ. ಮಣಿಪುರದಲ್ಲೂ ಶುಕ್ರವಾರ ಮೊದಲ ಹಂತದ ಲೋಕಸಭೆ ಚುನಾವಣೆ ನಡೆಯಲಿದೆ.  ಮಣಿಪುರದಲ್ಲಿ ಪ್ರಕ್ಷುಬ್ಧತೆ ಮುಂದುವರೆದಿದೆ…

Read More

ವಿಶ್ವದ ದೈತ್ಯ ಎಲೆಕ್ಟ್ರಿಕ್ ಕಾರು ಉತ್ಪಾದನಾ ಕಂಪನಿಯಾಗಿರುವ ಟೆಸ್ಲಾ ಕಂಪನಿಯು ಭಾರತದಲ್ಲಿ ತನ್ನ ಭವಿಷ್ಯದ ಯೋಜನೆಗಳ ಅನುಷ್ಠಾನಕ್ಕಾಗಿ ಭಾರೀ ಪ್ರಮಾಣದ ಹೂಡಿಕೆ ಮಾಡುವ ಸುಳಿವು ನೀಡಿದ್ದು, ರಿಲಯನ್ಸ್ ಇಂಡಸ್ಟ್ರೀಸ್ ಲಿಮಿಟೆಡ್ (ಆರ್‌ಐಎಲ್) ನೊಂದಿಗೆ ಇವಿ ಉತ್ಪಾದನಾ ಘಟಕವನ್ನು ಸ್ಥಾಪಿಸಲು ಜಂಟಿ ಉದ್ಯಮದ ಆರಂಭಕ್ಕೆ ಸಿದ್ದವಾಗುತ್ತಿದೆ. ಭಾರತದಲ್ಲಿ ಎಲೆಕ್ಟ್ರಿಕ್ ಕಾರು ಬಿಡುಗಡೆಗಾಗಿ ಈಗಾಗಲೇ ಹಲವು ಬಾರಿ ಪ್ರಯತ್ನಿಸಿ ಹಿಂದೆ ಸರಿದಿರುವ ಟೆಸ್ಲಾ ಕಂಪನಿಯು, ಈ ಬಾರಿ ರಿಲಯನ್ಸ್ ಇಂಡಸ್ಟ್ರೀಸ್ ಲಿಮಿಟೆಡ್ ಜೊತೆಗೆ ಇವಿ ಉತ್ಪಾದನಾ ಘಟಕವನ್ನು ಸ್ಥಾಪಿಸಲು ಸುಳಿವು ನೀಡಿದ್ದು, ಹೊಸ ಯೋಜನೆಗಾಗಿ ಕಂಪನಿಯು ಆರಂಭಿಕ ಬಂಡವಾಳವಾಗಿ ಬರೋಬ್ಬರಿ 2 ಬಿಲಿಯನ್ ಅಮೆರಿಕನ್ ಡಾಲರ್ ಹೂಡಿಕೆ ಮಾಡುವ ಸಾಧ್ಯತೆಗಳಿವೆ. ಹೊಸ ಎಲೆಕ್ಟ್ರಿಕ್ ಕಾರು ಉತ್ಪಾದನಾ ಘಟಕ ಸ್ಥಾಪನೆಗಾಗಿ ಈಗಾಗಲೇ ಟೆಸ್ಲಾ ಮತ್ತು ರಿಲಯನ್ಸ್ ಇಂಡಸ್ಟ್ರೀಸ್ ಲಿಮಿಟೆಡ್ ಕಂಪನಿಯು ಸೂಕ್ತವಾದ ಸೌಲಭ್ಯಗಳನ್ನು ಒಳಗೊಂಡ ಸ್ಥಳ ಹುಡುಕಾಟ ನಡೆಸುತ್ತಿದ್ದು, ಇದಕ್ಕಾಗಿ ಮಹಾರಾಷ್ಟ್ರ ಮತ್ತು ಗುಜರಾತ್ ರಾಜ್ಯಗಳೊಂದಿಗೆ ವಿವಿಧ ಹಂತದ ಮಾತುಕತೆಗಳು ಕೂಡಾ ನಡೆದಿವೆ ಎನ್ನಲಾಗಿದೆ. ಇನ್ನು…

Read More

ಫೋನ್​ ರಿಪೇರಿ ಮಾಡಿಸಿಕೊಡಲು ಪಾಲಕರು ನಿರಾಕರಿಸಿದ್ದಕ್ಕೆ ಯುವತಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡಿರುವ ಆಘಾತಕಾರಿ ಘಟನೆ ತೆಲಂಗಾಣದ ಮಂಚೇರಿಯಲ್ ಜಿಲ್ಲೆಯ ಜೈಪುರ ಮಂಡಲದ ವಲ್ಲಲ ಗ್ರಾಮದಲ್ಲಿ ನಡೆದಿದೆ. ಸೈಶುಮಾ(19) ಸೂಸೈಡ್‌ ಮಾಡಿಕೊಂಡ ಯುವತಿ ಎಂದು ಗುರುತಿಸಲಾಗಿದೆ. ಪ್ಯಾಗ ಸರಕ್ಕ ಮತ್ತು ಸ್ವಾಮಿ ದಂಪತಿಗೆ ಇಬ್ಬರು ಗಂಡು ಮಕ್ಕಳು ಹಾಗೂ ಓರ್ವ ಹೆಣ್ಣು ಮಗಳಿದ್ದಳು. ಈ ಪೈಕಿ ಸೈಶುಮಾ ಮಂಚೇರಿಯಲ್​ ಕಾಲೇಜಿನಲ್ಲಿ ಪ್ರಥಮ ವರ್ಷದ ಪದವಿ ವಿದ್ಯಾರ್ಥಿನಿಯಾಗಿದ್ದಳು. ಆಕೆ ಬಳಸುತ್ತಿದ್ದ ಸ್ಮಾರ್ಟ್​ಫೋನ್​ ಕೆಟ್ಟು ಹೋಗಿತ್ತು. ಹೀಗಾಗಿ ಆ ಫೋನ್ ರಿಪೇರಿ ಮಾಡಿಸಿಕೊಡುವಂತೆ ತಾಯಿ ಬಳಿ ಕೇಳಿದ್ದಳಂತೆ. ಆದರೆ ತಾಯಿ ಆಕೆಗೆ ಬುದ್ಧಿವಾದ ಹೇಳಿದ್ದಳು. “ನೀನು ಆಗಾಗ ಫೋನ್​ ಹಾಳು ಮಾಡಿಕೊಳ್ಳುತ್ತೀಯಾ, ನಮ್ಮ ಬಳಿ ಫೋನ್‌ ರಿಪೇರಿ ಮಾಡುವಷ್ಟು ಹಣವಿಲ್ಲ. ಸ್ವಲ್ಪ ದಿನ ಸುಮ್ಮನಿರು” ಅಂತಾ ಏರು ಧ್ವನಿಯಲ್ಲಿ ಬೈದು ಬುದ್ಧವಾದ ಹೇಳಿದ್ದರು ಎನ್ನಲಾಗಿದೆ. ನಾನು ಕೇಳಿದ ಹಾಗೆ ತಮ್ಮ ಅಣ್ಣ ಕೇಳಿದ್ದರೆ ಕೂಡಲೇ ರಿಪೇರಿ ಮಾಡಿಸಿಕೊಡುತ್ತಿದ್ದರು. ಆದರೆ ನಾನು ಏನಾದರೂ ಕೇಳಿದರೆ ಯಾವಾಗಲೂ ಇಲ್ಲ ಅಂತಾನೇ…

Read More

ಉಳಿದುಕೊಳ್ಳಲು ಮನೆ ಇಲ್ಲದೆ ಇದ್ರೆ ಅಂತಹ ಸಂದರ್ಭದಲ್ಲಿ ಕೃಷಿ ಭೂಮಿಯಲ್ಲಿ ಕೆಲವು ರೈತರು ಮನೆ ನಿರ್ಮಾಣ ಮಾಡಿಕೊಳ್ಳುತ್ತಾರೆ. ಇದಕ್ಕೂ ಪರ್ಮಿಷನ್ ಬೇಕಾಗುತ್ತದೆ ಆದರೆ ಇತ್ತೀಚಿನ ದಿನಗಳಲ್ಲಿ ಕೃಷಿ ಭೂಮಿಯನ್ನು ಬೇರೆಬೇರೆ ಕಮರ್ಷಿಯಲ್ ಕಟ್ಟಡಕ್ಕಾಗಿ ಬಳಸಿಕೊಳ್ಳುತ್ತಿರುವವರ ಸಂಖ್ಯೆಯೂ ಹೆಚ್ಚಾಗಿದೆ. ಈ ರೀತಿ ಫಸಲು ನೀಡುವ ಭೂಮಿಯನ್ನು ಪರಿವರ್ತಿಸಿ ಕಮರ್ಷಿಯಲ್ ಆಗಿ ಬದಲಾಯಿಸುತ್ತಾ ಹೋದರೆ ಮುಂದಿನ ದಿನಗಳಲ್ಲಿ ಕೃಷಿ ಚಟುವಟಿಕೆ ಸಂಪೂರ್ಣವಾಗಿ ನಾಶವಾಗಬಹುದು. ಇದಕ್ಕಾಗಿ ಸರ್ಕಾರ ಕಟ್ಟು ನಿಟ್ಟಿನ ಆದೇಶ ಹೊರಡಿಸಿದ್ದು ನಿಮ್ಮ ಸ್ವಂತ ಜಮೀನೆ ಆಗಿದ್ದರು, ಅದು ಕೃಷಿ ಭೂಮಿ ಆಗಿದ್ದರೆ ನೀವು ಸುಲಭವಾಗಿ ಅಲ್ಲಿ ಕಟ್ಟಡ ನಿರ್ಮಾಣ ಮಾಡಲು ಸಾಧ್ಯವಿಲ್ಲ. ಸ್ವಂತ ಜಮೀನು ಹೊಂದಿರುವ ರೈತರು ಕೂಡ ತಮ್ಮ ಕೃಷಿ ಭೂಮಿಯಲ್ಲಿ ಸುಲಭವಾಗಿ ಯಾವುದೇ ಕಟ್ಟಡ ನಿರ್ಮಾಣ ಮಾಡಿಕೊಳ್ಳಲು ಸಾಧ್ಯವಿಲ್ಲ. ಕೃಷಿಯೇತರ ಚಟುವಟಿಕೆಗೆ ಕೃಷಿ ಭೂಮಿಯನ್ನು ಬಳಕೆ ಮಾಡುವಂತಿಲ್ಲ ಈ ರೀತಿ ಮಾಡಿದರೆ ಅಂತವರ ಮೇಲೆ ಸರ್ಕಾರ ಕಠಿಣ ಕ್ರಮ ಕೈಗೊಳ್ಳುತ್ತದೆ. ಇನ್ನು ಕೆಲವು ಅನಿವಾರ್ಯ ಪರಿಸ್ಥಿತಿಯಲ್ಲಿ ಉದಾಹರಣೆಗೆ ಉಳಿದುಕೊಳ್ಳಲು ಮನೆ…

Read More

ತುಮಕೂರು: ತುಮಕೂರು ಲೋಕಸಭೆ ಕ್ಷೇತ್ರದ ವ್ಯಾಪ್ತಿಯಲ್ಲಿ ಹಿರಿಯ ಮತದಾರರಿಗೆ ಅವರ ಮನೆಯಲ್ಲಿಯೇ ಮತದಾನ ಮಾಡಲು ಅವಕಾಶ ಮಾಡಿಕೊಡುವಂತಹ ಕಾರ್ಯಕ್ಕೆ ಇಂದು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಚಾಲನೆ ನೀಡಲಾಯಿತು. ನಗರದ ಲೇಬರ್ ಕಾಲೋನಿಯಲ್ಲಿ ಹಿರಿಯ ಮತದಾರರಾದ ವೆಳ್ಳಿಯಮ್ಮ ಮನೆಯಲ್ಲೇ ಅವರಿಗೆ ಮತದಾನ ಮಾಡಲು ಅವಕಾಶ ಮಾಡಿಕೊಡಲಾಗಿತ್ತು. ಮಹಾನಗರ ಪಾಲಿಕೆ ಆಯುಕ್ತೆ ಬಿ.ವಿ. ಅಶ್ವಿಜಾ ಖುದ್ದು ಭೇಟಿ ನೀಡಿ ಮತದಾನ ಮಾಡಿಸಿದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

Read More

ತುಮಕೂರು: ತುಮಕೂರು ಲೋಕಸಭಾ ಕ್ಷೇತ್ರದ ಬಿಜೆಪಿ ಹಾಗೂ ಜೆಡಿಎಸ್ ಮೈತ್ರಿಕೂಟದ ಅಭ್ಯರ್ಥಿಯಾಗಿರುವ ಸೋಮಣ್ಣ ಪರವಾಗಿ ಇಂದು, ಜಿಲ್ಲೆಯ ವಿವಿಧಡೆ ಎಚ್.ಡಿ. ಕುಮಾರಸ್ವಾಮಿ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ನೇತೃತ್ವದಲ್ಲಿ ಬಹಿರಂಗ ಪ್ರಚಾರ ನಡೆಸಲಾಯಿತು. ತಿಪಟೂರಿನ ನೋಣವಿನಕೆರೆಯಲ್ಲಿ ನಡೆದ ಬಹಿರಂಗ ಪ್ರಚಾರದ ವೇಳೆ ಜೆಡಿಎಸ್ ಪಕ್ಷದ ಎರಡು ಬಣಗಳ ನಡುವೆ ಗಲಾಟೆ ನಡೆದಿದ್ದು, ಸ್ಥಳೀಯ ಜೆಡಿಎಸ್ ಮುಖಂಡ ರಾಕೇಶ್ ಗೌಡ ಹಾಗೂ ಶಾಂತಕುಮಾರ್ ಬೆಂಬಲಿಗರಿಂದ ಗಲಾಟೆ ನಡೆಯಿತು. ರಾಕೇಶ್ ಗೌಡ ನೇತೃತ್ವದಲ್ಲಿ ಪ್ರಚಾರ ರ್ಯಾಲಿ  ನಡೆಸುವಂತೆ ಒತ್ತಾಯಿಸಿ ಗಲಾಟೆ ನಡೆಯಿತು. ಇದರಿಂದ ಬಹಿರಂಗ ಪ್ರಚಾರದಲ್ಲಿ ಪಾಲ್ಗೊಂಡಿದ್ದ ಕುಮಾರಸ್ವಾಮಿ ಹಾಗೂ ವಿಜಯೇಂದ್ರ ಗೊಂದಲಕ್ಕೆ ಒಳಗಾದರು. ಪರಸ್ಪರ ಕೈ ಕೈ ಮಿಲಾಯಿಸುವ ಹಂತಕ್ಕೆ ತಲುಪಿದ ಗಲಾಟೆಯನ್ನು ನಿಯಂತ್ರಿಸಲು ಪೊಲೀಸರು ಹರಸಾಹಸ ಪಟ್ಟರು. ಕೊನೆಗೆ ಖುದ್ದು ಪ್ರಚಾರ ವಾಹನದಿಂದ ಕೆಳಗಿಳಿದು ಹೋಗಿ ಕಾರ್ಯಕರ್ತರನ್ನ ಸೋಮಣ್ಣ ಸಮಾಧಾನ ಪಡಿಸಿದರು. ಎಚ್.ಡಿ. ಕುಮಾರಸ್ವಾಮಿ ಹಾಗೂ ವಿಜಯೇಂದ್ರ ಇಬ್ಬರು ನೊಣವಿನಕೆರೆ ತಿಪಟೂರು ಗುಬ್ಬಿ ಹಾಗೂ ತುಮಕೂರು ಗ್ರಾಮಾಂತರ ವಿಧಾನಸಭಾ ಕ್ಷೇತ್ರದಲ್ಲಿ ದಿನವಿಡೀ…

Read More

ಬಿಸಿಲ ಝಳಕ್ಕೆ ಜನ ತಂಡಾ ಹೊಡೆದಿದ್ದಾರೆ. ಫ್ಯಾನ್, ಕೂಲರ್, AC ಇಲ್ಲದೆ ನಿಮಿಷವೂ ಇರಲು ಅಸಾಧ್ಯ. ಅದರಲ್ಲೂ ಈ ವರ್ಷ ಬಿಸಿಲ ಧಗೆ ಸಿಕ್ಕಾಪಟ್ಟೆ ಇರುವುದರಿಂದ ಫ್ಯಾನ್, AC ಇಲ್ಲದವರೂ ಕೂಡ ಖರೀದಿ ಮಾಡಿದ್ದಾರೆ ಎನ್ನಲಾಗಿದೆ. ಮನೆ ತಂಪಾಗಿಸಲು, ಬಿಸಿಲಿಂದ ತಪ್ಪಿಸಲು ಹಲವರು ದಿನವಿಡೀ ಪ್ಯಾನ್ ಹಾಕಿರುತ್ತಾರೆ. ಇನ್ನು ಕೆಲವರು AC ಯನ್ನೂ ಆನ್ ಮಾಡಿರುತ್ತಾರೆ. ಹೀಗಿರುವಾಗ ಕರೆಂಟ್ ಬಿಲ್ ಹೆಚ್ಚು ಬರುವುದು ಸಾಮಾನ್ಯ. ಆದರೆ ನೀವು AC ಯನ್ನು ಈ ಟೆಂಪರೇಚರ್ ನಲ್ಲಿ ಆನ್ ಮಾಡಿದರೆ ಸ್ವಲ್ಪವೂ ಕರೆಂಟ್ ಬಿಲ್ ಬರುವುದಿಲ್ಲ. ಎಸಿಯ ಅತಿಯಾದ ಬಳಕೆಯಿಂದ ಕರೆಂಟ್ ಬಿಲ್ ಬರುತ್ತೆ ಅನ್ನೋದು ಗೊತ್ತು. ಆದರೆ ಕರೆಂಟ್ ಬಿಲ್ ಬಾರದಂತೆ ತಡೆಯಲು ಸಹ ಮಾಡಲು ಆಗುತ್ತದೆ. ಕರೆಂಟ್ ಬಿಲ್ ಬಾರದಂತೆ ಮಾಡಲು ಇಲ್ಲಿ ನಿಮಗೆ 5 ಟಿಪ್ಸ್ ಗಳನ್ನು ನೀಡಲಾಗಿದೆ. ಸರಿಯಾದ ತಾಪಮಾನ: ಬ್ಯೂರೋ ಆಫ್ ಎನರ್ಜಿ ಎಫಿಷಿಯನ್ಸಿ ನಿಮ್ಮ ಎಸಿ ಅನ್ನು 24 ಡಿಗ್ರಿ ಸೆಲ್ಸಿಯಸ್‌ಗೆ ಹೊಂದಿಸುವುದು ಹೆಚ್ಚು ಆರಾಮದಾಯಕ…

Read More

ರಾಮನಗರ: ಹಾಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೂಲ ಕಾಂಗ್ರೆಸ್ ಪಕ್ಷದವರಲ್ಲ, ಬೇರೆ ಪಕ್ಷದಿಂದ ಬಂದವರು ಆದರೂ, ನಾವು ಅವರಿಗೆ ಅವಕಾಶ ಮಾಡಿಕೊಟ್ಟಿದ್ದೇವೆ ಎಂದು ಬೆಂ.ಗ್ರಾಮಾಂತರ ಕ್ಷೇತ್ರದ ಲೋಕಸಭಾ ಚುನಾವಣಾ ಅಭ್ಯರ್ಥಿ ಡಿ.ಕೆ. ಸುರೇಶ್ ಹೇಳಿದ್ದಾರೆ. ರಾಮನಗರದಲ್ಲಿ ಕಾರ್ಯಕರ್ತರ ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, ಸಿದ್ದರಾಮಯ್ಯ ಅವರು ಬೇರೆ ಪಕ್ಷದಿಂದ ಬಂದವರು ಆದರೂ ನಾವು ಅವರಿಗೆ ಅವಕಾಶ ಮಾಡಿಕೊಟ್ಟಿದ್ದೇವೆ. ಇಂದು ೨ನೇ ಬಾರಿಗೆ ಮುಖ್ಯಮಂತ್ರಿ ಆಗಿದ್ದಾರೆ, ನಮ್ಮ ನಾಯಕರಾಗಿದ್ದಾರೆ ಎಂದಿದ್ದಾರೆ. ಸಿದ್ದರಾಮಯ್ಯ ಅವರು ರಾಜ್ಯಕ್ಕೆ ಹೊಸ ಕಾಯಕಲ್ಪ ಕೊಟ್ಟಿದ್ದಾರೆ. ಬಡವರಿಗಾಗಿ ಒಂದಷ್ಟು ಕಾರ್ಯಕ್ರಮ ಕೊಟ್ಟಿದ್ದಾರೆ. ಹಾಗಾಗಿ ಹಣೇಲಿ ಬರೆದಿದ್ದರೆ ಎಲ್ಲಾ ಆಗುತ್ತೆ, ಬರೆದಿಲ್ಲ ಅಂದ್ರೆ ಏನೂ ಮಾಡೋಕಾಗಲ್ಲ ಎಂದು ನುಡಿದಿದ್ದಾರೆ. ಜೆಡಿಎಸ್‌ ನವರು ಸಿದ್ದರಾಮಯ್ಯ ಅವರಿಗೆ ಬೀಗ ಹಾಕಿ ಕೂರಿಸಿದ್ರು, ಸಸ್ಪೆಂಡ್ ಮಾಡಿದ್ದರು. ಆದ್ರೆ ಅವರ ಯೋಗ ಅಲ್ಲಿ ಬರೆದಿರಲಿಲ್ಲ, ಇಲ್ಲಿ ಬರೆದಿತ್ತು. ಹಾಗೆಯೇ ನಿಮ್ಮ ಯೋಗ ಸಹ ಬರೆದಿರಬಹುದು. ಯಾರನ್ನೂ ಅಡ್ಡ ಹಾಕೋಕೆ ಹೋಗ್ಬೇಡಿ, ಪಕ್ಷ ಬೆಳೆಯುವ ನಿಟ್ಟಿನಲ್ಲಿ ಕೆಲಸ ಮಾಡಿ ಎಂದು…

Read More

ಆರೋಗ್ಯಕರ ಆಹಾರ ಮತ್ತು ಸಕ್ರಿಯ ಜೀವನಶೈಲಿಯು ಆರೋಗ್ಯಕರ ರಕ್ತದೊತ್ತಡವನ್ನು ಕಾಪಾಡಿಕೊಳ್ಳುವಲ್ಲಿ ನಿರ್ಣಾಯಕ ಪಾತ್ರ ವಹಿಸುತ್ತದೆ. ಅಧಿಕ ರಕ್ತದೊತ್ತಡ ಇಂದು ಎಂದಿಗಿಂತಲೂ ಹೆಚ್ಚಾಗಿದೆ. ಇದು ಹೃದ್ರೋಗಕ್ಕೆ ಅಪಾಯಕಾರಿ ಅಂಶಗಳಲ್ಲಿ ಒಂದಾಗಿದೆ. ರಕ್ತದೊತ್ತಡವು ನಮ್ಮ ಹೃದಯ ಮಾತ್ರವಲ್ಲದೆ, ನಿಮ್ಮ ಮೂತ್ರಪಿಂಡಗಳು, ಕಣ್ಣುಗಳು ಮತ್ತು ಹೆಚ್ಚಿನವುಗಳ ಮೇಲೆ ನಕಾರಾತ್ಮಕ ಪರಿಣಾಮ ಬೀರುತ್ತದೆ. ಆದಾಗ್ಯೂ, ರಕ್ತದೊತ್ತಡವನ್ನು ಸರಳವಾಗಿ ನಿಯಂತ್ರಿಸಬಹುದು. ಆರೋಗ್ಯಕರ ಆಹಾರ ಮತ್ತು ಸಕ್ರಿಯ ಜೀವನಶೈಲಿಯು ಆರೋಗ್ಯಕರ ರಕ್ತದೊತ್ತಡವನ್ನು ಕಾಪಾಡಿಕೊಳ್ಳುವಲ್ಲಿ ನಿರ್ಣಾಯಕ ಪಾತ್ರ ವಹಿಸುತ್ತದೆ. ಈ ಬಿರು ಬೇಸಿಗೆಯಲ್ಲಿ ನೈಸರ್ಗಿಕವಾಗಿ ರಕ್ತದೊತ್ತಡವನ್ನು ಕಡಿಮೆ ಮಾಡುವ ಹಲವಾರು ಹಣ್ಣುಗಳಿವೆ. ಈ ಹಣ್ಣುಗಳಲ್ಲಿ ಒಂದು ಕಲ್ಲಂಗಡಿ. ಈ ಕೆಂಪು, ರಸಭರಿತವಾದ ಹಣ್ಣು ರಕ್ತದೊತ್ತಡ ಕಡಿಮೆ ಮಾಡುವುದು ಮಾತ್ರವಲ್ಲದೆ ಅನೇಕ ಆರೋಗ್ಯ ಪ್ರಯೋಜನಗಳನ್ನು ನೀಡುತ್ತದೆ. ಹೇಗೆ ಎಂದು ತಿಳಿಯಲು ಮುಂದೆ ಓದಿ. ರಕ್ತದೊತ್ತಡವನ್ನು ನಿಯಂತ್ರಿಸಲು ಕಲ್ಲಂಗಡಿ ಹೇಗೆ ಸಹಾಯ ಮಾಡುತ್ತದೆ ಎಂಬುದನ್ನು ತಿಳಿದುಕೊಳ್ಳಿ: ಕಲ್ಲಂಗಡಿಯಲ್ಲಿ ಸಿಟ್ರುಲಿನ್ ಎಂಬ ಅಮೈನೋ ಆಮ್ಲವಿದೆ. ನಮ್ಮ ದೇಹವು ಸಿಟ್ರುಲಿನ್ ಅನ್ನು ಅರ್ಜಿನೈನ್ ಆಗಿ ಪರಿವರ್ತಿಸುತ್ತದೆ ಮತ್ತು…

Read More

ವಿಜಯಪುರ: ಅರ್ಜಣಗಿಯ ಬಳಿ ಕಾರ್‌ ಮತ್ತು ಟ್ರಕ್‌ ನಡುವೆ ನಡೆದ ಭೀಕರ ಅಪಘಾತದಲ್ಲಿ ಒಂದೇ ಕುಟುಂಬದ ನಾಲ್ವರು ಮೃತಪಟ್ಟಿರುವ ದಾರುಣ ಘಟನೆ ನಡೆದಿದೆ. ರವಿನಾಥ ಸುನಿಲಾಲ್‌ ಪತ್ತಾರ(52), ಅರ್ಜುನ್‌ ಕುಶಾಲ್‌ ಸಿಂಗ್‌ ರಜಪೂತ(32), ಪುಷ್ಪಾ(40) ಹಾಗ ಮೇಘರಾಜ್‌ ರಜಪೂತ(12) ಮೃತ ದುರ್ದೈವಿಗಳಾಗಿದ್ದಾರೆ. ಟ್ರಕ್‌ ಗುದ್ದಿದ ರಭಸಕ್ಕೆ ಕಾರಿನಲ್ಲಿದ್ದ ನಾಲ್ವರೂ ಸ್ಥಳದಲ್ಲಿಯ ಮೃತಪಟ್ಟಿದ್ದಾರೆ. ಬೆಳಗ್ಗೆ ವಿಜಯನದಿಂದ ಜಮಖಂಡಿಗೆ ಅರ್ಜುನ್‌ ಸಿಂಗ್‌ ತಮ್ಮ ಪೋಷಕರು ಹಾಗೂ ಮಗನೊಂದಿಗೆ ತೆರಳುತ್ತಿದ್ದರು. ಈ ವೇಳೆ ಜಮಖಂಡಿಯಿಂದ ಬರುತ್ತಿದ್ದ ಟ್ರಕ್‌ ಗೆ ಡಿಕ್ಕಿಯಾಗಿ ಅಪಘಾತ ಸಂಭವಿಸಿದೆ. ಬಬಲೇಶ್ವರ‌ ಠಾಣೆಯ ಪೊಲೀಸರು ಸ್ಥಳಕ್ಕೆ ಆಗಮಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296  

Read More