Subscribe to Updates
Get the latest creative news from FooBar about art, design and business.
- ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ: ನಿವೃತ್ತಿ ಅಂಚಿನಲ್ಲಿರುವ ಮುಖ್ಯೋಪಾಧ್ಯಾಯ ಅರೆಸ್ಟ್
- ನಾಳೆ ದೆಹಲಿಗೆ ಸಿಎಂ ಸಿದ್ದರಾಮಯ್ಯ ಭೇಟಿ; ನಾಯಕತ್ವ ಬದಲಾವಣೆ ಚರ್ಚೆಗಳ ನಡುವೆ ಹೈಕಮಾಂಡ್ ಬುಲಾವ್
- ಸೇಡು ತೀರಿಸಿಕೊಳ್ಳಲು ವರ್ಷದ ಬಳಿಕ ಅದೇ ಅಪ್ರಾಪ್ತೆ ಮೇಲೆ ಮತ್ತೆ ಲೈಂಗಿಕ ದೌರ್ಜನ್ಯ–ಇಬ್ಬರು ಆರೋಪಿಗಳ ಬಂಧನ
- ಭಟ್ಕಳ: ಕಪ್ಪೆಚಿಪ್ಪು ಸಂಗ್ರಹಿಸಲು ಹೋಗಿ ನೀರಲ್ಲಿ ಮುಳುಗಿ 11 ಮಂದಿ ಸಾವು!
- ಪ್ರೀತಿ ಹೆಸರಲ್ಲಿ ಅಪ್ರಾಪ್ತ ವಯಸ್ಸಿನ ಬಾಲಕಿಗೆ ಲೈಂಗಿಕ ದೌರ್ಜನ್ಯ: ಆರೋಪಿ ವಿರುದ್ಧ ಪೋಕ್ಸೋ ಕೇಸ್ ದಾಖಲು
- ಬಾಲಕನ ಬಲಿ ಪಡೆದಿದ್ದ ಚಿರತೆ ಕೊನೆಗೂ ಸೆರೆ: 14 ದಿನಗಳ ಕಾರ್ಯಾಚರಣೆ ಬಳಿಕ ಸ್ಥಳೀಯರು ನಿಟ್ಟುಸಿರು
- ದಿಢೀರ್ ಹವಾಮಾನ ಬದಲಾವಣೆಗೆ AI ಡೇಟಾ ಸೆಂಟರ್ ಕಾರಣ ಆಗ್ತಾ ಇದೆಯೇ?
- ಗೃಹಲಕ್ಷ್ಮಿ, ಗೃಹಜ್ಯೋತಿ ಫಲಾನುಭವಿಗಳ ಪಟ್ಟಿ ಪರಿಷ್ಕರಣೆಗೆ ರಾಜ್ಯ ಸರ್ಕಾರ ನಿರ್ಧಾರ: ಅನರ್ಹರಿಗೆ ಕೋಕ್!
Author: admin
ಗದಗ: ಜಿಲ್ಲೆಯ ಗಜೇಂದ್ರಗಡ ತಾಲೂಕಿಮ ನರೇಗಲ್ ಪಟ್ಟಣದಲ್ಲಿ ಪ್ರೇಮಿಗಳಿಬ್ಬರು ಒಂದೇ ಮರಕ್ಕೆ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ನರೇಗಲ್ ಪಟ್ಟಣದ ಅಪ್ಪಣ್ಣ ಗೊರಕಿ(28), ಲಲಿತಾ ಹಲಗೇರಿ (21) ಆತ್ಮಹತ್ಯೆ ಮಾಡಿಕೊಂಡ ಪ್ರೇಮಿಗಳಾಗಿದ್ದಾರೆ. ಅಪ್ಪಣ್ಣ ಗೊರಕಿ ಹಾಗೂ ಲಲಿತಾ ನಡುವಿನ ಪ್ರೀತಿಗೆ ಮನೆಯವರ ಒಪ್ಪಿಗೆ ಇರಲಿಲ್ಲ ಎಂದು ತಿಳಿದು ಬಂದಿದೆ. ಮನೆಯವರ ಬಲವಂತಕ್ಕೆ ಲಲಿತಾ ಇದೇ ಏಪ್ರಿಲ್ 4 ರಂದು ಬೇರೆ ಯುವಕನೊಂದಿಗೆ ಮದುವೆಯಾಗಿದ್ದಳು. ಈ ಮದುವೆಯಿಂದ ಅಪ್ಪಣ್ಣ-ಲಲಿತಾ ಇಬ್ಬರು ಮನ ನೊಂದಿದ್ದರು. ಬೇರೊಬ್ಬನ ಜತೆಗೆ ಮದುವೆ ಆಗಿದ್ದರೂ, ಅಣ್ಣಪ್ಪನ ಗುಂಗಿನಲ್ಲೇ ಇದ್ದರು. ಅಪ್ಪಣ್ಣ-ಲಲಿತಾ ಇಬ್ಬರು ಮನನೊಂದು ಊರಿನ ಹೊರವಲಯದ ಖಾಲಿ ಜಾಗದಲ್ಲಿದ್ದ ಮರವೊಂದಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಬೆಳಗಿನ ಜಾವ ಗ್ರಾಮದ ಜನರು ಗದ್ದೆ ಕೆಲಸಕ್ಕೆ ಬಂದಾಗ ಘಟನೆ ಬೆಳಕಿಗೆ ಬಂದಿದ್ದು, ಕೂಡಲೇ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ನರೇಗಲ್ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡು…
ಸಾಂಸ್ಕೃತಿಕ ನಗರಿ ಮೈಸೂರಿನ ಪ್ರಮುಖ ಧಾರ್ಮಿಕ ಕೇಂದ್ರವಾದ ಸುತ್ತೂರು ಶ್ರೀಕ್ಷೇತ್ರಕ್ಕೆ ವಿಶಿಷ್ಟ ಆನೆಯೊಂದರ ಆಗಮನವಾಗಿದೆ. ಈ ಗಜರಾಜ ಇನ್ಮುಂದೆ ಸುತ್ತೂರು ಕ್ಷೇತ್ರದಲ್ಲಿ ನಡೆಯುವ ಎಲ್ಲ ಉತ್ಸವಾದಿಗಳಲ್ಲಿ ಪ್ರಮುಖ ಆಕರ್ಷಣೆಯ ಕೇಂದ್ರವಾಗಲಿದೆ. ಪೀಪಲ್ ಫಾರ್ ದಿ ಎಥಿಕಲ್ ಟ್ರೀಟ್ಮೆಂಟ್ ಆಫ್ ಅನಿಮಲ್ಸ್ ಇಂಡಿಯಾದವರು ಸುತ್ತೂರು ಶ್ರೀಮಠಕ್ಕೆ ನೀಡಿದ ರೋಬೋಟಿಕ್ ಆನೆ ಆಗಿದೆ. ಸುಮಾರು 10 ಅಡಿ ಎತ್ತರದ ಈ ಆನೆಯನ್ನು ಉಡುಗೊರೆಯಾಗಿ ನೀಡಲಾಗಿದೆ. ರೋಬೋಟಿಕ್ ಆನೆಗೆ ಶಿವ ಎಂದು ನಾಮಕರಣ ಮಾಡಲಾಗಿದೆ. ಕೇರಳದ ಕಲಾವಿದ ಪ್ರಶಾಂತ್ ಎನ್ನುವವರು ಈ ರೋಬೋಟಿಕ್ ಆನೆಯನ್ನು ತಯಾರಿಸಿದ್ದಾರೆ. ನಿಜವಾದ ಆನೆಗಳನ್ನು ಸಾಕುವಂತಿಲ್ಲ ಎಂಬ ಕಾನೂನು ಇರುವುದರಿಂದ ಈ ಒಂದು ಎಲೆಕ್ಟ್ರಿಕಲ್ಸ್ ರೋಬೋ ಆನೆಯನ್ನು ಇಟ್ಟುಕೊಂಡು ಇನ್ನು ಮುಂದೆ ಸುತ್ತೂರು ಮಠದಲ್ಲಿ ಉತ್ಸವ ನಡೆಸಲು ಮುಂದಾಗಿದೆ. ಈ ರೋಬೋಟಿಕ್ ಶಿವ ಆನೆ ತನ್ನ ಕಿವಿಗಳನ್ನು ನಿಜವಾದ ಆನೆಗಳ ರೀತಿ ಅಲ್ಲಾಡಿಸುತ್ತದೆ, ಕಣ್ಣು ಮಿಟುಕಿಸುತ್ತದೆ, ಕತ್ತು ಅಲ್ಲಾಡಿಸುತ್ತದೆ, ಸೊಂಡಿಲನ್ನು ಮೇಲೆ ಎತ್ತಿ ಆಶೀರ್ವದಿಸುತ್ತದೆ. ಇದಲ್ಲದೇ ಆನೆ ಮೇಲೆ ಅಂಬಾರಿ ಮಾದರಿಯಲ್ಲಿ…
ಕಾಂಗ್ರೆಸ್ ಅಭ್ಯರ್ಥಿ ಪ್ರಚಾರದ ವೇಳೆ ಬಾಡೂಟ ಆಯೋಜನೆ ಮಾಡಿದ್ದು, ಫ್ಲೈಯಿಂಗ್ ಸ್ಕ್ವಾಡ್ ತಂಡ ದಾಳಿ ನಡೆಸಿದೆ. ದಾಳಿ ಬಳಿಕ ತಂಡವು ಬಾಡೂಟವನ್ನು ವಶಕ್ಕೆ ಪಡೆದು ನಾಶ ಮಾಡಿದೆ ಎನ್ನಲಾಗಿದೆ. ಹಾಸನ ಜಿಲ್ಲೆ ಹೊಳೆನರಸೀಪುರ ತಾಲೂಕಿನ ಕೋಡಿಹಳ್ಳಿ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಎಚ್.ಡಿ. ರೇವಣ್ಣ ಅವರ ಕುಮ್ಮಕ್ಕಿನಿಂದ ದಾಳಿ ಮಾಡಿದ್ದಾರೆ ಎಂದು ಗ್ರಾಮಸ್ಥರು ಆರೋಪ ಮಾಡಿದ್ದಾರೆ ಕಾಂಗ್ರೆಸ್ ಅಭ್ಯರ್ಥಿ ಶ್ರೇಯಸ್ ಪಟೇಲ್ ಕೋಡಿಹಳ್ಳಿ ಗ್ರಾಮಕ್ಕೆ ಚುನಾವಣೆ ಪ್ರಚಾರಕ್ಕೆ ಆಗಮಿಸುವವರಿದ್ದರು. ಈ ಹಿನ್ನೆಲೆಯಲ್ಲಿ ಕಾಂಗ್ರೆಸ್ ಮುಖಂಡರು ಪ್ರಚಾರ ಸಭೆಗೆ ಬರುವವರಿಗೆ ಬಾಡೂಟ ವ್ಯವಸ್ಥೆ ಮಾಡಿದ್ದರು. ಆದರೆ ಈ ವಿಚಾರ ತಿಳಿದು ಎಫ್ ಎಸ್ ಟಿ ತಂಡ ಗ್ರಾಮಕ್ಕೆ ಭೇಟಿ ನೀಡಿದೆ. ಅಲ್ಲದೇ ಪರಿಶೀಲಿಸಿದಾಗ ಬಾಡೂಟ ವ್ಯವಸ್ಥೆ ಮಾಡಿರುವುದು ಬೆಳಕಿಗೆ ಬಂದಿದೆ. ನೀತಿ ಸಂಹಿತೆ ಉಲ್ಲಂಘನೆ ಹಿನ್ನಲೆಯಲ್ಲಿ ಎಫ್ಎಸ್ಟಿ ತಂಡವು ನಾನ್ ವೆಜ್ ಊಟವನ್ನು ವಶಕ್ಕೆ ಪಡೆದಿದೆ. ನಂತರ ರಸ್ತೆಗೆ ಬದಿಗೆ ಸುರಿದು ನಾಶ ಮಾಡಿ ಬಳಿಕ ಪೊಲೀಸ್ ಠಾಣೆಗೆ ತಂಡ ದೂರು ನೀಡಿದೆ.…
ತಮಿಳುನಾಡು: ಲೋಕಸಭಾ ಚುನಾವಣಾ ಕಣ ದಿನದಿಂದ ದಿನಕ್ಕೆ ರಂಗೇರುತ್ತಿದೆ. ಅಭ್ಯರ್ಥಿಗಳು ರೋಡ್ ಶೋಗಳ ಮೂಲಕ, ದೊಡ್ಡ ಸಮಾವೇಶಗಳ ಮೂಲಕ ಮತಯಾಚನೆ ಮಾಡುತ್ತಿದ್ದಾರೆ. ಆದರೆ ತಮಿಳುನಾಡಿನ ತಿರುಚಿರಾಪಳ್ಳಿಯ ಅಭ್ಯರ್ಥಿಯೊಬ್ಬರು ಮಾರುಕಟ್ಟೆಯಲ್ಲಿ ತರಕಾರಿ ಮಾರಾಟ ಮಾಡಿ ಜನರಲ್ಲಿ ಮತಯಾಚನೆ ಮಾಡುತ್ತಿದ್ದಾರೆ. ತಿರುಚಿರಾಪಳ್ಳಿ ಮೂಲದ ಎಸ್ ದಾಮೋದರನ್ (62) ಈ ಬಾರಿಯ ಚುನಾವಣೆಯಲ್ಲಿ ಗ್ಯಾಸ್ ಸ್ಟೌವ್ ಚಿಹ್ನೆಯಡಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದು, ನಗರದ ಗಾಂಧಿ ಮಾರುಕಟ್ಟೆಯಲ್ಲಿ ಜನರು ಮತ್ತು ತರಕಾರಿ ಮಾರಾಟಗಾರರಿಂದ ಮತ ಯಾಚಿಸಿದರು. “ನಾನು ತಿರುಚ್ಚಿ ಕ್ಷೇತ್ರದ ಸ್ವತಂತ್ರ ಅಭ್ಯರ್ಥಿ. ನಾನು ಈ ಮಣ್ಣಿನ ಮಗ. ನಾನು ತಿರುಚ್ಚಿ ನಗರಕ್ಕೆ ಸೇರಿದವನು. ನಾನು ನೈರ್ಮಲ್ಯ ಕೇಂದ್ರದಲ್ಲಿ ಸಹಾಯಕ ಸೇವಾ ಸ್ವಯಂಸೇವಕನಾಗಿ 40 ವರ್ಷಗಳಿಗೂ ಹೆಚ್ಚು ಕಾಲ ಕೆಲಸ ಮಾಡುತ್ತಿದ್ದೇನೆ. ನಾನು ನನ್ನ ವೃತ್ತಿಜೀವನವನ್ನು ನನ್ನ 21ನೇ ವಯಸ್ಸಿನಲ್ಲಿ ಪ್ರಾರಂಭಿಸಿದೆ. ಈಗ ನನಗೆ 62 ವರ್ಷ. 60 ನೇ ವಯಸ್ಸಿನಲ್ಲಿ, ನೈರ್ಮಲ್ಯ ಕ್ಷೇತ್ರದಲ್ಲಿ ನನ್ನ ಕೆಲಸಕ್ಕಾಗಿ ನಾನು ಅಂದಿನ ಭಾರತದ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರಿಂದ…
ಯುವಕ ಯುವತಿ ಇಬ್ಬರು ವಿಮಾನದಲ್ಲಿಯೇ ನಾಲ್ಕು ತಾಸು ರೊಮ್ಯಾನ್ಸ್ ಮಾಡಿದ ಘಟನೆಯೊಂದು ನಡೆದಿದ್ದು, ಈ ಫೋಟೋಗಳು ಈಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿವೆ. ಇತ್ತೀಚೆಗೆ ಯುವ ಜೋಡಿಗಳು ಸಾರ್ವಜನಿಕ ಸ್ಥಳದಲ್ಲೇ ಅಸಭ್ಯವಾಗಿ ವರ್ತಿಸುವ ವೈರಲ್ ವೀಡಿಯೋಗಳು ಸುದ್ದಿಯಲ್ಲಿ ಆಗಾಗ ಬರುತ್ತಲೇ ಇರುತ್ತದೆ. ಯಾರು ಏನೇ ಅಂದರೂ ಅಳುಕಿಲ್ಲದೇ, ಪರಸ್ಪರ ತಬ್ಬಿಕೊಳ್ಳುವುದು, ಮುದ್ದಾಡುವುದು ಇಂತಹ ಅಸಭ್ಯ ವರ್ತನೆ ಸಾರ್ವಜನಿಕ ಸ್ಥಳದಲ್ಲಿ ಹೆಚ್ಚುತ್ತಿದೆ. ಇದೀಗ ಯುವಕ ಯುವತಿ ಇಬ್ಬರು ವಿಮಾನದಲ್ಲಿಯೇ ನಾಲ್ಕು ತಾಸು ರೊಮ್ಯಾನ್ಸ್ ಮಾಡಿದ ಘಟನೆಯೊಂದು ನಡೆದಿದೆ. ಈ ಫೋಟೋಗಳು ಈಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಇದಕ್ಕೆ ಜನರು ಆಕ್ರೋಶ ಕೂಡಾ ವ್ಯಕ್ತಪಡಿಸಿದ್ದಾರೆ. ವಿಮಾನಯಾನದ ಪ್ರಯಾಣದಲ್ಲಿ ಈ ಜೋಡಿ ಹಲವು ರೀತಿಯ ಸರಸ ಸಲ್ಲಾಪದಲ್ಲಿ ತೊಡಗಿದೆ. ವಿಮಾನದಲ್ಲಿರುವ ಪ್ರಯಾಣಿಕರು ಏನೆಂದುಕೊಳ್ಳುತ್ತಾರೋ ಎನ್ನುವ ಪರಿವೆ ಅವರಿಗಿರಲಿಲ್ಲ. ಹಾಗಾಗಿ ಈ ಜೋಡಿಯು ಸರಸದಲ್ಲಿಯೇ ಪ್ರಯಾಣ ಮುಗಿಸಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ…
ಮಾಲ್ಡೀವ್ಸ್ ಇದೀಗ ಭಾರತೀಯರನ್ನು ಸೆಳೆಯಲು ಭಾರತದಲ್ಲಿ ರೋಡ್ ಶೋ ನಡೆಸಲು ಸಿದ್ಧತೆ ನಡೆಸಿದೆ ಎನ್ನಲಾಗಿದೆ. ಪ್ರಧಾನಿ ನರೇಂದ್ರ ಮೋದಿ ಹಾಗೂ ಲಕ್ಷದ್ವೀಪದ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿ ಭಾರತೀಯರ ಕೆಂಗಣ್ಣಿಗೆ ಗುರಿಯಾಗಿತ್ತು ಮಾಲ್ಡೀವ್ಸ್. ಮಾಲ್ಡೀವ್ಸ್ ನ ಸಚಿವರು “ಲಕ್ಷದ್ವೀಪವನ್ನು ಅಭಿವೃದ್ಧಿ ಮಾಡಿದಾಕ್ಷಣ ಅದು ಮಾಲ್ಡೀವ್ಸ್ ಆಗುವುದಿಲ್ಲ” ಎಂದು ಹೇಳಿಕೆ ನೀಡಿದ್ದರು. ಮಾಲ್ಡೀವ್ಸ್ ನ ಕೆಲವು ಸಚಿವರು ಭಾರತದ ವಿರುದ್ಧ ಅವಹೇಳನಕಾರಿ ಹೇಳಿಕೆಗಳನ್ನು ನೀಡಿದ್ದರು. ಇದಾದ ಬಳಿಕ ಭಾರತದ ಹಲವು ಮಂದಿ ಮಾಲ್ಡೀವ್ಸ್ ಗೆ ಹೋಗಬೇಕೆಂದುಕೊಂಡವರು ಕೂಡ ತಮ್ಮ ತೀರ್ಮಾನ ಬದಲಾಯಿಸಿ ಲಕ್ಷದ್ವೀಪಕ್ಕೆ ತೆರಳಿದ್ದರು. ಮಾಲ್ಡೀವ್ಸ್ ಗೆ ಭೇಟಿ ನೀಡುವವರ ಸಂಖ್ಯೆಯಲ್ಲಿ ಭಾರತದವರೇ ಹೆಚ್ಚಿನವರಾಗಿದ್ದು, ಪ್ರವಾಸೋದ್ಯಮವನ್ನೇ ಮಾಲ್ಡೀವ್ಸ್ ನಂಬಿಕೊಂಡಿತ್ತು. ಹಾಗಾಗಿ ಪ್ರವಾಸಿಗರಿಲ್ಲದೆ ಹೊಡೆತ ಬಿದ್ದಿರುವ ಹಿನ್ನೆಲೆಯಲ್ಲಿ ಭಾರತೀಯರನ್ನು ಸೆಳೆಯಲು ಮುಂದಾಗಿದೆ. ಮಾಲ್ಡೀವ್ಸ್ ಅಸೋಸಿಯೇಷನ್ ಆಫ್ ಟ್ರಾವೆಲ್ ಏಜೆಂಟ್ಸ್ ಆ್ಯಂಡ್ ಟೂರ್ ಆಪರೇಟರ್ಸ್, ಪ್ರಮುಖ ಪ್ರವಾಸೋದ್ಯಮ ಸಂಸ್ಥೆಯು ಈ ಘೋಷಣೆ ಮಾಡಿದೆ. ಆದರೆ ಯಾವ ಯಾವ ನಗರಗಳಲ್ಲಿ ಮತ್ತು ಯಾವಾಗ ರೋಡ್ ಶೋ ನಡೆಯಲಿದೆ…
ಮಧ್ಯಪ್ರದೇಶ: ಆರು ವರ್ಷದ ಬಾಲಕ ಬೋರ್ ವೆಲ್ ಗೆ ಬಿದ್ದಿರುವ ಘಟನೆಯೊಂದು ಮಧ್ಯಪ್ರದೇಶದ ರೇವಾ ಜಿಲ್ಲೆಯಲ್ಲಿ ಶುಕ್ರವಾರ ನಡೆದಿದೆ. ಉತ್ತರ ಪ್ರದೇಶದ ಗಡಿ ಸಮೀಪದ ಮಾಣಿಕಾ ಗ್ರಾಮದಲ್ಲಿ ಮಧ್ಯಾಹ್ನ 3 ಗಂಟೆ ಸುಮಾರಿಗೆ ಬಾಲಕ ತೆರೆದ ಬೋರ್ ವೆಲ್ ಬಳಿ ಆಟವಾಡುತ್ತಿದ್ದಾಗ ಈ ಘಟನೆ ನಡೆದಿದೆ. ರೇವಾ ಜಿಲ್ಲಾಧಿಕಾರಿ ಪ್ರತಿಭಾ ಪಾಲ್ ಅವರು ಹೇಳಿರುವ ಪ್ರಕಾರ, ಮಗು ಸುಮಾರು 40 ಅಡಿ ಆಳದಲ್ಲಿ ಸಿಲುಕಿಕೊಂಡಿದೆ. ಘಟನೆಯ ನಂತರ, ರಾಜ್ಯ ವಿಪತ್ತು ತುರ್ತು ನಿರ್ವಹಣಾ ಪಡೆಯ ತಂಡವು ರಕ್ಷಣಾ ಕಾರ್ಯಾಚರಣೆಯನ್ನು ಪ್ರಾರಂಭಿಸಿದ್ದು, ವಾರಣಾಸಿಯಿಂದ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆಯನ್ನು ಕರೆಸಲಾಗಿದೆ. ಬೋರ್ ವೆಲ್ ಸುಮಾರು 70 ಅಡಿ ಆಳವಿದ್ದು, ಮಗುವನ್ನು ರಕ್ಷಿಸಲು ಸಮಾನಾಂತರ ಹೊಂಡವನ್ನು ತೋಡಲಾಗುತ್ತಿದೆ ಎಂದು ಹೇಳಿದ್ದಾರೆ. ಅಧಿಕಾರಿಗಳು ಪೈಪ್ ಮೂಲಕ ಆಮ್ಲಜನಕ ಪೂರೈಕೆ ಮಾಡುತ್ತಿದ್ದಾರೆ. ಹೆಚ್ಚುವರಿಯಾಗಿ, ಬಾಲಕನ ಸ್ಥಿತಿಯನ್ನು ಮೇಲ್ವಿಚಾರಣೆ ಮಾಡಲು ಸಿಸಿಟಿವಿ ಕ್ಯಾಮೆರಾವನ್ನು ಸಹ ಇಳಿಸಲಾಗಿದೆ. ಆದರೂ, ಕೆಲವು ಅಡಚಣೆಗಳಿಂದ ಕ್ಯಾಮೆರಾ ಬಾಲಕನನ್ನು ತಲುಪಲು ಸಾಧ್ಯವಾಗಲಿಲ್ಲ ಎಂದು ಹೆಚ್ಚುವರಿ…
ನವದೆಹಲಿ: ವೇಗವಾಗಿ ಬಂದ ಕಾರು, ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ ಒಂದೇ ಕುಟುಂಬದ ಮೂವರು ಸಾವನ್ನಪ್ಪಿದ ಘಟನೆ ದೆಹಲಿಯ ನೆರೆಯ ಗ್ರೇಟರ್ ನೋಯ್ಡಾದಲ್ಲಿ ನಡೆದಿದೆ. ಬೈಕ್ ನಲ್ಲಿದ್ದ ಮತ್ತೊಬ್ಬ ಮಹಿಳೆಗೆ ಗಂಭೀರ ಗಾಯಗಳಾಗಿವೆ. ಮೃತ ದುರ್ದೈವಿಗಳನ್ನು,ಸುರೇಂದ್ರ ಸಹೋದರಿಯರಾದ ಶೈಲಿ ಮತ್ತು ಅಂಶುಎಂದು ಗುರುತಿಸಲಾಗಿದೆ. ಸುರೇಂದ್ರ ಎಂಬಾತ ತನ್ನ ಸಹೋದರಿಯರೊಂದಿಗೆ ಮದುವೆ ಸಮಾರಂಭದಲ್ಲಿ ಪಾಲ್ಗೊಂಡು ತಡರಾತ್ರಿ ಮನೆಗೆ ಮರಳುತ್ತಿದ್ದಾಗ ಅಪಘಾತವಾಗಿದ್ದು, ವೇಗವಾಗಿ ಬಂದ ಕಾರೊಂದು ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದು ಗಾಯಾಳುಗಳ ಮೇಲೆ ಹರಿದು ಪರಾರಿಯಾಗಿದೆ. ವ್ಯಕ್ತಿ ಮತ್ತು ಆತನ ಸಹೋದರಿಯರು ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದು, ಪೊಲೀಸರು ಸ್ಥಳಕ್ಕಾಗಮಿಸಿ ಪರಿಶೀಲನೆ ನಡೆಸಿದ್ದಾರೆ. ಬೈಕ್ ಗೆ ಡಿಕ್ಕಿ ಹೊಡೆದ ವಾಹನವನ್ನು ಪೊಲೀಸರು ಇನ್ನೂಪತ್ತೆ ಹಚ್ಚಿಲ್ಲ. ವಾಹನವನ್ನು ಪತ್ತೆಹಚ್ಚಲು ಸಿಸಿಟಿವಿ ಕ್ಯಾಮೆರಾ ದೃಶ್ಯಗಳನ್ನು ಸ್ಕ್ಯಾನ್ ಮಾಡಲಾಗುತ್ತಿದೆ ಎಂದಿದ್ದಾರೆ ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ಏರ್ ಗನ್ ಜೊತೆ ಆಟವಾಡುವಾಗ ಮಿಸ್ ಫೈರ್ ಆಗಿ ಏಳು ವರ್ಷದ ಬಾಲಕ ಮೃತಪಟ್ಟಿರುವ ಘಟನೆ ಚಿಕ್ಕಮಗಳೂರು ತಾಲೂಕಿನ ಮಲ್ಲೇನಹಳ್ಳಿಯಲ್ಲಿ ವರದಿಯಾಗಿದೆ. ಮೃತ ಬಾಲಕನ್ನು ವಿಷ್ಣು (7) ಎಂಬ ಎಂದು ಗುರುತಿಸಲಾಗಿದೆ. ಮಲ್ಲೇನಹಳ್ಳಿ ಗ್ರಾಮದ ಹಕ್ಕಿಪಿಕ್ಕಿ ಜನಾಂಗದ ಕಾಲೋನಿಯಲ್ಲಿ ಘಟನೆ ನಡೆದಿದ್ದು, ಗ್ರಾಮಾಂತರ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮನೆಯಲ್ಲಿ ಏರ್ ಗನ್ ಇಟ್ಟಿದ್ದು, ಮಕ್ಕಳು ಆಟವಾಡು ಗನ್ ತಗೆದುಕೊಂಡ ಸಂದರ್ಭದಲ್ಲಿ ಮಿಸ್ ಫೈರ್ ಆಗಿ ಘಟನೆ ನಡೆದಿರಬಹುದು ಎಂದು ಅಂದಾಜಿಸಲಾಗಿದೆ. ಅಥವಾ ಬೇರೆ ಕಾರಣದಿಂದ ಬಂದೂಕಿನಿಂದ ಫೈರ್ ಆಗಿರಬಹುದೆಂದು ಹೇಳಲಾಗುತ್ತದೆ. ಒಟ್ಟಾರೆ ಮನೆಯವರ ನಿರ್ಲಕ್ಷ್ಯತನದಿಂದ ಬಾಲಕ ಮೃತಪಟ್ಟಿದ್ದು, ಮೃತ ಬಾಲಕನ ಸಂಬಂಧಿ ನೀಡಿರುವ ದೂರಿನ ಆಧಾರದ ಮೇಲೆ ದೂರು ದಾಖಲಾಗಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ಪಾವಗಡ: ಇಂದಿನಿಂದ ಚಿತ್ರದುರ್ಗ ಲೋಕಸಭಾ ಕ್ಷೇತ್ರದ ವ್ಯಾಪ್ತಿಯ, ಪಾವಗಡ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ, ವಿಶೇಷ ಚೇತನರಿಗೆ ಮತ್ತು 85 ವರ್ಷ ಮೇಲ್ಪಟ್ಟವರಿಗೆ ಹೋಂ ವೋಟಿಂಗ್ ನಡೆಸಲು ಶನಿವಾರ ಪಾವಗಡ ಪಟ್ಟಣದ ತಾಲೂಕು ಕಚೇರಿಯಿಂದ 7 ತಂಡಗಳು ತೆರಳಿವೆ. ಈ ಬಗ್ಗೆ ಮಾಹಿತಿ ಹಂಚಿಕೊಂಡ ತಹಶೀಲ್ದಾರ್ ಸಂತೋಷ್ ಕುಮಾರ್ ಅವರು, “ಪಾವಗಡ ತಾಲೂಕಿನಾದ್ಯಂತ ಮೂರು ದಿನಗಳ ಕಾಲ ಈ ಹೋಂ ಓಟಿಂಗ್ ನಡೆಯಲಿದ್ದು, ಒಟ್ಟು 7 ತಂಡಗಳನ್ನು ರಚಿಸಲಾಗಿದ್ದು, ಒಂದು ತಂಡದಲ್ಲಿ 6 ಜನ ಸಿಬ್ಬಂದಿ ಇರಲಿದ್ದಾರೆ. ಈಗಾಗಲೇ ಮತದಾನವು ಪ್ರಾರಂಭವಾಗಿದ್ದು, ವಿಶೇಷ ಚೇತನರು ಮತ್ತು 85 ವರ್ಷ ಮೇಲ್ಪಟ್ಟಿರುವ ವೃದ್ಧರು ಹರ್ಷವನ್ನು ವ್ಯಕ್ತಪಡಿಸಿ ಉತ್ಸುಕತೆಯಿಂದ ಮತದಾನ ಮಾಡುತ್ತಿದ್ದಾರೆ” ಎಂದು ಮಾಹಿತಿಯನ್ನು ಒದಗಿಸಿದ್ದಾರೆ. ಪಾವಗಡ ತಾಲೂಕಿನ ವೈ.ಎನ್. ಹೊಸಕೋಟೆ ಹೋಬಳಿಯ ವದನಕಲ್ಲು ಗ್ರಾಮದ ಮತಗಟ್ಟೆ ಸಂಖ್ಯೆ 42ರ ವ್ಯಾಪ್ತಿಯ ವೃದ್ಧರೊಬ್ಬರು, ತಮ್ಮ ಮನೆಯ ಬಳಿಯೇ ಮತದಾನವನ್ನು ಮಾಡಿ ಹರ್ಷವನ್ನು ವ್ಯಕ್ತಪಡಿಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್…