Subscribe to Updates
Get the latest creative news from FooBar about art, design and business.
- ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ: ನಿವೃತ್ತಿ ಅಂಚಿನಲ್ಲಿರುವ ಮುಖ್ಯೋಪಾಧ್ಯಾಯ ಅರೆಸ್ಟ್
- ನಾಳೆ ದೆಹಲಿಗೆ ಸಿಎಂ ಸಿದ್ದರಾಮಯ್ಯ ಭೇಟಿ; ನಾಯಕತ್ವ ಬದಲಾವಣೆ ಚರ್ಚೆಗಳ ನಡುವೆ ಹೈಕಮಾಂಡ್ ಬುಲಾವ್
- ಸೇಡು ತೀರಿಸಿಕೊಳ್ಳಲು ವರ್ಷದ ಬಳಿಕ ಅದೇ ಅಪ್ರಾಪ್ತೆ ಮೇಲೆ ಮತ್ತೆ ಲೈಂಗಿಕ ದೌರ್ಜನ್ಯ–ಇಬ್ಬರು ಆರೋಪಿಗಳ ಬಂಧನ
- ಭಟ್ಕಳ: ಕಪ್ಪೆಚಿಪ್ಪು ಸಂಗ್ರಹಿಸಲು ಹೋಗಿ ನೀರಲ್ಲಿ ಮುಳುಗಿ 11 ಮಂದಿ ಸಾವು!
- ಪ್ರೀತಿ ಹೆಸರಲ್ಲಿ ಅಪ್ರಾಪ್ತ ವಯಸ್ಸಿನ ಬಾಲಕಿಗೆ ಲೈಂಗಿಕ ದೌರ್ಜನ್ಯ: ಆರೋಪಿ ವಿರುದ್ಧ ಪೋಕ್ಸೋ ಕೇಸ್ ದಾಖಲು
- ಬಾಲಕನ ಬಲಿ ಪಡೆದಿದ್ದ ಚಿರತೆ ಕೊನೆಗೂ ಸೆರೆ: 14 ದಿನಗಳ ಕಾರ್ಯಾಚರಣೆ ಬಳಿಕ ಸ್ಥಳೀಯರು ನಿಟ್ಟುಸಿರು
- ದಿಢೀರ್ ಹವಾಮಾನ ಬದಲಾವಣೆಗೆ AI ಡೇಟಾ ಸೆಂಟರ್ ಕಾರಣ ಆಗ್ತಾ ಇದೆಯೇ?
- ಗೃಹಲಕ್ಷ್ಮಿ, ಗೃಹಜ್ಯೋತಿ ಫಲಾನುಭವಿಗಳ ಪಟ್ಟಿ ಪರಿಷ್ಕರಣೆಗೆ ರಾಜ್ಯ ಸರ್ಕಾರ ನಿರ್ಧಾರ: ಅನರ್ಹರಿಗೆ ಕೋಕ್!
Author: admin
ಯುಐಡಿಎಐ ಇ ಲರ್ನಿಂಗ್ ಪೋರ್ಟಲ್ ಅನ್ನು ಭಾರತೀಯ ವಿಶಿಷ್ಟ ಗುರುತಿನ ಪ್ರಾಧಿಕಾರವು ಪ್ರಾರಂಭಿಸಿದೆ. ಈ ಪೋರ್ಟಲ್ ಮೂಲಕ, ಆಧಾರ್ ಕಾರ್ಡ್ ಸಂಬಂಧಿತ ಸೇವೆಗಳನ್ನು ಒದಗಿಸಲು ಬಯಸುವ ದೇಶದ ನಾಗರಿಕರಿಗೆ, ಆಧಾರ್ ಸೇವೆಗಳಿಗೆ ಸಂಬಂಧಿಸಿದ ತರಬೇತಿಯನ್ನು ನೀಡಲಾಗುತ್ತದೆ. ಈ ಪೋರ್ಟಲ್ ಮೂಲಕ ಮೂಲ ಸೇವಾ ಕೇಂದ್ರವನ್ನು ತೆರೆಯಲು ಸಹ ಅರ್ಜಿ ಸಲ್ಲಿಸಬಹುದು. ಹೇಗೆ ಎಂದು ಕಂಡುಹಿಡಿಯೋಣ. ಮನೆಯಲ್ಲಿ ಮಾಹಿತಿ: UIDAI ಯ ಇ-ಲರ್ನಿಂಗ್ ಪೋರ್ಟಲ್ ಮೂಲಕ, ದೇಶದ ನಾಗರಿಕರು ಆಧಾರ್ ಕಾರ್ಡ್ ನೋಂದಣಿ ಮತ್ತು ಎಲ್ಲಾ ಆಧಾರ್ ಕಾರ್ಡ್-ಸಂಬಂಧಿತ ಕಾರ್ಯಗಳ ಮಾಹಿತಿಯನ್ನು ತಮ್ಮ ಮನೆಯ ಸೌಕರ್ಯದಿಂದ ಪಡೆಯಬಹುದು. ಪೋರ್ಟಲ್ ನಲ್ಲಿ ಲಭ್ಯವಿರುವ ಕೋರ್ಸ್ಗಳನ್ನು ಮಾಡುವ ಮೂಲಕ ಈ ಮಾಹಿತಿಯನ್ನು ಪಡೆಯಬಹುದು. ಕೋರ್ಸ್ ಮುಗಿದ ನಂತರ, ಪರೀಕ್ಷೆ ಇರುತ್ತದೆ. ಇದರಲ್ಲಿ ಭಾಗವಹಿಸುವ ಮೂಲಕ ನೀವು ಈ ಪೋರ್ಟಲ್ ಮೂಲಕ ಪ್ರಮಾಣಪತ್ರವನ್ನು ಸಹ ಪಡೆಯಬಹುದು. ಈ ಪೋರ್ಟಲ್ ಆಧಾರ್ ಕಾರ್ಡ್ ಪ್ರಮಾಣಪತ್ರವನ್ನು ಸಹ ಒದಗಿಸುತ್ತದೆ. ನೀವು ಬೇಸ್ ಆಪರೇಟರ್, ಬೇಸ್ ಸೂಪರ್ ವೈಸರ್, ಸೂಪರ್ ವೈಸರ್…
ಟ್ರಾಫಿಕ್ ಜಂಕ್ಷನ್ ಗಳಲ್ಲಿ ತೃತೀಯಲಿಂಗಿಗಳು ಪ್ರಯಾಣಿಕರಿಂದ ಬಲವಂತವಾಗಿ ಹಣ ಪಡೆಯುವುದನ್ನು ನಿಷೇಧಿಸಿ ಆದೇಶ ಹೊರಡಿಸಿದ್ದಾರೆ. ನಡು ರಸ್ತೆಯಲ್ಲಿ, ಟ್ರಾಫಿಕ್ ನಲ್ಲಿ ಮಂಗಳಮುಖಿಯರು ಪ್ರಯಾಣಿಕರೊಂದಿಗೆ ಹಣವನ್ನು ಕೇಳುತ್ತಾ, ಭಿಕ್ಷೆ ಬೇಡುತ್ತಾ ಬರುತ್ತಾರೆ. ಹಣ ಕೊಡಲಿಲ್ಲ ಎಂದರೆ ಕೆಲವರು ಅಸಭ್ಯವಾಗಿ ವರ್ತಿಸಿ ರಂಪಾಟ ಮಾಡುತ್ತಾರೆ. ಒಮ್ಮೊಮ್ಮೆ ಎಲ್ಲರ ಮುಂದೆ ಬಾಯಿಗೆ ಬಂದಂತೆ ಮಾತನಾಡಿ, ಪುರುಷರ ಮರ್ಯಾದೆಯನ್ನು ಮೂರು ಕಾಸಿಗೆ ಹರಾಜು ಹಾಕಿ, ಮುಜುಗರವನ್ನುಂಟುಮಾಡುತ್ತಾರೆ. ಆದರೆ ಇದನ್ನು ಗಂಭೀರವಾಗಿ ಪರಿಗಣಿಸಿರುವ ಮಹಾರಾಷ್ಟ್ರದ ಪುಣೆ ಪೋಲೀಸರು ಇದಕ್ಕೆಲ್ಲ ಬ್ರೇಕ್ ಹಾಕಲು ಮುಂದಾಗಿದ್ದಾರೆ. ಮಂಗಳಮುಖಿಯರಲ್ಲಿ ಹೆಚ್ಚಿನವರು ಪ್ರೀತಿ, ಕರುಣೆ, ವಾತ್ಸಲ್ಯ ಹೊಂದಿರುತ್ತಾರೆ. ಜನರ ಕಷ್ಟಗಳನ್ನು ಅರ್ಥೈಸಿಕೊಳ್ಳುತ್ತಾರೆ. ಹಣವಿಲ್ಲ ಎಂದರೆ ಕೆಲವೊಮ್ಮೆ ತಾವೇ ಹಣ ನೀಡಿ ಮಾತೃಹೃದಯಿಗಳಾಗುತ್ತಾರೆ. ಆದರೆ ಕೆಲವರು ಮಾಡುವ ರಂಪಾಟದಿಂದ ಇಂತಹ ಒಳ್ಳೆಯವರಿಗೂ ಕೆಟ್ಟ ಹೆಸರು ಬರುತ್ತದೆ. ಹೀಗಾಗಿ ಇದರ ತಾಪತ್ರಯವೇ ಬೇಡ ಎಂದು ನಿರ್ಧಾರ ಮಾಡಿರುವ ಮಹಾರಾಷ್ಟ್ರದ ಪುಣೆ ಪೊಲೀಸರು ತೃತೀಯ ಲಿಂಗಿಗಳು ಭಿಕ್ಷೆ ಬೇಡುವುದನ್ನು ಬ್ಯಾನ್ ಮಾಡಿದ್ದಾರೆ. ಪುಣೆ ಪೊಲೀಸ್ ಕಮಿಷನರ್ ಅಮಿತೇಶ್ ಕುಮಾರ್…
ದಂಗಲ್ ಸಿನಿಮಾ ಖ್ಯಾತಿಯ ನಿತೀಶ್ ತಿವಾರಿ ಅವರು ಬಾಲಿವುಡ್ ನಲ್ಲಿ ʼರಾಮಾಯಣʼ ಸಿನಿಮಾ ಮಾಡುವ ವಿಚಾರ ಎಲ್ಲರಿಗೂ ತಿಳಿದೇ ಇದೆ. ದಂಗಲ್ ಸಿನಿಮಾ ಖ್ಯಾತಿಯ ನಿತೀಶ್ ತಿವಾರಿ ಅವರು ಬಾಲಿವುಡ್ ನಲ್ಲಿ ʼರಾಮಾಯಣʼ ಸಿನಿಮಾ ಮಾಡುವ ವಿಚಾರ ಎಲ್ಲರಿಗೂ ತಿಳಿದೇ ಇದೆ. ಇದರಲ್ಲಿ ರಣಬೀರ್ ಕಪೂರ್, ಸಾಯಿಪಲ್ಲವಿ ಅವರು ರಾಮ-ಸೀತೆ ಪಾತ್ರ ಮಾಡುತ್ತಿದ್ದಾರೆ. ಈ ಸಿನಿಮಾಗೆ ರಾಕಿಂಗ್ ಸ್ಟಾರ್ ಯಶ್ ಅವರು ಹಣ ಹಾಕಲಿದ್ದಾರೆ ಎಂಬ ವಿಚಾರ ಬೆಳಕಿಗೆ ಬಂದಿದೆ. ಬಹುಕೋಟಿ ವೆಚ್ಚದ ಈ ಸಿನಿಮಾಗೆ ಯಶ್ ಕೂಡಾ ನಿರ್ಮಾಪಕ ಎಂದು ಅಧಿಕೃತ ಘೋಷಣೆ ಆಗಿದೆ. ಹನುಮಂತನಾಗಿ ಸನ್ನಿ ಡಿಯೋಲ್ ನಟಿಸಲಿದ್ದಾರೆ. ಕುಂಭಕರ್ಣನ ಪಾತ್ರಕ್ಕೆ ಬಾಬಿಡಿಯೋಲ್ ಅವರನ್ನು ಸಂಪರ್ಕ ಮಾಡಲಾಗಿದೆ ಎಂದು ವರದಿಯೊಂದು ತಿಳಿಸಿದೆ. ವಿಜಯ್ ಸೇತುಪತಿ ರಾವಣನ ಕಿರಿಯ ಸಹೋದರ ವಿಭೀಷಣನ ಪಾತ್ರವನ್ನು ಮಾಡಬಹುದು ಎಂದು ಹೇಳಲಾಗಿದೆ. ಎಪ್ರಿಲ್ 12ರಂದು ಯಶ್ ಅವರ ನಿರ್ಮಾಣ ಸಂಸ್ಥೆ ಮಾನ್ಸ್ಟರ್ ಮೈಂಡ್ ಕ್ರಿಯೇಷನ್ಸ್ ನಮಿತ್ ಮಲ್ಹೋತ್ರಾ ಅವರ ಪ್ರೈಮ್ ಫೋಕಸ್ ಜೊತೆ ‘ರಾಮಾಯಣʼ…
ಕರ್ನಾಟಕ ರಾಜ್ಯ ಮಾನವ ಹಕ್ಕುಗಳ ಆಯೋಗದ ಸದಸ್ಯರಾಗಿದ್ದ ಸಂಪಾಜೆಯ ಡಾ.ಟಿ. ಶ್ಯಾಮ್ ಭಟ್ ಅವರನ್ನು ಆಯೋಗದ ಹಂಗಾಮಿ ಅಧ್ಯಕ್ಷರಾಗಿ ನೇಮಕಗೊಳಿಸಿ ಸರ್ಕಾರ ಆದೇಶ ಹೊರಡಿಸಿದೆ. ಇವರು ಜಿಲ್ಲಾಧಿಕಾರಿ, ಸಾರಿಗೆ ಇಲಾಖೆ ಆಯುಕ್ತರು, ಧಾರ್ಮಿಕ ದತ್ತಿ ಇಲಾಖೆ ಆಯುಕ್ತರು, ಕರ್ನಾಟಕ ಲೋಕಸೇವಾ ಆಯುಕ್ತರು ಮೊದಲಾದ ಉನ್ನತ ಹುದ್ದೆಗಳನ್ನು ಅಲಂಕರಿಸಿದ ಶ್ಯಾಮ್ ಭಟ್ಟರ ಕಲಾಪ್ರೀತಿ ಅನನ್ಯವಾದದ್ದು. ತನ್ನ ಕರ್ತವ್ಯದ ಒಂದು ಭಾಗವೆಂದೇ ಭಾವಿಸಿದ್ದಾರೆ. ಡಾ.ಕೀಲಾರು ಗೋಪಾಲಕೃಷ್ಣಯ್ಯ ಪ್ರತಿಷ್ಠಾನ ಮತ್ತು ಸಂಪಾಜೆ ಯಕ್ಷೋತ್ಸವದ ಮುಖಾಂತರ ಅವರು ನಡೆಸಿದ ಕಲಾಸೇವೆ ಅವಿಸ್ಮರಣೀಯ. ಮಾನವ ಹಕ್ಕುಗಳ ಆಯೋಗದ ನೂತನ ಅಧ್ಯಕ್ಷರ ಆಯ್ಕೆಯಾಗುವ ತನಕ ಡಾ.ಟಿ. ಶ್ಯಾಮ್ ಭಟ್ ಅವರು ಹಂಗಾಮಿ ಅಧ್ಯಕ್ಷರಾಗಿ ಕರ್ತವ್ಯ ನಿರ್ವಹಿಸಲಿದ್ದಾರೆ ಎಂದು ವರದಿ ತಿಳಿಸಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ತುಮಕೂರು: ಚಲಿಸುತ್ತಿದ್ದ ಕಾರಿನಲ್ಲಿ ಆಕಸ್ಮಿಕ ಬೆಂಕಿ ಕಾಣಿಸಿಕೊಂಡು ಕೆಲಹೊತ್ತಿನಲ್ಲೇ ಸುಟ್ಟು ಕರಕಲಾದ ಘಟನೆ ತುಮಕೂರು ಜಿಲ್ಲೆ ಶಿರಾ ಹೊರವಲಯಲ್ಲಿ ನಡೆದಿದೆ. ರಸ್ತೆಯ ಪೆಟ್ರೋಲ್ ಬಂಕ್ವೊಂದರ ಮುಂಭಾಗ ಶುಕ್ರವಾರ ಮಧ್ಯಾಹ್ನ ಜರುಗಿದೆ. ಕಾರಿನಲ್ಲಿ ತಾಂತ್ರಿಕ ದೋಷದಿಂದ ಬೆಂಕಿ ಕಾಣಿಸಿಕೊಂಡಿದ್ದು, ಇದನ್ನು ಗಮನಿಸಿ ಕೂಡಲೇ ಕಾರಿನಲ್ಲಿ ಪ್ರಯಾಣಿಸುತ್ತಿದ್ದವರು ಹೊರಗಡೆ ಬಂದಿದ್ದಾರೆ. ಇದಾದ ಬಳಿಕ ಕೆಲ ಹೊತ್ತಿನಲ್ಲೇ ಕಾರು ಸುಟ್ಟು ಕರಕಲಾಗಿದೆ ಎನ್ನಲಾಗಿದೆ. ಘಟನೆಯ ಹಿನ್ನಲೆಯಲ್ಲಿ ಕೂಡಲೇ ಅಗ್ನಿಶಾಮಕ ಸಿಬ್ಬಂದಿ ಆಗಮಿಸಿ ಬೆಂಕಿ ನಂದಿಸಲು ಪ್ರಯತ್ನಿಸಿದ್ದು, ಅಷ್ಟರೊಳಗೆ ಕಾರು ಸಂಪೂರ್ಣ ಸುಟ್ಟು ಕರಕಲಾಗಿದೆ ಎಂದು ತಿಳಿದುಬಂದಿದೆ. ಕಾರು ಹೊತ್ತಿ ಉರಿದ ವಿಡಿಯೊ ಇದೀಗ ಸಾಮಾಜಿಕ ಜಾಲಗಳಲ್ಲಿ ವೈರಲ್ ಆಗಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ಪ್ರಧಾನಿ ನರೇಂದ್ರ ಮೋದಿ ಹಲವು ಬಾರಿ ಉತ್ತರ ಕರ್ನಾಟಕದ ಭಾಗಕ್ಕೆ ಹಲವು ಬಾರಿ ಭೇಟಿ ನೀಡಿದ್ದಾರೆ. ಆದರೆ ಅವರ ಕೊಡುಗೆ ಏನೂ ಇಲ್ಲ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಟೀಕಿಸಿದರು. ಶುಕ್ರವಾರ ಕಲಬುರಗಿಯಲ್ಲಿ ನಡೆದ ಬೃಹತ್ ಸಮಾವೇಶವನ್ನು ಉದ್ದೇಶಿಸಿ ಮಾತನಾಡಿದ ಅವರು, ಇಲ್ಲಿರುವ ಕಾರ್ಖಾನೆ, ಅಭಿವೃದ್ಧಿ ಯೋಜನೆಗಳನ್ನು ಪ್ರಧಾನಿ ಮೋದಿ ಸ್ಥಗಿತಗೊಳಿಸಿದ್ದಾರೆ ಎಂದು ಟೀಕಿಸಿದರು. ದೆಹಲಿಯಂತೆ ಇಲ್ಲಿಯೂ ಒಂದು ಏಮ್ಸ್ ನಿರ್ಮಿಸುವಂತೆ ನಾನು ಪ್ರಧಾನಿಯವರಿಗೆ ಕೇಳಿದ್ದೆ. ಆದರೆ ಪ್ರಧಾನಿಯವರು ನಿರಾಕರಿಸಿದರು. ಸ್ವತಃ ನಾನು ಇಲ್ಲಿ ಇಎಸ್ಐ ಆಸ್ಪತ್ರೆ ಮಾಡಿಸಿದ್ದೇನೆ. ಆದರೆ ಪ್ರಧಾನಿ ನರೇಂದ್ರ ಮೋದಿಯವರು ಒಂದೇ ಒಂದು ಕೆಲಸ ಹೈದ್ರಾಬಾದ್ ಕರ್ನಾಟಕಕ್ಕಾಗಲೀ, ಕಲ್ಯಾಣ ಕರ್ನಾಟಕಕ್ಕಾಗಲೀ ಮಾಡಿಲ್ಲ ಎಂದು ಹೇಳಿದರು. ನಾವು ಹೇಳಿದ್ದ ಐದು ಗ್ಯಾರೆಂಟಿ ಯೋಜನೆಗಳನ್ನು ನಾವು ನೀಡಿದ್ದೇವೆ. ಆದರೆ ಪ್ರಧಾನಿ ಮೋದಿ ಹೋದಲ್ಲಿ ಬಂದಲ್ಲಿ ಮೋದಿಜಿ ಗ್ಯಾರೆಂಟಿ ಎಂದು ಹೇಳಿಕೊಂಡು ತಿರುಗುತ್ತಿದ್ದಾರೆ. ನಾವು ನೀಡಿದ್ದ ಗ್ಯಾರೆಂಟಿಗಳು ಜನರನ್ನು ಮುಟ್ಟುತ್ತಿದೆ. ಆದರೆ ಪ್ರಧಾನಿ ಗ್ಯಾರೆಂಟಿ ಯಾವುದಾದರೂ ಜಾರಿಯಾಗಿದೆಯೇ ಎಂದು ಖರ್ಗೆ…
ಸೀಮೆ ಬದನೆಕಾಯಿ ತಿನ್ನಿ.. ಒಳ್ಳೆಯ ಆರೋಗ್ಯ ಪಡೆಯಿರಿ: ಸೀಮೆ ಬದನೆಕಾಯಿಯಲ್ಲಿರುವ ಫೈಟೊಕೆಮಿಕಲ್ ಗಳು ರಕ್ತದ ಹರಿವನ್ನು ಸುಧಾರಿಸುತ್ತದೆ ಮತ್ತು ರಕ್ತದೊತ್ತಡದ ಮಟ್ಟವನ್ನು ಕಡಿಮೆ ಮಾಡುತ್ತದೆ. ಸೀಮೆಬದನೆಕಾಯಿಯಲ್ಲಿ ಮೈರಿಸೆಟಿನ್ ಸೇರಿದಂತೆ ಉತ್ಕರ್ಷಣ ನಿರೋಧಕಗಳಲ್ಲಿ ಸಮೃದ್ಧವಾಗಿದ್ದು, ಇದು ಕೊಲೆಸ್ಟ್ರಾಲ್ ಮಟ್ಟವನ್ನು ಕಡಿಮೆ ಮಾಡಲು, ಉರಿಯೂತವನ್ನು ಕಡಿಮೆ ಮಾಡಲು ಮತ್ತು ಹೃದ್ರೋಗ ಮತ್ತು ಕ್ಯಾನ್ಸರ್ ನಂತಹ ಕೆಲವು ಕಾಯಿಲೆಗಳ ಅಭಿವೃದ್ಧಿ ಅಪಾಯವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ. ಬೆಳ್ಳುಳ್ಳಿಯಿಂದ ಇರೋ ಲಾಭ ಒಂದೆರೆಡಲ್ಲ! ಬೆಳ್ಳುಳ್ಳಿ ಸೇವನೆಯಿಂದ ಅಸ್ತಮಾ ದಾಳಿಗಳು ನಿಯಂತ್ರಣಕ್ಕೆ ಬರುತ್ತವೆ. ಪ್ರತಿದಿನ ರಾತ್ರಿ ಮಲಗುವ ಮುನ್ನ ಒಂದು ಲೋಟ ಹಾಲಿನೊಂದಿಗೆ ಮೂರು ಎಸಳು ಬೆಳ್ಳುಳ್ಳಿಯನ್ನು ಸೇವಿಸಿದರೆ ಅಸ್ತಮಾ ನಿವಾರಣೆಯಾಗುತ್ತದೆ. ಬೆಳ್ಳುಳ್ಳಿಯನ್ನು ಸೇವಿಸುವುದರಿಂದ ಕರುಳಿನ ಮತ್ತು ಹೊಟ್ಟೆಯ ಕ್ಯಾನ್ಸರ್ ನಿಂದ ಮುಕ್ತಿ ಪಡೆಯಬಹುದು. ಇದು ಕ್ಯಾನ್ಸರ್ ವಿರುದ್ಧ ಹೋರಾಡಲು ದೇಹದ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ. ಬೆಳ್ಳುಳ್ಳಿ ತಿಂದರೆ ಕರುಳಿನ ಸಮಸ್ಯೆ ನಿವಾರಣೆಯಾಗುತ್ತದೆ. ಬೆಳ್ಳುಳ್ಳಿ ಕಣ್ಣಿನ ಆರೋಗ್ಯಕ್ಕೂ ಒಳ್ಳೆಯದು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು…
ಮಥುರಾ: ಚುನಾವಣಾ ಪ್ರಚಾರದ ವೇಳೆ ಸಂಸದೆ ಹಾಗೂ ನಟಿ ಹೇಮಾ ಮಾಲಿನಿ ಅವರು ರೈತರ ಜೊತೆಗೂಡಿ ಸುಡು ಬಿಸಿಲಿನಲ್ಲಿ ಗದ್ದೆಗೆ ತೆರಳಿ ಗೋಧಿ ಬೆಳೆ ಕಟಾವು ಮಾಡಿದ್ದಾರೆ. ಬೆಳೆ ಕಟಾವು ಮಾಡುತ್ತಿರುವ ಚಿತ್ರ ಹಾಗೂ ಅಲ್ಲಿ ರೈತ ಮಹಿಳೆಯರೊಂದಿಗೆ ತೆಗೆದ ಫೋಟೊಗಳನ್ನು ತಮ್ಮ ಸಾಮಾಜಿಕ ಮಾಧ್ಯಮ ಖಾತೆಯಲ್ಲಿ ಹಂಚಿಕೊಂಡಿರುವ ಹೇಮಾ ಮಾಲಿನಿ ಅವರು, “ನಾನು ಕಳೆದ ಹತ್ತು ವರ್ಷಗಳಿಂದ ಈ ಗ್ರಾಮಕ್ಕೆ ಬರುತ್ತಿದ್ದೇನೆ, ರೈತರೊಂದಿಗೆ ಮಾತನಾಡಲು ಅವಕಾಶ ಸಿಕ್ಕಿರುವುದು ಸಂತಸ ತಂದಿದೆ” ಎಂದು ಸೋಶಿಯಲ್ ಮೀಡಿಯಾದಲ್ಲಿ ಬರೆದುಕೊಂಡಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ತುಮಕೂರು: ತುಮಕೂರು ನಗರದ ನೃಪತುಂಗ ವಾರ್ಡ್ ನಲ್ಲಿ ಸ್ಮಾರ್ಟ್ ಸಿಟಿ ಯೋಜನೆಯಲ್ಲಿ ನಿರ್ಮಾಣವಾದ ವಿಶ್ರಾಂತಿ ವನವನ್ನು ಅಧಿಕಾರಿಗಳು ಸರಿಯಾಗಿ ನಿರ್ವಹಣೆ ಮಾಡುತ್ತಿಲ್ಲವೆಂದು ಸಾರ್ವಜನಿಕರು ಹರಿಹಾಯ್ದಿದ್ದಾರೆ. ಪಾರ್ಕ್ ನಲ್ಲಿ ಅವಶ್ಯಕವಿರುವ ಮೂಲಭೂತ ಸೌಕರ್ಯ ಒದಗಿಸುವಲ್ಲಿ ನಗರ ಪಾಲಿಕೆ ವಿಫಲವಾಗಿದೆ ಎನ್ನುತ್ತಿದ್ದಾರೆ. ಸಾರ್ವಜನಿಕ ಶೌಚಾಲಯಕ್ಕೆ, ಕುಡಿಯಲು, ಗಿಡ – ಮರ ಗಳಿಗೆ ನೀರು ಪೂರೈಸುವಲ್ಲಿ ನಿರ್ಲಕ್ಷ್ಯ ತೋರುತ್ತಿದ್ದಾರೆ. ಸ್ಮಾರ್ಟ್ ಸಿಟಿ ಯೋಜನೆಯಲ್ಲಿ ನಿರ್ಮಾಣವಾದ ಪಾರ್ಕ್ ಅನೈತಿಕ ಚಟುವಟಿಕೆಗಳ ತಾಣವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇನ್ನಾದರೂ, ಸಂಬಂಧ ಪಟ್ಟ ನಗರ ಪಾಲಿಕೆ ನಿದ್ದೆಯಿಂದ ಎಚ್ಚೆತ್ತು, ನಗರದ ಎಲ್ಲ ಪಾರ್ಕ್ ಗಳ ಸ್ವಚ್ಛತೆ ಮತ್ತು ಭದ್ರತೆ ಒದಗಿಸಬೇಕೆಂದು ಕಾಳಜಿ ಫೌಂಡೇಶನ್ ಸದಸ್ಯರು ನಗರದ ಸಾರ್ವಜನಿಕರ ಪರವಾಗಿ ಆಗ್ರಹಿಸುತ್ತದೆ… ವರದಿ: ಮಂಜುಸ್ವಾಮಿ ಎಂ ಎನ್ ಕೊರಟಗೆರೆ ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ಫ್ರಿಡ್ಜ್ ವಾಟರ್ ಕುಡಿಯೋ ಮುನ್ನ ಎಚ್ಚರವಿರಲಿ! ರೆಫ್ರಿಜರೇಟರ್ ನಿಂದ ನೇರವಾಗಿ ತಣ್ಣೀರು ಕುಡಿಯುವುದರಿಂದ ಆರೋಗ್ಯದ ಮೇಲೆ ಕೆಟ್ಟ ಪರಿಣಾಮ ಬೀರುತ್ತದೆ. ರೆಫ್ರಿಜರೇಟರ್ ನಿಂದ ತಣ್ಣೀರು ಕುಡಿಯುವುದರಿಂದ ಬೊಜ್ಜು ಹೆಚ್ಚಾಗುವುದು ಮಾತ್ರವಲ್ಲದೆ ಅನೇಕ ರೋಗಗಳಿಗೆ ಕಾರಣವಾಗುತ್ತದೆ. ತಣ್ಣೀರು ಕುಡಿಯುವುದರಿಂದ ಹೃದಯಕ್ಕೆ ಗಂಭೀರ ಹಾನಿ ಉಂಟಾಗುತ್ತದೆ. ಪರಿಣಾಮವಾಗಿ, ರಕ್ತನಾಳಗಳು ಸಂಕುಚಿತಗೊಳ್ಳಲು ಪ್ರಾರಂಭವಾಗುತ್ತದೆ ಮತ್ತು ರಕ್ತದ ಹರಿವು ನಿಧಾನಗೊಳ್ಳುತ್ತದೆ. ಕ್ಯಾರೆಟ್ ತಿನ್ನುವುದರಿಂದ ಆಗುವ ಪ್ರಯೋಜನಗಳು: ಕ್ಯಾರೆಟ್ ತಿನ್ನುವುದು ತೂಕ ನಷ್ಟಕ್ಕೆ ಸಹಕಾರಿಯಾಗಿದೆ. ಇದನ್ನು ಸೇವಿಸುವುದರಿಂದ ಸೇಬು ಸೇವನೆಗಿಂತ ಹೆಚ್ಚಿನ ಪ್ರಯೋಜನವನ್ನು ಪಡೆಯಬಹುದಂತೆ. ಸೇಬಿನಲ್ಲಿ ಫೈಬರ್ ಸಮೃದ್ಧವಾಗಿದೆ. ಆದರೆ ಕ್ಯಾರೆಟ್ ನಲ್ಲಿ ಕರಗದ ಮತ್ತು ಕರಗಬಲ್ಲ ಪ್ರೋಟೀನ್ ಇದೆ. ಕ್ಯಾರೆಟ್ ನಲ್ಲಿ ಸೇಬಿಗಿಂತ 3 ಪಟ್ಟು ಹೆಚ್ಚು ಕ್ಯಾಲ್ಸಿಯಂ ಇದೆ. ಹಾಗಾಗಿ ಕ್ಯಾರೆಟ್ ಸೇವಿಸುವುದರಿಂದ ಮೂಳೆಗಳು ಬಲಗೊಳ್ಳುತ್ತದೆ. ಕ್ಯಾರೆಟ್ ನಲ್ಲಿ ಕಬ್ಬಿಣಾಂಶ ಮತ್ತು ಪೊಟ್ಯಾಶಿಯಂ ಉತ್ತಮವಾಗಿದೆ ಇದರಿಂದ ರಕ್ತಹೀನತೆ ಸಮಸ್ಯೆ ಕಾಡುವುದಿಲ್ಲ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.…