Author: admin

ಬೆಂಗಳೂರು: ನವವಿವಾಹಿತನೊಬ್ಬ ನಾಯಂಡಹಳ್ಳಿ ಫ್ಲೈ ಓವರ್ ಮೇಲಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಯಲಹಂಕ ಮೂಲದ ನವೀನ್ ಮೃತ ದುರ್ದೈವಿಯಾಗಿದ್ದಾನೆ. ಈತ ನಾಲ್ಕು ತಿಂಗಳ ಹಿಂದೆ ಮದುವೆಯಾಗಿದ್ದು, ಆತ್ಮಹತ್ಯೆಗೆ ನಿಖರ ಕಾರಣ ಇನ್ನೂ ತಿಳಿದುಬಂದಿಲ್ಲ. ನವೀನ್‌ ಸ್ಕೂಟರ್‌ ಅನ್ನು ಫ್ಲೈಓವರ್ ಮೇಲೆ ಪಾರ್ಕಿಂಗ್ ಮಾಡಿ ಏಕಾಏಕಿ ಕೆಳಗೆ ಜಿಗಿದಿದ್ದಾನೆ. ಘಟನಾ ಸ್ಥಳಕ್ಕೆ ಬ್ಯಾಟರಾಯನಪುರ ಪೊಲೀಸರು ದೌಡಾಯಿಸಿದ್ದು, ಹೆಚ್ಚಿನ ವಿವರ ಕಲೆಹಾಕುತ್ತಿದ್ದಾರೆ. ಮರಣೋತ್ತರ ಪರೀಕ್ಷೆಯ ನಂತರ ಮೃತದೇಹವನ್ನು ಕುಟುಂಬಸ್ಥರಿಗೆ ಹಸ್ತಾಂತರ ಮಾಡಲಾಗುತ್ತಿದೆ. ನವೀನ್‌ ಕರ್ನಾಟಕ ವಿದ್ಯುತ್‌ ಕಾರ್ಖಾನೆಯಲ್ಲಿ ಕೆಲಸ ಮಾಡುತ್ತಿದ್ದ. ಶುಕ್ರವಾರ ಬೆಳಗ್ಗೆ ಡ್ಯೂಟಿಗೆ ಹೋಗುತ್ತೇನೆ ಎಂದು ಮನೆಯಿಂದ ಹೊರಟಿದ್ದ ನವೀನ್‌ ನಾಯಂಡಹಳ್ಳಿ ಫ್ಲೈಓವರ್‌ ಮೇಲಿಂದ ಕೆಳಗೆ ಜಿಗಿದಿದ್ದಾನೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296  

Read More

ಚಿಕ್ಕಬಳ್ಳಾಪುರ: ಚಿಕ್ಕಬಳ್ಳಾಪುರ ನಗರದ ಪೊಲೀಸ್ ಕ್ವಾಟ್ರಸ್‌ನಲ್ಲಿ ಪೊಲೀಸ್ ಹೆಡ್ ಕಾನ್ಸ್‌ ಟೇಬಲ್‌ ಒಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ನಾಗರಾಜ್ ಆತ್ಮಹತ್ಯೆ ಮಾಡಿಕೊಂಡ ಪೊಲೀಸ್‌ ಹೆಡ್‌ ಕಾನ್ಸ್‌ ಟೇಬಲ್‌ ಆಗಿದ್ದಾರೆ. ಡಿ.ಎ.ಆರ್‌ ನಲ್ಲಿ ಪೊಲೀಸ್ ಹೆಡ್ ಕಾನ್ಸ್‌ಟೇಬಲ್‌ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ನಾಗರಾಜ್‌, ಅವರು ಮನೆಯಲ್ಲಿ ಯಾರು ಇಲ್ಲದ ಸಮಯದಲ್ಲಿ ಫ್ಯಾನ್‌ ಗೆ ನೇಣಿಗೆ ಶರಣಾಗಿದ್ದಾರೆ. ಕೌಟುಂಬಿಕ ಕಲಹಕ್ಕೆ ಬೇಸತ್ತುಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ಶಂಕಿಸಲಾಗಿದೆ. ನಾಗರಾಜ್‌ ಬರೆದಿದ್ದ ಡೆತ್‌ ನೋಟ್ ಸಿಕ್ಕಿದೆ. ಸ್ಥಳಕ್ಕೆ ಚಿಕ್ಕಬಳ್ಳಾಪುರ ನಗರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನಿಸಿಲಾಗಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

Read More

ಪತಂಜಲಿ ಆಯುರ್ವೇದದ ಜಾಹೀರಾತುಗಳ ಕುರಿತು ಸೂಕ್ತ ಕ್ರಮ ಕೈಗೊಳ್ಳುವಲ್ಲಿ ವಿಫಲವಾದ ಉತ್ತರಾಖಂಡದ ಔಷದ ಪರವಾನಗಿ ಮತ್ತು ನಿಯಂತ್ರಣ ಪ್ರಾಧಿಕಾರವನ್ನು ಸುಪ್ರೀಂಕೋರ್ಟ್ ತರಾಟೆಗೆ ತೆಗೆದುಕೊಂಡ ಬೆನ್ನಲ್ಲೇ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ಅವರು ರಾಜ್ಯದಲ್ಲಿ ಎಲ್ಲ ಪತಂಜಲಿ ಉತ್ಪನ್ನಗಳ ಗುಣಮಟ್ಟ ಪರಿಶೀಲನೆಗೆ ಆದೇಶಿಸಿದ್ದಾರೆ. ‘ರಾಜ್ಯದಲ್ಲಿ ಪತಂಜಲಿ ಆಯುರ್ವೇದ ಲಿಮಿಟೆಡ್‌ ನಿಂದ ಬರುವ ಎಲ್ಲ ಉತ್ಪನ್ನಗಳ ಗುಣಮಟ್ಟ ಪರಿಶೀಲನೆ ನಡೆಸಲಾಗುತ್ತದೆ. “ಎಲ್ಲ ಪತಂಜಲಿ ಉತ್ಪನ್ನಗಳ ಗುಣಮಟ್ಟ ಪರೀಕ್ಷಿಸಲು ಔಷದ ನಿಯಂತ್ರಣ ಇಲಾಖೆ ಮತ್ತು ಆಯುಷ್ ಆಯುಕ್ತರಿಗೆ ಸೂಚನೆ ನೀಡಲಾಗಿದೆ’ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಹೇಳಿದ್ದಾರೆ. ಪತಂಜಲಿ ಆಯುರ್ವೇದದ ಜಾಹೀರಾತುಗಳ ಕುರಿತು ಸೂಕ್ತ ಕ್ರಮ ಕೈಗೊಳ್ಳುವಲ್ಲಿ ವಿಫಲವಾಗಿರುವ ಉತ್ತರಾಖಂಡದ ಔಷದ ಪರವಾನಗಿ ಮತ್ತು ನಿಯಂತ್ರಣ ಪ್ರಾಧಿಕಾರವನ್ನು ಸುಪ್ರೀ ಕೋರ್ಟ್ ತರಾಟೆಗೆ ತೆಗೆದುಕೊಂಡಿದ್ದು, ಈ ವಿಷಯವನ್ನು ಯಾವುದೇ ಕಾರಣಕ್ಕೂ ಲಘುವಾಗಿ ತೆಗೆದುಕೊಳ್ಳುವಂತಿಲ್ಲ ಎಂದಿದೆ. ಇದಾದ ಬಳಿಕ ದಿನೇಶ್ ಗುಂಡೂರಾವ್ ಈ ಕ್ರಮ ಕೈಗೊಂಡಿದ್ದಾರೆ. ಬಾಬಾ ರಾಮದೇವ್ ಆಯುರ್ವೇದ ಮತ್ತು…

Read More

ಲೋಕಸಭಾ ಕ್ಷೇತ್ರದ ಬಹುಜನ ಸಮಾಜವಾದಿ ಪಕ್ಷ(ಬಿ.ಎಸ್.ಪಿ.) ಅಭ್ಯರ್ಥಿ ಚಿನ್ನಪ್ಪ ವೈ. ಚಿಕ್ಕಹಾಗಡೆ ನಾಮಪತ್ರ ವಾಪಸ್ ಪಡೆದುಕೊಂಡಿದ್ದು, ಡಿ.ಕೆ. ಸಹೋದರರ ದಬ್ಬಾಳಿಕೆ ಮತ್ತು ಧಮ್ಕಿಗೆ ಹೆದರಿ ನಾಮಪತ್ರ ವಾಪಸ್ ಪಡೆಯಲಾಗಿದೆ ಎಂದು ಪಕ್ಷದ ರಾಜ್ಯಾಧ್ಯಕ್ಷ ಮಾರಸಂದ್ರ ಮುನಿಯಪ್ಪ ಆರೋಪಿಸಿದ್ದಾರೆ. ಕರ್ನಾಟಕದ ಪ್ರಮುಖ ಹೈವೋಲ್ಟೇಜ್ ಕ್ಷೇತ್ರವಾದ ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರವು ಈ ಸಾರಿ ಪ್ರಮುಖ ಆಕರ್ಷಣೀಯವಾಗಿದೆ. ಕಳೆದ ಲೋಕಸಭಾ ಚುನಾವಣೆಯಲ್ಲಿ ಕರ್ನಾಟಕದಲ್ಲಿ ಕಾಂಗ್ರೆಸ್ ತನ್ನ ತೆಕ್ಕೆಗೆ ಪಡೆದ ಏಕೈಕ ಕ್ಷೇತ್ರ ಇದು. ಅದರಲ್ಲೂ ನಾಡಿನ ಪ್ರಬಲ ನಾಯಕರಾದ ಡಿಕೆ ಬ್ರದರ್ಸ್ ಕಣ್ಣಿಟ್ಟ, ಅವರ ಕಪಿಮುಷ್ಟಿಯಲ್ಲಿ ಇರುವ ಏಕೈಕ ಕ್ಷೇತ್ರ. ಹೀಗಾಗಿ ಪ್ರತಿಷ್ಠೆಯ ಅಖಾಡವೂ ಇದಾಗಿದೆ. ಆದರೆ ಈ ಸಲ ಬಿಜೆಪಿ ಡಿ.ಕೆ. ಸುರೇಶ್ ಅವರಷ್ಟೇ ಪ್ರಬಲವಾಗಿರುವ ಡಾ.ಸಿ.ಎನ್. ಮಂಜುನಾಥ್ ಅವರನ್ನು ಕಣಕ್ಕಿಳಿಸಿದ್ದು, ಈ ಸಲ ಕಾಂಗ್ರೆಸ್ ಗೆಲುವು ಅಷ್ಟು ಸುಲಭದ್ದಲ್ಲ. ಹೀಗಾಗಿ ಹೇಗಾದರೂ ಮಾಡಿ ಈ ಸಲವೂ ಬೆಂಗಳೂರು ಗ್ರಾಮಾಂತರವನ್ನು ಗೆಲ್ಲಬೇಕು ಎಂದು ಪಣತೊಟ್ಟಿರುವ ಡಿಕೆ ಬ್ರದರ್ಸ್ ಭಾರೀ ಕಸರತ್ತು ನಡೆಸುತ್ತಿದ್ದಾರೆ. ಹೀಗಾಗಿ…

Read More

ಮೈಸೂರು: ಮೈಸೂರಿನ ತಿ. ನರಸೀಪುರ ತಾಲೂಕಿನ ಮರಡೀಪುರ ಗ್ರಾಮದಲ್ಲಿ ನೀರಿನಲ್ಲಿ ಮುಳುಗಿ ಯುವಕನೊಬ್ಬ ಮೃತಪಟ್ಟಿರುವ ದಾರುಣ ಘಟನೆ ನಡೆದಿದೆ. ರಾಹುಲ್ (17) ಮೃತ ದುರ್ದೈವಿಯಾಗಿದ್ದಾರೆ. ಸ್ನೇಹಿತರ ಜತೆ ಕಾವೇರಿ ನದಿಯಲ್ಲಿ ಈಜಲು ತೆರಳಿದ ರಾಹುಲ್‌ ನೀರಿನಿಂದ ಹೊರಬರಲು ಆಗದೆ ಮುಳುಗಿ ಮೃತಪಟ್ಟಿದ್ದಾನೆ. ಜತೆಯಲ್ಲಿದ್ದ ಸ್ನೇಹಿತರು ರಕ್ಷಣೆಗೆ ತೆರಳಿದ್ದಾರೆ. ಆದರೆ ನೀರಿನ ಸೆಳೆತಕ್ಕೆ ಸಿಲುಕಿದ ರಾಹುಲ್‌ ಕಾವೇರಿ ನದಿಯಲ್ಲಿ ಕೊಚ್ಚಿ ಹೋಗಿದ್ದಾನೆ. ಮಹದೇಶ್ವರ ದೇವಸ್ಥಾನದ ಬಳಿ ಇರುವ ಹೊಳೆಯಲ್ಲಿ ನೀರಿಗೆ ಇಳಿದು ಆಟ ಆಡುವಾಗ ನೀರಿನಲ್ಲಿ ಮುಳುಗಿದ್ದು, ವಿಷಯ ತಿಳಿದ ಕೂಡಲೇ ಹೊಳೆ ಬಳಿ ಬಂದ ಪೋಷಕರು ನೀರಿನಿಂದ ಮೃತದೇಹವನ್ನು ಮೇಲಕ್ಕೆತ್ತಿದ್ದಾರೆ. ಸ್ಥಳಕ್ಕೆ ತಲಕಾಡು ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನಿಸಿದ್ದಾರೆ. ತಲಕಾಡು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

Read More

ಸಾರ್ವಜನಿಕ ಕಾರ್ಯಕ್ರಮ ನಡೆಸುವಾಗ ಹಲವು ಮುಂಜಾಗೃತ ಕ್ರಮಗಳನ್ನು ತೆಗೆದುಕೊಳ್ಳಬೇಕು ಮತ್ತು ಸ್ಥಳೀಯ ಪೊಲೀಸ್ ಠಾಣೆಯಿಂದ ಅನುಮತಿ ಪಡೆದಿರಬೇಕು. ಅನುಮತಿ ನೀಡುವ ಮುಂಚೆ ಪೊಲೀಸರು ಬಂದು ಸ್ಥಳ ಮತ್ತು ವ್ಯವಸ್ಥೆ ಪರಿಶೀಲನೆ ನಡೆಸುವುದು ಅಗತ್ಯ. ಆದರೆ, ಯುಗಾದಿ ಉತ್ಸವದ ಆಚರಣೆಯ ವೇಳೆ ರಥವೊಂದನ್ನು ಎಳೆಯುತ್ತಿದ್ದ ಸಂದರ್ಭ, ರಥದ ತುದಿ ವಿದ್ಯುತ್ ತಂತಿಗೆ ತಗುಲಿದ ಪರಿಣಾಮ, ಕನಿಷ್ಠ 13 ಮಕ್ಕಳು ಗಾಯಗೊಂಡಿರುವ ಘಟನೆ ಆಂಧ್ರಪ್ರದೇಶದ ಕರ್ನೂಲ್ ಜಿಲ್ಲೆಯ ಚಿನ್ನ ಟೇಕೂರ್ ಗ್ರಾಮದಲ್ಲಿ ಸಂಭವಿಸಿದೆ. ಯುಗಾದಿ ಹಬ್ಬದ ಹಿನ್ನೆಲೆಯಲ್ಲಿ ಇಲ್ಲಿನ ಆಂಜನೇಯ ಸ್ವಾಮಿ ದೇವಸ್ಥಾನದಲ್ಲಿ ರಥೋತ್ಸವ ನಡೆದಿತ್ತು. ಈ ವೇಳೆ ರಥವನ್ನು ಎಳೆದುಕೊಂಡು ಸಾಗುವ ವೇಳೆ ಈ ದುರ್ಘಟನೆ ಸಂಭವಿಸಿದೆ. ಕರ್ನೂಲ್ ಗ್ರಾಮಾಂತರ ಪೊಲೀಸ್ ಠಾಣೆಯ ಸರ್ಕಲ್ ಇನ್ಸ್‌ಪೆಕ್ಟರ್ ಕಿರಣ್ ಕುಮಾರ್ ಮಾತನಾಡಿ, “ರಥೋತ್ಸವ ಸಂದರ್ಭ ನಡೆದ ಘಟನೆಯಲ್ಲಿ ಕನಿಷ್ಠ ಹದಿಮೂರು ಮಂದಿ ಮಕ್ಕಳು ಗಾಯಗೊಂಡಿದ್ದು ಅವರಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು ಎಲ್ಲರೂ ಅಪಾಯದಿಂದ ಪಾರಾಗಿದ್ದಾರೆ” ಎಂದು ಹೇಳಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ…

Read More

ಬೆಂಗಳೂರು ಮಾತ್ರಲ್ಲದೆ ರಾಜ್ಯದಾದ್ಯಂತ ಈಗ ಬಿಸಿಲಿನ ತಾಪ ಹೆಚ್ಚಾಗಿದೆ. ನೀರಿನ ಹಾಹಾಕರ ಶುರುವಾಗಿದೆ. ಈ ಸಮಯದಲ್ಲಿ ಅವರಿಗೆ ಸರಿಯಾದ ಆಹಾರ ಅಥವಾ ನೀರಿನ ಪೂರೈಕೆ ಇಲ್ಲ. ಸರಿಯಾದ ವಾಶ್​​ ರೂಮ್​​​ ವ್ಯವಸ್ಥೆ, ಅದರಲ್ಲೂ ಮಹಿಳೆ ಪೊಲೀಸರಿಗೆ ಮುಟ್ಟು ಅಥವಾ ಇನ್ನಿತರ ಸಮಸ್ಯೆ ಕಾಡಿದಾಗ ಅವರಿಗೆ ಬೇಕಾದ ಸೌಕರ್ಯಗಳು ಇಲ್ಲ ಎಂಬ ಆರೋಪಗಳು ಕೇಳಿ ಬರುತ್ತಿದೆ. ಇವುಗಳ ನಡುವೆ ಅವರು ಜನರಿಗಾಗಿ ಕೆಲಸ ಮಾಡಬೇಕಿದೆ. ಆದರೆ ಇನ್ನೊಬ್ಬ 60 ವರ್ಷದ ಅಜ್ಜ ನಮಗಾಗಿ ಕೆಲಸ ಮಾಡುವ ಈ ಟ್ರಾಫಿಕ್​​​ ಪೊಲೀಸರಿಗೆ ಪ್ರತಿದಿನ ನೀರು ನೀಡಿ ಅವರ ದಾಹವನ್ನು ನೀಗಿಸುತ್ತಿದ್ದಾರೆ. ನೀರ್​​ ಸಾಬ್ (ವಾಟರ್​​ ಮ್ಯಾನ್) ಎಂದು ಕರೆಯುವ 60 ವರ್ಷ ವಯಸ್ಸಿನ ಸೈಯದ್​​ ಮಜೀದ್ ಅವರು ಬಳ್ಳಾರಿ ರಸ್ತೆಯಲ್ಲಿ ಕಾರ್ಯನಿರ್ವಹಿಸುವ ಪೊಲೀಸ್​​​ ಅಧಿಕಾರಿಗಳಿಗೆ ನೀರಿನ ಬಾಟಲಿಗಳನ್ನು ನೀಡಿ, ಅವರಿಗೆ ಸಹಾಯ ಮಾಡುತ್ತಿದ್ದಾರೆ. ಎರಡು ವರ್ಷಗಳಿಂದ ಮಜೀದ್ ತಮ್ಮನ್ನು ಈ ಕಾರ್ಯದಲ್ಲಿ ತೋಡಗಿಸಿಕೊಂಡಿದ್ದಾರೆ. ಇವರ ಈ ಕಾರ್ಯಕ್ಕೆ ಸಂಚಾರ ಡಿಸಿಪಿ (ಉತ್ತರ ಬೆಂಗಳೂರು) ಸಿರಿ…

Read More

ಹಿಂದೂ ದೇವಾಲಯಗಳ ಸಮಯ ಬಹಳ ಮುಖ್ಯ. ದೇವಸ್ಥಾನಕ್ಕೆ ಹೋದಾಗ ಗಂಟೆ ಬಾರಿಸದೆ ದೇವರ ದರ್ಶನ ಮಾಡುವುದಿಲ್ಲ. ದೇವಸ್ಥಾನ ಚಿಕ್ಕದಿರಲಿ, ದೊಡ್ಡದಿರಲಿ, ತಪ್ಪದೆ ಗಂಟೆಯನ್ನು ಪ್ರತಿಷ್ಠಾಪಿಸಲಾಗುತ್ತದೆ. ಭಗವಂತನಿಗೆ ಹರತಿಯನ್ನು ಅರ್ಪಿಸುವಾಗ, ನೈವೇದ್ಯ ಮಾಡುವಾಗ ಮತ್ತು ಪ್ರಮುಖ ಪೂಜೆಗಳನ್ನು ಮಾಡುವಾಗ ಗಂಟೆಯನ್ನು ಬಾರಿಸಲಾಗುತ್ತದೆ. ಆದರೆ ನಿಜವಾಗಿಯೂ ಬೆಲ್ ಏಕೆ ಬಾರಿಸಬೇಕು? ಈಗ ಗಂಟೆ ಬಾರಿಸುವುದರಿಂದ ಆಗುವ ಲಾಭಗಳೇನು ಎಂದು ನೋಡೋಣ. ಭಗವಂತನ ಮುಂದೆ ಗಂಟೆ ಬಾರಿಸುವ ಮೂಲಕ, ಶಬ್ದವು ಆ ಪ್ರದೇಶದಲ್ಲಿ ಇರುವ ದುಷ್ಟಶಕ್ತಿಗಳು ಮತ್ತು ನಕಾರಾತ್ಮಕ ಕಿರಣಗಳನ್ನು ಓಡಿಸುತ್ತದೆ ಎಂದು ಹೇಳಲಾಗುತ್ತದೆ. ಅಷ್ಟೇ ಅಲ್ಲ, ದೇವರ ಮುಂದೆ ಯಾವುದೇ ಇಷ್ಟಾರ್ಥಗಳನ್ನು ಮಾಡಿ ಗಂಟೆ ಬಾರಿಸಿದರೆ ಸಾಕ್ಷಾತ್ ಆ ದೇವರನ್ನು ತಲುಪುತ್ತಾರೆ ಎಂಬುದು ಭಕ್ತರ ನಂಬಿಕೆ. ದೇವಸ್ಥಾನದಲ್ಲಿ ಮಾತ್ರವಲ್ಲದೆ, ಮನೆಯಲ್ಲಿ ನಡೆಯುವ ವಿಶೇಷ ಪೂಜೆಗಳಲ್ಲಿಯೂ ಗಂಟೆ ಬಾರಿಸಿದರೆ ಮನಸ್ಸಿಗೆ ಆಧ್ಯಾತ್ಮಿಕ ಆನಂದ ಸಿಗುತ್ತದೆ. ಇದಲ್ಲದೆ, ಇದು ಮನಸ್ಸಿನ ಶಾಂತಿಯನ್ನು ತರುತ್ತದೆ. ಪುರಾಣದ ಪ್ರಕಾರ ದೇವಸ್ಥಾನಗಳಲ್ಲಿ ಗಂಟೆಯನ್ನು 3 ಅಥವಾ 5 ಗಂಟೆಗಳ ಕಾಲ ಬಾರಿಸಿದರೆ…

Read More

ವಿದ್ಯಾರ್ಥಿಯೊಬ್ಬ “ನನಗೆ ಉತ್ತಮ ಅಂಕ ನೀಡದಿದ್ದರೆ ನನ್ನ ತಾತನಿಗೆ ಹೇಳಿ ನಿಮ್ಮ ಮೇಲೆ ವಾಮಾಚಾರ ಮಾಡ್ತೀನಿ” ಎಂದು ಬರೆದು ಬೆದರಿಕೆ ಹಾಕಿದ್ದಾನೆ. ಮೌಲ್ಯಮಾಪನದ ಸಂದರ್ಭದಲ್ಲಿ ಕೆಲವೊಂದು ವಿದ್ಯಾರ್ಥಿಗಳು ಬರೆಯುವ ನನ್ನನ್ನು ಪಾಸ್‌ ಮಾಡಿ, ಮನವಿ ಮಾಡುವಂತಹ ಅನೇಕ ಸುದ್ದಿಗಳು ಕೇಳಿ ಬರುತ್ತಿದೆ. ಅಂತಹುದೇ ಒಂದು ಸುದ್ದಿ ಇದೀಗ ವೈರಲ್‌ ಆಗಿದೆ. ಅದರಲ್ಲಿ ವಿದ್ಯಾರ್ಥಿಯೊಬ್ಬ “ನನಗೆ ಉತ್ತಮ ಅಂಕ ನೀಡದಿದ್ದರೆ ನನ್ನ ತಾತನಿಗೆ ಹೇಳಿ ನಿಮ್ಮ ಮೇಲೆ ವಾಮಾಚಾರ ಮಾಡ್ತೀನಿ” ಎಂದು ಬರೆದು ಬೆದರಿಕೆ ಹಾಕಿದ್ದಾನೆ. ಅಂದಹಾಗೆ, ಈ ಘಟನೆ ನಡೆದಿರುವುದು ಆಂಧ್ರಪ್ರದೇಶದಲ್ಲಿ. ಇತ್ತೀಚೆಗೆ ಇಲ್ಲಿ 10 ನೇ ತರಗತಿ ಬೋರ್ಡ್‌ ಪರೀಕ್ಷೆ ನಡೆದಿದ್ದು, ಉತ್ತರ ಮೌಲ್ಯಮಾಪನ ಸಂದರ್ಭದಲ್ಲಿ ಈ ಕೆಲಸ ಪತ್ತೆಯಾಗಿದೆ. ಬಾಪಟ್ಲ ಮುನ್ಸಿಪಲ್‌ ಹೈಸ್ಕೂಲ್‌ ನಲ್ಲಿ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಕಾರ್ಯ ನಡೆಯುತ್ತಿದ್ದು, ಪೇಪರ್‌ ತಿದ್ದುವ ಸಂದರ್ಭದಲ್ಲಿ ಶಿಕ್ಷಕರೊಬ್ಬರು ಉತ್ತರಪತ್ರಿಕೆಯಲ್ಲಿ ಈ ಉತ್ತರ ಕಂಡು ಶಾಕ್‌ ಆಗಿದ್ದಾರೆ. ರಾಮಾಯಣದ ಮಹತ್ವವವನ್ನು ವಿವರಿಸಿ ಎನ್ನುವ ಪ್ರಶ್ನೆಗೆ ಉತ್ತರದ ರೂಪದಲ್ಲಿ ಇದನ್ನು ಬರೆಯಲಾಗಿತ್ತು.…

Read More

ತಮಿಳುನಾಡಿನಲ್ಲಿ ಗಿಳಿ ಶಾಸ್ತ್ರವು ಕೂಡ ರಾಜಕೀಯವಾಗಿ ಭವಿಷ್ಯ ನುಡಿದಿದೆ. ಆದರೆ ಈ ಭವಿಷ್ಯ ನುಡಿದ ಬೆನ್ನಲ್ಲೇ ಆ ಗಿಳಿ ಮಾಲೀಕನನ್ನು ಸರ್ಕಾರವು ಬಂಧಿಸಿದೆ. ಲೋಕಸಭಾ ಚುನಾವಣಾ ಅಕಾಡದಲ್ಲಿ ಸೋಲು- ಗೆಲುವಿನ ಲೆಕ್ಕಾಚಾರಗಳು ಜೋರಾಗಿದೆ. ಸಮೀಕ್ಷೆಗಳು ಯಾರಿಗೆ ಸೋಲು ಯಾರಿಗೆ ಜಯ ಎಂಬುದನ್ನು ಈಗಾಗಲೇ ತಿಳಿಸಿಕೊಟ್ಟಿವೆ. ಜ್ಯೋತಿಷಿಗಳು ಕೂಡ ಭವಿಷ್ಯವನ್ನು ನುಡಿಯುತ್ತಿದ್ದಾರೆ. ಇಷ್ಟೇ ಅಲ್ಲದೆ ತಮಿಳುನಾಡಿನಲ್ಲಿ ಗಿಳಿ ಶಾಸ್ತ್ರವು ಕೂಡ ರಾಜಕೀಯವಾಗಿ ಭವಿಷ್ಯ ನುಡಿದಿದೆ. ಆದರೆ ಈ ಭವಿಷ್ಯ ನುಡಿದ ಬೆನ್ನಲ್ಲೇ ಆ ಗಿಳಿ ಮಾಲೀಕನನ್ನು ಸರ್ಕಾರವು ಬಂಧಿಸಿದೆ. ತಮಿಳುನಾಡಿನ ಕಡಲೂರಿನಲ್ಲಿ ಪಟ್ಟಾಲಿ ಮಕ್ಕಳ್ ಕಚ್ಚಿ ಅಭ್ಯರ್ಥಿ ನಿರ್ದೇಶಕ ತಂಗರಬಚ್ಚನ್ ಗೆಲುವು ಸಾಧಿಸಲಿದ್ದಾರೆ ಎಂದು ಗಿಣಿಶಾಸ್ತ್ರದ ಗಿಣಿ ಇತ್ತೀಚೆಗೆ ಭವಿಷ್ಯ ನುಡಿದಿತ್ತು. ಆದರೆ ಬುಧವಾರದ ವೇಳೆ ಈ ಗಿಳಿಗಳ ಮಾಲೀಕ ಸೆಲ್ವರಾಜ್‌ ಹಾಗೂ ಆತನ ಸಹೋದರ ಸೀನುವಾಸನ್‌ ಅವರನ್ನು ತಮಿಳುನಾಡು ಅರಣ್ಯ ಇಲಾಖೆ ಬಂಧಿಸಿದೆ. ಗಿಳಿಯನ್ನು ಅಕ್ರಮವಾಗಿ ಸೆರೆಯಲ್ಲಿಟ್ಟ ಕಾರಣಕ್ಕೆ ಬಂಧನ ಮಾಡಲಾಗಿದೆ ಎಂದು ಇಲಾಖೆ ತಿಳಿಸಿದೆ. ಇದರ ಬೆನ್ನಲ್ಲಿಯೆ NDA ಮೈತ್ರಿ…

Read More