Subscribe to Updates
Get the latest creative news from FooBar about art, design and business.
- ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ: ನಿವೃತ್ತಿ ಅಂಚಿನಲ್ಲಿರುವ ಮುಖ್ಯೋಪಾಧ್ಯಾಯ ಅರೆಸ್ಟ್
- ನಾಳೆ ದೆಹಲಿಗೆ ಸಿಎಂ ಸಿದ್ದರಾಮಯ್ಯ ಭೇಟಿ; ನಾಯಕತ್ವ ಬದಲಾವಣೆ ಚರ್ಚೆಗಳ ನಡುವೆ ಹೈಕಮಾಂಡ್ ಬುಲಾವ್
- ಸೇಡು ತೀರಿಸಿಕೊಳ್ಳಲು ವರ್ಷದ ಬಳಿಕ ಅದೇ ಅಪ್ರಾಪ್ತೆ ಮೇಲೆ ಮತ್ತೆ ಲೈಂಗಿಕ ದೌರ್ಜನ್ಯ–ಇಬ್ಬರು ಆರೋಪಿಗಳ ಬಂಧನ
- ಭಟ್ಕಳ: ಕಪ್ಪೆಚಿಪ್ಪು ಸಂಗ್ರಹಿಸಲು ಹೋಗಿ ನೀರಲ್ಲಿ ಮುಳುಗಿ 11 ಮಂದಿ ಸಾವು!
- ಪ್ರೀತಿ ಹೆಸರಲ್ಲಿ ಅಪ್ರಾಪ್ತ ವಯಸ್ಸಿನ ಬಾಲಕಿಗೆ ಲೈಂಗಿಕ ದೌರ್ಜನ್ಯ: ಆರೋಪಿ ವಿರುದ್ಧ ಪೋಕ್ಸೋ ಕೇಸ್ ದಾಖಲು
- ಬಾಲಕನ ಬಲಿ ಪಡೆದಿದ್ದ ಚಿರತೆ ಕೊನೆಗೂ ಸೆರೆ: 14 ದಿನಗಳ ಕಾರ್ಯಾಚರಣೆ ಬಳಿಕ ಸ್ಥಳೀಯರು ನಿಟ್ಟುಸಿರು
- ದಿಢೀರ್ ಹವಾಮಾನ ಬದಲಾವಣೆಗೆ AI ಡೇಟಾ ಸೆಂಟರ್ ಕಾರಣ ಆಗ್ತಾ ಇದೆಯೇ?
- ಗೃಹಲಕ್ಷ್ಮಿ, ಗೃಹಜ್ಯೋತಿ ಫಲಾನುಭವಿಗಳ ಪಟ್ಟಿ ಪರಿಷ್ಕರಣೆಗೆ ರಾಜ್ಯ ಸರ್ಕಾರ ನಿರ್ಧಾರ: ಅನರ್ಹರಿಗೆ ಕೋಕ್!
Author: admin
ಯಾವುದೇ ಭಾಷೆಯಲ್ಲೂ ಸಿನಿಮಾ ಪ್ರದರ್ಶನ ಮಾಡಬಾರದು ಎಂದು ಮೈಸೂರು ಸಿವಿಲ್ ಕೋರ್ಟ್ ನೀಡಿದ್ದ ಆದೇಶಕ್ಕೆ ನ್ಯಾಯಾಲಯ ತಡೆಯಾಜ್ಞೆ ನೀಡಿದೆ. ಒಟಿಟಿ ಸೇರಿದಂತೆ ಯಾವುದೇ ವಿಧಾನದಲ್ಲಿ ಯಾವುದೇ ಭಾಷೆಯಲ್ಲೂ ಸಿನಿಮಾ ಪ್ರದರ್ಶನ ಮಾಡಬಾರದು ಎಂದು ಮೈಸೂರು ಸಿವಿಲ್ ಕೋರ್ಟ್ ನೀಡಿದ್ದ ಆದೇಶಕ್ಕೆ ನ್ಯಾಯಾಲಯ ತಡೆಯಾಜ್ಞೆ ನೀಡಿದೆ. ಮುಂಬಯಿನ ದೈವೀವ್ ಪ್ರಾಜೆಕ್ಟ್ ಪ್ರೈವೇಟ್ ಲಿಮಿಟೆಡ್ ಬೋನಿ ಕಪೂರ್ ಸಲ್ಲಿಸಿದ್ದ ಅರ್ಜಿ ಪರಿಶೀಲಿಸಿದ ನ್ಯಾಯಮೂರ್ತಿ ಎಸ್.ಆರ್. ಕೃಷ್ಣಕುಮಾರ್ ಅವರಿದ್ದ ಏಕಸದಸ್ಯಪೀಠ, ಈ ಮಧ್ಯಂತರ ಆದೇಶ ಮಾಡಿದೆ. ಹೈಕೋರ್ಟ್ಗೆ ಗುರುವಾರ ರಜೆ ಇದ್ದರೂ ತುರ್ತು ವಿಚಾರವೆಂದು ಮಂಡನೆ ಮಾಡಿ ‘ವಿಚಾರಣೆ ನಡೆಸುವಂತೆ ಅರ್ಜಿದಾರರು ಕೋರಿದ್ದರು. ಅದರಂತೆ ವಿಚಾರಣೆ ನಡೆಸಿದ ನ್ಯಾಯಾಲಯ, ಮಧ್ಯಂತರ ಆದೇಶ ನೀಡಿದೆ. ಮೈಸೂರಿನ ಬರಹಗಾರ ಸಿ.ಆರ್. ಅನಿಲ್ ಕುಮಾರ್ ಕಾಪಿ ರೈಟ್ ಉಲ್ಲಂಘನೆ ಮಾಡಲಾಗಿದೆ ಎಂದು ಆರೋಪಿಸಿ ಸಲ್ಲಿಸಿದ್ದರು. ಅರ್ಜಿ ಪರಿಶೀಲಿಸಿದ ಮೈಸೂರಿನ ಸಿಟಿ ಸಿವಿಲ್ ನ್ಯಾಯಾಲಯ, ಏ.8ರಂದು ಮೈದಾನ ಹಿಂದಿ ಚಲನಚಿತ್ರ ಪ್ರದರ್ಶನಕ್ಕೆ ತಡೆ ನೀಡಿತ್ತು. ಆ ಕಡೆ ತೆರವು ಕೋರಿ ಅರ್ಜಿದಾರರು,…
ತುರುವೇಕೆರೆ: ತಾಲೂಕಿಗೆ ಸಮೀಪದಲ್ಲಿರುವ ತಾವರೆಕೆರೆ ತಿರುವಿನಲ್ಲಿ ತಡರಾತ್ರಿ ಒಂದು ಗಂಟೆಯ ಸಮಯದಲ್ಲಿ, ಕೆ.ಬಿ. ಕ್ರಾಸ್ ನಿಂದ ತುರುವೇಕೆರೆಗೆ ಬರುತ್ತಿದ್ದ ಹುಂಡೈ ಐ ಟ್ವೆಂಟಿ KA52 MJ19 22 ನಂಬರಿನ ಕಾರು, ಚಾಲಕನ ನಿಯಂತ್ರಣ ತಪ್ಪಿ ರಸ್ತೆಯ ಬಲಭಾಗದಲ್ಲಿರುವ ತಡೆಗೋಡೆಯ ಕಲ್ಲುಗಳನ್ನು ಮುರಿದು, ಗುಂಡಿ ಒಳಗೆ ಬಿದ್ದಿರುವ ಘಟನೆ ನಡೆದಿದೆ. ಈ ಅಪಘಾತದಲ್ಲಿ ಓರ್ವ ಸಾವನ್ನಪ್ಪಿದ್ದು, ಜೊತೆಯಲ್ಲಿದ್ದ ಮತ್ತೊಬ್ಬನಿಗೆ ಗಂಭೀರ ಸ್ವರೂಪದ ಪೆಟ್ಟಾಗಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಜಿಲ್ಲಾ ಆಸ್ಪತ್ರೆಗೆ ರವಾನಿಸಲಾಗಿದೆ. ಮೃತ ವ್ಯಕ್ತಿ ತುರುವೇಕೆರೆ ತಾಲೂಕಿನ ದಬ್ಬೆಘಟ್ಟ ಹೋಬಳಿಯ ಲಿಂಗರಾಜು ಬಿನ್ ಗೋವಿಂದಪ್ಪ 40 ವರ್ಷ ಹಾಗೂ ಗಾಯಾಳು ಅದೇ ಗ್ರಾಮದ ಅಕ್ಷಯ್ ಬಿನ್ ಚಂದ್ರಯ್ಯ ಎಂದು ತಿಳಿದು ಬಂದಿದೆ. ಮೃತ ವ್ಯಕ್ತಿಯ ಮೃತದೇಹವನ್ನು ತುರುವೇಕೆರೆ ತಾಲೂಕು ಸಾರ್ವಜನಿಕ ಆಸ್ಪತ್ರೆಯ ಶವಾಗಾರಕ್ಕೆ ತರಲಾಗಿದ್ದು, ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಂಡಿದ್ದಾರೆ. ಮೃತ ವ್ಯಕ್ತಿಗೆ ಹೆಂಡತಿ ತಂದೆ ತಾಯಿ ಮತ್ತು ಓರ್ವ ಸಹೋದರ ಸಹೋದರಿಯರು ಇದ್ದು, ಮೃತ ವ್ಯಕ್ತಿಯ ಕುಟುಂಬದ ಆಕ್ರಂದನ ಮುಗಿಲು…
ಮೊಬೈಲ್ ಬಳಕೆದಾರರಿಗೆ ಲೋಕಸಭಾ ಚುನಾವಣೆ ನಂತರ ದರ ಏರಿಕೆಯ ಬಿಸಿ ತಟ್ಟಲಿದೆ. ಭಾರತೀಯ ಟೆಲಿಕಾಂ ಉದ್ಯಮವು ಲೋಕಸಭೆ ಚುನಾವಣೆ ನಂತರ ಸೇವಾ ಶುಲ್ಕಗಳ ಶೇ.15 ರಿಂದ 17ರಷ್ಟು ಏರಿಕೆ ಮಾಡುವ ಸಾಧ್ಯತೆ ಇದೆ ಎಂದು ಆಂಟಿಕ್ ಸ್ಟಾಕ್ ಬೋಕಿಂಗ್ ವರದಿ ತಿಳಿಸಿದೆ. ಕೊನೆಯ ಬಾರಿ 2021ರ ಡಿಸೆಂಬರ್ ನಲ್ಲಿದರ ಪರಿಷ್ಕರಣೆ ಮಾಡಿ ಶೇ.20ರಷ್ಟು ಹೆಚ್ಚಳ ಮಾಡಲಾಗಿತ್ತು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ರಾಜ್ಯದಲ್ಲಿ 2ನೇ ಹಂತದಲ್ಲಿ ಮತದಾನ ನಡೆಯಲಿರುವ 14 ಲೋಕಸಭಾ ಕ್ಷೇತ್ರಗಳ ಚುನಾವಣೆಗೆ ಇಂದು ಅಧಿಸೂಚನೆ ಹೊರಬೀಳಲಿದ್ದು ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಲಿದೆ. ಮೊದಲ ಹಂತದ ಚುನಾವಣಾ ಅಖಾಡದಲ್ಲಿ ಪ್ರಚಾರ ಜೋರಾಗಿರುವ ಬೆನ್ನಲ್ಲೇ ಉತ್ತರ ಕರ್ನಾಟಕ ಭಾಗದ ಉಳಿದ 14 ಕ್ಷೇತ್ರಗಳಲ್ಲೂ ಶುಕ್ರವಾರದಿಂದ ಚುನಾವಣಾ ಅಬ್ಬರ ಶುರುವಾಗಲಿದೆ. ಮೊದಲ ದಿನವೇ ಕಲಬುರಗಿ ಎಸ್ ಸಿ ಮೀಸಲು ಕ್ಷೇತ್ರದಲ್ಲಿ ಕಾಂಗ್ರೆಸ್ ನ ರಾಧಾಕೃಷ್ಣ ದೊಡ್ಡಮನಿ ನಾಮಪತ್ರ ಸಲ್ಲಿಸಲಿದ್ದು, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಕೆಪಿಸಿಸಿ ಅಧ್ಯಕ್ಷರೂ ಆದ ಡಿಸಿಎಂ ಡಿ.ಕೆ. ಶಿವಕುಮಾರ್ ಸೇರಿದಂತೆ ಹಲವು ಪ್ರಮುಖರು ಪಾಲ್ಗೊಳ್ಳಲಿದ್ದಾರೆ. ಬಳ್ಳಾರಿ ಎಸ್ ಟಿ ಮೀಸಲು ಕ್ಷೇತ್ರದಲ್ಲಿ ಈ. ತುಕಾರಾಂ ಅವರೂ ಶುಕ್ರವಾರವೇ ನಾಮಪತ್ರ ಸಲ್ಲಿಸಲಿದ್ದಾರೆ. ಮಾಜಿ ಸಿಎಂಗಳಾದ ಜಗದೀಶ ಶೆಟ್ಟರ್ ಬೆಳಗಾವಿಯಲ್ಲಿ ಹಾಗೂ ಬಸವರಾಜ ಬೊಮ್ಮಾಯಿ ಹಾವೇರಿ ಕ್ಷೇತ್ರದಲ್ಲಿ, ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಧಾರವಾಡ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಗಳಾಗಿದ್ದು, ಇವರು ಸೇರಿದಂತೆ ಹಲವು ಪ್ರಮುಖರು 2ನೇ ಹಂತದ ಈ ಚುನಾವಣೆ ಎದುರಿಸುತ್ತಿದ್ದಾರೆ. 2ನೇ ಹಂತದ…
ಔರಾದ್: ಪವಿತ್ರ ರಂಜಾನ್ ಹಬ್ಬದ ನಿಮಿತ್ಯ ಔರಾದ್ ಪಟ್ಟಣದ ಈದ್ಗಾ ಮೈದಾನಕ್ಕೆ ಭೇಟಿ ನೀಡಿ, ಪ್ರಾರ್ಥನೆಯಲ್ಲಿ ಪಾಲ್ಗೊಂಡ ಮುಖಂಡ ಡಾ. ಭೀಮಸೇನರಾವ ಶಿಂಧೆ, ಮುಸ್ಲಿಂ ಬಾಂಧವರಿಗೆ ಹಬ್ಬದ ಶುಭಾಶಯ ಕೋರಿದರು. ರಂಜಾನ್ ಮಾಸ ಹಾಗೂ ಅದೇ ಅವಧಿಯಲ್ಲಿ ಬರುವ ರಂಜಾನ್ ಹಬ್ಬ ಮುಸಲ್ಮಾನ ಸಮುದಾಯದ ಸಹೋದರರ ಅತ್ಯಂತ ಪವಿತ್ರ ಹಬ್ಬ, ಈ ಹಬ್ಬ ಶಾಂತಿ, ಸಾಮರಸ್ಯದ ಸಂದೇಶಗಳನ್ನು ವಿಶ್ವದಲ್ಲಿ ಸಾರಿದೆ. ಈ ಹಬ್ಬದ ಸಂದೇಶ ನಾವೆಲ್ಲರೂ ಪಾಲಿಸುವುದು ಇಂದಿನ ದಿನದಲ್ಲಿ ಅಗತ್ಯವಾಗಿದೆ. ನಾವು ಎಲ್ಲರು ಸಹೋದರತೆ, ಶಾಂತಿಯೊಂದಿಗೆ ಸಹಬಾಳ್ವೆ ನಡೆಸಬೇಕಿದೆ ಎಂದರು. ರಂಜಾನ್ ಅಂಗವಾಗಿ ನಡೆದ ಸಾಮೂಹಿಕ ಪ್ರಾರ್ಥನೆಯಲ್ಲಿ ಡಾ. ಭೀಮಸೇನರಾವ ಶಿಂಧೆ ಅವರು ಎಲ್ಲ ಮುಸ್ಲಿಂ ಬಾಂಧವರೊಂದಿಗೆ ಭಾಗವಹಿಸಿ ಸಾಮರಸ್ಯಕ್ಕಾಗಿ ಪ್ರಾರ್ಥನೆ ಸಲ್ಲಿಸಿದರು. ಈ ಸಂದರ್ಭದಲ್ಲಿ ಅಯೂಬ್ ಮಾನುರಕರ್, ಡಾ ಫಯಾಜ್ ಅಲೀ, ಅಬ್ದುಲ್ ರಹೀಮ್, ಶೇಖ್ ಫರೀದ್, ಘುಡುಸಾಬ, ಅಮಿರೋದ್ದಿನ್, ಗಂಗಾಧರ ಮಜಿಗೆ, ಮಲ್ಲಿಕಾರ್ಜುನ ಪಾಟೀಲ್, ಚನ್ನಪ್ಪ ಉಪ್ಪೆ, ರಾಮಣ್ಣ ವಡಿಯಾರ,ಶಿವರಾಜ ದೇಶಮುಖ, ಸುಧಾಕರ ಕೊಳ್ಳುರ್, ಅಂಜಾರೆಡ್ಡಿ, ಅನಿಲ್…
ಲೋಕಸಭೆ ಚುನಾವಣೆಯ ಮೊದಲ ಹಂತದ ಮತದಾನಕ್ಕೆ ಇನ್ನು ಕೆಲವೇ ದಿನಗಳು ಬಾಕಿಯಿದ್ದು, ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಹಗರಣಗಳ ಪೋಸ್ಟರ್ ಗಳು ತಮಿಳುನಾಡಿನ ಹಲವೆಡೆ ರಾರಾಜಿಸುತ್ತಿವೆ. ಪೋಸ್ಟರ್ ಗಳ ಮೇಲ್ಭಾಗದಲ್ಲಿ “ಜಿ ಪೇ” ಎಂದು ಬರೆಯಲಾಗಿದ್ದು, ಅದರ ಮೇಲೆ ಪ್ರಧಾನಿ ಮೋದಿಯವರ ಫೋಟೋ ಮತ್ತು ಕ್ಯೂಆರ್ ಕೋಡ್ ಇದೆ. ಅದರಲ್ಲಿ “ದಯವಿಟ್ಟು ಸ್ಕ್ಯಾನ್ ಮಾಡಿ ಮತ್ತು ಸ್ಕ್ಯಾಮ್ ನೋಡಿ” ಎಂದು ಬರೆಯಲಾಗಿದೆ. ಪೋಸ್ಟರ್ ಅನ್ನು ಸ್ಕ್ಯಾನ್ ಮಾಡುವುದರಿಂದ ಮೊಬೈಲ್ ಫೋನ್ ಬಳಕೆದಾರರನ್ನು ವೀಡಿಯೊಗೆ ಕರೆದೊಯ್ಯುತ್ತದೆ. ಚುನಾವಣಾ ಬಾಂಡ್ ಗಳ ಮೂಲಕ ಬಿಜೆಪಿಯ ಭ್ರಷ್ಟಾಚಾರ, ಸಿಎಜಿ ವರದಿಯಲ್ಲಿ ಹೈಲೈಟ್ ಆಗಿರುವ ಅಕ್ರಮಗಳು, ವಿವಿಧ ಮೂಲಸೌಕರ್ಯ ಯೋಜನೆಗಳಲ್ಲಿನ ಭ್ರಷ್ಟಾಚಾರ ಇತ್ಯಾದಿಗಳನ್ನು ವ್ಯಕ್ತಿಯೊಬ್ಬರು ವಿವರಿಸುವುದನ್ನು ವೀಡಿಯೊದಲ್ಲಿ ಕೇಳಲಾಗಿದೆ. ಪೋಸ್ಟರ್ ಗಳನ್ನು ಡಿಎಂಕೆ ಹಾಕಿದೆ ಎಂಬ ಊಹಾಪೋಹವಿದೆ, ಆದರೆ ಇನ್ನೂ ಯಾವುದೇ ದೃಢೀಕರಣವಿಲ್ಲ. ತಮಿಳುನಾಡಿನ 39 ಲೋಕಸಭಾ ಸ್ಥಾನಗಳಿಗೆ ಏಪ್ರಿಲ್ 19 ರಂದು ಒಂದೇ ಹಂತದಲ್ಲಿ ಚುನಾವಣೆ ನಡೆಯಲಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ…
ಮಧ್ಯಪ್ರದೇಶದ ನಿವೃತ್ತ ಐಎಎಸ್ ಅಧಿಕಾರಿ ಸುಬ್ರಮಣಿಯನ್ ಲಕ್ಷ್ಮೀ ನಾರಾಯಣ್ ಎಂಬವರು ಚೈತ್ರ ನವರಾತ್ರಿಯ ಮೊದಲ ದಿನದಂದು ರಾಮ ಮಂದಿರ ಟ್ರಸ್ಟ್ ಗೆ 7ಕೆಜಿ ಚಿನ್ನದಿಂದ ತಯಾರಿಸಿದ ಸುವರ್ಣ ರಾಮಾಯಣವನ್ನು ಉಡುಗೊರೆಯಾಗಿ ನೀಡಿದ್ದಾರೆ. ಏಳು ಕಿಲೋ ಚಿನ್ನವನ್ನು ಬಳಸಿ ಮಾಡಿದ ಚಿನ್ನದ ಪುಟಗಳಲ್ಲಿ ಬರೆದ ರಾಮಾಯಣವನ್ನು ರಾಮನ ಗರ್ಭಗುಡಿಯಲ್ಲಿ ಪ್ರತಿಷ್ಠಾಪಿಸಲಾಗಿದೆ. ಲಕ್ಷ್ಮೀ ನಾರಾಯಣ್ ತಮ್ಮ ಇಡೀ ಜೀವಮಾನದ ಉಳಿತಾಯವನ್ನು ಬಾಲರಾಮನಿಗೆ ಅರ್ಪಿಸುವುದಾಗಿ ವಾಗ್ದಾನ ಮಾಡಿದ್ದಾರೆ ಎನ್ನಲಾಗಿದೆ. ಸುಮಾರು 151 ಕೆಜಿ ತೂಕದ ‘ರಾಮಚರಿತ ಮಾನಸ’ ಪ್ರತಿಯನ್ನು 5 ಕೋಟಿ ರೂಪಾಯಿ ವೆಚ್ಚದಲ್ಲಿ ಸಿದ್ಧಪಡಿಸಲಾಗಿದೆ. 10,902 ಕಾವ್ಯಗಳನ್ನು ಒಳಗೊಂಡಿರುವ ರಾಮಾಯಣದ ಪ್ರತಿ ಪುಟವು 24 ಕ್ಯಾರೆಟ್ ಚಿನ್ನದಿಂದ ಲೇಪಿತವಾಗಿದೆ. ಈ ಚಿನ್ನದ ಪ್ರತಿಕೃತಿಯು ಸರಿಸುಮಾರು 480-500 ಪುಟಗಳನ್ನು ಒಳಗೊಂಡಿದೆ. ಇದನ್ನು ತಯಾರಿಸಲು 140 ಕೆಜಿಯಷ್ಟು ತಾಮ್ರವನ್ನು ಸಹ ಬಳಸಲಾಗಿದೆ. ಏಪ್ರಿಲ್ 9, ಮಂಗಳವಾರದಿಂದ ಅಯೋಧ್ಯೆಯಲ್ಲಿ ಶ್ರೀರಾಮ ನವಮಿ ಆಚರಣೆ ಆರಂಭವಾಗಿದೆ. ಅಯೋಧ್ಯೆಯ ಮಠದ ದೇವಾಲಯಗಳಲ್ಲಿ ರಾಮಕಥೆ, ರಾಮಲೀಲಾ ಮತ್ತು ಭಜನಾ ಸಂಧ್ಯಾವನ್ನು ಆಯೋಜಿಸಲಾಗುತ್ತಿದೆ. ದೇವಾಲಯದ…
ಜೆಡಿಎಸ್ ನವರು ಬಾಲಗಂಗಾಧರ ಶ್ರೀಗಳಿಗೆ ಎಷ್ಟು ಕಿರುಕುಳ ಕೊಟ್ಟರು ಎಂದು ಸಹ ಗೊತ್ತಿದೆ. ನಿರ್ಮಲಾನಂದನಾಥ ಶ್ರೀಗಳ ಫೋನ್ ಅನ್ನು ಕುಮಾರಸ್ವಾಮಿ ಸಿಎಂ ಆಗಿದ್ದಾಗ ಟ್ಯಾಪ್ ಮಾಡಿಸಿದ್ರು. ಈಗ ಹೇಗೆ ಶ್ರೀಗಳ ಬಳಿ ಹೋಗಿ ಆಶೀರ್ವಾದ ಕೇಳ್ತಾರೆ ಎಂದು ಸಚಿವ ಚಲುವರಾಯಸ್ವಾಮಿ, ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ವಿರುದ್ಧ ಗಂಭೀರ ಆರೋಪ ಮಾಡಿದ್ದಾರೆ. ಸಚಿವ ಚಲುವರಾಯಸ್ವಾಮಿ ಮಾತನಾಡಿ, ಹಿಂದೆ ಕುಮಾರಸ್ವಾಮಿ ಅವರು ಸಿಎಂ ಆಗಿದ್ದಾಗ ಆದಿಚುಂಚನಗಿರಿಯ ನಿರ್ಮಲಾನಂದನಾಥ ಸ್ವಾಮೀಜಿ ಅವರ ಫೋನ್ ನನ್ನು ಟ್ಯಾಪ್ ಮಾಡಿದ್ದಾರೆ. ಇದೀಗ ಹೇಗೆ ಅವರ ಬಳಿ ಹೋಗಿ ಕುಮಾರಸ್ವಾಮಿ ಆಶೀರ್ವಾದ ಕೇಳ್ತ ಇದ್ದಾರೆ. ನಾವು ಸಹ ಜೆಎಸ್ಎಸ್, ಸಿದ್ದಗಂಗಾ, ಚುಂಚನಗಿರಿ ಮಠಗಳಿಗೆ ನಾವು ಹೋಗಿದ್ದೀವಿ, ಅವರು ಹೋಗಿದ್ದಾರೆ. ಇದು ಚುನಾವಣೆ ವೇಳೆ ಸಹಜವಾಗಿದೆ ಎಂದು ಹೇಳಿಕೆ ನೀಡಿದ್ದಾರೆ. ಚುಂಚನಗಿರಿ ಮಠ ಒಕ್ಕಲಿಗ ಸಮುದಾಯ ಮಠ ಆದ್ರೂ ಸಹ ರಾಜ್ಯದಲ್ಲಿ ಅತ್ಯಂತ ಜಾತ್ಯತೀತ ಮಠವಾಗಿದೆ. ಎಲ್ಲಾ ಜಾತಿಗಳನ್ನು ಪ್ರೀತಿಸಿ ಬೆಳೆಸಿದವರು ಬಾಲಗಂಗಾಧರನಾಥ ಶ್ರೀಗಳು. ಜೆಡಿಎಸ್ ನವರು ಬಾಲಗಂಗಾಧರ ಶ್ರೀಗಳಿಗೆ ಎಷ್ಟು…
ಯುಗಾದಿ ಹಬ್ಬದ ಪ್ರಯುಕ್ತ ಸ್ಕೂಟರ್ ತೊಳೆಯಲು ಮುಂದಾದ ಪೂರ್ವ ಬೆಂಗಳೂರಿನ ದೊಡ್ಡನೆಕ್ಕುಂದಿ ಬಳಿಯ ವಿಜ್ಞಾನನಗರದಲ್ಲಿ ಮಧ್ಯವಯಸ್ಕನೊಬ್ಬ ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದಿದ್ದಾರೆ. ತನ್ನ ವಾಹನವನ್ನು ತೊಳೆಯಲು ಕಾವೇರಿ ನದಿಯಿಂದ ಸರಬರಾಜು ಮಾಡಿದ ನೀರನ್ನು ಬಳಸುವುದನ್ನು ಕಂಡು 5,000 ರೂಪಾಯಿ ದಂಡ ಹಾಕಿದ್ದಾರೆ. ಬಿಡಬ್ಲ್ಯುಎಸ್ ಎಸ್ಬಿ ಅಧಿಕಾರಿಗಳ ಪ್ರಕಾರ, ವಾಹನಗಳನ್ನು ತೊಳೆಯಲು ಮತ್ತು ತೋಟಗಾರಿಕೆಗೆ ಕುಡಿಯುವ ನೀರನ್ನು ಬಳಸಿದ್ದಕ್ಕಾಗಿ ಕಳೆದ ಒಂದು ತಿಂಗಳ ಅವಧಿಯಲ್ಲಿ ಸಿಕ್ಕಿಬಿದ್ದ 407ನೇ ವ್ಯಕ್ತಿ ಎಂದು ಟೈಮ್ಸ್ ಆಫ್ ಇಂಡಿಯಾ ವರದಿ ಮಾಡಿದೆ. “ನಾವು ಏಪ್ರಿಲ್ 9 ರವರೆಗೆ 407 ಜನರಿಗೆ ದಂಡ ವಿಧಿಸಿದ್ದೇವೆ ಮತ್ತು ಇದುವರೆಗೆ ಉಲ್ಲಂಘಿಸಿದವರಿಂದ 20.3 ಲಕ್ಷ ರೂಪಾಯಿಗಳನ್ನು ಸಂಗ್ರಹಿಸಿದ್ದೇವೆ” ಎಂದು BWSSB ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಮಂಡಳಿಯು ಮಾರ್ಚ್ 10 ರಿಂದ ವಾಹನ ತೊಳೆಯಲು, ತೋಟಗಾರಿಕೆ ಮತ್ತು ದೊಡ್ಡ ನಿರ್ಮಾಣ ಯೋಜನೆಗಳಿಗೆ ಕುಡಿಯುವ ನೀರನ್ನು ಬಳಸುವುದನ್ನು ನಿಷೇಧಿಸಿದೆ. ಸಾರ್ವಜನಿಕರು ಆ ಉದ್ದೇಶಗಳಿಗಾಗಿ ಸಂಸ್ಕರಿಸಿದ ನೀರನ್ನು ಬಳಸಬೇಕೆಂದು ಅದು ವಿನಂತಿಸಿದೆ. BWSSB ಅಧಿಕಾರಿಗಳು ಕುಡಿಯುವ ನೀರಿನ ದುರುಪಯೋಗದ…
ಮಾಜಿ ಪ್ರಧಾನಿ ಇಂದಿರಾ ಗಾಂಧಿ ಹಂತಕನ ಪುತ್ರ ಪಂಜಾಬ್ ನ ಸಂಸತ್ ಚುನಾವಣೆಯಲ್ಲಿ ಮೀಸಲು ಕ್ಷೇತ್ರದಿಂದ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂದು ವರದಿ ತಿಳಿಸಿದೆ. 12ನೇ ತರಗತಿಯಲ್ಲಿ ಡ್ರಾಪ್ ಔಟ್ ಆಗಿದ್ದ ಸರಬ್ಜಿತ್ ಸಿಂಗ್ ಖಾಲ್ಸಾ(45) ಚುನಾವಣೆಯಲ್ಲಿ ಸ್ಪರ್ಧೆಗಿಳಿದಿದ್ದಾರೆ. ಈತ ದಿವಂಗತ ಪ್ರಧಾನಿಯ ಇಬ್ಬರು ಹಂತಕರಲ್ಲಿ ಒಬ್ಬನಾದ ಬಿಯಾಂತ್ ಸಿಂಗ್ ಮಗ ಎನ್ನಲಾಗಿದೆ. 2014 ಮತ್ತು 2009 ರಲ್ಲಿ ಸರಬ್ಜಿತ್ ಸಿಂಗ್ ಖಾಲ್ಸಾ ಅನುಕ್ರಮವಾಗಿ ಫತೇಘರ್ ಸಾಹಿಬ್ (ಮೀಸಲು) ಮತ್ತು ಬಟಿಂಡಾ ಕ್ಷೇತ್ರಗಳಿಂದ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸಿ ಸೋತಿದ್ದರು. 2019 ರಲ್ಲಿ ಬಹುಜನ ಸಮಾಜ ಪಕ್ಷದ ಅಭ್ಯರ್ಥಿಯಾಗಿದ್ದರು. 2014ರಲ್ಲಿ ಸರಬ್ಜಿತ್, ಚುನಾವಣಾ ಅಫಿಡವಿಟ್ ನಲ್ಲಿ 3.5 ಕೋಟಿ ರೂ. ಆಸ್ತಿಯನ್ನು ಘೋಷಿಸಿಕೊಂಡಿದ್ದರು. ಅವರ ತಾಯಿ ಬಿಮಲ್ ಕೌರ್ (ರೋಪರ್ ಕ್ಷೇತ್ರ) ಮತ್ತು ಅವರ ಅಜ್ಜ ಸುಚಾ ಸಿಂಗ್ (ಬಟಿಂಡಾ ಕ್ಷೇತ್ರ) 1989 ರಲ್ಲಿ ಸಂಸದರಾಗಿದ್ದರು. 1984ರ ಅಕ್ಟೋಬರ್ 31ರಂದು ಇಂದಿರಾ ಗಾಂಧಿ ಅವರ ನಿವಾಸದಲ್ಲಿ ಅಂಗರಕ್ಷಕರಾಗಿದ್ದ ಬಿಯಾಂತ್ ಸಿಂಗ್ ಮತ್ತು ಸತ್ವಂತ್…