Subscribe to Updates
Get the latest creative news from FooBar about art, design and business.
- ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ: ನಿವೃತ್ತಿ ಅಂಚಿನಲ್ಲಿರುವ ಮುಖ್ಯೋಪಾಧ್ಯಾಯ ಅರೆಸ್ಟ್
- ನಾಳೆ ದೆಹಲಿಗೆ ಸಿಎಂ ಸಿದ್ದರಾಮಯ್ಯ ಭೇಟಿ; ನಾಯಕತ್ವ ಬದಲಾವಣೆ ಚರ್ಚೆಗಳ ನಡುವೆ ಹೈಕಮಾಂಡ್ ಬುಲಾವ್
- ಸೇಡು ತೀರಿಸಿಕೊಳ್ಳಲು ವರ್ಷದ ಬಳಿಕ ಅದೇ ಅಪ್ರಾಪ್ತೆ ಮೇಲೆ ಮತ್ತೆ ಲೈಂಗಿಕ ದೌರ್ಜನ್ಯ–ಇಬ್ಬರು ಆರೋಪಿಗಳ ಬಂಧನ
- ಭಟ್ಕಳ: ಕಪ್ಪೆಚಿಪ್ಪು ಸಂಗ್ರಹಿಸಲು ಹೋಗಿ ನೀರಲ್ಲಿ ಮುಳುಗಿ 11 ಮಂದಿ ಸಾವು!
- ಪ್ರೀತಿ ಹೆಸರಲ್ಲಿ ಅಪ್ರಾಪ್ತ ವಯಸ್ಸಿನ ಬಾಲಕಿಗೆ ಲೈಂಗಿಕ ದೌರ್ಜನ್ಯ: ಆರೋಪಿ ವಿರುದ್ಧ ಪೋಕ್ಸೋ ಕೇಸ್ ದಾಖಲು
- ಬಾಲಕನ ಬಲಿ ಪಡೆದಿದ್ದ ಚಿರತೆ ಕೊನೆಗೂ ಸೆರೆ: 14 ದಿನಗಳ ಕಾರ್ಯಾಚರಣೆ ಬಳಿಕ ಸ್ಥಳೀಯರು ನಿಟ್ಟುಸಿರು
- ದಿಢೀರ್ ಹವಾಮಾನ ಬದಲಾವಣೆಗೆ AI ಡೇಟಾ ಸೆಂಟರ್ ಕಾರಣ ಆಗ್ತಾ ಇದೆಯೇ?
- ಗೃಹಲಕ್ಷ್ಮಿ, ಗೃಹಜ್ಯೋತಿ ಫಲಾನುಭವಿಗಳ ಪಟ್ಟಿ ಪರಿಷ್ಕರಣೆಗೆ ರಾಜ್ಯ ಸರ್ಕಾರ ನಿರ್ಧಾರ: ಅನರ್ಹರಿಗೆ ಕೋಕ್!
Author: admin
ಕೊರಟಗೆರೆ: ರಾಜ್ಯದಲ್ಲಿ ಮಳೆ ಇಲ್ಲದೆ ತೀವ್ರ ಬರಗಾಲ ಆವರಿಸಿರುವುದರಿಂದ ರಾಜ್ಯದ 21 ತಾಲೂಕುಗಳನ್ನ ಬರಪೀಡಿತ ತಾಲೂಕುಗಳು ಎಂದು ಘೋಷಿಸಲಾಗಿದ್ದು, ತುಮಕೂರು ಜಿಲ್ಲೆಯ ಕೊರಟಗೆರೆ ತಾಲೂಕನ್ನು ಬರಪೀಡಿ ತಾಲೂಕು ಎಂದು ಘೋಷಣೆ ಮಾಡಲಾಗಿದೆ. ಜಾನುವಾರುಗಳಿಗೆ ಮೇವು ಇಲ್ಲದ ಕಾರಣ ಅವುಗಳನ್ನು ಸಂರಕ್ಷಣೆ ಮಾಡುವ ಸಲುವಾಗಿ ತಾಲೂಕಿನ ಚನ್ನರಾಯನದುರ್ಗ ಹೋಬಳಿಯ ಬುಕ್ಕಾಪಟ್ಟಣ ಗ್ರಾಮದ ದೊಡ್ಡಮ್ಮ ದೇವಿ ದೇವಸ್ಥಾನದ ಸಮುದಾಯದ ಆವರಣದಲ್ಲಿ ಜಾನುವಾರುಗಳಿಗೆ ಮೇವು ಬ್ಯಾಂಕ್ ತೆರೆಯಲು ಜಿಲ್ಲಾಧಿಕಾರಿಗಳು ನಿರ್ಧರಿಸಿದ್ದಾರೆ. ಜಿಲ್ಲಾಧಿಕಾರಿಗಳ ಆದೇಶದಂತೆ ಕೊರಟಗೆರೆಯ ತಹಶೀಲ್ದಾರ್ ಮಂಜುನಾಥ್ ಸ್ಥಳ ಪರಿಶೀಲಿಸಿ ಗುರುತಿಸಿದ್ದು, ಎಲ್ಲಾ ಹೋಬಳಿಗಳ ಅವಶ್ಯಕತೆ ಇರುವ ಸ್ಥಳಗಳನ್ನು ಗುರುತಿಸಿ ಮುಂದಿನ ದಿನಗಳಲ್ಲಿ ಆದಷ್ಟು ಬೇಗ ಎಲ್ಲಾ ಕೇಂದ್ರಗಳಲ್ಲಿ ಶೀಘ್ರವಾಗಿ ಮೇವು ಬ್ಯಾಂಕ್ ತೆರೆಯಲಾಗುವುದು. ರೈತರು ಪಶು ಇಲಾಖೆ ವತಿಯಿಂದ ಮೇವು ವಿತರಣಾ ಕಾರ್ಡನ್ನು ಪಡೆದು ಮೇವು ತೆಗೆದುಕೊಂಡು ಹೋಗಬಹುದು. ಒಂದು ಜಾನುವಾರಿಗೆ ಒಂದು ದಿನಕ್ಕೆ 6 ಕೆ.ಜಿ. ಮೇವನ್ನು ವಿತರಿಸಲಾಗುವುದು ರೈತರು ದಾಖಲೆಗಳೊಂದಿಗೆ ಬಂದು ಒಂದು ಕೆ.ಜಿ. ಮೇವಿಗೆ 2 ರೂ.ಗಳಂತೆ ಹಣವನ್ನು ಪಾವತಿಸಿ,…
ರಾಮನಗರ: ಚುನಾವಣಾಧಿಕಾರಿಗಳು ಕಾಂಗ್ರೆಸ್ ಅವರ ಕೈಗೊಂಬೆ ಆಗಿರೋದು ಸ್ಪಷ್ಟವಾಗಿದೆ ಎಂದು ಅಧಿಕಾರಿಗಳ ವಿರುದ್ಧ ನಿಖಿಲ್ ಕುಮಾರಸ್ವಾಮಿ ಕಿಡಿಕಾರಿದರು. ತೋಟದ ಮನೆಯ ಹೊಸತೊಡಕು ಊಟಕ್ಕೆ ಚುನಾವಣಾಧಿಕಾರಿಗಳು ಬ್ರೇಕ್ ಹಾಕಿದ ವಿಚಾರದ ಕುರಿತು ಮಾತನಾಡಿದ ಅವರು, ಕಾಂಗ್ರೆಸ್ ಸೋಲುವ ಆತಂಕದಲ್ಲಿ ಏನೇನೋ ಆರೋಪ ಮಾಡುತ್ತಿದೆ. ಅವರ ದೂರಿಗೆ ಮಣೆಹಾಕಿ ಅಧಿಕಾರಿಗಳು ತೋಟದ ಮನೆಗೆ ಬಂದು ಪರಿಶೀಲನೆ ಮಾಡಿದ್ದಾರೆ. ಆದರೆ ಕಾಂಗ್ರೆಸ್ ಕುಕ್ಕರ್, ಸೀರೆ ಹಂಚುವ ಬಗ್ಗೆ ಯಾಕೆ ಚುನಾವಣಾ ಆಯೋಗ ಕ್ರಮವಹಿಸುತ್ತಿಲ್ಲ. ಚುನಾವಣಾಧಿಕಾರಿಗಳು ಅವರ ಕೈಗೊಂಬೆ ಆಗಿರೋದು ಸ್ಪಷ್ಟವಾಗಿದೆ ಎಂದು ವಾಗ್ದಾಳಿ ನಡೆಸಿದರು. ರಾಮನಗರದಲ್ಲಿ ಸುಮಾರು 3,700 ಸೀರೆ ಜಪ್ತಿ ಮಾಡಿದ್ದು ನಮ್ಮ ಕಾರ್ಯಕರ್ತರು. ಆಗ ಚುನಾವಣಾ ಆಯೋಗ, ಅಧಿಕಾರಿಗಳು ಏನು ಮಾಡುತ್ತಿದ್ದರು ಎಂದು ಪ್ರಶ್ನಿಸಿದರು. ಸಾಮಾನ್ಯವಾಗಿ ಯುಗಾದಿ ಹಬ್ಬದಲ್ಲಿ ಹೊಸತೊಡಕು ಊಟ ಹಾಕುತ್ತೇವೆ. ನಮ್ಮ ತೋಟದ ಮನೆಯ 100 ರಿಂದ 150 ಮಂದಿ ಕೆಲಸಗಾರರಿಗೆ ಊಟದ ವ್ಯವಸ್ಥೆ ಮಾಡಿದ್ದೆವು. ಅಲ್ಲದೇ ಬಿಜೆಪಿ-ಜೆಡಿಎಸ್ ಮುಖಂಡರು ಸಹ ಊಟಕ್ಕೆ ಸೇರುವ ತೀರ್ಮಾನ ಮಾಡಿದ್ದೆವು. ಇಲ್ಲಿ ಯಾವುದೇ…
ಬೆಂಗಳೂರು: ಈಗಾಗಲೇ ಪತಂಜಲಿ ಉತ್ಪನ್ನಗಳ ಜಾಹೀರಾತು ವಿಚಾರಗಳಲ್ಲಿ ಸುಪ್ರೀಂ ಕೋರ್ಟ್ ಬಾಬಾ ರಾಮ್ ದೇವ್ ವಿರುದ್ಧ ಗರಂ ಆಗಿದ್ದು ಈಗ ಕರ್ನಾಟಕ ಸರ್ಕಾರ ಕೂಡ ಪತಂಜಲಿ ವಿರುದ್ಧ ಸಮರ ಸಾರಿದೆ. ಪತಂಜಲಿ ಉತ್ಪನ್ನಗಳ ಗುಣಮಟ್ಟ ಪರೀಕ್ಷಿಸಲು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಸೂಚನೆ ನೀಡಿದ್ದಾರೆ. ನಗರದಲ್ಲಿ ಮಾತನಾಡಿದ ಅವರು ‘ಪತಂಜಲಿ ಸಂಸ್ಥೆ ಯಾವುದೇ ಪುರಾವೆ ನೀಡದೆ ದಾರಿ ತಪ್ಪಿಸುವ ಕೆಲಸ ಮಾಡುತ್ತಿದೆ. ಅವರು ಆಯುರ್ವೇದ ಮತ್ತು ಭಾರತೀಯ ವೈದ್ಯಕೀಯ ಪದ್ದತಿಗೆ ವಂಚನೆ ಮಾಡುತ್ತಿದ್ದಾರೆ. ದುಡ್ಡು ಮಾಡಿಕೊಳ್ಳಳು ಜನರಿಗೆ ಮೋಸ ಮಾಡುತ್ತಿದ್ದಾರೆ. ಹೀಗಾಗಿ ಪತಂಜಲಿ ಉತ್ಪನ್ನಗಳ ಗುಣಮಟ್ಟ ಪರೀಕ್ಷಿಸಲು ಡ್ರಗ್ ಕಂಟ್ರೋಲ್ ಮತ್ತು ಆಯುಷ್ ಆಯುಕ್ತರಿಗೆ ಸೂಚನೆ ನೀಡಿದ್ದೇನೆ ‘ ಎಂದು ಸಚಿವ ಗುಂಡೂರಾವ್ ಹೇಳಿದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ಬೆಂಗಳೂರು: ಪಕ್ಷದ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ, ಕಾಂಗ್ರೆಸ್ ಪಕ್ಷದ ಹಿರಿಯ ಸಂಸದ ರಾಹುಲ್ ಗಾಂಧಿ ಅವರ ನಾಯಕತ್ವದ ವಿರುದ್ಧ ವಾಗ್ದಾಳಿ ನಡೆಸಿದರು. ದೇಶದಲ್ಲಿ ಲೋಕಸಭೆ ಚುನಾವಣೆ ನಡೆಯುತ್ತಿದೆ ಎಂಬುದನ್ನು ಕಾಂಗ್ರೆಸ್ ಮರೆತಿದೆ ಎಂದು ಟೀಕಿಸಿದರು. “ಕಾಂಗ್ರೆಸ್ ಗೆ ವಿಶ್ವಾಸಾರ್ಹ ನಾಯಕತ್ವ ಮತ್ತು ಸಾಧನೆಗಳ ಕೊರತೆಯಿದೆ. ಈ ಹಿನ್ನಲೆಯಲ್ಲಿ ಕೇಂದ್ರ ಸರ್ಕಾರದ ಅನುದಾನಕ್ಕೆ ಸಂಬಂಧಿಸಿದಂತೆ ಪ್ರಶ್ನೆಗಳನ್ನು ಎತ್ತುವ ಮೂಲಕ ಜನರ ಗಮನವನ್ನು ಬೇರೆಡೆ ಸೆಳೆಯುತ್ತಿದೆ. ಆ ಮೂಲಕ ಅಧಿಕಾರಕ್ಕೆ ಬರುತ್ತೇವೆ ಎಂಬುದು ಅವರ ಭ್ರಮೆಯಾಗಿದೆ” ಎಂದು ಯಡಿಯೂರಪ್ಪ ಹೇಳಿದರು. ಕಳೆದ 10 ವರ್ಷಗಳ ಪ್ರಧಾನಿ ನರೇಂದ್ರ ಮೋದಿಯವರ ಸಾಧನೆಗಳ ಆಧಾರದ ಮೇಲೆ ನಾವು ಚುನಾವಣೆಯನ್ನು ಎದುರಿಸುತ್ತಿದ್ದೇವೆ ಎಂದು ಅವರು ಹೇಳಿದರು. 2014ರಲ್ಲಿ 15.54 ಕೋಟಿ ಇದ್ದ ಭವಿಷ್ಯ ನಿಧಿ ಖಾತೆಗಳ ಸಂಖ್ಯೆ 2022ರಲ್ಲಿ 22.5 ಕೋಟಿಗೆ ಏರಿದೆ ಎಂದು ಕಾಂಗ್ರೆಸ್ ಯಾವುದೇ ಮಾಹಿತಿ ಇಲ್ಲದೆ ಎರಡು ಕೋಟಿ ಉದ್ಯೋಗ ಸೃಷ್ಟಿಯನ್ನು ಪ್ರಶ್ನಿಸುತ್ತಿದೆ ಎಂದು ಆರೋಪಿಸಿದರು. ಅಂಕಿಅಂಶಗಳ ಪ್ರಕಾರ ದೇಶದಲ್ಲಿ…
ಹಸಿ ಮಾವು ತಿನ್ನುವುದರಿಂದಾಗುವ ಅದ್ಭುತ ಪ್ರಯೋಜನಗಳು: ಹಸಿ ಮಾವಿನಲ್ಲಿ ವಿಟಮಿನ್ ಸಿ, ವಿಟಮಿನ್ ಇ, ವಿಟಮಿನ್ ಎ ಮತ್ತು ವಿಟಮಿನ್ ಕೆ ನಂತಹ ಅನೇಕ ರೀತಿಯ ವಿಟಮಿನ್ಗಳು ಕಂಡುಬರುತ್ತವೆ. ಹಸಿ ಮಾವು ಯಕೃತ್ತು ಮತ್ತು ಕರುಳಿನ ಸಮಸ್ಯೆಗಳನ್ನು ಸಹ ಕಡಿಮೆ ಮಾಡುತ್ತದೆ. ನೀವು ಡಿಟಾಕ್ಸ್ ಪಾನೀಯವನ್ನು ತಯಾರಿಸಿ ಕುಡಿಯಬಹುದು. ಹಸಿ ಮಾವಿನ ಹಣ್ಣನ್ನು ತಿನ್ನುವುದರಿಂದ ಸಣ್ಣ ಕರುಳಿನಲ್ಲಿ ಪಿತ್ತರಸ ಸ್ರವಿಸುವಿಕೆಯು ಹೆಚ್ಚಾಗುತ್ತದೆ. ಇದು ಮಲಬದ್ಧತೆ ಮತ್ತು ಅಜೀರ್ಣದಂತಹ ಹೊಟ್ಟೆಯ ಸಮಸ್ಯೆಗಳನ್ನು ಸಹ ನಿಯಂತ್ರಿಸುತ್ತದೆ. ಇದು ಕೆಟ್ಟ ಕೊಲೆಸ್ಟ್ರಾಲ್ ಅನ್ನು ನಿಯಂತ್ರಿಸಲು ಸಹಾಯ ಮಾಡುತ್ತದೆ. ಹುಣಸೆ ಹಣ್ಣಿನ ಆರೋಗ್ಯ ಪ್ರಯೋಜನಗಳು: ಹುಣಸೆ ಹಣ್ಣು ತಿನ್ನುವುದರಿಂದ ಜೀರ್ಣಾಂಗ ವ್ಯವಸ್ಥೆಯು ಸುಧಾರಿಸುತ್ತದೆ ಎಂದು ತಜ್ಞರು ಹೇಳುತ್ತಾರೆ. ಇದರಲ್ಲಿರುವ ಫೈಬರ್ ಅಂಶವು ಹೊಟ್ಟೆಯ ಆರೋಗ್ಯವನ್ನು ಕಾಪಾಡುತ್ತದೆ. ಉತ್ತಮ ರಕ್ತ ಪರಿಚಲನೆಗೆ ಸಹ ಉಪಯುಕ್ತವಾಗಿವೆ. ಇದರ ಗುಣಲಕ್ಷಣಗಳು ಕೆಂಪು ರಕ್ತ ಕಣಗಳ ಉತ್ಪಾದನೆ ಮತ್ತು ಬೆಳವಣಿಗೆಗೆ ಸಹಾಯ ಮಾಡುತ್ತದೆ. ಇದರಲ್ಲಿರುವ ವಿಟಮಿನ್ ಸಿ ಪ್ರತಿರಕ್ಷಣಾ ವ್ಯವಸ್ಥೆಯನ್ನು ಬಲಪಡಿಸಲು ಉಪಯುಕ್ತವಾಗಿದೆ.…
ಕೊರಟಗೆರೆ: ಮುಸ್ಲಿಮರ ಹಬ್ಬಗಳಲ್ಲಿ ಪವಿತ್ರವಾದ ಹಬ್ಬಗಳಲ್ಲಿ ರಂಜಾನ್ ಹಬ್ಬವು ಮೊದಲನೆಯದು. ಈ ಹಬ್ಬವು ಹೆಚ್ಚಿನ ಪ್ರಾಮುಖ್ಯತೆಯನ್ನು ಹೊಂದಿದೆ. ಪ್ರವಾದಿ ಮಹಮ್ಮದ್ ಈ ತಿಂಗಳು ಪವಿತ್ರ ಕುರಾನ್ ನ್ನು ಬಹಿರಂಗ ಪಡಿಸಿದರು ಎಂದು ನಂಬಲಾಗಿದೆ. ಪವಿತ್ರ ರಂಜಾನ್ ನಲ್ಲಿ ಒಂದು ತಿಂಗಳ ಉಪವಾಸ ಮಾಡುವ ಮೂಲಕ ನಮ್ಮ ಸಂಬಂಧ ದೇವರ ಜೊತೆ ಮತ್ತಷ್ಟು ಗಟ್ಟಿಯಾಗುತ್ತೆ ದೇವರಿಗೆ ಹತ್ತಿರವಾಗಲು ಸಹಾಯ ಮಾಡುತ್ತೆ ಎಂದು ಮುಸ್ಲಿಮರು ನಂಬುತ್ತಾರೆ. ಈ ತಿಂಗಳಲ್ಲಿ ಉಪವಾಸ ಮಾಡುದ್ರೆ ಕಷ್ಟ ಸಂಕಷ್ಟಗಳು ಕಡಿಮೆಯಾಗುತ್ತವೆ ಎಂದು ಕೆಲವರು ನಂಬುತ್ತಾರೆ. ಈ ತಿಂಗಳಲ್ಲಿ ಮುಸ್ಲಿಮರು ಬಡವರಿಗೆ ದಾನ-ಧರ್ಮ ಮಾಡುವುದು ಹಾಗೂ ಹಸಿದವರಿಗೆ ಆಹಾರ ನೀಡುವಂತ ಪುಣ್ಯ ಕಾರ್ಯಗಳನ್ನು ಮಾಡುತ್ತಾರೆ. ರಂಜಾನ್ ತಿಂಗಳಲ್ಲಿ ರೋಜಾ ಅಥವಾ ಉಪವಾಸಕ್ಕೆ ಅದರದೇ ಆದ ಮಹತ್ವವಿದೆ. ಸೂರ್ಯೋದಯಕ್ಕೆ ಮುಂಚಿನ ತಿಂಡಿಯನ್ನು ಸೋಹರ್ ಎಂದು ಕರೆಯಲಾಗುತ್ತದೆ. ಸೂರ್ಯೋಸ್ತದ ನಂತರ ಉಪವಾಸವನ್ನು ಮುಕ್ತಾಯಗೊಳಿಸುವ ಪ್ರಕ್ರಿಯೆಯನ್ನು ಇಫ್ತಾರ್ ಎಂದು ಕರೆಯಲಾಗುತ್ತದೆ. ಇನ್ನು ರಂಜಾನ್ ಸಮಯದಲ್ಲಿ ಕೇವಲ ದೇಹಕ್ಕೆ ಮಾತ್ರವಲ್ಲ, ಮನಸ್ಸಿಗೂ ಉಪವಾಸ ಮಾಡಿಸಲಾಗುತ್ತದೆ. ಮುಸ್ಲಿಮರು…
ತುಮಕೂರು: ತುಮಕೂರು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ವಿ. ಸೋಮಣ್ಣ ಪರ ಪ್ರಚಾರಕ್ಕಾಗಿ, ಇಂದು ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಕೆಸ್ತೂರು ಗ್ರಾಮಕ್ಕೆ ಆಗಮಿಸಿದ್ದರು. ತುಮಕೂರು ತಾಲೂಕಿನ ಕೆಸ್ತೂರು ಗ್ರಾಮಕ್ಕೆ ಆಗಮಿಸಿ ವಿ. ಸೋಮಣ್ಣ ಪರ ಮತಯಾಚಿಸಿದರು. ಯಡಿಯೂರಪ್ಪ ಅವರಿಗೆ ಸುರೇಶ್ ಗೌಡ, ಬೈರತಿ ಬಸವರಾಜು, ಸುಧಾಕರ್ ಲಾಲ್ ಸಾಥ್ ನೀಡಿದರು. ಇದೇ ವೇಳೆ ಕಾರ್ಯಕ್ರಮದಲ್ಲಿ ಮಾತನಾಡಿದ ಯಡಿಯೂರಪ್ಪ ಅವರು, “ಎಲ್ಲಾ ಸಮಾಜದವರು ಸೇರಿ ಸೋಮಣ್ಣ ಅವರನ್ನ ಗೆಲ್ಲಿಸೋಕೆ ಬಂದಿದ್ದೀರಿ. ಸೋಮಣ್ಣ ಅವರು 2 ಲಕ್ಷ ಮತಗಳ ಅಂತರದಲ್ಲಿ ಗೆಲ್ಲುತ್ತಾರೆ” ಎಂದು ಭವಿಷ್ಯ ನುಡಿದರು. “ಸೋಮಣ್ಣ ಅವರು ಅಭಿವೃದ್ಧಿ ಮಾಡುವಂತವರು. ಪ್ರಧಾನಿ ಮೋದಿ ಹಾಗೂ ದೇವೇಗೌಡ್ರು ಆಶೀರ್ವಾದ ಮಾಡಿ ತುಮಕೂರು ಜಿಲ್ಲೆಯಲ್ಲಿ ನಿಲ್ಲೋಕೆ ಬಂದಿದ್ದಾರೆ. ಶಿವಕುಮಾರಸ್ವಾಮೀಜಿ ಅವರ ಕರ್ಮಭೂಮಿಗೆ ಬರೋದಕ್ಕೆ ಸಂತೋಷವಾಗಿದೆ ಎಂದರು. ಮೋದಿಯ ಕನಸಿನ ಕೂಸಾದ ಕೈಗಾರಿಕಾ ಕಾರಿಡಾರ್ ತುಮಕೂರಿಗೆ ನೀಡಿದ್ದಾರೆ. 7 ಸಾವಿರ ಕೋಟಿ ಹಣ ಇದಕ್ಕಾಗಿ ಬರಲಿದ್ದು, ಈ ಭಾಗ ಮತ್ತಷ್ಟು ಅಭಿವೃದ್ಧಿ ಆಗಲಿದೆ ಎಂದರು. ತಿಪಟೂರು,…
ತಿಪಟೂರು: ತಿಪಟೂರು ಕಾಂಗ್ರೆಸ್ ಮುಖಂಡ ಲೋಕೇಶ್ ಅವರು, ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ನೂರಾರು ಬೆಂಬಲಿಗರೊಂದಿಗೆ ರಾಜೀನಾಮೆ ನೀಡಿದರು. ಕಳೆದ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸೇರಿ ಶಾಸಕ ಕೆ ಷಡಕ್ಷರಿ ಅವರನ್ನು ಶಾಸಕರನ್ನಾಗಿ ಮಾಡಿದವು. ಆದರೆ ಶಾಸಕರ ಅಹಂಕಾರ ಧೋರಣೆ, ಕುಟುಂಬ ರಾಜಕೀಯ ತಾಲೂಕಿನಲ್ಲಿ ಹೆಚ್ಚುತ್ತಿರುವ ಭ್ರಷ್ಟಾಚಾರ ದಿಂದಾಗಿ, ಯಾವುದೇ ಅಭಿವೃದ್ಧಿ ಕೆಲಸ ಆಗಿಲ್ಲ. ಲೋಕಸಭಾ ಚುನಾವಣೆ ಹತ್ತಿರ ಬಂದರು ನಮ್ಮನ್ನು ಯಾರು ಸಂಪರ್ಕ ಮಾಡಲಿಲ್ಲ. ಇದಕ್ಕೆಲ್ಲ ಶಾಸಕರ ಒತ್ತಡವೇ ಕಾರಣ ಇನ್ನೆರಡು ದಿನ ಮುಖ್ಯಮಂತ್ರಿಗಳು ಬರುವ ಕಾರ್ಯಕ್ರಮವಿದ್ದರೂ ಸಹ ನಮ್ಮನ್ನು ಜಿಲ್ಲಾ ಕಾಂಗ್ರೆಸ್ ಮುಖಂಡರು ಸಹ ಸಂಪರ್ಕ ಮಾಡಿಲ್ಲ. ಎಸ್ ಪಿ ಮುದ್ದಹನುಮೇಗೌಡರು ನಾಮಪತ್ರ ಸಲ್ಲಿಸುವಾಗ ತಿಪಟೂರಿನಿಂದ ನೂರು ಜನ ಕಾರ್ಯಕರ್ತರು ಸಹ ಹೋಗಿಲ್ಲ. ಶಾಸಕರು ಜನತೆಗೆ ಸರಿಯಾಗಿ ಸ್ಪಂಧಿಸುತ್ತಿಲ್ಲ. ತಿಪಟೂರು ನಗರದಲ್ಲಿ ದಿನೇ ದಿನೇ ಕಳ್ಳತನ ಹೆಚ್ಚುತಿದ್ದು, ಶಾಸಕರು ಇತ್ತ ಗಮನ ಕೊಡುತ್ತಿಲ್ಲ ಎಂದು ಆರೋಪಿಸಿದರು. ನನ್ನ ಜೊತೆ ತಾಲೂಕಿನ ನಗರಸಭಾ ಸದಸ್ಯರು ಹಾಗೂ 61 ಜನ…
ಶ್ರೀರಾಮ ಯುಗಪುರುಷ. ಅವರ ಜೀವನ ಪ್ರಾಯೋಗಿಕವಾಗಿತ್ತು. ಅವರು ಏಕಪತ್ನಿಯಾಗಿ ಖ್ಯಾತಿಯನ್ನು ಪಡೆದರು. ಅದಕ್ಕಾಗಿಯೇ ಜನರು ಪ್ರತಿ ವರ್ಷ ಚೈತ್ರ ಮಾಸದ ಶುಕ್ಲ ಪಕ್ಷದ ಒಂಬತ್ತನೇ ದಿನದಂದು ಮಂಗಳಕರವಾದ ಶ್ರೀ ರಾಮನವಮಿಯನ್ನು ಆಚರಿಸುತ್ತಾರೆ. ಈ ವರ್ಷ ಏಪ್ರಿಲ್ 17ರ ಬುಧವಾರದಂದು ನವಮಿ ಆಚರಣೆ ನಡೆಯಲಿದೆ. ಈ ಸಂದರ್ಭದಲ್ಲಿ ನಾಡಿನಾದ್ಯಂತ ಶ್ರೀರಾಮ ಶೋಭಾಯಾತ್ರೆಗಳನ್ನು ಆಯೋಜಿಸಲಾಗಿದೆ. ಆದರೆ ಈ ಹಬ್ಬವು ಜೀವನದಲ್ಲಿ ಅನೇಕ ಸವಾಲುಗಳು, ಸಮಸ್ಯೆಗಳು, ಕಷ್ಟಗಳು ಮತ್ತು ಸಂಕಟಗಳಿಂದ ಹೊರಬರಲು ಹಲವು ಮಾರ್ಗಗಳನ್ನು ತೋರಿಸುತ್ತದೆ. ನವಮಿಯಂದು ನೀವು ಕೆಲವು ಕೆಲಸಗಳನ್ನು ಮಾಡಿದರೆ, ಜೀವನದ ಎಲ್ಲಾ ತೊಂದರೆಗಳು ದೂರವಾಗುತ್ತವೆ ಮತ್ತು ನೀವು ಸಂತೋಷದಿಂದ ಸಮೃದ್ಧರಾಗುತ್ತೀರಿ. ಆರ್ಥಿಕ ಲಾಭ: ಶ್ರೀರಾಮ ನವಮಿಯಂದು ಕೆಂಪು ಬಟ್ಟೆಯನ್ನು ಧರಿಸುವುದು ಶುಭ. 11 ಗೋಮತಿ ಚಕ್ರಗಳು, 11 ಕರಿಬೇವಿನ ಎಲೆಗಳು, 11 ಲವಂಗಗಳು, 11 ಬಟಾಶಗಳನ್ನು (ಬಟಾಶಾ-ಸಕ್ಕರೆಯಿಂದ ಮಾಡಿದ ಪದಾರ್ಥಗಳು) ಕೆಂಪು ಬಟ್ಟೆಯಲ್ಲಿ ಹಾಕಿ ಮತ್ತು ಆ ಬಟ್ಟೆಯನ್ನು ಲಕ್ಷ್ಮಿ ದೇವಿಗೆ ಮತ್ತು ಭಗವಾನ್ ರಾಮನಿಗೆ ಅರ್ಪಿಸಿ. ಒಂದು ಪಾತ್ರೆಯಲ್ಲಿ ನೀರನ್ನು…
ದಾವಣಗೆರೆ/ಶಿವಮೊಗ್ಗ: ಜಿಲ್ಲೆಯ ನ್ಯಾಮತಿ ತಾಲೂಕಿನ ಚಿನ್ನಿಕಟ್ಟಿ ಶಿವಪುರ ರಾಜ್ಯ ಹೆದ್ದಾರಿಯಲ್ಲಿ ಕೆಎಸ್ ಆರ್ ಟಿಸಿ ಮತ್ತು ಓಮಿನಿ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಮೂವರು ದಾರುಣ ಸಾವಿಗೀಡಾಗಿರುವ ಘಟನೆ ನಡೆದಿದೆ. ಶಿವಮೊಗ್ಗದ ಹರಮಘಟ್ಟ ಗ್ರಾಮದ ನಿವಾಸಿಗಳಾದ ನಂಜುಂಡಪ್ಪ(83), ರಾಕೇಶ್(27), ದೇವರಾಜ್(30) ಮೃತ ದುರ್ದೈವಿಗಳಾಗಿದ್ದಾರೆ. ಘಟನೆಯಲ್ಲಿ ಒಂದು ಮಗು ಸೇರಿದಂತೆ ನಾಲ್ವರಿಗೆ ಗಂಭೀರ ಗಾಯಗಳಾಗಿದ್ದು ಚಿಕಿತ್ಸೆಗಾಗಿ ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ. ಉಳಿದವರನ್ನು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದ್ದು ಚಿಕಿತ್ಸೆ ಮುಂದುವರೆದಿದೆ. ಬಸ್-ಕಾರು ಮುಖಾಮುಖಿ ಡಿಕ್ಕಿಯಾಗಿ ಓಮ್ನಿ ಕಾರು ಗುರುತು ಸಿಗದಂತೆ ಆಗಿ ಹೋಗಿದೆ. ಡಿಕ್ಕಿ ರಭಸಕ್ಕೆ ಕಾರಿನಲ್ಲಿ ಸಿಲುಕಿದ್ದ ಮೂವರು ಚೆಲ್ಲಾಪಿಲ್ಲಿಯಾಗಿದ್ದು, ಬಸ್ಸಿನ ಮುಂಭಾಗವು ಛಿದ್ರಗೊಂಡಿದೆ. ಘಟನಾ ಸ್ಥಳಕ್ಕೆ ಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ನ್ಯಾಮತಿ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296