Subscribe to Updates
Get the latest creative news from FooBar about art, design and business.
- ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ: ನಿವೃತ್ತಿ ಅಂಚಿನಲ್ಲಿರುವ ಮುಖ್ಯೋಪಾಧ್ಯಾಯ ಅರೆಸ್ಟ್
- ನಾಳೆ ದೆಹಲಿಗೆ ಸಿಎಂ ಸಿದ್ದರಾಮಯ್ಯ ಭೇಟಿ; ನಾಯಕತ್ವ ಬದಲಾವಣೆ ಚರ್ಚೆಗಳ ನಡುವೆ ಹೈಕಮಾಂಡ್ ಬುಲಾವ್
- ಸೇಡು ತೀರಿಸಿಕೊಳ್ಳಲು ವರ್ಷದ ಬಳಿಕ ಅದೇ ಅಪ್ರಾಪ್ತೆ ಮೇಲೆ ಮತ್ತೆ ಲೈಂಗಿಕ ದೌರ್ಜನ್ಯ–ಇಬ್ಬರು ಆರೋಪಿಗಳ ಬಂಧನ
- ಭಟ್ಕಳ: ಕಪ್ಪೆಚಿಪ್ಪು ಸಂಗ್ರಹಿಸಲು ಹೋಗಿ ನೀರಲ್ಲಿ ಮುಳುಗಿ 11 ಮಂದಿ ಸಾವು!
- ಪ್ರೀತಿ ಹೆಸರಲ್ಲಿ ಅಪ್ರಾಪ್ತ ವಯಸ್ಸಿನ ಬಾಲಕಿಗೆ ಲೈಂಗಿಕ ದೌರ್ಜನ್ಯ: ಆರೋಪಿ ವಿರುದ್ಧ ಪೋಕ್ಸೋ ಕೇಸ್ ದಾಖಲು
- ಬಾಲಕನ ಬಲಿ ಪಡೆದಿದ್ದ ಚಿರತೆ ಕೊನೆಗೂ ಸೆರೆ: 14 ದಿನಗಳ ಕಾರ್ಯಾಚರಣೆ ಬಳಿಕ ಸ್ಥಳೀಯರು ನಿಟ್ಟುಸಿರು
- ದಿಢೀರ್ ಹವಾಮಾನ ಬದಲಾವಣೆಗೆ AI ಡೇಟಾ ಸೆಂಟರ್ ಕಾರಣ ಆಗ್ತಾ ಇದೆಯೇ?
- ಗೃಹಲಕ್ಷ್ಮಿ, ಗೃಹಜ್ಯೋತಿ ಫಲಾನುಭವಿಗಳ ಪಟ್ಟಿ ಪರಿಷ್ಕರಣೆಗೆ ರಾಜ್ಯ ಸರ್ಕಾರ ನಿರ್ಧಾರ: ಅನರ್ಹರಿಗೆ ಕೋಕ್!
Author: admin
ಬೆಂಗಳೂರು: ದಾಂಪತ್ಯ ಕಲಹದಿಂದಾಗಿ ವ್ಯಕ್ತಿಯೊಬ್ಬ “ಕಾಲ್ ಗರ್ಲ್ ಬೇಕಿದ್ದರೆ ಕರೆ ಮಾಡಿ” ಎಂದು ಪತ್ನಿಯ ಫೋಟೋ ಹಾಗೂ ದೂರವಾಣಿ ಸಂಖ್ಯೆಯನ್ನು ಫೇಸ್ಬುಕ್ ನಲ್ಲಿ ಪೋಸ್ಟ್ ಮಾಡಿದ ವಿಚಿತ್ರ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ದಾಂಪತ್ಯ ಕಲಹವೇ ಘಟನೆಗೆ ಮುಖ್ಯ ಕಾರಣ ಎಂಬುದು ಪ್ರಾಥಮಿಕ ಹಂತದ ತನಿಖೆ ಎಂದು ತಿಳಿದು ಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ನಂದಿನಿ ಲೇಔಟ್ ವ್ಯಾಪ್ತಿಯ ಸತ್ಯನಾರಾಯಣ ರೆಡ್ಡಿ ಮತ್ತು ಆತನ ಪತ್ನಿ ಮಧ್ಯೆ ದಾಂಪತ್ಯ ಕಲಹವಿದ್ದು, ಈ ದಂಪತಿ ಒಂದು ವರ್ಷದಿಂದಬೇರ್ಪಟ್ಟು ಜೀವನ ನಡೆಸುತ್ತಿದ್ದರು. ಆರೋಪಿಯಾದ ಪತಿ ಪತ್ನಿ ವಿರುದ್ಧ ಸೇಡು ತೀರಿಸಲು ಸಾಮಾಜಿಕ ಮಾಧ್ಯಮ ಫೇಸ್ ಬುಕ್ ನಲ್ಲಿ ‘ಕಲಾ ಶಶಿ’ ಎಂದು ಫೇಸ್ಬುಕ್ ಪೇಜ್ ಕ್ರಿಯೇಟ್ ಮಾಡಿದ್ದಾನೆ. ಅದಾದ ಬಳಿಕ ಆರೋಪಿಯು ಅದರಲ್ಲಿ ಪತ್ನಿಯ ದೂರವಾಣಿ ಸಂಖ್ಯೆ, ಫೋಟೋ ಮತ್ತು ಆಕೆಯ ಸಹೋದರನ ಮೊಬೈಲ್ ಸಂಖ್ಯೆ ಕೂಡ ಪೋಸ್ಟ್ ಮಾಡಿದ್ದ. ಇಷ್ಟೇ ಅಲ್ಲದೆ, ಕಾಲ್ ಗರ್ಲ್ ಬೇಕಿದ್ದಲ್ಲಿ ಸಂಪರ್ಕಿಸಿ ಎಂದು ಪೋಸ್ಟ್ ಹಾಕಿದ್ದ. ಇದರಿಂದಾಗಿ ಸಂತ್ರಸ್ತೆ…
ತುಮಕೂರು: ತೆಂಗಿನ ನಾರಿನ ಫ್ಯಾಕ್ಟರಿಗೆ ಬೆಂಕಿ ಕಾಣಿಸಿಕೊಂಡ ಪರಿಣಾಮ ಲಕ್ಷಾಂತರ ರೂ. ಮೌಲ್ಯದ ಸಾಮಗ್ರಿಗಳು ಸುಟ್ಟು ಕರಕಲಾಗಿರುವ ಘಟನೆ ಜಿಲ್ಲೆಯ ತುರುವೇಕೆರೆ ತಾಲೂಕಿನ ಮಾಯಸಂದ್ರದಲ್ಲಿ ನಡೆದಿದೆ. ತುಮಕೂರು ರಸ್ತೆಯಲ್ಲಿರುವ ದೊಡ್ಡ ಮಲ್ಲಿಗೆರೆ ಗೇಟ್ ಬಳಿ ಭೂ ಮಾಲೀಕರಾದ ಹನುಮಂತರಾಜು ಎಂಬುವರಿಗೆ ಸೇರಿದ ಜಾಗದಲ್ಲಿ, ಸುಮಾರು ಮೂರು ಎಕರೆ ಜಾಗದಲ್ಲಿ, ಮೂರ್ನಾಲ್ಕು ಜನ ಷೇರುದಾರರ ಮಾಲೀಕತ್ವದಲ್ಲಿ ಈ ತೆಂಗಿನ ನಾರಿನ ಫ್ಯಾಕ್ಟರಿ ನಡೆಯುತ್ತಿತ್ತು. ನಿನ್ನೆ ಮಧ್ಯಾಹ್ನ ಸುಮಾರು 2 ರಿಂದ 3:30 ರ ಸಮಯದಲ್ಲಿ ಅಗ್ನಿ ಅವಘಡದಿಂದ ಒಂದು ಕೋಟಿಗೂ ಅಧಿಕ ನಷ್ಟ ಸಂಭವಿಸಿದೆ. ಕೆಲವು ಮೂಲಗಳ ಪ್ರಕಾರ ಕೀಡಿಗೇಡಿಗಳು ಫ್ಯಾಕ್ಟರಿಯಿಂದ ಸುಮಾರು 500 ಮೀಟರ್ ದೂರದಲ್ಲಿ ಮಧ್ಯಾಹ್ನ ಧೂಮಪಾನ ಮಾಡಿ ಬೆಂಕಿ ಕಿಡಿಯನ್ನು ಬೀಳಿಸಿದರ ಪರಿಣಾಮ ಈ ಅಗ್ನಿ ಅವಘಡ ನಡೆದಿದೆ ಎಂದು ಶಂಕಿಸಲಾಗಿದೆ. ಘಟನಾ ಸ್ಥಳಕ್ಕೆ ಅಗ್ನಿಶಾಮಕ ದಳ ಅಧಿಕಾರಿಗಳು ಸಿಬ್ಬಂದಿಗಳು ಬೆಂಕಿ ನಂದಿಸುವ ಕಾರ್ಯ ಮಾಡಿದ್ದಾದರೂ ಯಾವುದೇ ಪ್ರಯೋಜನವಾಗಿಲ್ಲ. ತೆಂಗಿನ ನಾರಿನ ಫ್ಯಾಕ್ಟರಿ ಸಂಪೂರ್ಣ ಸುಟ್ಟು ಕರಕಲಾಗಿದೆ. ಇದರಿಂದಾಗಿ…
ಇತ್ತೀಚಿಗೆ ಭಾರತದ ರಕ್ಷಣಾ ಸಚಿವರಾದ ರಾಜನಾಥ್ ಸಿಂಗ್ ಇನ್ನು ಮುಂದೆ ಭಾರತ ಪಾಕಿಸ್ತಾನದ ಒಳಗೆ ನುಗ್ಗಿ ಭಯೋತ್ಪಾದಕರನ್ನು ಕೊಲ್ಲುವುದಾಗಿ ನೀಡಿದ ಹೇಳಿಕೆ ಇಡೀ ವಿಶ್ವದಾದ್ಯಂತ ಚರ್ಚೆಗೆ ಗ್ರಾಸವಾಗಿತ್ತು. ಇಷ್ಟು ದಿನ ಎಲ್ಲಾ ವಿಚಾರಗಳಲ್ಲಿಯೂ ಶಾಂತಿಯುತವಾಗಿ ವರ್ತಿಸುತ್ತಿದ್ದ ಭಾರತದಿಂದ ಇದ್ದಕ್ಕಿದ್ದಂತೆ ಈ ರೀತಿಯ ಹೇಳಿಕೆ ಹೊರಬಂದಿದ್ದು ಎಲ್ಲಾ ರಾಷ್ಟ್ರಗಳಿಗೂ ಅಚ್ಚರಿ ಉಂಟು ಮಾಡಿತ್ತು. ಇದೀಗ, ಈ ಕುರಿತು ಪ್ರತಿಕ್ರಿಯಿಸಿರುವ ಅಮೆರಿಕ ಭಾರತ ಹಾಗೂ ಪಾಕಿಸ್ತಾನದ ನಡುವೆ ಇರುವ ಸಮಸ್ಯೆಗಳನ್ನು ಮಾತುಕತೆಯ ಮೂಲಕ ಪರಿಹರಿಸಲು ಅಮೆರಿಕ ಪ್ರೋತ್ಸಾಹ ನೀಡುತ್ತದೆ. ಆದರೆ ಎರಡು ದೇಶಗಳ ನಡುವಿನ ಉದ್ವಿಗ್ನ ಪರಿಸ್ಥಿತಿ ಮಧ್ಯದಲ್ಲಿ ಅಮೆರಿಕ ಹಸ್ತಕ್ಷೇಪ ಮಾಡುವುದಿಲ್ಲ ಎಂದು ತಿಳಿಸಿದೆ. ಭಯೋತ್ಪಾದಕರು ಭಾರತದಲ್ಲಿ ಶಾಂತಿ ಕದಡಲು ಅಥವಾ ಭಯೋತ್ಪಾದಕ ಚಟುವಟಿಕೆಗಳನ್ನು ನಡೆಸಿದರೆ, ತಕ್ಕ ಉತ್ತರ ನೀಡಲಾಗುವುದು ಮತ್ತು ಅವರು ಪಾಕಿಸ್ತಾನಕ್ಕೆ ಓಡಿಹೋದರೆ, ಅವರನ್ನು ಕೊಲ್ಲಲು ಭಾರತ ಪಾಕಿಸ್ತಾನಕ್ಕೆ ನುಗ್ಗಲಿದೆ ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಕಳೆದ ವಾರ ಹೇಳಿದ್ದರು. “ನಾವು ಈ ವಿಷಯದ ಬಗ್ಗೆ ಮಾಧ್ಯಮ ವರದಿಗಳನ್ನು…
ಪಾವಗಡ ತಾಲ್ಲೂಕು ವೈ.ಎನ್. ಹೊಸಕೋಟೆ ಪಟ್ಟಣದಲ್ಲಿ ರಂಜಾನ್ ಹಬ್ಬದ ಪ್ರಯುಕ್ತ ಮುಸ್ಲೀಮರು ಗುರುವಾರದಂದು ಈದ್ಗಾ ಮೈದಾನದಲ್ಲಿ ಪ್ರಾರ್ಥನೆ ಸಲ್ಲಿಸಿದರು. ಒಬ್ಬರಿಗೊಬ್ಬರು ತಬ್ಬಿ ಶುಭಾಷಯ ಹೇಳಿಕೊಂಡರು. ಬಳಿಕ ಸಾಮೂಹಿಕವಾಗಿ ಪುರಮೆರವಣಿಗೆ ಹೊರಟರು. ಈದ್ಗಾ ಮೈದಾನದಿಂದ ಹೊರಟ ಮೆರವಣಿಗೆ ಗಾಂಧಿವೃತ್ತಕ್ಕೆ ಬಂದು ಅಲ್ಲಾಹು ಅಕ್ಬರ್ ಮತ್ತು ಇಸ್ಲಾಂ ಜಿಂದಾಬಾದ್ ಎಂಬ ಘೋಷಣೆಗಳನ್ನು ಕೂಗಿದರು. ಮುಂದುವರೆದು ಕನ್ಯಕಾಪರಮೇಶ್ವರಿ ದೇವಸ್ಥಾನ ರಸ್ತೆ, ಕಾಳಿದಾಸನಗರ ರಸ್ತೆ ಮೂಲಕ ಮಸೀದಿಗೆ ಸಾಗಿದರು. ರಸ್ತೆಯುದ್ದಕ್ಕೂ ಘೋಷಣೆಗಳು ಪ್ರತಿಧ್ವನಿಸಿದವು. ಪಿಎಸ್ಐ ಮಾಳಪ್ಪ ನಾಯ್ಕೋಡ್ ಸೇರಿದಂತೆ ಪೋಲೀಸ್ ಇಲಾಖೆಯ ಸಿಬ್ಬಂದಿ ಅಗತ್ಯ ಬಂದೋಬಸ್ತು ನೀಡಿದರು. ವರದಿ: ನಂದೀಶ್ ನಾಯ್ಕ ಪಾವಗಡ ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಪ್ರಕಟಗೊಂಡಿದ್ದು, ರಾಜ್ಯದಲ್ಲಿ ಶೇ 81.15 ಮಂದಿ ಉತ್ತೀರ್ಣಗೊಂಡಿದ್ದಾರೆ. 2024ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಕಲಾ ವಿಭಾಗದಲ್ಲಿ 1,28,448 ವಿದ್ಯಾರ್ಥಿಗಳು ಪಾಸ್ ಆಗಿದ್ದಾರೆ. ವಾಣಿಜ್ಯ ವಿಭಾಗದಲ್ಲಿ 1,74,315 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದರೇ, ವಿಜ್ಞಾನ ವಿಭಾಗದಲ್ಲಿ 2,49,927 ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದಾರೆ. ಅನೇಕ ವಿದ್ಯಾರ್ಥಿಗಳಿಗೆ ತಮಗೆ ಬರಬೇಕಾದ ಅಂಕ ಬಂದಿಲ್ಲ ಅಥವಾ ಸಂದೇಹಗಳಿದ್ದರೇ, ಅಥವಾ ಉತ್ತರ ಪತ್ರಿಕೆಗಳ ಸ್ಕ್ಯಾನ್ಡ್ ಪ್ರತಿಗಾಗಿ, ಮರು ಮೌಲ್ಯಮಾಪನಕ್ಕಾಗಿ ಅರ್ಜಿ ಸಲ್ಲಿಸಲು ಅವಕಾಶವಿದೆ ಎಂದು ಮೌಲ್ಯಮಾಪನ ಮಂಡಳಿ ತಿಳಿಸಿದೆ. ಉತ್ತರ ಪತ್ರಿಕೆ ಸ್ಕ್ಯಾನ್ಡ್ ಪ್ರತಿಯನ್ನು ಪಡೆಯಲು ಏಪ್ರಿಲ್ 16ರ ತನಕ ಅರ್ಜಿ ಸಲ್ಲಿಸಲು ಅವಕಾಶವಿದೆ. ಉತ್ತರ ಪತ್ರಿಕೆ ಸ್ಕ್ಯಾನ್ಡ್ ಪ್ರತಿಯನ್ನು ಡೌನ್ ಲೋಡ್ ಮಾಡಿಕೊಳ್ಳಲು ಏಪ್ರಿಲ್ 19ರ ತನಕ, ಮತ್ತು ಮರು ಮೌಲ್ಯಮಾಪನ ಹಾಗೂ ಮರು ಎಣಿಕೆಗೆ ಏಪ್ರಿಲ್ 14 ರಿಂದ 20ರವರೆಗೆ ಅರ್ಜಿ ಸಲ್ಲಿಸಬಹುದಾಗಿದೆ ಎಂದು ವರದಿ ತಿಳಿಸಿದೆ. ದ್ವೀತಿಯ ಪಿಯುಸಿ ಪರೀಕ್ಷೆ 1ರ ವಿದ್ಯಾರ್ಥಿಗಳ ಫಲಿತಾಂಶ ಪ್ರತಿಯನ್ನು ಕೆಎಸ್ಇಬಿಯು ಈಗಾಗಲೇ ಆಯಾ ಕಾಲೇಜು…
ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ಚುನಾವಣಾ ಪ್ರಚಾರಕ್ಕಾಗಿ ಪ್ರಧಾನಿ ನರೇಂದ್ರ ಮೋದಿ ಫೋಟೋ ಬಳಕೆಯ ವಿವಾದ ಜೋರಾಗಿದೆ. ಬಿಜೆಪಿ ಬಂಡಾಯ ಅಭ್ಯರ್ಥಿ ಕೆಎಸ್ ಈಶ್ವರಪ್ಪ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧೆಗೆ ಮುಂದಾಗಿದ್ದಾರೆ. ಆದ್ರೆ, ಅವರ ಚುನಾವಣಾ ಪ್ರಚಾರದಲ್ಲಿ ಪ್ರಧಾನಿ ನರೇಂದ್ರ ಮೋದಿ ಫೋಟೋ ಬಳಕೆ ಮಾಡುತ್ತಿದ್ದಾರೆ. ಇದು ರಾಜ್ಯ ಬಿಜೆಪಿ ನಾಯಕರ ಆಕ್ರೋಶಕ್ಕೆ ಕಾರಣವಾಗಿದ್ದು, ಇದೀಗ ಈಶ್ವರಪ್ಪ ಅವರು ಚುನಾವಣಾ ನರೇಂದ್ರ ಮೋದಿ ಫೋಟೋ ಮತ್ತು ಹೆಸರು ಬಳಕೆ ಮಾಡದಂತೆ ಬಿಜೆಪಿ, ದೂರು ಚುನಾವಣಾ ಆಯೋಗಕ್ಕೆ ದೂರು ನೀಡಿದೆ. ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಪಿ. ರಾಜೀವ್ ಮತ್ತು ವಿಧಾನ ಪರಿಷತ್ ಸದಸ್ಯ ಛಲವಾದಿ ನಾರಾಯಣಸ್ವಾಮಿ ನೇತೃತ್ವದಲ್ಲಿ ದೂರು ಸಲ್ಲಿಕೆ ಮಾಡಿದ್ದಾರೆ ಎನ್ನಲಾಗಿದೆ. ಶಿವಮೊಗ್ಗದಲ್ಲಿ ಬಂಡಾಯ ಅಭ್ಯರ್ಥಿ ಈಶ್ವರಪ್ಪ ಮೋದಿ ಫೋಟೋ ಬಳಸಿದ್ದಕ್ಕೆ ದೂರು ನೀಡಿದ ಬಳಿಕ ಛಲವಾದಿ ನಾರಾಯಣಸ್ವಾಮಿ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ್ದು. ಈಶ್ವರಪ್ಪ ಮೋದಿ ಫೋಟೋ ಪ್ರಚಾರಕ್ಕೆ ಬಳಸುತ್ತಿದ್ದಾರೆ. ಮೋದಿ ಭಾವಚಿತ್ರವನ್ನ ಬಳಸದಂತೆ ದೂರು ನೀಡಿದ್ದೇವೆ. ಈಶ್ವರಪ್ಪ ಪಕ್ಷದ ಅಭ್ಯರ್ಥಿ ಅಲ್ಲದ ಕಾರಣ…
ಲೋಕಸಭಾ ಅಭ್ಯರ್ಥಿ ಹಾಗೂ ಬಿಜೆಪಿ ಸಂಸದ ಖಗೇನ್ ಮುರ್ಮು ಪ್ರಚಾರದ ವೇಳೆ ಮಹಿಳೆಯ ಕೆನ್ನೆಗೆ ಮುತ್ತಿಡುತ್ತಿರುವ ಚಿತ್ರ ವಿವಾದಕ್ಕೆ ಕಾರಣವಾಗಿದೆ. ಬಂಗಾಳದ ಉತ್ತರ ಮಾಲ್ಡಾ ಕ್ಷೇತ್ರದ ಪಕ್ಷದ ಅಭ್ಯರ್ಥಿಯಾಗಿದ್ದಾರೆ. ಬಿಜೆಪಿ ಅಭ್ಯರ್ಥಿ ತಮ್ಮ ಸಂಸದೀಯ ಕ್ಷೇತ್ರವಾದ ಚಂಚಲ್ ನ ಶ್ರೀಹಿಪುರ ಗ್ರಾಮದಲ್ಲಿ ಚುನಾವಣಾ ಪ್ರಚಾರ ನಡೆಸುತ್ತಿದ್ದ ವೇಳೆ ಈ ಘಟನೆ ನಡೆದಿದೆ. ಖಗೆನ್ ಮುರ್ಮು ಮಹಿಳೆಯನ್ನು ಚುಂಬಿಸುತ್ತಿರುವ ಚಿತ್ರಗಳನ್ನು ಸಾಮಾಜಿಕ ಮಾಧ್ಯಮದಲ್ಲಿ ವ್ಯಾಪಕವಾಗಿ ಹಂಚಿಕೊಳ್ಳಲಾಗಿದೆ. ತೃಣಮೂಲ ಕಾಂಗ್ರೆಸ್ ಪಕ್ಷವು “ಮಹಿಳಾ ವಿರೋಧಿ ರಾಜಕಾರಣಿಗಳ ಪಕ್ಷದಲ್ಲಿ ಕೊರತೆಯಿಲ್ಲ” ಎಂದು ಹೇಳುವ ಮೂಲಕ ಬಿಜೆಪಿಯನ್ನು ಟೀಕಿಸಿ ಎಕ್ಸ್ನಲ್ಲಿ ಪೋಸ್ಟ್ ಮಾಡಿದೆ. ಈ ನಡುವೆ ಖಗೇನ್ ಮುರ್ಮು ಕೂಡ ಪ್ರತಿಕ್ರಿಯೆ ನೀಡಿದ್ದು, ಆಕೆ ಮಗುವಿನಂತೆ ಎಂದು ಹೇಳುವ ಮೂಲಕ ತಾವು ಮುತ್ತುಕೊಟ್ಟಿದ್ದನ್ನು ಸಮರ್ಥಿಸಿಕೊಂಡಿದ್ದಾರೆ. “ಮಗುವಿಗೆ ಮುತ್ತು ಕೊಡುವುದರಲ್ಲಿ ತಪ್ಪೇನಿಲ್ಲ. ಇದು ಸಂಪೂರ್ಣ ತಳಮಟ್ಟದ ಪಿತೂರಿ. ಅವರಿಗೆ ಅಂತಹ ಕೆಟ್ಟ ಮೌಲ್ಯಗಳಿವೆ” ಎಂದು ಬಿಜೆಪಿ ಅಭ್ಯರ್ಥಿ ಹೇಳಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು…
ಗಾಂಜಾ, ಅಫೀಮು, ಕೋಕೇನ್, ಹೆರಾಯಿನ್, ಮರಿಜುವಾನಾ ಸೇರಿದಂತೆ ವಿವಿಧ ರೀತಿಯ ಸಿಂಥೆಟಿಕ್ ಡ್ರಗ್ಸ್ ಗಳ ಆರ್ಭಟ ಸದ್ಯ ವಿವಿಧ ದೇಶಗಳಲ್ಲಿ ಜೋರಿದೆ. ಈ ಕರಾಳ ದಂಧೆಯಲ್ಲಿರುವ ಡ್ರಗ್ಸ್ ಮಾಫಿಯಾದವರು, ಡ್ರಗ್ಸ್ ಪೆಡ್ಲರ್ ಗಳು ಹೊಸ ಬಗೆಯ ಡ್ರಗ್ಸ್ ಗಳ ಪತ್ತೆಗೆ ನಿರಂತರ ಪ್ರಯತ್ನ ಮಾಡುತ್ತಲೇ ಇರುತ್ತಾರೆ. ಪಶ್ಚಿಮ ಆಫ್ರಿಕಾದ ಸಿಯೆರಾ ಲಿಯೋನ್ ನಲ್ಲಿ ಆ ರಾಷ್ಟ್ರಾಧ್ಯಕ್ಷರು ತುರ್ತು ಪರಿಸ್ಥಿತಿ ಘೋಷಿಸಿದ್ದಾರೆ. ಇದಕ್ಕೆ ಕಾರಣ ಹೊಸ ಬಗೆಯ ಒಂದು ಅತ್ಯಂತ ಮಾರಕ ಡ್ರಗ್ಸ್. ಹೌದು, ಈ ದೇಶವನ್ನು ‘ಕುಶ್’ ಎನ್ನುವ ಹೊಸ ಬಗೆಯ ಡ್ರಗ್ಸ್ ಕಂಗೆಡಿಸಿದ್ದು ಅಲ್ಲಿನ ಪೊಲೀಸರು ಡ್ರಗ್ಸ್ ಕುಳಗಳ ಮೇಲೆ ಕಣ್ಣಿಟ್ಟಿರುವುದಲ್ಲದೇ ಸ್ಮಶಾನಗಳನ್ನೂ ಕಾಯುತ್ತಿದ್ದಾರೆ. ಸಿಯೇರಾ ಲಿಯೋನ್ ನಲ್ಲಿ ಇತ್ತೀಚೆಗೆ ಡ್ರಗ್ಸ್ ದಂಧೆಯ ಮೇಲೆ ಕ್ರಮಗಳನ್ನು ಕೈಗೊಂಡು ಸ್ವಲ್ಪ ಮಟ್ಟಿಗೆ ನಿಯಂತ್ರಣಕ್ಕೆ ತಂದಿದ್ದಾರೆ. ಇದರಿಂದ ಪರ್ಯಾಯ ಮಾರ್ಗ ಕಂಡುಕೊಳ್ಳುವ ಸಲುವಾಗಿ ಡ್ರಗ್ಸ್ ತಯಾರಿಸುವವರು, ಪೆಡ್ಲರ್ ಗಳು ‘ಕುಶ್ ಡ್ರಗ್ಸ್’ ಮೊರೆ ಹೋಗಿದ್ದಾರೆ. ಜಾಂಬಿ ಡ್ರಗ್ಸ್ ಎಂದಲೂ ಭಯ ಹುಟ್ಟಿಸುತ್ತಿರುವ ಈ…
ದೇಶದ ಅತಿ ದೊಡ್ಡ ಖಾಸಗಿ ಬ್ಯಾಂಕ್ ಎಚ್ ಡಿಎಫ್ ಸಿ ಲಕ್ಷದ್ವೀಪದ ಕವರಟ್ಟಿಯಲ್ಲಿ ಬುಧವಾರ(ಎ.10) ತನ್ನ ಮೊದಲ ಶಾಖೆ ತೆರೆದಿದೆ. ಈ ಮೂಲಕ ಲಕ್ಷದ್ವೀಪದಲ್ಲಿ ಶಾಖೆ ತೆರೆದ ಮೊದಲ ಖಾಸಗಿ ಬ್ಯಾಂಕ್ ಎನಿಸಿಕೊಂಡಿದೆ.‘ಜನರು ಎಲ್ಲಿರುತ್ತಾರೋ ಅಲ್ಲಿಯೇ ಸೇವೆಯನ್ನು ಒದಗಿಸಬೇಕು ಎನ್ನುವುದು ನಮ್ಮ ಬ್ಯಾಂಕ್ ನ ಉದ್ದೇಶ’ ಎಂದಿದ್ದಾರೆ. ಲಕ್ಷದ್ವೀಪದಲ್ಲಿರುವ ವ್ಯಕ್ತಿಗಳಿಗೆ, ಕುಟುಂಬಗಳಿಗೆ ಹಾಗೂ ಉದ್ಯಮದಾರರಿಗೆ ಸೇವೆಯನ್ನು ನೀಡಲು ಉತ್ಸುಕರಾಗಿದ್ದೇವೆ’ ಎಂದು ಬ್ಯಾಂಕ್ ನ ಮುಖ್ಯಸ್ಥ ಎಸ್. ಸಂಪತ್ ಕುಮಾರ್ ತಿಳಿಸಿದ್ದಾರೆ. ಭಾರತೀಯ ನೌಕಾಪಡೆಯ ಕಮಾಂಡಿಂಗ್ ಅಧಿಕಾರಿ ಕ್ಯಾಪ್ಟನ್ ಲವಕೇಶ್ ಅವರು ಲಕ್ಷ್ಯದ್ವೀಪದಲ್ಲಿ ಕಾರ್ಯಾರಂಭ ಮಾಡಿದ ಎಚ್ ಡಿಎಫ್ ಸಿಯ ಮೊದಲ ಶಾಖೆಗೆ ಚಾಲನೆ ನೀಡಿದರು. ಈ ವೇಳೆ ಬ್ಯಾಂಕ್ ನ ಇತರ ಅಧಿಕಾರಿಗಳು ಹಾಜರಿದ್ದರು ಎಂದು ವರದಿಯಾಗಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ತುಮಕೂರು: ನಗರದ ವಿದ್ಯಾನಿಧಿ ಪದವಿಪೂರ್ವ ಕಾಲೇಜು ವಿದ್ಯಾರ್ಥಿನಿ ಜ್ಞಾನವಿ ಎಂಬ ವಿದ್ಯಾರ್ಥಿನಿ ದ್ವಿತೀಯ ಪಿಯುಸಿ ವಾಣಿಜ್ಯಶಾಸ್ತ್ರ ವಿಭಾಗದಲ್ಲಿ ರಾಜ್ಯಕ್ಕೆ ಪ್ರಥಮ ರಾಂಕ್ ಪಡೆದಿದ್ದಾರೆ. ಮೂಲತಃ ಮಂಡ್ಯ ಜಿಲ್ಲೆಯ ಬೀಚನಹಳ್ಳಿ ಗ್ರಾಮದ ಮಂಜುಳಾ ಹಾಗೂ ಮಂಜುನಾಥ್ ದಂಪತಿಯ ಪುತ್ರಿಯಾಗಿರುವ ಜ್ಞಾನವಿ ಹಾಸ್ಟೆಲ್ ನಲ್ಲಿ ಇದ್ದುಕೊಂಡು ವಿದ್ಯಾನಿಧಿ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದಳು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296