Author: admin

ಪಾವಗಡ: ತಾಲ್ಲೂಕಿನ ವೈ.ಎನ್. ಹೊಸಕೋಟೆ ಹೋಬಳಿಯ ಜೋಡಿಅಚ್ಚಮ್ಮನಹಳ್ಳಿ ಗ್ರಾಮದಲ್ಲಿ ಯುಗಾದಿ ಹಬ್ಬದ ಅಂಗವಾಗಿ, ಶ್ರೀ ಚೌಡೇಶ್ವರಿ ಅಮ್ಮನವರ 54ನೇ ಜ್ಯೋತಿ ಉತ್ಸವವನ್ನು ಬುಧವಾರದಂದು ವಿಜೃಂಭಣೆಯಿಂದ ಆಚರಿಸಲಾಯಿತು. ಬೆಳಿಗ್ಗೆ 9 ಗಂಟೆಗೆ ಪ್ರಾರಂಭವಾದ ಉತ್ಸವ, ಗ್ರಾಮದ ಪ್ರಮುಖ ಬೀದಿಗಳಲ್ಲಿ ಸಾಗಿ ಮಧ್ಯಾಹ್ನ 2ಗಂಟೆಯ ವೇಳೆ ದೇವಾಲಯದಲ್ಲಿ ಕೊನೆಗೊಂಡಿತು. ಉತ್ಸವದ ಉದ್ದಕ್ಕೂ ಹರಕೆ ಹೊತ್ತ ಭಕ್ತಾಧಿಗಳು ನಾರದ ಹಾಕಿಸಿಕೊಂಡು ಹರಕೆ ತೀರಿಸಿದರು. ಗ್ರಾಮಕ್ಕೆ ದುಷ್ಠಶಕ್ತಿಗಳ ಹಾವಳಿ ಬಾರದಿರಲೆಂದು ಪೂಜಾನ್ನವನ್ನು ಹಾಕಲಾಯಿತು. ಮೆರವಣಿಗೆಯಲ್ಲಿ ತೊಗಟವೀರ ಸಮುದಾಯ ಆನಂದ ಪದಗಳನ್ನು ಹಾಡುತ್ತ ದೇವಿಯ ಮೂರ್ತಿಗೆ ಶಕ್ತಿ ತುಂಬಿದರು. ಹಬ್ಬದ ಅಂಗವಾಗಿ ಮೂಲ ದೇವತಾ ಮೂರ್ತಿಗೆ ‘ಅರಶಿಣ ಕುಂಕುಮ’ದ ಅಲಂಕಾರ ಮಾಡಲಾಗಿತ್ತು. ವರದಿ: ನಂದೀಶ್ ನಾಯ್ಕ ಪಾವಗಡ ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

Read More

ಕೊರಟಗೆರೆ: 850 ವರ್ಷಗಳ ಇತಿಹಾಸವುಳ್ಳ ವಡ್ಡಗೆರೆ ವೀರನಾಗಮ್ಮ ಜಾತ್ರಾ ಮಹೋತ್ಸವ ಅದ್ದೂರಿಯಾಗಿ ನೆರೆವೇರಿತು. ಪ್ರತಿ ವರ್ಷ ಯುಗಾದಿ ಹಬ್ಬ ಆದ ಮಾರನೇ ದಿನ ನಡೆಯುವ ವಿಶೇಷ ಜಾತ್ರಾ ಮಹೋತ್ಸವ ಸಡಗರ ಸಂಭ್ರಮದಿಂದ ಆಚರಿಸಲ್ಪಡುತ್ತಿದೆ. ಈ ಜಾತ್ರಾ ಮಹೋತ್ಸವದಲ್ಲಿ ಭಾಗಿಯಾದ ಬಿಜೆಪಿ-ಜೆಡಿಎಸ್ ಮೈತ್ರಿ ಪಕ್ಷದ ಲೋಕಸಭಾ ಅಭ್ಯರ್ಥಿ ವಿ. ಸೋಮಣ್ಣ ಶ್ರೀ ವೀರನಾಗಮ್ಮ ತಾಯಿಯ ಆಶೀರ್ವಾದ ಪಡೆದರು. ಈ ಬಾರಿ ಉತ್ತಮ ಮಳೆಯಾಗಿ ದೇಶದ ಎಲ್ಲ ಜನರಿಗೆ ಸಮೃದ್ಧಿ ಸಿಗಲಿ ಎಂದು ಯುಗಾದಿ ಹಬ್ಬದ ಶುಭ ಹಾರೈಸಿದ ವಿ. ಸೋಮಣ್ಣ ಪ್ರಸಾದ ಬಡಿಸುವ ಸ್ಥಳಕ್ಕೆ ತೆರಲಿ, ಭಕ್ತಾದಿಗಳಿಗೆ ಪ್ರಸಾದ ಬಡಿಸಿದರು. ಮುಂದಿನ ದಿನಗಳಲ್ಲಿ ದೇವಸ್ಥಾನ ಹಾಗೂ ಗ್ರಾಮಗಳಲ್ಲಿ ಅಭಿವೃದ್ಧಿಯ ಕೆಲಸಗಳನ್ನ ಮಾಡೋಣ ಎಂದು ಇದೇ ಸಂದರ್ಭದಲ್ಲಿ ತಿಳಿಸಿದರು. ಇದೇ ಸಂದರ್ಭದಲ್ಲಿ ಬಿಜೆಪಿ ಹಾಗೂ ಜೆಡಿಎಸ್ ಪಕ್ಷದ ಎಲ್ಲ ಮುಖಂಡರು ಅಧ್ಯಕ್ಷರು ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಹಾಜರಿದ್ದರು . ವರದಿ: ಮಂಜುಸ್ವಾಮಿ ಎಂ. ಎನ್., ಕೊರಟಗೆರೆ ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು…

Read More

ವೆಲ್ಲೂರು: ಡಿಎಂಕೆ ತಮಿಳುನಾಡನ್ನು ಹಳೆಯ ಯೋಚನೆ, ಹಳೆಯ ರಾಜಕಾರಣದಲ್ಲಿ ಹಿಡಿದಿಡಲು ಪ್ರಯತ್ನಿಸುತ್ತಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಆರೋಪಿಸಿದರು. ತಮಿಳುನಾಡಿನ ವೆಲ್ಲೂರಿನಲ್ಲಿ ಬುಧವಾರ ರಾಲಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ತಮಿಳುನಾಡಿನ ಆಡಳಿತಾರೂಢ ಡಿಎಂಕೆ ನೇತೃತ್ವದ ಮೈತ್ರಿಕೂಟದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು. ಡಿಎಂಕೆ ಜನರನ್ನು ಪ್ರದೇಶ, ಧರ್ಮ ಮತ್ತು ಜಾತಿಯ ಹೆಸರಿನಲ್ಲಿ ಹೋರಾಡುವಂತೆ ಮಾಡುತ್ತದೆ. ಜನರು ಒಡೆದು ಆಳುವ ರಾಜಕೀಯವನ್ನು ಅರ್ಥಮಾಡಿಕೊಳ್ಳುವ ದಿನ ಪಕ್ಷಕ್ಕೆ ಒಂದೇ ಒಂದು ಮತವೂ ಬರುವುದಿಲ್ಲ ಎಂದು ಪ್ರಾದೇಶಿಕ ಪಕ್ಷಕ್ಕೆ ತಿಳಿದಿದೆ ಎಂದು ಹೇಳಿದ ಅವರು, ಡಿಎಂಕೆ ಸಂಪೂರ್ಣ ಒಬ್ಬ ಶಾಸಕನ ಕಂಪೆನಿಯಾಗಿದೆ ಎಂದರು. ಡಿಎಂಕೆ ಕುಟುಂಬ ರಾಜಕಾರಣದಿಂದ ತಮಿಳುನಾಡಿನ ಯುವಕರಿಗೆ ಮುಂದೆ ಹೋಗಲು ಅವಕಾಶವೇ ಸಿಗುತ್ತಿಲ್ಲ. ಡಿಎಂಕೆ ಯಲ್ಲಿ ಚುನಾವಣೆಗೆ ನಿಲ್ಲಲು ಹಾಗೂ ಅದರಲ್ಲಿ ಮುಂದುವರಿಯಲು ಕುಟುಂಬ ರಾಜಕಾರಣ, ಭ್ರಷ್ಟಾಚಾರ ಮತ್ತು ತಮಿಳು ಸಂಸ್ಕೃತಿ ವಿರೋಧಿ ಗುಣ ಹೊಂದಿರುವುದು ಅಗತ್ಯ ಎಂದು ಆರೋಪಿಸಿದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್…

Read More

ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಶಿರಸಿ- ಯಲ್ಲಾಪುರ ರಸ್ತೆಯ ಪಂಚವಟಿ ಕ್ರಾಸ್‌ ಬಳಿ ನಿಯಂತ್ರಣ ತಪ್ಪಿ ರಾಜಕಾಲುವೆಗೆ ಬೈಕ್ ಬಿದ್ದ ಪರಿಣಾಮ ಒಬ್ಬ ಸ್ಥಳದಲ್ಲೇ ಮೃತಹೊಂದಿದ್ದು, ಇನ್ನೋರ್ವ ಸವಾರ ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿದೆ. ಸಂದೀಪ ಛಲವಾದಿ(24) ಮೃತ ಬೈಕ್ ಸವಾರನಾಗಿದ್ದು, ಸುಭಾಷ್ ದೇವಾಡಿಗ(26) ಗಂಭೀರ ಗಾಯಗೊಂಡವನಾಗಿದ್ದಾನೆ. ಯಲ್ಲಾಪುರದ ಭರತ್ನಳ್ಳಿ ಗ್ರಾಮದ ಈ ಯುವಕರು ಸ್ನೇಹಿತನನ್ನು ಶಿರಸಿ ಬಸ್‌ ನಿಲ್ದಾಣಕ್ಕೆ ಬಿಟ್ಟು ವಾಪಸ್ಸಾಗುವಾಗ, ಇಳಿಜಾರಿನ ರಸ್ತೆ ತಿರುವಿನಲ್ಲಿ ನಿಯಂತ್ರಣ ತಪ್ಪಿದ ಬೈಕ್ ಸುಮಾರು 20 ಅಡಿ ಆಳದ ರಾಜಕಾಲುವೆಗೆ ಬಿದ್ದು, ಅಪಘಾತ ನಡೆದಿದೆ ಎನ್ನಲಾಗಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

Read More

ಕೊಪ್ಪಳ: ಕೊಪ್ಪಳ ತಾಲೂಕಿನ ಬುಡಶೆಟ್ನಾಳ ಗ್ರಾಮದಲ್ಲಿ ಪತ್ನಿಯನ್ನು ಹೊಡೆದು ಕೊಲೆ ಮಾಡಿದ ಪತಿ ಕೊಲೆಯ ನಂತರ ತಾನು ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಪತ್ನಿ ಲಕ್ಷ್ಮವ್ವ(40) ಪತಿಯಿಂದ ಕೊಲೆಯಾದ ಪತ್ನಿಯಾಗಿದ್ದಾರೆ. ಬುಡಶೆಟ್ನಾಳದ ನಿಂಗಪ್ಪ(45) ಪತ್ನಿಯನ್ನು  ಕೊಲೆ ಮಾಡಿ ಆತ್ಮಹತ್ಯೆ ಮಾಡಿಕೊಂಡ ಆರೋಪಿ ಪತಿಯಾಗಿದ್ದಾನೆ. ಹೊಲದಲ್ಲೇ ಘಟನೆ ನಡೆದಿದ್ದು, ಹೊಲದಲ್ಲೇ ಹೆಂಡತಿಯನ್ನು ಕೊಂದು ಹಾಕಿದ ಈತ, ಅಲ್ಲೇ ಇದ್ದ ಮರವೊಂದಕ್ಕೆ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ವಿಪರೀತ ಕುಡಿತದ ಚಟವನ್ನು ಹೊಂದಿದ್ದ ನಿಂಗಪ್ಪ, ಯಾವಾಗಲೂ ಮದ್ಯ ಸೇವಿಸಿ ಬಂದು ಪತ್ನಿಯ ಜೊತೆಗೆ ವಿನಾಕಾರಣ ಜಗಳ ತೆಗೆಯುತ್ತಿದ್ದ ಎಂದು ನೆರೆಕರೆಯವರು ತಿಳಿಸಿದ್ದಾರೆ. ಕೊಪ್ಪಳ ಗ್ರಾಮೀಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ‌ ನಡೆದಿದ್ದು, ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

Read More

ಚಾಮರಾಜನಗರ: ಭಕ್ತರ ಮೇಲೆ ಕಾಡಾನೆ ದಾಳಿ ಮಾಡಿದ್ದು, ಮಹಿಳೆಯೋರ್ವಳು ಸಾವನ್ನಪ್ಪಿದ ಘಟನೆ ಮಹದೇಶ್ವರ ಬೆಟ್ಟದ ಆನೆತಲೆದಿಂಬದ ಬಳಿ ನಡೆದಿದೆ. ಮಳವಳ್ಳಿ ತಾಲೂಕು ಹೊನ್ನೇನಹಳ್ಳಿಯ ಲಕ್ಷ್ಮಿ(40) ಮೃತ ದುರ್ದೈವಿಯಾಗಿದ್ದಾರೆ. ಇವರು ಇತರ ಮೂವರು ಭಕ್ತರ ಜೊತೆ ಮಹದೇಶ್ವರ ಬೆಟ್ಟಕ್ಕೆ ಪಾದಯಾತ್ರೆ ತೆರಳುತ್ತಿದ್ದರು. ಈ ವೇಳೆ ಪಾದಯಾತ್ರಿಗಳ ಮೇಲೆ ಕಾಡಾನೆ ಹಠಾತ್ ದಾಳಿ ನಡೆಸಿದ್ದು, ಈ ಕುರಿತು ಮಲೆ ಮಹದೇಶ್ವರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

Read More

ಗದಗ: ನಡುರಸ್ತೆಯಲ್ಲಿ ಪತ್ನಿಯನ್ನು ಹರಿತವಾದ ಕಬ್ಬಿಣದ ಆಯುಧದಿಂದ ಪತಿ ಮಾರಣಾಂತಿಕವಾಗಿ ಹಲ್ಲೆ ಮಾಡಿರುವ ಘಟನೆ ಗದಗ ಜಿಲ್ಲೆಯ ಮುಂಡರಗಿದಲ್ಲಿ ನಡೆದಿದೆ. ಮುಂಡರಗಿ ಪಟ್ಟಣದ ಪೋಸ್ಟ್ ಆಫೀಸಿನಲ್ಲಿ ಪೋಸ್ಟ್ ವುಮೇನ್ ಆಗಿ ಕೆಲಸ ಮಾಡುತ್ತಿದ್ದ ಗೀತಾ ಹಲ್ಲೆಗೆ ಒಳಗಾದ ಮಹಿಳೆಯಾಗಿದ್ದಾರೆ. ಆರೋಪಿ ಪತಿಯನ್ನು ಪೋಲಿಸರು ಬಂಧಿಸಿದ್ದಾರೆ. ಹಲ್ಲೆಗೊಳಗಾದ ಮಹಿಳೆ ರಕ್ತದ ಮಡುವಿನಲ್ಲಿ ಬಿದ್ದಿದ್ದು ಸಾರ್ವಜನಿಕರು, ಪೊಲೀಸರು ಸೇರಿ ಪೊಲೀಸ್ ಜೀಪಿನಲ್ಲೇ ತಾಲೂಕು ಆಸ್ಪತ್ರೆಗೆ ದಾಖಲಿಸಿದ್ದಾರೆ. ಮಹಿಳೆಯನ್ನು ಪ್ರಾಥಮಿಕ ಚಿಕಿತ್ಸೆಕೊಡಿಸಿ ಹೆಚ್ಚಿನ ಚಿಕಿತ್ಸೆಗಾಗಿ ಗದಗ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಮಹಿಳೆ ಹಾಗೂ ಪತಿ ನಡುವಿನ ಕೌಟುಂಬಿಕ ಕಲಹವೇ ಹಲ್ಲೆಗೆ ಕಾರಣ ಎನ್ನಲಾಗಿದೆ. ಪ್ರಕರಣ ದಾಖಲಿಸಿದ ಪೋಲಿಸರು ತನಿಖೆ ನಡೆಸುತ್ತಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296  

Read More

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ನೀಚ ತಾಯಿಯೊಬ್ಬಳು ಮಕ್ಕಳಿಬ್ಬರ ಜೀವ ತೆಗೆದ ಘಟನೆ ನಡೆದಿದೆ. ಲಕ್ಷ್ಮಿ(7) ಮತ್ತು ಗೌತಮ್(9) ಮೃತ ಮಕ್ಕಳಾಗಿದ್ದಾರೆ. ಇವರನ್ನು ತಾಯಿ ಗಂಗಾದೇವಿ ಕೊಲೆ ಮಾಡಿದ್ದಾಳೆ. ಗಂಗಾದೇವಿ ಕಳೆದ ಮಾರ್ಚ್ ತಿಂಗಳಲ್ಲಿ ಗಂಡನ ಮೇಲೆ ಲೈಂಗಿಕ ದೌರ್ಜನ್ಯ ಕೇಸ್ ದಾಖಲಿಸಿದ್ದಳು. ಗಂಡ ನನ್ನ ಮಗಳ ಮೇಲೆ ಲೈಂಗಿಕ ದೌರ್ಜನ್ಯ ಎಸೆಗುತ್ತಿದ್ದಾನೆಂದು ದೂರು ನೀಡಿದ ಆಧಾರದ ಮೇಲೆ, ಗಂಡನನ್ನ ಬಂಧಿಸಿ ಜಾಲಹಳ್ಳಿ ಪೊಲೀಸರು ಜೈಲಿಗೆ ಕಳಿಸಿದ್ದರು. ಅದಾದ ಬಳಿಕ ಇದೀಗ ಇಬ್ಬರು ಮಕ್ಕಳನ್ನ ಕೊಲೆ ಮಾಡಿದ್ದಾಳೆ. ಹೆತ್ತ ತಾಯಿಯೇ ಮಂಗಳವಾರ ರಾತ್ರಿ ತನ್ನ ಇಬ್ಬರು ಮಕ್ಕಳನ್ನು ಕೊಲೆ ಮಾಡಿದ್ದು, ಬಳಿಕ ಕಂಟ್ರೋಲ್ ರೂಂಗೆ ಕರೆ ಮಾಡಿ “ಮಕ್ಕಳನ್ನ ಉಸಿರುಗಟ್ಟಿಸಿ ಕೊಲೆ ಮಾಡಿದ್ದು, ನಾನು ಆತ್ಮಹತ್ಯೆ ಮಾಡಿಕೊಳ್ಳುವುದಾಗಿ” ಹೇಳಿದ್ದಾಳೆ. ಕೂಡಲೇ ಘಟನಾ ಸ್ಥಳಕ್ಕೆ ಜಾಲಹಳ್ಳಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಅಲ್ಲದೇ ಆರೋಪಿ ಗಂಗಾದೇವಿಯನ್ನ ವಶಕ್ಕೆ ಪಡೆದಿದ್ದಾರೆ. ಈ ಘಟನೆ ಜಾಲಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ…

Read More

ಬೇಸಿಗೆಗೆ ಈ ಪಾನೀಯಗಳು ಉತ್ತಮ ಸೇಬು-ದಾಲ್ಟಿನ್ನಿ ಪಾನೀಯವು ತುಂಬಾ ಆರೋಗ್ಯಕರ ಇದರಲ್ಲಿನ ಫೈಬರ್ ಚಯಾಪಚಯವನ್ನು ಹೆಚ್ಚಿಸುತ್ತದೆ. ನೀರಿನ ಬಾಟಲಿಯಲ್ಲಿ ಸೇಬಿನ ಚೂರು-ದಾಲ್ಟಿನ್ನಿ ಪುಡಿ ಹಾಕಿ ರಾತ್ರಿಯಿಡೀ ನೆನೆಸಿಟ್ಟು ಮರುದಿನ ಕುಡಿಯಿರಿ. ನಿಂಬೆ & ಪುದೀನಾ ನೀರು ತೂಕ ನಷ್ಟಕ್ಕೆ ತುಂಬಾ ಒಳ್ಳೆಯದು. ನಿಂಬೆಯನ್ನು ತುಂಡುಗಳಾಗಿ ಕತ್ತರಿಸಿ ನೀರಿನ ಬಾಟಲಿಗೆ ಹಾಕಿ. ಇದಕ್ಕೆ ಪುದೀನಾ ಸೊಪ್ಪನ್ನು ಸೇರಿಸಿ ರಾತ್ರಿಯಿಡಿ ಇಟ್ಟು ಬೆಳಗ್ಗೆ ಕುಡಿಯಿರಿ. ಒಂದು ಲೋಟ ನೀರಿಗೆ ಕೆಲವು ಸೌತೆಕಾಯಿ ಚೂರುಗಳನ್ನು ಹಾಕಿ ಸ್ವಲ್ಪ ಹೊತ್ತು ಹಾಗೆಯೇ ಇಡಿ. ಇವುಗಳನ್ನು ದಿನವಿಡೀ ಸೇವಿಸ ಈ ಬೇಸಿಗೆಯಲ್ಲಿ ಪಾತ್ರೆಯಲ್ಲಿರುವ ನೀರನ್ನು ಕುಡಿದರೆ ಲಾಭ..! ಮಣ್ಣಿನ ಪಾತ್ರೆಯಲ್ಲಿನ ನೀರು ನೈಸರ್ಗಿಕವಾಗಿ ತಣ್ಣಗಾಗುತ್ತದೆ. ಇದು ರೆಫ್ರಿಜರೇಟರ್ನಲ್ಲಿ ನೀರಿಗಿಂತ ಉತ್ತಮವಾಗಿದೆ. ಇದು ನೈಸರ್ಗಿಕವಾಗಿ ಕ್ಷಾರೀಯವಾಗಿರುವುದರಿಂದ, ಇದು ಸಂಗ್ರಹವಾಗಿರುವ ನೀರಿನ pH ಮಟ್ಟವನ್ನು ಸಮತೋಲನಗೊಳಿಸುತ್ತದೆ. ಇದು ಜೀರ್ಣಕಾರಿ ಸಮಸ್ಯೆಗಳನ್ನು ಉಂಟುಮಾಡುವುದಿಲ್ಲ. ಇದಲ್ಲದೆ, ಈ ನೀರಿನಲ್ಲಿ ನೈಸರ್ಗಿಕವಾಗಿ ಕಂಡುಬರುವ ಖನಿಜಗಳಿವೆ. ಆದ್ದರಿಂದ, ಈ ನೀರನ್ನು ಕುಡಿಯುವುದರಿಂದ ಚಯಾಪಚಯವು ಹೆಚ್ಚಾಗುತ್ತದೆ.. ಇದು ಶಾಖದಿಂದ…

Read More

ಭಾರತೀಯ ಒಲಿಂಪಿಕ್ಸ್ ಸಂಸ್ಥೆಯ ಸದಸ್ಯರ ವಿರುದ್ಧ ಅಧ್ಯಕ್ಷ ಪಿ.ಟಿ. ಉಷಾ ಮಾತನಾಡಿ ಇತರೆ ಸದಸ್ಯರು ನನ್ನನ್ನು ಕಡೆಗಣಿಸುತ್ತಿದ್ದು, ಸಂಘದ ಕಾರ್ಯಕಾರಿ ಮಂಡಳಿ ಸದಸ್ಯರು ಒಂದಾಗಿ ಕೆಲಸ ಮಾಡುತ್ತಿಲ್ಲ ಎಂದು ಬೇಸರ ವ್ಯಕ್ತಪಡಿಸಿದ್ದಾರೆ. ಸದಸ್ಯರಿಗೆ ಕಳುಹಿಸಿರುವ ಪತ್ರದಲ್ಲಿ ಪಿ.ಟಿ. ಉಷಾ ಆಕ್ಷೇಪ ವ್ಯಕ್ತಪಡಿಸಿದರು. ಪಿಟಿ ಉಷಾ ಅವರ ಕಾರ್ಯನಿರ್ವಾಹಕ ಸಹಾಯಕ ಅಜಯ್ ನಾರಂಕ್ ಅವರನ್ನು ಪದಚ್ಯುತಗೊಳಿಸಿದ ವಿರುದ್ಧ ಪತ್ರ ಕಳುಹಿಸಲಾಗಿದೆ. ಕಾರ್ಯಕಾರಿ ಸಮಿತಿಗೆ ನಾರಂಗ್ ಅವರನ್ನು ನೇಮಿಸುವ ಅಥವಾ ವಜಾ ಮಾಡುವ ಅಧಿಕಾರವಿಲ್ಲ ಮತ್ತು ದೈನಂದಿನ ಆಡಳಿತಾತ್ಮಕ ಕಾರ್ಯಗಳು ಕಾರ್ಯಕಾರಿ ಮಂಡಳಿಯ ಕೆಲಸವಲ್ಲ ಎಂದು ಪಿಟಿ ಉಷಾ ಪತ್ರದಲ್ಲಿ ತಿಳಿಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

Read More