Subscribe to Updates
Get the latest creative news from FooBar about art, design and business.
- ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ: ನಿವೃತ್ತಿ ಅಂಚಿನಲ್ಲಿರುವ ಮುಖ್ಯೋಪಾಧ್ಯಾಯ ಅರೆಸ್ಟ್
- ನಾಳೆ ದೆಹಲಿಗೆ ಸಿಎಂ ಸಿದ್ದರಾಮಯ್ಯ ಭೇಟಿ; ನಾಯಕತ್ವ ಬದಲಾವಣೆ ಚರ್ಚೆಗಳ ನಡುವೆ ಹೈಕಮಾಂಡ್ ಬುಲಾವ್
- ಸೇಡು ತೀರಿಸಿಕೊಳ್ಳಲು ವರ್ಷದ ಬಳಿಕ ಅದೇ ಅಪ್ರಾಪ್ತೆ ಮೇಲೆ ಮತ್ತೆ ಲೈಂಗಿಕ ದೌರ್ಜನ್ಯ–ಇಬ್ಬರು ಆರೋಪಿಗಳ ಬಂಧನ
- ಭಟ್ಕಳ: ಕಪ್ಪೆಚಿಪ್ಪು ಸಂಗ್ರಹಿಸಲು ಹೋಗಿ ನೀರಲ್ಲಿ ಮುಳುಗಿ 11 ಮಂದಿ ಸಾವು!
- ಪ್ರೀತಿ ಹೆಸರಲ್ಲಿ ಅಪ್ರಾಪ್ತ ವಯಸ್ಸಿನ ಬಾಲಕಿಗೆ ಲೈಂಗಿಕ ದೌರ್ಜನ್ಯ: ಆರೋಪಿ ವಿರುದ್ಧ ಪೋಕ್ಸೋ ಕೇಸ್ ದಾಖಲು
- ಬಾಲಕನ ಬಲಿ ಪಡೆದಿದ್ದ ಚಿರತೆ ಕೊನೆಗೂ ಸೆರೆ: 14 ದಿನಗಳ ಕಾರ್ಯಾಚರಣೆ ಬಳಿಕ ಸ್ಥಳೀಯರು ನಿಟ್ಟುಸಿರು
- ದಿಢೀರ್ ಹವಾಮಾನ ಬದಲಾವಣೆಗೆ AI ಡೇಟಾ ಸೆಂಟರ್ ಕಾರಣ ಆಗ್ತಾ ಇದೆಯೇ?
- ಗೃಹಲಕ್ಷ್ಮಿ, ಗೃಹಜ್ಯೋತಿ ಫಲಾನುಭವಿಗಳ ಪಟ್ಟಿ ಪರಿಷ್ಕರಣೆಗೆ ರಾಜ್ಯ ಸರ್ಕಾರ ನಿರ್ಧಾರ: ಅನರ್ಹರಿಗೆ ಕೋಕ್!
Author: admin
ಅಬಕಾರಿ ಹಗರಣಕ್ಕೆ ಸಂಬಂಧಿಸಿದಂತೆ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ ತನ್ನನ್ನು ಬಂಧಿಸಿರುವುದನ್ನು ಪ್ರಶ್ನಿಸಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಸಲ್ಲಿಸಿದ್ದ ಮನವಿಯನ್ನು ದೆಹಲಿ ಹೈಕೋರ್ಟ್ ಮಂಗಳವಾರ ವಜಾಗೊಳಿಸಿದೆ. ಕೇಜ್ರಿವಾಲ್ ಅವರ ಬಂಧನವು ಕಾನೂನಿಗೆ ವಿರುದ್ಧವಾಗಿಲ್ಲ ಎಂದು ನ್ಯಾಯಾಲಯವು ಅಭಿಪ್ರಾಯಪಟ್ಟಿದೆ. ಬಂಧನವನ್ನು ಕಾನೂನುಬಾಹಿರವೆಂದು ಪರಿಗಣಿಸಲು ಸಾಧ್ಯವಿಲ್ಲ ಎಂದು ನ್ಯಾಯಮೂರ್ತಿ ಸ್ವರಣಾ ಕಾಂತ ಶರ್ಮಾ ಹೇಳಿದರು. ವೀಡಿಯೊ ಕಾನ್ಸರೆನ್ಸಿಂಗ್ ಮೂಲಕ ನನ್ನನ್ನು ಪ್ರಶ್ನಿಸಬಹುದಿತ್ತು ಎಂಬ ಕೇಜ್ರಿವಾಲ್ ಅವರ ಅರ್ಜಿಯನ್ನು ನ್ಯಾಯಾಲಯವು ತಿರಸ್ಕರಿಸಿದೆ. ಇದಕ್ಕೆ ಪ್ರತಿಕ್ರಿಯಿಸಿರುವ ನ್ಯಾಯಲಯವು “ತನಿಖೆಯನ್ನು ಹೇಗೆ ಮಾಡಬೇಕೆಂದು ಆರೋಪಿಗೆ ನಿರ್ಧರಿಸಲು ಅವಕಾಶವಿಲ್ಲ. ಆರೋಪಿಯ ಅನುಕೂಲಕ್ಕೆ ತಕ್ಕಂತೆ ವಿಚಾರಣೆ ನಡೆಯುವುದಿಲ್ಲ. ಈ ನ್ಯಾಯಾಲಯವು ಸಾರ್ವಜನಿಕರಿಗೊಂದು, ಸಾರ್ವಜನಿಕ ಸೇವಕರಿಗೆ ಒಂದು ರೀತಿಯಲ್ಲಿ ವಿಚಾರಣೆ ಮಾಡಲಾಗುವುದಿಲ್ಲ” ಎಂದು ಹೇಳಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ಇಂದು ದ್ವಿತೀಯ ಪಿಯುಸಿ 2024 ಫಲಿತಾಂಶ ಪ್ರಕಟಗೊಳ್ಳಲಿದೆ ಎಂದು ಶಾಲಾ ಶಿಕ್ಷಣ ಇಲಾಖೆ ತಿಳಿಸಿದೆ. ಇಂದು ಬೆಳಿಗ್ಗೆ 10 ಗಂಟೆಗೆ ಶಿಕ್ಷಣ ಇಲಾಖೆ ಫಲಿತಾಂಶ ಪ್ರಕಟಿಸಲಿದ್ದು, 11 ಗಂಟೆಯ ನಂತರ ವೆಬ್ ಸೈಟ್ ನಲ್ಲಿ ವಿದ್ಯಾರ್ಥಿಗಳು ವೀಕ್ಷಿಸಬಹುದು. ಫಲಿತಾಂಶ ಚೆಕ್ ಮಾಡುವ ರೀತಿ ಇಲ್ಲಿದೆ: ಕರ್ನಾಟಕ ದ್ವಿತೀಯ ಪಿಯುಸಿ ಪರೀಕ್ಷೆ ಬರೆದ ವಿದ್ಯಾರ್ಥಿಗಳು ತಮ್ಮ ಪರೀಕ್ಷೆಯ ಪ್ರವೇಶ ಪತ್ರದಲ್ಲಿ ನೀಡಲಾದ ರಿಜಿಸ್ಟರ್ ನಂಬರ್/ರೋಲ್ ನಂಬರ್ ಬಳಸಿ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ನೀಡುವ ವೆಬ್ಸೈಟ್ನಲ್ಲಿ ಫಲಿತಾಂಶ ಚೆಕ್ ಮಾಡಬಹುದು. ಚೆಕ್ ಮಾಡುವ ರೀತಿ ಇಲ್ಲಿದೆ: ವಿದ್ಯಾರ್ಥಿಗಳು ಮೊದಲಿಗೆ https://karresults.nic.in/ ಗೆ ಭೇಟಿ ನೀಡಿ, ನಂತರ ದ್ವಿತೀಯ ಪಿಯುಸಿ ರಿಸಲ್ಟ್ ಚೆಕ್ ಮಾಡುವ ಲಿಂಕ್ ಇರುತ್ತದೆ. ಅದಕ್ಕೆ ಕ್ಲಿಕ್ ಮಾಡಿ ನಿಮ್ಮ ರಿಜಿಸ್ಟರ್ ನಂಬರ್ ಹಾಕಬೇಕು. ಆವಾಗ ನಿಮ್ಮ ಫಲಿತಾಂಶ ಸ್ಕ್ರೀನ್ನಲ್ಲಿ ಕಾಣಿಸುತ್ತದೆ. ವರದಿ: ಆಂಟೋನಿ ಬೇಗೂರು ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್…
ನಕಲಿ ನೋಟ್ ಪ್ರಿಂಟ್ ಮಾಡಿ ಚಲಾವಣೆ ಮಾಡುತ್ತಿದ್ದ ಆರೋಪಿಯನ್ನು ಬಂಧಿಸಲಾಗಿದೆ. ಡಾ.ಕೆ. ಆರ್ ಸಂಜಯ್ ಬಂಧಿತ ಆರೋಪಿಯಾಗಿದ್ದಾನೆ. ಬಂಧಿತನಿಂದ 500 ರೂ. ಮುಖ ಬೆಲೆಯ 51 ಖೋಟಾ ನೋಟು ವಶಪಡಿಸಿಕೊಳ್ಳಲಾಗಿದೆ.ಈತ ಕ್ಯಾಬ್ ಡ್ರೈವರುಗಳನ್ನ ಟಾರ್ಗೆಟ್ ಮಾಡಿ ವಂಚಿಸುತ್ತಿದ್ದ ಎನ್ನಲಾಗಿದೆ. ದೂರುದಾರ ಚಂದ್ರಶೇಖರ್ ಎಂಬವರನ್ನು ಯಶವಂತಪುರದಲ್ಲಿ ಪಿಕ್ ಮಾಡಿ ಊಟಕ್ಕೆ ಕರೆದೊಯ್ದಿದ್ದ ಆರೋಪಿ. ಮಾಗಡಿ ರೋಡ್ ಹೌಸಿಂಗ್ ಬೋರ್ಡ್ನಲ್ಲಿ ಬಿ.ಎನ್.ಬಾರ್ ಅಂಡ್ ರೆಸ್ಟೊರೆಂಟ್ ಗೆ ಕರೆದುಕೊಂಡು ಹೋಗಿದ್ದ. ಬಾರ್ ಗೆ ಹೋದ ಬಳಿಕ ದೂರುದಾರರ ಬಳಿ 10 ಸಾವಿರ ಪೋನ್ ಪೇ ಮಾಡಿಸಿದ್ದ. ಬದಲಾಗಿ ತನ್ನ ಬಳಿ ಇದ್ದ 10 ಸಾವಿರದ 500 ರೂ. ನಕಲಿ ನೋಟನ್ನು ನೀಡಿದ್ದ. ಹಣ ನೀಡಿ ದೂರುದಾರನ ಮೊಬೈಲ್ ಪಡೆದುಕೊಂಡು ಎಸ್ಕೇಪ್ ಆಗಿದ್ದ. ಘಟನೆ ಬಳಿಕ ಮಾಗಡಿ ರೋಡ್ ಪೊಲೀಸ್ ಠಾಣೆಗೆ ಜರಿಪಿಟಿ ಚಂದ್ರಶೇಖರ್ ದೂರು ನೀಡಿದ್ದರು. ಪ್ರಕರಣ ದಾಖಲಿಸಿಕೊಂಡು ಚೆನ್ನೈ ಮೂಲದ ಆರೋಪಿಯನ್ನು ಮಾಗಡಿ ರೋಡ್ ಪೊಲೀಸರು ಬಂಧಿಸಿದ್ದಾರೆ. ದೂರುದಾರ ಚಂದ್ರಶೇಖರ್ ಗೆ ನೀಡಿದ್ದ 21…
ನವದೆಹಲಿ: ಮದ್ಯನೀತಿ ಹಾಗೂ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ಬಿಆರ್ ಎಸ್ ನಾಯಕಿ ಕೆ ಕವಿತಾ ಸಾಕ್ಷಿಗಳ ಮೇಲೆ ಪ್ರಭಾವ ಬೀರಲು ಮತ್ತು ಸಾಕ್ಷ್ಯವನ್ನು ಹಾಳು ಮಾಡಲು ಪ್ರಯತ್ನಿಸಬಹುದು ಎನ್ನುವ ಕಾರಣಕ್ಕೆ ಅವರಿಗೆ ಮಧ್ಯಂತರ ಜಾಮೀನು ನೀಡಲು ಕೋರ್ಟ್ ನಿರಾಕರಿಸಿದೆ. ದೆಹಲಿ ಅಬಕಾರಿ ನೀತಿ ಹಗರಣ ಪ್ರಕರಣದಲ್ಲಿ ಭಾರತ ರಾಷ್ಟ್ರೀಯ ಸಮಿತಿ ನಾಯಕಿ ಹಾಗೂ ಕೆಸಿಆರ್ ಪುತ್ರಿ ಕೆ ಕವಿತಾ ನ್ಯಾಯಾಂಗ ಬಂಧನವನ್ನು ಏ.23 ರವರೆಗೆ ವಿಸ್ತರಿಸಲಾಗಿದೆ. ದೆಹಲಿಯ ರೂಸ್ ಅವೆನ್ಯೂ ನ್ಯಾಯಾಲಯ ಬುಧವಾರ ಆದೇಶ ಹೊರಡಿಸಿದ್ದು, ಏ.23 ರವರೆಗೆ ನ್ಯಾಯಾಂಗ ಬಂಧನ ವಿಧಿಸಿ ಆದೇಶ ಹೊರಡಿಸಿದೆ. ಮಾರ್ಚ್ 15, 2024 ರಂದು ಜಾರಿ ನಿರ್ದೇಶನಾಲಯವು ಅವರನ್ನು ಬಂಧಿಸಿತ್ತು. ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ನ್ಯಾಯಾಂಗ ಬಂಧನ ಅವಧಿ ಮುಗಿದ ನಂತರ ಕವಿತಾ ಅವರನ್ನು ತಿಹಾರ್ ಜೈಲಿನಿಂದ ಕೋರ್ಟ್ ಗೆ ಕರೆತರಲಾಯಿತು. ಇಡಿ ನ್ಯಾಯಾಂಗ ಬಂಧನವನ್ನು 14 ದಿನಗಳ ಕಾಲ ವಿಸ್ತರಿಸುವಂತೆ ಕೋರಿ ಅರ್ಜಿ ಸಲ್ಲಿಸಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ…
ಔರಾದ್: ತಾಲೂಕಿನ ಹೆಡಗಾಪೂರ ಗ್ರಾಮದ ಶಿವಲಿಂಗೇಶ್ವರ ಸಂಸ್ಥಾನ ಮಠಕ್ಕೆ ಕೇದಾರಲಿಂಗ ದೇವರ ಪಟ್ಟಾಧಿಕಾರ ಕಾರ್ಯಕ್ರಮ ಏ. 15ರಂದು ಸಂಭ್ರಮದಿಂದ ನಡೆಯಲಿದೆ. ಸಮಾರಂಭದಲ್ಲಿ ಸುಮಾರು 50 ಸಾವಿರಕ್ಕೂ ಅಧಿಕ ಜನ ಭಾಗವಹಿಸಲಿದ್ದಾರೆ ಎಂದು ಹೆಡಗಾಪೂರ ಶ್ರೀಗಳಾದ ಶಿವಲಿಂಗ ಶಿವಾಚಾರ್ಯರು ಹೇಳಿದರು. ಸೋಮವಾರ ತಾಲೂಕಿನ ಹೆಡಗಾಪೂರ ಗ್ರಾಮದ ಶಿವಲಿಂಗೇಶ್ವರ ಸಂಸ್ಥಾನ ಮಠದಲ್ಲಿ ಏ.8 ರಿಂದ 15ರವರೆಗೆ ನಡೆಯಲಿರುವ ಗುರುವಂದನಾ ಮತ್ತು ಗುರುಪಟ್ಟಾಧಿಕಾರ ಮಹೋತ್ಸವ ಭಿತ್ತಿಪತ್ರ ಬಿಡುಗಡೆ ಕಾರ್ಯಕ್ರಮದಲ್ಲಿ ದಿವ್ಯಸಾನಿಧ್ಯ ವಹಿಸಿ ಆರ್ಶೀವಚನ ನೀಡಿದರು. 1961ರಲ್ಲಿ ನನಗೆ ಲಿಂಗೈಕ್ಯ ಡಾ. ಚನ್ನಬಸವ ಪಟ್ಟದ್ದೇವರು ಕರೆತಂದು ಈ ಮಠಕ್ಕೆ ಪಟ್ಟಾಧಿಕಾರ ಮಾಡಿಸಿದ್ದಾರೆ. ಧರ್ಮದ ಆಚರಣೆ, ಭಕ್ತರಿಗೆ ಒಳ್ಳೆಯ ಮಾರ್ಗ ನೀಡುವ ಕೆಲಸ ಸಂಸ್ಥಾನ ಮಠ ಮಾಡಿಕೊಂಡು ಬಂದಿದೆ. ಈಗ ನನಗೆ ವಯಸ್ಸಾಗಿದೆ. ಆದ್ದರಿಂದ ಕೇದಾರಲಿಂಗ ದೇವರಿಗೆ ಪಟ್ಟಾಧಿಕಾರ ಮಾಡುತ್ತಿದ್ದೇವೆ. ತಂದೆ-ತಾಯಿ ಸಂಬಂಧ ತೊರೆದು, ಸಮಾಜವೇ ಅವರಿಗೆ ತಂದೆ-ತಾಯಿಯ ರೂಪದಲ್ಲಿ ಬೆನ್ನಿಗೆ ನಿಲ್ಲಬೇಕು. ಎಲ್ಲರ ಕರುಣೆ ಅವರೊಂದಿಗಿರಲಿ ಎಂದು ಹೇಳುತ್ತ ಕಣ್ಣೀರು ಹಾಕಿದರು. ಮಠದಲ್ಲಿ 50 ಮಕ್ಕಳ ವಸತಿ…
ಬೀದರ್: ಸರ್ಕಾರದಿಂದ ವಿತರಿಸಲಾದ 17 ಲಕ್ಷಕ್ಕೂ ಅಧಿಕ ಮೌಲ್ಯದ ಪಡಿತರ ಅಕ್ಕಿಯನ್ನು ಅಕ್ರಮವಾಗಿ ಸಾಗಿಸುತ್ತಿದ್ದ ಲಾರಿ ಸಹಿತ ಇಬ್ಬರು ಆರೋಪಿಗಳನ್ನು ಬೀದರ್ ಜಿಲ್ಲೆಯ ಮಂಠಾಳ ಪೊಲೀಸ್ ಠಾಣಾ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಹಿರಿಯ ಅಧಿಕಾರಿಗಳ ಮಾರ್ಗದರ್ಶನದಲ್ಲಿ ಮಂಠಾಳಾ ಪೊಲೀಸ್ ಠಾಣೆಯ ಪಿ.ಎಸ್.ಐ. ರಾಜಕುಮಾರ ಹಾಗೂ ಆಹಾರ ನಿರೀಕ್ಷಕ ನಾಗರಾಜ ಪಾಟೀಲ್ ಇವರ ಸಮಕ್ಷಮದಲ್ಲಿ ದಾಳಿ ನಡೆಸಿ ಲಾರಿಯಲ್ಲಿದ್ದ 5,95,000 ರೂಪಾಯಿ 175 ಕ್ವಿಂಟಾಲ್ ಅಕ್ಕಿ, ಹಾಗೂ 12,00,000 ಮೌಲ್ಯದ ಲಾರಿ ಒಟ್ಟು 17,95,000 ಬೆಲೆಬಾಳುವ ವಸ್ತುಗಳನ್ನು ಜಪ್ತಿ ಮಾಡಿಕೊಂಡಿದ್ದು, ಆರೋಪಿಗಳ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಮಂಠಾಳ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಬರುವ ಮನ್ನಳ್ಳಿ ಗ್ರಾಮದ ಹತ್ತಿರ ಎನ್.ಹೆಚ್-65 ಬಳಿಯಲ್ಲಿ ಪೊಲೀಸರು ಕಾರ್ಯಾಚರಣೆ ನಡೆಸಿ ಸೊತ್ತು ಸಹಿತ ಆರೋಪಿಗಳನ್ನು ಬಂಧಿಸಿದ್ದಾರೆ. ವರದಿ: ಅರವಿಂದ ಮಲ್ಲಿಗೆ, ಬೀದರ್ ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ವಿಜಯಪುರ: ಜಿಲ್ಲೆಯ ಕೊಲ್ಹಾರ ಬಳಿ ದೇವರ ಪಲ್ಲಕ್ಕಿಯೊಂದಿಗೆ ಕೃಷ್ಣಾ ನದಿಗೆ ಸ್ನಾನ ಮಾಡಲು ತೆರಳಿದ್ದ ಇಬ್ಬರು ಬಾಲಕರು ನೀರು ಪಾಲಾಗಿರುವ ಘಟನೆ ನಡೆದಿದೆ. ಕಾರಜೋಳ ಗ್ರಾಮದ ಸುದೀಪ ದೊಡ್ಡಮನಿ (12), ಶ್ರೀಧರ ದೊಡ್ಡಮನಿ (10) ಮೃತ ಬಾಲಕರಾಗಿದ್ದಾರೆ. ಯುಗಾದಿ ಅಮಾವಾಸ್ಯೆ ಹಿನ್ನೆಲೆಯಲ್ಲಿ ಗ್ರಾಮಸ್ಥರು ಪಲ್ಲಕ್ಕಿಯಲ್ಲಿ ದೇವಿಯ ವಿಗ್ರಹವನ್ನು ತೆಗೆದುಕೊಂಡು ಸ್ನಾನ ಮಾಡಿಸಲು ನದಿಗೆ ತೆರಳಿದ್ದಾಗ ದುರ್ಘಟನೆ ಸಂಭವಿಸಿದೆ. ಬಬಲೇಶ್ವರ ತಾಲೂಕಿನ ಕಾರಜೋಳ ಗ್ರಾಮದಲ್ಲಿ ಹುಚ್ಚಮ್ಮ ದೇವಿ ಜಾತ್ರಾ ಮಹೋತ್ಸವ ಹಿನ್ನೆಲೆಯಲ್ಲಿ ದೇವಿ ವಿಗ್ರಹಗಳಿಗೆ ಸ್ನಾನ ಮಾಡಿಸಲು ನದಿಗೆ ಗ್ರಾಮಸ್ಥರು ತೆರಳಿದ್ದರು ಎನ್ನಲಾಗಿದೆ. ಈ ವೇಳೆ ಇಬ್ಬರು ಬಾಲಕರು ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಇಬ್ಬರು ಬಾಲಕರ ಮೃತದೇಹ ಹೊರತೆಗೆದಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ಶಿರಾ: ತಾಲೂಕಿನ ಅಮರಾಪುರ ರಸ್ತೆಯ ಬಡಕನಹಳ್ಳಿ ಕ್ರಾಸ್ ಬಳಿ ದ್ವಿಚಕ್ರ ವಾಹನವೊಂದು ಡಿಕ್ಕಿ ಹೊಡೆದ ಪರಿಣಾಮ ತೀವ್ರ ಗಾಯಗೊಂಡಿದ್ದ ಜಿಂಕೆಯೊಂದು ಸ್ಥಳದಲ್ಲೇ ಮೃತಪಟ್ಟಿದೆ. ಈ ಘಟನೆಯಲ್ಲಿ ಬೈಕ್ ಸವಾರ ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿದೆ. ಮಂಜುನಾಥ(35) ಗಾಯಗೊಂಡ ವ್ಯಕ್ತಿಯಾಗಿದ್ದಾರೆ. ರಸ್ತೆಯಲ್ಲಿ ಹೋಗುವ ಮಾರ್ಗದಲ್ಲಿ ರಸ್ತೆ ದಾಟುತ್ತಿದ್ದ ಜಿಂಕೆಯು ವಾಹನಕ್ಕೆ ಅಡ್ಡ ಬಂದಿದ್ದು, ದ್ವಿಚಕ್ರ ವಾಹನ ಸವಾರ ನಿಯಂತ್ರಣ ತಪ್ಪಿ ಜಿಂಕೆಗೆ ಡಿಕ್ಕಿ ಹೊಡೆದಿದ್ದಾರೆ. ಡಿಕ್ಕಿಯ ರಭಸಕ್ಕೆ ಜಿಂಕೆ ಮೃತಪಟ್ಟಿದೆ. ವಿಷಯ ತಿಳಿದ ಅರಣ್ಯ ಇಲಾಖೆಯ ವಲಯ ಅರಣ್ಯಾಧಿಕಾರಿ ನವನೀತ, ಪಶು ಆಸ್ಪತ್ರೆಯ ವೈದ್ಯಾಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿದರು. ಘಟನೆಯು ಶಿರಾ ತಾಲೂಕಿನ ಪಟ್ಟನಾಯಕನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ಸೋಷಿಯಲ್ ಮೀಡಿಯಾದಲ್ಲಿ ಸಕ್ರಿಯರಾಗಿರುವ ಖ್ಯಾತ ತೆಲುಗು ಸಿನಿಮಾ ನಿರ್ದೇಶಕ ರಾಮ್ ಗೋಪಾಲ್ ವರ್ಮಾ ಅವರು ಟ್ವಿಟ್ ಮತ್ತು ಪೋಸ್ಟ್ ಗಳಿಂದ ವೈರಲ್ ಆಗಿದ್ದು, ಇತ್ತೀಚೆಗೆ ಹುಡುಗಿಯೊಬ್ಬಳ ಚಿತ್ರವನ್ನು ಹಂಚಿಕೊಂಡಿದ್ದಾರೆ. ಈ ಹುಡುಗಿ ಯಾರು ಗೊತ್ತಾ? ಗೊತ್ತಿದ್ದರೆ ಹೇಳಿ ಎಂದು ಪೋಸ್ಟ್ ಮಾಡಿದ್ದಾರೆ. ಹುಡುಗಿ ಸಿಕ್ಕಿದ್ದಾಳೆ ಎಂದು ರಾಮ್ ಗೋಪಾಲ್ ವರ್ಮ ಅವರು ಆಕೆಯ ಸಾಮಾಜಿಕ ಜಾಲತಾಣ ಖಾತೆಯ ವಿವರಗಳನ್ನು ಪೋಸ್ಟ್ ಮಾಡಿದ್ದಾರೆ. ಇತ್ತೀಚೆಗಷ್ಟೇ ಈಕೆ ಸೀರೆ ಧರಿಸಿ ರೀಲ್ ಗಳಲ್ಲಿ ಮತ್ತೊಂದು ವೀಡಿಯೋವನ್ನು ಹಂಚಿಕೊಂಡಿದ್ದಾಳೆ. ರಾಮ್ ಗೋಪಾಲ್ ವರ್ಮ ಅವರು ಈ ಪೋಸ್ಟ್ ಮಾಡುತ್ತಿದ್ದಂತೆಯೇ, ಆ ಹುಡುಗಿ ಒಮ್ಮೆಲೇ ವೈರಲ್ ಆಗಿದ್ದಾಳೆ. ಹಾಗಾದರೆ ಆ ಹುಡುಗಿ ಯಾರು? ಎಂದು ಅನೇಕರು ಪ್ರಶ್ನೆ ಕೇಳಿದ್ದಾರೆ. ಅಸಲಿಗೆ ಈಕೆಯ ಹೆಸರು ಶ್ರೀಲಕ್ಷ್ಮಿ ಸತೀಶ್ ಮಲಯಾಳಂ ನಟಿಯಾಗಿದ್ದು, ಸಾಮಾಜಿಕ ಮಾಧ್ಯಮದಲ್ಲಿ ತಮ್ಮ ರೀಲ್ ಗಳನ್ನು ಪೋಸ್ಟ್ ಮಾಡುವ ಮೂಲಕ ಈಕೆ ಎಲ್ಲೆಡೆ ವೈರಲ್ ಆಗಿದ್ದಾಳೆ. ರಾಮ್ ಗೋಪಾಲ್ ವರ್ಮಾ ಅವರ ವೀಡಿಯೊಗಳ ಪೋಸ್ಟ್ ವೈರಲ್ ಆಗಿದ್ದು,…
ಪ್ರಮುಖ ಆಟೋಮೊಬೈಲ್ ಕಂಪನಿಗೆ ಸರಬರಾಜು ಮಾಡಿದ ಸಮೋಸಾಗಳಲ್ಲಿ ಕಾಂಡೋಮ್, ಗುಟ್ಕಾ ಮತ್ತು ಕಲ್ಲುಗಳು ಪತ್ತೆಯಾಗಿರುವ ಘಟನೆ ಪುಣೆಯ ಪಿಂಪರಿ ಚಿಂಚ್ವಾಡ್ ನಲ್ಲಿ ನಡೆದಿದೆ. ಕಂಪೆನಿಯ ಉದ್ಯೋಗಿಗಳು ಸಮೋಸಾ ಸೇವಿಸುತ್ತಿದ್ದಾಗ ವಿಷಯ ಬೆಳಕಿಗೆ ಬಂದಿದೆ.ಈ ಹಿನ್ನಲೆಯಲ್ಲಿ ಐವರ ವಿರುದ್ದ ಪ್ರಕರಣ ದಾಖಲಿಸಿದ್ದು ಓರ್ವನನ್ನು ಬಂಧಿಸಿದ್ದಾರೆ. ಆರೋಪಿಗಳನ್ನು ರಹೀಮ್ ಶೇಖ್, ಅಜರ್ ಶೇಖ್, ಮಝರ್ ಶೇಖ್, ಫಿರೋಜ್ ಶೇಖ್ ಮತ್ತು ವಿಕ್ಕಿ ಶೇಖ್ ಎಂದು ಗುರುತಿಸಲಾಗಿದೆ. ಹೊಸ ಗುತ್ತಿಗೆದಾರರಿಂದ ಅಡುಗೆ ಗುತ್ತಿಗೆ ತಪ್ಪಿಸಲು ಈ ಕೃತ್ಯವೆಸಗಿದ್ದಾರೆ ಎನ್ನಲಾಗಿದೆ. ಪೊಲೀಸರ ಪ್ರಕಾರ, ಕ್ಯಾಟಲಿಸ್ಟ್ ಸರ್ವೀಸ್ ಸೊಲ್ಯೂಷನ್ಸ್ ಪ್ರೈ. ಲಿಮಿಟೆಡ್ ಆಟೋಮೊಬೈಲ್ ಸಂಸ್ಥೆಯ ಕ್ಯಾಂಟೀನ್ ಗೆ ತಿಂಡಿಗಳನ್ನು ಒದಗಿಸುವ ಜವಾಬ್ದಾರಿಯನ್ನು ಹೊಂದಿತ್ತು. ಆದಾಗ್ಯೂ, ಮನೋಹರ್ ಎಂಟರ್ಪ್ರೈಸ್ ಎಂಬ ಹೆಸರಿನ ಮತ್ತೊಂದು ಉಪಗುತ್ತಿಗೆ ಸಂಸ್ಥೆಗೆ ಸಮೋಸಾ ನೀಡಲು ಕ್ಯಾಟಲಿಸ್ಟ್ ಸರ್ವಿಸ್ ಗುತ್ತಿಗೆ ನೀಡಿತ್ತು. “ಭಾನುವಾರದ ತನಿಖೆಯ ಸಂದರ್ಭದಲ್ಲಿ, ಘಟನೆಯ ಕುರಿತು ಮನೋಹರ್ ಎಂಟರ್ಪ್ರೈಸಸ್ ನ ಸಿಬ್ಬಂದಿಯನ್ನು ವಿಚಾರಣೆ ನಡೆಸಿದ ನಂತರ, ಇಬ್ಬರು ಕಾರ್ಮಿಕರು ಫಿರೋಜ್ ಶೇಖ್ ಮತ್ತು ವಿಕ್ಕಿ…