Author: admin

ತುಮಕೂರು: ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಸ್ಪೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೀತಿದೆ. ಎನ್ ಐಎ ಟೀಂ‌ ನಿಂದ ತನಿಖೆ ನಡಿತಿದೆ. ತನಿಖೆ ಬಗ್ಗೆ ಅನೇಕ ವಿಚಾರವನ್ನ ನಮಗೆ ತಿಳಿಸಿಲ್ಲ. ಅಪರಾಧಿಗಳನ್ನ ಪತ್ತೆ ಮಾಡಿದ್ದಾರೆ ಎಂದು ಗೃಹ ಸಚಿವ ಪರಮೇಶ್ವರ್ ತಿಳಿಸಿದ್ದಾರೆ. ತುಮಕೂರಿನಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಬಿಜೆಪಿ ಕಾರ್ಯಕರ್ತನ ವಿಚಾರಣೆ ವಿಚಾರದಲ್ಲಿ ಆರೋಪಿಗೆ ಯಾರೆಲ್ಲ ಸಂಪರ್ಕದಲ್ಲಿದ್ರು ಅವರನ್ನೆಲ್ಲ ವಿಚಾರಣೆ ಮಾಡ್ತಿದ್ದಾರೆ ಎಂದರು. ಮುದ್ದಹನುಮೇಗೌಡ ಸೋಲು ಗೆಲುವಿನ ಕ್ರೆಡಿಟ್ ಕಾಂಗ್ರೆಸ್‌ ಗೆ ಸೇರಿದ್ದು. ಐದು ಟ್ರಿಲಿಯನ್ ಎಕಾನಮಿ ಯಾರಿಗೆ ಮಾಡುತ್ತಿದ್ದಾರೆ. 10 ಫ್ಯಾಮಿಲಿಗಳಿಗೆ ಅನುಕೂಲ‌ ಮಾಡಿಕೊಡಲು ಮಾಡುತ್ತಿದ್ದೀರಾ. ಐದು ಟ್ರಿಲಿಯನ್ ಎಕಾನಮಿ ಪಾಲುದಾರಿಕೆ ನಿಮಗೂ ಸಿಗುವಂತಾಗಬೇಕು ಎಂದರು. ಸಮೃದ್ಧಿಯಾಗಿ ದೇಶ ನಡೆಸುತ್ತೇವೆ. ಮಾಧುಸ್ವಾಮಿ‌ ಕಾಂಗ್ರೆಸ್ ಗೆ ಬಂದ್ರೆ ನಾನೇ ಸ್ವಾಗತ ಮಾಡುತ್ತೇನೆ. ಮುದ್ದಹನುಮೇಗೌಡರು ಭೇಟಿ ಮಾಡಿದ್ದಾರೆ. ಸಂದರ್ಭ ಬಂದಾಗ‌ ಭೇಟಿ ಮಾಡ್ತೀವಿ ಎಂದರು. ಪ್ರತಿ ಚುನಾವಣೆಯಲ್ಲೂ ಸರ್ವೆ ಮಾಡಲಾಗುತ್ತದೆ. ಒಂದು ಹಂತಕ್ಕೆ‌ ಮತದಾನ ಪೂರ್ವ ಸರ್ವೇಗಳನ್ನ ಗೌರವಿಸುತ್ತೇವೆ ಎಂದರು. ನನಗೆ ಬೆನಿಫಿಟ್ ಆಯ್ತಾ,…

Read More

ಖಾಸಗಿ ಕಂಪನಿಗಳಿಂದ ನೀಡಬೇಕಾದ ಸಿಎಸ್ ‌ಆರ್‌ ಫಂಡ್ ಬ್ಲಾಕ್‌ ಮನಿಯನ್ನು ಖಾಸಗಿ ಟ್ರಸ್ಟ್‌ ಗಳಿಗೆ ನೀಡುವುದಾಗಿ ವಂಚನೆ ಮಾಡುತ್ತಿದ್ದ 5 ಜನರ ಗ್ಯಾಂಗ್‌ ಅನ್ನು ಸಿಸಿಬಿ ಪೊಲೀಸರು ಬಂಧಿಸಿದ್ದು, 30 ಕೋಟಿ ರೂ. ಮೌಲ್ಯದ ನೋಟುಗಳನ್ನು ವಶಕ್ಕೆ ಪಡೆದಿದ್ದಾರೆ. ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಲಕ್ಷಾಂತರ ಖಾಸಗಿ ಕಂಪನಿಗಳು ಕಾರ್ಯ ನಿರ್ವಹಿಸುತ್ತಿವೆ. ಜೊತೆಗೆ, ಸಾವಿರಾರು ಖಾಸಗಿ ಟ್ರಸ್ಟ್‌ ಗಳು ಕೂಡ ಸೇವೆ ಸಲ್ಲಿಸುತ್ತಿವೆ. ಆದರೆ, ಇಲ್ಲೊಂದು ಗ್ಯಾಂಗ್‌ ಖಾಸಗಿ ಕಂಪನಿಗಳ ಸಾಂಸ್ಥಿಕ ಸಾಮಾಜಿಕ ಜವಾಬ್ದಾರಿ ನಿಧಿ (ಸಿಎಸ್ ‌ಆರ್‌ ಫಂಡ್) ಅನ್ನು ಸಂಕಷ್ಟದಲ್ಲಿರುವ ಟ್ರಸ್ಟ್ ‌ಗಳಿಗೆ ನೀಡುವುದಾಗಿ ಕೋಟಿ ಕೋಟಿ ರೂ. ವಂಚನೆ ಮಾಡುತ್ತಿದ್ದು, ಈಗ ಮಾಲ್ ಸಮೇತ ಪೊಲೀಸರ ಕೈಗೆ ಸಿಕ್ಕಿ ಬಿದ್ದಿದೆ. ಖಾಸಗಿ ಟ್ರಸ್ಟ್ ಗಳಿಗೆ CSR ಫಂಡ್ ನೀಡೋ ಹೆಸರಲ್ಲಿ ವಂಚಿಸ್ತಿದ್ದ ಐವರು ಆರೋಪಿಗಳನ್ನು ಪೊಲೀಸರು ಹೆಡೆಮುರಿ ಕಟ್ಟಿದ್ದಾರೆ. ಬಂಧಿತ ಆರೋಪಿಗಳಿಂದ 30 ಕೋಟಿ 91 ಲಕ್ಷ 61 ಸಾವಿರಕ್ಕೂ (31,91,61,000 ರೂ.) ಅಧಿಕ ಮೌಲ್ಯದ ಖೋಟಾ ನೋಟು…

Read More

ಕೋಡಿಮಠ ಸ್ವಾಮಿಜಿಗಳ ಭವಿಷ್ಯಕ್ಕೆ ತುಂಬಾ ಮಹತ್ವವಿದೆ. ಅವರ ಎಲ್ಲಾ ಭವಿಷ್ಯಗಳು ನಿಜವಾಗಿವೆ. ರಾಜಕೀಯವಾಗಿ, ಜಾಗತಿಕವಾಗಿ, ರಾಷ್ಟ್ರದ ವಿಚಾರವಾಗಿ ಹಾಗೂ ಮಳೆ, ಬೆಳೆ, ಪ್ರವಾಹಗಳ ಕುರಿತಾಗಿಯೂ ಅವರು ಭವಿಷ್ಯ ನುಡಿದಿದ್ದು ಅವೆಲ್ಲವೂ ಸಂಭವಿಸಿವೆ. ಅಂತೆಯೇ ಇದೀಗ ಶ್ರೀಗಳು ಮಳೆ, ಬೆಳೆ ಕುರಿತು ಹೊಸ ಭವಿಷ್ಯ ನುಡಿದಿದ್ದು, ನಾಡಿನ ಜನತೆಗೆ ಭರ್ಜರಿ ಗುಡ್ ನ್ಯೂಸ್ ಕೊಟ್ಟಿದ್ದಾರೆ. ಹೌದು, ಕಳೆದ ಕೆಲವು ತಿಂಗಳುಗಳಿಂದ ಈ ವರ್ಷದ ಮಳೆ ಬಗ್ಗೆ ಭವಿಷ್ಯ ನುಡಿಯುತ್ತಿರುವ ಕೋಡಿ ಮಠದ ಡಾ. ಶಿವಾನಂದ ಶಿವಯೋಗಿ ಸ್ವಾಮೀಜಿಯವರು ಈ ವರ್ಷ ಉತ್ತಮ ಮಳೆ, ಬೆಳೆ ಆಗುತ್ತದೆ ಎಂದು ಭವಿಷ್ಯ ನುಡಿದಿದ್ದರು. ಅಂತೆಯೇ ಇದೀಗ ಈ ಭವಿಷ್ಯವನ್ನು ಪುನರುಚ್ಚರಿಸಿರುವ ಶ್ರೀಗಳು ಯುಗಾದಿ ಕಳೆದ ನಂತರ‌ ರಾಜ್ಯದಲ್ಲಿ ಒಳ್ಳೆ ಬೆಳೆ ಮತ್ತು ಮಳೆಯಾಗುವ ಲಕ್ಷಣಗಳಿವೆ ಎಂದು ಭವಿಷ್ಯ ನುಡಿದಿದ್ದಾರೆ. ಕೋಲಾರದ ಮಾಲೂರಿನಲ್ಲಿ ಕಾರ್ಯಕ್ರಮವೊಂದರಲ್ಲಿ ಮಾತನಾಡಿದಂತ ಕೋಡಿಮಠದ ಸ್ವಾಮೀಜಿಯವರು, ರಾಜ್ಯದಲ್ಲಿ ಯುಗಾದಿ ಕಳೆದ ನಂತ್ರ, ಒಳ್ಳೆ ಬೆಳೆ, ಮಳೆಯಾಗುವ ಲಕ್ಷಣಗಳಿವೆ. ಬೆಂಕಿ ಹಾವಳಿ, ನೀರಿನ ಹಾವಳಿ ಹೆಚ್ಚಾಗುತ್ತೆ,…

Read More

ಬೆಂಗಳೂರಿನ ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣದ ತನಿಖೆ ಚಾಲ್ತಿಯಲ್ಲಿರುವಂತೆಯೇ ಇತ್ತ ಕರ್ನಾಟಕ-ಆಂಧ್ರ ಗಡಿಯಲ್ಲಿ ಅಧಿಕಾರಿಗಳು ಕಾರಿನಲ್ಲಿ ಸಾಗುಸುತ್ತಿದ್ದ ಅಪಾರ ಪ್ರಮಾಣದ ಸ್ಫೋಟಕಗಳನ್ನು ಪತ್ತೆ ಮಾಡಿ ವಶಕ್ಕೆ ಪಡೆಯಲಾಗಿದೆ. ಕೋಲಾರ ಜಿಲ್ಲೆಯ ಮುಳಬಾಗಿಲು ತಾಲ್ಲೂಕಿನ ಕರ್ನಾಟಕ-ಆಂಧ್ರ ಗಡಿಯ ನಂಗಲಿ ಚೆಕ್ ಪೋಸ್ಟ್ ನಲ್ಲಿ ಅಪಾರ ಪ್ರಮಾಣದ ಸ್ಫೋಟಕಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದು, ಘಟನೆಯಲ್ಲಿ ಓರ್ವ ಆರೋಪಿಯನ್ನು ಬಂಧಿಸಲಾಗಿದ್ದು, ಮತ್ತೊಬ್ಬ ತಲೆಮರೆಸಿಕೊಂಡಿದ್ದಾನೆ ಎಂದು ಹೇಳಲಾಗಿದೆ. ಆರೋಪಿಯಿಂದ 1200 ಜಿಲೆಟಿನ್ ಕಡ್ಡಿಗಳು, 7 ಬಾಕ್ಸ್ ವೈರ್, 6 ಡಿಟೋನೇಟರ್ ವಶಪಡಿಸಿಕೊಳ್ಳಲಾಗಿದೆ. ಕೋಲಾರ ಜಿಲ್ಲೆಯ ಮುಳಬಾಗಲು ತಾಲೂಕಿನ ನಂಗಲಿ ಚೆಕ್ ಪೋಸ್ಟ್ ಬಳಿ ಸ್ಫೋಟಕ ಸಾಗಿಸುತ್ತಿದ್ದ ದುಷ್ಕರ್ಮಿಯನ್ನು ಬಂಧಿಸಲಾಗಿದೆ. ಖಾಸಗಿ ಕಾರಿನಲ್ಲಿ ಸ್ಫೋಟಕಗಳನ್ನು ಸಾಗಿಸಲಾಗುತ್ತಿತ್ತು. ಆರೋಪಿಗಳಲ್ಲಿ ಒಬ್ಬನನ್ನು ಬಂಧಿಸಲಾಗಿದ್ದು, ಬಂಧಿತನನ್ನು ಆಸಿಫ್ ಹಜರತ್ ಅಲಿ ಎಂದು ಗುರುತಿಸಲಾಗಿದೆ. ಕಾರಿನಲ್ಲಿದ್ದ ಮತ್ತೊಬ್ಬ ಆರೋಪಿ ಪರಾರಿಯಾಗಿದ್ದಾನೆ ಎಂದು ಮೂಲಗಳು ತಿಳಿಸಿವೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್…

Read More

ಧಾರವಾಡ ಲೋಕಸಭಾ ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲು ಗದಗ ಜಿಲ್ಲೆಯ ಶಿರಹಟ್ಟಿಯ ಭಾವೈಕ್ಯ ಪೀಠದ ಫಕೀರ ದಿಂಗಾಲೇಶ್ವರ ಸ್ವಾಮೀಜಿ ನಿರ್ಧರಿಸಿದ್ದಾರೆ. ‘ಎರಡೂ ರಾಷ್ಟ್ರೀಯ ಪಕ್ಷಗಳು ಎಲೆಕ್ಷನ್‌ ಫಿಕ್ಸಿಂಗ್‌ ಮಾಡಿಕೊಂಡಿವೆ ಎಂದು ಜನರು ಮಾತನಾಡುತ್ತಿದ್ದಾರೆ. ಇದು ಮತದಾರರಿಗೆ ಮಾಡುವ ಮೋಸ’ ಎಂದರು. ಈ ವೇಳೆ ಧಾರವಾಡ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ, ಹಾಲಿ ಸಂಸದ ಪ್ರಲ್ಹಾದ ಜೋಶಿ ವಿರುದ್ಧ ಅವರ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು. ‘ನನ್ನ ಸ್ಪರ್ಧೆಯು ಕಾಂಗ್ರೆಸ್‌ ಮತ್ತು ಬಿಜೆಪಿ ಈ ಎರಡೂ ರಾಷ್ಟ್ರೀಯ ಪಕ್ಷಗಳ ವಿರುದ್ಧ ಮತ್ತು ಸ್ವಾರ್ಥಿ ರಾಜಕಾರಣಿಗಳ ದುರಾಡಳಿತದ ವಿರುದ್ಧ ಸ್ವಾಭಿಮಾನಿಗಳು ಸಾರಿದ ಧರ್ಮ ಯುದ್ದ’ ಎಂದಿದ್ದಾರೆ. ‘ಜನರಲ್ಲಿ ರಾಷ್ಟ್ರೀಯ ಪ್ರಜ್ಞೆ ಮೂಡಿಸಲು, ರಾಜಕೀಯ ಪ್ರವೇಶ ಮಾಡುತ್ತಿದ್ದೇನೆ. ಧರ್ಮದಲ್ಲಿ ರಾಜಕೀಯ ಇರಬಾರದು. ರಾಜಕೀಯದಲ್ಲಿ ಧರ್ಮ ಇರಬೇಕು ಎಂದು ಜನರ ಬಯಸಿದ್ದಾರೆ. ಈ ವಿಚಾರವನ್ನು ಚುನಾವಣೆಯ ನಂತರವೂ ಮುಂದುವರಿಸುತ್ತೇನೆ’ ಎಂದರು. ‘ನೊಂದ ಸಮಾಜಗಳು, ನಾಯಕರು ತಮ್ಮ ನೋವು ತೋಡಿಕೊಂಡ ಕಾರಣ ಈ ನಿರ್ಧಾರ ತೆಗೆದುಕೊಂಡಿದ್ದೇನೆ. ಕುರುಬ, ರೆಡ್ಡಿ, ಜಂಗಮ,…

Read More

ಪೂರ್ತಿ ರಷ್ ಆದ ಬಸ್ ‌ನಲ್ಲಿ ಮಹಿಳೆಯರಿಬ್ಬರು ಸೀಟ್‌ ಸಿಗದೆ ಮಗುವನ್ನು ಲಗೇಜ್‌ ಕ್ಯಾರಿಯರ್‌ ನಲ್ಲಿ ಮಲಗಿಸಿದ ಘಟನೆ ವರದಿಯಾಗಿದೆ. ಸೋಮವಾರ ಯುಗಾದಿ ಅಮಾವಾಸ್ಯೆ ಹಿನ್ನೆಲೆಯಲ್ಲಿ ರಾಯಚೂರಲ್ಲಿ ಬಹುತೇಕ ಸರಕಾರಿ ಬಸ್‌ ಗಳು ಫುಲ್ ರಶ್ ಆಗಿವೆ. ಹೀಗಾಗಿ ಸೀಟು ಸಿಗದೆ ತಾಯಿಯೊಬ್ಬರು ಲಗೇಜು ಸಮೇತ ಮಗುವನ್ನು ಕ್ಯಾರಿಯರ್‌ ನಲ್ಲಿ ಮಲಗಿಸಿದ್ದರು. ಲಿಂಗಸಗೂರು-ಕಲಬುರಗಿ ಮಾರ್ಗದ ಬಸ್‌ ನಲ್ಲಿ ಈ ಘಟನೆ ನಡೆದಿದೆ. ಇನ್ನೂ ಬಸ್‌ ಹತ್ತಿ ಒಳಗೆ ಬಂದವರೆಲ್ಲರೂ ತಾಯಿಯ ಐಡಿಯಾ ಕಂಡು ಫಿದಾ ಆಗಿದ್ದರು. ತಮ್ಮ ಕೈಯಲ್ಲಿದ್ದ ಮೊಬೈಲ್‌ ಹಿಡಿದು ವೀಡಿಯೊ ಮಾಡಿಕೊಂಡು ಸೋಶಿಯಲ್‌ ಮೀಡಿಯಾದಲ್ಲಿ ವೈರಲ್‌ ಮಾಡಿದ್ದಾರೆ. ಲಿಂಗಸಗೂರು-ಕಲಬುರಗಿ ಮಾರ್ಗದ ಬಸ್‌ ಪ್ರಯಾಣಿಕರಿಂದ ತುಂಬಿ ಹೋಗಿತ್ತು. ಉಸಿರಾಡಲು ಕಷ್ಟ ಎಂಬಂತೆ ಪ್ರಯಾಣಿಕರಿಂದ ತುಂಬಿ ತುಳುಕುತಿತ್ತು. ಇದರೊಟ್ಟಿಗೆ ಬಿಸಿಲನಾಡು ಎನ್ನಿಸಿಕೊಂಡಿರುವ ರಾಯಚೂರಿನಲ್ಲಿ ತಾಪಮಾನ ಏರಿಕೆ ಆಗುತ್ತಲೇ ಇದೆ. ಸೀಟ್‌ ಸಿಗದೆ ನಿಂತಿದ್ದ ಮಹಿಳೆಯೊಬ್ಬರು, ಮಗುವನ್ನು ಹಿಡಿದುಕೊಂಡು ಪ್ರಯಾಣಿಸುವುದು ಕಷ್ಟ ಎಂಬುದು ಅರಿವಿಗೆ ಬಂದಿದೆ. ಹೀಗಾಗಿ ಕೈಯಲ್ಲಿದ್ದ ಲಗೇಜ್‌ ಗಳನ್ನು ಕ್ಯಾರಿಯರ್‌…

Read More

ಆಫ್ರಿಕಾ: ದೋಣಿಯೊಂದು ಮುಳುಗಿ 90ಕ್ಕೂ ಹೆಚ್ಚು ಮಂದಿ ಜಲಸಮಾಧಿಯಾದ ಘಟನೆ ಆಫ್ರಿಕಾದ ಮೊಜಾಂಬಿಕ್ ನ ಉತ್ತರ ಕರಾವಳಿಯಲ್ಲಿ ನಡೆದಿದೆ ಎಂದು ವರದಿ ತಿಳಿಸಿದೆ. ಇದು ಮೀನುಗಾರಿಕಾ ದೋಣಿಯಾಗಿದ್ದು, ನಂಪ್ಯುಲಾ ಪ್ರಾಂತ್ಯದ ದ್ವೀಪಕ್ಕೆ ತೆರಳುವ ಸಂದರ್ಭದಲ್ಲಿ ಈ ದುರಂತ ಸಂಭವಿಸಿದೆ ಎನ್ನಲಾಗಿದೆ. ಪ್ರಯಾಣಿಕರು ಕಿಕ್ಕಿರಿದು ತುಂಬಿದ್ದು ಮತ್ತು ಪ್ರಯಾಣಿಕರ ಸಾಗಾಣಿಕೆಗೆ ಸೂಕ್ತವಲ್ಲದೇ ಇದ್ದುದು ದುರಂತಕ್ಕೆ ಕಾರಣ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಹಲವು ಮಕ್ಕಳು ಸೇರಿದಂತೆ 91 ಮಂದಿ ಮೃತಪಟ್ಟಿದ್ದಾರೆ. ದೋಣಿಯಲ್ಲಿ ಒಟ್ಟು 130 ಪ್ರಯಾಣಿಕರಿದ್ದರು ಎನ್ನಲಾಗಿದೆ. ರಕ್ಷಣಾ ಕಾರ್ಯಾಚರಣೆಯ ಹೊರತಾಗಿಯೂ ಇದುವರೆಗೆ ಕೇವಲ ಐದು ಮಂದಿ ಮಾತ್ರ ಉಳಿದುಕೊಂಡಿರುವುದು ದೃಢಪಟ್ಟಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

Read More

ಬೆಂಗಳೂರು: ಬರೋಬ್ಬರಿ 270 ಬಾರಿ ಸಂಚಾರ ನಿಯಮ ಉಲ್ಲಂಘನೆ ಮಾಡಿದ್ದ ದ್ವಿಚಕ್ರ ವಾಹನದ ಒಡತಿಗೆ, ಬೆಂಗಳೂರು ಸಂಚಾರ ಠಾಣೆ ಪೊಲೀಸರು 1.36 ಲಕ್ಷ ರೂಪಾಯಿ ದಂಡ ವಿಧಿಸಿ ನೋಟಿಸ್‌ ಜಾರಿ ಮಾಡಿದ್ದಾರೆ. ಕೆಎ-03 ಜೆ.ಇ-5705 ನೋಂದಣಿ ಸಂಖ್ಯೆಯ ದ್ವಿಚಕ್ರ ವಾಹನದ ಮಾಲೀಕರಾದ ಮಹಿಳೆಗೆ, ಸಂಚಾರ ಪೊಲೀಸರು ಸಂಚಾರ ನಿಯಮ ಉಲ್ಲಂಘನೆ ಮಾಡಿರುವ ದೃಶ್ಯಗಳನ್ನು ಸೆರೆ ಹಿಡಿದಿರುವ ಫೋಟೋ ಸಮೇತ ನೋಟಿಸ್‌ ಕಳುಹಿಸಿದ್ದಾರೆ. ನಗರದ ಸುಬ್ಬಯ್ಯನಪಾಳ್ಯ, ಕಾಕ್ಸ್‌ ಟೌನ್‌ ಸೇರಿದಂತೆ ಮತ್ತಿತರ ರಸ್ತೆಗಳಲ್ಲಿ ದ್ವಿಚಕ್ರ ವಾಹನದಲ್ಲಿ ಸಂಚಾರ ಮಾಡಿದ್ದ ಈ ಮಹಿಳೆ, ಹಲವು ಬಾರಿ ನಿಯಮಗಳನ್ನು ಉಲ್ಲಂಘಿಸಿದ್ದರು. ಅಲ್ಲದೇ ಸವಾರ ಹಾಗೂ ಹಿಂಬದಿ ಸವಾರ ಹೆಲ್ಮೆಟ್‌ ಕೂಡ ಹಾಕಿರಲಿಲ್ಲ. 50 ಸಾವಿರ ರೂಪಾಯಿಗಿಂತ ಹೆಚ್ಚು ದಂಡ ಬಾಕಿ ಉಳಿಸಿಕೊಂಡಿರುವ ವ್ಯಕ್ತಿಗಳ ಪಟ್ಟಿ ಮಾಡಲಾಗಿದೆ. ಈ ಪಟ್ಟಿಯಲ್ಲಿ ಈ ದ್ವಿಚಕ್ರ ವಾಹನದ ಮಾಲೀಕರು ಇದ್ದಾರೆ. ಹೀಗಾಗಿ, ಆಕೆಗೆ 1.36 ಲಕ್ಷ ರೂ. ದಂಡ ವಿಧಿಸಿ ನೋಟಿಸ್‌ ಜಾರಿ ಮಾಡಲಾಗಿದೆ ಎಂದು ಸಂಚಾರ ಪೊಲೀಸರು ಮಾಹಿತಿ…

Read More

ಸರಗೂರು: ತಾಲೂಕಿನ ಎಂ.ಸಿ. ತಳಲು ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿ, ಸರ್ವೇಯರ್, ಕಂಪ್ಯೂಟರ್ ಆಪರೇಟರ್ ಲಂಚ ಪಡೆಯುತ್ತಿದ್ದ ಸಂದರ್ಭದಲ್ಲಿ, ಲೋಕಾಯುಕ್ತ ಬಲೆಗೆ ಸಿಕ್ಕಿ ಬಿದ್ದಿರುವ ಘಟನೆ ನಡೆದಿದೆ. ಪಿಡಿಓ ಶಿಲ್ಪಾ, ಸರ್ವೇಯರ್ ಬಾಲಾಜಿ, ಡಾಟಾ ಎಂಟ್ರಿ ಆಪರೇಟರ್ ಶಿವಲಿಂಗ ಪ್ರಸಾದ್ ಕೂಡ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಚನ್ನಗುಂಡಿ ಗ್ರಾಮದ ಲಿಂಗರಾಜು ಎಂಬುವವರ ನಿವೇಶನವನ್ನು ಈ ಸ್ವತ್ತು ಮಾಡಲು ಪಂಚಾಯತಿ ಅಭಿವೃದ್ಧಿ ಅಧಿಕಾರಿ ಸೇರಿದಂತೆ ಇತರರು 10 ಸಾವಿರ ರೂ. ಲಂಚಕ್ಕೆ ಬೇಡಿಕೆ ಇಟ್ಟಿದ್ದರು ಎನ್ನಲಾಗಿದೆ. ಸೋಮವಾರ ಪಂಚಾಯತಿ ಕಚೇರಿಯಲ್ಲಿ ಪಿಡಿಓ 8 ಸಾವಿರ ರೂ, ಸರ್ವೇಯರ್ 2 ಸಾವಿರ ರೂ. ಹಣ ಪಡೆಯುತ್ತಿದ್ದ ಸಂದರ್ಭದಲ್ಲಿ, ಖಚಿತ ಮಾಹಿತಿ ಮೇರೆಗೆ ಲೋಕಾಯುಕ್ತ ಎಸ್.ಪಿ. ಸಜಿತ್ ಮಾರ್ಗ ದರ್ಶನದ ಕಾರ್ಯಾಚರಣೆಯಲ್ಲಿ ಡಿವೈಎಸ್ ಪಿ ವಿ. ಕೃಷ್ಣಯ್ಯ, ಲೋಕಾಯುಕ್ತ ಪೊಲೀಸ್ ಇನ್ಸ್ ಪೆಕ್ಟರ್ ಗಳಾದ ರೂಪಶ್ರೀ, ಜಯರತ್ನ ದಾಳಿ ಮಾಡಿ, ಆರೋಪಿಗಳನ್ನು ವಶಕ್ಕೆ ಪಡೆದು ತನಿಖೆ ಕೈಗೊಂಡಿದ್ದಾರೆ. ದಾಳಿ ಸಂದರ್ಭದಲ್ಲಿ ಲೋಕಾಯುಕ್ತ ಪೊಲೀಸರಾದ ಉಮೇಶ್, ಗುರುಪ್ರಸಾದ್,…

Read More

ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ನಡೆಸಿದ ಬಾಂಬ್‌ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೊಂದು ಸ್ಫೋಟಕ ಮಾಹಿತಿ ಲಭ್ಯವಾಗಿದೆ. ಮುಸಾವೀರ್‌ ಹುಸೇನ್‌ ಶಾಜಿಬ್‌ ನೇ ರಾಮೇಶ್ವರಂ ಕೆಫೆಯಲ್ಲಿ ಸುಧಾರಿತ ಸ್ಫೋಟಕ ಸಾಧನ ಇಟ್ಟಿದ್ದು ಎಂದು ಎನ್ ‌ಐಎ ತಿಳಿಸಿದ ಬೆನ್ನಲ್ಲೇ, ಸ್ಫೋಟದ ಆರೋಪಿಗೆ ವಿದೇಶದಿಂದ ಹಣ ಹರಿದುಬಂದಿದೆ ಎಂದು ಗುಪ್ತಚರ ಇಲಾಖೆ ಮೂಲಗಳು ತಿಳಿಸಿವೆ. ಇದು ಈಗ ಭಾರಿ ಸಂಚಲನ ಮೂಡಿಸಿದೆ. “ರಾಮೇಶ್ವರಂ ಕೆಫೆಯಲ್ಲಿ ಬಾಂಬ್‌ ಸ್ಫೋಟಿಸಲು ಆರೋಪಿಗಳಿಗೆ ವಿದೇಶದಿಂದ ಹಣ ಸಂದಾಯವಾಗಿದೆ. ಕ್ರಿಪ್ರೋಕರೆನ್ಸಿ ಮೂಲಕ ಇವರಿಗೆ ಹಣ ಸಂದಾಯವಾಗಿದೆ. ದೇವಾಲಯಗಳನ್ನು ಗುರಿಯಾಗಿಸದೆ, ಹೋಟೆಲ್‌ ಗಳಲ್ಲಿ ಬಾಂಬ್‌ ಸ್ಫೋಟಿಸಿ, ಜನರಲ್ಲಿ ಆತಂಕದ ವಾತಾವರಣ ಸೃಷ್ಟಿಸಬೇಕು ಎಂಬುದು ಇವರ ಉದ್ದೇಶವಾಗಿತ್ತು. ಹಾಗಾಗಿ, ಇವರಿಗೆ ವಿದೇಶಿ ಹ್ಯಾಂಡ್ಲರ್‌ ಗಳು ಕ್ರಿಪ್ಟೋ ಮೂಲಕ ಹಣ ಸಂದಾಯ ಮಾಡಿದ್ದಾರೆ. ಈಗಲೂ ಇಬ್ಬರು ಆರೋಪಿಗಳು ತಲೆಮರೆಸಿಕೊಂಡಿದ್ದಾರೆ ಎಂದರೆ, ಅದಕ್ಕೆ ವಿದೇಶಿ ಹಣ ರವಾನೆಯಾಗಿರುವುದೇ ಕಾರಣ” ಎಂದು ಗುಪ್ತಚರ ಮೂಲಗಳು ಮಾಹಿತಿ ನೀಡಿವೆ. ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯವನಾದ ಮುಸಾವೀರ್‌ ಹುಸೇನ್‌ ಶಾಜಿಬ್‌ ಬಾಂಬಿಟ್ಟವನು…

Read More