Author: admin

ಮಗಳು ತನ್ನ ಇಚ್ಛೆಗೆ ವಿರುದ್ಧವಾಗಿ ಮದುವೆಯಾಗಿದ್ದಕ್ಕೆ ತಂದೆ ಆಕ್ರೋಶ ವ್ಯಕ್ತಪಡಿಸಿದ ರೀತಿ ಇದೀಗ ಎಲ್ಲೆಡೆ ಚರ್ಚೆಯಾಗುತ್ತಿದೆ. ಮಗಳು ಬದುಕಿರುವಾಗಲೇ ಆಕೆಯ ಶ್ರದ್ಧಾಂಜಲಿ ಫ್ಲೆಕ್ಸ್​ ಅಳವಡಿಸಿ, ಕುಟುಂಬವೇ ಕಣ್ಣೀರಿಟ್ಟಿರುವ ವಿಡಿಯೋ ಇದೀಗ ಎಲ್ಲೆಡೆ ವೈರಲ್​ ಆಗಿದೆ. ಈ ಘಟನೆ ತೆಲಂಗಾಣದ ರಾಜಣ್ಣ ಸಿರಿಸಿಲ್ಲಾ ಜಿಲ್ಲೆಯಲ್ಲಿ ನಡೆದಿದೆ. ಇಷ್ಟವಿಲ್ಲದಿದ್ದರೂ ಮಗಳು ಚಿಲುವೆರಿ ಅನುಷಾ ಪ್ರೇಮ ವಿವಾಹವಾಗಿರುವುದು ತಂದೆ ಮತ್ತು ತಾಯಿಯ ಆಕ್ರೋಶಕ್ಕೆ ಕಾರಣವಾಗಿದೆ. ಹೀಗಾಗಿ ಮಗಳು ಜೀವಂತವಾಗಿರುವಾಗಲೇ ಮನೆಯ ಮುಂದೆ ಶ್ರದ್ಧಾಂಜಲಿ ಫ್ಲೆಕ್ಸ್​ ಅಳವಡಿಸಿ, ಜನನ ಮತ್ತು ಮರಣದ ದಿನಾಂಕವನ್ನು ಬರೆಸಿ, ಫ್ಲೆಕ್ಸ್​ ಮುಂದೆ ಇಡೀ ಕುಟುಂಬ ಗೊಳೋ ಎಂದು ಅಳುತ್ತಿದ್ದಾರೆ. ಇದಿಷ್ಟೇ ಅಲ್ಲದೆ, ಮಗಳಿಗೆ ಪಿಂಡ ಪ್ರದಾನ ಮಾಡಿರುವುದಾಗಿಯೂ ಸಂಬಂಧಿಕರಿಗೆ ತಿಳಿಸಿದ್ದಾರೆ. ಸದ್ಯ ಪಾಲಕರು ಕಣ್ಣೀರಿಡುತ್ತಿರುವ ವೀಡಿಯೋ ವೈರಲ್​ ಆಗಿದೆ. ಮಗಳನ್ನು ಪ್ರೀತಿಯಿಂದ ಸಾಕಿದ ತಂದೆಗೆ ಇಂತಹ ಅನ್ಯಾಯ ಆಗಬಾರದಿತ್ತು. ಅವರ ಮನವೊಲಿಸಿ ಮದುವೆ ಮಾಡಿಕೊಳ್ಳಬೇಕಿತ್ತು. ಓಡಿ ಹೋಗುವ ಮೂಲಕ ತಂದೆ-ತಾಯಿಯ ತಲೆ ತಗ್ಗಿಸುವಂತೆ ಮಾಡಿದ ಮಗಳ ವಿರುದ್ಧ ಪಾಲಕರು ಪ್ರತಿಭಟಿಸಿದ ರೀತಿ…

Read More

ಸಿಗರೇಟು ಸೇದುತ್ತಿದ್ದ ಯುವತಿಯನ್ನು ಯುವಕ ದಿಟ್ಟಿಸಿ ನೋಡಿದ್ದಕ್ಕೆ ಚಾಕುವಿನಿಂದ ಇರಿದು ಹತ್ಯೆಗೈದ ಪ್ರಕರಣದಲ್ಲಿ ಮೂವರನ್ನು ಬಂಧಿಸಲಾಗಿದೆ. 24 ವರ್ಷದ ಜಯಶ್ರೀ ಎಂಬ ಮಹಿಳೆಯನ್ನು ಬಂಧಿಸಲಾಗಿದೆ. ರಂಜಿತ್ ರಾಥೋಡ್(28) ಮೃತರು. ಘಟನೆ ಬಳಿಕ ಪರಾರಿಯಾಗಿದ್ದ ಆರೋಪಿಗಳು ಸಿಸಿಟಿವಿ ದೃಶ್ಯಾವಳಿಗಳ ಸಹಾಯದಿಂದ ಸಿಕ್ಕಿಬಿದ್ದಿದ್ದಾರೆ. ಮಹಾರಾಷ್ಟ್ರದ ನಾಗ್ಪುರದಲ್ಲಿ ರಾತ್ರಿ ಈ ಘಟನೆ ನಡೆದಿದೆ. ರಾಥೋಡ್ ಅಂಗಡಿಗೆ ಬಂದು ಸಿಗರೇಟ್ ಸೇದುತ್ತಿದ್ದ ಜಯಶ್ರೀ ಅವರನ್ನು ದಿಟ್ಟಿಸಿದ್ದರು ಎನ್ನಲಾಗಿದೆ. ದಿಟ್ಟಿಸಿ ನೋಡುವ ವಿಚಾರದಲ್ಲಿ ಇಬ್ಬರ ನಡುವೆ ವಾಗ್ವಾದ ನಡೆದಿದೆ. ವಾಗ್ವಾದದ ವೇಳೆ ಜಯಶ್ರೀ ಅವರು ಸಿಗರೇಟ್ ಸೇದಿದ್ದು, ರಾಥೋಡ್ ಅವರ ಮುಖಕ್ಕೆ ಹೊಗೆ ಊದಿದ್ದು, ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ. ಇದನ್ನು ತನ್ನ ಮೊಬೈಲ್ ಕ್ಯಾಮೆರಾದಲ್ಲಿ ರೆಕಾರ್ಡ್ ಮಾಡಿಕೊಂಡ ರಾಥೋಡ್. ಇದರೊಂದಿಗೆ ಜಯಶ್ರೀ ತನ್ನ ಇಬ್ಬರು ಸ್ನೇಹಿತರಿಗೆ ಕರೆ ಮಾಡಿದ್ದಾಳೆ. ಹೊಡೆದಾಟದ ನಂತರ ಮನೆಗೆ ಹಿಂತಿರುಗಿದ ರಾಥೋಡ್‌ ಗೆ ಗ್ಯಾಂಗ್ ಮುಖಾಮುಖಿಯಾಗಿದ್ದು, ಜಯಶ್ರೀ ಸ್ನೇಹಿತರು ಹಲವು ಬಾರಿ ಚಾಕುವಿನಿಂದ ರಾಥೋಡ್ ಗೆ ಇರಿದಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ…

Read More

HSRP ನಂಬರ್‌ ಪ್ಲೇಟ್ ಅಳವಡಿಸಲು ಸಾರಿಗೆ ಇಲಾಖೆ ಮೂರು ತಿಂಗಳು ಕಾಲಾವಕಾಶ ನೀಡಿದೆ. ಅಂದರೆ ಮೇ 31 ಕೊನೆಯ ದಿನಾಂಕ ನಿಗದಿ ಮಾಡಿ ಆದೇಶ ಹೊರಡಿಸಿದೆ. ಇದರ ನಂತರವೂ ಯಾರು ನಂಬರ್ ಪ್ಲೇಟ್ ಹಾಕಿಸುವುದಿಲ್ಲವೋ ಅವರಿಗೆ ದಂಡ ಬೀಳುವುದು ಪಕ್ಕಾ ಎಂದು RTO ಹೇಳಿದೆ. ಅಂತೆಯೇ ಇದೀಗ ಈ ಕುರಿತಂತೆ ಹೊಸ ಅಪ್ಡೇಟ್ ಒಂದು ಹೊರಬಿದ್ದಿದೆ. ದೇಶಾದ್ಯಂತ ಏಕೀಕೃತ ವಾಹನ ನೋಂದಣಿ ಸಂಖ್ಯೆ ಫಲಕ ಅಳವಡಿಕೆ ಹಾಗೂ ವಾಹನಗಳ ಸುರಕ್ಷತೆ ದೃಷ್ಟಿಯಿಂದಾಗಿ ಸಾರಿಗೆ ಇಲಾಖೆ 2019ರ ಏಪ್ರಿಲ್‌ ಗಿಂತ ಹಿಂದೆ ನೋಂದಣಿಯಾದ ವಾಹನಗಳಿಗೆ ಎಚ್ ‌ಎಸ್ ‌ಆರ್‌ ಪಿ ಅಳವಡಿಕೆ ಕಡ್ಡಾಯಗೊಳಿಸಲಾಗಿದೆ. ಫೆಬ್ರವರಿ 17 HSRP ನಂಬರ್ ಪ್ಲೇಟ್ ಅಳವಡಿಕೆ ಮಾಡಲು ಕೊನೆಯ ದಿನಾಂಕ ಎಂದಿದ್ದ ಸಾರಿಗೆ ಇಲಾಖೆಯು ದಿನದಿಂದ ದಿನಕ್ಕೆ ರಾಜ್ಯದಲ್ಲಿ ಹೈ ಸೆಕ್ಯೂರಿಟಿ ನಂಬರ್‌ ಪ್ಲೇಟ್‌(ಎಚ್‌ ಎಸ್‌ ಆರ್‌ ಪಿ) ಅಳವಡಿಕೆ ಏರಿಕೆ ಕಾಣುತ್ತಿದ್ದ ಕಾರಣ ಅದನ್ನು ಮೇ 31 ರ ತನಕ ವಿಸ್ತರಿಸಿತ್ತು. ಇದೀಗ ಇನ್ನೇನು ಎರಡು…

Read More

RCB ಸೋಲಿಗೆ ಪುನೀತ್ ರಾಜ್ ಕುಮಾರ್ ಪತ್ನಿ ಅಶ್ವಿನಿ ಅವರೇ ಕಾರಣ ಎನ್ನುವಂತೆ ಅಸಭ್ಯ ಪದ ಬಳಸಿ ಅವಹೇಳನಕಾರಿ ಪೋಸ್ಟ್ ಮಾಡಿದವರ ವಿರುದ್ಧ ದೂರು ದಾಖಲಾದರೂ ಭಾರೀ ಆಕ್ರೋಶ ಕೇಳಿಬರುತ್ತಿದೆ. ಸಿನಿಮಾ ರಂಗದ ಅನೇಕರು ಪೋಸ್ಟ್ ವಿರುದ್ಧ ಧ್ವನಿ ಎತ್ತಿದ್ದಾರೆ. ಈ ಕುರಿತಂತೆ ಸಿಎಂ ಸಿದ್ಧರಾಮಯ್ಯ ಕೂಡ ಕಠಿಣ ಕ್ರಮದ ಮಾತುಗಳನ್ನು ಆಡಿದ್ದಾರೆ. ಈ ಬೆನ್ನಲ್ಲೇ ಪೋಸ್ಟ್ ವಿಚಾರವಾಗಿ ಅಶ್ವಿನಿ ಪುನೀತ್ ರಾಜ್ ಕುಮಾರ್ ಮೊದಲ ಸಲ ಪ್ರತಿಕ್ರಿಯೆ ನೀಡಿದ್ದಾರೆ. ಹೌದು, ಅವಹೇಳನಕಾರಿ ಪೋಸ್ಟ್ ಮಾಡಿದವರ ವಿರುದ್ಧ ಈಗಾಗಲೇ ಸೈಬರ್ ಕ್ರೈಂ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ. ಈ ಅವಹೇಳನಕಾರಿ ಪೋಸ್ಟ್ ಬಗ್ಗೆ ಇದೀಗ ನಿರ್ಮಾಪಕಿ ಅಶ್ವಿನಿ ಪುನೀತ್ ರಾಜ್‌ಕುಮಾರ್ ಪ್ರತಿಕ್ರಿಯಿಸಿದ್ದಾರೆ. “ಬೇರೆ ಆಯ್ಕೆ ಇಲ್ಲ. ಜೀವನ ಸಾಗಲೇಬೇಕು. ಎರಡನ್ನೂ ಸಮಾನವಾಗಿ ಸ್ವೀಕರಿಸುತ್ತೇನೆ” ಎಂದು ಹೇಳಿದ್ದಾರೆ. ಏನಿದು ಪ್ರಕರಣ?: ಕಳೆದ ಮಾರ್ಚ್ ತಿಂಗಳು 19ನೇ ತಾರೀಕಿನಂದು ಬೆಂಗಳೂರಿನ ಆರ್‌ ಸಿಬಿ ಅನ್‌ ಬಾಕ್ಸ್ ಇವೆಂಟ್‌ ನಲ್ಲಿ ಅಶ್ವಿನಿ ಪುನೀತ್ ರಾಜ್‌ ಕುಮಾರ್…

Read More

ಎರಡು ದಿನಗಳ ಭೇಟಿಗಾಗಿ ಪ್ರಧಾನಿ ನರೇಂದ್ರ ಮೋದಿ ಇಂದು ಚೆನ್ನೈಗೆ ಆಗಮಿಸಲಿದ್ದಾರೆ. ಸಂಜೆ 6 ಗಂಟೆಗೆ ಚೆನ್ನೈ ಪಾಂಡಿ ಬಜಾರ್ ನಲ್ಲಿ ರೋಡ್ ಶೋನಲ್ಲಿ ಭಾಗವಹಿಸಲಿದ್ದಾರೆ. ಚೆನ್ನೈ ದಕ್ಷಿಣ ಕ್ಷೇತ್ರದ ಅಭ್ಯರ್ಥಿ ತಮಿಳಿಸೈ ಸೌಂದರ್ ರಾಜನ್ ಮತ್ತು ಕೇಂದ್ರ ಕ್ಷೇತ್ರದ ಅಭ್ಯರ್ಥಿ ವಿನೋಜ್ ಪಿ ಸೆಲ್ವಂ ಅವರಿಗಾಗಿ ರೋಡ್ ಶೋ ಆಯೋಜಿಸಲಾಗಿದೆ. ನಾಳೆ ಬೆಳಗ್ಗೆ ವೆಲುರಿನಲ್ಲಿ ನಡೆಯಲಿರುವ ಸಾಮಾನ್ಯ ಸಭೆಯಲ್ಲಿ ವೆಲೂರು ಕ್ಷೇತ್ರದ ಅಭ್ಯರ್ಥಿ ಎಸಿ ಷಣ್ಮುಗಂ ಮತ್ತು ಧರ್ಮಪುರಿ ಕ್ಷೇತ್ರದ ಪಿಎಂಕೆ ಅಭ್ಯರ್ಥಿ ಸೌಮ್ಯ ಅನ್ಪುಮಣಿ ಪರ ಪ್ರಧಾನಿ ಮತ ಯಾಚನೆ ಮಾಡಲಿದ್ದಾರೆ. ನರೇಂದ್ರ ಮೋದಿ ಅವರು ಮಧ್ಯಾಹ್ನ ಮೇಟುಪಾಳ್ಯಂನಲ್ಲಿ ರ್ಯಾಲಿ ಮತ್ತು ಸಾರ್ವಜನಿಕ ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ಕೊಯಮತ್ತೂರು ಅಭ್ಯರ್ಥಿ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ಕೆ. ಅಣ್ಣಾಮಲೈ,ಕೇಂದ್ರ ಸಚಿವ ಹಾಗೂ ನೀಲಗಿರಿ ಕ್ಷೇತ್ರದ ಅಭ್ಯರ್ಥಿ ಎಲ್.ಮುರುಗನ್, ಪೊಲ್ಲಾಚಿ ಅಭ್ಯರ್ಥಿ ಕೆ. ವಸಂತರಾಜನ್ ಅವರಿಗೆ ಪ್ರಧಾನಿ ಮತ ಯಾಚಿಸಲಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್…

Read More

ಕೊರಟಗೆರೆ: ಲೋಕಸಭಾ ಚುನಾವಣೆ ಹತ್ತಿರವಾಗುತ್ತಿದ್ದಂತೆಯೇ ಅಪರಾಧ ಪ್ರಕರಣಗಳ ಹಿನ್ನೆಲೆಯುಳ್ಳ ಓರ್ವ ರೌಡಿ ಶೀಟರ್ ನನ್ನು ಕೊರಟಗೆರೆ ತಾಲೂಕಿನಿಂದ ಗಡಿಪಾರು ಮಾಡಿರುವ ಪ್ರಕರಣ ಕೊರಟಗೆರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಕೊರಟಗೆರೆ ತಾಲೂಕಿನಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡುವ ದೃಷ್ಠಿಯಿಂದ ತುಮಕೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ವಿ. ಅಶೋಕ್ ರವರ ಆದೇಶದ ಮೇರೆಗೆ ರೌಡಿ ಶೀಟರ್ ಪುನೀತ್ ನನ್ನು ಕೊರಟಗೆರೆ ತಾಲೂಕಿನಿಂದ ತುರುವೇಕೆರೆ ತಾಲೂಕಿಗೆ ಕೊರಟಗೆರೆ ಸಿಪಿಐ ಆರ್.ಪಿ.ಅನಿಲ್ ಗಡಿಪಾರು ಮಾಡಿದ್ದಾರೆ. ಹಾಗೂ ಪ್ರತಿನಿತ್ಯ ತುರುವೇಕೆರೆ ಪೊಲೀಸ್ ಠಾಣೆಯಲ್ಲಿ ಹಾಜರಾಗಿ ಸಹಿ ಹಾಕುವಂತೆ ಆದೇಶಿಸಿದ್ದಾರೆ. ಕೊರಟಗೆರೆ ತಾಲೂಕು ಕೋಳಾಲ ಪೊಲೀಸ್ ಠಾಣಾ ವ್ಯಾಪ್ತಿಯ ಮೋರ್ಗಾನಹಳ್ಳಿ ನಿವಾಸಿಯಾಗಿರುವ ಪುನೀತ್ ನ ಮೇಲೆ 3 ಪ್ರಕರಣಗಳು ದಾಖಲಾಗಿದ್ದು, ರೌಡಿ ಶೀಟರ್ ತೆರೆಯಲಾಗಿತ್ತು, ಮತ್ತೊಂದು ಪ್ರಕರಣವು ದಾಖಲಾದ ಹಿನ್ನೆಲೆಯಲ್ಲಿ ಹಾಗೂ ಲೋಕಸಭಾ ಚುನಾವಣೆ ನಡೆಯುತ್ತಿರುವುದರಿಂದ ಗಡಿಪಾರು ಆದೇಶ ಹೊರಡಿಸಿದ್ದಾರೆ. ಜೂಜು ಆಡದಂತೆ ಎಚ್ಚರಿಕೆ: ಯುಗಾದಿ ಹಬ್ಬದ ಹಿನ್ನಲೆಯಲ್ಲಿ ಕಳೆದ ಬಾರಿ ಕೆಲವು ಕಡೆ ಜೂಜು ಪ್ರಕರಣಗಳು ಕಂಡು ಬಂದಿದ್ದು…

Read More

ನಿಮ್ಮ ಚರ್ಮದ ರಕ್ಷಣೆಗೆ ಬೆಲ್ಲ ಬಳಸಿ: ಹೇಗೆ ಗೊತ್ತಾ? ಬೆಲ್ಲದಲ್ಲಿ ಆಂಟಿ ಆಕ್ಸಿಡೆಂಟ್, ಸತು ಹಾಗೂ ಸೆಲೆನಿಯಂನಂತ ಖನಿಜಗಳಿದ್ದು, ಇದು ಚರ್ಮದ ರಕ್ಷಣೆಯನ್ನು ಮಾಡುತ್ತದೆ. 2 ಚಮಚ ಜೇನುತುಪ್ಪ, 1 ಚಮಚ ನಿಂಬೆ ರಸ ಹಾಗೂ 2 ಚಮಚ ಬೆಲ್ಲ ತೆಗೆದುಕೊಂಡು ಚೆನ್ನಾಗಿ ಮಿಕ್ಸ್ ಮಾಡಿ ಮುಖಕ್ಕೆ ಹಚ್ಚಿ. 10 ನಿಮಿಷಗಳ ಕಾಲ ಮಸಾಜ್ ಮಾಡಿ. ನಂತರ ತಣ್ಣೀರಿನಿಂದ ತೊಳೆಯಿರಿ. 1 ಚಮಚ ಬೆಲ್ಲದ ಪುಡಿಗೆ ಟೊಮೆಟೋ ರಸವನ್ನು ಬೆರೆಸಿ ಕೆಲ ಹನಿ ನಿಂಬೆ ರಸ ಹಾಗೂ ಅರಶಿನ ಪುಡಿಯನ್ನು ಮಿಕ್ಸ್ ಮಾಡಿ, ಮುಖಕ್ಕೆ ಹಚ್ಚಿ. 15 ನಿಮಿಷಗಳ ಬಳಿಕ ತಣ್ಣೀರಿನಿಂದ ತೊಳೆಯಿರಿ. ಪ್ರತಿದಿನ ಈ ಕಾಫಿ ಕುಡಿಯುವುದರಿಂದ ಹಲವು ಪ್ರಯೋಜನಗಳು: ಉತ್ಕರ್ಷಣ ನಿರೋಧಕ ಸಮೃದ್ಧವಾಗಿರುವ ಬ್ಲ್ಯಾಕ್ ಕಾಫಿ ಕುಡಿದರೆ ಕ್ಯಾನ್ಸರ್ ತಡೆಗಟ್ಟಬಹುದು. ಬ್ಲ್ಯಾಕ್ ಕಾಫಿ ಕುಡಿಯುವುದರಿಂದ ದೇಹದಲ್ಲಿ ಚಯಾಪಚಯ ಕ್ರಿಯೆ ಸರಾಗವಾಗಿ ನಡೆಯುವಂತೆ ನೋಡಿಕೊಳ್ಳುತ್ತದೆ. ಬ್ಲ್ಯಾಕ್ ಕಾಫಿಯನ್ನು ನಿಯಮಿತವಾಗಿ ಸೇವಿಸುತ್ತಾ ಬಂದರೆ ಕ್ಲೋರೊಜೆನಿಕ್ ಆಮ್ಲ ತೂಕ ಇಳಿಕೆಗೆ ಸಹಾಯ ಮಾಡುತ್ತದೆ.…

Read More

ಬೆಂಗಳೂರು: ಲೋಕಸಭಾ ಚುನಾವಣೆ ಹಿನ್ನೆಲೆ ಇಂದು ಬಸವನಗುಡಿಯ ಬಿಎಂಎಸ್ ಮಹಿಳಾ ಕಾಲೇಜಿನಲ್ಲಿ ನಡೆದ ಮತದಾನ ಜಾಗೃತಿ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ನಟ ರಮೇಶ್ ಅರವಿಂದ ಅವರು, ನಾವೆಲ್ಲರೂ ಒಟ್ಟಾಗಿ ಪ್ರಜಾಪ್ರಭುತ್ವಕ್ಕೆ ಹೆಲೋ ಎಂದಾಗ ಒಟ್ಟಾಗಿ ಶೇ. 100 ರಷ್ಟು ಮತ ಚಲಾಯಿಸಿದಾಗ ಮಾತ್ರ ನಾವು ಉತ್ತಮ‌ ಪ್ರಜಾಪ್ರಭುತ್ವವನ್ನು ಕಟ್ಟಲು ಸಾಧ್ಯ ಎಂದು ಹೇಳಿದರು. “ಯಾರದ್ದೋ ಮಾತು ಕೇಳಿ ಅಭ್ಯರ್ಥಿಗೆ ಮತ ಹಾಕಬೇಡಿ, ಕೂಲಂಕುಶವಾಗಿ ಪರಿಶೀಲಿಸಿ, ಗೂಗಲ್ ‌ನಲ್ಲಿ ನಿಮ್ಮ ಕ್ಚೇತ್ರದ ಅಭ್ಯರ್ಥಿ ಬಗ್ಗೆ ಮಾಹಿತಿ ಪಡೆಯಿರಿ. ಏನೇನು ಕೆಲಸ ಮಾಡಿದ್ದಾರೆ, ಕಳೆದ 5 ವರ್ಷದಲ್ಲಿ ಯಾವೆಲ್ಲ ಕೆಲಸ ಮಾಡಿದ್ದಾರೆ ಎಂಬ ಬಗ್ಗೆ ಮಾಹಿತಿ ಪಡೆದುಕೊಂಡು ಸೂಕ್ತ ವ್ಯಕ್ತಿಗೆ ಮತ ಹಾಕಿ, ನೀವೆಲ್ಲರೂ ಯುವ ಮತದಾರರಾಗಿದ್ದು, ತಮ್ಮ ಸ್ವಯಿಚ್ಛೆಯಿಂದ ಮತದಾನ ಮಾಡಲು” ಸಲಹೆ ನೀಡಿದರು. ಜಿಲ್ಲಾ ಸ್ವೀಪ್ ಸಮಿತಿಯ ಅಧ್ಯಕ್ಷರಾದ ಕಾಂತರಾಜು ರವರು ಮಾತನಾಡಿ, ಲೋಕಸಭಾ ಚುನಾವಣೆಗೆ ಸಂಬಂಧಿಸಿದಂತೆ ಯುವ ಮತದಾರರು ಏಪ್ರಿಲ್ 26ರಂದು ಬೆಳಗ್ಗೆ 6 ರಿಂದ ಸಂಜೆ 6 ಗಂಟೆಯವರೆಗೆ…

Read More

ಬೆಂಗಳೂರು: ತೇಜಸ್ವಿ ಸೂರ್ಯನನ್ನ ‘ಅಮಾವಸ್ಯೆ’ ಎಂದು ಕರೆಯುವ ಎಂಬ ಸಿಎಂ ಸಿದ್ದರಾಮಯ್ಯ ಮಾತಿಗೆ ತೇಜಸ್ವಿ ಸೂರ್ಯ ಪ್ರತಿಕ್ರಿಯೆ ನೀಡಿದ್ದು, “ಅವರು ಏನೇ ಎಂದರೂ ನನಗೆ ಆಶೀರ್ವಾದವೇ” ಎಂದು ಹೇಳಿದರು. ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದಲ್ಲಿ ಪ್ರಚಾರ ಕಾರ್ಯ ಕೈಗೊಂಡ ಬಿಜೆಪಿ ಅಭ್ಯರ್ಥಿ ತೇಜಸ್ವಿ ಸೂರ್ಯ, ‘ನನ್ನ ತಂದೆ ಸಿದ್ದರಾಮಯ್ಯ ಅವರ ಜೊತೆ ಅಧಿಕಾರಿಯಾಗಿ ಕೆಲಸ ಮಾಡಿದ್ದಾರೆ ಅವರೊಬ್ಬ ಒಳ್ಳೆಯ ಮುಖ್ಯಮಂತ್ರಿ, ವೈಯಕ್ತಿಕವಾಗಿ ಪ್ರಾಮಾಣಿಕರು ಎಂದು ಹೇಳುತ್ತಿದ್ದರು. ಸಿದ್ದರಾಮಯ್ಯ ವಯಸ್ಸಿನಲ್ಲಿ ನನ್ನ ತಾತನ ಪ್ರಾಯದವರು, ‘ಅವರು ಅಮವಾಸ್ಯೆ ಏನೇ ಹೇಳಲಿ ನನಗೆ ಆಶೀರ್ವಾದದ ಸಮಾನ ‘ ಎಂದು ಸಿದ್ದರಾಮಯ್ಯ ಹೇಳಿಕೆ ಪ್ರತಿಕ್ರಿಯೆ ನೀಡಿದ್ದಾರೆ. ಬೆಂಗಳೂರು ದಕ್ಷಿಣ ಕ್ಷೇತ್ರದಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಸೌಮ್ಯಾ ರೆಡ್ಡಿ ಪರ ಸಿಎಂ ಸಿದ್ದರಾಮಯ್ಯ ಪ್ರಚಾರ ಕೈಗೊಂಡಿದ್ದು, ಈ ವೇಳೆ ತೇಜಸ್ವಿ ಸೂರ್ಯ ವಿರುದ್ಧ ಸಿಎಂ ಹರಿಹಾಯ್ದಿದ್ದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

Read More

ಕೊರಟಗೆರೆ: ಕುಡಿಯಲು ನೀರಿಲ್ಲದೆ ಜನರು ಪರದಾಡುತ್ತಿರುವ ಸಂದರ್ಭದಲ್ಲಿ ಕೊರಟಗೆರೆ ತಾಲೂಕಿನ ಬೈಚಾಪುರ ಗ್ರಾಮ ಪಂಚಾಯತ್ ಕಚೇರಿ ಆವರಣದಲ್ಲಿ ನೀರು ನಿರಂತರವಾಗಿ ಪೋಲಾಗುತ್ತಿರುವ ಘಟನೆ ನಡೆದಿದೆ. ಬೈಚಾಪುರ ಗ್ರಾಮದ ಜನರಿಗೆ ಕುಡಿಯಲು ನೀರಿಲ್ಲ. ಇಂತಹ ಪರಿಸ್ಥಿತಿಯಲ್ಲೂ ಗ್ರಾಮ ಪಂಚಾಯತ್ ಕಚೇರಿ ಆವರಣದಲ್ಲೇ ನೀರು ಪೋಲಾಗುತ್ತಿದ್ದು, ಗ್ರಾ.ಪಂ. ಪಿಡಿಓ ಹಾಗೂ ವಾಟರ್ ಮ್ಯಾನ್ ಗೆ ಕುಡಿಯುವ ನೀರಿನ ಬೆಲೆಯೇ ಗೊತ್ತಿಲ್ವ ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬರಗಾಲದ ನಡುವೆಯು ನೀರನ್ನು ವ್ಯರ್ಥವಾಗಿ ಹರಿದು ಬಿಟ್ಟಿರುವ ಗ್ರಾಮ ಪಂಚಾಯತ್ ವಿರುದ್ಧ ಗ್ರಾಮಸ್ಥರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ವರದಿ: ಮಂಜುಸ್ವಾಮಿ ಎಂ.ಎನ್., ಕೊರಟಗೆರೆ ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

Read More