Subscribe to Updates
Get the latest creative news from FooBar about art, design and business.
- ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ: ನಿವೃತ್ತಿ ಅಂಚಿನಲ್ಲಿರುವ ಮುಖ್ಯೋಪಾಧ್ಯಾಯ ಅರೆಸ್ಟ್
- ನಾಳೆ ದೆಹಲಿಗೆ ಸಿಎಂ ಸಿದ್ದರಾಮಯ್ಯ ಭೇಟಿ; ನಾಯಕತ್ವ ಬದಲಾವಣೆ ಚರ್ಚೆಗಳ ನಡುವೆ ಹೈಕಮಾಂಡ್ ಬುಲಾವ್
- ಸೇಡು ತೀರಿಸಿಕೊಳ್ಳಲು ವರ್ಷದ ಬಳಿಕ ಅದೇ ಅಪ್ರಾಪ್ತೆ ಮೇಲೆ ಮತ್ತೆ ಲೈಂಗಿಕ ದೌರ್ಜನ್ಯ–ಇಬ್ಬರು ಆರೋಪಿಗಳ ಬಂಧನ
- ಭಟ್ಕಳ: ಕಪ್ಪೆಚಿಪ್ಪು ಸಂಗ್ರಹಿಸಲು ಹೋಗಿ ನೀರಲ್ಲಿ ಮುಳುಗಿ 11 ಮಂದಿ ಸಾವು!
- ಪ್ರೀತಿ ಹೆಸರಲ್ಲಿ ಅಪ್ರಾಪ್ತ ವಯಸ್ಸಿನ ಬಾಲಕಿಗೆ ಲೈಂಗಿಕ ದೌರ್ಜನ್ಯ: ಆರೋಪಿ ವಿರುದ್ಧ ಪೋಕ್ಸೋ ಕೇಸ್ ದಾಖಲು
- ಬಾಲಕನ ಬಲಿ ಪಡೆದಿದ್ದ ಚಿರತೆ ಕೊನೆಗೂ ಸೆರೆ: 14 ದಿನಗಳ ಕಾರ್ಯಾಚರಣೆ ಬಳಿಕ ಸ್ಥಳೀಯರು ನಿಟ್ಟುಸಿರು
- ದಿಢೀರ್ ಹವಾಮಾನ ಬದಲಾವಣೆಗೆ AI ಡೇಟಾ ಸೆಂಟರ್ ಕಾರಣ ಆಗ್ತಾ ಇದೆಯೇ?
- ಗೃಹಲಕ್ಷ್ಮಿ, ಗೃಹಜ್ಯೋತಿ ಫಲಾನುಭವಿಗಳ ಪಟ್ಟಿ ಪರಿಷ್ಕರಣೆಗೆ ರಾಜ್ಯ ಸರ್ಕಾರ ನಿರ್ಧಾರ: ಅನರ್ಹರಿಗೆ ಕೋಕ್!
Author: admin
ರಾಜ್ಯದ 223 ಬರ ಪೀಡಿತ ತಾಲೂಕುಗಳ 1ರಿಂದ 10ನೇ ತರಗತಿಯ ಸರ್ಕಾರಿ ಶಾಲಾ ಮಕ್ಕಳಿಗೆ ಬೇಸಿಗೆ ರಜೆಯಲ್ಲೂ ಮಧ್ಯಾಹ್ನ ಬಿಸಿಯೂಟ ನೀಡಲು ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ. ಏ.11ರಿಂದ ಮೇ 28ರವರೆಗೆ ಒಟ್ಟು 41 ದಿನಗಳ ಕಾಲ ಮಧ್ಯಾಹ್ನ 12.30ರಿಂದ 2 ಗಂಟೆವರೆಗೆ ಊಟ ನೀಡಲಾಗುತ್ತದೆ. ಉಷ್ಣಾಂಶ ಹೆಚ್ಚಿರುವ ಜಿಲ್ಲೆಗಳಲ್ಲಿ ಮಾತ್ರ ಬೆಳಗ್ಗೆ 10 ಗಂಟೆಯಿಂದ 11.30 ಅವಧಿಯಲ್ಲಿ ವಿತರಿಸುವಂತೆ ಶಿಕ್ಷಣ ಇಲಾಖೆ ಸೂಚಿಸಿದೆ. ಶಾಲಾ ಮಕ್ಕಳ ಮಾಹಿತಿ ಅನುಗುಣವಾಗಿ ಬಿಸಿಯೂಟ ಸಿದ್ಧಪಡಿಸಿಬೇಕು ಎಂದು ತಿಳಿಸಲಾಗಿದೆ. ಬಿಸಿಯೂಟ ವ್ಯವಸ್ಥೆಯನ್ನು ವಿದ್ಯಾರ್ಥಿಗಳು ಮತ್ತು ಪಾಲಕರ ಗಮನಕ್ಕೆ ತಂದು ಬಿಸಿಯೂಟ ಸ್ವೀಕರಿಸುವ ಒಪ್ಪಿಗೆ ಪತ್ರ ಪಡೆಯಬೇಕು. ಬಿಸಿಯೂಟ ಕೇಂದ್ರಗಳಾಗಿ ಗುರುತಿಸಿದ ಶಾಲೆಯಲ್ಲಿ 250 ಕ್ಕಿಂತ ಹೆಚ್ಚು ಮಕ್ಕಳು ನಿರಂತರವಾಗಿ ಬಿಸಿಯೂಟ ಸ್ವೀಕರಿಸಲು ಹಾಜರಾಗುತ್ತಿದ್ದಲ್ಲಿ, ಅಂತಹ ಕೇಂದ್ರ ಶಾಲೆಗಳಿಗೆ ಮಾತ್ರ ಒಬ್ಬರು ಹೆಚ್ಚುವರಿ ಶಿಕ್ಷಕರನ್ನು ನಿಯೋಜಿಸಬೇಕು ಎಂದು ಆದೇಶದಲ್ಲಿ ತಿಳಿಸಲಾಗಿದೆ. ಶಿಕ್ಷಣಾಧಿಕಾರಿಯನ್ನು ನೋಡಲ್ ಅಧಿಕಾರಿಯಾಗಿ ನೇಮಿಸಲಾಗಿದ್ದು, ಮೇಲ್ವಿಚಾರಣೆಗಾಗಿ ಪ್ರತಿನಿತ್ಯ ಶಾಲೆಗಳಿಗೆ ಭೇಟಿ ನೀಡಬೇಕು ಎಂದು ಸೂಚಿಸಲಾಗಿದೆ.…
ಸೋಶಿಯಲ್ ಮೀಡಿಯಾದಲ್ಲಿ ಸೆಲೆಬ್ರಿಟಿಗಳನ್ನು ಒಂದಿಲ್ಲೊಂದು ರೀತಿಯಲ್ಲಿ ಟ್ರೋಲ್ ಮಾಡಲಾಗುತ್ತದೆ. ಇದರಿಂದ ಅವರ ಸಿನಿಮಾಗಳ ಮೇಲೆ ಕೆಟ್ಟ ಪರಿಣಾಮ ಬೀರುತ್ತದೆ. ಇತ್ತೀಚೆಗೆ ವಿಜಯ್ ದೇವರಕೊಂಡ ನಟನೆಯ ‘ದಿ ಫ್ಯಾಮಿಲಿ ಸ್ಟಾರ್’ ಸಿನಿಮಾ ಬಿಡುಗಡೆ ಆಗಿದ್ದು, ಆ ಚಿತ್ರಕ್ಕೂ ಟ್ರೋಲ್ ಕಾಟ ಎದುರಾಗಿದೆ. ಮೊದಲ ದಿನವೇ ಈ ಸಿನಿಮಾಗೆ ವಿಶ್ರ ಪ್ರತಿಕ್ರಿಯೆ ಸಿಕ್ಕಿತು. ಬಳಿಕ ಟ್ರೋಲ್ ಹೆಚ್ಚಾಯಿತು. ಅಂಥ ಟ್ರೋಲ್ ಮಂದಿಯ ವಿರುದ್ಧ ‘ದಿ ಫ್ಯಾನಿಲಿ ಸ್ಟಾರ್’ ಚಿತ್ರತಂಡ ತಿರುಗಿ ಬಿದ್ದಿದೆ. ಸೈಬರ್ ಪೊಲೀಸರಿಗೆ ದೂರು ನೀಡಲಾಗಿದೆ ಎಂದು ವರದಿ ಆಗಿದೆ. ವಿಜಯ್ ದೇವರಕೊಂಡರನ್ನು ಒಂದು ವರ್ಗದ ನೆಟ್ಟಿಗರು ದ್ವೇಷಿಸುತ್ತಾರೆ. ಇದರಿಂದಾಗಿ ಅವರ ಸಿನಿಮಾಗೆ ಪೆಟ್ಟು ಬಿದ್ದಿದೆ. ‘ದಿ ಫ್ಯಾಮಿಲಿ ಸ್ಟಾರ್’ ಸಿನಿಮಾವನ್ನು ಸೋಶಿಯಲ್ ಮೀಡಿಯಾದಲ್ಲಿ ಹಿಗ್ಗಾಮುಗ್ಗಾ ಟ್ರೋಲ್ ಮಾಡಿದವರ ವಿರುದ್ಧ ಕಾನೂನಿನ ಮೂಲಕ ಹೋರಾಡಲು ಚಿತ್ರತಂಡ ನಿರ್ಧರಿಸಿದೆ. ವಿಜಯ್ ದೇವರಕೊಂಡ ಅವರ ಮ್ಯಾನೇಜರ್ ಹಾಗೂ ಅಭಿಮಾನಿ ಸಂಘದ ಅಧ್ಯಕ್ಷರು ಸೈಬರ್ ಠಾಣೆಗೆ ದೂರು ನೀಡಿದ್ದಾರೆ ಎನ್ನಲಾಗಿದೆ. ದೂರಿನ ಜೊತೆಗೆ ಅನೇಕ ಸಾಕ್ಷಿಗಳನ್ನು ಒದಗಿಸಲಾಗಿದೆ.…
ಹಜ್ ಯಾತ್ರೆಗೆ ತೆರಳಿದ್ದ ಒಂದೇ ಕುಟುಂಬದ ಮೂವರು ಸಾವನ್ನಪ್ಪಿರುವಂತಹ ಘಟನೆ ನಡೆದಿದೆ. ಮಾ.26ರಂದು ರಾತ್ರಿ ಮಕ್ಕಾ ಮದೀನಾಕ್ಕೆ ತೆರಳಿದ್ದರು. ಏ.6ರ ರಾತ್ರಿ ಮಕ್ಕಾ ಮದೀನಾ ಸಮೀಪ ವಿದೇಶದಲ್ಲಿ ಅಪಾಘಾತ ಸಂಭವಿಸಿದ ಪರಿಣಾಮ ಉತ್ತರ ಕನ್ನಡ ಜಿಲ್ಲೆಯ ಮುಂಡಗೋಡದ ಮೂವರು ದುರ್ಮರಣ ಹೊಂದಿದ್ದಾರೆ. ಫಯಾಜ್ ರೋಣ, ಪತ್ನಿ ಆಫ್ರಿನಾ ಬಾನು, ಅಣ್ಣನ ಮಗ ಆಯಾನ್ ರೋಣ ಸ್ಥಳದಲ್ಲಿಯೇ ಮೃತಪಟ್ಟಿದ್ದು, ಇಬ್ಬರು ಮಕ್ಕಳು ಹಾಗೂ ಇನ್ನೋರ್ವ ಗಂಭೀರ ಗಾಯಗೊಂಡಿದ್ದಾರೆ ಎಂದು ವರದಿ ತಿಳಿಸಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ಮಧುಗಿರಿ: ಮಧುಗಿರಿ ಉಪ ವಿಭಾಗ ವ್ಯಾಪ್ತಿಯಲ್ಲಿ ಅಕ್ರಮ ಮದ್ಯ ಮಾರಾಟ ಮಾಡಿದ್ದಲ್ಲದೆ, ಅಕ್ರಮ ಮದ್ಯ ಸಾಗಾಟ ಮಾಡುತ್ತಿದ್ದವರ ಮೇಲೆ ಪೊಲೀಸ್ ದಾಳಿ ನಡೆಸಿದ್ದು, ಮಾಲು ಸಹಿತ ಆರೋಪಿಗಳನ್ನು ಬಂಧಿಸಲಾಗಿದೆ. ಮಧುಗಿರಿ ಉಪ ವಿಭಾಗದ ಪಾವಗಡ ಪೊಲೀಸ್ ಠಾಣಾ ವ್ಯಾಪ್ತಿಯ ದೊಮ್ಮತಮರಿ ಗ್ರಾಮದಲ್ಲಿ ಭಾನುವಾರ ಮಧುಗಿರಿ ಉಪ ವಿಭಾಗದ ಡಿವೈಎಸ್ಪಿ ರಾಮಚಂದ್ರಪ್ಪ ಎನ್.ಬಿ. ಅವರೊಂದಿಗೆ ಪಾವಗಡ ಪೊಲೀಸ್ ಠಾಣೆಯ ಪೊಲೀಸ್ ಸಬ್ ಇನ್ಸ್ಪೆಕ್ಟರ್ ಲೋಕಸಭಾ ಚುನಾವಣೆಯ ಸಂಬಂಧ ಗಸ್ತಿನಲ್ಲಿದ್ದಾಗ ಅಕ್ರಮವಾಗಿ ಯಾವುದೇ ಪರವಾನಗಿ ಹೊಂದಿಲ್ಲದೆ ಮೂರು ಡ್ರಮ್ ಗಳಲ್ಲಿ ಎರಡು ಲಕ್ಷ ರೂ ಮೌಲ್ಯದ ಸುಮಾರು 400 ಲೀಟರ್ ಈಚಲು ಮರದ ಸೇಂದಿಯನ್ನು ಬೂಲೆರೋ ವಾಹನದಲ್ಲಿ (AP02TF1421) ಸೇಂದಿ ಸಾಗಾಟ ಮಾಡುತ್ತಿದ್ದ ಆರೋಪಿ ವೆಂಕಟಂಪಲ್ಲಿ ಗ್ರಾಮದ ರಾಮಾಂಜನೇಯಲು ಅಲಿಯಾಸ್ ರಾಮಾಂಜಿ ಬಿಲ್ ನರಸಪ್ಪ ಕರ್ನಾಟಕ ಗಡಿಭಾಗದ ಹಳ್ಳಿಗಳಲ್ಲಿ ಮಾರಾಟ ಮಾಡಲು ಸೇಂದಿ ಸಾಗಾಟ ಮಾಡುತ್ತಿರುವಾಗ ಮಾಲು ಸಮೇತ ವಶಕ್ಕೆ ಪಡೆದುಕೊಂಡು ಪ್ರಕರಣ ದಾಖಲಿಸಿ ಕಾನೂನು ಕ್ರಮ ಕೈಕೊಂಡಿದ್ದಾರೆ. ಮಧುಗಿರಿ ವೃತ್ತ ವ್ಯಾಪ್ತಿಯಲ್ಲಿ ಶನಿವಾರದಂದು…
ಎಲ್ಲೆಂದರಲ್ಲಿ ಬೇಕಾ ಬಿಟ್ಟಿಯಾಗಿ ನೀರು, ರೆಡಿ ಜ್ಯೂಸುಗಳನ್ನು ಬಾಯಾರಿಕೆಗಳಾಗಿ ಕುಡಿದು ಎಲ್ಲೆಂದರಲ್ಲಿ ಬಿಸಾಡಿ ಮಾರ್ಗದ ಬದಿ ಪೇಟೆ ಪಟ್ಟಣಗಳನ್ನು ಗಲೀಜು ಮಾಡಿ ಅದಕ್ಕೊಂದು ಸೂಕ್ತ ವ್ಯವಸ್ಥೆ ನೀಡಿ ಮಾದರಿಯಾಗಿದ್ದಾರೆ. ಕಾಸರಗೋಡು ಜಿಲ್ಲೆಯ ಕಾರಡ್ಕ ಗ್ರಾಮ ಪಂಚಾಯತ್ ಮುಳ್ಳೇರಿಯ ಪೇಟೆಯಲ್ಲಿ ಬಾಟಲ್ ತರಹ ದೊಡ್ಡ ಗಾತ್ರದಲ್ಲಿ ತಂತಿ ಬಲೆಯಲ್ಲಿ ನಿರ್ಮಿಸಿ ಅದರಲ್ಲಿ ಸಾರ್ವಜನಿಕರು ಕುಡಿದ ಬಾಟಲುಗಳನ್ನು ತುಂಬಿಸುವಂತೆ ಮಾಡಿದ್ದಾರೆ. ಎಲ್ಲೆಂದರಲ್ಲಿ ಬಿಸಾಡಿ ಪರಿಸರ ನೈರ್ಮಲ್ಯ ಮಾಡುವುದಲ್ಲದೆ ಇದನ್ನು ಗುಜುರಿಯವರಿಗೆ ಮಾರಾಟ ಮಾಡುವುದರಿಂದಲೂ ಸ್ವಲ್ಪಮಟ್ಟಿನ ಹಣ ಗಳಿಸಬಹುದು ಹೀಗೆ ಹತ್ತಾರು ಕಡೆ ನಿರ್ಮಿಸಿ ಕೊಡುವುದರಿಂದ ಒಬ್ಬೊಬ್ಬರಿಗೆ ನೋಡಿಕೊಳ್ಳುವಂತೆ ಮಾಡುವುದರಿಂದಲೂ ಆದಾಯದ ಜೊತೆಗೆ ಪರಿಸರವೂ ಸುಂದರವಾಗುತ್ತದೆ. ಒಬ್ಬರಿಗೆ ಕೆಲಸವೂ ಆಗುವುದಲ್ಲದೆ ಇದಕ್ಕಾಗಿ ದೊಡ್ಡ ಬಜೆಟ್ ಏನು ಬೇಡ ಕಸದಿಂದ ರಸ ಎಂಬಂತೆ ಮಾಡಿ ಈಗಾಗಲೇ ಕೆಲವು ಕಡೆ ಡಸ್ಟ್ ಬಿನ್ ಗಳನ್ನು ಇಟ್ಟಿದ್ದರು ಇದರಲ್ಲಿ ಹಾಕುವವರಿಲ್ಲ ಅವರನ್ನು ಇದರಲ್ಲಿ ಹಾಕುವಂತೆ ಮಾಡಿದ್ದಾರೆ ಉಸಿರೇ ಉಸಿರೇ ಬಾಳ ಉಸಿರೇ……ಪರಿಸರ ಸ್ವಚ್ಛತೆಯಾಗುತ್ತದೆ. ಬರಹ: ಕುಮಾರ ಪೆರ್ನಾಜೆ, ಪುತ್ತೂರು ನಮ್ಮತುಮಕೂರಿನ…
ರಾಜ್ಯ ಸರ್ಕಾರ ಗ್ಯಾರಂಟಿ ಯೋಜನೆಗಳಿಗೆ ಹಣ ಹೊಂದಿಸಲು ಪ್ರಯತ್ನಗಳನನು ನಡೆಸುತ್ತಿದ್ದರೆ ಸರ್ಕಾರದ ಬೊಕ್ಕಸಕ್ಕೆ ದೊಡ್ಡ ಮಟ್ಟದಲ್ಲಿ ಕನ್ನ ಬೀಳುವ ವಿದ್ಯಮಾನವೊಂದು ತುಮಕೂರು ಜಿಲ್ಲೆಯಲ್ಲಿ ನಡೆಯುತ್ತಿದೆ. ಇಲ್ಲಿನ ವೈನ್ ಶಾಪ್, ಬಾರ್ ಗಳಲ್ಲಿ ಮದ್ಯದ ಖರೀದಿಯ ಬಿಲ್ ನೀಡುತ್ತಿಲ್ಲ ಎಂಬ ಆರೋಪ ಕೇಳಿ ಬಂದಿದೆ. ಈ ಬಗ್ಗೆ ಅಬಕಾರಿ ಜಿಲ್ಲಾಧಿಕಾರಿಯನ್ನು ಸಂಪರ್ಕಿಸಿದಾಗ ಈ ಸಂಗತಿ ತಿಳಿದು ಬಂದಿಲ್ಲ, ಚೆಕ್ ಮಾಡುವುದಾಗಿ ಆರಿಕೆ ಉತ್ತರ ನೀಡುತ್ತಾರೆ. ತುಮಕೂರು ಪಟ್ಟಣದ ಅಂಗಡಿ ಹೆಸರು ಶ್ರೀನಿವಾಸ ವೈನ್ಸ್ Licence no EXE/ML TMK/CLl 2/47 ಸನ್ನದುದಾರರ ಹೆಸರು ಡಿ ಎಸ್ ಕುಮಾರ್ ಬಿನ್ ದಶರಥಯ್ಯ ಎಂಬುವ ಹೆಸರಿನಲ್ಲಿರುವ ವೈನ್ಸ್ ನಲ್ಲಿ ನಿಗದಿತ ಬೆಲೆಗಿಂತ ಹೆಚ್ಚು ಹಣ ಪಡೆಯುತ್ತಿರುವ ವಿಡಿಯೋ ಸಮೇತ ಅಬಕಾರಿ DC ಗೆ ದೂರು ನೀಡಿದರೂ ಯಾವುದೇ ಪ್ರಯೋಜನವಾಗಿಲ್ಲ, ತುಮಕೂರು ಜಿಲ್ಲೆಯ ಅಬಕಾರಿ ಅಧಿಕಾರಿಗಳು ಈ ದಂಧೆಯಲ್ಲಿ ಭಾಗಿಯಾಗಿ ಗ್ರಾಹಕರಿಂದ ಹೆಚ್ಚು ಹಣವನ್ನು ಸಂಗ್ರಹಿಸುತ್ತಿದ್ದಾರೆ. ಇದಕ್ಕೆ ಹಲವು ಸಾಕ್ಷಿ ದಾಖಲೆಗಳು ಇವೆ ಮುಂದಿನಗಳಲ್ಲಿ ಉನ್ನತಮಟ್ಟದಲ್ಲಿ ಸಂವಿಧಾನ…
ಬೆಂಗಳೂರು: ಪ್ರೊ. ರಾಜೀವ್ ಗೌಡ ಅವರು ಉತ್ತಮ ತಿಳಿವಳಿಕೆ, ಕಾಳಜಿ, ಜನಪರ ಸಿದ್ಧಾಂತ ಹೊಂದಿರುವ ಅರ್ಹ ಅಭ್ಯರ್ಥಿ. ಇವರು ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದಿಂದ ಗೆದ್ದೇ ಗೆಲ್ಲುವ ಅವಕಾಶಗಳಿವೆ ಎಂದು ಸಿ.ಎಂ. ಸಿದ್ದರಾಮಯ್ಯ ವಿಶ್ವಾಸ ವ್ಯಕ್ತಪಡಿಸಿದರು. ದಾಸರಹಳ್ಳಿ ವಿಧಾನಸಭಾ ಕ್ಷೇತ್ರದಲ್ಲಿ ಭರ್ಜರಿ ಮಹಿಳಾ ಸಮಾವೇಶ ಮತ್ತು ಬೂತ್ ಮುಖಂಡರುಗಳ ಸಭೆಯನ್ನು ಉದ್ಘಾಟಿಸಿ ಮಾತನಾಡಿದ ಸಿ.ಎಂ. ಸಿದ್ದರಾಮಯ್ಯ ಅವರು, ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಬಿಜೆಪಿ ಕಾರ್ಯಕರ್ತರು ಮತ್ತು ಮುಖಂಡರಿಂದಲೇ ಗೋ-ಬ್ಯಾಕ್ ಅನ್ನಿಸಿಕೊಂಡ ಶೋಭಾ ಕರಂದ್ಲಾಜೆ ಅವರಿಗೆ ಇಲ್ಲಿ ಟಿಕೆಟ್ ಕೊಟ್ಟಿದ್ದಾರೆ. ಉತ್ತರ ಲೋಕಸಭಾ ಕ್ಷೇತ್ರದ ಪ್ರಜ್ಞಾವಂತ ಮತದಾರರು ಶೋಭಾ ಅವರಿಗೆ ಇಲ್ಲಿಂದಲೂ ನೀವು ವಾಪಾಸ್ ಕಳಿಸಿ ಎಂದು ಕರೆ ನೀಡಿದರು. ಶೋಭಾ ಕರಂದ್ಲಾಜೆ ಅವರು ಐದು ವರ್ಷಗಳ ಕಾಲ ರಾಜ್ಯಕ್ಕೆ ಆದ ಅನ್ಯಾಯಗಳ ಬಗ್ಗೆ ಒಂದೇ ಒಂದು ದಿನವೂ ದ್ವನಿ ಎತ್ತಲಿಲ್ಲ. ಇಂಥವರಿಂದ ನಿಮ್ಮ ಮತಕ್ಕೆ ಬೆಲೆ ಬರುತ್ತದಾ? ನೀತಿ ಆಯೋಗದ ಉಪಾಧ್ಯಕ್ಷರಾಗಿ, ಉನ್ನತ ಶೈಕ್ಷಣಿಕ ಅರ್ಹತೆ ಮತ್ತು ತಿಳಿವಳಿಕೆ ಹೊಂದಿ ರಾಜ್ಯಕ್ಕೆ…
ಬೆಂಗಳೂರು: ಮೋದಿಯವರ ಎರಡನೇ ಸುತ್ತಿನ ಚುನಾವಣಾ ಪ್ರಚಾರ ಇದಾಗಲಿದ್ದು, ಪ್ರಧಾನಿ ನರೇಂದ್ರ ಮೋದಿಯವರು ಲೋಕಸಭಾ ಚುನಾವಣೆಯ ಪ್ರಚಾರಕ್ಕಾಗಿ ಏ.14ರಂದು ರಾಜ್ಯಕ್ಕೆ ಆಗಮಿಸಲಿದ್ದಾರೆ. ಡಾ.ಕೆ. ಸುಧಾಕರ್ ಸ್ಪರ್ಧಿಸಿರುವ ಚಿಕ್ಕಬಳ್ಳಾಪುರ ಹಾಗೂ ಶೋಭಾ ಕರಂದ್ಲಾಜೆ ಸ್ಪರ್ಧಿಸಿರುವ ಬೆಂಗಳೂರು ಉತ್ತರ ಲೋಕಸಭೆ ಕ್ಷೇತ್ರದಲ್ಲಿ ರೋಡ್ ಶೋ ಹಾಗೂ ಚಿಕ್ಕಬಳ್ಳಾಪುರ ಕ್ಷೇತ್ರದ ದೇವನಹಳ್ಳಿಯಲ್ಲಿ ಸಾರ್ವಜನಿಕ ಸಭೆ ಆಯೋಜನೆಗೆ ಸಿದ್ಧತೆ ನಡೆಸಿದೆ. ಬೆಂಗಳೂರು ಉತ್ತರ ಲೋಕಸಭೆ ಕ್ಷೇತ್ರದಲ್ಲಿ ಎರಡು ವಿಧಾನಸಭೆ ಕ್ಷೇತ್ರಗಳನ್ನು ಒಳಗೊಂಡು ರೋಡ್ ಶೋ ನಡೆಸಲು ಪಕ್ಷ ಯೋಚಿಸಿದೆ. ಆದರೆ ಪ್ರಧಾನಮಂತ್ರಿ ಕಚೇರಿ ಸೂಚನೆಯನ್ವಯ ಮೋದಿ ಪ್ರವಾಸ, ಪ್ರಚಾರದರೀತಿ, ಸ್ಥಳ ಹಾಗೂ ದಿನಾಂಕ ನಿರ್ಧಾರವಾಗಲಿದೆ ಎಂದು ಮೂಲಗಳು ತಿಳಿಸಿವೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ಬೆಂಗಳೂರು: ಲೋಕಸಭಾ ಚುಣಾವಣೆ ಹಿನ್ನೆಲೆ ಕಾಂಗ್ರೆಸ್ ಬಿಡುಗಡೆ ಮಾಡಿರುವ ಪ್ರಣಾಳಿಕೆಯನ್ನು ದೇಶಾದ್ಯಂತ ಬಿಜೆಪಿ ನಾಯಕರು ಟೀಕೆ ಮಾಡುತ್ತಿದ್ದಾರೆ. ಅದರಂತೆ ರಾಜ್ಯ ಬಿಜೆಪಿ ನಾಯಕ ಸಿ. ಟಿ. ರವಿ ಕೂಡ ಟೀಕೆ ಮಾಡಿದ್ದು, “ಕಾಂಗ್ರೆಸ್ ಹೊಸ ಮುಸ್ಲಿಂ ಲೀಗ್” ಎಂದಿದ್ದಾರೆ. ಈ ಬಗ್ಗೆ ಎಕ್ಸ್ ನಲ್ಲಿ, ಕಾಂಗ್ರೆಸ್ ಹೊಸ ಮುಸ್ಲಿಂ ಲೀಗ್ ಎಂದು ಬರೆದುಕೊಂಡಿದ್ದು, “1936ರ ಮುಸ್ಲಿಂ ಲೀಗ್ ಪ್ರಣಾಳಿಕೆ ಮತ್ತು 2024ರ ಪ್ರಣಾಳಿಕೆಯನ್ನು ಹೋಲಿಕೆ ಮಾಡಿದ್ದಾರೆ. ಮುಸ್ಲಿಂ ಲೀಗ್ ಪ್ರಣಾಳಿಕೆ 1936: ಮುಸ್ಲಿಂ ಲೀಗ್ ಮುಸ್ಲಿಮರ ಷರಿಯಾ ವೈಯಕ್ತಿಕ ಕಾನೂನುಗಳನ್ನು ರಕ್ಷಿಸುತ್ತದೆ. ಮುಸ್ಲಿಂ ಲೀಗ್ ಬಹುಮತದ ವಿರುದ್ಧ ಹೋರಾಡಲಿದೆ. ಮುಸ್ಲಿಮರಿಗೆ ವಿಶೇಷ ವಿದ್ಯಾರ್ಥಿವೇತನ ಮತ್ತು ಉದ್ಯೋಗಕ್ಕಾಗಿ ಹೋರಾಡುತ್ತೇವೆ. ಕಾಂಗ್ರೆಸ್ ಪ್ರಣಾಳಿಕೆ 2024: ಅಲ್ಪಸಂಖ್ಯಾತರಿಗೆ ವೈಯಕ್ತಿಕ ಕಾನೂನುಗಳನ್ನು ಕಾಂಗ್ರೆಸ್ ಖಚಿತಪಡಿಸುತ್ತದೆ. ಭಾರತದಲ್ಲಿ ಬಹುಸಂಖ್ಯಾತವಾದಕ್ಕೆ ಜಾಗವಿಲ್ಲ. ಮುಸ್ಲಿಂ ವಿದ್ಯಾರ್ಥಿಗಳಿಗೆ ವಿದೇಶದಲ್ಲಿ ಅಧ್ಯಯನ ಮಾಡಲು ವಿದ್ಯಾರ್ಥಿವೇತನ ಖಚಿತಪಡಿಸುತ್ತೇವೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296 …
ನವದೆಹಲಿ: ದೆಹಲಿ ಸರ್ಕಾರ ಏಪ್ರಿಲ್ ತಿಂಗಳಲ್ಲಿ 5 ದಿನಗಳ ಡ್ರೈ ಡೇ ಘೋಷಿಸಿದೆ. ಅದರ ದಿನಾಂಕಗಳನ್ನೂ ಅಬಕಾರಿ ಇಲಾಖೆ ಪ್ರಕಟಿಸಿದೆ. ಏಪ್ರಿಲ್ ನಲ್ಲಿ ಈ ಐದು ದಿನಗಳ ಕಾಲ ಸರ್ಕಾರ ನಿರ್ಧರಿಸಿದ ದಿನಾಂಕಗಳಲ್ಲಿ ಮದ್ಯದ ಮಾರಾಟ ಸಂಪೂರ್ಣವಾಗಿ ಬಂದ್. ಆದೇಶ ಉಲ್ಲಂಘಿಸಿದರೆ ಕಠಿಣ ಕ್ರಮ ಕೈಗೊಳ್ಳಲಾಗುವುದು. ದೆಹಲಿ ಸರ್ಕಾರದ ಅಬಕಾರಿ ಇಲಾಖೆಯು ಡ್ರೈ ಡೇ ಕುರಿತು ಆದೇಶವನ್ನು ಹೊರಡಿಸಿದೆ. ಇದರ ಪ್ರಕಾರ, ಏಪ್ರಿಲ್ 11 ರಂದು ಈದ್, ಏಪ್ರಿಲ್ 17 ರಂದು ರಾಮ ನವಮಿ ಮತ್ತು ಏಪ್ರಿಲ್ 21 ರಂದು ಮಹಾವೀರ ಜಯಂತಿಯಂದು ಮದ್ಯದ ಅಂಗಡಿಗಳು ಅಥವಾ ಮಾರಾಟಗಾರರು ತೆರೆಯುವುದಿಲ್ಲ. ಇನ್ನೊಂದೆಡೆ ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ದೆಹಲಿ ಗಡಿಗೆ ಹೊಂದಿಕೊಂಡಿರುವ ಉತ್ತರ ಪ್ರದೇಶದ ಜಿಲ್ಲೆಗಳಲ್ಲೂ ಡ್ರೈ ಡೇ ಘೋಷಿಸಲಾಗಿದೆ. ಅಬಕಾರಿ ಇಲಾಖೆ ಹೊರಡಿಸಿರುವ ಮತ್ತೊಂದು ಆದೇಶದ ಪ್ರಕಾರ, ಉತ್ತರ ಪ್ರದೇಶದ ಗಡಿ ಪ್ರದೇಶಗಳಲ್ಲಿ ಲೋಕಸಭೆ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ದೆಹಲಿಯಲ್ಲಿ ಏಪ್ರಿಲ್ 24 ರಂದು ಸಂಜೆ 6 ರಿಂದ ಏಪ್ರಿಲ್ 26 ರ…