Subscribe to Updates
Get the latest creative news from FooBar about art, design and business.
- ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ: ನಿವೃತ್ತಿ ಅಂಚಿನಲ್ಲಿರುವ ಮುಖ್ಯೋಪಾಧ್ಯಾಯ ಅರೆಸ್ಟ್
- ನಾಳೆ ದೆಹಲಿಗೆ ಸಿಎಂ ಸಿದ್ದರಾಮಯ್ಯ ಭೇಟಿ; ನಾಯಕತ್ವ ಬದಲಾವಣೆ ಚರ್ಚೆಗಳ ನಡುವೆ ಹೈಕಮಾಂಡ್ ಬುಲಾವ್
- ಸೇಡು ತೀರಿಸಿಕೊಳ್ಳಲು ವರ್ಷದ ಬಳಿಕ ಅದೇ ಅಪ್ರಾಪ್ತೆ ಮೇಲೆ ಮತ್ತೆ ಲೈಂಗಿಕ ದೌರ್ಜನ್ಯ–ಇಬ್ಬರು ಆರೋಪಿಗಳ ಬಂಧನ
- ಭಟ್ಕಳ: ಕಪ್ಪೆಚಿಪ್ಪು ಸಂಗ್ರಹಿಸಲು ಹೋಗಿ ನೀರಲ್ಲಿ ಮುಳುಗಿ 11 ಮಂದಿ ಸಾವು!
- ಪ್ರೀತಿ ಹೆಸರಲ್ಲಿ ಅಪ್ರಾಪ್ತ ವಯಸ್ಸಿನ ಬಾಲಕಿಗೆ ಲೈಂಗಿಕ ದೌರ್ಜನ್ಯ: ಆರೋಪಿ ವಿರುದ್ಧ ಪೋಕ್ಸೋ ಕೇಸ್ ದಾಖಲು
- ಬಾಲಕನ ಬಲಿ ಪಡೆದಿದ್ದ ಚಿರತೆ ಕೊನೆಗೂ ಸೆರೆ: 14 ದಿನಗಳ ಕಾರ್ಯಾಚರಣೆ ಬಳಿಕ ಸ್ಥಳೀಯರು ನಿಟ್ಟುಸಿರು
- ದಿಢೀರ್ ಹವಾಮಾನ ಬದಲಾವಣೆಗೆ AI ಡೇಟಾ ಸೆಂಟರ್ ಕಾರಣ ಆಗ್ತಾ ಇದೆಯೇ?
- ಗೃಹಲಕ್ಷ್ಮಿ, ಗೃಹಜ್ಯೋತಿ ಫಲಾನುಭವಿಗಳ ಪಟ್ಟಿ ಪರಿಷ್ಕರಣೆಗೆ ರಾಜ್ಯ ಸರ್ಕಾರ ನಿರ್ಧಾರ: ಅನರ್ಹರಿಗೆ ಕೋಕ್!
Author: admin
ಬೆಂಗಳೂರು: ಚಾಮರಾಜಪೇಟೆಯ ಟಿಆರ್ ಮೀಲ್ ಬಳಿ ಟೈಯರ್ ಅಂಗಡಿಯಲ್ಲಿ ದಿಢೀರ್ ಬೆಂಕಿ ಕಾಣಿಸಿಕೊಂಡಿದ್ದು, ಅದೃಷ್ಟವಶಾತ್ ಗೋಡೌನ್ ನಲ್ಲಿ ಯಾರೂ ಇರಲಿಲ್ಲ. ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ತಗಲಿರುವ ಶಂಕೆ ವ್ಯಕ್ತವಾಗಿದೆ. ಮುಂಜಾನೆ 4:30 ಸುಮಾರಿಗೆ ಬೆಂಕಿ ಅವಘಡ ಸಂಭವಿಸಿದ್ದು, ಬೆಂಕಿ ತಗಲಿರೋ ಕಟ್ಟಡದಲ್ಲಿ ಸುಮಾರು 8 ಟಯರ್ ಅಂಗಡಿಗಳು ಇದ್ದು, ಎಲ್ಲವೂ ಹೊತ್ತಿ ಉರಿದಿದೆ. ಘಟನಾ ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿಗಳು ಭೇಟಿ ನೀಡಿದ್ದು, ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ವಿಜಯನಗರ: ಮಹಿಳೆಯೊಬ್ಬರು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಜಿಲ್ಲೆಯ ಹಗರಿಬೊಮ್ಮನಹಳ್ಳಿ ತಾಲೂಕಿನಲ್ಲಿ ನರೇಗಾ ಕಾಮಗಾರಿ ವಿರೋಧಿಸಿದ ಹಿನ್ನೆಲೆಯಲ್ಲಿ ಮಹಿಳೆಯೊಬ್ಬರಿಗೆ ಜಾತಿನಿಂದನೆ ಮಾಡಲಾಗಿದ್ದು, ಇದರಿಂದ ಮನನೊಂದ ಮಹಿಳೆಯು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ದೀದ್ಗಿ ಮೈಲವ್ವ ಆತ್ಮಹತ್ಯೆಗೆ ಶರಣಾದ ಮಹಿಳೆಯಾಗಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಮೃತ ಮಹಿಳೆಯ ಪುತ್ರನು ಗ್ರಾಮ ಪಂಚಾಯಿತಿ ಪಿಡಿಒ ಸೇರಿ ಎಂಟು ಜನರ ವಿರುದ್ಧ ಪೊಲೀಸ್ ಠಾಣೆಯಲ್ಲಿ ಜಾತಿನಿಂದನೆಯ ದೂರು ದಾಖಲಿಸಿದ್ದಾನೆ. ಹಗರಿಬೊಮ್ಮನಹಳ್ಳಿ ತಾಲೂಕಿನ ಮೋರಿಗೇರಿ ಗ್ರಾಮದಲ್ಲಿ ದೀದ್ಗಿ ಮೈಲವ್ವ ಅವರು ಐದು ಎಕರೆ ಸರ್ಕಾರಿ ಭೂಮಿಯಲ್ಲಿ ಸಾಗುವಳಿ ಮಾಡಿದ್ದು, ಕಳೆದ 15-20 ವರ್ಷದಿಂದ ಅವರು ಸಾಗುವಳಿ ಮಾಡುತ್ತಿದ್ದರು ಎನ್ನಲಾಗಿದೆ. ಆದರೆ, ಪಂಚಾಯಿತಿಯಿಂದ ನರೇಗಾ ಕಾಮಗಾರಿ ಕೈಗೊಳ್ಳಲಾಗಿದ್ದು, ದೀದ್ಗಿ ಮೈಲವ್ವ ಅವರು ಸಾಗುವಳಿ ಮಾಡಿದ ಜಮೀನಿನಲ್ಲಿ ಗೋಕಟ್ಟೆ ನಿರ್ಮಿಸಲು ಏಪ್ರಿಲ್ 5ರಂದು ಕಾಮಗಾರಿ ಆರಂಭಿಸಿದ್ದನ್ನು ಇವರು ವಿರೋಧಿಸಿದ್ದರು. ಆದರೂ, ಕಾಮಗಾರಿ ಮುಂದುವರಿಸಿದ ಕಾರಣ ನೊಂದ ಮಹಿಳೆಯು ವಿಷಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು…
ಊಟದ ನಂತರ ಯಾವುದೇ ಕಾರಣಕ್ಕೂ ಹೀಗೆ ಮಾಡ ಬೇಡಿ: ಊಟದ ತಕ್ಷಣ ನಿದ್ರೆಗೆ ಜಾರುವುದರಿಂದ ದುಷ್ಪರಿಣಾಮಗಳುಂಟಾಗಬಹುದು. ಹಾಗಾಗಿ ಈ ಅಭ್ಯಾಸವನ್ನು ಇಂದೇ ಬಿಟ್ಟುಬಿಡಿ. ಏಕೆಂದರೆ ಇದರಿಂದ ನಮ್ಮ ಜೀರ್ಣ ಕ್ರಿಯೆ ಬಹಳಷ್ಟು ತೊಂದರೆ ಆಗುತ್ತದೆ. ತಿಂದ ತಕ್ಷಣ ಮಲಗುವುದರಿಂದ ಅನೇಕ ಆರೋಗ್ಯ ಸಮಸ್ಯೆಗಳು ಉಂಟಾಗುತ್ತವೆ. ಊಟದ ತಕ್ಷಣ ಮಲಗುವುದರಿಂದ ಜೀರ್ಣಕ್ರಿಯೆಗೆ ಕೆಟ್ಟ ಪರಿಣಾಮ ಬೀರುತ್ತದೆ. ನೀವು ನಿದ್ರೆಗೆ ಜಾರುವುದರಿಂದ ಜೀರ್ಣ ಪ್ರಕ್ರಿಯೆ ನಿಧಾನವಾಗಿ ನಡೆಯುತ್ತದೆ. ಹಾಗಾಗಿ ಸೇವಿಸಿದ ಆಹಾರವು ಸರಿಯಾಗಿ ಜೀರ್ಣವಾಗದೆ ಹೊಟ್ಟೆಯಲ್ಲಿ ಊತ ಮತ್ತು ಅಜೀರ್ಣದಂಥ ಸಮಸ್ಯೆಗಳು ಶುರುವಾಗುತ್ತವೆ. ನೀರು ಕುಡಿಯುವಾಗ ಗಮನವಿರಲಿ, ಈ ತಪ್ಪುಗಳನ್ನ ಮಾಡದಿರಿ: ತಪ್ಪಾದ ರೀತಿಯಲ್ಲಿ ನೀರು ಕುಡಿಯುವುದರಿಂದ ಗಂಟಲು ಕ್ಯಾನ್ಸರ್ ಉಂಟಾಗುತ್ತದೆ ಎಂದು ವರದಿಯೊಂದು ಬಹಿರಂಗಪಡಿಸಿದೆ. ಪ್ಲಾಸ್ಟಿಕ್ ಬಾಟಲಿಗಳಲ್ಲಿ ನೀರು ಕುಡಿಯುವುದನ್ನು ತಪ್ಪಿಸಿ. ಅಧ್ಯಯನದ ಪ್ರಕಾರ, ಪ್ಲಾಸ್ಟಿಕ್ ಬಾಟಲ್ ಗಳಲ್ಲಿ ಮೈಕ್ರೋಪ್ಲಾಸ್ಟಿಕ್ ಹೆಚ್ಚಿನ ಪ್ರಮಾಣದಲ್ಲಿರುವುದರಿಂದ ಅಂಗಾಂಗಕ್ಕೆ ಹಾನಿಯಾಗಬಹುದು. ಒಂದೇ ಬಾರಿಗೆ ಹೆಚ್ಚು ನೀರು ಕುಡಿಯುವುದರಿಂದ ಊತ, ಚಡಪಡಿಕೆ ಹಾಗೂ ಅಮಲು ಉಂಟಾಗುತ್ತದೆ. ಊಟ ಮಾಡುವಾಗ…
ಬೆಂಗಳೂರು ಬಿಬಿಎಂಪಿ ವ್ಯಾಪ್ತಿಯಲ್ಲಿ ಕಾಲರಾ ಕಾಯಿಲೆ ಉಲ್ಬಣಗೊಂಡಿದೆ. ಒಂದೆರಡು ಪ್ರಕರಣ ದಾಖಲಾಗುತ್ತದಂತೆ ಶಂಕಿತರ ಮಾದರಿ ಪರೀಕ್ಷೆಗೆ ಮಾಡಲಾಗುತ್ತಿದೆ. ಆಸ್ಪತ್ರೆ ದಾಖಲಾಗುವವರಿ ಸಂಖ್ಯೆ ಹೆಚ್ಚುತ್ತಿದ್ದಂತೆ ಬಿಬಿಎಂಪಿ ಹೈ ಅಲರ್ಟ್ ಆಗಿದೆ. ಬಿಬಿಎಂಪಿ ಆರೋಗ್ಯ ತಂಡದಿಂದ ಶಂಕಿತ ಮಹಿಳೆಯು ವಾಸವಾಗಿರುವ ಸ್ಥಳದಿಂದ ಸುತ್ತಲಿನ 165 ಮನೆಗಳಿಗೆ ಭೇಟಿ ನೀಡಿ ಸಮೀಕ್ಷೆ ನಡೆಸಿದೆ. ರೋಗ ಹರಡುವ ವಿಧಾನಗಳು, ಶುದ್ಧ ನೀರಿನ ಬಳಕೆ ನೈರ್ಮಲ್ಯದ ಬಗ್ಗೆ ಅರಿವು ಮೂಡಿಸಿ ಆರೋಗ್ಯ ಶಿಕ್ಷಣ ನೀಡಲಾಗಿದೆ. ಕಾಲರಾ ಮುನ್ನೆಚ್ಚರಿಕಾ ಕ್ರಮದ ಬಗ್ಗೆ ಮಾರ್ಗಸೂಚಿ ಬಿಡುಗಡೆ: ಬಿಸಿಲಿನ ತಾಪ, ಬಿಸಿಗಾಳಿ, ಕಾಲರಾ ಬಗ್ಗೆ ಕಟ್ಟೆಚ್ಚರ ವಹಿಸಲು ಸುತ್ತೋಲೆ ಹೊರಡಿಸಿದ್ದು, ಸಾಂಕ್ರಾಮಿಕ ರೋಗಿಗಳ ಡೇಟಾ ನೀಡಲು ಖಾಸಗಿ ಆಸ್ಪತ್ರೆಗಳಿಗೆ ಸೂಚನೆ ನೀಡಲಾಗಿದೆ ಎಂದು ಆರೋಗ್ಯ ಇಲಾಖೆ ಆಯುಕ್ತ ರಂದೀಪ್ ತಿಳಿಸಿದರು. ಕಲಬುರಗಿ, ಬಾಗಲಕೋಟೆ ಜಿಲ್ಲೆಯಲ್ಲಿ ತಲಾ ಇಬ್ಬರು ಮೃತಪಟ್ಟಿದ್ದು, ಬಿಸಿಲಿನ ತಾಪದಿಂದ ಮೃತಪಟ್ಟಿಲ್ಲ ಎಂಬ ಮಾಹಿತಿ ಬಂದಿದೆ. ಇತರೆ ರೋಗಗಳಿಂದ ಬಳಲುತ್ತಿದ್ದ ಓರ್ವ ವ್ಯಕ್ತಿ ಮೃತಪಟ್ಟಿದ್ದಾನೆ. ಬಿಸಿಲಿ ತಾಪವೂ ಇದಕ್ಕೆ ಕಾರಣ ಅನ್ನೋ…
ಭಾರತದಲ್ಲಿ BBCಯ ನ್ಯೂಸ್ ರೂಮ್ ಮುಚ್ಚಲಾಗಿದೆ. ಪ್ರಕಟಣೆಯ ಪರವಾನಗಿಯನ್ನು ಭಾರತೀಯ ಉದ್ಯೋಗಿಗಳು ಸ್ಥಾಪಿಸಿದ ಖಾಸಗಿ ಲಿಮಿಟೆಡ್ ಕಂಪನಿಗೆ ವರ್ಗಾಯಿಸಲಾಯಿತು. ಆದಾಯ ತೆರಿಗೆ ಉಲ್ಲಂಘನೆಯ ವಿಚಾರಣೆಯ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ. ಮುಂದಿನ ವಾರದಿಂದ ಮಾಜಿ ಬಿಬಿಸಿ ಸಿಬ್ಬಂದಿ ‘ಸಾಮೂಹಿಕ ಸುದ್ದಿಮನೆಯನ್ನು ಪ್ರಾರಂಭಿಸಲಿದ್ದಾರೆ. ಭಾರತದಲ್ಲಿ BBC ಯ ಭವಿಷ್ಯದ ಕಾರ್ಯಾಚರಣೆಗಳು ಸಾಮೂಹಿಕ ಸುದ್ದಿಮನೆಯ ಮೂಲಕ ಇರುತ್ತದೆ. ಸಾಮೂಹಿಕ ನ್ಯೂಸ್ ರೂಮ್ ಕಂಪನಿಯಲ್ಲಿ 26% ಪಾಲನ್ನು ಪಡೆಯಲು BBC ಸರ್ಕಾರಕ್ಕೆ ಅರ್ಜಿ ಸಲ್ಲಿಸಿದೆ. ಮತ್ತೊಂದು ಸಂಸ್ಥೆಗೆ ಪ್ರಕಾಶನ ಪರವಾನಗಿಯನ್ನು ಹಸ್ತಾಂತರಿಸುವುದು ತನ್ನ ಇತಿಹಾಸದಲ್ಲಿ ಇದು ಮೊದಲ ಬಾರಿಗೆ ಮತ್ತು ಪತ್ರಿಕೋದ್ಯಮದಲ್ಲಿ ರಾಜಿಯಾಗುವುದಿಲ್ಲ ಎಂದು ಬಿಬಿಸಿ ಪ್ರತಿಕ್ರಿಯಿಸಿದೆ. ಕಲೆಕ್ಟಿವ್ ನ್ಯೂಸ್ ರೂಮ್ ನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರೂಪಾ ಝಾ ಹೇಳಿದರು: “ಬಿಬಿಸಿಯು ಮತ್ತೊಂದು ಸಂಸ್ಥೆಗೆ ಪ್ರಕಾಶನ ಪರವಾನಗಿ ನೀಡಿರುವುದು ಇದೇ ಮೊದಲು ಮತ್ತು ಬಿಬಿಸಿ ಪತ್ರಿಕೋದ್ಯಮದಲ್ಲಿ ರಾಜಿ ಮಾಡಿಕೊಳ್ಳುವುದಿಲ್ಲ. ಬಿಬಿಸಿ ಇಂಡಿಯಾದಲ್ಲಿ ಹಿರಿಯ ಸುದ್ದಿ ಸಂಪಾದಕರಾಗಿದ್ದ ಝಾ ಅವರು ಕಲೆಕ್ಟಿವ್ ನ್ಯೂಸ್ ರೂಮ್ ನ…
ಲೋಕಸಭೆ ಚುನಾವಣೆ ಹಿನ್ನೆಲೆ ಮತದಾನದ ಮಹತ್ವ ಸಾರಲು ಜನಜಾಗೃತಿ ಮೂಡಿಸಲು ಕೆಎಂಎಫ್ ವಿನೂತನ ಪ್ರಯತ್ನಕ್ಕೆ ಮುಂದಾಗಿದೆ. ಹಾಲು, ಮೊಸರು, ಮಜ್ಜಿಗೆ, ಲಸ್ಸಿ ಪ್ಯಾಕೆಟ್ ಗಳ ಮೂಲಕವೂ ಮತದಾನದ ಮಹತ್ವ ಸಾರಲು ಕೆಎಂ ಎಫ್ ಮುಂದಾಗಿದೆ. ಚುನಾವಣೆಯಿಂದ ಚುನಾವಣೆಗೆ ಮತದಾನದ ಪ್ರಮಾಣ ಕಡಿಮೆಯಾಗುತ್ತಿರುವ ಹಿನ್ನೆಲೆ, ಅದರಲ್ಲೂ ನಗರ ಪ್ರದೇಶದಲ್ಲಿ ಮತದಾನ ಮಾಡಲು ಮತದಾರರು ನಿರ್ಲಕ್ಷ್ಯ ತೋರುತ್ತಿದ್ದು, ಹೀಗಾಗಿ ಮತದಾನ ಪ್ರಮಾಣ ಹೆಚ್ಚಿಸಲು ಚುನಾವಣಾ ಆಯೋಗ ಭಿನ್ನ ವಿಭಿನ್ನ ಕಾರ್ಯಕ್ರಮಗಳನ್ನು ಆಯೋಜಿಸುತ್ತಿದೆ. ಇದೀಗ ಕೆಎಂಎಫ್ ನಿಂದ ಮತದಾನದ ಮಹತ್ವ ಸಾರಲು ಜನಜಾಗೃತಿ ಮೂಡಿಸುತ್ತಿದ್ದು, ನಂದಿನಿ ಹಾಲು, ಮೊಸರು, ಮಜ್ಜಿಗೆ, ಲಸ್ಸಿ ಪ್ಯಾಕೆಟ್ ಗಳ ಮೇಲೆ ಮತದಾನ ಮಾಡುವಂತೆ ಜನಜಾಗೃತಿ ಮೂಡಿಸುವ ಸಂದೇಶ ಮುದ್ರಣ ಮಾಡಲಾಗುತ್ತಿದೆ. ಇದೇ ಏಪ್ರಿಲ್ 26ರಂದು ನಡೆಯುವ ಲೋಕಸಭಾ ಚುನಾವಣೆಯಲ್ಲಿ ಪ್ರತಿಯೊಬ್ಬರೂ ತಪ್ಪದೇ ಮತ ಚಲಾವಣೆ ಮಾಡುವಂತೆ ಹಾಲು, ಮೊಸರು, ಮಜ್ಜಿಗೆ, ಲಸ್ಸಿ ಪೊಟ್ಟಣಗಳ ಮೇಲೆ ಮುದ್ರಿಸುವ ಮೂಲಕ ಸಂದೇಶ ರವಾನೆ ಮಾಡುತ್ತಿದೆ. ಮತದಾನದ ಮಹತ್ವ ಸಾರಲು ಕೆಎಂಎಫ್ ಮಾಡಿರುವ ವಿನೂತನ…
ಸರಗೂರು: ತಾಲ್ಲೂಕಿನ ಪಟ್ಟಣದ ನಾಲ್ಕನೇ ವಾರ್ಡಿನ ನಿವಾಸಿಯಾದ ಪಟ್ಟಣ ಪಂಚಾಯತ್ ಸದಸ್ಯ ಎಸ್.ಎಲ್. ರಾಜಣ್ಣ(56) ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಎಸ್.ಎಲ್.ರಾಜಣ್ಣ, ಗ್ರಾಮೀಣ ಭಾಗದ ವ್ಯಕ್ತಿಯಾಗಿದ್ದು, ಇವರು ದಲಿತ ಕುಟುಂಬದಿಂದ ಬಡತನದಿಂದ ಬೆಳೆದು ಬಂದಿದ್ದು, ರಾಜ್ಯ ಮಟ್ಟದಲ್ಲಿ ವಾಲಿಬಾಲ್ ಕ್ರೀಡಾಪಟುವಾಗಿದ್ದರು. ಇವರು ಮನೆಯಲ್ಲಿ ಕಡು ಬಡತನ ಇದ್ದ ಕಾರಣ ವಿದ್ಯಾಬ್ಯಾಸ ಅರ್ಧಕ್ಕೆ ನಿಲ್ಲಿಸಿ, ಪಟ್ಟಣದಲ್ಲಿ ಯುವ ಪೀಳಿಗೆ ಯುವಕರಿಗೆ ವಾಲಿಬಾಲ್ ತರಬೇತಿ ನೀಡುತ್ತಿದ್ದರು. ಗ್ರಾಮೀಣದ ದಲಿತರ ಸಮುದಾಯದ ನೊಂದ ಜನರಿಗೆ ಆಶಾಕಿರಣವಾಗಿದ್ದರು. ಮುಖ್ಯಮಂತ್ರಿ ಸಿದ್ದರಾಮಯ್ಯ ರವರ ಹಾಗೂ ರಾಜಕೀಯ ನಾಯಕರ ಜೊತೆ ಒಡನಾಟ ಹೊಂದಿದ್ದು, ರಾಜಕೀಯ ಜೀವನದಲ್ಲಿ ಸಕ್ರಿಯವಾಗಿದ್ದರು. ಇವರು ಧರ್ಮಪತ್ನಿ ಹಾಗೂ ಓರ್ವ ಪುತ್ರಿ ಮತ್ತು ಅಪಾರ ಬಂಧುಗಳನ್ನು ಅಗಲಿದ್ದಾರೆ. ಪಟ್ಞಣದಲ್ಲಿ ಇವರನ್ನು ಕಳೆದುಕೊಂಡು ಜನರು ಶೋಕಭರಿತರಾಗಿದ್ದಾರೆ. ವರದಿ: ಹಾದನೂರು ಚಂದ್ರ ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ತುರುವೇಕೆರೆ: ಇದು ತುರುವೇಕೆರೆಯ ತಾಲೂಕು ಕೇಂದ್ರದಲ್ಲಿರುವ ಕೆ ಎಸ್ ಆರ್ ಟಿ ಸಿ ಬಸ್ ನಿಲ್ದಾಣದ ಅಧಿಕಾರಿಗಳು ನಿರ್ಲಕ್ಷತೆಯ ಕಥೆಯಾಗಿದೆ. ನಿಲ್ದಾಣದ ಒಳಗೆ ಇರುವ ಶೌಚಾಲಯದ ಮತ್ತು ಕೈ ತೊಳೆಯುವ ಜಾಗದಲ್ಲಿ ಅಳವಡಿಸಿರುವ ಪ್ಲಾಸ್ಟಿಕ್ ಪೈಪು ಒಡೆದು ಹೋಗಿ, ಸುಮಾರು ತಿಂಗಳುಗಳೇ ಕಳೆದರೂ ಇದನ್ನು ಸರಿಪಡಿಸುವ ಗೋಜಿಗೆ ಕೆ ಎಸ್ ಆರ್ ಟಿ ಸಿ ಯ ನಿಲ್ದಾಣ ಅಧಿಕಾರಿಗಳು ಇನ್ನೂ ಹೋಗಿಲ್ಲ. ಸಾರ್ವಜನಿಕರು ಈ ಬಗ್ಗೆ ಪ್ರಶ್ನೆ ಮಾಡಿದರೆ, “ಶೌಚಾಲಯವನ್ನು ಸ್ವಚ್ಛಗೊಳಿಸುವ ಕೆಲಸ ನಮ್ಮದಲ್ಲ. ನಿಗಮವು ಗುತ್ತಿಗೆ ನೀಡಿದೆ. ನೀವೇನಿದ್ದರೂ ಗುತ್ತಿಗೆದಾರರ ಬಳಿ ಕೇಳಿಕೊಳ್ಳಿ” ಎಂದು ಸಬೂಬು ಹೇಳಿ ನುಣುಚಿಕೊಳ್ಳುತ್ತಾರೆ. ಶೌಚಾಲಯದ ಕಾವಲುಗಾರನ್ನು ವಿಚಾರಿಸಿದರೆ “ಗುತ್ತಿಗೆದಾರರನ್ನು ವಿಚಾರಿಸಿಕೊಳ್ಳಿ” ಎಂದು ಹೇಳುತ್ತಾರೆ. “ಇಲ್ಲಿ ದಿನನಿತ್ಯ ನೂರಾರು ಸಾರ್ವಜನಿಕರು ಪ್ರಯಾಣ ಮಾಡಲು ಈ ಬಸ್ ನಿಲ್ದಾಣಕ್ಕೆ ಬರುತ್ತಾರೆ. ಒಡೆದು ಹೋಗಿರುವ ಪೈಪ್ ನಿಂದ ಶೌಚಾಲಯದಲ್ಲಿ ಬಳಸಿದ ಮಲಿನವಾದ ನೀರು ವಾಪಸ್ ಪೈಪಿನ ಮೂಲಕ ಬರುತ್ತದೆ. ಕೆಲವರು ಕೈ ತೊಳೆದು ಮತ್ತು ಬಾಯಿಯಿಂದ ಉಗಿದ ಪಾನ್…
ಇತ್ತೀಚೆಗೆ ಕ್ರಿಕೆಟರ್ ಎಂಎಸ್ ಧೋನಿಗೆ ಸಿನಿಮಾ ಮೇಲೆ ಪ್ರೀತಿ ಹೆಚ್ಚಾಗಿದ್ದು, ಟೀಂ ಇಂಡಿಯಾದಿಂದ ಹೊರ ಬಂದ ಬಳಿಕ, ಧೋನಿ ಎಂಟರ್ ಟೇನ್ ಮೆಂಟ್ ಹೆಸರಿನ ನಿರ್ಮಾಣ ಸಂಸ್ಥೆ ಆರಂಭಿಸಿದ್ದರು. ಈ ನಿರ್ಮಾಣ ಸಂಸ್ಥೆ ಅಡಿಯಲ್ಲಿ ಒಂದು ಸಿನಿಮಾ ಕೂಡ ನಿರ್ಮಾಣ ಆಗಿದೆ. ಶೀಘ್ರವೇ ಅವರ ನಿರ್ಮಾಣ ಸಂಸ್ಥೆ ಅಡಿಯಲ್ಲಿ ಕನ್ನಡ ಸಿನಿಮಾ ಕೂಡ ಮೂಡಿ ಬರಲಿದೆ ಎಂದು ವರದಿ ತಿಳಿಸಿದೆ. ಧೋನಿ ತಮ್ಮ ನಿರ್ಮಾಣ ಸಂಸ್ಥೆ ಮೂಲಕ ಹೊಸಬರಿಗೆ ಅವಕಾಶ ನೀಡುವ ಉದ್ದೇಶ ಇಟ್ಟುಕೊಂಡಿದ್ದಾರೆ. ಮೊದಲು ತಮಿಳು ಭಾಷೆಯಲ್ಲಿ ‘ಲೆಟ್ಸ್ ಗೆಟ್ ಮ್ಯಾರೀಡ್’ ಹೆಸರಿನ ಸಿನಿಮಾ ನಿರ್ಮಾಣ ಮಾಡಿದ್ದರು. ಈ ಚಿತ್ರ ಥಿಯೇಟರ್ ನಲ್ಲೇ ರಿಲೀಸ್ ಆಗಿತ್ತು. ಆದರೆ, ಸಿನಿಮಾ ದೊಡ್ಡ ಮಟ್ಟದಲ್ಲಿ ಗೆಲುವು ಕಂಡಿಲ್ಲ. ಈಗ ಅವರು ಕನ್ನಡ ಚಿತ್ರರಂಗದತ್ತ ಒಲವು ತೋರಿದ್ದಾರೆ. ಕನ್ನಡ ಚಿತ್ರರಂಗದ ಖ್ಯಾತಿ ಹೆಚ್ಚಿದೆ. ‘ಕೆಜಿಎಫ್’, ‘ಕಾಂತಾರ’, ‘777 ಚಾರ್ಲಿ’, ‘ಕಾಟೇರ’ ರೀತಿಯ ಸಿನಿಮಾಗಳಿಂದ ಪರಭಾಷೆಯವರೂ ಕನ್ನಡ ಚಿತ್ರರಂಗದತ್ತ ಮುಖಮಾಡುವಂತೆ ಆಗಿದೆ. ಹೀಗಾಗಿ, ಪರಭಾಷೆಯ ನಿರ್ಮಾಪಕರು…
ವನ್ಯಜೀವಿ ಸಂರಕ್ಷಣೆ ವಿಷಯದಲ್ಲಿ ಜರ್ಮನಿ ಮತ್ತು ಬೋಟ್ಸ್ ವಾನ ದೇಶಗಳ ನಡುವಿನ ವಾಗ್ಯುದ್ದ ತಿಕ್ಕಾಟ ತೀವ್ರಗೊಂಡಿದ್ದು, ಜರ್ಮನಿಗೆ 20,000 ಆನೆಗಳ ಹಿಂಡನ್ನು ಕಳುಹಿಸುವುದಾಗಿ ಬೋಟ್ಸ್ ವಾನ ದೇಶದ ಅಧ್ಯಕ್ಷರು ಎಚ್ಚರಿಕೆ ನೀಡಿದ್ದಾರೆ ಎನ್ನಲಾಗಿದೆ. ಬೋಟ್ಸ್ ವಾನ ಜಗತ್ತಿನಲ್ಲಿ ಅತ್ಯಧಿಕ ಆನೆಗಳ ಸಂತತಿ ಇರುವ ದೇಶವಾಗಿದೆ. ಆನೆದಂತ ಬೇಟೆ ಆಡುವವರನ್ನು ನಿಯಂತ್ರಿಸಬೇಕು ಎಂದು ಜರ್ಮನಿಯ ಪರಿಸರ ಸಚಿವೆ ಇತ್ತೀಚೆಗೆ ಆಗ್ರಹಿಸಿದ್ದರು. ಇದಕ್ಕೆ ಪ್ರತಿಕ್ರಿಯಿಸಿರುವ ಬೋಟ್ಸ್ ವಾನ ಅಧ್ಯಕ್ಷ ಮೊಗ್ ವಿಯೆಟ್ಸಿ ಮಸೀಸಿ, ಹೀಗೆ ಮಾಡಿದರೆ ದೇಶದಲ್ಲಿ ಆನೆಗಳ ಸಂತತಿ ಇನ್ನಷ್ಟು ಹೆಚ್ಚಬಹುದು. ಈಗಾಗಲೇ ಆನೆಗಳನ್ನು ನಿಯಂತ್ರಿಸಲು ನಾವು ಹೆಣಗುತ್ತಿದ್ದೇವೆ. ನಮಗೆ ಪಾಠ ಮಾಡುವ ಬದಲು ಜರ್ಮನಿ ಆನೆಗಳೊಂದಿಗೆ ಬದುಕಿ ತೋರಿಸಲಿ. ಅದಕ್ಕೆ ನಾವು 20,000 ಆನೆಗಳನ್ನು ಜರ್ಮನಿಗೆ ಕಳಿಸುತ್ತೇವೆ ಎಂದರು. ಮನುಷ್ಯ-ಪ್ರಾಣಿ ಸಂಘರ್ಷದ ಸಮಸ್ಯೆ ತೀವ್ರಗೊಂಡ ಹಿನ್ನೆಲೆಯಲ್ಲಿ ಬೋಟ್ಸ್ ವಾನದಲ್ಲಿ ಪ್ರತೀ ವರ್ಷ ನಿರ್ದಿಷ್ಟ ಪ್ರಮಾಣದಲ್ಲಿ ಆನೆಗಳ ಹತ್ಯೆಗೆ ಲೈಸೆನ್ಸ್ ನೀಡಲಾಗುತ್ತದೆ. ಬೋಟ್ಸ್ ವಾನದಲ್ಲಿ ಆನೆಗಳ ಹತ್ಯೆಯ ಬಗ್ಗೆ ಕಳವಳ ವ್ಯಕ್ತಪಡಿಸಿದ್ದ ಜರ್ಮನಿಯ…