Subscribe to Updates
Get the latest creative news from FooBar about art, design and business.
- ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ: ನಿವೃತ್ತಿ ಅಂಚಿನಲ್ಲಿರುವ ಮುಖ್ಯೋಪಾಧ್ಯಾಯ ಅರೆಸ್ಟ್
- ನಾಳೆ ದೆಹಲಿಗೆ ಸಿಎಂ ಸಿದ್ದರಾಮಯ್ಯ ಭೇಟಿ; ನಾಯಕತ್ವ ಬದಲಾವಣೆ ಚರ್ಚೆಗಳ ನಡುವೆ ಹೈಕಮಾಂಡ್ ಬುಲಾವ್
- ಸೇಡು ತೀರಿಸಿಕೊಳ್ಳಲು ವರ್ಷದ ಬಳಿಕ ಅದೇ ಅಪ್ರಾಪ್ತೆ ಮೇಲೆ ಮತ್ತೆ ಲೈಂಗಿಕ ದೌರ್ಜನ್ಯ–ಇಬ್ಬರು ಆರೋಪಿಗಳ ಬಂಧನ
- ಭಟ್ಕಳ: ಕಪ್ಪೆಚಿಪ್ಪು ಸಂಗ್ರಹಿಸಲು ಹೋಗಿ ನೀರಲ್ಲಿ ಮುಳುಗಿ 11 ಮಂದಿ ಸಾವು!
- ಪ್ರೀತಿ ಹೆಸರಲ್ಲಿ ಅಪ್ರಾಪ್ತ ವಯಸ್ಸಿನ ಬಾಲಕಿಗೆ ಲೈಂಗಿಕ ದೌರ್ಜನ್ಯ: ಆರೋಪಿ ವಿರುದ್ಧ ಪೋಕ್ಸೋ ಕೇಸ್ ದಾಖಲು
- ಬಾಲಕನ ಬಲಿ ಪಡೆದಿದ್ದ ಚಿರತೆ ಕೊನೆಗೂ ಸೆರೆ: 14 ದಿನಗಳ ಕಾರ್ಯಾಚರಣೆ ಬಳಿಕ ಸ್ಥಳೀಯರು ನಿಟ್ಟುಸಿರು
- ದಿಢೀರ್ ಹವಾಮಾನ ಬದಲಾವಣೆಗೆ AI ಡೇಟಾ ಸೆಂಟರ್ ಕಾರಣ ಆಗ್ತಾ ಇದೆಯೇ?
- ಗೃಹಲಕ್ಷ್ಮಿ, ಗೃಹಜ್ಯೋತಿ ಫಲಾನುಭವಿಗಳ ಪಟ್ಟಿ ಪರಿಷ್ಕರಣೆಗೆ ರಾಜ್ಯ ಸರ್ಕಾರ ನಿರ್ಧಾರ: ಅನರ್ಹರಿಗೆ ಕೋಕ್!
Author: admin
ತುಮಕೂರು: ಸೋಷಲಿಸ್ಟ್ ಯೂನಿಟಿ ಸೆಂಟರ್ ಆಫ್ ಇಂಡಿಯಾ ಕಮ್ಯುನಿಸ್ಟ್ ಪಕ್ಷದ ವತಿಯಿಂದ ಇಂದು ನಾಮಪತ್ರ ಸಲ್ಲಿಸಲಾಯಿತು. ನಗರದ ಟೌನ್ ಹಾಲ್ ನಿಂದ ಮೆರವಣಿಗೆಯಲ್ಲಿ ತೆರಳಿ ಎಸ್ ಯುಸಿಐ ಪಕ್ಷದ ಅಭ್ಯರ್ಥಿಯನ್ನು ಗೆಲ್ಲಿಸಿ, ರೈತರು,ಕಾರ್ಮಿಕರು ದುಡಿಯುವ ಜನಗಳ ಸಮಸ್ಯೆಗಳ ಧ್ವನಿಯನ್ನು ಸಂಸತ್ತಿನಲ್ಲಿ ಚರ್ಚಿಸಲು ಎಸ್.ಎನ್.ಸ್ವಾಮಿಯವರನ್ನು ಬೆಂಬಲಿಸಿ, ಎಸ್ಯುಸಿಐ ಪಕ್ಷವನ್ನು ಬಲಪಡಿಸಿ ಎಂಬ ಘೋಷಣೆಗಳೊಂದಿಗೆ ಕಾರ್ಯಕರ್ತರು ಕೂಗುತ್ತ ಮೆರವಣಿಗೆ ನಡೆಸಿದರು. ಮೆರವಣಿಗೆಗೆ ಮುಂಚೆ ಮಾತನಾಡಿದ ಅಭ್ಯರ್ಥಿ ಎಸ್.ಎನ್.ಸ್ವಾಮಿ, ಸಮಾಜದಲ್ಲಿ ಬಡವರು ಶ್ರೀಮಂತರ ನಡುವಿನ ಅಂತರ ಹೆಚ್ಚುತ್ತಿದೆ. ನಮ್ಮನ್ನು ಆಳುತ್ತಿರುವ ಪಕ್ಷಗಳು ಬಂಡವಾಳ ಶಾಹಿಗಳ ಶ್ರೀಮಂತ ಮನೆತನಗಳ ಲಾಭವನ್ನು ಹೆಚ್ಚಿಸುತ್ತಿವೆ. ದೇಶದಲ್ಲಿ ಜನರು ಬೆಲೆ ಏರಿಕೆ ನಿರುದ್ಯೋಗದಂಥ ಸಮಸ್ಯೆಗಳನ್ನು ತೀರ್ವವಾಗಿ ಎದುರಿಸುತ್ತಿರುವ ಈ ಸಂದಿಗ್ಧ ಪರಿಸ್ಥಿತಿಯಲ್ಲಿ ಎಡಪಂಥೀಯ ಸಿಪಿಐ, ಸಿಪಿಐಎಂ ಪಕ್ಷಗಳು ಕೆಲವೊಂದು ಸೀಟುಗಳ ಲಾಭಕ್ಕಾಗಿ ಚುನಾವಣಾ ರಾಜಕೀಯದಲ್ಲಿ ಮುಳುಗಿವೆ. ಕಮ್ಯುನಿಸ್ಟ್ ವಿಚಾರಕ್ಕೆ ಕಾರ್ಮಿಕರನ್ನು ಸಜ್ಜುಗೊಳಿಸಬೇಕಾಗಿದ್ದ ಆ ಪಕ್ಷಗಳು ಇಂಡಿಯಾ ಮೈತ್ರಿ ಕೂಟಕ್ಕೆ ಬೆಂಬಲ ಸೂಚಿಸಿವೆ. ಆದ್ದರಿಂದ ಈ ಚುನಾವಣೆಯಲ್ಲಿ ನಮ್ಮ ಪಕ್ಷವು ತನ್ನ ಶಕ್ತಿ…
ಬೀದರ್: ಜಿಲ್ಲೆಯಲ್ಲಿ 42 ಡಿಗ್ರಿ ಸೆಲ್ಸಿಯಸ್ ಗೂ ಅಧಿಕ ತಾಪಮಾನ ದಾಖಲಾಗಿದ್ದು, ಹೀಗಾಗಿ ನಾಗರಿಕರ ಆರೋಗ್ಯ ದೃಷ್ಟಿಯಿಂದ ಜಿಲ್ಲಾಧಿಕಾರಿಗಳಾದ ಗೋವಿಂದರೆಡ್ಡಿ ಹಾಗೂ ಪೊಲೀಸ್ ಅಧೀಕ್ಷಕರಾದ ಚನ್ನಬಸವಣ್ಣ ಅವರು ಹಲವು ನಿಯಮಗಳನ್ನು ಸಾರ್ವಜನಿಕರು ಪಾಲಿಸುವಂತೆ ಮನವಿ ಮಾಡಿಕೊಂಡಿದ್ದಾರೆ. * ಮಧ್ಯಾಹ್ನ 12 ರಿಂದ 3 ರವರೆಗೆ ಮನೆಯಿಂದ ಹೊರಗೆ ಹೋಗುವುದನ್ನು ಆದಷ್ಟು ಮುಂದೂಡುವುದು. * ದೇಹದಲ್ಲಿ ನಿರ್ಜಲಿಕರಣ(Dehydration) ಆಗದಂತೆ ಸಾಕಷ್ಟು ನೀರು ಕುಡಿಯುವುದು, ಸಾಧ್ಯವಾದಲ್ಲಿ ಓ.ಆರ್.ಎಸ್. ಬೆರೆಸಿ ಕುಡಿಯಿರಿ. * ಮಕ್ಕಳನ್ನು, ಸಾಕು ಪ್ರಾಣಿಗಳನ್ನು ನಿಲ್ಲಿಸಿದ ವಾಹನಗಳಲ್ಲಿ ಬಿಟ್ಟು ಹೋಗಬೇಡಿ. * ಪ್ರಾಣಿಗಳನ್ನು ಗುಡಿಸಲು/ನೆರಳಿನಲ್ಲಿ ಇರಿಸಿ ಮತ್ತು ಸಾಕಷ್ಟು ಕುಡಿಯಲು ನೀರು ಕೊಡಿ. * ನಿಮ್ಮ ಮನೆಯ ಕಿಟಕಿಗಳಿಗೆ ಪರದೆಗಳನ್ನು ಬಳಸಿ ಬಿಸಿಲಿನಿಂದ ಮನೆಯನ್ನು ತಂಪಾಗಿರಿಸಿ, ರಾತ್ರಿ ಸಮಯದಲ್ಲಿ ಕಿಟಕಿಗಳನ್ನು ತೆರೆದಿಟ್ಟು ಮನೆಯನ್ನು ತಂಪಾಗಿರಿಸಿ. ವರದಿ: ಅರವಿಂದ ಮಲ್ಲಿಗೆ, ಬೀದರ್ ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್…
ಸಹಾರನಪುರ: ಅಧಿಕಾರಕ್ಕೆ ಬಂದ ಬಳಿಕ ‘ಕಮಿಷನ್’ ಹೇಗೆ ಗಳಿಸುವುದು ಎಂಬುದು ವಿರೋಧ ಪಕ್ಷಗಳ ‘ಇಂಡಿಯಾ’ ಮೈತ್ರಿಕೂಟದ ಇರಾದೆಯಾಗಿದೆ. ಮತ್ತೊಂದೆಡೆ ಬಿಜೆಪಿ ನೇತೃತ್ವದ ಎನ್ ಡಿಎಗೆ ‘ಮಿಷನ್’ (ಗುರಿ) ಇದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಉತ್ತರ ಪ್ರದೇಶದ ಸಹಾರನಪುರದಲ್ಲಿ ಪಕ್ಷದ ಚುನಾವಣಾ ರ್ಯಾಲಿ ಉದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ, ‘ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ 370ಕ್ಕೂ ಹೆಚ್ಚು ಸ್ಥಾನಗಳನ್ನು ಗಳಿಸುವುದನ್ನು ಹೇಗಾದರೂ ಮಾಡಿ ತಡೆಯುವುದೇ ಇಂಡಿಯಾ ಮೈತ್ರಿಕೂಟದ ಇರಾದೆಯಾಗಿದೆ’ ಎಂದು ಆರೋಪಿಸಿದ್ದಾರೆ. ‘ಕಾಂಗ್ರೆಸ್ ಅಧಿಕಾರದ ಅವಧಿಯಲ್ಲಿ ಕಮಿಷನ್ ಗಳಿಸುವುದರಲ್ಲೇ ಮಗ್ನವಾಗಿತ್ತು. ಈಗ ಇಂಡಿಯಾ ಮೈತ್ರಿಕೂಟವು ಕಮಿಷನ್ ಗಳಿಸುವ ಗುರಿಯನ್ನೇ ಹೊಂದಿದೆ. ಮತ್ತೊಂದೆಡೆ ಮೋದಿ ಸರ್ಕಾರವು ಒಂದು ಮಿಷನ್ನಲ್ಲಿದೆ’ ಎಂದು ಅವರು ಹೇಳಿದರು. ‘ಸಮಾಜವಾದಿ ಪಕ್ಷ ಪ್ರತಿ ಗಂಟೆಗೊಮ್ಮೆ ಅಭ್ಯರ್ಥಿಗಳನ್ನು ಬದಲಾಯಿಸುತ್ತಿದೆ. ಕಾಂಗ್ರೆಸ್ ಗೆ ಅಭ್ಯರ್ಥಿಗಳೇ ಸಿಗುತ್ತಿಲ್ಲ. ಪ್ರಬಲ ಕ್ಷೇತ್ರಗಳಲ್ಲೂ ಕಾಂಗ್ರೆಸ್ ಗೆ ಅಭ್ಯರ್ಥಿಗಳನ್ನು ಕಣಕ್ಕಿಳಿಸುವ ಧೈರ್ಯವಿಲ್ಲ’ ಎಂದು ಅವರು ವಾಗ್ದಾಳಿ ನಡೆಸಿದರು. ‘ಶಕ್ತಿ’ಯನ್ನು ಆರಾಧಿಸುವುದು ನಮ್ಮ ಆಧ್ಯಾತ್ಮಿಕ ಪಯಣದ ಭಾಗವಾಗಿದೆ. ಆದರೆ, ಇಂಡಿಯಾ…
ಕೋಲಾರ: ಕೋಲಾರದಲ್ಲಿ ಲೋಕಸಭಾ ಚುನಾವಣಾ ಪ್ರಚಾರದಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, “ನಾವು ನರೇಂದ್ರ ಮೋದಿ ಅವರನ್ನು ಕೆಳಗಿಳಿಸಿ ರಾಹುಲ್ ಗಾಂಧಿ ಅವರನ್ನು ಪ್ರಧಾನಿ ಮಾಡಬೇಕು” ಎಂದು ಹೇಳಿದ್ದಾರೆ. “ನಾವು ಮತ್ತೆ ೨೫ ಗ್ಯಾರಂಟಿಗಳನ್ನು ಕೊಟ್ಟಿದ್ದೇವೆ. ಕೊಟ್ಟ ಮಾತಿನಂತೆ ನಡೆದುಕೊಂಡಿದ್ದೇವೆ ಎಂದರು. ನಾವು ತಂದ ಗ್ಯಾರಂಟಿ ಯೋಜನೆಗಳಿಂದ ರಾಜ್ಯ ದಿವಾಳಿಯಾಗುತ್ತದೆ ಎಂದು ಬಿಜೆಪಿಯವರು ಹೇಳಿದರು. ಆದರೆ ಆ ರೀತಿ ಆಗಲಿಲ್ಲ ಹಾಗಾಗಿ ಮುಂದಿನ ವರ್ಷಗಳವರೆಗೆ ಕಾಂಗ್ರೆಸ್ ಸರ್ಕಾರ ಜಾರಿಗೆ ತಂದಿರುವಂತಹ ಐದು ಗ್ಯಾರಂಟಿ ಯೋಜನೆಗಳು ಮುಂದುವರಿಯುತ್ತವೆ” ಎಂದು ತಿಳಿಸಿದರು. “ನಾವು ಘೋಷಣೆ ಮಾಡಿದ್ದ ಐದು ಗ್ಯಾರಂಟಿ ಯೋಜನೆಗಳನ್ನು ಅನುಷ್ಠಾನಗೊಳಿಸಿದ್ದೇವೆ. ಗ್ಯಾರೆಂಟಿ ಯೋಜನೆಗಳಿಂದ ಖಜಾನೆ ಖಾಲಿ ಎಂದು ಬಿಜೆಪಿ ಹೇಳಿತ್ತು. ಮುಂದಿನ ವರ್ಷಕ್ಕೂ ಗ್ಯಾರಂಟಿ ಯೋಜನೆಗೆ ಹಣ ಮೀಸಲಿಟ್ಟಿದ್ದೇವೆ. ಬಿಜೆಪಿಯವರು ಹೇಳಿದ್ದು ಎಲ್ಲವೂ ಸುಳ್ಳು. ನಮ್ಮ ಗ್ಯಾರಂಟಿ ಯೋಜನೆಗಳು 5 ವರ್ಷವೂ ಮುಂದುವರೆಯುತ್ತದೆ. ಹೀಗಾಗಿ ಕೇಂದ್ರದಲ್ಲಿ ಬಿಜೆಪಿ ನೇತೃತ್ವದ ಸರ್ಕಾರವನ್ನು ಕಿತ್ತೊಗೆಯಬೇಕು ಮೋದಿಯನ್ನು ಇಳಿಸಿ ರಾಹುಲ್ ಗಾಂಧಿಯನ್ನು ಪ್ರಧಾನಿ ಮಾಡಬೇಕು” ಎಂದು ಹೇಳಿದರು. ನಮ್ಮತುಮಕೂರಿನ…
ಜೈಪುರ: “ಪ್ರಧಾನಿ ನರೇಂದ್ರ ಮೋದಿ ಅವರು ದೇಶದ ಘನತೆ ಮತ್ತು ಪ್ರಜಾಪ್ರಭುತ್ವವನ್ನು ಹಾಳು ಮಾಡುತ್ತಿದ್ದಾರೆ” ಎಂದು ಆರೋಪಿಸಿರುವ ಕಾಂಗ್ರೆಸ್ ಹಿರಿಯ ನಾಯಕಿ ಸೋನಿಯಾ ಗಾಂಧಿ, “ವಿಪಕ್ಷಗಳ ನಾಯಕರನ್ನು ಬಿಜೆಪಿಗೆ ಸೇರುವಂತೆ ಒತ್ತಾಯಿಸಲು ವಿವಿಧ ತಂತ್ರಗಳನ್ನು ಬಳಸಲಾಗುತ್ತಿದೆ” ಎಂದು ಹೇಳಿದ್ದಾರೆ. ಪಕ್ಷದ ಚುನಾವಣಾ ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿದ ಅವರು, “ಕಳೆದ 10 ವರ್ಷಗಳಿಂದ ದೇಶವು ನಿರುದ್ಯೋಗ, ಹಣದುಬ್ಬರ, ಆರ್ಥಿಕ ಬಿಕ್ಕಟ್ಟು ಮತ್ತು ಅಸಮಾನತೆಯನ್ನೆ ಪ್ರೋತ್ಸಾಹಿಸುತ್ತಾ ಬಂದ ಸರ್ಕಾರ ಅಧಿಕಾರದಲ್ಲಿದೆ. ಇಂದು ನಮ್ಮ ದೇಶದ ಪ್ರಜಾಪ್ರಭುತ್ವ ಅಪಾಯದಲ್ಲಿದೆ, ಪ್ರಜಾಪ್ರಭುತ್ವ ಸಂಸ್ಥೆಗಳನ್ನು ನಾಶಪಡಿಸಲಾಗುತ್ತಿದೆ ಮತ್ತು ನಮ್ಮ ಸಂವಿಧಾನವನ್ನು ಬದಲಾಯಿಸಲು ಪಿತೂರಿ ನಡೆಸಲಾಗುತ್ತಿದೆ” ಎಂದು ಆರೋಪಿಸಿದರು. “ಸರ್ವಾಧಿಕಾರದ ಆಡಳಿತ ದೇಶದಲ್ಲಿದ್ದು, ನಾವೆಲ್ಲರೂ ಸೂಕ್ತ ಉತ್ತರ ನೀಡುತ್ತೇವೆ. ತಮ್ಮನ್ನು ತಾವು ಶ್ರೇಷ್ಠ ಎಂದು ಪರಿಗಣಿಸಿರುವ ಮೋದಿ ಅವರು ದೇಶದ ಘನತೆ ಮತ್ತು ಪ್ರಜಾಪ್ರಭುತ್ವದ ಘನತೆಯನ್ನು ಹಾಳು ಮಾಡುತ್ತಿದ್ದಾರೆ” ಎಂದು ಸೋನಿಯಾ ಗಾಂಧಿ ಆರೋಪಿಸಿದರು. ಇದಕ್ಕೂ ಮುನ್ನ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ, “ದೆಹಲಿ…
ಬೆಳಗಾವಿ: ದೇಶದ ಜನತೆಗೆ ಮೋದಿ ಎಷ್ಟು ಗ್ಯಾರಂಟಿಗಳನ್ನು ನೀಡಿದ್ದಾರೆಂಬ ಪಟ್ಟಿ ಬಿಡುಗಡೆಗೊಳಿಸಬೇಕು. ಬೆಳಗಾವಿಯಲ್ಲಿ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಸವಾಲು ಹಾಕಿದರು. ಸುದ್ದಿಗಾರರ ಜೊತೆಗೆ ಮಾತನಾಡಿದ ಅವರು, “’ದೇಶಕ್ಕೆ, ದೇಶದ ಜನತೆಗೆ ನಾನೇ ಗ್ಯಾರಂಟಿ’ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳುತ್ತಿದ್ದಾರೆ. ಆದರೆ ಪ್ರಧಾನಿ ಮೋದಿಯವರ ನೇತೃತ್ವದ ಕೇಂದ್ರ ಸರ್ಕಾರ ಎಷ್ಟು ಗ್ಯಾರಂಟಿಗಳನ್ನು ನೀಡಿದೆ ಎಂಬ ಪಟ್ಟಿಯನ್ನು ಬಿಡುಗಡೆ ಮಾಡಲಿ” ಎಂದು ಹೇಳಿದರು. ಕಾಂಗ್ರೆಸ್ ಸರ್ಕಾರದ ಯೋಜನೆಗಳನ್ನು ಟೀಕಿಸಿದ ಪ್ರಧಾನಿ ಮೋದಿ ಅವರು ಚುನಾವಣೆ ಗೆಲುವಿಗಾಗಿ ಪ್ರಚಾರ ಸಭೆಯಲ್ಲಿ ದೇಶಕ್ಕೆ, ದೇಶದ ಜನತೆಗೆ ನಾನೇ ಗ್ಯಾರಂಟಿ ಎಂದು ಹೇಳುತ್ತಿದ್ದಾರೆ. ಆದರೆ ಜನತೆಗೆ ಎಷ್ಟು ಗ್ಯಾರಂಟಿಗಳನ್ನು ನೀಡಿದ್ದಾರೆ ಎಂಬ ಪಟ್ಟಿಯನ್ನು ಬಿಡುಗಡೆಗೊಳಿಸಲಿ ಎಂದು ಆಗ್ರಹಿಸಿದರು. ಜನಕ್ಕೆ ಗ್ಯಾರಂಟಿ ಯೋಜನೆಗಳನ್ನು ನೀಡುವ ಮೂಲಕ ಅಭಿವೃದ್ಧಿ ಯೋಜನೆಗಳಿಗೂ ಹಣ ನೀಡುತ್ತಿದ್ದೇವೆ. ಕಾರಣ ಗ್ಯಾರಂಟಿಗಳಿಂದ ಅಭಿವೃದ್ಧಿ ಕುಂಠಿತವಾಗಿದೆ ಎಂಬ ಬಿಜೆಪಿಯವರ ಆರೋಪ ಸುಳ್ಳು ಎಂದರು. ಚಿಕ್ಕೋಡಿ ಲೋಕಸಭೆ ಕ್ಷೇತ್ರದಲ್ಲಿ ಹಾಲಿ ಸಂಸದ ಅಣ್ಣಾಸಾಬ್ ಜೊಲ್ಲೆ ಬಗ್ಗೆ ಜನರಲ್ಲಿ…
ಪಾವಗಡ: ತಾಲೂಕಿನ ನಿಡಗಲ್ ಹೋಬಳಿ ದೇವರ ಬೆಟ್ಟ ಗ್ರಾಮದಲ್ಲಿ ವಾಸಿಸುತ್ತಿರುವ ತಂದೆ ತಾಯಿ ಇಲ್ಲದ ಬಡ ಕುಟುಂಬದ ಮೂವರು ಮಕ್ಕಳಿಗೆ ಸಹಾಯ ಮಾಡುವಂತೆ ಮನವಿ ಮಾಡುತ್ತಿದ್ದಾರೆ. ಮಕ್ಕಳ ತಂದೆ ತಾಯಿ ಅನಾರೋಗ್ಯದಿಂದ ಮರಣ ಹೊಂದಿದ್ದು ಸರಿಯಾಗಿ ಕಣ್ಣು ಕಾಣದೆ ಇರುವ ಅಜ್ಜಿಯ ಆಶ್ರಯದಲ್ಲಿ ಮಕ್ಕಳು ಬೆಳೆಯುತ್ತಿದ್ದಾರೆ. ಮೂರು ಮಕ್ಕಳಾದ ರಾಜೇಶ್ ಎಂಟನೇ ತರಗತಿ ಮನು ನಾಲ್ಕನೇ ತರಗತಿ ದರ್ಶನ್ ಒಂದನೇ ತರಗತಿ ವಿದ್ಯಾಭ್ಯಾಸ ಮಾಡುತ್ತಿದ್ದಾರೆ.ಇವರು ತೀರ ಬಡವರಾಗಿದ್ದಾರೆ. ಇವರು ವಾಸಿಸುವ ಮನೆಗೆ ಬಾಗಿಲು ಸಹ ಇಲ್ಲದಿರುವುದನ್ನು ಮನಗಂಡ ಹೆಲ್ಪ್ ಸೊಸೈಟಿ ಅಧ್ಯಕ್ಷರಾದ ಮಾನಂ ಶಶಿಕಿರಣ್ ಅವರು ಮನೆಗೆ ಬಾಗಿಲನ್ನು ಆಳವಡಿಸಿಕೊಟ್ಟಿದ್ದಾರೆ. ಮಾತ್ರವಲ್ಲದೆ ಈ ವಿದ್ಯಾರ್ಥಿಗಳಿಗೆ ಪುಸ್ತಕ ಲೇಖನ ಸಾಮಗ್ರಿಗಳನ್ನು ಕೊಟ್ಟು ಅವರಿಗೆ ಕೈಲಾದಷ್ಟು ಸಹಾಯ ಮಾಡಿದ್ದಾರೆ. ಈ ಬಡಕುಟುಂಬಕ್ಕೆ ಸಹಾಯ ಮಾಡಲು ಹೆಲ್ಪ್ ಸೊಸೈಟಿ ಪಾವಗಡ ಅಖಿಲ ಕರ್ನಾಟಕ ವಾಲ್ಮೀಕಿ ನಾಯಕ ಮಹಾಸಭಾ, ಈ ಬಡ ಮಕ್ಕಳ ವಿದ್ಯಾಭ್ಯಾಸಕ್ಕೆ ಹಾಗೂ ಕುಟುಂಬ ನಿರ್ವಹಣೆಗೆ ಸಹಾಯ ಸಹಕಾರ ಮಾಡಲು ಮುಂದೆ ಬಂದಿದ್ದು, ನಮ್ಮ…
ಹನುಮಾನ್ ಚಾಲೀಸಾ ಹಾಕಿದ್ದಕ್ಕೆ ಹಲ್ಲೆ ಕೇಸ್ ಹಲವು ತಿರುವುಗಳನ್ನು ಪಡೆದು ರಾಜಕೀಯ ನಾಯಕರ ಎಂಟ್ರಿಯೂ ಆಗಿತ್ತು, ಆದರೆ ಬೆಂಗಳೂರಿನ ನಗರಪೇಟೆಯಲ್ಲಿ ನಡೆದಿದ್ದ ಈ ಕೇಸ್ ಗೆ ಈಗ ಟ್ವಿಸ್ಟ್ ಸಿಕ್ಕಿದ್ದು, ಹಲ್ಲೆಗೊಳಗೊಳಗಾದ ಮುಖೇಶ್ ವಿರುದ್ದವೇ ಎಫ್ ಐಆರ್ ದಾಖಲಾಗಿದೆ. ಕೋರ್ಟ್ ನಿರ್ದೇಶನ ಮೇರೆಗೆ ಬಂಧನಕ್ಕೆ ಒಳಗಾದ ಸುಲೇಮಾನ್ ತಾಯಿ ನೀಡಿದ ದೂರಿನ ಮೇಲೆ ಹಲಸೂರು ಗೇಟ್ ಪೊಲೀಸ್ ಠಾಣೆಯಲ್ಲಿ ಎಫ್ ಐಆರ್ ದಾಖಲಾಗಿದೆ. ಐಪಿಸಿ ಸೆಕ್ಷನ್ 506(ಕ್ರಿಮಿನಲ್ ಬೆದರಿಕೆ), 504(ಶಾಂತಿ ಭಂಗವನ್ನು ಪ್ರಚೋದಿಸುವ ಉದ್ದೇಶದಿಂದ ಉದ್ದೇಶಪೂರ್ವಕ ಅವಮಾನ), 323(ಸ್ವಯಂಪ್ರೇರಿತವಾಗಿ ನೋವುಂಟುಮಾಡುವುದು) ಅಡಿಯಲ್ಲಿ ಪ್ರಕರಣ ದಾಖಲಾಗಿದೆ ಎಂದು ವರದಿ ತಿಳಿಸಿದೆ. ರಂಜಾನ್ ಇದ್ದರೂ ಭಕ್ತಿ ಗೀತೆ ಹಾಕಿ ಮುಖೇಶ್ ಕಿರಿಕ್ ಮಾಡುತ್ತಿದ್ದ. ಮಾರ್ಚ್ 17 ರಂದು ಸುಲೇಮಾನ್ ಸೇರಿ ಸ್ನೇಹಿತರು ಮುಖೇಶ್ ಗೆ ಪ್ರಶ್ನಿಸಿದ್ದರು. ಪವಿತ್ರ ರಂಜಾನ್ ಹಬ್ಬವಿದೆ, ಮೂರು ಸಾವಿರ ಮಂದಿ ಇದೇ ರಸ್ತೆಯಲ್ಲಿ ಪ್ರಾರ್ಥನೆಗೆ ಹೋಗುತ್ತಾರೆ. ಇಷ್ಟು ಸೌಂಡ್ ಇಟ್ಟು ಹಾಡುಗಳನ್ನು ಹಾಕುವುದು ಯಾಕೆ ಎಂದು ಕೇಳಿದ್ದರು ಎನ್ನಲಾಗಿದೆ. ಪ್ರಶ್ನೆ…
ಪಾಕಿಸ್ತಾನ ಭಯೋತ್ಪಾದಕ ಚಟುವಟಿಕೆಗಳನ್ನು ನಡೆಸಲು ಸನ್ನದ್ಧವಾಗುತ್ತಿದ್ದು, ಗಡಿಯಲ್ಲಿ ತಪ್ಪಿಸಿಕೊಳ್ಳುವ ಭಯೋತ್ಪಾದಕರನ್ನು ಕೊಲ್ಲಲು ಭಾರತವು ಪಾಕಿಸ್ತಾನವನ್ನು ಪ್ರವೇಶಿಸಲಿದೆ ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ತಿಳಿಸಿದ್ದಾರೆ. ವಿದೇಶಿ ನೆಲದಲ್ಲಿ ನೆಲೆಸಿರುವ ಭಯೋತ್ಪಾದಕರನ್ನು ನಿರ್ಮೂಲನೆ ಮಾಡುವ ವಿಶಾಲ ಯೋಜನೆಯ ಭಾಗವಾಗಿ, ಭಾರತ ಸರ್ಕಾರವು 2020 ರಿಂದ ಪಾಕಿಸ್ತಾನದಲ್ಲಿ ಸುಮಾರು 20 ಜನರನ್ನು ಕೊಂದಿದೆ ಎಂದು ಬ್ರಿಟನ್ ನ ಗಾರ್ಡಿಯನ್ ಪತ್ರಿಕೆ ವರದಿಯನ್ನು ಪ್ರಕಟಿಸಿದ ಒಂದು ದಿನದ ನಂತರ ಸಚಿವರ ಹೇಳಿಕೆ ಹೊರ ಬಂದಿವೆ. ವರದಿಯ ಕುರಿತು ಪ್ರತಿಕ್ರಿಯೆಗಾಗಿ ರಾಯಿಟರ್ಸ್ ಮಾಡಿದ ಮನವಿಗೆ ಭಾರತದ ವಿದೇಶಾಂಗ ಸಚಿವಾಲಯ ಪ್ರತಿಕ್ರಿಯಿಸಿರಲಿಲ್ಲ. ಪಾಕಿಸ್ತಾನದ ವಿದೇಶಾಂಗ ಸಚಿವಾಲಯ ಉಗ್ರರಿಗೆ ಆಶ್ರಯ ನೀಡುತ್ತಿರುವುದರ ಕುರಿತು ಪ್ರತಿಕ್ರಿಯಿಸಲು ನಿರಾಕರಿಸಿದೆ. “ಭಾರತವು ಯಾವಾಗಲೂ ತನ್ನ ನೆರೆಯ ರಾಷ್ಟ್ರಗಳೊಂದಿಗೆ ಉತ್ತಮ ಸಂಬಂಧವನ್ನು ಉಳಿಸಿಕೊಳ್ಳಲು ಬಯಸುತ್ತದೆ. ಆದರೆ ಯಾರಾದರೂ ಭಾರತಕ್ಕೆ ಕೋಪದ ಕಣ್ಣುಗಳನ್ನು ಮತ್ತೆ ಮತ್ತೆ ತೋರಿಸಿದರೆ, ಭಾರತಕ್ಕೆ ಬಂದು ಭಯೋತ್ಪಾದಕ ಚಟುವಟಿಕೆಗಳನ್ನು ಉತ್ತೇಜಿಸಲು ಪ್ರಯತ್ನಿಸಿದರೆ, ನಾವು ಅವರನ್ನು ಬಿಡುವುದಿಲ್ಲ” ಎಂದು ರಾಜನಾಥ್ ಸಿಂಗ್ ಹೇಳಿದರು. ಕಾಶ್ಮೀರದಲ್ಲಿ…
ಪ್ರಾಚೀನ ಜೈನ ವಿಗ್ರಹಗಳ ಹರಾಜಿಗೆ ಜೈನ ಸಮುದಾಯದಿಂದ ರಾಷ್ಟ್ರವ್ಯಾಪಿ ತೀವ್ರ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ, ಈ ಹರಾಜು ಪ್ರಕ್ರಿಯೆಯಿಂದ ಮುಂಬೈ ಹರಾಜುದಾರ ಫಾರುಕ್ ಟೊಡ್ಡಿವಾಲಾ ಹಿಂದೆ ಸರಿದಿದ್ದಾರೆ. ಎಚ್ಚೆತ್ತ ಜೈನ ಸಮುದಾಯ ತಮ್ಮ ಪೂಜ್ಯ ತೀರ್ಥಂಕರರ ವಿಗ್ರಹಗಳನ್ನು ಹರಾಜು ಹಾಕದೇ ಅದನ್ನು ದೇವಾಲಯಗಳಲ್ಲಿ ಪೂಜೆಗೆ ಹಸ್ತಾಂತರಿಸಬೇಕೆಂದು ಒತ್ತಾಯಿಸಿದ್ದರು. ಈ ಹಿನ್ನೆಲೆಯಲ್ಲಿ, ಹರಾಜುದಾರ ಫಾರುಕ್ ಟೊಡ್ಡಿವಾಲಾ ಅವರು, ಈ ಹರಾಜು ಪ್ರಕ್ರಿಯೆಯನ್ನು ರದ್ದುಗೊಳಿಸಿದ್ದಾರೆ. ದೆಹಲಿ ಮೂಲದ ವಿಶ್ವ ಜೈನ್ ಸಂಘಟನೆಯು ಹರಾಜುದಾರ ಟೊಡ್ಡಿವಾಲಾ ವಿರುದ್ಧ ಸೈಬರ್ ಕ್ರೈಮ್ನಲ್ಲಿ ದೂರು ದಾಖಲಿಸಿದೆ. ಟೊಡ್ಡಿವಾಲಾ ಅವರು ಏಪ್ರಿಲ್ 16 ರಂದು ದಿ ತಾಜ್, ಕೊಲಾಬಾದಲ್ಲಿ ಹರಾಜಾಗಲಿರುವ ವಸ್ತುಗಳ ಬಗ್ಗೆ 180 ಲೇಖನಗಳ ಕ್ಯಾಟಲಾಗ್ ನ್ನು ಹಂಚಿಕೊಂಡಿದ್ದರು. ಇದಾದ ನಂತರ ವಿಶ್ವ ಜೈನ್ ಸಂಘಟನೆ ಪ್ರಕರಣ ದಾಖಲಿಸಿದೆ. ಈ ಕ್ಯಾಟಲಾಗ್ನಲ್ಲಿ 17 ಪುರಾತನ ದೇವಾಲಯಗಳು, ಮರಳು ಗಲ್ಲುಗಳು ಮತ್ತು ಜೈನ ತೀರ್ಥಂಕರರ ಬಲಿಪೀಠಗಳು ಮತ್ತು ಯಕ್ಷಿಣಿಗಳು ಸೇರಿವೆ. ಅವುಗಳಲ್ಲಿ ಕೆಲವು ಒಂಬತ್ತನೇ ಶತಮಾನಕ್ಕಿಂತಲೂ ಹಿಂದಿನದ್ದಾಗಿವೆ. ಜೈನ ವಿಗ್ರಹಗಳ…