Subscribe to Updates
Get the latest creative news from FooBar about art, design and business.
- ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ: ನಿವೃತ್ತಿ ಅಂಚಿನಲ್ಲಿರುವ ಮುಖ್ಯೋಪಾಧ್ಯಾಯ ಅರೆಸ್ಟ್
- ನಾಳೆ ದೆಹಲಿಗೆ ಸಿಎಂ ಸಿದ್ದರಾಮಯ್ಯ ಭೇಟಿ; ನಾಯಕತ್ವ ಬದಲಾವಣೆ ಚರ್ಚೆಗಳ ನಡುವೆ ಹೈಕಮಾಂಡ್ ಬುಲಾವ್
- ಸೇಡು ತೀರಿಸಿಕೊಳ್ಳಲು ವರ್ಷದ ಬಳಿಕ ಅದೇ ಅಪ್ರಾಪ್ತೆ ಮೇಲೆ ಮತ್ತೆ ಲೈಂಗಿಕ ದೌರ್ಜನ್ಯ–ಇಬ್ಬರು ಆರೋಪಿಗಳ ಬಂಧನ
- ಭಟ್ಕಳ: ಕಪ್ಪೆಚಿಪ್ಪು ಸಂಗ್ರಹಿಸಲು ಹೋಗಿ ನೀರಲ್ಲಿ ಮುಳುಗಿ 11 ಮಂದಿ ಸಾವು!
- ಪ್ರೀತಿ ಹೆಸರಲ್ಲಿ ಅಪ್ರಾಪ್ತ ವಯಸ್ಸಿನ ಬಾಲಕಿಗೆ ಲೈಂಗಿಕ ದೌರ್ಜನ್ಯ: ಆರೋಪಿ ವಿರುದ್ಧ ಪೋಕ್ಸೋ ಕೇಸ್ ದಾಖಲು
- ಬಾಲಕನ ಬಲಿ ಪಡೆದಿದ್ದ ಚಿರತೆ ಕೊನೆಗೂ ಸೆರೆ: 14 ದಿನಗಳ ಕಾರ್ಯಾಚರಣೆ ಬಳಿಕ ಸ್ಥಳೀಯರು ನಿಟ್ಟುಸಿರು
- ದಿಢೀರ್ ಹವಾಮಾನ ಬದಲಾವಣೆಗೆ AI ಡೇಟಾ ಸೆಂಟರ್ ಕಾರಣ ಆಗ್ತಾ ಇದೆಯೇ?
- ಗೃಹಲಕ್ಷ್ಮಿ, ಗೃಹಜ್ಯೋತಿ ಫಲಾನುಭವಿಗಳ ಪಟ್ಟಿ ಪರಿಷ್ಕರಣೆಗೆ ರಾಜ್ಯ ಸರ್ಕಾರ ನಿರ್ಧಾರ: ಅನರ್ಹರಿಗೆ ಕೋಕ್!
Author: admin
ನಡು ರಸ್ತೆಯಲ್ಲಿ ಯುವಕರಿಬ್ಬರು ಸೇರಿ ರಾಡ್ ನಿಂದ ವ್ಯಕ್ತಿಗೆ ಮನಬಂದಂತೆ ಥಳಿಸಿದ, ಹಲ್ಲೆ ದೃಶ್ಯವೆಲ್ಲವೂ ಅದೇ ರಸ್ತೆಯಲ್ಲಿ ಬರುತ್ತಿದ್ದ ಕಾರೊಂದರ ಡ್ಯಾಶ್ ಬೋರ್ಡ್ನ ಕ್ಯಾಮೆರಾದಲ್ಲಿ ಸೆರೆಯಾಗಿತ್ತು. ಆಫೀಸ್ ನಲ್ಲಿ ಟಾರ್ಚರ್ ಕೊಟ್ಟ ಮೇಲಾಧಿಕಾರಿಗೆ ಸಿಬ್ಬಂದಿಯೇ ಸುಪಾರಿ ಕೊಟ್ಟು ಹೊಡೆಸಿರುವುದು ತನಿಖೆಯಲ್ಲಿ ಗೊತ್ತಾಗಿದೆ. ತನಿಖೆ ಕೈಗೊಂಡ ಹೆಣ್ಣೂರು ಪೊಲೀಸರು ಆರೋಪಿಗಳ ಹೆಡೆಮುರಿ ಕಟ್ಟಿದ್ದಾರೆ. ಹಲ್ಲೆಗೊಳಗಾದ ಸುರೇಶ್ ಎಂಬಾತನಿಂದ ದೂರು ಪಡೆದು, ಹಲ್ಲೆ ನಡೆಸಿದ್ದ ಐವರು ಆರೋಪಿಗಳನ್ನು ಬಂಧಿಸಿದ್ದಾರೆ. ಉಮಾಶಂಕರ್, ವಿನೀಶ್, ಅನೀಶ್, ಮುತ್ತು ಹಾಗೂ ಸಂದೀಪ್ ಬಂಧಿತ ಆರೋಪಿಗಳಾಗಿದ್ದಾರೆ. ಕಳೆದ ಮಾ. 31 ರಂದು ಹೊರಮಾವುನಿಂದ ಹೆಣ್ಣೂರಿಗೆ ತೆರಳುವ ಮಾರ್ಗದಲ್ಲಿ ಸುರೇಶ್ ಹೋಗುತ್ತಿದ್ದಾಗ, ಬಲವಾದ ಆಯುಧದಿಂದ ಹಲ್ಲೆ ಮಾಡಿ ಆರೋಪಿಗಳು ಪರಾರಿಯಾಗಿದ್ದರು. ಹಲ್ಲೆ ಮಾಡಿದ್ದ ದೃಶ್ಯವು ಕಾರಿನ ಕ್ಯಾಮೆರಾದಲ್ಲಿ ಸೆರೆಯಾಗಿತ್ತು. ಪೊಲೀಸ್ ವಿಚಾರಣೆ ವೇಳೆ ಮೇಲಾಧಿಕಾರಿ ಆಗಿದ್ದ ಸುರೇಶ್ ತನ್ನ ಸಿಬ್ಬಂದಿಗೆ ಕೆಲಸದಲ್ಲಿ ಹೆಚ್ಚೆಚ್ಚು ಒತ್ತಡ ಕೊಟ್ಟಿದ್ದನಂತೆ. ಈ ಕಾರಣಕ್ಕೆ ಸಿಬ್ಬಂದಿಯಿಂದಲೇ ಸುರೇಶ್ ಹಲ್ಲೆಗೆ ಸುಪಾರಿ ಕೊಟ್ಟಿರುವುದು ತಿಳಿದು ಬಂದಿದೆ. ಬಂಧಿತರಾಗಿರುವ ಉಮಾಶಂಕರ್,…
ತುಮಕೂರು: ಪಿಸ್ತೂಲ್ ನಿಂದ ಶೂಟ್ ಮಾಡಿ, ಮನೆ ದರೋಡೆ ಮಾಡಿದ್ದ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಆರೋಪಿಗಳನ್ನು ಎಜಾಜ್ ಮಿರ್ದಾಹ, ಸಹಿಬುಲ ಅನ್ಸಾರಿ ಎಂದು ಗುರುತಿಸಲಾಗಿದೆ. ಮಾರ್ಚ್ 26ರಂದು ಕುಣಿಗಲ್ ತಾಲೂಕಿನ ಉರ್ಕೆಹಳ್ಳಿ ಗ್ರಾಮದಲ್ಲಿ, ರಾಷ್ಟ್ರೀಯ ಹೆದ್ದಾರಿ ಗೆ ಹೊಂದಿಕೊಂಡಂತೆ ಇರುವ ಪುಷ್ಪಲತಾ ಎಂಬವರ ಮನೆಗೆ, ನೀರು ಕೇಳುವ ನೆಪದಲ್ಲಿ ಇಬ್ಬರು ಆರೋಪಿಗಳು ಬಂದಿದ್ದರು. ನೀರು ಕೊಡಲು ಮುಂದಾಗಿದ್ದ ವೇಳೆ ಮನೆಗೆ ನುಗ್ಗಿ ದರೋಡೆ ಮಾಡಲು ಇಬ್ಬರು ಯತ್ನಿಸಿದ್ದರು. ಅಲ್ಲದೆ ಪುಷ್ಪಲತಾ ಅವರ ತಂದೆ ಗಂಗಣ್ಣ ಅವರ ಮೇಲೆ ಗುಂಡಿನ ದಾಳಿ ಮಾಡಿದ್ದರು. ಇದರಿಂದ ಗಂಗಣ್ಣ ಅವರ ಕಾಲಿಗೆ ಗಾಯವಾಗಿತ್ತು. ನಂತರ ಮನೆಯಲ್ಲಿದ್ದವರ ಕೂಗಾಟ ಚಿರಾಟ ಕೇಳಿ ಅಕ್ಕ ಪಕ್ಕದ ಮನೆಯವರು ಬರುವಷ್ಟರಲ್ಲಿ ಆರೋಪಿಗಳು ಮನೆಯಲ್ಲಿದ್ದ ಲಕ್ಷಾಂತರ ಹಣವನ್ನು ಕದ್ದು ಪರಾರಿಯಾಗಿದ್ದರು. ಈ ಸಂಬಂಧ ಕುಣಿಗಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಆರೋಪಿಗಳು ಇಬ್ಬರು ಜಾರ್ಖಂಡ್ ಮೂಲದವರಾಗಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್…
ತುಮಕೂರು: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಮುಕ್ತ ಹಾಗೂ ಶಾಂತಿಯುತ ಮತದಾನಕ್ಕೇ ಪೂರಕವಾಗಿ, ಜಿಲ್ಲೆಯಲ್ಲಿ 19 ಮಂದಿಯನ್ನು ಗಡಿಪಾರು ಮಾಡುವ ಆದೇಶವನ್ನು ಹೊರಡಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಶೋಕ್ ತಿಳಿಸಿದ್ದಾರೆ. ಇದುವರೆಗೂ 50 ಮಂದಿ ಯನ್ನು ಗಡಿಪಾರು ಮಾಡಬೇಕೆಂದು ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಪ್ರಸ್ತಾವನೆಯನ್ನು ಸಲ್ಲಿಸಲಾಗಿತ್ತು. ಈ ಎಲ್ಲ ವ್ಯಕ್ತಿಗಳ ಮೇಲೆ ಕ್ರಿಮಿನಲ್ ಪ್ರಕರಣಗಳು ದಾಖಲಾಗಿದ್ದು ಅವರು ಇರುವಂತಹ ಪ್ರದೇಶಗಳಲ್ಲಿ ಶಾಂತಿಯುತ ಮತದಾನಕ್ಕೆ ಅಡ್ಡಿ ಉಂಟಾಗಬಹುದು ಎಂಬ ಹಿನ್ನೆಲೆಯಲ್ಲಿ ಈ ಕ್ರಮವನ್ನು ಕೈಗೊಳ್ಳಲಾಗಿದೆ ಎಂದು ಹೇಳಿದರು. ಗಡಿಪಾರು ಮಾಡಲಾಗಿರುವಂತಹ ವ್ಯಕ್ತಿಗಳ ಕುರಿತು ನಿರಂತರವಾಗಿ ಪೊಲೀಸ್ ಇಲಾಖೆ ಸಿಬ್ಬಂದಿ ಹಾಗೂ ಅಧಿಕಾರಿಗಳು ಪರಿಶೀಲನೆಯನ್ನು ನಡೆಸುತ್ತಿರುತ್ತಾರೆ. ಅಕಸ್ಮಾತ್ ಅವರು ವಾಪಸ್ ಆ ಸ್ಥಳಗಳಿಗೆ ಬಂದರೆ ಅವರ ಮೇಲೆ ಕಠಿಣ ಕ್ರಮ ಕೈಗೊಳ್ಳಲು ಈಗಾಗಲೇ ಸೂಚನೆ ನೀಡಲಾಗಿದೆ. ಲೋಕಸಭಾ ಚುನಾವಣೆಯಲ್ಲಿ ಯಾವುದೇ ರೀತಿಯ ಅಹಿತಕರ ಘಟನೆಗಳು ನಡೆಯದಿರಲಿ ಎಂಬ ಹಿನ್ನೆಲೆಯಲ್ಲಿ ಈ ಕ್ರಮವನ್ನು ತೆಗೆದುಕೊಳ್ಳಲಾಗಿದೆ ಎಂದು ಹೇಳಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ…
ಬಿಜೆಪಿಯ ಶಾಸಕರಾದರೂ ಕಾಂಗ್ರೆಸ್ ನಾಯಕರ ಜೊತೆ ಕಾಣಿಸಿಕೊಳ್ಳುತ್ತ ಸುದ್ದಿಯಾಗುವ, ಯಶವಂತಪುರ ಬಿಜೆಪಿ ಶಾಸಕ ಎಸ್ ಟಿ ಸೋಮಶೇಖರ್ ಅವರು, ಇದೀಗ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಗೆ ಬೆಂಬಲ ಘೋಷಣೆ ಮಾಡಿದ್ದಾರೆ. ಈ ಹಿಂದೆಯೂ ರಾಜ್ಯಸಭೆ, ವಿಧಾನ ಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್ ಬೆಂಬಲಿಸಿದ್ದ ಬಿಜೆಪಿ ಶಾಸಕ ಎಸ್.ಟಿ. ಸೋಮಶೇಖರ್, ಕೆಂಗೇರಿ ಉಪನಗರದಲ್ಲಿ ನಡೆದ ಕಾರ್ಯಕರ್ತರ ಸಭೆಯಲ್ಲಿ ಕಾಂಗ್ರೆಸ್ ಗೆಲುವಿಗೆ ಸಹಕರಿಸುವಂತೆ ತಮ್ಮ ಬೆಂಬಲಿಗರಿಗೆ ಸೂಚಿಸಿದರು. ಈ ಮೂಲಕ ಅವರು ನನ್ನ ಬೆಂಬಲ ಕಾಂಗ್ರೆಸ್’ಗೆ ಎಂದು ಘೋಷಿಸಿದ್ದಾರೆ. ಬಿಜೆಪಿ(BJP)ಯವರ ಕೈಯಲ್ಲಿ ಏನ್ ಮಾಡೋಕಾಗುತ್ತೋ ಮಾಡಿಕೊಳ್ಳಲಿ, ನಾನು ಕಾಂಗ್ರೆಸ್ ಅಭ್ಯರ್ಥಿ ಪರ ಪ್ರಚಾರ ಮಾಡ್ತೀನಿ ಎಂದು ಬಹಿರಂಗವಾಗಿಯೇ ಎಸ್ ಟಿ ಸೋಮಶೇಖರ್ ಹೇಳಿದ್ದಾರೆ. ಅದಲ್ಲದೇ ಬೆಂಗಳೂರು ಉತ್ತರದಲ್ಲಿ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಸ್ಪರ್ಧೆಗೆ ತೀವ್ರ ವಿರೋಧವನ್ನು ಕೂಡ ಎಸ್ಟಿ ಸೋಮಶೇಖರ್ ವ್ಯಕ್ತಪಡಿಸಿದ್ದು, ಜನರಿಂದ ಗೋಬ್ಯಾಕ್ ಅನಿಸಿಕೊಂಡು ಬಂದವರಿಗೆ ನಾವು ಸ್ವಾಗತ ಕೋರಬೇಕಾ ಎಂದು ಪ್ರಶ್ನಿಸಿದ್ದಾರೆ. ಸಭೆ ಬಳಿಕ ಮಾತಾಡಿದ ಎಸ್ ಟಿ ಎಸ್, ಬಿಜೆಪಿಯಿಂದ…
ಬಿರು ಬೇಸಿಗೆಯಲ್ಲಿ ಹೆಚ್ಚುತ್ತಿರುವ ತಾಪಮಾನದಿಂದಾಗಿ ನಮ್ಮ ದೇಹದ ಎಲ್ಲಾ ಅಂಗವ್ಯವಸ್ಥೆಗಳ ಮೇಲೆ ಕೆಟ್ಟ ಪರಿಣಾಮ ಬೀರುತ್ತದೆ. ಮನುಷ್ಯನ ದೇಹದ ಎರಡನೇ ಮೆದುಳು ಎಂದು ಕರೆಯಲ್ಪಡುವ ಕರುಳು ಸಹ ಇದಕ್ಕೆ ಹೊರತಾಗಿಲ್ಲ.! ಒಟ್ಟಾರೆ ಮನುಷ್ಯನ ಯೋಗಕ್ಷೇಮಕ್ಕೆ ಆರೋಗ್ಯಕರ ಕರುಳು ನಿರ್ಣಾಯಕವಾಗಿದೆ. ಅತಿಯಾದ ಶಾಖವು ಮನುಷ್ಯನ ಜೀವನದ ಸಮತೋಲನವನ್ನು ಅಡ್ಡಿಪಡಿಸುವ ಮೂಲಕ ಕರುಳಿನ ವ್ಯವಸ್ಥೆಯ ಮೇಲೆ ಪರಿಣಾಮ ಬೀರುತ್ತದೆ. ನಮ್ಮ ಕರುಳಿನಲ್ಲಿ ಟ್ರಿಲಿಯನ್ ಗಟ್ಟಲೆ ಸ್ನೇಹಿ ಬ್ಯಾಕ್ಟಿರಿಯಾ, ಶಿಲೀಂಧ್ರಗಳು ಮತ್ತು ಇತರ ಸೂಕ್ಷ್ಮಜೀವಿಗಳನ್ನು ಒಟ್ಟಾಗಿ ಕರುಳಿನ ಮೈಕ್ರೋಬಯೋಟಾ ಎಂದು ಕರೆಯಲಾಗುತ್ತದೆ. ಇದು ಜೀರ್ಣಕ್ರಿಯೆ, ಹೀರಿಕೊಳ್ಳುವಿಕೆ ಮತ್ತು ಚಯಾಪಚಯ ಚಟುವಟಿಕೆಗಳನ್ನು ನಿಯಂತ್ರಿಸಲು ಸಹಾಯ ಮಾಡುತ್ತದೆ. ಆರೋಗ್ಯಕರ ಜೀವನ ವ್ಯವಸ್ಥೆ ಮತ್ತು ಉತ್ತಮ ಮಾನಸಿಕ ಆರೋಗ್ಯವನ್ನು ಕಾಪಾಡಿಕೊಳ್ಳುವಲ್ಲಿ ಅದು ನಿರ್ಣಾಯಕ ಪಾತ್ರವನ್ನು ವಹಿಸುತ್ತದೆ. ಕರುಳಿನ ಮೇಲೆ ಬಿಸಿಲಿನ ಪರಿಣಾಮ: *ನಿರ್ಜಲೀಕರಣ(ಡೀಹೈಡ್ರೇಶನ್): ಅತಿಯಾದ ಶಾಖದಿಂದಾಗಿ ದೇಹದಲ್ಲಿ ನಿರ್ಜಲೀಕರಣವು ಕರುಳಿನ ಆರೋಗ್ಯವನ್ನು ಹಾಳು ಮಾಡುತ್ತದೆ, ಇದರಿಂದ ಕರುಳು ಉರಿಯೂತ ಮತ್ತು ಸೋಂಕಿಗೆ ಒಳಗಾಗುತ್ತದೆ. ಇದು ಕರುಳಿನ ವ್ಯವಸ್ಥೆ ಮೇಲೆ ಪರಿಣಾಮ…
ನಕಲಿ ಖಾತೆ ಸೃಷ್ಟಿಸಿದ ಕಿಡಿಗೇಡಿಯೊಬ್ಬ ಅಶ್ವಿನಿ ಪುನೀತ್ ರಾಜಕುಮಾರ್ ವಿರುದ್ಧ ಅವಹೇಳನಕಾರಿ ಪೋಸ್ಟ್ ಹಾಕಿದ್ದು, ಅಪ್ಪು ಅಭಿಮಾನಿಗಳು ಗರಂ ಆಗಿದ್ದಾರೆ. ಅಲ್ಲದೆ ಇಂದು ಪೊಲೀಸ್ ಕಮೀಷನರ್ ಭೇಟಿಯಾಗಿ ದೂರು ನೀಡಲು ಮುಂದಾಗಿದ್ದಾರೆ ಎಂದು ವರದಿ ತಿಳಿಸಿದೆ. ಈ ಪೋಸ್ಟ್ ನಲ್ಲಿ ಆರ್ ಸಿಬಿ ಸೋಲಿಗೆ ಅಶ್ವಿನಿ ಪುನೀತ್ ರಾಜಕುಮಾರ್ ಕಾರಣ ಎಂದು ದೂರಲಾಗಿದೆ. ಗಜಪಡೆ ಎಂಬ ಪೇಜ್ ಸೃಷ್ಟಿಸಿ ಅದರಲ್ಲಿ, ಅಶ್ವಿನಿ ಪುನೀತ್ ರಾಜಕುಮಾರ್ ಅವರು ಆರ್ ಸಿಬಿ ಸೋಲಿಗೆ ಕಾರಣ ಎಂದು ಹೇಳಲಾಗಿದೆ. ಈ ‘ಕಾರ್ಯಕ್ಕೆ ಮುತ್ತೈದೆಯರನ್ನು ಕರೆಯಬೇಕು. ಅದನ್ನು ಬಿಟ್ಟು ಗಂಡ ಇಲ್ಲದವರನ್ನು ಕರೆದಿದ್ದಾರೆ. ಇದು ಆರ್ ಸಿಬಿ ಸೋಲಿಗೆ ಕಾರಣ’ ಎಂದು ಪೇಜ್ ನಲ್ಲಿ ಬರೆಯಲಾಗಿದೆ. ಈ ಪೋಸ್ಟ್ ಗೆ ಸಾಮಾಜಿಕ ಜಾಲತಾಣದಲ್ಲಿ ತೀವ್ರ ಆಕ್ರೋಶ ವ್ಯಕ್ತವಾಗಿದ್ದು, ಪವರ್ ಸ್ಟಾರ್ ಅಪ್ಪು ಫ್ಯಾನ್ಸ್ ಆಕ್ರೋಶ ಹೊರಹಾಕಿದ್ದಾರೆ. ಇತ್ತೀಚೆಗಷ್ಟೇ ಐಪಿಎಲ್ ಶುರುವಾಗಿದೆ. ಇದಕ್ಕೂ ಮುನ್ನ ರಾಯಲ್ ಚಾಲೆಂಜರ್ಸ್ ಬ್ಯಾಂಗಲೋರ್ ಇದ್ದ ಹೆಸರನ್ನು ಬದಲಾವಣೆ ಮಾಡಲು, ಆರ್ ಸಿಬಿ ಅನ್…
ಓಸಿ ಮಟ್ಕಾ ಆಡಿಸಲು ಅನುಮತಿಗೆ ಮಾಮೂಲಿ ರೂಪದಲ್ಲಿ ₹1 ಲಕ್ಷ ಲಂಚ ಪಡೆಯುತ್ತಿದ್ದ ಶಿವಮೊಗ್ಗದ ಸಿಇಎನ್ ಠಾಣೆಯ ಸಹಾಯಕ ಸಬ್ ಇನ್ ಸ್ಟೆಕ್ಟರ್ ಮೊಹಮ್ಮದ್ ರೆಹಮಾನ್ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದ ಘಟನೆ ನಡೆದಿದೆ. ಶಿವಮೊಗ್ಗದ ಆರ್ ಎಂಎಲ್ ನಗರದ ನಿವಾಸಿ ರಫೀಕ್ ಎಂಬುವವರಿಗೆ ಮಾಮೂಲಿ ರೂಪದಲ್ಲಿ ಮಾಸಿಕ ₹1.20 ಲಕ್ಷ ಹಣ ಕೊಡುವಂತೆ ಮೊಹಮ್ಮದ್ ರೆಹಮಾನ್ ಬೇಡಿಕೆ ಇಟ್ಟಿದ್ದರು ಎನ್ನಲಾಗಿದೆ. ಅದರಲ್ಲಿ ₹ 1 ಲಕ್ಷ ಪಡೆಯುವಾಗ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದಾರೆ ಎಂದು ತಿಳಿದುಬಂದಿದೆ. ರೆಹಮಾನ್ ಲಂಚದ ಹಣಕ್ಕೆ ಬೇಡಿಕೆ ಇಟ್ಟಿರುವುದನ್ನು ಖಾತರಿಪಡಿಸಿಕೊಂಡಿದ್ದ ಲೋಕಾಯುಕ್ತ ಪೊಲೀಸರು ರೆಡ್ ಹ್ಯಾಂಡ್ ಆಗಿ ಹಿಡಿಯಲು ಸಿದ್ಧತೆ ನಡೆಸಿದ್ದರು. ಶಿವಮೊಗ್ಗದ ಲೋಕಾಯುಕ್ತ ಹಾಗೂ ಸ್ಥಳೀಯ ಪೊಲೀಸರು ಮೊಹಮ್ಮದ್ ರೆಹಮಾನ್ ಗೆ ಪರಿಚಯವಿದ್ದ ಕಾರಣ, ಚಿತ್ರದುರ್ಗದಿಂದ ಬಂದಿದ್ದ ಎಸ್ಪಿ ವಾಸುದೇವರಾಮ್ ನೇತೃತ್ವದ ಲೋಕಾಯುಕ್ತ ಪೊಲೀಸರು, ಪಂಚೆ-ಬನಿಯನ್ ತೊಟ್ಟು ಹಮಾಲಿಗಳ ವೇಷದಲ್ಲಿ ಕಾರ್ಯಾಚರಣೆಗೆ ಇಳಿದಿದ್ದರು ಎನ್ನಲಾಗಿದೆ. ಇಲ್ಲಿನ ಜಯನಗರ ಪೊಲೀಸ್ ಠಾಣೆ ಕಟ್ಟಡದಲ್ಲಿರುವ ಸಿಇಎನ್ ಠಾಣೆಯ…
ಸೂರ್ಯ ಗ್ರಹಣವು ಏಪ್ರಿಲ್ 8ಕ್ಕೆ ಜರುಗಲಿದೆ. ಅದಕ್ಕೆ ಎರಡು ದಿನಗಳ ಮೊದಲು 2024ರ ಏಪ್ರಿಲ್ 6ನೇ ತಾರೀಕು ಮಧ್ಯಾಹ್ನ 3.55ರಂದು ಶನಿ ಗ್ರಹವು ಗುರುವಿನ ನಕ್ಷತ್ರಪುಂಜವಾದ ಪೂರ್ವ ಭಾದ್ರಪದ ನಕ್ಷತ್ರವನ್ನು ಪ್ರವೇಶ ಮಾಡಲಿರುವುದು ವಿಶೇಷ. ಈ ಹಿನ್ನೆಲೆಯಲ್ಲಿ ಆರು ರಾಶಿಗಳು ಮುಂದಿನ ಆರು ತಿಂಗಳ ಕಾಲ ಭಾರಿ ಪ್ರಯೋಜನಗಳನ್ನು ಪಡೆದುಕೊಳ್ಳಲಿವೆ. ಆ ಅದೃಷ್ಟವಂತ ಆರು ರಾಶಿಗಳ ಯಾವುದು ಅನ್ನುವುದನ್ನು ಇಲ್ಲಿ ನೀಡಿದ್ದೇವೆ ಓದಿ. ಧನು ರಾಶಿ: ಶನಿ ಸಂಚಾರದಿಂದ ಧನು ರಾಶಿಯವರಿಗೆ ಶುಭ ಫಲ ದೊರೆಯಲಿದೆ. ಉದ್ಯೋಗದಲ್ಲಿದ್ದವರಿಗೂ ಸಿಹಿ ಸುದ್ದಿ ದೊರೆಯಲಿದೆ. ಬಡ್ತಿ ಸಿಗುವ ಸಾಧ್ಯತೆ ಜಾಸ್ತಿಯೇ ಇದೆ. ಬಹು ದಿನಗಳಿಂದ ಕಾಡುತ್ತಿದ್ದ ಸಮಸ್ಯೆಗಳು ಇದ್ದಕ್ಕಿದ್ದಂತೆ ಪರಿಹಾರ ಕಾಣಲಿವೆ. ಆರ್ಥಿಕ ಲಾಭದ ಸಾಧ್ಯತೆ ಇದೆ. ಆದಾಯ ಗಳಿಕೆ ಹೆಚ್ಚಾಗಬಹುದು. ಮಕರ ರಾಶಿ: ಶನಿ ಸಂಚಾರ ವಿದ್ಯಮಾನದಿಂದಾಗಿ ಆರ್ಥಿಕ ಲಾಭ ಉಂಟಾಗಲಿದೆ. ಹೆಚ್ಚು ಆದಾಯ ಗಳಿಸುವ ಸಾಧ್ಯತೆ ಇದೆ. ಅಲ್ಲಿ ಇಲ್ಲಿ ಬಾಕಿ ಉಳಿದಿದ್ದ ಹಣ ವಾಪಸ್ ನಿಮ್ಮನ್ನು ಸೇರಲಿದೆ. ನೀವು ಅಂದುಕೊಂಡಿದ್ದ…
ದಿ ರೂಲ್ ಗಾಗಿ ದಿನೇ ದಿನೇ ಅಭಿಮಾನಿಗಳಲ್ಲಿ ಕಾತುರ ಹೆಚ್ಚುತ್ತಿದ್ದು ಈ ನಡುವೆ, ಚಿತ್ರತಂಡ ‘ನ್ಯಾಷನಲ್ ಕ್ರಶ್ ರಶ್ಮಿಕಾ ಮಂದಣ್ಣ’ ಅವರ ಹುಟ್ಟುಹಬ್ಬದ ಪ್ರಯುಕ್ತ ಶ್ರೀವಲ್ಲಿ ಪೋಸ್ಟರ್ ಅನ್ನು ಬಿಡುಗಡೆ ಮಾಡಿದ್ದಾರೆ. ರಶ್ಮಿಕಾ ಮಂದಣ್ಣ ಅವರ ಹುಟ್ಟುಹಬ್ಬದ ಪ್ರಯುಕ್ತ ಚಿತ್ರದ ನಿರ್ಮಾಪಕರು ಚಿತ್ರದಿಂದ ಅವರ ಫಸ್ಟ್ ಲುಕ್ ಅನ್ನು ರಿಲೀಸ್ ಮಾಡಿದ್ದು ಪುಷ್ಪಾ 2 ತಂಡವು ನಟಿಗೆ ಶುಭ ಹಾರೈಸಿದ್ದಾರೆ. ಮೊದಲ ನೋಟದಲ್ಲಿ ರಶ್ಮಿಕಾ ಸುಂದರವಾದ ಸೀರೆಯಲ್ಲಿ ತನ್ನ ಅದ್ಭುತವಾದ ಸಂಪೂರ್ಣ ಸೊಬಗಿನಿಂದ ಕಂಗೊಳಿಸಿದ್ದಾರೆ. ಪುಷ್ಪ ದಿ ರೈಸ್ ನಲ್ಲಿ ಶ್ರೀವಲ್ಲಿಯಾಗಿ ರಶ್ಮಿಕಾ ಮಂದಣ್ಣ ಬಿರುಗಾಳಿ ಎಬ್ಬಿಸಿದ್ದಾರೆ. ಅವಳ ಸೊಬಗು ಮತ್ತು ಶೈಲಿಯಿಂದ ಹಿಡಿದು ಸಾಮಿ ಸಾಮಿಯಲ್ಲಿ ನೃತ್ಯ ಮಾಡುವವರೆಗೆ ಎಲ್ಲವೂ ಟ್ರೆಂಡ್ ಆಗಿದೆ. ಈಗ, ಪುಷ್ಪಾ 2: ದಿ ರೂಲ್ ನಲ್ಲಿ ‘ಶ್ರೀವಲ್ಲಿ’ ಆಗಿ ಮತ್ತೆ ದೊಡ್ಡ ಪರದೆಯ ಮೇಲೆ ಅವರನ್ನು ನೋಡಲು ಅಭಿಮಾನಿಗಳು ಕಾತುರದಿಂದ ಕಾಯುತ್ತಿದ್ದಾರೆ ಮತ್ತು ಚಿತ್ರದ ಈ ಪೋಸ್ಟರ್ ಉತ್ಸಾಹವನ್ನು ಹೆಚ್ಚಿಸಿದೆ. ಪುಷ್ಪ 2: ದಿ…
NCERT: 11,12 ನೇ ತರಗತಿ ಪಠ್ಯದಲ್ಲಿ ಬದಲಾವಣೆ ಮಾಡಲಾಗಿದ್ದು, ಈ ಕುರಿತು ಎನ್ ಸಿಇಆರ್ ಟಿ ಕೇಂದ್ರೀಯ ಪಠ್ಯದಿಂದ ಬಾಬ್ರಿ ಮಸೀದಿ, ಗುಜರಾತ್ ಹಿಂಸೆ ವಿಷಯವನ್ನು ತೆಗೆದಿದೆ. 11,12 ನೇ ತರಗತಿ ಪಠ್ಯಪುಸ್ತಕದಿಂದ ಗುಜರಾತ್ ಗಲಭೆ, ಬಾಬ್ರಿ ಮಸೀದಿ ಧ್ವಂಸ, ಹಿಂದುತ್ವ ಸೇರಿ ಹಲವು ಅಂಶಗಳನ್ನು 2024-25 ನೇ ಸಾಲಿನ ಶೈಕ್ಷಣಿಕ ವರ್ಷದಿಂದ ಎನ್ಸಿಆರ್ಟಿ ಬಿಟ್ಟಿದೆ. ಹಾಗೆನೇ ಜಮ್ಮು-ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ಕಲ್ಪಿಸಿ ಸೇರಿಸಲಾಗಿದೆ. 370ನೇ ವಿಧಿ ರದ್ದು ಕುರಿತ ವಿಷಯ ಸೇರ್ಪಡೆ ಮಾಡಲಾಗಿರುವ ಕುರಿತು ವರದಿಯಾಗಿದೆ. ಸಮಾಜ ವಿಜ್ಞಾನ ಮತ್ತು ರಾಜಕೀಯ ವಿಜ್ಞಾ ಪುಸ್ತಕದಲ್ಲಿ ಬದಲಾವಣೆ ಮಾಡಿ ಪರಿಷ್ಕೃತ ಪಠ್ಯ ಪ್ರಕಟ ಮಾಡಲಾಗಿದೆ. ಈ ಕುರಿತು ಅಧಿಕೃತ ಹೇಳಿಕೆಯನ್ನು ನೀಡಿಲ್ಲವಾದರೂ ಬದಲಾವಣೆಯನ್ನು ವಾರ್ಷಿಕ ನವೀಕರಣದ ಪ್ರಕಾರ ಮಾಡಲಾಗಿದೆ. ಅಯೋಧ್ಯ ಬಾಬರಿ ಮಸೀದಿ ಧ್ವಂಸ, ಹಿಂದುತ್ವ ರಾಜಕೀಯ ವಿಷಯಗಳನ್ನು 11 ನೇ ತರಗತಿಯ ಅಧ್ಯಾಯ 8 ರಲ್ಲಿ ಬಿಡಲಾಗಿದೆ. ಗೋದ್ರಾ ನಂತರದ ಗಲಭೆಗಳ ಸಮಯದಲ್ಲಿ ಒಂದು ಸಾವಿರಕ್ಕೂ ಹೆಚ್ಚು ಮುಸ್ಲಿಮರನ್ನು ಕೊಲೆ…