Author: admin

ರಾಜ್ಯ ಸರ್ಕಾರದ ಪಂಚ ಗ್ಯಾರಂಟಿಗಳ ಪೈಕಿ ಪ್ರಮುಖವಾಗಿರುವ ಯೋಜನೆ ‘ಗೃಹಲಕ್ಷ್ಮಿ ಯೋಜನೆ’. ಈ ಯೋಜನೆಯಡಿ ರಾಜ್ಯದ ಪ್ರತಿಯೊಂದು ಮನೆಯ ಯಜಮಾನಿಯರ ಖಾತೆಗೆ ಪ್ರತಿ ತಿಂಗಳು 2000 ರೂ. ಹಣ ಜಮೆಯಾಗುತ್ತಿದೆ. ಆದರೆ ಇನ್ನು ಮುಂದೆ ಯಜಮಾನಿಯರಿಗೆ 2,000 ಬದಲು 3000 ಹಣ ಸಿಗುತ್ತದೆ ಎಂಬ ಸುದ್ದಿ ಒಂದು ಮುನ್ನಲೆಗೆ ಬಂದಿದೆ. ಹೌದು, ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರುವ ಮೊದಲು ಘೋಷಣೆ ಮಾಡಿದ ಐದು ಗ್ಯಾರಂಟಿಗಳನ್ನು, ತಾನು ಅಧಿಕಾರ ಹಿಡಿಯುತ್ತಿದ್ದಂತೆ ಅನುಷ್ಠಾನಕ್ಕೆ ತೆಗೆದುಕೊಂಡು ಬಂದಿತ್ತು. ಈ ಎಲ್ಲಾ ಯೋಜನೆಗಳಿಗೆ ರಾಜ್ಯದಲ್ಲಿ ಭರ್ಜರಿ ರೆಸ್ಪಾನ್ಸ್ ಸಿಗುತ್ತಿದೆ. ಈ ಬೆನ್ನಲ್ಲೇ ಲೋಕಸಭಾ ಚುನಾವಣೆ ಹತ್ತಿರವಾಗುತ್ತಿದ್ದಂತೆ ಎಲ್ಲಾ ರಾಜಕೀಯ ಪಕ್ಷಗಳು ಕೂಡ ವಿವಿಧ ರೀತಿಯ ಭರವಸೆ ಮತ್ತು ಘೋಷಣೆ ಮತದಾರರನ್ನು ಸೆಳೆಯುತ್ತಿವೆ. ಈ ಹಿನ್ನೆಲೆಯಲ್ಲಿ ಗೃಹಲಕ್ಷ್ಮೀಯರಿಗೆ 3000 ಹಣ ಸಿಗುತ್ತದೆ ಎಂದು ಹೇಳಲಾಗಿದೆ. ಇದೇ ಹಿನ್ನೆಲೆಯಲ್ಲಿ ಈ ಬಾರಿ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವು ಸಾಧಿಸಿದರೆ, ಗೃಹಲಕ್ಷ್ಮಿ ಯೋಜನೆಯ ಹಣದ ಖರ್ಚು 56 ಸಾವಿರ ಕೋಟಿಯಷ್ಟು ಮಾಡಿ,…

Read More

ಕರ್ನಾಟಕ ಶಾಲಾ ಶಿಕ್ಷಣ ಇಲಾಖೆಯು ಸರ್ಕಾರಿ, ಅನುದಾನಿತ ಮತ್ತು ಅನುದಾನರಹಿತ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ಅನ್ವಯವಾಗುವ 2024-2025ನೇ ಸಾಲಿನ ವಾರ್ಷಿಕ ಶೈಕ್ಷಣಿಕ ವೇಳಾಪಟ್ಟಿ ಪ್ರಕಟಿಸಿದ್ದು, ಶಾಲೆಗಳ ಚಟುವಟಿಕೆಗಳು ಹಾಗೂ ರಜೆಗಳ ಮಾಹಿತಿಯನ್ನು ನೀಡಿದೆ. ಇಲಾಖೆಯು ಪ್ರಕಟಿಸಿರುವ ವೇಳಾಪಟ್ಟಿಯಲ್ಲಿ ಮೊದಲನೇ ಅವಧಿಯು 2024ರ ಮೇ 29 ರಿಂದ ಅಕ್ಟೋಬರ್ 2 ರವರೆಗೆ, ಎರಡನೇ ಅವಧಿಯು ಅಕ್ಟೋಬರ್‌ 21ರಿಂದ 2025ರ ಏಪ್ರಿಲ್‌ 10 ರವರೆಗೆ ಇರಲಿದೆ. ಇದರ ನಡುವೆ, ಅಕ್ಟೋಬರ್ 3 ರಿಂದ 20 ರವರೆಗೆ ದಸರಾ ರಜೆ, 2025ರ ಏ.11ರಿಂದ ಮೇ 28ರವರೆಗೆ ಬೇಸಿಗೆ ರಜೆಯನ್ನು ನಿಗದಿ ಮಾಡಿ ಶಾಲಾ ಶಿಕ್ಷಣ ಇಲಾಖೆ ಆಯುಕ್ತರು ಸುತ್ತೋಲೆ ಹೊರಡಿಸಿದ್ದಾರೆ. ಅಲ್ಲದೆ ಒಟ್ಟು 244 ಶಾಲಾ ಕರ್ತವ್ಯದ ದಿನಗಳು ಇರಲಿದ್ದು, ಇದರಲ್ಲಿ ಪರೀಕ್ಷೆ ಮೌಲ್ಯಾಂಕನ ಕಾರ್ಯಕ್ಕೆ 26 ದಿನಗಳು, ಪಠ್ಯೇತರ ಚಟುವಟಿಕೆಗೆ 24 ದಿನಗಳು, ಮೌಲ್ಯಮಾಪನ, ಫಲಿತಾಂಶ ವಿಶ್ಲೇಷಣೆಗೆ 10 ದಿನ, ಶಾಲಾ ಸ್ಥಳೀಯ ರಜೆ 4 ದಿನ, ಬೋಧನಾ ಕಲಿಕೆಗೆ 180 ದಿನಗಳು ಎಂದು…

Read More

ಮುಂಬಯಿ: ನೇತಾಜಿ ಸುಭಾಷ್ ಚಂದ್ರ ಬೋಸ್ ಅವರನ್ನು ಸ್ವತಂತ್ರ ಭಾರತದ ಮೊದಲ ಪ್ರಧಾನಿ ಎಂದು ಕರೆದ ಹಿಮಾಚಲದ ಮಂಡಿಯ ಬಿಜೆಪಿ ಲೋಕಸಭಾ ಅಭ್ಯರ್ಥಿ, ನಟಿ ಕಂಗನಾ ರನೌತ್ ಈಗ ಸಾಮಾಜಿಕ ಜಾಲತಾಣದಲ್ಲಿ ಟ್ರೋಲ್ ಗೆ ಗುರಿಯಾಗಿದ್ದಾರೆ. ಟೈಮ್ಸ್ ನೌ ಶೃಂಗಸಭೆಯಲ್ಲಿ ನಿರೂಪಕಿ ನವಿಕಾ ಕುಮಾರ್ ಅವರು ಕಂಗನಾ ರನೌತ್ ಅವರನ್ನು ಸಂದರ್ಶಿಸಿದಾಗ ಅವರು ಈ ಹೇಳಿಕೆ ನೀಡಿದ್ದು, ಇದನ್ನು ಕಾಂಗ್ರೆಸ್ ನಾಯಕ ಬಿ.ವಿ. ಶ್ರೀನಿವಾಸ್, ಎಎಪಿ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮತ್ತು ಇತರರು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದಾರೆ. ಕಂಗನಾ ಅವರು ಹೇಳಿದ ತಪ್ಪನ್ನು ನವಿಕಾ ಕುಮಾರ್ ಸರಿಪಡಿಸಲು ಪ್ರಯತ್ನಿಸಿದರು, ಆದರೆ ರನೌತ್ ತಾವು ಹೇಳಿದ್ದೇ ಸರಿ ಎಂಬಂತೆ ವಾದಿಸಿರುವುದು ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕ ಚರ್ಚೆಗೆ ಕಾರಣವಾಗಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

Read More

ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರದ ಆರ್ಥಿಕ ನೀತಿಗಳು ಕರ್ನಾಟಕವನ್ನು ಹಾಳು ಮಾಡುತ್ತಿದೆ ಎಂದು ಆರೋಪಿಸಿದ ಬಿಜೆಪಿ ನಾಯಕ ಸಿಟಿ ರವಿ, “ಕೇರಳದಂತೆಯೇ ನಾವು ಸಾಲದ ಸುಳಿಯಲ್ಲಿ ಸಿಲುಕಿದ್ದೇವೆ” ಎಂದು ವಾಗ್ದಾಳಿ ನಡೆಸಿದ್ದಾರೆ. ಸುದ್ದಿಸಂಸ್ಥೆಯೊಂದಿಗೆ ಮಾತನಾಡಿದ ಅವರು, “ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಗೆಲ್ಲದಿದ್ದರೆ ಕಾಶ್ಮೀರದಲ್ಲಿ ಮತ್ತೆ 370 ನೇ ವಿಧಿ ಹೇರುವುದಾಗಿ ಕಾಂಗ್ರೆಸ್ ಭರವಸೆ ನೀಡಿದೆ. ನಂತರ ಮತ್ತೆ ಸೈನಿಕರ ಮೇಲೆ ಕಲ್ಲು ತೂರಾಟ ಆರಂಭವಾಗುತ್ತದೆ. ಅವರು ಮತ್ತೆ ಬಾಬ್ರಿ ಮಾಡುತ್ತೇವೆ” ಎಂದು ಹೇಳಿದ್ದಾರೆ. ಮತ್ತೆ ಎಲ್ಲಾ ಯೋಜನೆಗಳು ಮುಗಿಯುತ್ತವೆ” ಎಂದು ಹೇಳಿದರು. “ಕಾಂಗ್ರೆಸ್ ಯಾವಾಗಲೂ ಸೈನಿಕರ ಬಗ್ಗೆ ಇಲ್ಲಸಲ್ಲದ ಹೇಳಿಕೆಗಳನ್ನು ನೀಡುತ್ತಿದೆ. ಸೈನಿಕರ ಮೇಲೆ ಅನುಮಾನ ವ್ಯಕ್ತಪಡಿಸುವವರು ಯಾರು? ಅಂತಹವರ ಬಗ್ಗೆ ನಾವು ಏನು ಹೇಳುತ್ತೇವೆ? ಪುಲ್ವಾಮಾ ದಾಳಿಗೆ ಯಾರು ಹೊಣೆ ಎಂದು ನಮಗೆಲ್ಲರಿಗೂ ತಿಳಿದಿದೆ. ಸರ್ಜಿಕಲ್ ಸ್ಟ್ರೈಕ್ ನಿಂದ ಉಗ್ರರ ತರಬೇತಿ ಕೇಂದ್ರವನ್ನು ಧ್ವಂಸಗೊಳಿಸಲಾಯಿತು ಎಂಬುದು ನಮಗೆ ತಿಳಿದಿದೆ. ಪಾಕಿಸ್ತಾನ ಈ ವಿಚಾರಕ್ಕೆ ವಿಶ್ವಸಂಸ್ಥೆಯ ಮೊರೆ ಹೋಗಿತ್ತು.ಆಗಲೂ ಕಾಂಗ್ರೆಸ್‌ ಈ ವಿಚಾರದಲ್ಲಿ…

Read More

ತೀರ್ಥಹಳ್ಳಿ: ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ತೊರೆದು ಸ್ವತಂತ್ರ್ಯವಾಗಿ ಸ್ಪರ್ಧಿಸುತ್ತಿರುವ ಮಾಜಿ ಸಚಿವ ಕೆ.ಎಸ್‌. ಈಶ್ವರಪ್ಪ ವಿರುದ್ದ ಇಡಿ, ಐಟಿ ದಾಳಿ ನಡೆಸುವ ವದಂತಿ ಬಗ್ಗೆ ಸ್ವತಃ ಈಶ್ವರಪ್ಪ ಪ್ರತಿಕ್ರಿಯೆ ನೀಡಿದ್ದಾರೆ. ಈ ಕುರಿತು ತೀರ್ಥಹಳ್ಳಿಯಲ್ಲಿ ಅವರು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, “ದಾಳಿ ನಡೆಸಲು ಯಾವನು ಬರುತ್ತಾನೋ ನೋಡೋಣ ಎಂದು ಸವಾಲೆಸೆದರು. ನನ್ನ ರಾಜಕೀಯ ಜೀವನದಲ್ಲಿ ಇಂಥವನ್ನು ನಾನು ತುಂಬಾ ಎದುರಿಸಿದ್ದೇನೆ. ಇದಕ್ಕೆಲ್ಲಾ ನಾನು ಹೆದರುವುದಿಲ್ಲ” ಎಂದು ಈಶ್ವರಪ್ಪ ಹೇಳಿದರು. ಶಿವಮೊಗ್ಗದಲ್ಲಿ ಬಿಜೆಪಿ ಟಿಕೆಟ್‌ ಆಕಾಂಕ್ಷಿಯಾಗಿದ್ದ ಕೆ.ಎಸ್‌. ಈಶ್ವರಪ್ಪ ಅವರಿಗೆ ಈಬಾರಿ ಟಿಕೆಟ್‌ ದೊರೆತಿರಲಿಲ್ಲ. ಹಾವೇರಿಯಲ್ಲಿ ತಮ್ಮ ಪುತ್ರನಿಗೆ ಟಿಕೆಟ್‌ ನೀಡುವಂತೆ ಬೇಡಿಕೆಯಿಟ್ಟಿದ್ದರೂ ಸಹ ಪಕ್ಷ ಟಿಕೆಟ್‌ ನೀಡಲು ನಿರಾಕರಿಸಿತ್ತು. ಹೀಗಾಗಿ ಬಿಜೆಪಿ ಬಂಡಾಯ ಅಭ್ಯರ್ಥಿಯಾಗಿ ಘೋಷಿಸಿಕೊಂಡಿದ್ದ ಈಶ್ವರಪ್ಪ ಶಿವಮೊಗ್ಗದಲ್ಲಿ ಸ್ವತಂತ್ರ್ಯವಾಗಿ ಸ್ಪರ್ಧಿಸುವುದಾಗಿ ಹೇಳಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

Read More

ಹೀರೇಕಾಯಿ ಸೇವನೆಯಿಂದ ಇದೆ ಹಲವಾರು ಲಾಭ: ಹೀರೇಕಾಯಿಯಲ್ಲಿ ಪೌಷ್ಟಿಕಾಂಶದಲ್ಲಿ ಸಮೃದ್ಧವಾಗಿದೆ. ಇದು ವಿಟಮಿನ್ ಸಿ, ವಿಟಮಿನ್ ಎ, ವಿಟಮಿನ್ ಕೆ, ಫೋಲೇಟ್, ಪೊಟ್ಯಾಸಿಯಂ, ಕ್ಯಾಲ್ಸಿಯಂ ಮತ್ತು ಮೆಗ್ನಿಸಿಯಂ ಅಂತಹ ಪೋಷಕಾಂಶಗಳನ್ನು ಒಳಗೊಂಡಿದೆ. ಇವು ನಮ್ಮ ದೈಹಿಕ ಮತ್ತು ಮಾನಸಿಕ ಆರೋಗ್ಯಕ್ಕೆ ಸಹಾಯಕಾರಿ. ಹೀರೇಕಾಯಿ ಕರುಳನ್ನು ಸ್ವಚ್ಛವಾಗಿ ಮತ್ತು ಆರೋಗ್ಯಕರವಾಗಿಡಲು ಸಹಾಯ ಮಾಡುವ ಅನೇಕ ಗುಣಗಳನ್ನು ಹೊಂದಿದೆ. ಇದು ವಿಟಮಿನ್ ಎ ಮತ್ತು ಫೈಬ‌ರ್ ಅನ್ನು ಹೊಂದಿರುತ್ತದೆ. ಇದು ಹೊಟ್ಟೆಯನ್ನು ಶುದ್ದೀಕರಿಸಲು ಸಹಾಯ ಮಾಡುತ್ತದೆ. ಕೊತ್ತಂಬರಿಯಲ್ಲಿವೆ ಉತ್ತಮ ಆರೋಗ್ಯ ಪ್ರಯೋಜನಗಳು: ಕೊತ್ತಂಬರಿ ಸೊಪ್ಪು ಜೀರ್ಣಕ್ರಿಯೆಯ ಸಮಸ್ಯೆಗಳನ್ನು ಕಡಿಮೆ ಮಾಡಲು ತುಂಬಾ ಪರಿಣಾಮಕಾರಿಯಾಗಿದೆ. ನೀವು ಮಲಬದ್ಧತೆ ಸಮಸ್ಯೆಯಿಂದ ಬಳಲುತ್ತಿದ್ದರೆ ನಿಮ್ಮ ಆಹಾರದಲ್ಲಿ ಹಸಿರು ಕೊತ್ತಂಬರಿ ಸೊಪ್ಪನ್ನು ಸೇರಿಸಿ. ಹಸಿರು ಕೊತ್ತಂಬರಿ ಸೊಪ್ಪನ್ನು ಮಜ್ಜಿಗೆಯೊಂದಿಗೆ ಬೆರೆಸಿ ಕುಡಿಯುವುದರಿಂದ ಹೊಟ್ಟೆಗೆ ಸಂಬಂಧಿಸಿದ ಸಮಸ್ಯೆಗಳು ಗುಣವಾಗುತ್ತವೆ. ಇನ್ನು ಮಲಬದ್ಧತೆ ಸಮಸ್ಯೆ ಇರುವುದಿಲ್ಲ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್…

Read More

ಚಿಕ್ಕಬಳ್ಳಾಫುರ: ನಗರದ ಪ್ರಶಾಂತ ನಗರದಲ್ಲಿ ಪ್ರೇಯಸಿ ಕೈಕೊಟ್ಟ ಹಿನ್ನಲೆ ಪ್ರಿಯಕರ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಮಹೇಶ್ (24) ಆತ್ಮಹತ್ಯೆ ಮಾಡಿಕೊಂಡ ಯುವಕನಾಗಿದ್ದಾನೆ. ಯುವಕನು ‘ತಾನು ಪ್ರೀತಿಸುತ್ತಿದ್ದ ಪ್ರಿಯತಮೆ ತನ್ನನ್ನು ನಿರ್ಲಕ್ಷಿಸುತ್ತಿದ್ದಾಳೆಂದು’ ಸಂಬಂಧಿಕರ ಬಳಿ ಅಳಲು ತೋಡಿಕೊಂಡಿದ್ದು, ಮನೆಯಲ್ಲಿ ಯಾರೂ ಇಲ್ಲದ ವೇಳೆ ನೇಣಿಗೆ ಶರಣಾಗಿದ್ದಾನೆ. ಸದ್ಯ ಮಹೇಶನ ಪ್ರಿಯತಮೆಯ ವಿರುದ್ಧ ಆತನ ಸಂಬಂಧಿಕರ ಆಕ್ರೋಶ ವ್ಯಕ್ತಪಡಿಸಿದ್ದು, ಚಿಕ್ಕಬಳ್ಳಾಪುರ ನಗರಠಾಣೆ ಸೇರಿದಂತೆ ಜಿಲ್ಲಾ ವರಿಷ್ಠಾಧಿಕಾರಿಗಳಿಗೆ ದೂರು ನೀಡಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

Read More

ಚಾಮರಾಜನಗರ: ಚಾಮರಾಜನಗರ ತಾಲೂಕಿನ ಸುವರ್ಣಾವತಿ ಹಿನ್ನೀರಿನ ಬಳಿ ನಡೆದುಕೊಂಡು ಹೋಗುತ್ತಿದ್ದ ವ್ಯಕ್ತಿಯ ಮೇಲೆ ಕಾಡಾನೆಯೊಂದು ದಾಳಿ ನಡೆಸಿದ್ದು, ಪರಿಣಾಮ ವ್ಯಕ್ತಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಕುಳ್ಳೂರು ಗ್ರಾಮದ ಜಡಿಯ(56) ಮೃತ ವ್ಯಕ್ತಿ. ಬೇಸಿಗೆಯ ದಗೆ ಹಿನ್ನಲೆ ಹಿನ್ನೀರಿನ ಬಳಿ ನೀರು ಕುಡಿಯಲು ಕಾಡುಪ್ರಾಣಿಗಳು ಆಗಮಿಸಿದ್ದವು. ಇದೇ ವೇಳೆ ನಡೆದುಕೊಂಡು ಹೋಗುತ್ತಿದ್ದ ವ್ಯಕ್ತಿಯ ಮೇಲೆ ಕಾಡಾನೆ ದಾಳಿ ಮಾಡಿದೆ. ಸದ್ಯ ಸ್ಥಳಕ್ಕೆ ಬಿ.ಆರ್.ಟಿ. ಸಿಸಿಎಫ್ ಹೀರಾಲಾಲ್ ಭೇಟಿ ನೀಡಿ ಪರಿಶೀಲನೆ ಮಾಡಿದ್ದು, ಚಾಮರಾಜನಗರ ಪೂರ್ವ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

Read More

ಆನೇಕಲ್: ಆನೇಕಲ್​ನ ಮಿರ್ಜಾರಸ್ತೆಯ ಪೊಲೀಸ್ ಕ್ವಾರ್ಟರ್ಸ್​​ ಬಳಿ ಹಿಟ್​​ ಆ್ಯಂಡ್​ ರನ್​ ಗೆ ಸವಾರ ಮೃತಪಟ್ಟಿರುವಂತಹ ಘಟನೆ ನಡೆದಿದೆ. ಮೃತ ಬೈಕ್ ಸವಾರನ ಗುರುತು ಪತ್ತೆಯಾಗಿಲ್ಲ. ವಾಹನ ಡಿಕ್ಕಿ ರಭಸಕ್ಕೆ ಸವಾರನ ತಲೆ ಭಾಗ ಸಂಪೂರ್ಣ ಛಿದ್ರ ಛಿದ್ರವಾಗಿದೆ. ಪೊಲೀಸರು ಮೃತ ಬೈಕ್ ಸವಾರನ ಗುರುತು ಪತ್ತೆ ಹಚ್ಚುತ್ತಿದ್ದಾರೆ. ಬೈಕ್​ ಗೆ ಡಿಕ್ಕಿ ಹೊಡೆದು ವಾಹನ ಸಮೇತವಾಗಿ ಚಾಲಕ ಪರಾರಿ ಆಗಿದ್ದಾನೆ. ಅಪಘಾತ ಸ್ಥಳಕ್ಕೆ ಆನೇಕಲ್ ಠಾಣೆಯ ಪೊಲೀಸರ ಭೇಟಿ ನೀಡಿ ಪರಿಶೀಲನೆ ಮಾಡಿದ್ದು, ಪರಾರಿಯಾಗಿರುವ ವಾಹನ ಚಾಲಕನಿಗಾಗಿ ಪೊಲೀಸರಿಂದ ಹುಡುಕಾಟ ನಡೆದಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296  

Read More

ಚಾಮರಾಜನಗರ: ತಾಯಿ ಮತ್ತು ಇಬ್ಬರು ಮಕ್ಕಳು ಜಲಾಶಯದಲ್ಲಿ ಮುಳುಗಿ ಸಾವನ್ನಪ್ಪಿರುವಂತಹ ಘಟನೆ ಜಿಲ್ಲೆಯ ಹನೂರು ತಾಲೂಕಿನ ಗುಂಡಲ್ ನಲ್ಲಿ ನಡೆದಿದೆ. ಪುದೂರು ಗ್ರಾಮದ ಮೀನಾ(33), ಪವಿತ್ರಾ(13), ಕೀರ್ತಿ(12) ಮೃತ ದುರ್ದೈವಿಗಳಾಗಿದ್ದಾರೆ. ಜಲಾಶಯದಲ್ಲಿ ಬಟ್ಟೆ ತೊಳೆಯಲು ಹೋಗಿದ್ದಾಗ ತಾಯಿ ಮೀನಾ ಕಾಲುಜಾರಿ ಜಲಾಶಯಕ್ಕೆ  ಬಿದ್ದಿದ್ದಾರೆ. ತಾಯಿ ಬಿದ್ದದ್ದನ್ನು ಕಂಡ  ತಾಯಿ ರಕ್ಷಿಸಲು ಹೋಗಿ ಇಬ್ಬರು ಮಕ್ಕಳು ಸಹ ನೀರು ಪಾಲಾಗಿದ್ದಾರೆ. ಮಲೆಮಹದೇಶ್ವರ ಬೆಟ್ಟ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

Read More