Author: admin

ದೆಹಲಿ: ನೈಋತ್ಯ ದೆಹಲಿಯ ದ್ವಾರಕಾದಲ್ಲಿರುವ ಮನೆಯೊಂದರಲ್ಲಿರುವ ಕಪಾಟಿನಲ್ಲಿ 26 ವರ್ಷದ ಮಹಿಳೆಯ ಮೃತದೇಹ ಪತ್ತೆಯಾಗಿದೆ. ಮಗಳೊಂದಿಗೆ ಕೊನೆಯ ಬಾರಿಗೆ ಮಾತನಾಡಿದ್ದರ ಬಗ್ಗೆ ಹೇಳಿದ ಅವರು, “ವಿಪಾಲ್ ಮಗಳನ್ನು ಥಳಿಸುತ್ತಿದ್ದ, ಆಕೆಗೆ ತನ್ನನ್ನು ಕೊಲೆ ಮಾಡಬಹುದೆಂಬ ಭಯವಿತ್ತು” ಎಂದಿದ್ದಾರೆ. ಮಹಿಳೆಯ ತಂದೆ ಕೆಲವು ದಿನಗಳಿಂದ ಮಗಳಿಗೆ ಕಾಲ್ ಮಾಡುತ್ತಿದ್ದರು ಆದರೆ ಆ ಕಾಲ್ ಗೆ ಯಾವುದೇ ಪ್ರತಿಕ್ರಿಯೆ ಇಲ್ಲದ ಕಾರಣ ಪೊಲೀಸರಿಗೆ ದೂರು ನೀಡಿದ್ದರು. ಬುಧವಾರ ರಾತ್ರಿ ಪೊಲೀಸರಿಗೆ ಕರೆ ಬಂದಿದೆ, ಮಹಿಳೆಯ ತಂದೆ ತನ್ನ ಮಗಳನ್ನು ಕೊಲೆ ಮಾಡಿರಬಹುದು ಎಂದು ಅನುಮಾನ ವ್ಯಕ್ತಪಡಿಸಿದ್ದರು. ನಂತರ ದಾಬ್ರಿ ಪೊಲೀಸ್ ಠಾಣೆಯ ತಂಡವು ದ್ವಾರಕಾದ ರಾಜಪುರಿ ಪ್ರದೇಶದಲ್ಲಿ ಹೇಳಿದ ಫ್ಲಾಟ್ ಗೆ ತೆರಳಿ ತನಿಖೆ ನಡೆಸಿದಾಗ ಆಕೆಯ ಮೃತದೇಹವು ಕೊಠಡಿಯ ಕಪಾಟಿನಲ್ಲಿ ಪತ್ತೆಯಾಗಿದೆ. ಮಹಿಳೆಯ ತಂದೆ, ತನ್ನ ಮಗಳನ್ನು ಆಕೆಯ ಲೈವ್-ಇನ್ ಸಂಗಾತಿ ವಿಪಾಲ್ ಹತ್ಯೆ ಮಾಡಿದ್ದಾನೆ ಎಂದು ಅನುಮಾನ ವ್ಯಕ್ತಪಡಿಸಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಯ ಶವಾಗಾರಕ್ಕೆ ವರ್ಗಾಯಿಸಲಾಗಿದೆ ಎಂದು ಪೊಲೀಸ್ ಅಧಿಕಾರಿ…

Read More

ನಿಮ್ಮ ಊಟದ ನಂತರ ನೀವು ಐಸ್ ಕ್ರೀಂನಂತಹ ಸಿಹಿತಿಂಡಿಗಳನ್ನು ತಿನ್ನಲು ಬಯಸಿದರೆ, ನೀವು ಈ ಕೆಳಗಿನ ಅಂಶಗಳನ್ನು ಮನಸ್ಸಿನಲ್ಲಿಟ್ಟುಕೊಳ್ಳಬೇಕು. ಅವುಗಳನ್ನು ಸಂಪೂರ್ಣವಾಗಿ ತ್ಯಜಿಸುವುದು ಉತ್ತಮ. ಸಾಮಾನ್ಯವಾಗಿ ನಮ್ಮಲ್ಲಿ ಹೆಚ್ಚಿನವರು ತಿಂದ ನಂತರ ಐಸ್ ಕ್ರೀಮ್, ಗುಲಾಬ್ ಜಾಮೂನ್ ಮುಂತಾದ ಸಿಹಿತಿಂಡಿಗಳನ್ನು ತಿನ್ನುತ್ತೇವೆ. ಅದೂ ಬೇಸಿಗೆಯಲ್ಲಿ ನಾವು ಕುಲ್ಪಿ ಮತ್ತು ಐಸ್ ಕ್ರೀಂನಂತಹ ಘನೀಕೃತ ಆಹಾರಗಳನ್ನು ತಿನ್ನಲು ಇಷ್ಟಪಡುತ್ತೇವೆ. ಆದರೆ ಇವುಗಳು ನಮ್ಮ ದೇಹಕ್ಕೆ ಹಾನಿಕಾರಕ ಎಂಬುದನ್ನು ಅರಿಯುವುದಿಲ್ಲ. ಇಂತಹ ಹೆಪ್ಪುಗಟ್ಟಿದ ಆಹಾರಗಳನ್ನು ಸೇವಿಸುವುದು ತುಂಬಾ ಅಪಾಯಕಾರಿ ಎಂದು ಅನೇಕ ಪೌಷ್ಟಿಕ ತಜ್ಞರು ಹೇಳುತ್ತಾರೆ. ತಾಳೆ ಎಣ್ಣೆಯನ್ನು ಸಾಮಾನ್ಯವಾಗಿ ಹೆಪ್ಪುಗಟ್ಟಿದ ಸಿಹಿತಿಂಡಿಗಳಿಗೆ ಸೇರಿಸಲಾಗುತ್ತದೆ. ಪಾಮ್ ಎಣ್ಣೆಯಲ್ಲಿ ಸ್ಯಾಚುರೇಟೆಡ್ ಕೊಬ್ಬಿನಂಶ ಅಧಿಕವಾಗಿದೆ. ಇದು ನಮ್ಮ ಹೃದಯದ ಆರೋಗ್ಯಕ್ಕೆ ದೊಡ್ಡ ಅಪಾಯವನ್ನು ಉಂಟುಮಾಡುವ ಸಾಮರ್ಥ್ಯವನ್ನು ಹೊಂದಿದೆ. ಅಷ್ಟೇ ಅಲ್ಲ, ಇಂತಹ ಘನೀಕೃತ ಆಹಾರಗಳು ಕೊಲೆಸ್ಟ್ರಾಲ್ ಮಟ್ಟವನ್ನು ಹೆಚ್ಚಿಸುತ್ತವೆ. ಕೆಟ್ಟ ಕೊಲೆಸ್ಟ್ರಾಲ್ ನಿಮ್ಮ ಅಪಧಮನಿಗಳನ್ನು ಮುಚ್ಚಬಹುದು. ಅದೇ ರೀತಿ, ಹೆಪ್ಪುಗಟ್ಟಿದ ಸಿಹಿತಿಂಡಿಗಳು (ಕುಲ್ಪಿಯಂತೆ) ಹಾಲನ್ನು ಹೊಂದಿರುವುದಿಲ್ಲ. ಅವುಗಳನ್ನು…

Read More

ಯುದ್ಧ ನಡೆಯುತ್ತಿರುವ ರಣರಂಗದಲ್ಲಿ ಜೀವ ಉಳಿಸಲು ಬಂದ ಅವರು ತಮ್ಮ ಜೀವವನ್ನೇ ಕಳೆದುಕೊಂಡ ಘಟನೆ ಯುದ್ಧದ ಭೀಕರತೆಗೆ ನರಳಿ ಹೋಗಿದ್ದ ಜನರಿಗೆ ನೆರವು ನೀಡಲು ಬಂದಿದ್ದವರು. ಆದರೆ ಅಲ್ಲಿ ಆಗಿದ್ದೇ ಬೇರೆ, ಯುದ್ಧ ನಡೆಯುತ್ತಿರುವ ರಣರಂಗದಲ್ಲಿ ಜೀವ ಉಳಿಸಲು ಬಂದ ಅವರು ತಮ್ಮ ಜೀವವನ್ನೇ ಕಳೆದುಕೊಂಡಿದ್ದಾರೆ. ಅಂದಹಾಗೆ ಗಾಜಾ ಪಟ್ಟಿಯಲ್ಲಿ ಇಸ್ರೇಲ್ ಸೇನೆ ನಡೆಸಿದ ವಾಯು ದಾಳಿಗೆ ಮಾನವೀಯ ನೆರವು ನೀಡಲು ಹೋಗಿದ್ದ 7 ಮಂದಿಯ ಪ್ರಾಣಪಕ್ಷಿ ಹಾರಿ ಹೋಗಿದೆ. ‘ವರ್ಲ್ಡ್ ಸೆಂಟ್ರಲ್ ಕಿಚನ್‌ ಚಾರಿಟೇಬಲ್ ಟ್ರಸ್ಟ್‌’ನ 7 ಸ್ವಯಂ ಸೇವಕರು ಹೀಗೆ ಯುದ್ಧ ಭೂಮಿಯಲ್ಲಿ ಇಸ್ರೇಲ್ ಸೇನೆಯ ದಾಳಿಗೆ ಬಲಿಯಾಗಿದ್ದಾರೆ ಎಂದು ಆರೋಪ ಮಾಡಲಾಗಿದೆ. ಕೇಂದ್ರ ಗಾಜಾದ, ಡೇರ್ ಅಲ್ ಬಲ್ಲಾ ಎಂಬಲ್ಲಿ ಘಟನೆ ನಡೆದಿದ್ದು, ಮೃತಪಟ್ಟ ಸ್ವಯಂ ಸೇವಕರಲ್ಲಿ ಅಮೆರಿಕ, ಕೆನಡಾದ ಇಬ್ಬರು ಕೂಡ ಸೇರಿದ್ದಾರೆ ಎಂಬುದು ಈಗ ಕಿಚ್ಚು ಹೊತ್ತಿಸಿದೆ. ಇನ್ನು ಎಲ್ಲರೂ ತಮ್ಮ ಸ್ವಾರ್ಥ ಮರೆತು, ಯುದ್ಧ ಭೂಮಿಯಲ್ಲಿ ಆಹಾರ ಇಲ್ಲದೆ ಪ್ರತಿನಿತ್ಯ ನರಳಾಡುತ್ತಿದ್ದ ಜನರ…

Read More

ಬಹುಭಾಷಾ ನಟ ಪ್ರಕಾಶ್ ರಾಜ್ ಇತ್ತೀಚಿನ ದಿನಗಳಲ್ಲಿ ಸಿನಿಮಾಗಿಂತ ರಾಜಕೀಯ ವಿಚಾರವಾಗಿ ಹೆಚ್ಚು ಸದ್ದು ಮಾಡುತ್ತಿದ್ದಾರೆ. ಸದಾ ಮೋದಿ ನೇತೃತ್ವದ ಕೇಂದ್ರ ಸರ್ಕಾರವನ್ನು ಟೀಕಿಸುವ ನಟ ಇದೀಗ ಇದ್ದಕ್ಕಿದ್ದಂತೆ ಬಿಜೆಪಿ ಸೇರುತ್ತಾರೆ ಎಂಬ ಸುದ್ದಿ ಭಾರೀ ಸದ್ದು ಮಾಡುತ್ತಿದೆ. ಇಂದು ಮಧ್ಯಾಹ್ನ 3 ಗಂಟೆಗೆ ಪ್ರಕಾಶ್‌ ರಾಜ್‌ ಬಿಜೆಪಿಗೆ ಸೇರ್ಪಡೆಯಾಗುತ್ತಾರೆ ಎಂದು ಎಕ್ಸ್‌ ನಲ್ಲಿ ಹರಿದಾಡುತ್ತಿತ್ತು. ಇದು ಒಂದು ರೀತಿ ರಾಜಕೀಯ ವಲಯದಲ್ಲಿ ಭಾರೀ ಗುಲ್ಲೆಬ್ಬಿಸಿಬಿಟ್ಟಿತು. ಕೇಂದ್ರ ಸರ್ಕಾರವನ್ನು ಆಗಾಗ ಟೀಕಿಸುತ್ತಲೇ ಮೋದಿಯವರ ವಿರುದ್ಧ, ಬಿಜೆಪಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ ನಟ ಇದೀಗ ಬಿಜೆಪಿಗೆ ಸೇರ್ಪಡೆ ಆಗುತ್ತಾರೆ ಎಂಬ ಸುದ್ದಿ ಬಂದಾಗ ಎಂತವರಿಗೂ ಶಾಕ್ ಆಗೇ ಆಗುತ್ತದೆ. ಆದರೆ ರಾಜಕೀಯದಲ್ಲಿ ಏನು ಬೇಕಾದರೂ ನಡೆಯುತ್ತದೆ ಎನ್ನುವ ಕಾರಣಕ್ಕೆ ಎಲ್ಲರೂ ಇದ್ದರೂ ಇರಬಹುದು ಎಂದು ಸುಮ್ಮನಿದ್ದರು. ಈ ಸುದ್ದಿ ಸೋಷಿಯಲ್ ಮೀಡಿಯಾಗಳಲ್ಲಿ ಭಾರೀ ವೈರಲ್ ಆಗುತ್ತಿದ್ದಂತೆ, ಪ್ರಕಾಶ್ ರಾಜ್ ಮೌನ ಮುರಿದಿದ್ದಾರೆ. ಬಿಜೆಪಿ ಸೇರುತ್ತಾರೆ ಎನ್ನುವ ಪೋಸ್ಟ್ ಅನ್ನು ಶೇರ್‌ ಮಾಡಿಕೊಂಡಿರುವ…

Read More

ವಿವಾಹೇತರ ಸಂಬಂಧದ ಪ್ರೇಮಿ ಮತ್ತು ಮತ್ತು ಗಂಡ ಇಬ್ಬರೂ ಬೇಕು ಎಂದು ಮಹಿಳೆಯೊಬ್ಬಳು ವಿದ್ಯುತ್ ಕಂಬದ ಮೇಲೆ ಹತ್ತಿ ಕುಳಿತ ಘಟನೆ ಉತ್ತರ ಪ್ರದೇಶದ ಪಟ್ಟಣವೊಂದರಲ್ಲಿ ನಡೆದಿದೆ. ಗೋರಖ್‌ ಪುರದ ಪಿಪ್ರೈಚ್‌ ನಲ್ಲಿ 34 ವರ್ಷದ ಮೂರು ಮಕ್ಕಳ ತಾಯಿಯೊಬ್ಬಳು ತನ್ನ ವಿವಾಹೇತರ ಸಂಬಂಧದ ಬಗ್ಗೆ ಪತಿಗೆ ತಿಳಿದ ನಂತರ ವಿದ್ಯುತ್ ಕಂಬವನ್ನು ಹತ್ತುವ ಮೂಲಕ ರಾದ್ದಾಂತ ಸೃಷ್ಟಿಸಿದ್ದಾಳೆ. ಮಹಿಳೆ ತನ್ನ ಪತಿ ಹಾಗೂ ಮೂವರು ಮಕ್ಕಳೊಂದಿಗೆ ವಾಸವಾಗಿದ್ದಳು. ಆದರೆ ಕ್ರಮೇಣ ಆಕೆಗೆ ಪಕ್ಕದ ಗ್ರಾಮದ ವ್ಯಕ್ತಿಯೊಬ್ಬರ ಪರಿಚಯವಾಗಿದೆ. ಈ ಪರಿಚಯ ಪ್ರೇಮಕ್ಕೆ ತಿರುಗಿದ್ದು, ಕಳೆದ 7 ವರ್ಷಗಳಿಂದ ಪತಿಗೆ ತಿಳಿಯದಂತೆ ಇವರಿಬ್ಬರ ಪ್ರೇಮ ಪುರಾಣ ನಡೆಯುತ್ತಿತ್ತು. ಮಹಿಳೆಯ ಪತಿ ರಾಮ್ ಗೋವಿಂದ್ ಕೂಲಿ ಕೆಲಸ ಮಾಡುತ್ತಾ ಜೀವನ ನಡೆಸುತ್ತಿದ್ದರು. ಆದರೆ, ಇತ್ತೀಚೆಗೆ ಇವರಿಬ್ಬರ ಪ್ರೀತಿ ವಿಚಾರ ಪತಿಯ ಗಮನಕ್ಕೆ ಬಂದಿದೆ. ಹೀಗಾಗಿ ದಂಪತಿ ನಡುವೆ ವಾಗ್ವಾದ ನಡೆಯಿತು. ಅಲ್ಲದೇ ಪ್ರಿಯತಮನಿಗೂ ಮನೆಯಲ್ಲಿ ಇರಲು ಅವಕಾಶ ಕಲ್ಪಿಸಬೇಕು ಮತ್ತು ಮನೆಯ ಆರ್ಥಿಕತೆಗೆ…

Read More

ದೇಗುಲದೊಳಗೆಯೇ ಆನೆಯೊಂದು ಮಾವುತನನ್ನು ತುಳಿದು ಕೊಂದ ಆಘಾತಕಾರಿ ಘಟನೆ ಕೇರಳದ ವೈಕೋಮ್ ‌ನಲ್ಲಿ ನಡೆದಿದೆ. ಮೃತಪಟ್ಟ ಮಾವುತನನ್ನು ಅರವಿಂದ್(26) ಎಂದು ಗುರುತಿಸಲಾಗಿದ್ದು, ಈತ ಪುತ್ತುಪ್ಪಲ್ಲಿ ಮೂಲದ ನಿವಾಸಿ ಎನ್ನಲಾಗಿದೆ. ಅರವಿಂದ್ ಅವರು ಕುಂಜುಲಕ್ಷ್ಮಿಯ ಎರಡನೇ ಮಾವುತರಾಗಿ ಕಳೆದ ತಿಂಗಳಿನಿಂದ ಸೇವೆ ಆರಂಭಿಸಿದ್ದರು. ಟಿವಿ ಪುರಂ ಶ್ರೀರಾಮ ಸ್ವಾಮಿ ದೇವಸ್ಥಾನದಲ್ಲಿ ರಾತ್ರಿ 9 ಗಂಟೆ ಸುಮಾರಿಗೆ ದೇವಸ್ಥಾನದ ಸಮಾರಂಭದಲ್ಲಿ ಈ ಘಟನೆ ನಡೆದಿದೆ. ಘಟನೆಯ ಸಂಪೂರ್ಣ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಸದ್ಯ ಈ ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಸಖತ್‌ ವೈರಲ್‌ ಆಗುತ್ತಿದೆ. ಕುಂಜುಲಕ್ಷ್ಮಿ ಎಂದು ಕರೆಯಲ್ಪಡುವ ಆನೆಯು ಸಾಂಪ್ರದಾಯಿಕ ಹಣೆಪಟ್ಟಿ ಇಡಲಾಗಿತ್ತು. ಇದೇ ಸಂದರ್ಭದಲ್ಲಿ ಏಕಾಏಕಿ ಕೋಪಗೊಂಡ ಆನೆಯು ತನ್ನ ಜೊತೆ ಇದ್ದ ಮಾವುತ ಅರವಿಂದ್‌ನನ್ನು ತುಳಿದಿದೆ. ಕೂಡಲೇ ದೇವಸ್ಥಾನದಲ್ಲಿದ್ದ ಸ್ಥಳೀಯರು ಸೇರಿ ಅರವಿಂದ್‌ನನ್ನು ರಕ್ಷಣೆ ಮಾಡಿದ್ದಾರೆ. ಬಳಿಕ ತಕ್ಷಣವೇ ವೈಕಂ ತಾಲೂಕು ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆ. ಆದರೆ ಗಂಭೀರ ಗಾಯಗೊಂಡಿದ್ದ ಪರಿಣಾಮ ಅರವಿಂದ್‌ ಆಸ್ಪತ್ರೆಯಲ್ಲಿಯೇ ಕೊನೆಯುಸಿರೆಳೆದಿದ್ದಾನೆ ಎನ್ನಲಾಗಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ…

Read More

ಗರ್ಭಿಣಿ ಮಹಿಳೆಯ ಹೆರಿಗೆಗೆ ನೆರವಾದ ರೈಲ್ವೇ ಸಿಬ್ಬಂದಿಯ ಮಾನವೀಯ ಸ್ಟೋರಿ ವರದಿಯಾಗಿದೆ. ಇಂತಹುದೇ ಘಟನೆಯೊಂದು LTT-ಪ್ರಯಾಗರಾಜ್ ದುರಂತೋ ಎಕ್ಸ್‌ಪ್ರೆಸ್‌ನಲ್ಲಿ ಸಂಭವಿಸಿದ್ದು, ತುಂಬು ಗರ್ಭಿಣಿ ಮಹಿಳೆಯೋರ್ವರಿಗೆ ಪ್ರಯಾಣ ಸಮಯದಲ್ಲಿಯೇ ಹೆರಿಗೆ ನೋವು ಕಾಣಿಸಿಕೊಂಡಿದೆ, ಸಹಪ್ರಯಾಣಿಕರೊಂದಿಗೆ ಟಿಕೆಟ್ ಸಿಬ್ಬಂದಿಯೂ ಮಹಿಳೆಗೆ ನೆರವು ನೀಡಿದ ರೀತಿ ವಿಶೇಷವಾಗಿತ್ತು. ಟಿಕೆಟ್ ತಪಾಸಣಾ ತಂಡದಲ್ಲಿದ್ದ ಅಧಿಕಾರಿಗಳಾದ ನಂದ್ ಬಿಹಾರಿ ಮೀನಾ, ಅಲೋಕ್ ಶರ್ಮಾ, ರಾಜಕರಣ್ ಯಾದವ್ ಮತ್ತು ಇಂದ್ರ ಕುಮಾರ್ ಮೀನಾ, ಸಹಪ್ರಯಾಣಿಕರೊಂದಿಗೆ ಗರ್ಭಿಣಿ ಸ್ತ್ರೀಯ ಹೆರಿಗೆಗೆ ನೆರವಾಗುವ ಮೂಲಕ, ತಾಯಿ ಹಾಗೂ ನವಜಾತ ಶಿಶುವಿನ ಯೋಗಕ್ಷೇಮ ನೋಡಿಕೊಂಡಿದ್ದಾರೆ. ಪ್ರಯಾಣ ಸಮಯದಲ್ಲಿಯೇ ತುಂಬು ಗರ್ಭಿಣಿಗೆ ತೀವ್ರ ಹೆರಿಗೆ ನೋವು ಕಾಣಿಸಿಕೊಂಡಿದ್ದು, ಆಕೆಗೆ ಅಗತ್ಯವಿರುವ ಎಲ್ಲಾ ನೆರವು ಹಾಗೂ ಸೌಕರ್ಯಗಳನ್ನೊದಗಿಸಿ ರೈಲ್ವೇ ಸಿಬ್ಬಂದಿ ನೆಲದ ಮೇಲೆ ಮಲಗಿಸಿದ್ದಾರೆ. ಅಧಿಕಾರಿಗಳ ಸಮಯೋಚಿತ ಸಹಕಾರ ಹಾಗೂ ಸಹಪ್ರಯಾಣಿಕರ ನೆರವಿನಿಂದ ಮಹಿಳೆಗೆ ಸುರಕ್ಷಿತ ಹೆರಿಗೆಯನ್ನು ಮಾಡಲಾಯಿತು ಎಂದು ಮಹಿಳೆಯ ಕುಟುಂಬಸ್ಥರು ತಿಳಿಸಿದ್ದು, ಅನಿರೀಕ್ಷಿತ ಪರಿಸ್ಥಿತಿಯಲ್ಲೂ ತಂಡವು ಸಂಯೋಜಿತವಾಗಿ ಒಗ್ಗೂಡಿ ಕಷ್ಟದಲ್ಲಿರುವ ಮಹಿಳೆಗೆ ನೆರವಿನ ಹಸ್ತ…

Read More

ಸಾಮಾಜಿಕ ಜಾಲತಾಣ ವಿಚಿತ್ರ ಘಟನೆಗಳಿಗೆ ಆಗಾಗ ಸುದ್ದಿಯಾಗುತ್ತಲೇ ಇರುತ್ತದೆ. ಈಗ ವೃದ್ಧನೊಬ್ಬ 34 ವರ್ಷದ ಮಹಿಳೆಯನ್ನು ಮದುವೆಯಾಗುವ ಮೂಲಕ ಎಲ್ಲರನ್ನು ಅಚ್ಚರಿಗೊಳಿಸಿದ್ದಾನೆ. ಈ ಮದುವೆಯಲ್ಲಿ ವರನ ವಯಸ್ಸು 80 ಮತ್ತು ವಧುವಿನ ವಯಸ್ಸು 34. ಇಬ್ಬರ ಪ್ರೀತಿ ಹುಟ್ಟಿಕೊಂಡಿದ್ದೇ ಸಾಮಾಜಿಕ ಜಾಲತಾಣದಲ್ಲಿ ಎಂಬುದು ವಿಶೇಷ. ಮಧ್ಯಪ್ರದೇಶದ ಸುಸ್ನೇರ್ ಸಮೀಪದ ಮಗರಿಯಾ ಗ್ರಾಮದ ನಿವಾಸಿ ಬಲುರಾಮ್ ಬಗ್ರಿ ಅವರು ಮಹಾರಾಷ್ಟ್ರದ ಅಮರಾವತಿ ನಿವಾಸಿ ಶೀಲಾ ಇಂಗ್ಲೆ ಅವರನ್ನು ಏಪ್ರಿಲ್ 1 ರಂದು ವಿವಾಹವಾಗಿದ್ದಾರೆ. ಮೂಲತಃ ಮಧ್ಯಪ್ರದೇಶದ ಮಗರಿಯ ಗ್ರಾಮದಲ್ಲಿ ವಾಸಿಸುತ್ತಿದ್ದ ಬಾಲುರಾಮ್ ಅವರಿಗೆ ಈಗಾಗಲೇ ಒಂದು ಮದುವೆಯಾಗಿದ್ದು ಕೆಲ ವರ್ಷಗಳ ಹಿಂದೆ ಅವರ ಪತ್ನಿ ಅನಾರೋಗ್ಯದಿಂದ ಕೊನೆಯುಸಿರೆಳೆದಿದ್ದಳು. ಬಾಲುರಾಮ್ ಅವರಿಗೆ ಓರ್ವ ಪುತ್ರನಿದ್ದು ಮೂವರು ಪುತ್ರಿಯರಿದ್ದಾರೆ ಆದರೆ ಅವರೆಲ್ಲರೂ ಬೇರೆ ಬೇರೆಯಾಗಿ ವಾಸಮಾಡುತ್ತಿದ್ದಾರೆ ಹೆಂಡತಿಯನ್ನು ಕಳೆದುಕೊಂಡ ಬಳಿಕ ಬಾಲುರಾಮ್ ಗೆ ಒಂಟಿ ತನ ಕಾಡ ತೊಡಗಿದೆ ಇದರಿಂದ ಖಿನ್ನತೆಗೆ ಒಳಗಾಗಿದ್ದರು. ಈ ವೇಳೆ ಅರೋಗ್ಯ ವಿಚಾರಿಸಲು ಬಂದ ಬಾಲುರಾಮ್ ಅವರ ಸ್ನೇಹಿತನಾದ ವಿಷ್ಣು…

Read More

ಹಂದಿಯ ಮೂತ್ರಪಿಂಡವನ್ನು ಮನುಷ್ಯನಿಗೆ ಅಳವಡಿಸುವಲ್ಲಿ ಅಮೆರಿಕದ ಬೋಸ್ಟನ್ ನ ಮ್ಯಾಸಚೂಸೆಟ್ಸ್ ಜನರಲ್ ಆಸ್ಪತ್ರೆ ವೈದ್ಯರು ಯಶಸ್ವಿಯಾಗಿದ್ದಾರೆ ಎಂದು ವರದಿ ತಿಳಿಸಿದೆ. ಹಂದಿಯ ಕಿಡ್ನಿ ಅಳವಡಿಕೆ ಬಳಿಕ ರೋಗಿ ಆರೋಗ್ಯವಾಗಿ ಆಸ್ಪತ್ರೆಯಿಂದ ಮನೆಗೆ ತೆರಳಿದ್ದಾನೆ ಎನ್ನಲಾಗಿದೆ. ವೇಮೌತ್‌ ನ ನಿವಾಸಿ 62 ವರ್ಷದ ರಿಕ್ ಸ್ಲೇಮನ್ ಗೆ ಹಂದಿ ಮೂತ್ರಪಿಂಡ ಕಸಿ ಮಾಡಲಾಗಿತ್ತು. ಈ ಮೂಲಕ ಹಂದಿ ಮೂತ್ರಪಿಂಡ ಕಸಿ ಸ್ವೀಕರಿಸಿದ ವಿಶ್ವದ ಮೊದಲ ವ್ಯಕ್ತಿಯಾಗಿದ್ದಾರೆ. ಶಸ್ತ್ರಚಿಕಿತ್ಸೆಯ ಬಳಿಕ ಸುಮಾರು ಎರಡು ವಾರಗಳ ಕಾಲ ಆಸ್ಪತ್ರೆಯಲ್ಲಿದ್ದು, ಮನೆಗೆ ತೆರಳಿದ್ದಾರೆ. ಅವರ ಆರೋಗ್ಯದಲ್ಲಿ ಸಾಕಷ್ಟು ಚೇತರಿಕೆ ಕಂಡು ಬಂದಿದೆ ಎನ್ನಲಾಗಿದೆ. ಈ ಹಿಂದೆಯೂ ವೈದ್ಯರು ಮಾನವನಿಗೆ ಪ್ರಾಣಿಗಳ ಎರಡು ಅಂಗಾಂಗ ಕಸಿಗಳನ್ನು ನಡೆಸಿದ್ದರು. ಇದರಲ್ಲಿ ತಳೀಯವಾಗಿ ಮಾರ್ಪಡಿಸಿದ ಹಂದಿಗಳ ಅಂಗಗಳನ್ನು ಮನುಷ್ಯರಿಗೆ ನೀಡಲಾಗಿದೆ. ಆದರೂ ಎರಡೂ ಪ್ರಕರಣಗಳು ವಿಫಲವಾಗಿದ್ದವು. ಈ ಎರಡು ಪ್ರಕರಣಗಳಲ್ಲಿ ತಳೀಯವಾಗಿ ಮಾರ್ಪಡಿಸಿದ ಹಂದಿಗಳ ಹೃದಯವನ್ನು ಮನುಷ್ಯರಿಗೆ ಅಳವಡಿಸಲಾಗಿತ್ತು, ಅದೂ ಕೂಡ ವಿಫಲವಾಗಿತ್ತು ಎನ್ನಲಾಗಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ…

Read More

ಕಾನೂನುಬಾಹಿರಾಗಿ ಮಗುವನ್ನು ದತ್ತು ಪಡೆದ ಪ್ರಕರಣದಲ್ಲಿ ಜೈಲು ಪಾಲಾಗಿದ್ದ ರೀಲ್‌ ಸ್ಟಾರ್‌ ಸೋನು ಶ್ರೀನಿವಾಸ್‌ ಗೌಡ ಅವರಿಗೆ, ನ್ಯಾಯಾಂಗವು ಜಾಮೀನು ನೀಡಿದೆ. ಹೌದು. 14 ದಿನಗಳ ನ್ಯಾಯಾಂಗ ಬಂಧನವನ್ನು ಕೋರ್ಟ್‌ ಸೋನು ಅವರಿಗೆ ವಿಧಿಸಿತ್ತು. ಇದೀಗ ಎಪ್ರಿಲ್‌ 4 ರಂದು ಜಾಮೀನು ಸಿಕ್ಕಿದೆ. ಪಿಡಿಜೆ ಕೋರ್ಟ್‌ ಸೋನು ಗೌಡ ಅವರಿಗೆ ಜಾಮೀನು ಮಂಜೂರು ಮಾಡಲು 1 ಲಕ್ಷ ಬಾಂಡ್‌, ಇಬ್ಬರ ಶ್ಯೂರಿಟಿ ಮೇಲೆ ಜಾಮೀನು ನೀಡಲು ಕೋರ್ಟ್‌ ಒಪ್ಪಿಗೆ ನೀಡಿದೆ. ಈ ಎಲ್ಲಾ ಷರತ್ತುಗಳನ್ನು ಪಾಲಿಸಿದ ನಂತರ ಸೋನು ಶ್ರೀನಿವಾಸ ಗೌಡ ಅವರು ಬಿಡುಗಡೆಯಾಗಲಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296  

Read More