Subscribe to Updates
Get the latest creative news from FooBar about art, design and business.
- ಪ್ರೀತಿ ಹೆಸರಲ್ಲಿ ಅಪ್ರಾಪ್ತ ವಯಸ್ಸಿನ ಬಾಲಕಿಗೆ ಲೈಂಗಿಕ ದೌರ್ಜನ್ಯ: ಆರೋಪಿ ವಿರುದ್ಧ ಪೋಕ್ಸೋ ಕೇಸ್ ದಾಖಲು
- ಬಾಲಕನ ಬಲಿ ಪಡೆದಿದ್ದ ಚಿರತೆ ಕೊನೆಗೂ ಸೆರೆ: 14 ದಿನಗಳ ಕಾರ್ಯಾಚರಣೆ ಬಳಿಕ ಸ್ಥಳೀಯರು ನಿಟ್ಟುಸಿರು
- ದಿಢೀರ್ ಹವಾಮಾನ ಬದಲಾವಣೆಗೆ AI ಡೇಟಾ ಸೆಂಟರ್ ಕಾರಣ ಆಗ್ತಾ ಇದೆಯೇ?
- ಗೃಹಲಕ್ಷ್ಮಿ, ಗೃಹಜ್ಯೋತಿ ಫಲಾನುಭವಿಗಳ ಪಟ್ಟಿ ಪರಿಷ್ಕರಣೆಗೆ ರಾಜ್ಯ ಸರ್ಕಾರ ನಿರ್ಧಾರ: ಅನರ್ಹರಿಗೆ ಕೋಕ್!
- ಪಾವಗಡ ಗಡಿ ಗ್ರಾಮಗಳಲ್ಲಿ ಜಾನುವಾರು, ಕೇಬಲ್ ಕಳ್ಳರ ಹಾವಳಿ: ರೈತರು ಕಂಗಾಲು!
- ದಳವಾಯಿಹಳ್ಳಿಯಲ್ಲಿ ಕುಡಿಯುವ ನೀರಿಗೆ ಹಾಹಾಕಾರ: ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಗ್ರಾಮಸ್ಥರ ಆಕ್ರೋಶ, BPS ನಿಂದ ಟ್ಯಾಂಕರ್ ನೀರು ಪೂರೈಕೆ
- ಪಾವಗಡ: ದೊಡ್ಡಹಳ್ಳಿ ಸರ್ಕಾರಿ ಪ್ರೌಢಶಾಲೆಯಲ್ಲಿ 2026–27ನೇ ಸಾಲಿನ ದಾಖಲಾತಿ ಆರಂಭ
- ರಾಜ್ಯಸಭೆ ಚುನಾವಣೆಗೂ ಸಚಿವ ಸಂಪುಟ ಪುನರಾಚನೆಗೂ ಯಾವುದೇ ಸಂಬಂಧವಿಲ್ಲ: ಗೃಹ ಸಚಿವ ಜಿ. ಪರಮೇಶ್ವರ್ ಸ್ಪಷ್ಟನೆ
Author: admin
ಇನ್ನೇನು ಕೆಲವೇ ದಿನಗಳಲ್ಲಿ ಲೋಕಸಭಾ ಚುನಾವಣೆ ನಡೆಯಲಿದ್ದು, ದಿನದಿಂದ ದಿನಕ್ಕೆ ಚುನಾವಣಾ ಕಾವು ಹೆಚ್ಚುತ್ತಿದೆ. ಚುನಾವಣೆಯ ಭಾಗವಾಗಿ ಬೆಂಗಳೂರು ಗ್ರಾಮಾಂತರದಲ್ಲಿ ಬಿಜೆಪಿ ಅಭ್ಯರ್ಥಿ ಸಿಎನ್ ಮಂಜುನಾಥ್ ನಾಮಪತ್ರ ಸಲ್ಲಿಕೆ ಮಾಡಿದ್ದಾರೆ. ಆದರೆ, ಇಲ್ಲಿ ವಿರೋಧ ಪಕ್ಷಗಳು ಮಂಜುನಾಥ್ ಅವರ ವಿರುದ್ಧ ಆಟ ಕಟ್ಟಿದ್ದು, ಸಿಎನ್ ಮಂಜುನಾಥ್ ಹೆಸರಿನ ವಿವಿಧ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದೆ. ಈ ಕುರಿತು ಪ್ರತಿಕ್ರಿಯೆ ನೀಡಿರುವ ಮಂಜುನಾಥ್ ಅವರು, ಇವು ಬಹಳ ಹಳೆಯ ತಂತ್ರಗಳು. ನನ್ನ ಸ್ಪರ್ಧೆಯಿಂದ ಕೆಲವರು ಭಯಭೀತರಾಗಿದ್ದಾರೆ ಎಂಬುದು ಗೊತ್ತಾಗುತ್ತದೆ ಎಂದು, ಕಾಂಗ್ರೆಸ್ ಗೆ ಪರೋಕ್ಷವಾಗಿ ತಿರುಗೇಟು ನೀಡಿದ್ದಾರೆ. ಜನ ಬುದ್ಧಿವಂತರು, ವಿದ್ಯಾವಂತರು ಮತ್ತು ಚಿಂತನಶೀಲರಾಗಿದ್ದು. ನಾನು ರಾಷ್ಟ್ರೀಯ ಪಕ್ಷ ಬಿಜೆಪಿಯಿಂದ ಕಮಲದ ಚಿಹ್ನೆಯ ಮೇಲೆ ಎನ್ ಡಿಎ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದೇನೆ ಎಂಬುದು ಜನರಿಗೆ ತಿಳಿದಿದೆ ಎಂದು ಮಂಜುನಾಥ್ ತಿಳಿಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ಬೇಸಿಗೆ ಕಾಲ ಕೆಲವರಿಗೆ ಇಷ್ಟವಾದರೆ ಕೆಲವರಿಗೆ ಇಷ್ಟವಾಗುವುದಿಲ್ಲ. ಶಾಖದ ಕಾರಣದಿಂದಾಗಿ, ಸಾಮಾನ್ಯವಾಗಿ ಎಲ್ಲರಿಗೂ ಕಿರಿಕಿರಿಯುಂಟಾಗುವುದು ಸಹಜ. ಬೇಸಿಗೆಯಲ್ಲಿ, ಅನೇಕ ಜನರು ತಮ್ಮ ಮನೆಯನ್ನು ತಂಪಾಗಿರಿಸಲು ಪ್ರಯತ್ನಿಸುತ್ತಾರೆ. ಆದರೂ ಬೇಸಿಗೆಯಲ್ಲಿ ಎಸಿ, ಕೂಲರ್ ಇಲ್ಲದೇ ದಿನ ಕಳೆಯುವುದೇ ಕಷ್ಟ. ಆದರೆ ಇಂದು ನಾವು ನಿಮಗೆ ನಿಮ್ಮ ಮನೆಯನ್ನು ತಂಪಾಗಿ ಇಡುವುದು ಹೇಗೆ? ಎಂಬುವುದರ ಕುರಿತು ಕೆಲವೊಂದು ಸಲಹೆಗಳನ್ನು ನೀಡುತ್ತೇವೆ. ಬನ್ನಿ ಅದ್ಯಾವುದು? ತಿಳಿಯೋಣ ಬೇಸಿಗೆಯಲ್ಲಿ ಮನೆಯನ್ನು ತಂಪಾಗಿಟ್ಟುಕೊಳ್ಳುವುದು ಬಹಳ ಮುಖ್ಯ. ಕೂಲರ್ ಮತ್ತು ಎಸಿ ಇಲ್ಲದೆಯೂ ನಿಮ್ಮ ಮನೆಯನ್ನು ತಂಪಾಗಿಡಬಹುದು. ಇದಕ್ಕಾಗಿ ರಾತ್ರಿಯಲ್ಲಿ ಕಿಟಕಿ ಮತ್ತು ಬಾಗಿಲುಗಳನ್ನು ತೆರೆದಿರಬೇಕು. ಇದರಿಂದ ರಾತ್ರಿ ವೇಳೆ ತಣ್ಣನೆಯ ಗಾಳಿ ಕೋಣೆಗೆ ಬಂದು ಮನೆ ತಣ್ಣಗಾಗಲು ಆರಂಭಿಸುತ್ತದೆ. ಇದರ ಹೊರತಾಗಿ, ನೀವು ಬೆಳಿಗ್ಗೆ ಬೇಗನೆ ಎದ್ದು ಮನೆಯನ್ನು ಸ್ವಲ್ಪ ಒದ್ದೆ ಮಾಡಲು ಮನೆಯನ್ನು ಒರೆಸಬಹುದು. ವಿಪರೀತ ಶಾಖದ ಸಂದರ್ಭದಲ್ಲಿ, ನೀವು ಮನೆಯ ಮೇಲ್ಛಾವಣಿಯನ್ನು ಸಹ ತೇವಗೊಳಿಸಬೇಕು. ಇದಲ್ಲದೆ, ಬಿಸಿ ಬಲ್ಬ್ ಗಳ ಬದಲಿಗೆ CFL ಅಥವಾ LED…
ಜನ ನಾಯಕ, ಸರಳ-ಸಜ್ಜನಿಕೆಯ ಸಾಮಾನ್ಯ ನಾಯಕ ಎಂದೇ ಖ್ಯಾತಿ ಪಡೆದಿರುವ ಉಡುಪಿ – ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಕೋಟಾ ಶ್ರೀನಿವಾಸ್ ಪೂಜಾರಿ ಅವರು ಮಾರ್ಚ್ 3ಕ್ಕೆ ನಾಮಪತ್ರ ಸಲ್ಲಿಸಿದ್ದಾರೆ. ಜೊತೆಗೆ ಅವರ ಕುಟುಂಬದ ಆಸ್ತಿ ವಿವರವನ್ನೂ ಸಲ್ಲಿಸಿದ್ದಾರೆ. ತಾನು ಬಡ ನಾಯಕನಾಗಿದ್ದೇ ಜನ ಸೇವೆ ಮಾಡಿಕೊಂಡಿರುತ್ತೇನೆ ಎಂದು ಹೇಳುವ ಕೋಟ ಶ್ರೀನಿವಾಸ ಪೂಜಾರಿ ಅವರು ಎಷ್ಟು ಆಸ್ತಿ ಹೊಂದಿದ್ದಾರೆ, ಅವರು ಅಷ್ಟೊಂದು ಸಿಂಪಲ್ ಆಗಿರೋದ್ರಿಂದ ಎಷ್ಟು ಹಣ ಅವರ ಬಳಿ ಇರಬಹುದು ಎಂದು ಹಲವರಿಗೆ ಕುತೂಹಲ. ಇದೀಗ ನಾಮಪತ್ರ ಸಲ್ಲಿಸುವ ವೇಳೆ ಕೋಟಾ ಅವರೇ ತಮ್ಮ ಆಸ್ತಿ ವಿವರವನ್ನು ಘೋಷಿಸಿಕೊಂಡಿದ್ದು, ಅವರು ಸಲ್ಲಿಸಿದ ಆಸ್ತಿ ವಿವರ ಪ್ರಕಾರ ಕೋಟ ಕುಟುಂಬ ಕೋಟ್ಯಧಿಪತಿ ಅನ್ನೋದು ಗೊತ್ತಾಗಿದೆ. ಕೋಟ ಶ್ರೀನಿವಾಸ ಪೂಜಾರಿ, ಅವರ ಪತ್ನಿ ಸಹನಾ ಮಕ್ಕಳಾದ ಸ್ವಾತಿ, ಶಶಿಧರ್ ಹಾಗೂ ಶ್ರುತಿ ಅವರ ಹೆಸರಿನಲ್ಲಿ ಇರುವ ಆಸ್ತಿಗಳ ವಿವರವನ್ನು ಸಲ್ಲಿಸಿದ್ದಾರೆ. ಅವರು ಸಲ್ಲಿಸಿರುವ ಪ್ರಕಾರ ಕೋಟ ಶ್ರೀನಿವಾಸ ಪೂಜಾರಿ ಕುಟುಂಬ…
ಸತತ 16 ವರ್ಷಗಳಿಂದಲೂ ಹೀನಾಯ ಪ್ರದರ್ಶನ ನೀಡುತ್ತಿರುವ, ಐಪಿಎಲ್ ಇತಿಹಾಸದಲ್ಲಿ ಒಮ್ಮೆಯೂ ಗೆಲ್ಲದ, ಅಭಿಮಾನಿಗಳ ಆಕ್ರೋಶಕ್ಕೆ ಕಾರಣವಾಗುತ್ತಿರುವ ಆರ್ ಸಿಬಿ ತಂಡ ಈ ಬಾರಿಯ ಐಪಿಎಲ್ ನಲ್ಲೂ ಮತ್ತೊಮ್ಮೆ ಮುಗ್ಗರಿಸಿ ಬೀಳುವ ಹಾಗೆ ಕಾಣುತ್ತಿದೆ. ಈ ಬಾರಿಯ ಐಪಿಎಲ್ ನ ಮೂರು ಪಂದ್ಯಗಳಲ್ಲಿ ಆರ್ ಸಿಬಿ ಕೇವಲ ಒಂದು ಪಂದ್ಯವನ್ನು ಮಾತ್ರ ಗೆದ್ದಿದೆ. ಇದರಿಂದ ಅಭಿಮಾನಿಗಳು ಆರ್ ಸಿಬಿ ಯ ಆಡಳಿತ ಮಂಡಳಿ ವಿರುದ್ಧ ತಿರುಗಿ ಬೀದಿದ್ದಾರೆ. ಆರ್ ಸಿಬಿಯ ದುರಂತವೆಂದರೆ ಈ ಬಾರಿ ಅದರ ಬಳಿ ಉತ್ತಮ ಬೌಲರ್ ಗಳು ಇಲ್ಲದೆ ಇರುವುದು. ಆದರೆ ಈ ನಡುವೆ ಒಂದು ಅಚ್ಚರಿಯ ಸುದ್ದಿ ಕೇಳಿ ಬರುತ್ತಿದ್ದು ಈ ಬಾರಿ ಪುರುಷರ ಐಪಿಎಲ್ ತಂಡಕ್ಕೆ, ಮಹಿಳಾ ತಂಡದ ಆಟಗಾರ್ತಿ ಕನ್ನಡತಿ ಶ್ರೇಯಾಂಕ ಪಾಟೀಲ್ ಎಂಟ್ರಿ ಕೊಡ್ತಾರೆ ಅನ್ನೋ ಸುದ್ದಿಗಳು ಹರಿದಾಡುತ್ತಿದ್ದು, ಇದೀಗ ಈ ಸುದ್ದಿ ಎಲ್ಲೆಡೆ ಸಂಚಲನ ಮೂಡಿಸಿದೆ. ಇತ್ತೀಚೆಗೆ ನಡೆದ ಐಪಿಎಲ್ ಪಂದ್ಯಾವಳಿಯಲ್ಲಿ ಕೊಲ್ಕತ್ತಾ ವಿರುದ್ಧದ ಪಂದ್ಯದಲ್ಲಿ ಆರ್ ಸಿಬಿ 182…
ಮಧ್ಯಪ್ರದೇಶ: ಲೋಕಸಭಾ ಚುನಾವಣೆ ಹತ್ತಿರವಾಗುತಿದ್ದಂತೆ ರಾಜಕೀಯ ಮುಖಂಡರು ಪ್ರಚಾರಕ್ಕಾಗಿ ವಿವಿಧ ರೀತಿಯ ಕಸರತ್ತು ನಡೆಸುತ್ತಿದ್ದಾರೆ. ಅಂತಹದ್ದೇ ಒಂದು ಘಟನೆ ಮಧ್ಯಪ್ರದೇಶದ ಗ್ವಾಲಿಯರ್ ಜಿಲ್ಲೆಯಲ್ಲಿ ನಡೆದಿದೆ. ಡ್ರೈನೇಜ್ ತುಂಬಿದ್ದು, ಸ್ವಚ್ಛಗೊಳಿಸದ ಕಾರಣ ದುರ್ವಾಸನೆ ಬರುತ್ತಿತ್ತು. ನೀರು ಕೂಡ ಸರಿಯಾಗಿ ಹರಿಯುತ್ತಿಲ್ಲ ಎಂದು ಹಲವು ಬಾರಿ ಗ್ವಾಲಿಯರ್ ನ ವಾರ್ಡ್-15ರ ಬಿಜೆಪಿ ಪುರಸಭಾ ಸದಸ್ಯ ದೇವೇಂದ್ರ ರಾಠೋಡ್ ದೂರಿದ್ದರೂ ಅಧಿಕಾರಿಗಳು ಸ್ಪಂದಿಸಿಲ್ಲ. ಹೀಗಾಗಿ ಬಿಜೆಪಿ ಮುಖಂಡ ದೇವೇಂದ್ರ ಅವರೇ ಡ್ರೈನೇಜ್ ಸ್ವಚ್ಛಗೊಳಿಸಲು ಚರಂಡಿಗೆ ಇಳಿದಿದ್ದಾರೆ. ಬಿಜೆಪಿ ಮುಖಂಡ ಡ್ರೈನೇಜ್ ಸ್ವಚ್ಛಗೊಳಿಸುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. ಮಹಾನಗರ ಪಾಲಿಕೆ ಯಾವುದೇ ಕ್ರಮ ಕೈಗೊಂಡಿಲ್ಲ ಹೀಗಾಗಿ ಸ್ವಂತ ನಾನೇ ಡ್ರೈನೇಜ್ ಶುಚಿಗೊಳಿಸುತ್ತೇನೆ ಎಂದು ಅವರು ತಿಳಿಸಿದರು. ಡ್ರೈನೇಜ್ ಗೆ ಇಳಿದು ಸ್ವಚ್ಛಗೊಳಿಸುತ್ತಿರುವ ವಿಷಯ ತಿಳಿದ ನಗರಸಭೆಯ ಸಿಬ್ಬಂದಿ ಕೂಡಲೇ ಅಲ್ಲಿಗೆ ಆಗಮಿಸಿ ಸ್ವಚ್ಛಗೊಳಿಸಲು ಸಹಕರಿಸಿದರು ಎನ್ನಲಾಗಿದೆ. ಜನರು ನನಗೆ ಮತ ನೀಡಿದ್ದಾರೆ, ಅವರ ಮತಕ್ಕೆ ಬೆಲೆ ನೀಡಬೇಕು, ಆದ್ದರಿಂದ ಯಾರೂ ಜನರ ಸಮಸ್ಯೆ ಕೇಳದ…
ಹಾಸನ: “ಬಿಜೆಪಿಯೊಂದಿಗೆ ಜೆಡಿಎಸ್ ಮೈತ್ರಿ ಶಾಶ್ವತವಾದದ್ದು. ಲೋಕಸಭಾ ಚುನಾವಣೆಗೆ ಮಾತ್ರ ಸೀಮಿತವಾಗಿಲ್ಲ” ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿವೈ ವಿಜಯೇಂದ್ರ ಹೇಳಿದರು. ಹಾಸನದಲ್ಲಿ ಮೈತ್ರಿ ಅಭ್ಯರ್ಥಿ, ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣ ನಾಮಪತ್ರ ಸಲ್ಲಿಕೆ ವೇಳೆ ಹಾಜರಿದ್ದು ಅವರು ಮಾತನಾಡಿದರು. “ರೈತ, ದಲಿತ ವಿರೋಧಿ ಕಾಂಗ್ರೆಸ್ ಪಕ್ಷವನ್ನು ದೇಶದಿಂದ ಕಿತ್ತೊಗೆಯಬೇಕು. ಆ ನಿಟ್ಟಿನಲ್ಲಿ ಬಿಜೆಪಿಯೊಂದಿಗೆ ಜೆಡಿಎಸ್ ಮೈತ್ರಿ ಮಾಡಿಕೊಂಡಿದೆ. ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡರು ನಮ್ಮೆಲ್ಲರ ಹಿರಿಯರು. ಕಳೆದ ಲೋಕಸಭಾ ಚುನಾವಣೆಯಲ್ಲಿ ಆಶೀರ್ವಾದ ಮಾಡಿರಲಿಲ್ಲ. ಈ ಚುನಾವಣೆಯಲ್ಲಿ ದೇವೇಗೌಡರ ಆಶೀರ್ವಾದ ನಮ್ಮ ಮೇಲಿದೆ” ಎಂದು ವಿಜಯೇಂದ್ರ ಹೇಳಿದರು. “ಪ್ರಧಾನಿ ಮೋದಿ ಅವರಿಗಾಗಿ ಹೆಚ್ ಡಿ ದೇವೇಗೌಡರು ಮೈತ್ರಿ ಮಾಡಿಕೊಂಡಿದ್ದಾರೆ. ದೇವೇಗೌಡರು ಖುದ್ದು ಮೋದಿ ಭೇಟಿಯಾಗಿ ಮಾತುಕತೆ ನಡೆಸಿದ್ದರು. ಹಾಸನ ಕ್ಷೇತ್ರದ ಎನ್ಡಿಎ ಅಭ್ಯರ್ಥಿ ಗೆಲ್ಲಿಸಲು ನಾವು ಕೆಲಸ ಮಾಡಬೇಕು” ಎಂದು ವಿಜಯೇಂದ್ರ ಹೇಳಿದರು. ಜೆಡಿಎಸ್ ಅಭ್ಯರ್ಥಿಯಾಗಿ ಪ್ರಜ್ವಲ್ ರೇವಣ್ಣ ಹಾಸನ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಾಮಪತ್ರ ಸಲ್ಲಿಸಿದರು. ಮೊಮ್ಮಗ ಪ್ರಜ್ವಲ್ ನಾಮಪತ್ರ…
ಬೆಂಗಳೂರು: “ವಿಧಾನಸಭೆ ಚುನಾವಣೆಗಿಂತಲೂ ಹೆಚ್ಚು ಸೀಟು ಲೋಕಸಭೆ ಚುನಾವಣೆಯಲ್ಲಿ ಸಿಗಲಿದೆ” ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ವಿಶ್ವಾಸ ವ್ಯಕ್ತಪಡಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, “ನಾವು 136 ಸೀಟು ಗೆದ್ದಿದ್ದೇವೆ. ದೇಶದಲ್ಲೇ ಅತಿ ಬಲಿಷ್ಠ ಎಂದರೆ ಕರ್ನಾಟಕವಾಗಿದೆ. ಹೀಗಾಗಿ ಅಸೆಂಬ್ಲಿಯಲ್ಲಿ ಎಷ್ಟು ಗೆದ್ದಿದ್ದೇವೊ ಅದಕ್ಕಿಂತಲೂ ಹೆಚ್ಚು ಪಾರ್ಲಿಮೆಂಟ್ ನಲ್ಲಿ ಗೆಲ್ಲುತ್ತೇವೆ ಎಂದರು. ನಾವು ಈ ಬಾರಿ ರಾಜ್ಯವನ್ನು ಗಮನದಲ್ಲಿಟ್ಟುಕೊಂಡು ಯುವಕರಿಗೆ, ವಿದ್ಯಾವಂತರಿಗೆ, ಕೆಲಸ ಮಾಡುವವರಿಗೆ ಟಿಕೆಟ್ ನೀಡಿದ್ದೇವೆ. ಇಡೀ ಪಕ್ಷ ನಮ್ಮ ಅಭ್ಯರ್ಥಿಯ ಪರ ಕೆಲಸ ಮಾಡುತ್ತೇವೆ. 3 ಲಕ್ಷ ಅಂತರದಿಂದ ಅಭ್ಯರ್ಥಿ ಗೆಲ್ಲುತ್ತಾರೆ. ನಮ್ಮಲ್ಲಿ ಎಲ್ಲೂ ಭಿನ್ನಾಭಿಪ್ರಾಯವಿಲ್ಲ. ಎಲ್ಲರೂ ಸೇರಿ ಅಭ್ಯರ್ಥಿಯನ್ನು ಆಯ್ಕೆ ಮಾಡಿದ್ದೇವೆ” ಎಂದು ಹೇಳಿದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ಯಾದಗಿರಿ: ಯಾದಗಿರಿ ತಾಲೂಕಿನ ಕೊಟಗೇರಾ ಗ್ರಾಮದ ಸಮೀಪ ಬೈಕ್ ಸ್ಕಿಡ್ ಆಗಿ ಬಿದ್ದ ಪರಿಣಾಮ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ನಡೆದಿದೆ. ಗುರುಮಠಕಲ್ ಪಟ್ಟಣದ ನಿವಾಸಿ ನರಸಪ್ಪ (48) ಮೃತ ದುರ್ದೈವಿಯಾಗಿದ್ದಾರೆ. ಮೃತ ದುರ್ದೈವಿಯಾದ ನರಸಪ್ಪ ಬೈಕ್ ನಲ್ಲಿ ಯಾದಗಿರಿಯಿಂದ ಕೋಟಗೇರಾ ಗ್ರಾಮಕ್ಕೆ ತೆರಳುತ್ತಿದ್ದಾಗ, ಬೈಕ್ ಸ್ಕಿಡ್ ಆಗಿ ನರಸಪ್ಪ ನೆಲಕ್ಕೆ ಬಿದ್ದಿದ್ದಾರೆ. ಇದರಿಂದ ಗಂಭೀರ ಗಾಯಗೊಂಡ ನರಸಪ್ಪ ತೀವ್ರ ರಕ್ತಸ್ರಾವಗೊಂಡು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ವಿಷಯ ತಿಳಿದು ಸ್ಥಳಕ್ಕಾಗಮಿಸಿದ ಗ್ರಾಮೀಣ ಪೊಲೀಸರು ಪರಿಶೀಲನೆ ನಡೆಸಿ, ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ. ಸದ್ಯ ಈ ಸಂಬಂಧ ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮರಣೋತ್ತರ ಪರೀಕ್ಷೆ ಬಳಿಕ ಮೃತದೇಹವನ್ನು ಕುಟುಂಬಸ್ಥರಿಗೆ ಹಸ್ತಾಂತರ ಮಾಡಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ಬೆಂಗಳೂರು: ಕೊಳವೆ ಬಾವಿಗೆ ಬಿದ್ದ 2 ವರ್ಷದ ಬಾಲಕ ಸಾತ್ವಿಕ್ ನ ರಕ್ಷಣಾಕಾರ್ಯಚರಣೆಗೆ ಶ್ರಮಿಸಿದ ಸಿಬ್ಬಂದಿಗಳು ಹಾಗೂ ಮತ್ತು ಸಾರ್ವಜನಿಕರ ಕಾರ್ಯದಕ್ಷತೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶಂಸಿಸಿದ್ದಾರೆ. ವಿಜಯಪುರ ಜಿಲ್ಲೆ ಇಂಡಿ ತಾಲ್ಲೂಕಿನ ಲಚ್ಯಾಣ ಗ್ರಾಮದಲ್ಲಿ ಆಕಸ್ಮಿಕವಾಗಿ ಕೊಳವೆ ಬಾವಿಗೆ ಬಿದ್ದ 2 ವರ್ಷದ ಬಾಲಕ ಸಾತ್ವಿಕ್ ನ ರಕ್ಷಣಾ ಕಾರ್ಯಾಚರಣೆ ಯಶಸ್ವಿಯಾಗಿದ ನಡೆದಿದೆ. ಮಗುವಿನ ಕುಟುಂಬದವರ, ನಾಡಿನ ಕೋಟ್ಯಂತರ ಜನರ ಹರಕೆ – ಹಾರೈಕೆಗಳು ಫಲಿಸಿದೆ, ಸಾವನ್ನೇ ಗೆದ್ದು ಬಂದ ಪುಟ್ಟ ಕಂದಮ್ಮ ಮತ್ತೆ ಪೋಷಕರ ಮಡಿಲು ಸೇರಿದ್ದು ಕಂಡು ಖುಷಿಯಾಯಿತು ಎಂದು ಅವರು ಸಂತಸ ವ್ಯಕ್ತಪಡಿಸಿದರು. ನೀರು ಬಾರದ ಅಥವಾ ಬತ್ತಿದ ಕೊಳವೆ ಬಾವಿಗಳನ್ನು ಮುಚ್ಚದಿದ್ದರೆ ಯಾರದೋ ಅಮಾಯಕ ಜೀವ ಬಲಿಯಾಗುತ್ತದೆ, ಇಂತಹ ಘಟನೆಗಳು ಕಾಲಕಾಲಕ್ಕೆ ಪುನರಾವರ್ತನೆಯಾಗುತ್ತಿದ್ದರೂ ಜನ ಜಾಗೃತರಾಗದೆ ನಿರ್ಲಕ್ಷ್ಯ ತೋರುವುದು ಬೇಸರದ ಸಂಗತಿ. ಸಮಾಜ ಈ ಬಗ್ಗೆ ಇನ್ನಾದರೂ ಎಚ್ಚೆತ್ತುಕೊಳ್ಳಬೇಕು ಎಂದು ಅವರು ಸೂಚನೆ ನೀಡಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್…
ಬೆಂಗಳೂರು: ವೃದ್ದನೊಬ್ಬನ ಮೇಲೆ ಕೆಎಸ್ ಆರ್ ಟಿಸಿ ಬಸ್ ಹರಿದು ವೃದ್ದ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಕೆಂಪೇಗೌಡ ಬಸ್ ನಿಲ್ದಾಣದಲ್ಲಿ ನಡೆದಿದೆ. ಗಂಗಾರೆಡ್ಡಿ (85) ಮೃತ ದುರ್ದೈವಿಯಾಗಿದ್ದಾರೆ. ಇಂದು ಮಧ್ಯಾಹ್ನ 12.30ರ ಸುಮಾರಿನಲ್ಲಿ ಘಟನೆ ನಡೆದಿದೆ. ಬೆಂಗಳೂರಿನಿಂದ ಆಂಧ್ರದ ಚಿತ್ತೂರಿಗೆ ತೆರಳಲು ಮೆಜೆಸ್ಟಿಕ್ಗೆ ಬಂದಿದ್ದ ವೃದ್ಧನಿಗೆ ಚಿಕ್ಕಮಗಳೂರಿಂದ ಬೆಂಗಳೂರಿಗೆ ಬಂದಿದ್ದ ಕೆಎಸ್ ಆರ್ ಟಿಸಿ ಬಸ್ ಡಿಕ್ಕಿ ಹೊಡೆದಿದೆ. ಗುದ್ದಿದ ರಭಸಕ್ಕೆ ಗಂಗಾರೆಡ್ಡಿ ಸ್ಥಳದಲ್ಲೆ ಸಾವನ್ನಪ್ಪಿದ್ದಾರೆ. ಘಟನಾ ಸ್ಥಳಕ್ಕೆ ಉಪ್ಪಾರ ಪೇಟೆ ಪೊಲೀಸರು ಭೇಟಿ ನೀಡಿದ್ದು ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296