Author: admin

ಮೈಸೂರು: ಜಿಲ್ಲೆಯ ನಂಜನಗೂಡು ತಾಲೂಕಿನ ತಾಂಡ್ಯ ಕೈಗಾರಿಕಾ ಪ್ರದೇಶದಲ್ಲಿರುವ‌ ಬಿಯರ್ ತಯಾರಿಕಾ ಘಟಕದ ಮೇಲೆ ದಾಳಿ ನಡೆದಿದೆ. ಯುನೈಟೆಡ್ ಬ್ರಿವರೀಸ್ ಲಿಮಿಟೆಡ್ ಘಟಕದ ಮೇಲೆ ಅಬಕಾರಿ ಜಂಟಿ ಆಯುಕ್ತರ ತಂಡ ದಾಳಿ ನಡೆಸಿದ್ದು, ಬರೋಬ್ಬರಿ 98.52 ಕೋಟಿ ರೂ. ಮೊತ್ತದ ಬಿಯರ್ ದಾಸ್ತಾನು ಜಪ್ತಿ ಮಾಡಿದೆ. ಚಾಮರಾಜನಗರ ಲೋಕಸಭಾ ಕ್ಷೇತ್ರದ ವ್ಯಾಪ್ತಿಯ ಕಾರ್ಖಾನೆ ಇದಾಗಿದೆ. ದೂರವಾಣಿ ಮೂಲಕ ಬಂದ ಮಾಹಿತಿಯನ್ನು ಆಧರಿಸಿ ಅಧಿಕಾರಿಗಳು ದಾಳಿ ಮಾಡಿದಾಗ, ಸರ್ಕಾರಕ್ಕೆ ತೋರಿಸಿರುವ ದಾಸ್ತಾನು ಲೆಕ್ಕಕ್ಕಿಂತ ಅಧಿಕ ದಾಸ್ತಾನು ಸಂಗ್ರಹ ಪತ್ತೆ ಆಗಿದೆ. 7 ಸಾವಿರ ವಿವಿಧ ಬ್ರಾಂಡಿನ ಪೆಟ್ಟಿಗೆಗಳಲ್ಲಿದ್ದ ಬಿಯರ್ ಬಾಟಲಿಗಳು, ಯುಟಿ ಟ್ಯಾಂಕ್, ಸೈಲೋಸ್ ಟ್ಯಾಂಕ್‌ ಗಳಲ್ಲಿರುವ ಕಚ್ಚಾ ವಸ್ತು ಸಮೇತ ಜಪ್ತಿ ಮಾಡಲಾಗಿದೆ. ಈ ಸಂಬಂಧ 17 ಮಂದಿ ವಿರುದ್ಧ ದಾಖಲಾಗಿದ್ದು, ನಾಪತ್ತೆಯಾದವರಿಗಾಗಿ ಅಬಕಾರಿ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

Read More

ನವದೆಹಲಿ: ರೈಲ್ವೆ ಸಚಿವ ಅಶ್ವಿನಿ ವೈಷ್ಣವ್, ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಸೇರಿದಂತೆ 14 ಜನರು ರಾಜ್ಯಸಭೆಯ ಸದಸ್ಯರಾಗಿ ಪ್ರಮಾಣ ವಚನ ಸ್ವೀಕರಿಸಿದರು. ಉಪರಾಷ್ಟ್ರಪತಿ ಮತ್ತು ರಾಜ್ಯಸಭೆ ಸಭಾಪತಿ ಉಪರಾಷ್ಟ್ರಪತಿ ಜಗದೀಪ ಧನ್ ಕರ್‌ ಅವರು ನೂತನ ಸಂಸತ್ ಭವನದಲ್ಲಿ ಅವರಿಗೆ ಪ್ರಮಾಣ ವಚನ ಬೋಧಿಸಿದರು. ಕಾಂಗ್ರೆಸ್ ‌ನ ಸೋನಿಯಾ ಗಾಂಧಿ, ಅಜಯ್ ಮಾಕೆನ್, ಬಿಜೆಪಿಯ ಅಶ್ವಿನಿ ವೈಷ್ಣವ್, ಆರ್‌ಪಿಎನ್‌ ಸಿಂಗ್, ಸಮಿಕ್ ಭಟ್ಟಾಚಾರ್ಯ, ವೈಎಸ್‌ ಆರ್‌ಪಿಯ ಗೋಲಾ ಬಾಬು ರಾವ್, ಮೇಧಾ ರಘುನಾಥ್ ರೆಡ್ಡಿ, ಸುಬ್ಬಾರೆಡ್ಡಿ ಸೇರಿದಂತೆ ಇತರರು ಪ್ರಮಾಣ ವಚನ ಸ್ವೀಕರಿಸಿದರು. ಈ ವೇಳೆ ಸದನದಲ್ಲಿ ಬಿಜೆಪಿ ನಾಯಕ ನಾಯಕ ಪಿಯೂಷ್ ಗೋಯಲ್, ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಇದ್ದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

Read More

KPSC ಯಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅಭ್ಯರ್ಥಿಗಳಿಂದ ಅರ್ಜಿಗಳನ್ನು  ಆಹ್ವಾನಿಸಿದೆ. ಈ ಬಾರಿ ಕೆಪಿಎಸ್ಸಿ ತನ್ನ ಪ್ರಕಟಣೆಯಲ್ಲಿ ಒಟ್ಟಾರೆ 384 ಹುದ್ದೆಗಳನ್ನು ಪ್ರಕಟಿಸಿದ್ದು, ಅದರಲ್ಲಿ ಗ್ರೂಪ್ ಎ ಮತ್ತು ಗ್ರೂಪ್ ಬಿ ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಿತ್ತು. ಈ ಮುಂಚೆ ಅರ್ಜಿ ಸಲ್ಲಿಸಲು ಏಪ್ರಿಲ್ 3 ನ್ನು ಕೊನೆಯ ದಿನಾಂಕ ಎಂದು ನಿಗದಿಪಡಿಸಿತ್ತು. ಆದರೆ ಇದೀಗ ವಿವಿಧ ಕಾರಣಗಳಿಂದ ದಿನಾಂಕವನ್ನು ಏಪ್ರಿಲ್ 15ರವರೆಗೆ ವಿಸ್ತರಣೆ ಮಾಡಲಾಗಿದೆ. ಆಸಕ್ತಿಯುಳ್ಳ ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಚುನಾವಣಾ ದಿನಾಂಕ ಘೋಷಣೆಯಾಗಿದ್ದು ಪ್ರಸ್ತುತ ಅಭ್ಯರ್ಥಿಗಳ ಹಿತದೃಷ್ಠಿಯಿಂದ ಮತ್ತು ಚುನಾವಣಾ ಸಂಬಂಧಿತ ಕೆಲಸಗಳಿರುವುದರಿಂದ ಅರ್ಜಿ ಸಲ್ಲಿಕೆಯ ದಿನಾಂಕವನ್ನು ಏ.15ರ ವರೆಗೂ ವಿಸ್ತರಿಸಲಾಗಿದೆ ಎಂದು ಕರ್ನಾಟಕ ಲೋಕಸೇವಾ ಆಯೋಗ ಪ್ರಕಟಣೆಯಲ್ಲಿ ತಿಳಿಸಿದೆ. ಅರ್ಜಿ ಸಲ್ಲಿಸುವ ಮುನ್ನ ಹುದ್ದೆಗಳಿಗೆ ಬೇಕಾಗಿರುವ ವಯೋಮಿತಿ, ಸಂಬಳ, ಅರ್ಜಿ ಶುಲ್ಕ, ವಿದ್ಯಾರ್ಹತೆ, ಅರ್ಜಿ ಸಲ್ಲಿಕೆಗೂ ಮುನ್ನ ಹುದ್ದೆಯ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ,  ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತ ಸಂಪೂರ್ಣ…

Read More

ಮನುಷ್ಯನ ಅತಿಯಾದ ಸ್ವಾರ್ಥಕ್ಕೆ ಕಾಡಿನಲ್ಲಿರುವ ಕಾಡು ಪ್ರಾಣಿಗಳಿಗೆ ಆಹಾರವೇ ಸಿಗದಂತಾಗಿದೆ. ಕಾಡು ಪ್ರಾಣಿಗಳು ಆಗಾಗ್ಗೆ ಆಹಾರ ಅರಸಿಕೊಂಡು ನಾಡಿಗೆ ಬಂದು ಕೃಷಿ ಚಟುವಟಿಕೆಯನ್ನು ನಾಶ ಮಾಡುವುದನ್ನು ಕೇಳಿದ್ದೇವೆ. ಇಂತಹ ಸುದ್ದಿಗಳು ಚಾಲ್ತಿಯಲ್ಲಿರುವಾಗಲೇ ಇಲ್ಲೊಂದು ಕಾಡಾನೆ ಹಸಿವು ತಡೆಯಲಾರದೆ ಅಕ್ಕಿ ಗೋದಾಮಿಗೆ ದಾಳಿ ಮಾಡಿದ ಘಟನೆ ನಡೆದಿದೆ. ಇದರ ವೀಡಿಯೋ ಇದೀಗ ಎಲ್ಲ ಕಡೆ ವೈರಲ್ ಆಗ್ತಿದೆ. ಕೇರಳ-ಕರ್ನಾಟಕ ಗಡಿಭಾಗದ ಗುಂಡ್ಲುಪೇಟೆ ಅರಣ್ಯ ಪ್ರದೇಶದಲ್ಲಿ ಕಾಡಾನೆಯೊಂದು ಇದ್ದಕಿದ್ದಂತೆ ಜನವಸತಿ ಪ್ರದೇಶಕ್ಕೆ ಲಗ್ಗೆ ಇಟ್ಟಿದೆ. ಕಾಡಾನೆಯನ್ನು ಕಂಡ ಗ್ರಾಮದ ಜನ ಹೆದರಿದ್ದಾರೆ. ಆನೆಯನ್ನು ಕಾಡಿಗೆ ಓಡಿಸುವ ಯತ್ನ ಮಾಡಿದ್ದಾರೆ. ಆದರೆ ಜನರ ಬೆದರಿಕೆಗೆ ಆನೆ ಜಗ್ಗಲೇ ಇಲ್ಲ. ನೇರವಾಗಿ ಆಹಾರ ನಿಗಮದ ಗೋದಾಮಿನ ಬಳಿ ಬಂದಿದೆ. ಇಲ್ಲಿ ಗೋದಾಮಿಗೆ ಶಟರ್ ಹಾಕಿರುವುದನ್ನು ಕಂಡ ಆನೆ ಸೊಂಡಿಲಿನಿಂದ ಶಟರ್ ಮುರಿದು ಒಳಗಿನಿಂದ ಅಕ್ಕಿಯ ಚೀಲವನ್ನು ಹೊರಗೆ ಎಳೆದು ತಂದು ಅದರಲ್ಲಿದ್ದ ಅಕ್ಕಿಯನ್ನು ತಿನ್ನಲು ಶುರು ಮಾಡಿದೆ. ಗ್ರಾಮಸ್ಥರು ಆನೆಯನ್ನು ಓಡಿಸಲು ಎಷ್ಟೇ ಪ್ರಯತ್ನಪಟ್ಟರೂ ಸಾಧ್ಯವಾಗಲಿಲ್ಲ. ಆನೆಯ…

Read More

ವಿಜಯಪುರ: ಜಿಲ್ಲೆಯ ಇಂಡಿ ತಾಲೂಕಿನ ಲಚ್ಯಾಣ ಗ್ರಾಮದಲ್ಲಿ ಕೊಳವೆ ಬಾವಿಗೆ ಬಿದ್ದಿದ್ದ 2 ವರ್ಷದ ಮಗು ಸಾತ್ವಿಕ್ ನನ್ನು ಜೀವಂತವಾಗಿ ಹೊರ ತೆಗೆಯಲು ಎನ್ ಡಿ ಆರ್ ಎಫ್, ಎಸ್ ಡಿ ಆರ್ ಎಫ್ ಮತ್ತು ಅಗ್ನಿಶಾಮಕ ದಳದ ಸಿಬ್ಬಂದಿ ವರ್ಗದವರು ತಮ್ಮ ಜೀವವನ್ನೇ ಪಣಕ್ಕಿಟ್ಟು ಮಗುವನ್ನು ಸುರಕ್ಷಿತವಾಗಿ ಹೊರಗೆ ತಂದಿರುವುದು ನಿಜಕ್ಕೂ ಶ್ಲಾಘನೀಯ ಎಂದು ನೈಜ ಹೋರಾಟಗಾರರ ವೇದಿಕೆ, ಬೆಂಗಳೂರು ಮೆಚ್ಚುಗೆ ವ್ಯಕ್ತಪಡಿಸಿದೆ. ಗ್ರಾಮದಲ್ಲಿ ಎರಡು ವರ್ಷದ ಮಗು (ಬೋರ್ ವೆಲ್) ಕೊಳವೆ ಬಾವಿಗೆ ಬಿದ್ದ ನಂತರ ಮಗುವನ್ನು ಸುರಕ್ಷಿತವಾಗಿ ಹೊರಗೆ ತರುವಲ್ಲಿ NDRF, SDRF, ಹಾಗೂ ಅಗ್ನಿಶಾಮಕದಳದ ಸಿಬ್ಬಂದಿ ವರ್ಗ ಶ್ರಮಿಸಿದ್ದಾರೆ ಇವರಿಗೆ ನೈಜ ಹೋರಾಟಗಾರರ ವೇದಿಕೆ ತುಂಬು ಹೃದಯದ ಕೃತಜ್ಞತೆಯನ್ನು ಸಲ್ಲಿಸುತ್ತದೆ ಎಂದು ನೈಜ ಹೋರಾಟಗಾರರ ವೇದಿಕೆಯ ಹೆಚ್.ಎಂ.ವೆಂಕಟೇಶ್, ಕುಣಿಗಲ್ ನರಸಿಂಹಮೂರ್ತಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296…

Read More

ಚುನಾವಣಾ ಆಯೋಗದ ಪ್ರಕಾರ ವೋಟ್ ಹಾಕಲು ನಾವು ಆಧಾರ್ ಕಾರ್ಡ್, ಡ್ರೈವಿಂಗ್ ಲೈಸನ್ಸ್, ರೇಷನ್ ಕಾರ್ಡ್ ಸೇರಿದಂತೆ 13 ಇತರ ವೈಯಕ್ತಿಕ ಪ್ರಮಾಣ ಪತ್ರಗಳನ್ನು ಒದಗಿಸಬಹುದು ಆ ಮೂಲಕ ವೋಟ್ ಮಾಡಬಹುದು. ಒಂದು ವೇಳೆ ವೋಟಿಂಗ್ ಕಾರ್ಡ್ ಕಳೆದು ಹೋದರೆ ಚುನಾವಣಾ ಆಯೋಗದ ಅಧಿಕೃತ ವೆಬ್ ಸೈಟ್ ಅಥವಾ ತಹಶೀಲ್ದಾರ್ ಕಛೇರಿಯಲ್ಲಿರುವ ಚುನಾವಣಾ ವಿಭಾಗಕ್ಕೆ ವರದಿ ಸಲ್ಲಿಸಿ. ಹೊಸ ಕಾರ್ಡ್‍ಗೆ ಮನವಿ ಮಾಡಬೇಕು. ಆಗ ನಿಮಗೊಂದು ತಾತ್ಕಾಲಿಕ ಸಂಖ್ಯೆಯನ್ನು ಇಲಾಖೆ ನೀಡುತ್ತದೆ. ಅದನ್ನು ಮತದಾರರ ಪಟ್ಟಿಯಲ್ಲಿ ಗಮನಿಸಿ ನಂತರ ಆ ಸಂಖ್ಯೆಯ ಸಹಾಯದಿಂದಲೇ ವೋಟ್ ಹಾಕಬಹುದು. ವೋಟಿಂಗ್ ಕಾರ್ಡ್‍ನಲ್ಲಿ ಅಡ್ರೆಸ್ ತಿದ್ದುಪಡಿ ಮಾಡಬೇಕೆಂದು ಹಲವು ನಗರವಾಸಿಗಳು ಬಯಸುತ್ತಾರೆ. ಅವರು ಆಧಾರ್ ಕಾರ್ಡ್ ನ ಅಡ್ರೆಸ್ ಚೇಂಜ್ ಮಾಡಿಕೊಂಡು ನಂತರ ವೋಟಿಂಗ್ ಕಾರ್ಡ್‍ನ ಅಡ್ರೆಸ್ ಚೇಂಜ್ ಮಾಡಬೇಕಾಗುತ್ತದೆ. ಈಗ ಇದೆಲ್ಲವೂ ಆನ್ ಲೈನ್ ಅಲ್ಲಿ ಲಭ್ಯವಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್…

Read More

ಆರ್‌ ಸಿಬಿ 2008ರ IPL ಪಂದ್ಯಾವಳಿಯ ಆರಂಭದಿಂದಲೂ ಸಹ ಟ್ರೋಫಿ ಗೆಲ್ಲಲು ವಿಫಲವಾಗಿದೆ ಎಂದು ಭಾರತದ ಮಾಜಿ ಕ್ರಿಕೆಟ್ ಆಟಗಾರರೊಬ್ಬರು ಕೊಹ್ಲಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಐಪಿಎಲ್ 2024 ರ ಲಕ್ಕೋ ಸೂಪರ್ ಜೈಂಟ್ ವಿರುದ್ಧದ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಔಟಾದ ನಂತರ ಅಂಬಟಿ ರಾಯುಡು ಆರ್ ಸಿ ಬಿ ಸೋಲಿಗೆ ಕಾರಣವೇನು ಎಂಬುದರ ಕುರಿತಾಗಿ ವಿಮರ್ಶೆ ಮಾಡಿದ್ದಾರೆ. RCBಯ ದೊಡ್ಡ ಸಮಸ್ಯೆ ಎಂದರೆ ಆಟಗಾರರಿಗೆ ಸರಿಯಾದ ಬೆಂಬಲದ ಕೊರತೆ ಇರುವುದು. ಆರ್‌ ಸಿಬಿ ಆಯ್ಕೆ ಸಮಿತಿಯು ಶೇನ್ ವ್ಯಾಟ್ಸನ್, ಯುಜೇಂದ್ರ ಚಹಾಲ್, ಮಿಚೆಲ್ ಸ್ಟಾರ್ಕ್‌ ಮತ್ತು ಶಿವಂ ದುಬೆ ಅವರಂತಹ ಮ್ಯಾಚ್ ವಿನ್ನರ್‌ ಗಳಿಗೆ ಫ್ರಾಂಚೈಸಿಯನ್ನು ತೊರೆಯಲು ಅವಕಾಶ ಮಾಡಿಕೊಟ್ಟದ್ದು ಈ ಸೋಲಿಗೆ ಕಾರಣವಾಗಿದೆ ಎಂದು ತಿಳಿಸಿದ್ದಾರೆ. ಈ ಹಿಂದೆ ಕೊಹ್ಲಿ ವರ್ಷಗಳ ಕಾಲ RCB ಯ ನಾಯಕರಾಗಿದ್ದರು. ಹರಾಜು ಪ್ರಕ್ರಿಯೆಯಲ್ಲಿ ತಮ್ಮ ಅಭಿಪ್ರಾಯವನ್ನು ತಿಳಿಸುವ ಆಯ್ಕೆ ಇದ್ದರೂ ಕೊಹ್ಲಿಯವರು ಹರಾಜು ಪ್ರಕ್ರಿಯೆಯಲ್ಲಿ ಉತ್ತಮ ಬೋಲರ್ಗಳನ್ನ ಆಯ್ಕೆ ಮಾಡಲಿಲ್ಲ. ತಂಡವು…

Read More

ಮಂಡ್ಯ: ಮಂಡ್ಯದಲ್ಲಿ ನಡೆದ ಸಮಾವೇಶದಲ್ಲಿ ಮಾತನಾಡಿದ ನಿಖಿಲ್ ಕುಮಾರಸ್ವಾಮಿ, “ಮಂಡ್ಯದ ಜನರ ಋಣ ತೀರಿಸುವ ಕೆಲಸ ಮಾಡುತ್ತೇವೆ. ಯಾವುದೇ ಭಿನ್ನಾಭಿಪ್ರಾಯಕ್ಕೆ ಅವಕಾಶ ಕೊಡುವುದಿಲ್ಲ. ಕಾವೇರಿ ಸಮಸ್ಯೆಯನ್ನು ಕುಮಾರಸ್ವಾಮಿ ಬಗೆಹರಿಸಲಿದ್ದಾರೆ” ಎಂದರು. “ನರೇಂದ್ರ ಮೋದಿಯವರನ್ನು ಮತ್ತೆ ಪ್ರಧಾನಿ ಮಾಡಲಿಕ್ಕೆ ದೇವೇಗೌಡರು ಕೈ ಜೋಡಿಸಿದ್ದಾರೆ, ಮಂಡ್ಯದ ಜನರ ಋಣ ತೀರಿಸುವ ಕೆಲಸವನ್ನು ಕುಮಾರಸ್ವಾಮಿ ಮಾಡಲಿದ್ದಾರೆ” ಎಂದರು. ಇನ್ನೂ, ಲೋಕಸಭಾ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿಯಾಗಿ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಇಂದು ನಾಮಪತ್ರ ಸಲ್ಲಿಕೆ ಮಾಡಿದರು. ಈ ಸಂದರ್ಭದಲ್ಲಿ ಬಿಜೆಪಿ ಅಭ್ಯರ್ಥಿ ಯದುವೀರ್ ಒಡೆಯರ್ , ಮಾಜಿ ಸಿಎಂ ಯಡಿಯೂರಪ್ಪ, ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಮೊದಲಾದವರಿದ್ದರು.ಮಂಡ್ಯ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಜಿಲ್ಲಾಧಿಕಾರಿ ಡಾ. ಕುಮಾರ್ ಅವರಿಗೆ ನಾಮಪತ್ರ ಸಲ್ಲಿಕೆ ಮಾಡಿದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

Read More

ತೆಲಂಗಾಣ: ನೀರು ಕುಡಿಯಲು ಹೋಗಿ 30 ಕೋತಿಗಳು ಟ್ಯಾಂಕ್ ಗೆ ಬಿದ್ದು ಸಾವನ್ನಪ್ಪಿರುವ ಘಟನೆ ನಲ್ಗೊಂಡದಲ್ಲಿ ನಡೆದಿದೆ. ವರದಿಗಳ ಪ್ರಕಾರ, ನಂದಿಕೊಂಡ ಪುರಸಭೆ ವ್ಯಾಪ್ತಿಯ ನಾಗಾರ್ಜುನ ಸಾಗರ ಬಳಿಯ ನೀರಿನ ಟ್ಯಾಂಕ್ ನಲ್ಲಿ ಈ ಘಟನೆ ನಡೆದಿದೆ. ಬಿಸಿಲಿನ ತಾಪದಿಂದ ಮಂಗಗಳು ನೀರಿಗಾಗಿ ಲೋಹದ ಹಾಳೆಗಳ ಮೂಲಕ ಟ್ಯಾಂಕ್ಗೆ ನುಗ್ಗಿರಬಹುದು ಆದರೆ ಹೊರಬರಲು ಸಾಧ್ಯವಾಗದೆ ನೀರಿನಲ್ಲಿ ಮುಳುಗಿ ಸಾವನ್ನಪ್ಪಿರಬಹುದು ಎಂದು ಅಧಿಕಾರಿಗಳು ಶಂಕಿಸಿದ್ದಾರೆ. ಮೂವತ್ತು ಕೋತಿಗಳು ಸಾವನ್ನಪ್ಪಿದ್ದರು ಅದೇ ನೀರನ್ನು ಜನರು ಹತ್ತು ದಿನಗಳ ಕಾಲ ಕುಡಿದ್ದಿದ್ದರು. ಅದೇ ನೀರನ್ನು ಸೇವಿಸಿದ್ದರಿಂದ ಜನರ ಆರೋಗ್ಯದ ಮೇಲೆ ಪರಿಣಾಮ ಬೀರುತ್ತದೆ ಎಂದು ಆತಂಕ ವ್ಯಕ್ತಪಡಿಸಿದರು. ನೀರಿನ ಟ್ಯಾಂಕ್ ಬಗ್ಗೆ ನಿರ್ಲಕ್ಷ್ಯ ವಹಿಸಿರುವ ಪುರಸಭೆ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು ವಿಷಯ ತಿಳಿದ ನಂದಿಕೊಂಡ ಪುರಸಭೆ ಸಿಬ್ಬಂದಿ ಕ್ಷಿಪ್ರ ಕಾರ್ಯಾಚರಣೆ ನಡೆಸಿ ನೀರಿನ ಟ್ಯಾಂಕ್ನಿಂದ ಮಂಗಗಳ ಮೃತದೇಹಗಳನ್ನು ಹೊರತೆಗೆದಿದ್ದಾರೆ. ಕೋತಿಗಳು ಬಿದ್ದ ಘಟನೆಗೆ ಪ್ರತಿಕ್ರಿಯಿಸಿದ ಅಧೀಕ್ಷಕ ಎಂಜಿನಿಯರ್ ನಾಗೇಶ್ವರರಾವ್, ಕೇವಲ 50…

Read More

ವಿಜಯಪುರ: ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ಲಚ್ಯಾಣ ಗ್ರಾಮದಲ್ಲಿ ಕೊಳವೆ ಬಾವಿಗೆ ಬಿದ್ದಿದ್ದ 2 ವರ್ಷದ ಮಗು ಸಾತ್ವಿಕ್​ನನ್ನು ಜೀವಂತವಾಗಿ ಹೊರ ತೆಗೆಯುವಲ್ಲಿ ರಕ್ಷಣಾ ಸಿಬ್ಬಂದಿ ಕೊನೆಗೂ ಯಶಸ್ವಿಯಾಗಿದ್ದಾರೆ. ಲಕ್ಷಾಂತರ ಜನರ ಕೊನೆಗೂ ಫಲಿಸಿದೆ. ಸತತ 20 ಗಂಟೆಗಳಿಗೂ ಹೆಚ್ಚು ಕಾಲ ನಡೆದ ಕಾರ್ಯಾಚರಣೆಯ ಬಳಿಕ ಮಗುವನ್ನು ರಕ್ಷಣೆ ಮಾಡಲಾಗಿದೆ. ಎನ್​ಡಿಆರ್​ಎಫ್​ ತಂಡ ಸಿಬ್ಬಂದಿ ರಕ್ಷಣಾ ಕಾರ್ಯಾಚರಣೆ ನಡೆಸಿದರು. ಇವರಿಗೆ ಬೆಳಗಾವಿಯಿಂದ ಬಂದಿದ್ದ ಶ್ರೀಶೈಲ್ ಚೌಗಲಾ ನೇತೃತ್ವದ ರಾಜ್ಯ ವಿಪತ್ತು ನಿರ್ವಹಣಾ ತಂಡ (ಎಸ್​ಡಿಆರ್​ಎಫ್), ಸ್ಥಳೀಯ ಪೊಲೀಸರು, ಅಗ್ನಿ ಶಾಮಕ ದಳ ಸಿಬ್ಬಂದಿ ಸಾಥ್ ನೀಡಿದರು. ನಿರಂತರ ಕಾರ್ಯಾಚರಣೆ ನಡೆಸಿ ಮಗು ಸಾತ್ವಿಕ್ ​​​ನನ್ನು ರಕ್ಷಿಸಿದ ಸಿಬ್ಬಂದಿಯ ಬಗ್ಗೆ ಇದೀಗ ಎಲ್ಲೆಡೆ ಮೆಚ್ಚುಗೆಯ ಮಹಾಪೂರವೇ ವ್ಯಕ್ತವಾಗುತ್ತಿದೆ. ರಕ್ಷಣಾ ಕಾರ್ಯಾಚರಣೆ ಅಂತಿಮ ಹಂತ ತಲುಪುತ್ತಿದ್ದಂತೆಯೇ ಆಂಬುಲೆನ್ಸ್​ ಸಿದ್ಧವಾಗಿ ಇರಿಸಲಾಗಿತ್ತು. ಮಗುವನ್ನು ಕೊಳವೆ ಬಾವಿಯಿಂದ ಹೊರ ತೆಗೆಯುತ್ತಿದ್ದಂತೆಯೇ ಪ್ರಾಥಮಿಕ ಚಿಕಿತ್ಸೆ ನೀಡಿ ಆಂಬುಲೆನ್ಸ್​ ನಲ್ಲಿ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಘಟನೆಯ ಹಿನ್ನಲೆ: ಶಂಕರಪ್ಪ ಮುಜಗೊಂಡ ಎಂಬವರು ಮಂಗಳವಾರ…

Read More