Author: admin

ಮಾಜಿ ಪ್ರಧಾನಿ ರಾಜೀವ್ ಗಾಂಧಿ ಹತ್ಯೆ ಪ್ರಕರಣದಲ್ಲಿ ಅಪರಾಧಿಗಳಾಗಿರುವ ಮೂವರು, ಬೆಳಗ್ಗೆ ಕೊಲಂಬೊಗೆ ತೆರಳಿದ್ದಾರೆ. ಮುರುಗನ್, ರಾಬರ್ಟ್ ಪಯಸ್ ಮತ್ತು ಜಯಕುಮಾರ್ ಅವರು ಜೈಲಿನಲ್ಲಿದ್ದಾಗ “ಸನ್ನಡತೆಯ ನಡವಳಿಕೆ” ತೋರಿಸಿದ್ದು ಮತ್ತು ತಮಿಳುನಾಡು ಸರ್ಕಾರವು ಅವರನ್ನು ಬಿಡುಗಡೆ ಮಾಡಲು ಶಿಫಾರಸು ಮಾಡಿರುವುದನ್ನು ಗಮನಿಸಿದ ಸುಪ್ರೀಂ ಕೋರ್ಟ್, ನವೆಂಬರ್ 2022 ರಲ್ಲಿ ಬಿಡುಗಡೆ ಮಾಡಿದ ಆರು ಮಂದಿಯಲ್ಲಿ ಈ ಮೂವರು ಸೇರಿದ್ದಾರೆ. ಜೈಲಿನಿಂದ ಬಿಡುಗಡೆಯಾದ ನಂತರ ಅವರನ್ನು ಬಂಧಿಸಲಾಗಿದ್ದ ತಿರುಚಿರಾಪಳ್ಳಿಯ ವಿಶೇಷ ಶಿಬಿರದಿಂದ ಇಂದು ಮುಂಜಾನೆ ಪೊಲೀಸ್ ಅಧಿಕಾರಿಗಳ ತಂಡ ಚೆನ್ನೈ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಮೂವರನ್ನು ಕರೆದೊಯ್ಯಲಾಯಿತು. ಇತ್ತೀಚೆಗೆ ದ್ವೀಪ ರಾಷ್ಟ್ರದಿಂದ ಪಾಸ್‌ ಪೋರ್ಟ್‌ಗಳನ್ನು ನೀಡಲಾಯಿತು. ಆರು ಮಂದಿಯಲ್ಲಿ ಒಬ್ಬರು – ಮುರುಗನ್ – ಸುಪ್ರೀಂ ಕೋರ್ಟ್‌ನ ಆದೇಶದ ಮೇರೆಗೆ 2022 ರಲ್ಲಿ ಬಿಡುಗಡೆಯಾದ ಆರು ಮಂದಿಯಲ್ಲಿ, ಒಬ್ಬ ಭಾರತೀಯ ಪ್ರಜೆಯಾದ ನಳಿನಿ ಅವರನ್ನು ವಿವಾಹವಾಗಿದ್ದಾರೆ. ನಳಿನಿ ತನ್ನ ಪತಿಯೊಂದಿಗೆ ವಿಮಾನ ನಿಲ್ದಾಣಕ್ಕೆ ಹೋಗಿದ್ದರು. ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿಯವರ ಮಧ್ಯಸ್ಥಿಕೆಯು ನಳಿನಿಯ…

Read More

ತುಮಕೂರು: ಕಾಂಗ್ರೆಸ್ ಅಭ್ಯರ್ಥಿ ಮುದ್ದಹನುಮೇಗೌಡ ಅವರಿಂದು, ಎತ್ತಿನ ಗಾಡಿ ಮೆರವಣಿಗೆಯಲ್ಲಿ ಬಂದು ನಾಮಪತ್ರ ಸಲ್ಲಿಸಿದರು. ಪ್ರಾರಂಭಿಕವಾಗಿ ನಗರದ ಟೌನ್ ಹಾಲ್ ವೃತ್ತದ ಬಳಿ ಜಮಾಯಿಸಿದ್ದ ನೂರಾರು ಕಾಂಗ್ರೆಸ್ ಕಾರ್ಯಕರ್ತರು ಈ ಮೆರವಣಿಗೆಗೆ ಸಾಕ್ಷಿಯಾದರು. ಮೊದಲಿಗೆ ಸ್ವಲ್ಪ ದೂರ ಎತ್ತಿನಗಾಡಿಯಲ್ಲಿ ಸಚಿವರಾದ ಪರಮೇಶ್ವರ್ ಹಾಗೂ ಕೆ.ಎನ್. ರಾಜಣ್ಣ ಹಾಗೂ ಅಭ್ಯರ್ಥಿ ಮುದ್ದಹನುಮೇಗೌಡ ಸಾಗಿದರು. ಬಿಜಿಎಸ್ ಸರ್ಕಲ್ ನಿಂದ ಡಿಸಿ ಕಚೇರಿವರೆಗೆ  ಬೃಹತ್ ರ್ಯಾಲಿ ನಡೆಸಲಾಯಿತು. ನಂತರ ಜಿಲ್ಲಾಧಿಕಾರಿ ಹಾಗೂ ಚುನಾವಣಾ ಅಧಿಕಾರಿಯೂ ಆಗಿರುವ ಶುಭಾ ಕಲ್ಯಾಣ್ ಗೆ ಉಮೇದುವಾರಿಕೆ ಸಲ್ಲಿಸಿದರು. ಸಚಿವರಾದ ಜಿ.ಪರಮೇಶ್ವರ್, ಕೆ.ಎನ್. ರಾಜಣ್ಣ, ಗುಬ್ಬಿ ಶಾಸಕ ಎಸ್.ಆರ್ ಶ್ರೀನಿವಾಸ್, ಮುದ್ದಹನುಮೇಗೌಡರಿಗೆ ಸಾಥ್ ನೀಡಿದರು. ಮೆರವಣಿಗೆಯಲ್ಲಿ ಕಲಾತಂಡಗಳು ಗಮನ ಸೆಳೆದವು. ಡೊಳ್ಳುಕುಣಿತ, ಗಾರುಡಿ ಗೊಂಬೆ ಕುಣಿತ, ನಾಸಿಕ್ ಡೋಲ್, ವೀರಗಾಸೆ ನೃತ್ಯ ಪ್ರದರ್ಶನ ವ್ಯವಸ್ಥೆ ಮಾಡಲಾಗಿತ್ತು. ಪಿರಮಿಡ್ ರಚಿಸಿ ಕಾಂಗ್ರೆಸ್ ಬಾವುಟವನ್ನು ಡೊಳ್ಳು ಕುಣಿತ ತಂಡ ಹಾರಿಸಿತು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು…

Read More

ಹುಣಸೆಹಣ್ಣಿನಲ್ಲಿವೆ ಹಲವಾರು ಆರೋಗ್ಯ ಪ್ರಯೋಜನಗಳು: ಹುಣಸೆಹಣ್ಣು ನಿಮ್ಮ ಆರೋಗ್ಯಕ್ಕೆ ತುಂಬಾ ಪ್ರಯೋಜನಕಾರಿಯಾಗಿದೆ. ಹುಣಸೆಹಣ್ಣು ದೇಹವನ್ನು ಅನೇಕ ರೋಗಗಳಿಂದ ರಕ್ಷಿಸುತ್ತದೆ. ಇದರಲ್ಲಿ ವಿಟಮಿನ್ ಸಿ ಸಮೃದ್ಧವಾಗಿದೆ. ಹುಣಸೆ ಹಣ್ಣಿನ ರಸವನ್ನು ಸೇವಿಸುವುದರಿಂದ ರಕ್ತಹೀನತೆ ನಿವಾರಣೆಯಾಗುತ್ತದೆ. ರಕ್ತದೊತ್ತಡವನ್ನು ನಿಯಂತ್ರಣದಲ್ಲಿಡಲು ಹುಣಸೆ ಹಣ್ಣು ಸಹಾಯಕ. ಹೃದಯ ಮತ್ತು ಯಕೃತ್ತಿನ ಸಮಸ್ಯೆಗಳನ್ನು ತಡೆಯುತ್ತದೆ. ಜೀರ್ಣಕ್ರಿಯೆ ಸಮಸ್ಯೆಗಳಿಂದ ಮುಕ್ತಿ ಸಿಗುತ್ತದೆ. ಮಲಬದ್ಧತೆ, ಶೀತ, ಜ್ವರ ಮತ್ತು ವಾಕರಿಕೆ ಮುಂತಾದ ಕಾಯಿಲೆಗಳಿಗೆ ಹುಣಸೆಹಣ್ಣನ್ನು ಹೆಚ್ಚಾಗಿ ಬಳಸಲಾಗುತ್ತದೆ. ಸೀತಾಫಲ ಮಾತ್ರವಲ್ಲ ಅದರ ಎಲೆಯು ಆರೋಗ್ಯಕ್ಕೆ ತುಂಬಾನೇ ಒಳ್ಳೆಯದು: ಸೀತಾಫಲ ಮಾತ್ರವಲ್ಲದೆ ಅದರ ಎಲೆಗಳು ಸಹ ಹಲವಾರು ಆರೋಗ್ಯ ಪ್ರಯೋಜನಗಳನ್ನು ಹೊಂದಿದೆ. ವಿಶೇಷವಾಗಿ ಆಯುರ್ವೇದದಲ್ಲಿ ಸೀತಾಫಲ ಎಲೆಗಳನ್ನು ತುಂಬಾ ಉಪಯುಕ್ತವೆಂದು ಪರಿಗಣಿಸಲಾಗಿದೆ. ಸೀತಾಫಲದ ಎಲೆಗಳನ್ನು ಜ್ಯೂಸ್, ಕಷಾಯ ಅಥವಾ ಚಹಾದ ರೂಪದಲ್ಲಿ ನೀವು ಸೇವಿಸಬಹುದು. ಇದರಿಂದ ಮಧುಮೇಹ ಕಾಯಿಲೆಗೆ ಪರಿಹಾರವನ್ನು ಸಿಗುತ್ತದೆ. ಅತಿಸಾರ ಸಮಸ್ಯೆ ಕಡಿಮೆ ಆಗುತ್ತದೆ. ಚರ್ಮಕ್ಕೆ ಪ್ರಯೋಜನಕಾರಿ. ಕ್ಯಾನ್ಸರ್ ಕಾಯಿಲೆಯಿಂದ ರಕ್ಷಣೆ ನೀಡುತ್ತದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ…

Read More

ಸ್ಯಾಂಡಲ್‌ ವುಡ್‌ ನಲ್ಲಿ ತನ್ನ ಹಾಸ್ಯದಿಂದಲೇ ಅಪಾರ ಅಭಿಮಾನಿಗಳನ್ನು ಹೊಂದಿದ್ದ ಬುಲೆಟ್‌ ಪ್ರಕಾಶ್‌ ಮಗ ರಕ್ಷಕ್‌ ಇದೇ ಮೊದಲ ಬಾರಿಗೆ ಸಿನಿಮಾವೊಂದರಲ್ಲಿ ಕಾಣಿಸಿಕೊಳ್ಳಲಿದ್ದಾರೆ ಎಂದು ವರದಿ ತಿಳಿಸಿದೆ. ಬಿಗ್ ಬಾಸ್ ಸೀಸನ್ 10 ಸ್ಪರ್ಧಿ ರಕ್ಷಕ್‌ ಸೋಶಿಯಲ್‌ ಮೀಡಿಯಾದಲ್ಲಿ ಮಾತ್ರವಲ್ಲದೆ ಈಗ ಸಿನಿಮಾಗು ಎಂಟ್ರಿ ಕೊಡುತ್ತಿದ್ದಾರೆ. ಎಷ್ಟೇ ಟ್ರೋಲ್‌ ಮಾಡಿದರೂ, ತಾನು ಇರೋದೆ ಹೀಗೆ ಎನ್ನುವ ರಕ್ಷಕ್‌ ಬುಲೆಟ್‌ ಇದೀಗ ಚೊಚ್ಚಲ ಬಾರಿಗೆ ಸಿನಿರಂಗಕ್ಕೆ ಕಾಲಿಡಲಿದ್ದಾರೆ. ಬುಲೆಟ್‌ ಪ್ರಕಾಶ್‌ ಹುಟ್ಟುಹಬ್ಬದಂದು ರಕ್ಷಕ್‌ ತಮ್ಮ ಮೊದಲ ಸಿನಿಮಾದ ಪೋಸ್ಟರ್‌ ನ್ನು ರಿಲೀಸ್‌ ಮಾಡಿದ್ದಾರೆ. “ಎಲ್ಲಾ ‌ನನ್ನ‌ ಆತ್ಮೀಯರೆ , ಇಂದು‌ ನನ್ನ ಪೂಜ್ಯ ತಂದೆ ದಿವಂಗತ “ಬುಲೆಟ್ ಪ್ರಕಾಶ್” ರವರ 47ನೇ ಜನ್ಮದಿನ. ಇಂದಿನ ವಿಶೇಷವೇನೆಂದರೆ, ನಾನು ನಾಯಕ ನಟನಾಗಿ ನಟಿಸುತ್ತಿರುವ, ನನ್ನ ಚೊಚ್ಚಲ ಚಿತ್ರದ ಪೋಸ್ಟರ್ ಬಿಡುಗಡೆ ಮಾಡುತ್ತಿರುವುದು ನಿಜಕ್ಕೂ ನನಗೆ ಸಂತಸ ತಂದಿದೆ. ನನ್ನ ತಂದೆಯ ಆಶೀರ್ವಾದದೊಂದಿಗೆ ನಿಮ್ಮೆಲ್ಲರ ಆಶೀರ್ವಾದ ಕೂಡ ಸದಾ ನನ್ನ ಮೇಲಿರಲಿ ಎಂದು ಬಯಸುತ್ತೇನೆ. ನನಗೂ…

Read More

ತುಮಕೂರು: ತುಮಕೂರು ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸ್ಪರ್ಧೆ ಮಾಡಿ, ಠೇವಣಿ ಕಳೆದುಕೊಳ್ಳೋ ಬದಲು ಕಾಂಗ್ರೆಸ್ ಪಕ್ಷವು ಅಭ್ಯರ್ಥಿಯನ್ನ ವಾಪಾಸ್ ತೆಗೆದುಕೊಳ್ಳಬೇಕು ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ತಿಳಿಸಿದರು. ತುಮಕೂರಿನಲ್ಲಿ ಮಾತನಾಡಿದ ಅವರು, “ನಾನು ಇಂತಹ ಹತ್ತಾರು ಸಭೆಗಳಲ್ಲಿ ಭಾಗವಹಿಸಿದ್ದೇನೆ ಆದ್ರೆ ಈ ಕಾರ್ಯಕ್ರಮ ನೋಡಿದ್ರೆ ಆಶ್ಚರ್ಯವಾಗ್ತಿದೆ ಎಂದರು. ಸಾವಿರಾರು ಸಂಖ್ಯೆಯಲ್ಲಿ ನೀವೆಲ್ಲರೂ ಸೇರಿದ್ದೀರಿ. ಈ ಜನಸ್ತೋಮವನ್ನ ನೋಡಿದ್ರೆ ಕಾಂಗ್ರೆಸ್ ನವರು ತಮ್ಮ ಅಭ್ಯರ್ಥಿಯನ್ನ ವಾಪಾಸ್ ತೆಗೆದುಕೊಳ್ಳಬೇಕು ಅನ್ನಿಸುತ್ತೆ” ಎಂದರು. “ಸಹಸ್ರ ಸಂಖ್ಯೆಯಲ್ಲಿ ನೀವೆಲ್ಲಾ ಬಂದಿದ್ದೀರ. ನಾನು ಕಾಂಗ್ರೆಸ್ ಸರ್ಕಾರಕ್ಕೆ ಕೇಳೋಕೆ ಬಯಸುತ್ತೀನಿ. ಕಿಸಾನ್ ಸಮ್ಮಾನ್ ಯೋಜನೆಯಲ್ಲಿ ಕೇಂದ್ರ 6 ಸಾವಿರ ಕೊಟ್ರೆ. ನಾನು 4 ಸಾವಿರ ರೂಪಾಯಿ ಕೊಡ್ತಿದ್ದೆ. ಅದನ್ನ ನೀವ್ಯಾಕೆ ನಿಲ್ಲಿಸಿದ್ರಿ ಉತ್ತರ ಕೊಡ್ತೀರಾ” ಎಂದರು. “ಭಾಗ್ಯಲಕ್ಷ್ಮಿ ಯೋಜನೆಯನ್ನ ಯಾಕೆ ನಿಲ್ಲಿಸಿದ್ರಿ ಉತ್ತರ ಕೊಡ್ತೀರಾ. ಜನಪರ ಯೋಜನೆಗಳನ್ನ ನಿಲ್ಲಿಸಿರೋದನ್ನ ನೋಡಿದ್ರೆ ಸರ್ಕಾರ ಪಾಪರ್ ಆಗಿರೋದು ಗೊತ್ತಾಗ್ತಿದೆ. ಈ ಸರ್ಕಾರಕ್ಕೆ ಆಡಳಿತ ನಡೆಸೋ ನೈತಿಕತೆ ಇಲ್ಲ” ಎಂದರು. “ವಿ.…

Read More

ಲೋಕಸಭಾ ಚುನಾವಣಾ ದಿನದಿಂದ ದಿನಕ್ಕೆ ರಂಗೇರುತ್ತಿದ್ದು, ರಾಜಕೀಯ ಅನಿವಾರ್ಯ ನನಗೆ ಯಾವತ್ತೂ ಇರಲಿಲ್ಲ. ಇವತ್ತೂ ಇಲ್ಲ. ನಾನು ಈ ಲೋಕಸಭಾ ಚುನಾವಣೆಯಲ್ಲಿ ನಾನು ಸ್ಪರ್ಧೆ ಮಾಡುತ್ತಿಲ್ಲ. ಆದರೆ, ಮಂಡ್ಯವನ್ನು ನಾನು ಯಾವುದೇ ಕಾರಣಕ್ಕೂ ಬಿಟ್ಟು ಹೋಗುವುದಿಲ್ಲ ಎಂದು ಸಂಸದೆ ಸುಮಲತಾ ಅಂಬರೀಶ್ ಘೋಷಣೆ ಮಾಡಿದ್ದಾರೆ. ಮಂಡ್ಯದ ಕಾಳಿಕಾಂಬ ದೇವಸ್ಥಾನದ ಆವರಣದಲ್ಲಿ ಮಾತನಾಡಿದ್ದಾರೆ. ಎಂಪಿ ಚುನಾವಣೆ ಹುಡುಗಾಟವಲ್ಲ. ನಾನೇನೋ ದ್ವೇಷ ಅಥವಾ ಹಠಕ್ಕೆ ಸ್ಪರ್ಧೆ ಮಾಡಬೇಕು ಎಂದರೆ ನಾನು ಈಗಲೂ ಸ್ಪರ್ಧೆ ಮಾಡಬಹುದು. ಆದರೆ, ಇದರಿಂದ ಯಾರಿಗೆ ನಷ್ಟವಾಗುತ್ತದೆ ಎಂಬುದನ್ನೂ ಕೂಡ ಮುಲಾಜು ನೋಡಬೇಕು. ನಾನು ಸಂಸದೆ ಆಗಬೇಕೆಂದಿದ್ದರೆ ಬಿಜೆಪಿಯ ಗೆಲ್ಲುವ ಹಲವು ಕ್ಷೇತ್ರಗಳಲ್ಲಿ ಸ್ಪರ್ಧೆ ಮಾಡಬಹುದಿತ್ತು. ನಾನು ಟಿಪಿಕಲ್ ರಾಜಕಾರಣಿಯಲ್ಲ. ಆದರೆ, ನನಗೆ ರಾಜಕಾರಣ ಏನಿದ್ದರೂ ಅದು ಮಂಡ್ಯದಲ್ಲಿ ಮಾತ್ರ. ಇಲ್ಲದಿದ್ದರೆ ನನಗೆ ರಾಜಕೀಯವೇ ಬೇಡ. ಕಾರಣ ಅಂಬರೀಶ್ ಅವರ ಅಭಿಮಾನಿಗಳಿರುವ ಮಂಡ್ಯವನ್ನು ಬಿಟ್ಟು ನಾನೆಲ್ಲೂ ಹೋಗುವುದಿಲ್ಲ. 4 ಸಾವಿರ ಕೋಟಿ ರೂ. ಅನುದಾನವನ್ನು ಮಂಡ್ಯ ಜಿಲ್ಲೆಯ ಅಭಿವೃದ್ಧಿಗೆ ಬಿಜೆಪಿ ಸರ್ಕಾರ…

Read More

ಎಐಸಿಸಿ ಮಾಜಿ ಅಧ್ಯಕ್ಷ, ಕಾಂಗ್ರೆಸ್‌ ನ ಯುವರಾಜ ರಾಹುಲ್ ಗಾಂಧಿ ಕೇರಳದ ವಯನಾಡ್‌ ನಿಂದ ಎರಡನೇ ಬಾರಿಗೆ ಸ್ಪರ್ಧೆಗಿಳಿದಿದ್ದಾರೆ. ಕಳೆದ ಬಾರಿ ನಾಲ್ಕು ಲಕ್ಷಕ್ಕೂ ಅಧಿಕ ಮತಗಳಿಂದ ಗೆಲುವು ಸಾಧಿಸಿದ್ದ ಅವರು ಈಗ ಮತ್ತೊಮ್ಮೆ ಅದೃಷ್ಟ ಪರೀಕ್ಷೆಗೆ ಇಳಿದು ನಾಮಪತ್ರ ಸಲ್ಲಿಸಿದ್ದಾರೆ. ನಾಮಪತ್ರ ಸಲ್ಲಿಕೆಗೂ ಮುನ್ನ ಕಾರ್ಯಕರ್ತರು, ಬೆಂಬಲಿಗರ ಸಮೂಹದಲ್ಲಿ ವಯನಾಡಿನ ಕಲ್ಪೆಟ್ಟಾದಲ್ಲಿ ಬೃಹತ್ ರೋಡ್ ಶೋ ನಡೆಸಿದರು. ಎಐಸಿಸಿ ಪ್ರಧಾನ ಕಾರ್ಯದರ್ಶಿಗಳಾದ ಪ್ರಿಯಾಂಕಾ ಗಾಂಧಿ, ಕೆಸಿ ವೇಣುಗೋಪಾಲ್, ಕೇರಳದ ವಿರೋಧ ಪಕ್ಷದ ನಾಯಕ ವಿಡಿ ಸತೀಶನ್, ಕೇರಳ ಪ್ರದೇಶ ಕಾಂಗ್ರೆಸ್ ಸಮಿತಿ ಹಂಗಾಮಿ ಅಧ್ಯಕ್ಷ ಎಂಎಂ ಹಾಸನ್, ಪಕ್ಷದ ಹಿರಿಯ ನಾಯಕ ರಮೇಶ್ ಚೆನ್ನಿತ್ತಲ ಸೇರಿದಂತೆ ಇತರ ರಾಜ್ಯ ನಾಯಕರು ಸಾಥ್ ನೀಡಿದರು. ಬೃಹತ್ ರೋಡ್ ಶೋ ಉದ್ದೇಶಿಸಿ ಮಾತನಾಡಿದ ಅವರು ಸಂಸತ್ ನಲ್ಲಿ ವಯನಾಡ್ ಪ್ರತಿನಿಧಿಸುವುದು ಗೌರವ ತಂದಿದೆ. ನಾನು ಚುನಾಯಿತ ಪ್ರತಿನಿಧಿಯಲ್ಲ. ನಾನು ನಿಮ್ಮ ಕುಟುಂಬ ಸದಸ್ಯನಂತೆ. ನನ್ನ ಸಹೋದರಿ ಪ್ರಿಯಾಂಕಾ ಗಾಂಧಿಯನ್ನು ಹೇಗೆ ನೋಡುತ್ತೇನೆ ಹಾಗೇಯೇ…

Read More

ಲೋಕಸಭೆ ಚುನಾವಣೆಗೆ ಸಿಪಿಎಂ ಪ್ರಣಾಳಿಕೆ ಇಂದು ಬಿಡುಗಡೆಯಾಗಲಿದೆ. ಸಿಪಿಐಎಂ ಪ್ರಧಾನ ಕಾರ್ಯದರ್ಶಿ ಸೀತಾರಾಂ ಯೆಚೂರಿ ಮತ್ತು ಪಾಲಿಟ್ ಬ್ಯೂರೋ ಸದಸ್ಯರು ಪ್ರಣಾಳಿಕೆಯನ್ನು ಬಿಡುಗಡೆ ಮಾಡಲಿದ್ದಾರೆ. ಮಧ್ಯಾಹ್ನ 3.30ಕ್ಕೆ ಎಕೆಜಿ ಭವನದಲ್ಲಿ ಪ್ರಣಾಳಿಕೆ ಬಿಡುಗಡೆ ಮಾಡಲಾಗುವುದು. ಪ್ರಣಾಳಿಕೆಯಲ್ಲಿ ಕೇರಳ ಮಾದರಿಯಲ್ಲಿ ಸಮಾಜ ಕಲ್ಯಾಣ ಯೋಜನೆಗಳಿಗೆ ಆದ್ಯತೆ ನೀಡಲಾಗುವುದು. ಆರೋಗ್ಯ ಮತ್ತು ಶಿಕ್ಷಣ ಕ್ಷೇತ್ರಗಳಿಗೆ ಒತ್ತು ನೀಡುವುದಾಗಿ ಪ್ರಣಾಳಿಕೆ ಭರವಸೆ ನೀಡಿದೆ. ಜಾತ್ಯಾತೀತ ಸರ್ಕಾರವನ್ನು ಆಯ್ಕೆ ಮಾಡುವ ರಾಜಕೀಯ ಘೋಷಣೆಯನ್ನು ಎತ್ತುವ ಪ್ರಣಾಳಿಕೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

Read More

ಕೊಡಗು-ಮೈಸೂರು ಕ್ಷೇತ್ರದಿಂದ 2 ಅವಧಿಗೆ ಸಂಸದರಾಗಿ ಆಯ್ಕೆಯಾಗಿ ಸಾಕಷ್ಟು ಅಭಿವೃದ್ಧಿ ಕಾರ್ಯಗಳನ್ನು ಮಾಡಿದ ಪ್ರತಾಪ್ ಸಿಂಹ ಅವರ ಈ ಸಲದ ಟಿಕೆಟ್ ಯದುವೀರ್ ಅವರ ಪಾಲಾಗಿದೆ. ಆದರೆ ಯುವ ನೇತಾರ, ನಾಯಕನಿಗೆ ಬಿಜೆಪಿ ಯಾಕೆ ಹೀಗೆ ಮಾಡಿತು ಎಂದು ಎಲ್ಲರೂ ಬೇಸರ ಪಟ್ಟುಕೊಂಡಿದ್ದರು. ಅಲ್ಲದೆ ಟಿಕೆಟ್ ತಪ್ಪಿದ್ಯಾಕೆ, ತಪ್ಪಿಸಿದ್ಯಾರು ಎಂಬುದೇ ಯಕ್ಷ ಪ್ರಶ್ನೆ ಆಗಿತ್ತು. ಇದೀಗ ಈ ಬಗ್ಗೆ ಕಾಂಗ್ರೆಸ್ ಸಚಿವ ವೆಂಕಟೇಶ್ ಅವರು ಸ್ಪೋಟಕ ಮಾಹಿತಿ ಬಿಚ್ಚಿಟ್ಟಿದ್ದಾರೆ. ಹೌದು, ಮೈಸೂರಿನಲ್ಲಿ ಆಯೋಜಿಸಿದ್ದ ಕಾಂಗ್ರೆಸ್ ಸಮಾವೇಶದಲ್ಲಿ ಮಾತನಾಡಿದ ಸಚಿವ ಕೆ. ವೆಂಕಟೇಶ್, ಪ್ರತಾಪ್ ಸಿಂಹ ಒಕ್ಕಲಿಗ. ಒಕ್ಕಲಿಗರಿಗೆ ಒಕ್ಕಲಿಗರೇ ಮುಳುವಾಗಿದ್ದಾರೆ. ನಮ್ಮ ಸಮಾಜದ ಪ್ರತಾಪ್ ಸಿಂಹಗೆ ಬಿಜೆಪಿ ಟಿಕೆಟ್ ತಪ್ಪಿಸಿ ಯದುವೀರ್ಗೆ ಟಿಕೆಟ್ ಕೊಟ್ಟಿದ್ದಾರೆ. ಮೊದಲು ಯದುವೀರ್ ಹೆಸರು ಇರಲೇ ಇಲ್ಲ. ಆದರೆ ದೇವೆಗೌಡರೇ ಮುಂದಾಳತ್ವ ವಹಿಸಿ, ಪ್ರತಾಪ್ ಸಿಂಹಗೆ ಟಿಕೆಟ್ ತಪ್ಪಿಸಿ ಯದುವೀರ್ ಅವರನ್ನ ನಿಲ್ಲಿಸಿದ್ದಾರೆ ಎಂದು ಆರೋಪ ಮಾಡಿದ್ದಾರೆ. ಅಲ್ಲದೆ ನಮಗ್ಯಾರಿಗೂ ಮೈಸೂರಲ್ಲಿ ಯದುವೀರ್ ಅವರು ರಾಜಕೀಯಕ್ಕೆ ಬರುತ್ತಾರೆ…

Read More

ತುಮಕೂರು: ನಗರದ ಶ್ರೀ ಸಿದ್ದಗಂಗಾ ಫಾರ್ಮಸಿ ಕಾಲೇಜು ಮತ್ತು ಪ್ರೈಮ್ ಸ್ಟೆಪ್ ಎಜುಕೇಶನ್, ಗುರ್ಗಾಂವ್ ಸಹಭಾಗಿತ್ವದೊಂದಿಗೆ ಎರಡು ದಿನದ ‘ಉದ್ಯೋಗದ’ ಕಾರ್ಯಾಗಾರವನ್ನು ಆಯೋಜಿಸಲಾಗಿತ್ತು. ಈ ಕಾರ್ಯಾಗಾರದಲ್ಲಿ ಹಿರಿಯ ತರಬೇತುದಾರರಾದ ಕುಮಾರಿ ಆಕಾಂಷಾ ಅವರು, ಅಂತಿಮ ವರ್ಷದ ಬಿ.ಫಾರ್ಮ್, ಎಂ.ಫಾರ್ಮ್ ಮತ್ತು ಫಾರ್ಮ.ಡಿ ವಿದ್ಯಾರ್ಥಿಗಳನ್ನು ತಮ್ಮ ಭಾಷಣದಲ್ಲಿ ಸಂವಹನ ಮತ್ತು ಪ್ರಸ್ತುತಿ ಕೌಶಲ್ಯಗಳು, ಆತ್ಮವಿಶ್ವಾಸ, ಸಂದರ್ಶನ ಕೌಶಲ್ಯಗಳು ಮತ್ತು ಗುಂಪು ಚರ್ಚೆಗಳ ಬಗ್ಗೆ ಸ್ಪೂರ್ತಿದಾಯಕ ಮಾತುಗಳ ಮೂಲಕ ಪ್ರಬುದ್ಧಗೊಳಿಸಿ ವಿದ್ಯಾರ್ಥಿಗಳನ್ನು ಉತ್ತೆಜಿಸಿದರು. ಡಾ.ಸುರೇಶ ವಿ. ಕುಲ್ಕರ್ಣಿ, ಪ್ರಾಂಶುಪಾಲರು ಕಾರ್ಯಾಗಾರದ ಉದ್ದೇಶವನ್ನು ತಿಳಿಸಿಕೊಟ್ಟರು. ಕಾಲೇಜಿನ ವಿದ್ಯಾರ್ಥಿಗಳು, ಮತ್ತು ಸಿಬ್ಬಂದಿ ವರ್ಗದವರು ಹಾಜರಿದ್ದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

Read More