Author: admin

ಲೋಕಸಭಾ ಚುನಾವಣೆ ಸಮೀಪಿಸುತ್ತಿದೆ, ರಾಜಕೀಯ ನಾಯಕರು ಪರಸ್ಪರರ ಮೇಲೆ ಕೆಸರೆರಚಾಟದಲ್ಲಿ ತೊಡಗಿದ್ದಾರೆ. ಈ ನಡುವೆ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ತಾವು ಸಂಸದೆ ಸುಮಲತಾ ಅಂಬರೀಶ್ ಅವರ ಸುದ್ದಿಗೆ ಹೋಗುವುದಿಲ್ಲ. ನಮಗೆ ಅವರ ಅವಶ್ಯಕತೆಯೂ ಇಲ್ಲ ಎಂದು ಹೇಳಿದ್ದಾರೆ. ವಿಷ ಹಾಕಿರುವ ಕುರಿತು ಮಾತನಾಡಿರುವುದು ಹೆಚ್‌.ಡಿ. ಕುಮಾರಸ್ವಾಮಿ ಅವರು. ಸುಮಲತ ಕುಂಬಳಕಾಯಿ ಕಳ್ಳ ಎಂದರೆ ಏಕೆ ಹೆಗಲು ಮುಟ್ಟಿ ನೋಡಿಕೊಳ್ಳಬೇಕು ಎಂದು ಪ್ರಶ್ನಿಸಿದ್ದಾರೆ. ಸುಮಲತಾ ಅವರು ಕುಮಾರಸ್ವಾಮಿ ಅವರು ನನಗೆ ವಿಷ ಹಾಕಿದ್ದರು ಎಂದಿದ್ದರು. ಯಾವ ವಿಷ ಎಂದು ಕುಮಾರಸ್ವಾಮಿರವರನ್ನು ಕೇಳಿದ್ದೆ. ಸುಮಲತಾ ಅವರ ಸುದ್ದಿಗೆ ನಾನು ಹಿಂದೆಂದೂ ಹೋಗಿಲ್ಲ, ಮುಂದೆಯೂ ಹೋಗುವುದು ಇಲ್ಲ ಎಂದರು. ಈ ಹಿಂದೆ ಕಾಂಗ್ರೆಸ್ ಪಕ್ಷ ಅಂಬರೀಶ್ ಅವರಿಗೆ ಏನೆಲ್ಲಾ ಕೊಟ್ಟಿದೆ ಎಂಬುದು ಎಲ್ಲರಿಗೂ ಗೊತ್ತಿದೆ. ಅಂಬರೀಶ್ ಅವರು ಸಾಯುವ ಮುನ್ನ ಏನು ಹೇಳಿದ್ದಾರು ಎಂಬುದು ಎಲ್ಲರಿಗೂ ಗೊತ್ತಿದೆ ಎಂದು ಡಿಕೆಶಿ ಹೇಳಿದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್…

Read More

ಬೆಳಗಾವಿ: ಜನರನ್ನು ಉದ್ದೇಶಿಸಿ ಮಾತನಾಡಿದ ಸತೀಶ್ ಜಾರಕಿಹೊಳಿ, ಕಾಂಗ್ರೆಸ್ ಗೆಲುವು ಹೆಚ್ಚಾಗಿ ಅಭಿವೃದ್ಧಿಯ ಮೇಲೆ ಅವಲಂಬಿತವಾಗಿದೆ. ಏಕೆಂದರೆ, ಪಕ್ಷವು ಎಂದಿಗೂ ಧರ್ಮ ಮತ್ತು ಜಾತಿ ಅಂಶಗಳ ಮೇಲೆ ಚುನಾವಣೆಗೆ ಹೋಗಲಿಲ್ಲ. ಚಿಕ್ಕೋಡಿ ಕ್ಷೇತ್ರದಲ್ಲಿ ಪ್ರಮುಖ ಲಿಂಗಾಯತ ಮತಗಳ ಆಧಾರದ ಮೇಲೆ ಪಕ್ಷಗಳ ಗೆಲುವು ಆಧರಿಸಿದೆ ಎಂಬ ಮಾಧ್ಯಮಗಳಲ್ಲಿನ ಊಹಾಪೋಹಗಳನ್ನು ನಿರಾಕರಿಸಿದ ಅವರು, ಕಾಂಗ್ರೆಸ್‌ ಗೆ ಲಿಂಗಾಯತರ ಬೆಂಬಲವಿದೆ ಮತ್ತು ಪಕ್ಷದಲ್ಲಿ ಹಲವಾರು ಪ್ರಮುಖ ಲಿಂಗಾಯತ ನಾಯಕರಿದ್ದಾರೆ. ಸಮಾಜದ ಎಲ್ಲಾ ವರ್ಗದ ಜನರ ಬೆಂಬಲದೊಂದಿಗೆ ಕಾಂಗ್ರೆಸ್ ಗೆಲ್ಲಲಿದೆ ಎಂದರು. ಸಮೀಕ್ಷೆಗಳ ಪ್ರಕಾರ, ಕಾಂಗ್ರೆಸ್ ಮತ್ತು ಬಿಜೆಪಿ ಗೆಲ್ಲುವ ಸಾಧ್ಯತೆ 50-50 ಎಂದು ಅವರು ಹೇಳಿದರು. ಕೇಂದ್ರದ ಮೋದಿ ಸರ್ಕಾರ ಬೆಳಗಾವಿ ಜಿಲ್ಲೆಗೆ ನೀಡಿರುವ ಕೊಡುಗೆ ಏನು ಎಂಬುದನ್ನು ಚಿಂತಿಸಿ ಮತದಾನಕ್ಕೆ ಮುಂದಾಗಬೇಕು. ಬಿಜೆಪಿಗರು ಹೇಳುವ ಸುಳ್ಳು ನಂಬಿ ಮೋಸ ಹೋಗಬಾರದು, ರಾಮದುರ್ಗದಲ್ಲಿ ಬಿಜೆಪಿಯ ಹಳೆಯ ನಾಯಕರು, ಹೊಸ ನಾಯಕರು ಯಾರೂ ಇಲ್ಲ. ಇಲ್ಲಿನ ಮೈದಾನ ಖಾಲಿ ಇದೆ. ಕಾಂಗ್ರೆಸ್‌ ಕಾರ್ಯಕರ್ತರು ತಮ್ಮ ಕುದುರೆಗಳನ್ನು…

Read More

ಬೆಂಗಳೂರು: ಕರ್ನಾಟಕದಲ್ಲಿ ‘ಮೋದಿ ಅಲೆ’ ಇಲ್ಲ. ಹೀಗಾಗಿ ಕಾಂಗ್ರೆಸ್ ಆರಾಮದಾಯಕವಾಗಿ ಹೆಚ್ಚು ಸ್ಥಾನಗಳನ್ನು ಗೆಲ್ಲಲಿದೆ ಎಂದು ಉಪ ಮುಖ್ಯಮಂತ್ರಿ ಮತ್ತು ರಾಜ್ಯ ಕಾಂಗ್ರೆಸ್ ಅಧ್ಯಕ್ಷ ಡಿ ಕೆ ಶಿವಕುಮಾರ್ ಅವರು ಹೇಳಿದ್ದಾರೆ. ಬಿಜೆಪಿ ತನ್ನ ನಾಲ್ಕು ವರ್ಷಗಳ ಆಡಳಿತದಲ್ಲಿ ರಾಜ್ಯದಲ್ಲಿ ಏನನ್ನೂ ಮಾಡಿಲ್ಲ ಮತ್ತು ನೀಡಿದ್ದ ಯಾವುದೇ ಭರವಸೆಗಳನ್ನು ಈಡೇರಿಸಿಲ್ಲ ಎಂದು ಡಿಸಿಎಂ ಕಿಡಿಕಾರಿದರು. “ಕರ್ನಾಟಕದ ಮಟ್ಟಿಗೆ ಕಾಂಗ್ರೆಸ್ ಅತ್ಯಂತ ಆರಾಮದಾಯಕ ಸ್ಥಿತಿಯಲ್ಲಿದೆ. ರಾಜ್ಯದಲ್ಲಿ ಮೋದಿ ಅಲೆ ಇಲ್ಲ. ಏಕೆಂದರೆ ಕಳೆದ 10 ವರ್ಷಗಳ ಆಡಳಿತದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ರಾಜ್ಯಕ್ಕೆ ಯಾವುದೇ ಕೊಡುಗೆ ನೀಡಿಲ್ಲ ಎಂದು ಡಿ.ಕೆ. ಶಿವಕುಮಾರ್ ಅವರು ಪಿಟಿಐಗೆ ನೀಡಿದ ವಿಶೇಷ ಸಂದರ್ಶನದಲ್ಲಿ ಹೇಳಿದ್ದಾರೆ. ಕೇಂದ್ರ ಸರ್ಕಾರ ಕರ್ನಾಟಕದಿಂದ ಕೋಟ್ಯಂತರ ರೂಪಾಯಿ ತೆರಿಗೆ ಸಂಗ್ರಹಿಸಿದ್ದರೂ, 236 ತಾಲ್ಲೂಕುಗಳ ಪೈಕಿ 230 ತಾಲ್ಲೂಕುಗಳು ಭೀಕರ ಬರಗಾಲ ಎದುರಿಸುತ್ತಿದ್ದರೂ, ರಾಜ್ಯಕ್ಕೆ ಯಾವುದೇ ಬರ ಪರಿಹಾರ ನೀಡಿಲ್ಲ ಎಂದು ಕೇಂದ್ರದ ವಿರುದ್ಧ ವಾಗ್ದಾಳಿ ನಡೆಸಿದರು. ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿ ಖ್ಯಾತ…

Read More

ಬಳ್ಳಾರಿ: ಚಾಲಕನ ನಿಯಂತ್ರಣ ತಪ್ಪಿದ ಸರ್ಕಾರಿ ಬಸ್ ಜಮೀನಿಗೆ ನುಗ್ಗಿದ್ದು, ಅದೃಷ್ಟವಶಾತ್ ಭಾರಿ ಅನಾಹುತ ತಪ್ಪಿದೆ. ಜಿಲ್ಲೆಯ ಸಿರುಗುಪ್ಪ ತಾಲೂಕಿನ ದೇವಿನಗರದ ಬಳಿ ಈ ಘಟನೆ ನಡೆದಿದೆ. ಬಸ್ ​​ನಲ್ಲಿದ್ದ ಪ್ರಯಾಣಿಕರಿಗೆ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಕೆಲವೊಬ್ಬರಿಗೆ ಸಣ್ಣಪುಟ್ಟ ಗಾಯಾಗಳಾಗಿದ್ದು, ಸರ್ಕಾರಿ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ತೆಕ್ಕಲಕೋಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

Read More

ಬಿಜೆಪಿಗೆ ಸೇರ್ಪಡೆಯಾಗುತ್ತಿರುವ ಬಗ್ಗೆ ಕೆಲವರು ಅಸಮಾಧಾನವನ್ನು ಹೊರಹಾಕಿದರಲ್ಲವೇ ಎಂಬ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿದ ಸುಮಲತಾ ಅಂಬರೀಶ್‌, ಕೆಲವರು ಅಸಮಾಧಾನವನ್ನು ವ್ಯಕ್ತಪಡಿಸುತ್ತಾರೆ. ಅದೇ ರೀತಿ ನಾನು ಬಿಜೆಪಿ ಸೇರ್ಪಡೆ ಬಗ್ಗೆ ಘೋಷಣೆ ಮಾಡುತ್ತಿದ್ದಂತೆ ಮತ್ತೆ ಕೆಲವರು ಚಪ್ಪಾಳೆ, ಶಿಳ್ಳೆ ಹಾಕಿ ಸಂಭ್ರಮಿಸಿದರು. ಅದು ನಿಮಗೆ ಕೇಳಲಿಲ್ಲವೇ? ಎಂದು ಮರು ಪ್ರಶ್ನೆಯನ್ನು ಹಾಕಿದರು. ನೋಡಿ, ಯಾವುದೇ ವಿಷಯದಲ್ಲಿಯಾದರೂ ಯಾರನ್ನೂ ನೂರಕ್ಕೆ ನೂರು ಮೆಚ್ಚಿಸಲು ಆಗುವುದಿಲ್ಲ. ಈ ವಿಷಯದಲ್ಲಿ ಕೆಲವರಿಗೆ ಈಗ ಅಸಮಾಧಾನ ಆಗಿರಬಹುದು. ಆದರೆ, ಮುಂದಿನ ದಿನಗಳಲ್ಲಿ ಎಲ್ಲವೂ ಸರಿ ಹೋಗುತ್ತದೆ. ಅಂಬರೀಶ್‌ ಅವರ ಅಭಿಮಾನಿಗಳು ಸದಾ ನನ್ನ ಬೆನ್ನ ಹಿಂದೆ ಇರಲಿದ್ದಾರೆ ಎಂಬ ನಂಬಿಕೆ ನನಗೆ ಇದೆ. ಈ ಹಿನ್ನೆಲೆಯಲ್ಲಿ ನಾನು ನಿರ್ಧಾರವನ್ನು ತೆಗೆದುಕೊಂಡಿದ್ದೇನೆ ಎಂದು ಸುಮಲತಾ ಅಂಬರೀಶ್‌ ಸಮಜಾಯಿಷಿ ನೀಡಿದರು. ಹೀಗೆ ಸುಮಲತಾ ಅಂಬರೀಶ್ ಅವರು ತಮ್ಮ ಭಾಷಣದಲ್ಲಿ ಬಿಜೆಪಿ ಸೇರುವ ಬಗ್ಗೆ ಹಲವು ಅಂಶಗಳನ್ನು ಬಿಚ್ಚಿಟ್ಟಿದ್ದು, ಈ ವಾರದಲ್ಲಿ ಅವರು ಅಧಿಕೃತವಾಗಿ ಬಿಜೆಪಿ ಸೇರ್ಪಡೆಯಾಗಲಿದ್ದಾರೆ. ಆದ್ರೆ, ಮಂಡ್ಯದಲ್ಲಿ ಕುಮಾರಸ್ವಾಮಿ ಪರ ಪ್ರಚಾರ…

Read More

ತುಮಕೂರು: ನಾನು ಮೊದಲ ಬಾರಿಗೆ ಮುಖ್ಯಮಂತ್ರಿ ಆಗೋದಕ್ಕೆ ಯಡಿಯೂರಪ್ಪ ಅವರೇ ಕಾರಣ. ನಮಗಿಂತ ಹೆಚು ಶಾಸಕರಿದ್ರು ನಮಗೆ ಅವಕಾಶವನ್ನ ಕೊಟ್ಟಿದ್ರು ಎಂದು ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ತಿಳಿಸಿದ್ದಾರೆ. ತುಮಕೂರಿನಲ್ಲಿ ವಿ ಸೋಮಣ್ಣ ಪರವಾಗಿ ಪ್ರಚಾರಕ್ಕೆ ಆಗಮಿಸಿದ್ದ ಸಂದರ್ಭದಲ್ಲಿ ಮಾತನಾಡಿದ ಅವರು ನಾವು-ಅವರು ಸೇರಿ 2006ರಲ್ಲಿ ಸರ್ಕಾರ ರಚಿಸಿದ್ವಿ. 4 ಸಾರಿ ಮುಖ್ಯಮಂತ್ರಿಗಳಾಗಿ ಪ್ರಮಾಣ ವಚನ ಸಲ್ಲಿಸಿದ್ದ ಹಿರಿಯರಾದ ಯಡಿಯೂರಪ್ಪ ನವರು ಆಗಮಿಸಿದ್ದಾರೆ. ಯಡಿಯೂರಪ್ಪ ನವರು ಮುಖ್ಯಮಂತ್ರಿಯಾಗಿದ್ದಾಗ ರೈತರಿಗೆ ರಾಜ್ಯ ಸರ್ಕಾರದಿಂದ 4 ಸಾವಿರ ಕೊಡ್ತಿದ್ರು ಎಂದರು. ಆದ್ರೆ ಕಾಂಗ್ರೆಸ್ ಸರ್ಕಾರ ಇದನ್ನ ನಿಲ್ಲಿಸಿದೆ. ಕಾಂಗ್ರೆಸ್ ಸರ್ಕಾರ ಆಡಳಿತಕ್ಕೆ ಬಂದ ನಂತರ ನಾವು ನುಡಿದಂತೆ ನಡೆದಿದ್ದೇವೆ ಅಂತಾ ಹೇಳ್ತಿದ್ದಾರೆ. ಐದು ಗ್ಯಾರೆಂಟಿಗಳನ್ನ ಕೊಟ್ಟಿದ್ದೇವೆ ಅಂತಾ ದೊಡ್ಡದಾಗಿ ಹೇಳಿಕೊಡ್ತಿದ್ದಾರೆ ಎಂದರು. ನಾಡಿನ ತೆರಿಗೆಯ ಹಣವನ್ನ ದುಂಧು ವೆಚ್ಚ ಮಾಡಿ, ಲಕ್ಷಾಂತರ ರೂಪಾಯಿ ಸಾಲ ಮಾಡಿದ್ದಾರೆ. ನಿಮ್ಮ ಮನೆಯ ಹೆಣ್ಣುಮಕ್ಕಳಿಗೆ ನೀವು ಇದನ್ನ ಹೇಳಬೇಕಾಗುತ್ತೆ ಎಂದರು. ಯಾವ ಅಭಿವೃದ್ಧಿ ಕೆಲಸಗಳನ್ನ ಈ ಸರ್ಕಾರ ಮಾಡ್ತಿಲ್ಲ. ಐದು…

Read More

ತುಮಕೂರು:ತುಮಕೂರಿನಲ್ಲಿ ರಂಗೇರಿದ ಲೋಕಸಭೆ ಚುನಾವಣಾ ಅಖಾಡ ರಂಗೇರಿದೆ. ಎನ್ ಡಿ ಎ ಮೈತ್ರಿ ಅಭ್ಯರ್ಥಿ ವಿ ಸೋಮಣ್ಣ ಇಂದು ಸಾವಿರಾರು ಕಾರ್ಯಕರ್ತರ ಜೊತೆ  ಮೆರವಣಿಗೆಯಲ್ಲಿ ಶಕ್ತಿ ಪ್ರದರ್ಶನ ಮಾಡಿ ಬೃಹತ್ ಮೆರವಣಿಗೆ ಮೂಲಕ ನಾಮಪತ್ರ ಸಲ್ಲಿಸಿದರು. ಅರ್ಧನಾರೀಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿ  ಮೆರವಣಿಗೆಯ ಮೂಲಕ ಬಿಜಿ ಪಾಳ್ಯ ಸರ್ಕಲ್ ನಿಂದ ಜಿಲ್ಲಾಧಿಕಾರಿ ಕಛೇರಿ ವರೆಗೆ ಸಾಗಿತು.ಮೆರವಣಿಗೆಯಲ್ಲಿ ಮಾಜಿ ಮುಖ್ಯಮಂತ್ರಿಗಳಾದ ಬಿ ಎಸ್ ಯಡಿಯೂರಪ್ಪ, ಜನಾರ್ದನ ರೆಡ್ಡಿ, ವಿಪಕ್ಷ ನಾಯಕ ಆರ್ ಅಶೋಕ್, ಮಾಜಿ ಸಚಿವ ಬಿ ಸಿ ನಾಗೇಶ್, ಜಿಲ್ಲೆಯ ಜೆಡಿಎಸ್ ಬಿಜೆಪಿ ಪ್ರಮುಖರು ಭಾಗಿಯಾಗಿದರು. ರೋಡ್ ಶೋದಲ್ಲಿ ಆರ್.ಅಶೋಕ್ ಮಾತನಾಡಿ ಅವರು ರಾಮಮಂದಿರ ಕಟ್ಟೋಕೆ 100 ವರ್ಷ ಆಯ್ತು. ಯಾರು ಕಟ್ಟೋಕೆ ಆಗಿಲ್ಲಾ.ಮೋದಿನೇ ಬರಬೇಕಾಯ್ತು. ನಮ್ಮ‌ ಬೆಂಬಲ‌ಮೋದಿಗೆ ಎಂದರು. ಕಾಂಗ್ರೆಸ್ ಕಾಶ್ಮೀರವನ್ನ ಬಿಟ್ಟುಬಿಟ್ರು,ಆದರೇ ಮೋದಿ ನಮ್ಮದಾಗಿಸಿಕೊಂಡ್ರು. ರಾಹುಲ್ ಗಾಂಧಿ,ಮೋದಿಗೆ ಸರಿಸಮನಾಗಿ ನಿಲ್ಲೋಕೆ ಆಗುತ್ತಾ. ಯಾವಾಗ ಫಾರಿನ್ ಗೆ ಓಡೋಗ್ತಾರೋ ಗೊತ್ತಿಲ್ಲಾ ಎಂದರು. ಈ ಹಿಂದೆ ಸಿದ್ದರಾಮಯ್ಯ ಸಿಎಂ ಆಗಿದ್ದಾಗ ಭೀಕರ…

Read More

ರಾಜ್ಯದ ಜನ ಬರಗಾಲದಿಂದ ತತ್ತರಿಸಿದ್ದರೂ ಸ್ಪಂದಿಸದ ಕೇಂದ್ರ ಬಿಜೆಪಿ ಸರ್ಕಾರಕ್ಕೆ ಜನ ತಕ್ಕ ಪಾಠ ಕಲಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು ಅವರು ಇಂದು ಮೈಸೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿ ರಾಜ್ಯದಲ್ಲಿ ಬರ ಘೋಷಣೆ ಆದ ಬಳಿಕ ನಾವು ಸೆಪ್ಟೆಂಬರ್ 23ರಂದೇ ಕೇಂದ್ರಕ್ಕೆ ಮೊದಲ ಮನವಿ ಮಾಡಿದ್ದೇವೆ. ಅಕ್ಟೋಬರ್ ನಲ್ಲಿ ಕೇಂದ್ರ ತಂಡ ರಾಜ್ಯ ಪ್ರವಾಸ ಮಾಡಿ ಬರ ಕುರಿತಂತೆ ವರದಿ ನೀಡಿದೆ. ಈ ತಿಂಗಳಲ್ಲಿಯೇ ಮೂರು ಮನವಿಗಳನ್ನು ಸಲ್ಲಿಸಿದ್ದೇವೆ. ನಂತರ ಡಿಸೆಂಬರ್ 19ರಂದು ನಾನು ಖುದ್ದು ಪ್ರಧಾನ ಮಂತ್ರಿಗಳನ್ನು ಹಾಗೂ 20ರಂದು ಅಮಿತ್ ಶಾ ಅವರನ್ನು ಭೇಟಿಯಾಗಿ, ರಾಜ್ಯದ ಬರ ಪರಿಸ್ಥಿತಿಯ ವಸ್ತುಸ್ಥಿತಿಯನ್ನು ತಿಳಿಸಿದ್ದೇನೆ. ಡಿಸೆಂಬರ್  23ಕ್ಕೆ  ಉನ್ನತ ಮಟ್ಟದ ಸಮಿತಿ ಸಭೆ ನಡೆಸುವುದಾಗಿ ಅಮಿತ್ ಶಾ ಅವರು ತಿಳಿಸಿದ್ದರು. ಮನವಿ ಸಲ್ಲಿಸಿ ಐದು ತಿಂಗಳು ಕಳೆದಿದ್ದರೂ ಅವತ್ತಿಂದ, ಇವತ್ತಿನವರೆಗೂ ಕೇಂದ್ರ ಸರ್ಕಾರ ರಾಜ್ಯಕ್ಕೆ  ಬರ ಪರಿಹಾರವನ್ನು ನೀಡದ ಇವರಿಗೆ ಯಾವ ನೈತಿಕತೆ ಇದೆ. ದೇಶದ ಗೃಹ ಸಚಿವರಾದ ಅಮಿತ್  ಶಾ…

Read More

ಸೀನುವುದು ತುಂಬಾ ಸಾಮಾನ್ಯ ಪ್ರಕ್ರಿಯೆ. ಆದರೆ ಸೀನಿದಾಗ ಹೃದಯ ಬಡಿತವು ಸ್ವಲ್ಪ ಸಮಯದವರೆಗೆ ನಿಲ್ಲುತ್ತದೆ ಎಂಬ ನಂಬಿಕೆ ಅನೇಕರಲ್ಲಿದೆ. ಇದರ ಹಿಂದಿನ ನಿಜವಾದ ವಿಷಯ ಏನು? ಯಾವುದು ಸತ್ಯ? ಯಾವುದು ಸುಳ್ಳು? ಬನ್ನಿ ತಿಳಿಯೋಣ ಸೀನುವಿಕೆಯ ಆರಂಭದಲ್ಲಿ, ಸಾಮಾನ್ಯವಾಗಿ ಮೂಗಿನಲ್ಲಿ ವಿಚಿತ್ರವಾದ ಕಚಗುಳಿಯ ಸಂವೇದನೆ ಉಂಟಾಗುತ್ತದೆ. ಅನಂತರ ಈ ಸಿಗ್ನಲ್ ಮೆದುಳಿಗೆ ತಲುಪುತ್ತದೆ ಮತ್ತು ಸೀನುವಿಕೆ ಸಂಭವಿಸುತ್ತದೆ. ಇದರಿಂದಾಗಿ ಇಡೀ ದೇಹ ನಡುಗುತ್ತದೆ. ಸೀನು ಬಂದ ನಂತರ ಇಡೀ ದೇಹವೇ ಅಲುಗಾಡಿದಂತೆ ಭಾಸವಾಗುತ್ತದೆ. ಈ ಸಮಯದಲ್ಲಿ ಹೃದಯವು ತನ್ನ ಕೆಲಸದಿಂದ ಸ್ವಲ್ಪ ವಿರಾಮ ತೆಗೆದುಕೊಂಡಂತೆ ಅನಿಸುತ್ತದೆ. ಸೀನುವಾಗ ಹೃದಯ ಬಡಿತ ನಿಲ್ಲುತ್ತದೆ ಎಂಬ ಮಾತು ಜನಸಾಮಾನ್ಯರಲ್ಲಿ ಹೆಚ್ಚಾಗಿ ಇದೆ. ಹೀಗಿರುವಾಗ ಇದರಲ್ಲಿ ಎಷ್ಟರಮಟ್ಟಿಗೆ ಸತ್ಯಾಂಶವಿದೆ ಎಂಬ ಪ್ರಶ್ನೆ ಎಲ್ಲರ ಮನದಲ್ಲಿ ಮೂಡುತ್ತದೆ ಆದರೆ ಅದರಲ್ಲಿ ಸತ್ಯಾಂಶವೇ ಇಲ್ಲ. ಸೀನುವಾಗ ನಮ್ಮ ಹೃದಯ ಬಡಿತ ನಿಲ್ಲುವುದಿಲ್ಲ. ಆದರೆ ಸೀನುವ ಮೊದಲು ಉಸಿರಾಡಲು ಕಷ್ಟವಾಗಿದ್ದರೆ, ಇದು ನಮ್ಮ ಉಸಿರಾಟದ ಹರಿವು ಕಡಿಮೆ ಮಾಡುತ್ತದೆ ಮತ್ತು…

Read More

ಮರಗಳಿಲ್ಲದೆ ಮನುಷ್ಯ ಇರಲಾರ. ಪ್ರತಿಯೊಬ್ಬ ಮನುಷ್ಯನಿಗೆ ಆಮ್ಲಜನಕ ಬಹಳ ಮುಖ್ಯ. ಊರು, ದೇಶ ಅಂತ ಇದ್ದರೆ ಒಂದು ಕಾಡು ಅಂತಾನೂ ಇರುತ್ತದೆ. ಮರಗಳಿಂದ ಸುತ್ತುವರಿದ ಕಾಡುಗಳಿಂದ ಹೇರಳವಾಗಿ ನಾವು ಆಮ್ಲಜಕನವನ್ನು ಪಡೆಯುತ್ತೇವೆ. ಆದರೆ ನಿಮಗೆ ಗೊತ್ತೇ? ಜಗತ್ತಿನಲ್ಲಿ ಒಂದೇ ಒಂದು ಕಾಡಿಲ್ಲದ ದೇಶವೊಂದು ಇದೆ. ಇದು ನಿಮಗೆ ತಿಳಿದರೆ ಆಶ್ಚರ್ಯವಾಗಬಹುದು. ಅದ್ಯಾವುದು? ಬನ್ನಿ ತಿಳಿಯೋಣ. ಈ ದೇಶದ ಹಳ್ಳಿಗಳೂ ಬೆಳಗುತ್ತಲೇ ಇರುತ್ತವೆ ಎಂದು ತಿಳಿದರೆ ನಿಮಗೆ ಆಶ್ಚರ್ಯವಾಗುತ್ತದೆ. ಇಲ್ಲಿ ಬಹಳ ಸುಂದರವಾದ ಸಮುದ್ರ ನೋಟಗಳಿವೆ, ಮತ್ತು ಮರಳು ಮರುಭೂಮಿಗಳ ಸೌಂದರ್ಯವೂ ಇದೆ. ಭಾರತೀಯರಿಗೂ ಈ ಸ್ಥಳ ಬಹಳ ಇಷ್ಟ. ಉದ್ಯೋಗದ ಉದ್ದೇಶದಿಂದ ಈ ದೇಶಕ್ಕೆ ಅನೇಕ ಮಂದಿ ಭಾರತದಿಂದ ಹೋಗುತ್ತಾರೆ. ಅಂದ ಹಾಗೆ ಈ ದೇಶವು ತನ್ನ ಸುಂದರವಾದ ಎಂಜಿನಿಯರಿಂಗ್‌ಗೆ ಹೆಸರುವಾಸಿ. ನಾವು ಮಾತನಾಡುತ್ತಿರುವ ದೇಶದ ಹೆಸರು ಕತಾರ್. ಈ ದೇಶದಲ್ಲಿ ಒಂದೇ ಒಂದು ಕಾಡಿಲ್ಲ. ಇಲ್ಲಿ ನೀವು ಹೈಟೆಕ್ ನಗರಗಳನ್ನು ಕಾಣಬಹುದು, ಆದರೆ ಹಸಿರು ಅಲ್ಲ. ಈ ದೇಶದಲ್ಲಿ ಮರುಭೂಮಿ…

Read More