Subscribe to Updates
Get the latest creative news from FooBar about art, design and business.
- ಪಾವಗಡ ಗಡಿ ಗ್ರಾಮಗಳಲ್ಲಿ ಜಾನುವಾರು, ಕೇಬಲ್ ಕಳ್ಳರ ಹಾವಳಿ: ರೈತರು ಕಂಗಾಲು!
- ದಳವಾಯಿಹಳ್ಳಿಯಲ್ಲಿ ಕುಡಿಯುವ ನೀರಿಗೆ ಹಾಹಾಕಾರ: ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಗ್ರಾಮಸ್ಥರ ಆಕ್ರೋಶ, BPS ನಿಂದ ಟ್ಯಾಂಕರ್ ನೀರು ಪೂರೈಕೆ
- ಪಾವಗಡ: ದೊಡ್ಡಹಳ್ಳಿ ಸರ್ಕಾರಿ ಪ್ರೌಢಶಾಲೆಯಲ್ಲಿ 2026–27ನೇ ಸಾಲಿನ ದಾಖಲಾತಿ ಆರಂಭ
- ರಾಜ್ಯಸಭೆ ಚುನಾವಣೆಗೂ ಸಚಿವ ಸಂಪುಟ ಪುನರಾಚನೆಗೂ ಯಾವುದೇ ಸಂಬಂಧವಿಲ್ಲ: ಗೃಹ ಸಚಿವ ಜಿ. ಪರಮೇಶ್ವರ್ ಸ್ಪಷ್ಟನೆ
- ಸಿರಾದಲ್ಲಿ ಮೇ 26 ರಂದು ಜೆಡಿಎಸ್ ಪಕ್ಷದ ಪದಾಧಿಕಾರಿಗಳ ನೇಮಕಾತಿ ಕಾರ್ಯಕ್ರಮ
- ಮಕ್ಕಳ ಕೈಗೆ ಮೊಬೈಲ್ ಕೊಡುವ ಮುನ್ನ ಈ ಸುದ್ದಿ ಓದಿ: 1.98 ಲಕ್ಷ ರೂಪಾಯಿ ಕಳೆದುಕೊಂಡ ತುಮಕೂರಿನ ವ್ಯಕ್ತಿ!
- ಚಿಲ್ಲರೆಗಳಿಗೆ ನಾನು ಹೆದರುವ ಮಗನೇ ಅಲ್ಲ ಕೀಳುಮಟ್ಟದ ರಾಜಕಾರಣ ನನಗೆ ಗೊತ್ತಿಲ್ಲ: ಶಾಸಕ ಎಸ್. ಆರ್.ಶ್ರೀನಿವಾಸ್ ತಿರುಗೇಟು
- ತುಮಕೂರು ಜಿಲ್ಲೆಯಲ್ಲಿ 0.3 ಮಿ.ಮೀ. ಮಳೆ
Author: admin
ಮೇಲ್ವರ್ಗದ ವ್ಯಕ್ತಿಯೊಬ್ಬನಿಗೆ ಸೇರಿದ ಬಕೆಟ್ ಮುಟ್ಟಿದ್ದಕ್ಕಾಗಿ ದಲಿತ ಸಮುದಾಯದ 8 ವರ್ಷದ ಬಾಲಕನೊಬ್ಬನನ್ನು ಅಮಾನುಷವಾಗಿ ಥಳಿಸಿದ ಅಮಾನವೀಯ ಘಟನೆ ರಾಜಸ್ಥಾನದ ಅಲ್ವಾರ್ ನಲ್ಲಿ ನಡೆದಿದೆ. ಹ್ಯಾಂಡ್ ಪಂಪ್ ನಿಂದ ನೀರು ತುಂಬಿಸುವ ವೇಳೆ ನಡೆದ ಘಟನೆಯ ಬಗ್ಗೆ ಬಾಲಕನ ಕುಟುಂಬ ನೀಡಿದ ದೂರಿನ ಆಧಾರದಲ್ಲಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆ ಆರಂಭಿಸಿದ್ದಾರೆ. ಅಲ್ವಾರ್ ನ ಮಂಗಳೇಶಪುರ ಎಂಬ ಗ್ರಾಮದಲ್ಲಿ ನಾಲ್ಕನೇ ತರಗತಿ ಓದುತ್ತಿರುವ ಎಂಟು ವರ್ಷದ ಬಾಲಕ ಚಿರಾಗ್, ಬಾಯಾರಿಕೆಯಾಗಿದ್ದರಿಂದ ತನ್ನ ಶಾಲೆಯಲ್ಲಿ ಅಳವಡಿಸಿರುವ ಹ್ಯಾಂಡ್ ಪಂಪ್ನಿಂದ ನೀರು ಪಡೆಯಲು ತೆರಳಿದ್ದಾಗ ಘಟನೆ ನಡೆದಿದೆ. ತನ್ನ ಮಗ ನೀರು ತುಂಬಿಸಿಕೊಳ್ಳುವಾಗ, ರತಿರಾಮ್ ಠಾಕೂರ್ ಎಂಬಾತನಿಗೆ ಸೇರಿದ ನೀರಿನ ಬಕೆಟ್ ಅನ್ನು ಆಕಸ್ಮಿಕವಾಗಿ ಮುಟ್ಟಿದ್ದ ಎಂದು ಬಾಲಕನ ತಂದೆ ಪನ್ನಲಾಲ್ ದೂರಿನಲ್ಲಿ ತಿಳಿಸಿದ್ದಾರೆ. ಇದರಿಂದ ಕೋಪಗೊಂಡ ಠಾಕೂರ್, ಬಾಲಕನ ಮೇಲೆ ದೈಹಿಕವಾಗಿ ಹಲ್ಲೆ ನಡೆಸಿದ್ದಾನೆ. “ತನ್ನ ಬಕೆಟ್ ಮುಟ್ಟಲು ಎಷ್ಟು ಧೈರ್ಯ” ಎಂದು ಕೇಳಿದ್ದಾನೆ ಎಂದು ಆರೋಪಿಸಲಾಗಿದೆ. ಮನೆಗೆ ಮರಳಿದ ಬಾಲಕ, ಶಾಲೆಯಲ್ಲಿ…
ಕೇಂದ್ರ ಚುನಾವಣಾ ಆಯೋಗದಲ್ಲಿ ಸರ್ಕಾರವು ತನ್ನದೇ ಆದ ಜನರನ್ನು ಹೊಂದಿದೆ ಮತ್ತು ಇವಿಎಂ ಇಲ್ಲದೆ ಚುನಾವಣೆಯನ್ನು ಗೆಲ್ಲಲು ಸಾಧ್ಯವಿಲ್ಲ ಎಂದು ಭಾಷಣ ಮಾಡಿದ ಎಐಸಿಸಿ ಮಾಜಿ ಅಧ್ಯಕ್ಷ, ಸಂಸದ ರಾಹುಲ್ ಗಾಂಧಿ ವಿರುದ್ಧ ಬಿಜೆಪಿ ದೂರು ನೀಡಿದೆ. ಬಿಜೆಪಿ ಹಿರಿಯ ನಾಯಕ ಹರ್ದೀಪ್ ಸಿಂಗ್ ಪುರಿ ನೇತೃತ್ವದ ನಿಯೋಗ ದೇಶ ವಿರೋಧಿ ಹೇಳಿಕೆ ಎಂದು ವ್ಯಾಖ್ಯಾನಿಸಿ ದೂರು ನೀಡಿದೆ. ಮ್ಯಾಚ್ ಫಿಕ್ಸಿಂಗ್ ಇಲ್ಲದೇ ಬಿಜೆಪಿ 400 ಪಾರ್ ಘೋಷಣೆ ಸಾಧ್ಯವಿಲ್ಲ. ಇದಕ್ಕಾಗಿ ಪ್ರಧಾನಿ ನರೇಂದ್ರ ಮೋದಿ ‘ಅಂಪೈರ್’ಗಳನ್ನು ಆಯ್ಕೆ ಮಾಡಿದ್ದಾರೆ. ಇವಿಎಂಗಳು, ಮ್ಯಾಚ್ ಫಿಕ್ಸಿಂಗ್, ಸಾಮಾಜಿಕ ಮಾಧ್ಯಮಗಳು ಮತ್ತು ಮಾಧ್ಯಮ ಸಹಕಾರವಿಲ್ಲದೇ ಬಿಜೆಪಿ ಲೋಕಸಭಾ ಚುನಾವಣೆಯಲ್ಲಿ 180ಕ್ಕಿಂತ ಹೆಚ್ಚು ಸ್ಥಾನಗಳನ್ನು ಗೆಲ್ಲಲು ಸಾಧ್ಯವಿಲ್ಲ. 400ಕ್ಕೂ ಹೆಚ್ಚು ಸ್ಥಾನಗಳನ್ನು ಪಡೆದರೆ ಸಂವಿಧಾನವನ್ನು ಬದಲಾಯಿಸುತ್ತೇವೆ ಎಂದು ಬಿಜೆಪಿ ಸಂಸದರೊಬ್ಬರು ಹೇಳಿದ್ದಾರೆ. ಬಿಜೆಪಿಯ ಮ್ಯಾಚ್ ಫಿಕ್ಸಿಂಗ್ ಯಶಸ್ವಿಯಾದರೆ ಸಂವಿಧಾನ ಇರುವುದಿಲ್ಲ. ಸಂವಿಧಾನ ಇಲ್ಲದಿದ್ದರೆ ದೇಶವಿಲ್ಲ. ಬಿಜೆಪಿ ಅಧಿಕಾರದಲ್ಲಿ ನಾವು ಎಲ್ಲೆಡೆ ಬೆಂಕಿ ಕಾಣಬಹುದು ಎಂದು ರಾಹುಲ್…
ತುಮಕೂರು: ಎಸ್. ಎಸ್. ಎಲ್. ಸಿ. ಪರೀಕ್ಷಾ ಕೇಂದ್ರಗಳಿಗೆ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಅಧ್ಯಕ್ಷರು, ಸದಸ್ಯರ ಪರಿಶೀಲನಾ ಭೇಟಿಯನ್ನು ನಿರ್ಬಂಧಿಸಿರುವ ಶಾಲಾ ಮತ್ತು ಸಾಕ್ಷರತಾ ಇಲಾಖೆಯ ಆಯುಕ್ತರಿಗೆ ನಾಳೆ ಬೆಳಗ್ಗೆ 11 ಗಂಟೆಗೆ ಖುದ್ದಾಗಿ ವಿಚಾರಣೆಗೆ ಹಾಜರಾಗುವಂತೆ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಸಮನ್ಸ್ ಜಾರಿ ಮಾಡಲಾಗಿದೆ. ರಾಜ್ಯದಲ್ಲಿ ಪ್ರಸ್ತುತ ಎಸ್.ಎಸ್.ಎಲ್.ಸಿ. ನಡೆಯುತ್ತಿದ್ದು, ಪರೀಕ್ಷಾ ಕೇಂದ್ರಗಳಲ್ಲಿ ಕಲ್ಪಿಸಿರುವ ಮಕ್ಕಳ ಸ್ನೇಹಿ ವಾತಾವರಣ ಹಾಗೂ ವ್ಯವಸ್ಥೆಗಳನ್ನು ಅವಲೋಕಿಸಲು ಭೇಟಿ ನೀಡುವ ಬಗ್ಗೆ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಸೂಚನೆ ನೀಡಿತ್ತು. ಈ ಹಿನ್ನೆಲೆಯಲ್ಲಿ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯರಾದ ಕೆ.ಟಿ.ತಿಪ್ಪೇಸ್ವಾಮಿ ಅವರು ತುಮಕೂರು ಜಿಲ್ಲೆಯ ಮಧುಗಿರಿ ಶೈಕ್ಷಣಿಕ ಜಿಲ್ಲೆ ಸಿರಾ ತಾಲ್ಲೂಕಿನ ಆಯ್ದ ಕೆಲವು ಪರೀಕ್ಷಾ ಕೇಂದ್ರಗಳಿಗೆ ದಿ.30/03/2024 ರಂದು ಭೇಟಿ ನೀಡಲು ಮುಂದಾಗಿದ್ದರು. ಈ ಬಗ್ಗೆ ತಿಳಿಸಲು ಜಿಲ್ಲೆಯ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಉಪನಿರ್ದೆಶಕರನ್ನು ಹಾಗೂ ಸಿರಾ ತಾಲ್ಲೂಕಿನ ಕ್ಷೇತ್ರ ಶಿಕ್ಷಣಾಧಿಕಾರಿಗಳನ್ನು…
2024ರ ಲೋಕಸಭೆ ಚುನಾವಣೆಗೆ ತಮ್ಮ ಮತದಾರರನ್ನು ಸೆಳೆಯಲು ಅಭ್ಯರ್ಥಿಗಳು ನಾನಾ ತಂತ್ರಗಳನ್ನು ಬಳಸುತ್ತಿದ್ದಾರೆ. ಚಂದ್ರಾಪುರದ ಚಿಮೂರ್ ಗ್ರಾಮದ ಸ್ವತಂತ್ರ ಅಭ್ಯರ್ಥಿ ವನಿತಾ ರಾವುತ್ ಗೆಲ್ಲಲು ಜನರಿಗೆ ಅಗ್ಗದ ಮದ್ಯದ ಭರವಸೆ ನೀಡಿದ್ದಾರೆ. ತಾನು ಗೆದ್ದರೆ ಬಡವರಿಗೆ ಅಗ್ಗದ ದರದಲ್ಲಿ ವಿಸ್ಕಿ, ಬಿಯರ್ ನೀಡುವುದಾಗಿ ಚುನಾವಣಾ ಪ್ರಚಾರದ ವೇಳೆ ಹೇಳಿದ್ದರು. ಅಷ್ಟೇ ಅಲ್ಲ ಅಗ್ಗದ ದರದ ಬಿಯರ್ ಬಾರ್ ತೆರೆಯುವುದಾಗಿ ಭರವಸೆ ನೀಡಿದ್ದಾರೆ. ಪ್ರತಿ ಹಳ್ಳಿಯಲ್ಲಿ ಬಿಯರ್ ಬಾರ್ ತೆರೆಯುವುದಾಗಿ ಹೇಳಿದರು. ಮಹಾರಾಷ್ಟ್ರದ ಈ ಸ್ವತಂತ್ರ ಅಭ್ಯರ್ಥಿಯು 2024 ರ ಲೋಕಸಭಾ ಚುನಾವಣೆಗೆ ಇಂತಹ ಭರವಸೆಗಳನ್ನು ನೀಡಿದ್ದಾರೆ. ಪಡಿತರ ವ್ಯವಸ್ಥೆಯ ಮೂಲಕ ಮದ್ಯವನ್ನು ಆಮದು ಮಾಡಿಕೊಡುತ್ತೇನೆ. ಬಡವರು ಕಷ್ಟಪಟ್ಟು ದುಡಿಯುತ್ತಾರೆ. ಮದ್ಯ ಕುಡಿದು ಸಮಾಧಾನ ಕಂಡುಕೊಳ್ಳುತ್ತಾರೆ. ಗುಣಮಟ್ಟದ ಬಿಯರ್, ವಿಸ್ಕಿಯನ್ನು ಅವರು ಖರೀದಿ ಮಾಡಲು ಆಗುವುದಿಲ್ಲ. ಹಳ್ಳಿಗಾಡಿನ ಮದ್ಯ ಸೇವೆ ಮಾಡುತ್ತಾರೆ ಎಂದು ಅವರು ಹೇಳಿದರು. ಅಷ್ಟು ಮಾತ್ರವಲ್ಲದೇ ಲೋಕಸಭಾ ಚುನಾವಣೆ 2024 ರಲ್ಲಿ ಅಧಿಕಾರಕ್ಕೆ ಬಂದರೆ ತಾನು ಜನರಿಗೆ ಸಬ್ಸಿಡಿ ದರದಲ್ಲಿ…
ಕರ್ನಾಟಕದಾದ್ಯಂತ ಬಿಸಿಲಿನ ಝಳ ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಇದೆ. ತಾಪಮಾನಕ್ಕೆ ಜನ ಒಂದು ಕಡೆ ಸೊರಗಿ ಹೋಗಿದ್ದರೆ, ಒಂದು ಕಡೆ ಕುಡಿಯಲು ನೀರಿನ ಸಮಸ್ಯೆಯನ್ನು ಬೆಂಗಳೂರಿನ ಜನತೆ ಅನುಭವಿಸುತ್ತಿದ್ದಾರೆ. ಇದೀಗ ವಾರಾಂತ್ಯದಲ್ಲಿ ವರುಣ ಈ ಕೆಳಗೆ ನೀಡಿದ ರಾಜ್ಯದ ಹಲವು ಜಿಲ್ಲೆಗಳಲ್ಲಿ ಕಡೆ ಬಿರುಸಿನ ಮಳೆಯ ಸಂಭವನೀಯತೆಯನ್ನು ಹವಾಮಾನ ಇಲಾಖೆ ಹೇಳಿದೆ. ರಾಜ್ಯದ ವಿವಿಧೆಡೆ ವಾರಾಂತ್ಯಕ್ಕೆ ಸಾಧಾರಣ ಮಳೆ ಆಗುವ ಎಲ್ಲಾ ಸಂಭವ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯೊಂದನ್ನು ನೀಡಿದೆ. ಉಡುಪಿ, ಚಿಕ್ಕಮಗಳೂರು, ಹಾಸನ, ಕೊಡಗು, ಮಂಡ್ಯ, ಮೈಸೂರು ಜಿಲ್ಲೆಗಳ ಕೆಲವು ಕಡೆ ಎಪ್ರಿಲ್ 6 ರಂದು ಹಗುರ ಮಳೆಯಾಗುವ ಸಂಭವವಿದೆ. ಕರಾವಳಿಯ ಉಡುಪಿ, ಉತ್ತರಕನ್ನಡ, ದಕ್ಷಿಣ ಕನ್ನಡ, ಬೀದರ್ ಹಾವೇ, ಧಾರವಾಡ, ಗದಗ, ಬಾಗಲಕೋಟೆ, ಬೆಳಗಾವಿ, ರಾಯಚೂರು, ಕೊಪ್ಪಳ, ಕಲಬುರಗಿ, ಬಳ್ಳಾರಿ, ಯಾದಗಿರಿ, ಚಿತ್ರದುರ್ಗ, ಚಿಕ್ಕಮಗಳೂರು, ಹಾಸನ ಕೊಡಗು, ದಾವಣಗೆರೆ ತುಮಕೂರು, ವಿಜಯಪುರ, ಮಂಡ್ಯ, ಮೈಸೂರು, ದಕ್ಷಿಣ ಒಳನಾಡಿದ ಯಾದಗಿರಿ ಇಲ್ಲೆಲ್ಲ ಎಪ್ರಿಲ್ 7 ರಂದು ಮಳೆಯಾಗುವ ಸಂಭವನೀಯತೆ…
ತಿ. ನರಸೀಪುರ: ಪ್ರಧಾನಮಂತ್ರಿ ಆವಾಸ್ ಯೋಜನೆಯಲ್ಲಿ ಕೇಂದ್ರ ಸರ್ಕಾರ ಫಲಾನುಭವಿಗೆ ಕೊಡುವ ಹಣ, ಬಳಿಕ ಅದೇ ಫಲಾನುಭವಿಯಿಂದ GST ರೂಪದಲ್ಲಿ ವಸೂಲಿ ಮಾಡುವ ಹಣದ ಲೆಕ್ಕಾಚಾರವನ್ನು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಹಿರಂಗ ಸಭೆಯಲ್ಲಿ ಸಾರ್ವಜನಿಕರ ಮುಂದೆ ಸೊಗಸಾಗಿ ತಮ್ಮದೇ ಶೈಲಿಯಲ್ಲಿ ಮಂಡಿಸಿದರು. ಈ ಯೋಜನೆಯಲ್ಲಿ ಪ್ರತಿ ಫಲಾನುಭವಿಗೆ ಕೇಂದ್ರ ಸರ್ಕಾರ ಒಂದೂವರೆ ಲಕ್ಷ ರೂಪಾಯಿ ಕೊಡುತ್ತದೆ. ರಾಜ್ಯ ಸರ್ಕಾರ ಒಂದು ಲಕ್ಷ 28 ಸಾವಿರ ಕೊಡುತ್ತಿತ್ತು. ಉಳಿದ 3.80 ಲಕ್ಷ ರೂಪಾಯಿಯನ್ನು ಫಲಾನುಭವಿ ಕೊಡಬೇಕು. ಆಗ ಅವರಿಗೆ ಮನೆ ಸಿಗುತ್ತದೆ. ಆದರೆ ಕೇಂದ್ರ ಸರ್ಕಾರ ಪ್ರತಿ ಮನೆಗೆ 18% GST ವಸೂಲಿ ಮಾಡುತ್ತದೆ. ಅಂದರೆ ಪ್ರತಿ ಕೊಳೆಗೇರಿ ಮನೆಗೆ 1 ಲಕ್ಷದ 38 ಸಾವಿರ ರೂಪಾಯಿಯನ್ನು GST ಹೆಸರಲ್ಲಿ ಕೇಂದ್ರ ಸರ್ಕಾರ ವಾಪಾಸ್ ಪಡೆದುಕೊಳ್ಳುತ್ತದೆ. ಅಂದರೆ, ಒಂದೂವರೆ ಲಕ್ಷ ರೂಪಾಯಿ ಸಹಾಯಧನ ಕೊಟ್ಟು, ಅದರಲ್ಲಿ ಒಂದು ಲಕ್ಷದ 38 ಸಾವಿರ ರೂಪಾಯಿ ವಾಪಾಸ್ ವಸೂಲಿ ಮಾಡಿದರೆ ಕೇಂದ್ರ ಸರ್ಕಾರ ಎಷ್ಟು ಕೊಟ್ಟಂಗಾಯ್ತು?…
ತುಮಕೂರು: ಲೋಕಸಭಾ ಚುನಾವಣೆಗೆ ಸ್ಪರ್ದಿಸಲು ಬಿಜೆಪಿ ಅಭ್ಯರ್ಥಿ ವಿ.ಸೋಮಣ್ಣ ಸಾಕಷ್ಟು ಕಸರತ್ತು ನಡೆಸುತ್ತಿದ್ದಾರೆ. ಸುದೀರ್ಘ ಪ್ರಚಾರ ನಡೆಸುತ್ತಿರುವ ಮೈತ್ರಿ ಅಭ್ಯರ್ಥಿಯಾಗಿರೊ ಸೋಮಣ್ಣ ಫೀಲ್ಡ್ ಗಿಳಿಯುತ್ತಿರೋ ಅವರು ನಗರದಲ್ಲಿ ವಾಕಿಂಗ್ ಮಾಡುವಾಗಲೂ ಮತಬೇಟೆಯಲ್ಲಿ ತೊಡಗಿದ್ದಾರೆ. ಬೆಳಿಗ್ಗೆ ತುಮಕೂರು ವಿಶ್ವವಿದ್ಯಾಲಯ ವಾಕಿಂಗ್ ನೆಪದಲ್ಲಿ ಮತದಾರರನ್ನ ಭೇಟಿಯಾಗಿ ಮತದಾರರನ್ನು ಮಾತನಾಡಿಸಿ, ತಮಗೆ ಮತ ನೀಡುವಂತೆ ಮನವಿ ಮಾಡಿಕೊಂಡಿದ್ದಾರೆ. ಅಲ್ಲೇ ಮೈದಾನದಲ್ಲಿ ತರಭೇತಿ ಪಡೆಯುತ್ತಿದ್ದ ಕ್ರೀಡಾಪಟುಗಳ ಜೊತೆಯೂ ಅವರು ಕಾಲ ಕಳೆದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ತುಮಕೂರು: SSLC ಪರೀಕ್ಷಾ ಕೇಂದ್ರಗಳನ್ನು ಅವಲೋಕಿಸಲು ತಮಗೆ ಅವಕಾಶ ನೀಡದ ಹಿನ್ನೆಲೆಯಲ್ಲಿ ಶಾಲಾ ಶಿಕ್ಷಣ ಇಲಾಖೆ ಆಯುಕ್ತರ ವಿರುದ್ಧ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯರಾದ ಕೆ.ಟಿ. ತಿಪ್ಪೇಸ್ವಾಮಿ ಅವರು ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗಕ್ಕೆ ದೂರು ನೀಡಿದ್ದಾರೆ. ಈ ಸಂಬಂಧ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗಕ್ಕೆ ಅವರು ಪತ್ರ ಬರೆದಿದ್ದು, ರಾಜ್ಯದಲ್ಲಿ ಪ್ರಸ್ತುತ ಎಸ್.ಎಸ್.ಎಲ್.ಸಿ. ನಡೆಯುತ್ತಿದ್ದು, ಪರೀಕ್ಷಾ ಕೇಂದ್ರಗಳಲ್ಲಿ ಕಲ್ಪಿಸಿರುವ ಮಕ್ಕಳ ಸ್ನೇಹಿ ವಾತಾವರಣ ಹಾಗೂ ವ್ಯವಸ್ಥೆಗಳನ್ನು ಅವಲೋಕಿಸಲು ಭೇಟಿ ನೀಡುವ ಬಗ್ಗೆ ಸೂಚಿಸಿದ್ದೀರಿ. ಅದರಂತೆ ನಾನು ತುಮಕೂರು ಜಿಲ್ಲೆಯ ಮಧುಗಿರಿ ಶೈಕ್ಷಣಿಕ ಜಿಲ್ಲೆ ಸಿರಾ ತಾಲ್ಲೂಕಿನ ಆಯ್ದ ಕೆಲವು ಪರೀಕ್ಷಾ ಕೇಂದ್ರಗಳಿಗೆ ದಿ.30/03/2024 ರಂದು ಭೇಟಿ ನೀಡಲು ಯೋಜಿಸಿದ್ದೆ. ಈ ಬಗ್ಗೆ ತಿಳಿಸಲು ಸದರಿ ಜಿಲ್ಲೆಯ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಉಪನಿರ್ದೆಶಕರನ್ನು ಹಾಗೂ ಸಿರಾ ತಾಲ್ಲೂಕಿನ ಕ್ಷೇತ್ರ ಶಿಕ್ಷಣಾಧಿಕಾರಿಗಳನ್ನು ದೂರವಾಣಿಯಲ್ಲಿ ಸಂಪರ್ಕಿಸಿದಾಗ ‘ನಮ್ಮ ಇಲಾಖೆಯ ಆಯುಕ್ತರು ಪರೀಕ್ಷಾ ಕೇಂದ್ರಗಳಿಗೆ ಮಕ್ಕಳ ಹಕ್ಕುಗಳ…
ತಿ. ನರಸೀಪುರ: ದೇಶದ ಜನ ಈ ಬಾರಿ ನರೇಂದ್ರ ಮೋದಿಯವರ ಮಾತು ಮತ್ತು ಕೆಲಸ ಎರಡನ್ನೂ ತುಲನೆ ಮಾಡಿ ಮತ ಹಾಕ್ತಾರೆ. ಹೀಗಾಗಿ ಅವರಿಗೆ 200 ಸೀಟು ದಾಟುವುದೇ ಕಷ್ಟ ಎನ್ನುವ ವಾಸ್ತವದ ಮನವರಿಕೆಯಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನುಡಿದರು. ಚಾಮರಾಜನಗರ ಲೋಕಸಭಾ ಕ್ಷೇತ್ರದಲ್ಲಿನ ನರಸೀಪುರ ವಿಧಾನಸಭಾ ಕ್ಷೇತ್ರದ, ತಿ. ನರಸೀಪುರದಲ್ಲಿ ನಡೆದ ಸುನಿಲ್ ಬೋಸ್ ಪರ ಸಾರ್ವಜನಿಕ ಸಭೆಯನ್ನು ಉದ್ಘಾಟಿಸಿ ಮಾತನಾಡಿದರು. ನರೇಂದ್ರ ಮೋದಿಯವರು ಪ್ರಧಾನಿಯಾಗಿ 10 ವರ್ಷ ಆಯ್ತು. ಅವರು ಕೊಟ್ಟ ಭರವಸೆಯಲ್ಲಿ ಒಂದೇ ಒಂದನ್ನಾದ್ರೂ ಈಡೇರಿಸಿದ್ದಾರಾ ಹೇಳಿ. ಹೀಗಾಗಿ ದೇಶದ ಜನ ಈ ಬಾರಿ ನರೇಂದ್ರ ಮೋದಿಯವರ ಮಾತು ಮತ್ತು ಕೆಲಸ ಎರಡನ್ನೂ ತುಲನೆ ಮಾಡಿ ಮತ ಹಾಕ್ತಾರೆ. ಮೋದಿ ಬರೀ ಮಾತಲ್ಲಿ ಮನೆ ಕಟ್ಟಿದ್ದು ಸಾಕು ಎಂದು ದೇಶದ ಜನ ತೀರ್ಮಾನಿಸಿದ್ದಾರೆ ಎಂದರು. ದೇಶದಲ್ಲಿರುವ ಕಪ್ಪು ಹಣವನ್ನೆಲ್ಲಾ ಕರಗಿಸ್ತೀನಿ ಎಂದು ಹೇಳಿ ಡಿಮಾನೆಟೈಸೇಷನ್ ಮಾಡಿದರು. ಆದರೆ, ಇದರಿಂದ ಕಪ್ಪು ಹಣ ಕರಗಲಿಲ್ಲ. ಇದರಿಂದ ಲಾಭ…
ತುಮಕೂರು: ನಗರದ ಜಿಲ್ಲಾ ಪೊಲೀಸ್ ಕವಾಯತು ಮೈದಾನದಲ್ಲಿ ಇಂದು ಪೊಲೀಸ್ ಧ್ವಜ ದಿನಾಚರಣೆ ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ನಿವೃತ್ತ ಪೊಲೀಸ್ ಉಪನಿರೀಕ್ಷಕ ಕಾಂತರಾಜು ಅವರು ಗೌರವ ರಕ್ಷೆಯನ್ನು ಸ್ವೀಕರಿಸಿದರು. ಕಾರ್ಯಕ್ರಮದಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಶೋಕ್ , ಹೆಚ್ಚುವರಿ ಪೊಲೀಸ್ ಅಧೀಕ್ಷಕರಾದ ಅಬ್ದುಲ್ ಖಾದರ್, ಮರಿಯಪ್ಪ ಹಾಜರಿದ್ದರು. ಇದೇ ಸಂದರ್ಭದಲ್ಲಿ ನಿವೃತ್ತ 31 ಮಂದಿ ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿಗಳನ್ನು ಸನ್ಮಾನಿಸಲಾಯಿತು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296