Author: admin

ಕೊರಟಗೆರೆ: ಮತ ಚಲಾಯಿಸುವುದು ಕೇವಲ ನಿಮ್ಮ ಹಕ್ಕು ಮಾತ್ರವಲ್ಲ. ಅದು ದೇಶಕಟ್ಟುವ ನಿಟ್ಟಿನಲ್ಲಿ ಕರ್ತವ್ಯ ಕೂಡ ಆಗಿದೆ. ಜಗತ್ತಿನಲ್ಲೇ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಅಪ್ಪಿಕೊಂಡ ದೊಡ್ಡ ದೇಶ ನಮ್ಮದು ಎಂದು ತಾ.ಪಂ. ಇ ಓ ಅಪೂರ್ವ ತಿಳಿಸಿದರು. ಲೋಕಸಭಾ ಚುನಾವಣೆ ಅಂಗವಾಗಿ ಜಿಲ್ಲಾ ಸ್ವೀಪ್ ಸಮಿತಿ ಮತ್ತು ತಾಲೂಕು ಸ್ವೀಪ್ ಸಮಿತಿ, ಯೂತ್ ಫಾರ್ ಸೇವಾ ಸಂಸ್ಥೆ ಹಾಗೂ ಬೂದಗವಿ, ತುಂಬಾಡಿ, ತೋವಿನಕೆರೆ ಗ್ರಾ.ಪಂ. ಸಹಯೋಗದೊಂದಿಗೆ ಬೂದಗವಿ ಗ್ರಾಮ ಸೇರಿದಂತೆ ಸಿದ್ಧರಬೆಟ್ಟದ ಅರಣ್ಯ ಪ್ರದೇಶದಲ್ಲಿ ಸ್ವಚ್ಚತಾ ಅಭಿಯಾನದ ಮೂಲಕ ಏರ್ಪಡಿಸಲಾದ ಮತದಾನ ಜಾಗೃತಿ ಜಾಥಾ ಕಾರ್ಯಕ್ರಮಕ್ಕೆ  ಚಾಲನೆ ನೀಡಿ ಮಾತನಾಡಿದರು. ಈ ಬಾರಿ ಶೇ.100ರಷ್ಟು ಮತದಾನಕ್ಕೆ ಮುಂದಾಗಬೇಕಿದೆ. ಈ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಆಡಳಿತ ವ್ಯವಸ್ಥೆಯನ್ನು ಸುಧಾರಿಸುವ, ಅಭಿವೃದ್ಧಿಗಾಗಿ ಪೂರಕವಾಗಿ ಚುನಾವಣೆಗಳು ಅತಿ ಮಹತ್ತರ ಪಾತ್ರ ವಹಿಸುತ್ತವೆ. ಮತದಾರರು ಪ್ರಾಮಾಣಿಕ, ನ್ಯಾಯಸಮ್ಮತ, ನಿಷ್ಪಕ್ಷಪಾತವಾಗಿ ಮತದಾನ ಮಾಡಬೇಕು. ಪ್ರತಿಯೊಬ್ಬರು ಮತದಾನ ಮಾಡಿದಾಗ ಮಾತ್ರ ಸುಭದ್ರ ಪ್ರಜಾಪ್ರಭುತ್ವ ರಾಷ್ಟ್ರ ನಿರ್ಮಾಣವಾಗಲು ಸಾಧ್ಯ ಎಂದು ಹೇಳಿದರು. ಏ.26 ರಂದು…

Read More

ಬಿಜೆಪಿಯ ಕುಟುಂಬ ರಾಜಕಾರಣದ ವಿರುದ್ಧ ಸಿಡಿದೆದ್ದಿರುವ ಕೆ ಎಸ್ ಈಶ್ವರಪ್ಪನವರು ಶಿವಮೊಗ್ಗದಿಂದ ಪಕ್ಷೇತರವಾಗಿ ಸ್ಪರ್ಧಿಸೋದು ಫಿಕ್ಸ್ ಆಗಿದೆ. ಬ್ರಹ್ಮ ಬಂದರೂ ನಿರ್ಧಾರ ಬದಲಿಸಲ್ಲ ಎಂದಿದ್ದಾರೆ. ಈ ಬೆನ್ನಲ್ಲೇ ರಾಜಕೀಯ ವಲಯದಲ್ಲಿ ಈಶ್ವರಪ್ಪ ಸ್ಪರ್ಧೆ ಬಗ್ಗೆ ಭಾರೀ ಚರ್ಚೆಯಾಗುತ್ತಿದ್ದು, ಅವರನ್ನು ಮೋದಿ ಮತ್ತು ಶಾ ಅವರೆ ಬಂಡಾಯ ಅಭ್ಯರ್ಥಿಯಾಗಿ ಕಣಕ್ಕಿಳಿಸಿದರೇ? ಎಂಬ ವಿಚಾರ ಮುನ್ನಲೆಗೆ ಬಂದಿದೆ. ಈ ಬಗ್ಗೆ ಈಶ್ವರಪ್ಪನವರು ಕೂಡ ಸ್ಪೋಟಕ ಹೇಳಿಕೆ ನೀಡಿದ್ದಾರೆ. ಬಿಜೆಪಿ ನಾಯಕ ಕೆಎಸ್ ಈಶ್ವರಪ್ಪ ಇದೀಗ ತಮ್ಮ ಸ್ಪರ್ಧೆಯ ಬಗ್ಗೆ ಅಚ್ಚರಿಯ ಹೇಳಿಕೆ ನೀಡಿದ್ದು ತಾವು ಬಂಡಾಯ ಅಭ್ಯರ್ಥಿಯಾಗಿ ಕಣಕ್ಕಿಳಿಯುತ್ತಿರುವುದು ಪ್ರಧಾನಿ ಮೋದಿ, ಕೇಂದ್ರ ಸಚಿವ ಅಮಿತ್ ಶಾ ಗೂ ಇಷ್ಟ ಇರಬಹುದು ಎನ್ನುವ ಮೂಲಕ ಅಚ್ಚರಿ ಮೂಡಿಸಿದ್ದಾರೆ. ಈ ಬಗ್ಗೆ ಮಾತನಾಡಿದ ಅವರು ನನ್ನ ಸ್ಪರ್ಧೆ ಮೋದಿ ಮತ್ತು ಅಮಿತ್ ಶಾಗೆ ಇಷ್ಟವಿಲ್ಲವೆಂದಾದರೆ ನನ್ನನ್ನು ಯಾಕೆ ಪಕ್ಷದಿಂದ ಈವರೆಗೆ ತೆಗೆದು ಹಾಕಿಲ್ಲ? ಗೊತ್ತಿಲ್ಲ, ‘ಮೋದಿ, ಅಮಿತ್ ಶಾ ಹೇಳಿದರೆ ಈಶ್ವರಪ್ಪ ಹಿಂದೆ ಸರಿಯಬಹುದು’ ಎಂದು…

Read More

ಕರ್ನಾಟಕದಲ್ಲಿ ಮೊದಲ ಹಂತದ ಮತದಾನ ಎಪ್ರಿಲ್‌ 26 ಹಾಗೂ 2 ನೇ ಹಂತದ ಮತದಾನ ಮೇ.7 ರಂದು ನಡೆಯಲಿದೆ. ಈ ದಿನ ಎಲ್ಲಾ ರಾಜ್ಯ ಸರಕಾರಿ ಕಚೇರಿಗಳು, ಶಾಲಾ ಕಾಲೇಜುಗಳು, ಎಲ್ಲಾ ವ್ಯವಹಾರಿಕ ಸಂಸ್ಥೆಗಳು ಹಾಗೂ ಇನ್ನಿತರ ಸಂಸ್ಥೆಗಳಲ್ಲಿ ಖಾಯಂ ಆಗಿ ಹಾಗೂ ದಿನಗೂಲಿ ಮೇಲೆ ಕೆಲಸ ನಿರ್ವಹಿಸುವ ನೌಕರರಿಗೆ ವೇತನ ಸಹಿತ ರಜೆ ಘೋಷಣೆ ಮಾಡಿ ಸರಕಾರದ ಅಧೀನ ಕಾರ್ಯದರ್ಶಿ ಪ್ರಕಟಣೆ ಹೊರಡಿಸಿದ್ದಾರೆ. ಎಲ್ಲಾ ರಾಜ್ಯ ಸರಕಾರಿ ಕಚೇರಿಗಳಿಗೆ, ಶಾಲಾ ಕಾಲೇಜುಗಳಿಗೆ (ಅನುದಾನಿತ ಶಿಕ್ಷಣ ಸಂಸ್ಥೆಗಳು ಒಳಗೊಂಡಂತೆ) ಹಾಗೂ ಸರಕಾರಿ ಸ್ವಾಮ್ಯದ ಸಂಸ್ಥೆಗಳು ಸೇರಿ 26.04.2024 ಮತ್ತು ದಿನಾಂಕ 07-05-2024 ರಂದು ನಡೆಯುವ ಚುನಾವಣೆಗೆ ಸಾರ್ವಜನಿಕ ರಜೆಯನ್ನು ಘೋಷಿಸಲಾಗಿದೆ. ಆಯಾ ಚುನಾವಾಣಾ ಕ್ಷೇತ್ರಗಳಿಗೆ ಸೀಮಿತಗೊಳಿಸಿ ಸಾರ್ವತ್ರಿಕ ರಜೆಯನ್ನು ಘೋಷಣೆ ಮಾಡಲಾಗಿದೆ. ಈ ರಜೆ ತುರ್ತು ಸೇವೆಗಳಿಗೆ ಅನ್ವಯಿಸುವುದಿಲ್ಲ. ಆದಾಗ್ಯೂ ಕೂಡಾ ತುರ್ತು ಸೇವೆಯಡಿ ಕೆಲಸ ಮಾಡುವ ನೌಕರರಿಗೆ ಮತ ಚಲಾಯಿಸಲು ಅನುಕೂಲವಾಗುವಂತೆ ವ್ಯವಸ್ಥೆ ಮಾಡತಕ್ಕದ್ದು ಎಂದು ಆದೇಶದಲ್ಲಿ ತಿಳಿಸಲಾಗಿದೆ. ಸದರಿ…

Read More

ಬೆಂಗಳೂರು: ಮೆಟ್ರೋ ರೈಲು ನಿಗಮ ನಿಯಮಿತ (BMRCL) ಬನ್ನೇರುಘಟ್ಟ ರಸ್ತೆಯಲ್ಲಿ ಸಂಚರಿಸುವ ಪ್ರಯಾಣಿಕರಿಗೆ ಒಂದು ಸಲಹೆಯನ್ನು ನೀಡಿದೆ. ಬೆಂಗಳೂರು ಮೆಟ್ರೋ ನಿರ್ಮಾಣದ ಪರಿಣಾಮವಾಗಿ, ಆನೆಪಾಳ್ಯ ಜಂಕ್ಷನ್‌‌ ಗೆ MICO ಸಿಗ್ನಲ್‌ ನ ಉದ್ದಕ್ಕೂ ಒಂದು ವರ್ಷದವರೆಗೆ ಭಾಗಶಃ ಸಂಚಾರ ಮುಚ್ಚಲಾಗುತ್ತದೆ. ಈ ಸಂಬಂಧ BMRCL ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿದೆ. ಬನ್ನೇರುಘಟ್ಟ ಮುಖ್ಯರಸ್ತೆಯಲ್ಲಿ MICO ಸಿಗ್ನಲ್‌ನಿಂದ ಆನೆಪಾಳ್ಯ ಜಂಕ್ಷನ್‌ ಗೆ ಉತ್ತರದ ಮಾರ್ಗದಲ್ಲಿ ಸಂಚರಿಸುವ ಪ್ರಯಾಣಿಕರಿಗೆ ಏಪ್ರಿಲ್ 1, 2024 ರಿಂದ ಒಂದು ವರ್ಷದವರೆಗೆ ರಸ್ತೆ ಬಂದ್‌ ಆಗಲಿದೆ. ದಕ್ಷಿಣ ಭಾಗದ ಪ್ರವೇಶದ ನಿರ್ಮಾಣದಿಂದಾಗಿ ಈ ರಸ್ತೆ ಬಂದ್‌ ಅನಿವಾರ್ಯವಾಗಿದೆ. ಈ ಅವಧಿಯಲ್ಲಿ, ಬನ್ನೇರುಘಟ್ಟ ಮುಖ್ಯರಸ್ತೆಯಿಂದ ಆನೆಪಾಳ್ಯ ಜಂಕ್ಷನ್‌ ಗೆ ತಲುಪಲು ಉದ್ದೇಶಿಸಿರುವ ವಾಹನ ಚಾಲಕರನ್ನು MICO ಸಿಗ್ನಲ್‌ ನಲ್ಲಿ ಬಲ ತಿರುವು ಪಡೆಯಲು ಮರುನಿರ್ದೇಶಿಸಲಾಗುತ್ತದೆ, BOSCH ಲಿಂಕ್ ರಸ್ತೆಯ ಮೂಲಕ ಆಡುಗೋಡಿ ಸಿಗ್ನಲ್‌ಗೆ ತೆರಳಿ ನಂತರ ಅವರು ಎಡ ತಿರುವು ಪಡೆಯಬೇಕು. ಆದರೆ, ಆನೆಪಾಳ್ಯ ಜಂಕ್ಷನ್‌ನಿಂದ ಡೈರಿ ವೃತ್ತದ ಕಡೆಗೆ…

Read More

ಬಿಗ್ ಬಾಸ್’ ಖ್ಯಾತಿಯ ತನಿಷಾ ಕುಪ್ಪಂಡ ಬಣ್ಣದ ಲೋಕದಲ್ಲಿ ಗುರುತಿಸಿಕೊಂಡಿದ್ದಾರೆ. ಇದೀಗ ಉದ್ಯಮಿಯಾಗಿಯೂ ವೃತ್ತಿ ಆರಂಭಿಸಿದ್ದಾರೆ. ಹೋಟೆಲ್ ಉದ್ಯಮದ ನಂತರ ಇದೀಗ ಆಭರಣ ಮಳಿಗೆಗೆ ತನಿಷಾ ಚಾಲನೆ ನೀಡಿದ್ದು ಎಲ್ಲೆಡೆ ಸುದ್ದಿಯಾಗಿದೆ. ನಟಿಯ ಹೊಸ ಹೆಜ್ಜೆಗೆ ‘ಬಿಗ್ ಬಾಸ್’ ಸ್ಪರ್ಧಿಗಳು ಕೂಡ ಸಾಥ್‌ ನೀಡಿದ್ದಾರೆ. ಬಿಗ್ ಬಾಸ್ ಮುಗಿಯುತ್ತಿದ್ದಂತೆ ತಮಗೆ ಸಿಕ್ಕಿರುವ ಜನಪ್ರಿಯತೆಯನ್ನು ಸದುಪಯೋಗಪಡಿಸಿಕೊಳ್ತಿದ್ದಾರೆ. ಈಗೀನ ಕಾಲಕ್ಕೆ ತಕ್ಕಂತೆ ಮಹಿಳಾ ಮಣಿಗಳಿಗೆ ಇಷ್ಟವಾಗುವ ಹಾಗೇ ಸ್ಟೈಲೀಶ್ ಆಭರಣಗಳು ತನಿಷಾ ಜ್ಯುವೆಲ್ಲರಿಯಲ್ಲಿ ಸಿಗಲಿದೆ. ತನಿಷಾ ಹೊಸ ಹೆಜ್ಜೆಗೆ ಸಾಥ್ ನೀಡಲು ಲೂಸ್ ಮಾದ ಯೋಗಿ ದಂಪತಿ, ‘ಬಿಗ್ ಬಾಸ್’ ವಿನ್ನರ್ ಕಾರ್ತಿಕ್ ಮಹೇಶ್, ಸಿರಿ, ಪವಿ ಪೂವಪ್ಪ, ರಕ್ಷಕ್, ನಮ್ರತಾ ಗೌಡ, ವರ್ತೂರು ಸಂತೋಷ್, ವಿನಯ್ ಗೌಡ, ನೀತು ವನಜಾಕ್ಷಿ, ಸ್ನೇಹಿತ್‌ ಗೌಡ, ಕಿರುತೆರೆ ನಟಿ ಭವ್ಯಾ ಗೌಡ, ಕಾರುಣ್ಯ ರಾಮ್ ಸೇರಿದಂತೆ ಅನೇಕರು ಭಾಗಿಯಾಗಿದ್ದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು…

Read More

ಏಪ್ರಿಲ್‌ನಲ್ಲಿ 14 ದಿನಗಳ ಕಾಲ ಬ್ಯಾಂಕ್‌ ಗಳು ಬಂದ್ ಇರಲಿವೆ. ಭಾರತೀಯ ರಿಸರ್ವ್ ಬ್ಯಾಂಕ್ ಏಪ್ರಿಲ್ ತಿಂಗಳ ಸಾರ್ವಜನಿಕ ರಜಾದಿನಗಳ ಪಟ್ಟಿಯನ್ನು ಹಂಚಿಕೊಂಡಿದೆ. ಈ ಪಟ್ಟಿಯ ಪ್ರಕಾರ ಮುಂಬರುವ ತಿಂಗಳಲ್ಲಿ 14 ದಿನಗಳವರೆಗೆ ಬ್ಯಾಂಕುಗಳುಳಿಗೆ ರಜೆಯಿದೆ. ಇತ್ತೀಚೆಗೆ ಆರ್‌ಬಿಐ ಮಾರ್ಚ್ 31 ರ ಭಾನುವಾರ ಕೂಡ ಬ್ಯಾಂಕ್‌ಗಳಿಗೆ ರಜೆಯಿಲ್ಲ. ಕೆಲಸ ಮಾಡಬೇಕು ಎಂದು ಘೋಷಿಸಿದೆ. ಹಣಕಾಸು ವರ್ಷದ ಮುಕ್ತಾಯವಾಗಿರುವುದಿಂದ ವಾರ್ಷಿಕ ಲೆಕ್ಕಪತ್ರಗಳ ಕೆಲಸ ಹೆಚ್ಚಾಗಿದೆ. ಇದೆ ಕಾರಣಕ್ಕೆ ಮಾರ್ಚ್ 30 ರ ಶನಿವಾರ ಮತ್ತು ಮಾರ್ಚ್ 31ರ ಭಾನುವಾರ ಆರ್‌ಬಿಐ ಕಚೇರಿಗಳು ಓಪನ್ ಇರಲಿವೆ. ಏಪ್ರಿಲ್ 1, 2024: ಏಪ್ರಿಲ್ 1 ರಂದು ಬ್ಯಾಂಕುಗಳು ಮುಚ್ಚಿರಲಿದೆ. ಆದರೆ, ಪಶ್ಚಿಮ ಬಂಗಾಳ, ಹಿಮಾಚಲ ಪ್ರದೇಶ, ಮಿಜೋರಾಂ, ಚಂಡೀಗಢ, ಸಿಕ್ಕಿಂ ಮತ್ತು ಮೇಘಾಲಯದಂತಹ ಕೆಲವು ರಾಜ್ಯಗಳಲ್ಲಿ ಬ್ಯಾಂಕ್‌ ಗಳು ಕಾರ್ಯನಿರ್ವಹಿಸಲಿವೆ. ಏಪ್ರಿಲ್ 5, 2024: ಬಾಬು ಜಗಜೀವನ್ ಮತ್ತು ಜುಮಾ-ಉಲ್-ವಿದಾ ಅವರ ಜನ್ಮ ವಾರ್ಷಿಕೋತ್ಸವವನ್ನು ಆಚರಿಸಲು, ತೆಲಂಗಾಣ ಮತ್ತು ಜಮ್ಮು ಮತ್ತು ಕಾಶ್ಮೀರದಲ್ಲಿ ಬ್ಯಾಂಕ್‌ಗಳು…

Read More

ಮಂಡ್ಯ: ಮಂಡ್ಯದಲ್ಲಿ ಬಿಜೆಪಿ ಮತ್ತು ಜೆಡಿಎಸ್‌ ಒಂದಾದರೆ ಗೆಲುವು ನಿಶ್ಚಿತ. ಪ್ರೀತಿ, ವಿಶ್ವಾಸದಿಂದ ಕುಮಾರಣ್ಣರನ್ನು ಕೇಂದ್ರ ಸಚಿವರನ್ನಾಗಿ ಮಾಡುತ್ತೇವೆ ಎಂದು ಸಂಸದ ಪ್ರತಾಪ್ ಸಿಂಹ ಹೇಳಿದ್ದಾರೆ. ಜಿಲ್ಲೆಯ ನಾಗಮಂಗಲದಲ್ಲಿ ಸುದ್ದಿಗಾರರೊಂದಿಗೆ  ಮಾತನಾಡಿದ ಅವರು, ದೇಶ ಕಾಯಲು ಮೋದಿಜೀ, ಕಾವೇರಿ ಕಾಯಲು ಕುಮಾರಣ್ಣ ಬೇಕು. ನಾವು ಬಿಜೆಪಿ ಕಾರ್ಯಕರ್ತರು ಕುಮಾರಣ್ಣನ ಬೆನ್ನಿಗೆ ನಿಲ್ಲುತ್ತೇವೆ ಎಂದು ಹೇಳಿದ್ದಾರೆ. ಕಾಂಗ್ರೆಸ್ ಕಾಲಿಟ್ಟ ಕೂಡಲೇ ರಾಜ್ಯಕ್ಕೆ ಬರ‌ ಬಂದಿದೆ. ಬಿ.ಎಸ್.ಯಡಿಯೂರಪ್ಪ, ಕುಮಾರಣ್ಣ ಸಿಎಂ ಆಗಿದ್ದಾಗ ಮಳೆ, ಬೆಳೆ ಚೆನ್ನಾಗಿತ್ತು. ಕೆಆರ್ ​ಎಸ್​ ಬರಿದಾಗುವಾಗ ಸ್ಟಾಲೀನ್ ತಗಾದೆ ತೆಗೆಯಬೇಡಿ ಎನ್ನಲಿಲ್ಲ. ಆದರೆ ಚುನಾವಣೆಗಾಗಿ ಕೈ ಕೈ ಹಿಡಿದು ನಿಂತರು. ಇವತ್ತು ಕುಡಿಯುವ ನೀರಿಗೂ ಹೆಣಗಾಡುವ ಪರಿಸ್ಥಿತಿ ಇದೆ ಎಂದರು. ಅಸೆಂಬ್ಲಿಯಲ್ಲಿ ಜೆಡಿಎಸ್‌ ಎನ್ನುವ ಕಾರ್ಯಕರ್ತರು ಎಂಪಿ ಚುನಾವಣೆ ಬಂದಾಗ ಮೋದಿ ಪರ ನಿಲುತ್ತಾರೆ. ಮಂಡ್ಯದವರು ಸ್ವಾಭಿಮಾನಿಗಳು. ಮಂಡ್ಯ, ಮೈಸೂರಿಗೆ ಅವಿನಾಭಾವ ಸಂಬಂಧ ಇದೆ ಎಂದು ಅವರು ಹೇಳಿದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್…

Read More

ಹಾಸನ: ಹಿಟ್ ಆ್ಯಂಡ್​ ರನ್​ ಗೆ ಮಾವ ಮತ್ತು ಅಳಿಯ ಬಳಿಯಾದ ಘಟನೆ ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ತಾಲೂಕಿನ ಶೆಟ್ಟಿಹಳ್ಳಿ ಬೈಪಾಸ್​​ನಲ್ಲಿ ನಡೆದಿದೆ. ಅರಸೀಕೆರೆ ತಾಲೂಕಿನ ನಾಗೇನಹಳ್ಳಿ ನಿವಾಸಿ ಮಧು(35) ಹಾಗೂ ಬೇಲೂರು ತಾಲೂಕಿನ ದೇವಿಹಳ್ಳಿ ನಿವಾಸಿ ಜವರಯ್ಯ(65) ಮೃತ ರ್ದುದೈವಿಗಳು. ಬೆಂಗಳೂರಿನಿಂದ ಮಾವ, ಪತ್ನಿ ಜೊತೆ ಕಾರಿನಲ್ಲಿ ಬರುತ್ತಿದ್ದ ಮಧು, ಶೆಟ್ಟಿಹಳ್ಳಿ ಬೈಪಾಸ್​​ನಲ್ಲಿ ಕಾರಿನ ಟೈರ್​​​ ಪಂಚರ್ ​​ಆದ ಹಿನ್ನೆಲೆ ಟೈರ್ ಬದಲಾಯಿಸುವಾಗ ಲಾರಿ ಕಾರಿಗೆ ಡಿಕ್ಕಿ ಹೊಡೆದಿದೆ. ಮಧು ಸ್ಥಳದಲ್ಲೇ ಸಾವನ್ನಪ್ಪಿದರೆ, ತೀವ್ರವಾಗಿ ಗಾಯಗೊಂಡಿದ್ದ ಜವರಯ್ಯ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಮಧು ಪತ್ನಿ ಗೀತಾಗೆ ಚನ್ನರಾಯಪಟ್ಟಣ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು, ಇತ್ತ ಲಾರಿ ನಿಲ್ಲಿಸದೆ ಚಾಲಕ ಎಸ್ಕೇಪ್ ಆಗಿದ್ದಾನೆ. ಈ ಕುರಿತು ಚನ್ನರಾಯಪಟ್ಟಣ ಸಂಚಾರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

Read More

ಬೆಂಗಳೂರು ಗ್ರಾಮಾಂತರ:ಹಲಸಿನ ಹಣ್ಣು ಕೀಳುವಾಗ ಮರದ ಮೇಲಿಂದ ಬಿದ್ದು ಬಿಎಂಟಿಸಿ ಬಸ್ ಚಾಲಕ ಸಾವನ್ನಪ್ಪಿದ ಘಟನೆ ಜಿಲ್ಲೆಯ ನೆಲಮಂಗಲ ತಾಲೂಕಿನ ಅರಳಸಂದ್ರ ಗ್ರಾಮದಲ್ಲಿ ನಡೆದಿದೆ. ಮಂಜುನಾಥ್(43) ಮೃತ ರ್ದುದೈವಿ. ಇವರು ಕಳೆದ 15 ವರ್ಷಗಳಿಂದ ಪೀಣ್ಯದ ಬಿಎಂಟಿಸಿ ಡಿಪೋ 9ರಲ್ಲಿ ಕೆಲಸ ನಿರ್ವಹಿಸುತ್ತಿದ್ದರು. ಮರಣೋತ್ತರ ಪರೀಕ್ಷೆಗಾಗಿ ನೆಲಮಂಗಲ ಸಾರ್ವಜನಿಕ ಅಸ್ಪತ್ರೆಗೆ ಮೃತದೇಹ ರವಾನೆ ಮಾಡಲಾಗಿದೆ. ಈ ಕುರಿತು ನೆಲಮಂಗಲ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

Read More

ಬೀದರ್:  ರೈತರೊಬ್ಬರು ಬಾವಿಗೆ ಹಾರಿ ಸಾವಿಗೆ ಶರಣಾಗಿರುವ ಘಟನೆ ಬೀದರ ಜಿಲ್ಲಾ ಔರಾದ ತಾಲೂಕಿನ ಮುಸ್ತಾಪೂರ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಹುಲೆಪ್ಪ ಎಂಬವರ ಪುತ್ರ ಉಮಾಕಾಂತ(46) ಸಾವಿಗೆ ಶರಣಾದವರಾಗಿದ್ದಾರೆ.  ಶನಿವಾರ ಬೆಳಗ್ಗೆ  8 ಗಂಟೆಯ ಸುಮಾರಿಗೆ ಈ ಘಟನೆ ನಡೆದಿದೆ. ಮೃತ ವ್ಯಕ್ತಿ ಇಬ್ಬರು ಹೆಣ್ಣು ಹಾಗೂ ಓರ್ವ ಗಂಡು ಮಗನನ್ನು ಅಗಲಿದ್ದಾರೆ. ಘಟನಾ ಸ್ಥಳಕ್ಕೆ ಸಂತಪುರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಆತ್ಮಹತ್ಯೆಗೆ ನಿಖರ ಕಾರಣಗಳೇನು ಎನ್ನುವುದು ಇನ್ನೂ ತಿಳಿದು ಬಂದಿಲ್ಲ. ವರದಿ: ಅರವಿಂದ ಮಲ್ಲಿಗೆ, ಬೀದರ್ ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

Read More