Subscribe to Updates
Get the latest creative news from FooBar about art, design and business.
- ದಳವಾಯಿಹಳ್ಳಿಯಲ್ಲಿ ಕುಡಿಯುವ ನೀರಿಗೆ ಹಾಹಾಕಾರ: ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಗ್ರಾಮಸ್ಥರ ಆಕ್ರೋಶ, BPS ನಿಂದ ಟ್ಯಾಂಕರ್ ನೀರು ಪೂರೈಕೆ
- ಪಾವಗಡ: ದೊಡ್ಡಹಳ್ಳಿ ಸರ್ಕಾರಿ ಪ್ರೌಢಶಾಲೆಯಲ್ಲಿ 2026–27ನೇ ಸಾಲಿನ ದಾಖಲಾತಿ ಆರಂಭ
- ರಾಜ್ಯಸಭೆ ಚುನಾವಣೆಗೂ ಸಚಿವ ಸಂಪುಟ ಪುನರಾಚನೆಗೂ ಯಾವುದೇ ಸಂಬಂಧವಿಲ್ಲ: ಗೃಹ ಸಚಿವ ಜಿ. ಪರಮೇಶ್ವರ್ ಸ್ಪಷ್ಟನೆ
- ಸಿರಾದಲ್ಲಿ ಮೇ 26 ರಂದು ಜೆಡಿಎಸ್ ಪಕ್ಷದ ಪದಾಧಿಕಾರಿಗಳ ನೇಮಕಾತಿ ಕಾರ್ಯಕ್ರಮ
- ಮಕ್ಕಳ ಕೈಗೆ ಮೊಬೈಲ್ ಕೊಡುವ ಮುನ್ನ ಈ ಸುದ್ದಿ ಓದಿ: 1.98 ಲಕ್ಷ ರೂಪಾಯಿ ಕಳೆದುಕೊಂಡ ತುಮಕೂರಿನ ವ್ಯಕ್ತಿ!
- ಚಿಲ್ಲರೆಗಳಿಗೆ ನಾನು ಹೆದರುವ ಮಗನೇ ಅಲ್ಲ ಕೀಳುಮಟ್ಟದ ರಾಜಕಾರಣ ನನಗೆ ಗೊತ್ತಿಲ್ಲ: ಶಾಸಕ ಎಸ್. ಆರ್.ಶ್ರೀನಿವಾಸ್ ತಿರುಗೇಟು
- ತುಮಕೂರು ಜಿಲ್ಲೆಯಲ್ಲಿ 0.3 ಮಿ.ಮೀ. ಮಳೆ
- ಕೆಎಸ್ ಆರ್ ಟಿಸಿ ಬಸ್ ದರ ಏರಿಕೆ ಖಚಿತ: ಸಾರಿಗೆ ಸಂಸ್ಥೆ ಅಧ್ಯಕ್ಷ ಎಸ್.ಆರ್. ಶ್ರೀನಿವಾಸ್
Author: admin
ವರದಿ : ಮಂಜುಸ್ವಾಮಿ ಎಂ.ಎನ್.ಕೊರಟಗೆರೆ ಕೊರಟಗೆರೆ: ಕೇಂದ್ರ ಸರಕಾರದಿಂದ ಕೊರಟಗೆರೆ ಕ್ಷೇತ್ರಕ್ಕೆ ಹೈಟೆಕ್ ಆಸ್ಪತ್ರೆ ತಂದೇ ತರುತ್ತೇನೆ ಇದು ಕೇವಲ ಭರವಸೆ ಅಲ್ಲ ಬಡ ಜನರ ನೋವಿನ ಮನವಿ. ಗ್ರಾಮೀಣ ಭಾಗದ ರಸ್ತೆಗಳ ಅಭಿವೃದ್ದಿಗೆ ಪ್ರಥಮ ಆದ್ಯತೆ. ಸಿದ್ದರಬೆಟ್ಟ ಮತ್ತು ಏಳುಸುತ್ತಿನ ಕೋಟೆಯನ್ನು ಪ್ರವಾಸಿ ತಾಣವನ್ನಾಗಿ ಮಾಡುವ ರೂಪುರೇಷೆ ಮಾಡುತ್ತೇನೆ. ಕೊರಟಗೆರೆ ಕ್ಷೇತ್ರದ ಬಿಜೆಪಿ ಮತ್ತು ಜೆಡಿಎಸ್ ಕಾರ್ಯಕರ್ತರ ಕಾವಲುಗಾರನಾಗಿ ನಾನು ಹಗಲುರಾತ್ರಿ ಕೆಲಸ ಮಾಡುತ್ತೇನೆ ಎಂದು ತುಮಕೂರು ಲೋಕಸಭಾ ಕ್ಷೇತ್ರದ ಜೆಡಿಎಸ್–ಬಿಜೆಪಿ ಅಭ್ಯರ್ಥಿ ವಿ.ಸೋಮಣ್ಣ ಹೇಳಿದರು. ಮಾಜಿ ಸಚಿವ ಗೋಪಾಲಯ್ಯ ಮಾತನಾಡಿ, ಕಾಂಗ್ರೇಸ್ ಸರಕಾರ ಅಧಿಕಾರಕ್ಕೆ ಬಂದರೇ ರಾಜ್ಯಕ್ಕೆ ಬರಗಾಲವು ತಾನಾಗಿಯೇ ಬರುತ್ತೇ. ಕುಡಿಯುವ ನೀರು ಮತ್ತು ಮೇವಿಗೆ ಹಾಹಾಕಾರ ಎದುರಾಗಿದೆ. ರಾಷ್ಟ್ರ ಮತ್ತು ರಾಜ್ಯದ ಅಭಿವೃದ್ದಿಗೆ ಮಾಜಿ ಪ್ರಧಾನಿ ದೇವೇಗೌಡರ ಕೊಡುಗೆ ಅಪಾರ. ವಿ.ಸೋಮಣ್ಣ ಅಭಿವೃದ್ದಿಯ ಪರವಾದ ಜನಸ್ನೇಹಿ ನಾಯಕ. ತುಮಕೂರು ಜಿಲ್ಲೆಯನ್ನ ಅಭಿವೃದ್ದಿಗೆ ಅವರ ಕೊಡುಗೆ ನೀಡ್ತಾರೇ ಎಂದು ಹೇಳಿದರು. ತುಮಕೂರು ಗ್ರಾಮಾಂತರ ಶಾಸಕ ಬಿ.ಸುರೇಶಗೌಡ ಮಾತನಾಡಿ…
ನಟಿ, ರಾಜಕಾರಣಿ ಖುಷ್ಬೂ ಸುಂದರ್ ಗೆ ಸಾಕಷ್ಟು ಜನಪ್ರಿಯತೆ ಸಿಕ್ಕಿದೆ. ಕಳೆದ ವರ್ಷ ರಾಷ್ಟ್ರೀಯ ಮಹಿಳಾ ಆಯೋಗಕ್ಕೆ ನೇಮಕಗೊಂಡಿದ್ದಾರೆ. ಈ ಬಗ್ಗೆ ಮಾತನಾಡಿದ ನಟಿ ತಮ್ಮ ಜೀವನದ ಕಹಿ ನೆನಪುಗಳನ್ನು ಬಿಚ್ಚಿಟ್ಟಿದ್ದಾರೆ. ಬಹುತೇಕ ತಂದೆಯರಿಗೆ ಮಕ್ಕಳ ಮೇಲೆ ಪ್ರೀತಿ ಇರುತ್ತದೆ. ಆದರೆ, ಖಷ್ಬೂ ತಂದೆಗೆ ಮಗಳ ಮೇಲೆ ಇದ್ದಿದ್ದು ಕಾಮ ಎಂದು ಅವರು ಹೇಳಿದ್ದಾರೆ. ‘ಸಣ್ಣ ವಯಸ್ಸಿನಲ್ಲಿದ್ದಾಗ ಮಗುವಿನ ಮೇಲೆ ದೌರ್ಜನ್ಯ ನಡೆದರೆ, ಆ ಕಹಿ ನೆನಪು ಕೊನೆಯವರೆಗೂ ಇರುತ್ತದೆ. ಅದು ಹುಡುಗನೇ ಆಗಿರಬಹುದು, ಹುಡುಗಿಯೇ ಆಗಿರಬಹುದು. ನನ್ನ ತಂದೆಯಿಂದ ನಾನು ಸಾಕಷ್ಟು ಕಿರುಕುಳ ಅನುಭವಿಸಿದ್ದೇನೆ. ಆತ ನನ್ನ ತಾಯಿಗೆ ಸಾಕಷ್ಟು ಹೊಡೆಯುತ್ತಿದ್ದ. ಹೆಂಡತಿಗೆ ಹಾಗೂ ಮಕ್ಕಳಿಗೆ ಹೊಡೆಯೋದು, ಮಗಳಿಗೆ ಲೈಂಗಿಕ ಕಿರುಕುಳ ನೀಡೋದು ಆತನ ಕೆಲಸ ಆಗಿತ್ತು. ಅದನ್ನು ಅವನು ಜನ್ಮಸಿದ್ಧ ಹಕ್ಕು ಎಂದು ಭಾವಿಸಿದ್ದ’ ಎಂದು ಖುಷ್ಬೂ ಸುಂದರ್ ಹೇಳಿಕೊಂಡಿದ್ದರು. ಖುಷ್ಬೂ ಸುಂದರ್ ಮೇಲೆ ತಂದೆಯಿಂದಲೇ ಲೈಂಗಿಕ ದೌರ್ಜನ್ಯ ಆಗಿತ್ತು. ಆಗ ಅವರಿಗೆ 8 ವರ್ಷ ವಯಸ್ಸು. ವರ್ಷಗಳು…
ಮಾರ್ಚ್ 16 ರಿಂದ ಮಾದರಿ ನೀತಿ ಸಂಹಿತೆ ಜಾರಿಗೆ ಬಂದ ನಂತರ, ರಾಜ್ಯದಲ್ಲಿ 20.85 ಕೋಟಿ ರೂಪಾಯಿ ನಗದು ಮತ್ತು 27 ಕೋಟಿ ರೂಪಾಯಿ ಮೌಲ್ಯದ ಮದ್ಯವನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಚುನಾವಣಾ ಆಯೋಗ ತಿಳಿಸಿದೆ. ಕರ್ನಾಟಕ ಮುಖ್ಯ ಚುನಾವಣಾಧಿಕಾರಿಗಳ ಕಚೇರಿ ಹೊರಡಿಸಿದ ಹೇಳಿಕೆಯ ಪ್ರಕಾರ, ಮಾದರಿ ನೀತಿ ಸಂಹಿತೆ ಜಾರಿಯಾದಾಗಿನಿಂದ ಫೈಯಿಂಗ್ ಸ್ಕ್ಯಾಡ್, ಸ್ಟ್ಯಾಟಿಕ್ ಸರ್ವೆಲೆನ್ಸ್ ತಂಡಗಳು ಮತ್ತು ಪೊಲೀಸ್ ಅಧಿಕಾರಿಗಳು 20.85 ಕೋಟಿ ನಗದು, 70.86 ಲಕ್ಷ ಉಚಿತ 8.63 ಲಕ್ಷ ಲೀಟರ್ ಮದ್ಯವನ್ನು ವಶಪಡಿಸಿಕೊಂಡಿದ್ದಾರೆ. 27 ಕೋಟಿಗೂ ಅಧಿಕ ಮೌಲ್ಯದ 211.23 ಕೆಜಿ ಮಾದಕ ವಸ್ತುಗಳು, 1.47 ಕೋಟಿ ರೂ.ಗೂ ಅಧಿಕ ಮೌಲ್ಯದ 211.23 ಕೆಜಿ ಮಾದಕ ವಸ್ತುಗಳು, 9 ಕೋಟಿ ರೂ.ಗೂ ಅಧಿಕ ಮೌಲ್ಯದ 15 ಕೆಜಿಗಿಂತ ಹೆಚ್ಚಿನ ಚಿನ್ನ, 27 ಲಕ್ಷ ರೂ.ಗೂ ಅಧಿಕ ಮೌಲ್ಯದ 59.04 ಕೆಜಿ ಬೆಳ್ಳಿ ಹಾಗೂ 9 ಲಕ್ಷ ರೂ. ಮೌಲ್ಯದ 21.17 ಕ್ಯಾರೆಟ್ ವಜ್ರಗಳು ಸೇರಿದಂತೆ ಇತರವುಗಳು. ಇಲ್ಲಿಯವರೆಗೆ…
ಅಫ್ಘಾನಿಸ್ತಾನದಲ್ಲಿ ಅಮೆರಿಕ ಸೇನೆ ನಿಯೋಜನೆ ಅಂತ್ಯಗೊಂಡ ಬಳಿಕ, ಅಫ್ಘಾನನಿಸ್ತಾನದ ಆಡಳಿತವನ್ನು ತೆಕ್ಕೆಗೆ ಪಡೆದಿರುವ ತಾಲಿಬಾನ್, ಹಲವು ಮಾನವ ಹಕ್ಕುಗಳ ಉಲ್ಲಂಘನೆ ಆರೋಪ ಎದುರಿಸುತ್ತಿದೆ. ಅದರಲ್ಲೂ ಹೆಣ್ಣುಮಕ್ಕಳ ಬಹುತೇಕ ಎಲ್ಲಾ ಹಕ್ಕುಗಳನ್ನು ಕಸಿದುಕೊಳ್ಳಲಾಗಿದೆ. ಇದೀಗ ತಾಲಿಬಾನ್ ಮುಖ್ಯಸ್ಥ ಮುಲ್ಲಾ ಹಿಬಾತುಲ್ಹಾ ಅಖುಂಡಝದಾ ಮಹತ್ವದ ಸೂಚನೆ ನೀಡಿದ್ದಾರೆ. ಅಫ್ಘಾನಿಸ್ತಾನದಲ್ಲಿ ಸಂಪೂರ್ಣ ಷರಿಯಾ ಕಾನೂನು ಜಾರಿಯಾಗುತ್ತಿದೆ. ಮಹಿಳೆಯರನ್ನು ಸಾರ್ವಜನಿಕವಾಗಿ ಕಲ್ಲಿನಿಂದ ಹೊಡೆದು ಸಾಯಿಸುವ, ಬಡಿಗೆಯಿಂದ ಬಡಿದು ಸಾಯಿಸುವ ನಿಯಮವೂ ಜಾರಿಯಾಗುತ್ತಿದೆ. 20 ವರ್ಷ ಹೋರಾಡಿ ಆಡಳಿತ ಪಡೆದಿದ್ದೇವೆ. ಮುಂದಿನ 20 ವರ್ಷ ಅಥವಾ ಅದಕ್ಕಿಂತ ಹೆಚ್ಚು ವರ್ಷ ಹೋರಾಡಿ ಸಂಪೂರ್ಣ ಷರಿಯಾ ಕಾನೂನು ತಂದು ದೇವರ ಆಜ್ಞೆ ಪಾಲಿಸುತ್ತೇವೆ ಎಂದಿದ್ದಾರೆ. ಆಫ್ಘಾನಿಸ್ತಾನ ಪ್ರಜಾಪ್ರಭುತ್ವದ ರಾಷ್ಟ್ರವಲ್ಲ. ಈ ರಾಷ್ಚ್ರ ಷರಿಯಾ ಕಾನೂನು ಮೂಲಕ ಮುಂದೆ ಸಾಗಲಿದೆ. ನಾವು ದೇವರ ಪ್ರತಿನಿಧಿಗಳು. ದೇವರ ಆಜ್ಞೆಯನ್ನು ಪಾಲಿಸುವುದು ನಮ್ಮ ಕರ್ತವ್ಯ. ಅಂತಾರಾಷ್ಟ್ರೀಯ ಕಾನೂನು ಏನೇ ಇರಬಹುದು, ಆದರೆ ಷರಿಯಾ ಏನು ಹೇಳುತ್ತದೆ ಅನ್ನೋದರ ಮೇಲೆ ನಮ್ಮ ಆಡಳಿತ. ಮಹಿಳೆಯರ ಹಕ್ಕುಗಳು,…
ರಾಜ್ಯಕ್ಕೆ ವಿದ್ಯುತ್ ಕೊರತೆಯ ಶಾಕ್ ಎದುರಾಗಿದ್ದು, ಇದಕ್ಕೆ ಜಲಕ್ಷಾಮ ಕಾರಣ ಎನ್ನಲಾಗಿದೆ. ರಾಯಚೂರಿನ ಶಕ್ತಿನಗರದ ಶಾಖೋತ್ಪನ್ನ ವಿದ್ಯುತ್ ಕೇಂದ್ರ ಆರ್ ಟಿಪಿಎಸ್ ನ ನಾಲ್ಕು ಘಟಕಗಳು ಸ್ಥಗಿತವಾಗಿದ್ದು, ಬರಗಾಲ ಹಿನ್ನೆಲೆ ರಾಜ್ಯದಲ್ಲಿ ಈಗಾಗಲೇ ಎಲ್ಲೆಡೆ ನೀರಿಗಾಗಿ ಹಾಹಾಕಾರ ಎದ್ದಿದೆ. ಈಗ ಬಿರು ಬೇಸಿಗೆಯಲ್ಲಿ ವಿದ್ಯುತ್ ಕ್ಷಾಮ ಸಹ ಎದುರಾಗುವ ಭೀತಿ ಉಂಟಾಗಿದೆ. ರಾಜ್ಯಕ್ಕೆ ಶೇ.40 ರಷ್ಟು ವಿದ್ಯುತ್ ಪೂರೈಸುವ ವಿದ್ಯುತ್ ಕೇಂದ್ರದಲ್ಲಿ ತಾಂತ್ರಿಕ ಸಮಸ್ಯೆ ತಲೆದೂರಿದ್ದು, ಆರ್ ಟಿಪಿಎಸ್ ನ ಎಂಟು ಘಟಕಗಳಲ್ಲಿ ನಾಲ್ಕು ಘಟಕ ವಿದ್ಯುತ್ ಉತ್ಪಾದನೆ ಸಂಪೂರ್ಣ ಸ್ಥಗಿತಗೊಳಿಸಿವೆ. ಬಾಯ್ಲರ್ ಟ್ಯೂಬ್ ಲೀಕೇಜ್ ಹಾಗೂ ಬಂಕ್ಲರ್ ಸಮಸ್ಯೆಯಿಂದ ಘಟಕಗಳು ಸ್ಥಗಿತಗೊಂಡಿವೆ. 1720 ಮೆಗಾವ್ಯಾಟ್ ವಿದ್ಯುತ್ ಉತ್ಪಾದನಾ ಸಾಮರ್ಥ್ಯದ ಕೇಂದ್ರದಲ್ಲಿ ಈಗ ಕೇವಲ 665 ಮೆಗಾ ವ್ಯಾಟ್ ಉತ್ಪಾದನೆಯಾಗುತ್ತಿದೆ. ವಿದ್ಯುತ್ ಕೇಂದ್ರದ 1,2,3 ಹಾಗೂ 6 ನೇ ಘಟಕ ಬಂದ್ ಆಗಿದ್ದು, ಬೇಸಿಗೆಯಲ್ಲಿ ಹೆಚ್ಚು ಒತ್ತಡ ಇರುವ ಶಾಖೋತ್ಪನ್ನ ವಿದ್ಯುತ್ ಕೇಂದ್ರದಲ್ಲೇ ಉತ್ಪಾದನೆ ಕುಂಠಿತವಾಗಿದೆ. ನೀರಿನ ಸಮಸ್ಯೆ ಬೆನ್ನಲ್ಲೆ ತಾಂತ್ರಿಕ…
ಹಾಸನ: ಅಕ್ರಮ ಗೋಮಾಂಸ ಮಾರಾಟಕ್ಕಾಗಿ ಜಾನುವಾರುಗಳ ಮಾರಣಹೋಮ ನಡೆಸಿದ ಘಟನೆ ಹಾಸನ ಜಿಲ್ಲೆಯ ಚನ್ನರಾಯಪಟ್ಟಣದ ಬಾಗೂರು ರಸ್ತೆ ಬಳಿ ನಡೆದಿದೆ. ಖಚಿತ ಮಾಹಿತಿ ಮೇರೆಗೆ ಪೊಲೀಸರು ದಾಳಿ ನಡೆಸಿದಾಗ 60 ಕ್ಕೂ ಹೆಚ್ಚು ಗೋವುಗಳನ್ನು ಹತ್ಯೆ ಮಾಡಿರುವುದು ಪತ್ತೆಯಾಗಿದೆ. ಗೋವುಗಳ ಹತ್ಯೆ ವಿಚಾರ ತಿಳಿದ ಕೂಡಲೇ ಮಧ್ಯರಾತ್ರಿ ಸುಮಾರು 12.30ರ ವೇಳೆಗೆ ಪೊಲೀಸರು ದಾಳಿ ನಡೆಸಿದ್ದಾರೆ. ಅಷ್ಟರಲ್ಲೇ ಕರುಗಳು ಸೇರಿದಂತೆ 60ಕ್ಕೂ ಹೆಚ್ಚು ಜಾನುವಾರಗಳನ್ನು ಹತ್ಯೆ ಮಾಡಿ ರುಂಡಗಳನ್ನು ಬೇರ್ಪಡಿಸಿ, ಕೈಕಾಲುಗಳನ್ನು ಕತ್ತರಿಸಿ, ಚರ್ಮ ಸುಲಿದು ನೇತು ಹಾಕಲಾಗಿತ್ತು. ಸದ್ಯ, ಐದು ಗೋವುಗಳನ್ನು ಪೊಲೀಸರು ರಕ್ಷಣೆ ಮಾಡಿದ್ದು, ಸಾವಿರ ಕೆಜಿಗೂ ಅಧಿಕ ಗೋಮಾಂಸವನ್ನು ವಶಕ್ಕೆ ಪಡೆದಿದ್ದಾರೆ. ಗೋವುಗಳನ್ನು ಹತ್ಯೆ ಮಾಡಿದ ನಂತರ ಗೋಹಂತಕರು ಗೋವುಗಳ ರಕ್ತವನ್ನು ಪಕ್ಕದ ಕೆರೆಗೆ ಹರಿಸಿದ್ದಾರೆ ಎನ್ನಲಾಗಿದೆ. ಪೊಲೀಸರು ದಾಳಿ ನಡೆಸುತ್ತಿದ್ದಂತೆ ಹಂತಕರು ಪರಾರಿಯಾಗಿದ್ದಾರೆ ಎನ್ನಲಾಗಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ಸಮುದ್ರದಲ್ಲಿ ಮೀನುಗಾರರ ಬಲೆಗೆ ಅಪರೂಪದ ಮೀನು ಸಿಕ್ಕಿದ್ದು, ಮೀನಿನ ವಿಚಿತ್ರ ರೂಪವನ್ನು ಕಂಡು ಒಂದು ಕ್ಷಣ ಮೀನುಗಾರರೇ ಹೆದರಿದ್ದಾರೆ ಎನ್ನಲಾಗಿದೆ, ಈ ಘಟನೆ ಆಂಧ್ರ ಪ್ರದೇಶದ ವಿಶಾಖಪಟ್ಟಣಂನಲ್ಲಿ ನಡೆದಿದೆ. ಮೀನಿನ ಬಗ್ಗೆ ವಿಶಾಖಪಟ್ಟಣಂನ ಸಹಾಯಕ ಮೀನುಗಾರಿಕಾ ನಿರ್ದೇಶಕ ಡಾ. ಪಿ. ಶ್ರೀನಿವಾಸ್ ರಾವ್ ಮಾಹಿತಿ ನೀಡಿದ್ದು, ಇದು ಪಫ್ಫರ್ ಫಿಶ್ ಎಂದು ತಿಳಿಸಿದ್ದಾರೆ. ಆದರೆ, ಸ್ಥಳೀಯ ಮೀನುಗಾರರು ಇದನ್ನು ಸಮುದ್ರ ಕಪ್ಪೆ ಎಂದು ಭಾವಿಸಿದ್ದರು. ಈ ಮೀನು ಸಮುದ್ರದ ಆಳದಲ್ಲಿ ಅಲೆದಾಡುತ್ತವೆ. ಬಲೆಗೆ ಬಿದ್ದಾಗ ಅಥವಾ ಯಾರಾದರು ದಾಳಿ ಮಾಡಿದಂತಹ ಸಂದರ್ಭದಲ್ಲಿ ತಮ್ಮ ದೇಹವನ್ನು ಬಲೂನ್ ರೀತಿ ಮಾಡಿಕೊಳ್ಳುತ್ತವೆ. ಈ ಮೀನು ನೋಡಲು ಸ್ವಲ್ಪ ಮನುಷ್ಯನ ಮುಖವನ್ನು ಹೋಲುತ್ತದೆ ಎನ್ನಲಾಗಿದೆ. ಈ ಪಫ್ಪರ್ ಫಿಶ್ ತುಂಬಾ ವಿಷಕಾರಿ ಮೀನು. ಇತರ ಸಮುದ್ರ ಪ್ರಭೇದಗಳಿಂದ ತನ್ನನ್ನು ರಕ್ಷಿಸಿಕೊಳ್ಳಲು, ಈ ಮೀನಿನ ಯಕೃತ್ತಿನಲ್ಲಿ ಶಕ್ತಿಯುತವಾದ ವಿಷ ಉತ್ಪಾದನೆಯಾಗುತ್ತದೆ. ಈ ವಿಷವು ಸೈನೈಡ್ ಗಿಂತ 1,000 ಪಟ್ಟು ಹೆಚ್ಚು ಮಾರಕವಾಗಿದೆ. ಇದನ್ನು ಹೆಚ್ಚಾಗಿ ಜಪಾನ್ ನಲ್ಲಿ…
ಮುಟ್ಟಿನ ಹೊಟ್ಟೆನೋವು ಸಾಮಾನ್ಯವಾಗಿ ಎಲ್ಲಾ ಮಹಿಳೆಯರಲ್ಲೂ ಇರುತ್ತೆ. ಕೆಲವೊಬ್ಬರಿಗೆ ಆ ನೋವು ವಿಪರೀತವಾಗಿರಲೂ ಬಹುದು. ಹೀಗೆ 14 ವರ್ಷದ ಬಾಲಕಿಯೊಬ್ಬಳು ತನ್ನ ಮೊದಲ ಮುಟ್ಟಿನ ನೋವಿನಿಂದ ಮಾನಸಿಕ ಖಿನ್ನತೆಗೆ ಒಳಗಾಗಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮುಂಬೈನ ಮಲಾಡ್ ನಲ್ಲಿ ನಡೆದಿದೆ. ಈ ಬಾಲಕಿಗೆ ಮುಟ್ಟಿನ ಬಗ್ಗೆ ಮಾಹಿತಿ ತಿಳಿಯದೇ ಇರುವುದೇ ಸಾವಿಗೆ ಕಾರಣವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಮಾರ್ಚ್ 26 ರಂದು ತಡರಾತ್ರಿ ಈ ಘಟನೆ ನಡೆದಿದ್ದು, ಮೊದಲ ಬಾರಿಗೆ ಋತುಸ್ರಾವವಾದಾಗ ನೋವಿನ ಬಗ್ಗೆ ಕುಟುಂಬ ಸದಸ್ಯರಿಗೆ ತಿಳಿಸಿದ್ದಳು. ಇದಲ್ಲದೆ ನೋವಿನ ಜೊತೆಗೆ ಮಾನಸಿಕ ಒತ್ತಡವನ್ನು ಅನುಭವಿಸಿದ್ದಳು. ನೋವು ತಡೆದುಕೊಳ್ಳಲಾಗದೆ ಬಾಲಕಿ ಚಡಪಡಿಸಿ ಕೊಠಡಿಯಲ್ಲಿ ನೇಣು ಬಿಗಿದುಕೊಂಡಿದ್ದಾಳೆ ಎಂದು ಪೊಲೀಸರು ತಿಳಿಸಿದ್ದಾರೆ. ವಿಷಯ ತಿಳಿಯುತ್ತಿದ್ದಂತೆ ತಕ್ಷಣ ಹತ್ತಿರದ ಆಸ್ಪತ್ರೆಗೆ ಕರೆದೊಯ್ದರೂ, ಏನೂ ಪ್ರಯೋಜನವಾಗಲಿಲ್ಲ. ಪೊಲೀಸರು ಇದೀಗ ಬಾಲಕಿಯ ಕುಟುಂಬ ಸದಸ್ಯರು ಮತ್ತು ಶಾಲೆ, ಸ್ಥಳೀಯ ಸ್ನೇಹಿತರ ಹೇಳಿಕೆಗಳನ್ನು ತೆಗೆದುಕೊಂಡು ತನಿಖೆ ನಡೆಸುತ್ತಿದ್ದಾರೆ. ತನಿಖೆಯ ಸಲುವಾಗಿ ಆಕೆಯ ಖಿನ್ನತೆಯ ಬಗ್ಗೆಇನ್ನಷ್ಟು ತಿಳಿದುಕೊಳ್ಳಲು ಸ್ನೇಹಿತರ…
ಶೋಕಿಗಾಗಿ ಪಿಸ್ತೂಲ್ ಮಾದರಿಯ ಲೈಟರ್ ಹಿಡಿದು ಸಾಮಾಜಿಕ ಜಾಲತಾಣದಲ್ಲಿ ಪೋಟೋ ಹರಿಬಿಡುವ ಮೂಲಕ, ಸಮಾಜದಲ್ಲಿ ಅಶಾಂತಿ ಹಾಗೂ ಭಯದ ವಾತಾವರಣ ಸೃಷ್ಠಿಸಿದ ಇಬ್ಬರ ಯುವಕರ ವಿರುದ್ದ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ ಎನ್ನಲಾಗಿದೆ. ಶೋಕಿಗಾಗಿ ನಕಲಿ ಪಿಸ್ತೂಲ್ ಹಿಡಿದಿದ್ದ ಇಬ್ಬರು ಯುವಕರ ಮೇಲೆ ಜಿಲ್ಲೆಯ ಸೇಡಂ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕಲಬುರಗಿಯ ಸೇಡಂ ಪಟ್ಟಣದ ಇಂದಿರಾನಗರದ ನಿವಾಸಿಗಳಾದ ಮಹೇಶ ಹಾಗೂ ಬಸವರಾಜ ಎಂಬುವ ಯುವಕರೇ ನಕಲಿ ಲೈಟರ್ ಮಾದರಿ ಪಿಸ್ತೂಲ್ ಹಿಡಿದು ಸಾಮಾಜಿಕ ಜಾಲತಾಣದಲ್ಲಿ ಪೋಟೋ ಹರಿಬಿಟ್ಟ ಯುವಕರು ಎಂದು ಗುರುತಿಸಲಾಗಿದೆ. ಇದೇ ಘಟನೆಗೆ ಸಂಬಂಧಿಸಿದಂತೆ ಇನ್ನಿಬ್ಬರು ಯುವಕರನ್ನು ಕರೆಯಿಸಿ ವಿಚಾರಣೆ ನಡೆಸಿದ್ದು, ಅವರಿಂದ ನಕಲಿ ಲೈಟರ್ ಮಾದರಿ ಪಿಸ್ತೂಲ್ ನ್ನು ವಶಕ್ಕೆ ಪಡೆಯಲಾಗಿದ್ದು, ಮುಂದಿನ ದಿನಗಳಲ್ಲಿ ಈ ರೀತಿಯಾಗಿ ಸಾಮಾಜಿಕ ಜಾಲತಾಣದಲ್ಲಿ ಭಾವಚಿತ್ರಗಳನ್ನು ಹರಿಬಿಡುವ ಮೂಲಕ ಅಶಾಂತಿ ಸೃಷ್ಠಿಸದಂತೆ ಎಚ್ಚರಿಸಿದ್ದಾರೆ. ಪೊಲೀಸರು ಬಿಸಿ ಮುಟ್ಟಿಸಿದ ನಂತರ ಯುವಕರು, ಇನ್ನು ಈ ರೀತಿಯಲ್ಲಿ ನಕಲಿ ಪಿಸ್ತೂಲ್ ಮಾರಕಾಸ್ತ್ರಗಳನ್ನು ಹಿಡಿದ ಭಾವಚಿತ್ರಗಳನ್ನು ಸಾಮಾಜಿಕ…
ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿನ ಬಾಂಬ್ ಬ್ಲಾಸ್ಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ಎನ್ ಐಎ (NIA) ಅಧಿಕಾರಿಗಳು ಓರ್ವ ಆರೋಪಿಯನ್ನು ಬಂಧಿಸಿದ್ದಾರೆ. ರಾಮೇಶ್ವರಂ ಕೆಫ್ ಬ್ಲಾಸ್ಟ್ ಆದ ಬಾಂಬ್ ತಯಾರಿಕೆಯ ಪ್ರಮುಖ ಆರೋಪಿ ಮುಜಾಮುಲ್ ಶರೀಫ್ ಎನ್ನುವಾತನನ್ನು ನಿನ್ನೆ ಅಧಿಕಾರಿಗಳು ಬಂಧಿಸಿದ್ದಾರೆ. ಇದರ ಬೆನ್ನಲ್ಲೇ ಇದೀಗ ಮತ್ತಿಬ್ಬರ ಪ್ರಮುಖ ಆರೋಪಗಳ ಪತ್ತೆಗೆ ಬಲೆ ಬೀಸಿದೆ. ಆರೋಪಿಗಳಾದ ಅಬ್ದುಲ್ ಮತೀನ್ ಅಹ್ಮದ್ ತಾಹಾ ಹಾಗೂ ಮುಸಾವೀರ್ ಹುಸೇನ್ ಶಾಜಿಬ್ ಫೋಟೋವನ್ನು ಬಿಡುಗಡೆ ಮಾಡಲಾಗಿದ್ದು, ಈ ಆರೋಪಿಗಳ ಸುಳಿವು ನೀಡಿದವರಿಗೆ 10 ಲಕ್ಷ ಬಹುಮಾನ ನೀಡುವುದಾಗಿ ಎನ್ಐಎ ಘೋಷಣೆ ಮಾಡಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296