Subscribe to Updates
Get the latest creative news from FooBar about art, design and business.
- ದಳವಾಯಿಹಳ್ಳಿಯಲ್ಲಿ ಕುಡಿಯುವ ನೀರಿಗೆ ಹಾಹಾಕಾರ: ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಗ್ರಾಮಸ್ಥರ ಆಕ್ರೋಶ, BPS ನಿಂದ ಟ್ಯಾಂಕರ್ ನೀರು ಪೂರೈಕೆ
- ಪಾವಗಡ: ದೊಡ್ಡಹಳ್ಳಿ ಸರ್ಕಾರಿ ಪ್ರೌಢಶಾಲೆಯಲ್ಲಿ 2026–27ನೇ ಸಾಲಿನ ದಾಖಲಾತಿ ಆರಂಭ
- ರಾಜ್ಯಸಭೆ ಚುನಾವಣೆಗೂ ಸಚಿವ ಸಂಪುಟ ಪುನರಾಚನೆಗೂ ಯಾವುದೇ ಸಂಬಂಧವಿಲ್ಲ: ಗೃಹ ಸಚಿವ ಜಿ. ಪರಮೇಶ್ವರ್ ಸ್ಪಷ್ಟನೆ
- ಸಿರಾದಲ್ಲಿ ಮೇ 26 ರಂದು ಜೆಡಿಎಸ್ ಪಕ್ಷದ ಪದಾಧಿಕಾರಿಗಳ ನೇಮಕಾತಿ ಕಾರ್ಯಕ್ರಮ
- ಮಕ್ಕಳ ಕೈಗೆ ಮೊಬೈಲ್ ಕೊಡುವ ಮುನ್ನ ಈ ಸುದ್ದಿ ಓದಿ: 1.98 ಲಕ್ಷ ರೂಪಾಯಿ ಕಳೆದುಕೊಂಡ ತುಮಕೂರಿನ ವ್ಯಕ್ತಿ!
- ಚಿಲ್ಲರೆಗಳಿಗೆ ನಾನು ಹೆದರುವ ಮಗನೇ ಅಲ್ಲ ಕೀಳುಮಟ್ಟದ ರಾಜಕಾರಣ ನನಗೆ ಗೊತ್ತಿಲ್ಲ: ಶಾಸಕ ಎಸ್. ಆರ್.ಶ್ರೀನಿವಾಸ್ ತಿರುಗೇಟು
- ತುಮಕೂರು ಜಿಲ್ಲೆಯಲ್ಲಿ 0.3 ಮಿ.ಮೀ. ಮಳೆ
- ಕೆಎಸ್ ಆರ್ ಟಿಸಿ ಬಸ್ ದರ ಏರಿಕೆ ಖಚಿತ: ಸಾರಿಗೆ ಸಂಸ್ಥೆ ಅಧ್ಯಕ್ಷ ಎಸ್.ಆರ್. ಶ್ರೀನಿವಾಸ್
Author: admin
ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಮಾತನಾಡಿ, 28 ಕ್ಷೇತ್ರಗಳಲ್ಲೂ ನಾವು ಒಟ್ಟಾಗಿ ಕೆಲಸ ಮಾಡಬೇಕು. ಪ್ರತಿಷ್ಠೆ ಬದಿಗಿಟ್ಟು ಉಭಯ ಪಕ್ಷಗಳ ಮುಖಂಡರು, ಕಾರ್ಯಕರ್ತರು ಪರಸ್ಪರ ಸಮನ್ವಯದಿಂದ ಕೆಲಸ ಮಾಡಬೇಕು ಎಂದರು. ಈ ಹಿಂದೆ ಬಿಎಸ್ವೈ ಜೊತೆ ಸರ್ಕಾರ ಮಾಡಿದ್ದಾಗ ಒಳ್ಳೆಯ ಆಡಳಿತ ಕೊಟ್ಟಿದ್ದೆವು. ಕೆಲವು ಪರಿಸ್ಥಿತಿಗಳಲ್ಲಿ ಮೈತ್ರಿ ಮುಂದುವರೆಯಲು ಸಾಧ್ಯವಾಗಲಿಲ್ಲ. ಆಗ ನಮ್ಮ ತಂದೆಯವರಿಗೆ ಕೆಲವರು ತಪ್ಪು ಮಾಹಿತಿ ನೀಡಿದರು ಎಂದು ಅಸಮಾಧಾನ ವ್ಯಕ್ತಪಡಿಸಿದರು. ಕಳೆದ ಬಾರೀ ನಾವು ಮೈತ್ರಿ ಮಾಡಿಕೊಂಡಿದ್ದರೆ ರಾಜ್ಯದಲ್ಲಿ ಈಗ ಕಾಂಗ್ರೆಸ್ ಬರಲು ಸಾಧ್ಯವಾಗುತ್ತಿರಲಿಲ್ಲ. ನಮ್ಮಲ್ಲಿದ್ದ ಒಡಕುಗಳಿಂದ ಕಾಂಗ್ರೆಸ್ ಅಧಿಕಾರಕ್ಕೆ ಬರಲು ಸಾಧ್ಯವಾಯಿತು. ಪ್ರತಿದಿನ ಕಾಂಗ್ರೆಸ್ ನಾಯಕರು ಜೆಡಿಎಸ್ ಪಕ್ಷ ಮುಗಿದೆ ಹೋಯಿತು ಎಂದು ಮಾತನಾಡುತ್ತಿದ್ದಾರೆ. ದೇಶದ ಭದ್ರತೆಗೆ ಮೋದಿಯವರ ದುಡಿಮೆ ನೋಡಿದ್ದೇವೆ. ಅಮಿತ್ ಶಾ ಅವರ ಮಧ್ಯಸ್ಥಿಕೆಯಿಂದ ಈ ಮೈತ್ರಿಯಾಗಿದೆ. ಅಭ್ಯರ್ಥಿ ಆಯ್ಕೆಯಲ್ಲಿ ಒಡಕು ಬಂದಿರಬಹುದು, ಅದರಿಂದಾಗಿ ತಾವು ನಿರಾಸೆ ಒಳಗಾದರೆ ಪಕ್ಷಕ್ಕೆ ಹಿನ್ನಡೆಯಾಗುತ್ತದೆ. ಕೆಲವೊಂದು ಕ್ಷೇತ್ರಗಳಲ್ಲಿ ಭಿನ್ನಾಭಿಪ್ರಾಯ ಇದ್ದಾವೆ. ಅದನ್ನು ಸರಿಪಡಿಸಿಕೊಳ್ಳಬೇಕಿದೆ ಎಂದರು. ನಮ್ಮತುಮಕೂರಿನ…
ರಾಮನಗರ: ಸುಳ್ಳು ಹೇಳುವುದು ಬಿಜೆಪಿಯವರ ಚಾಳಿ, ಹೇಗೆ ಎಂದರೆ ಪ್ರಧಾನಿ ನರೇಂದ್ರ ಮೋದಿಯವರು ಕಾಗೆ ಬೆಳ್ಳಗಿದೆ ಎಂದರೆ ಅವರ ಅನುಯಾಯಿಗಳೂ ಹೌದು ಬೆಳ್ಳಗಿದೆ ಅಂತಾರೆ ನಾಯಿಗೆ ಬಾಲ ಇಲ್ಲ ಅಂದರೆ ಹೌದು ಇಲ್ಲಾ ಅಂತ ವಾದ ಮಾಡ್ತಾರೆ, ಬಿಜೆಪಿಯವರು ನರೇಂದ್ರ ಮೋದಿಯವರು ಏನು ಹೇಳುತ್ತಾರೋ ಅದಕ್ಕೆ ತಮಟೆ ಹೊಡೆಯುವುದು ಅವರ ಅಭ್ಯಾಸ ಎಂದು ಸಿಎಂ ಸಿದ್ದರಾಮಯ್ಯ ಟೀಕಿಸಿದ್ದಾರೆ. ನಾನು ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಅವರಲ್ಲಿ ಒಂದು ಪ್ರಶ್ನೆ ಕೇಳುತ್ತೇನೆ, 2023-24ನೇ ಸಾಲಿನ ಬಜೆಟ್ ನಲ್ಲಿ ಏನು ಹೇಳಿದ್ದೀರಿ, ಭದ್ರಾ ಮೇಲ್ದಂಡೆ ಯೋಜನೆಗೆ 5,300 ಕೋಟಿ ರೂಪಾಯಿ ಕೇಂದ್ರದಿಂದ ನೀಡುತ್ತೇವೆ ಎಂದು ಹೇಳಿದರು. ಅವರು ಕೇಂದ್ರದ ಬಜೆಟ್ ನಲ್ಲಿ ಘೋಷಣೆ ಮಾಡಿದ್ದನ್ನು ಈ ಹಣಕಾಸು ವರ್ಷ ಮುಗಿಯುತ್ತಾ ಬಂದರೂ ಇದುವರೆಗೆ ಒಂದು ರೂಪಾಯಿಯೂ ಬಂದಿಲ್ಲ ಇದು ಸುಳ್ಳಾ, ನಿಜವೇ ನೀವೇ ಹೇಳಿ ನಿರ್ಮಲಾ ಸೀತಾರಾಮನ್ ಅವರೇ ಎಂದು ಕೇಳಿದರು. ಈಗ ಪ್ರಧಾನಿ ಮೋದಿ ಹಾಗೂ ಮಾಜಿ ಪ್ರಧಾನಿ ದೇವೇಗೌಡರು ಗಳಸ್ಯ ಕಂಠಸ್ಯ. ಮೋದಿ…
ಬೆಂಗಳೂರು: ದೇಶದಲ್ಲಿ ಪ್ರಧಾನಿ ನರೇಂದ್ರ ಮೋದಿಯವರಂತಹ ನಾಯಕ ಮತ್ತೊಬ್ಬರಿಲ್ಲ. ಅವರನ್ನು ಮತ್ತೊಮ್ಮೆ ಪ್ರಧಾನಿಯನ್ನಾಗಿ ಮಾಡಲು ಕಾರ್ಯಕರ್ತರೆಲ್ಲರೂ ಒಗ್ಗಟ್ಟಾಗಿ ಕೆಲಸ ಮಾಡಬೇಕು ಎಂದು ಮಾಜಿ ಪ್ರಧಾನಿ ಹೆಚ್ಡಿ ದೇವೇಗೌಡ ಹೇಳಿಕೆ ನೀಡಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ದೇವೇಗೌಡ, “ಸಹಕಾರ, ಒಗ್ಗಟ್ಟಿಗೆ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಅವರ ಪಾತ್ರ ಮುಖ್ಯವಾಗಿದೆ. ಹಿಂದೆ ಆಗಿದ್ದೆಲ್ಲ ಮರೆತುಬಿಡಿ, ಕಾಲ ಕ್ಷಣಿಕ. ಲೋಪಗಳನ್ನು ಸರಿಪಡಿಸಿಕೊಂಡು ಮುಂದುವರಿಯೋಣ. ಮೋದಿ ಹೆಸರು ಮಾತ್ರವೇ ಟ್ರಂಪ್ ಕಾರ್ಡ್ ಆಗಿದೆ” ಎಂದು ಹೇಳಿದರು. ಇದೇ ವೇಳೆ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ ಹೆಚ್ ಡಿಡಿ, ಕಾಂಗ್ರೆಸ್ ನವರಿಂದ ಹೊರ ರಾಜ್ಯಕ್ಕೂ ಹಣ ಸರಬರಾಜು ಆಗುತ್ತಿದೆ. ಕರ್ನಾಟಕದಿಂದ ಎಐಸಿಸಿಗೆ ಹಣ ಸಂದಾಯವಾಗುತ್ತಿದೆ ಎಂದು ಗಂಭೀರ ಆರೋಪ ಮಾಡಿದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ಬೆಂಗಳೂರು: ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸುತ್ತಿರುವ ಕಾಂಗ್ರೆಸ್ ಅಭ್ಯರ್ಥಿಗಳಿಗೆ ಕೆಪಿಸಿಸಿ ಅಧ್ಯಕ್ಷರು ಆಗಿರುವ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಮ್ಮ ನಿವಾಸದಲ್ಲಿ ಬಿ-ಫಾರಂ ವಿತರಿಸಿದರು. ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿ ತೇಜಸ್ವಿ ಸೂರ್ಯ ಅವರ ವಿರುದ್ಧ ಸ್ಪರ್ಧಿಸುತ್ತಿರುವ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರ ಪುತ್ರಿ ಸೌಮ್ಯರೆಡ್ಡಿ ಸೇರಿದಂತೆ ಹಲವು ಬಿ-ಫಾರಂ ಪಡೆದರು. ತುಮಕೂರು ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಮುದ್ದಹನುಮೇಗೌಡ, ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಬಿ.ಎನ್ ಚಂದ್ರಪ್ಪ, ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಜಯಪ್ರಕಾಶ್ ಹೆಗ್ಡೆ, ಮಂಡ್ಯ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ವೆಂಕಟರಮಣೇಗೌಡ ಅವರಿಗೆ ಡಿ.ಕೆ. ಶಿವಕುಮಾರ್ ಬಿ-ಫಾರಂ ವಿತರಿಸಿದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ಬೆಂಗಳೂರು: ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ-ಜೆಡಿಎಸ್ ಕಾರ್ಯಕರ್ತರು ವಿಶ್ವಾಸದಿಂದ ಕೆಲಸ ಮಾಡಿದರೆ, ನಿರೀಕ್ಷೆಗೂ ಮೀರಿದ ಫಲಿತಾಂಶ ಬರಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ವಿಶ್ವಾಸ ವ್ಯಕ್ತಪಡಿಸಿದರು. ಮೈತ್ರಿ ಪಕ್ಷಗಳ ಸಮನ್ವಯ ಸಭೆ ಸಂದರ್ಭದಲ್ಲಿ ಮಾತನಾಡಿದ ಅವರು, “ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಈ ಸಭೆ ಬಹಳ ಹಿಂದೆನೇ ಆಗಬೇಕಿತ್ತು. ಕಾರಣಾಂತರದಿಂದ ಸಭೆ ಇಂದು ನಿರ್ಧಾರವಾಗಿದೆ. ದೇಶದ ಭವಿಷ್ಯ ರೂಪಿಸುವ ಲೋಕಸಭಾ ಚುನಾವಣೆಯನ್ನು ಗಂಭೀರವಾಗಿ ತೆಗೆದುಕೊಂಡು ಒಂದೇ ವೇದಿಕೆಗೆ ಬಂದಿದ್ದೇವೆ” ಎಂದರು. “ಜೆಡಿಎಸ್ ಜೊತೆಗಿನ ಮೈತ್ರಿಯಿಂದ ಬಿಜೆಪಿಗೆ ಆನೆಬಲ ಬಂದಂತೆ ಆಗಿದೆ. ಮಂಡ್ಯ ಹಾಗೂ ಮೈಸೂರಲ್ಲಿ ನಾನು, ಕುಮಾರಸ್ವಾಮಿ ಜಂಟಿ ಪ್ರವಾಸ ಮಾಡಿದ್ದೇವೆ. ಬಹಳಷ್ಟು ಸಲ ಹೊಂದಾಣಿಕೆ ರಾಜಕೀಯ ನಡೆದಿದೆ. ಬಿಜೆಪಿ-ಜೆಡಿಎಸ್ ಹಾಗೂ ಜೆಡಿಎಸ್-ಕಾಂಗ್ರೆಸ್ ಸಾಕಷ್ಟು ಸಲ ಹೊಂದಾಣಿಕೆಯಾಗಿದೆ. ಈ ಸಮ್ಮಿಲನ ರಾಜ್ಯದ ಜನರು ಬಹಳ ಗಂಭೀರವಾಗಿ ತೆಗೆದುಕೊಂಡಿದ್ದಾರೆ” ಎಂದರು. ಬಿಜೆಪಿ-ಜೆಡಿಎಸ್ ಸಮ್ಮಿಲನದಿಂದ ರಾಜ್ಯದ ಇತಿಹಾಸದಲ್ಲಿ ಸುವರ್ಣಾಕ್ಷರದಲ್ಲಿ ಬರೆದಿಡುವ ಕೆಲಸ ಆಗುತ್ತದೆ. ಜೆಡಿಎಸ್-ಎನ್ಡಿಎ ಕೂಟಕ್ಕೆ ಬಂದಿರುವುದನ್ನು ನಮ್ಮ ನಾಯಕರು ಘೋಷಣೆ ಮಾಡಿ…
ಮಂಡ್ಯ: ಚುನಾವಣೆ ಬಂತು ಅಂದ್ರೆ ಸಾಕು ಕುಮಾರಸ್ವಾಮಿ ಆಸ್ಪತ್ರೆ ಸೇರ್ತಾರೆ. ಅದು ಹೇಗೆ ಎಂಬುದಾಗಿ ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ವಿರುದ್ದ ಶಾಸಕ ರಮೇಶ್ ಬಂಡಿಸಿದ್ದೇಗೌಡ ವ್ಯಂಗ್ಯವಾಡಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ಚುನಾವಣೆ ಬಂದಾಗ ಹೃದಯದ ಸಮಸ್ಯೆ ಅಂತಾರೆ. ಚುನಾವಣೆ ಹತ್ತಿರ ಇದ್ದಾಗ ಆಸ್ಪತ್ರೆ ಸೇರ್ತಾರೆ. ಮೂರೇ ದಿನಕ್ಕೆ ಆಸ್ಪತ್ರೆಯಿಂದ ಹೊರಗೆ ಬಂದು ರಾಜ್ಯ ಸುತ್ತಾಡ್ತಿರ್ತಾರೆ. ಅದೆಂಗೆ ಸಾಧ್ಯ ಅಂತ ಅರ್ಥ ಆಗ್ತಾ ಇಲ್ಲ ಎಂಬುದಾಗಿ ಹೇಳಿದರು. ಯಾರಾದ್ರು ಹಾರ್ಟ್ ಪೇಸೆಂಟ್ ಹೀಗೆ ಓಡಾಡುತ್ತಾರಾ? ನಮ್ಮ ಚಲುವಣ್ಣನಿಗೂ ಅದೇ ರೀತಿ ಹೃದಯದ ಸಮಸ್ಯೆ ಇದೆ. ಆದ್ರೆ ಇವರು ಆಸ್ಪತ್ರೆ ಸೇರಿದ್ರೆ ತಿಂಗಳು ಗಟ್ಟಳೆ ಬರಲ್ಲ. ಆಪರೇಷನ್ ಆದ ಎರಡೇ ದಿನಕ್ಕೆ ಹೊರಗೆ ಬರೋದು ಗೊತ್ತಿಲ್ಲ. ಇದು ಹೆಂಗೆ ಹೊಸ ಟೆಕ್ನಿಕ್ ಹೆಂಗೆ ಅಂತ ಗೊತ್ತಾಗ್ತಿಲ್ಲ ಎಂದರು. ಮಂಡ್ಯ ಜಿಲ್ಲೆ ಮಳವಳ್ಳಿಯಲ್ಲಿ ನಡೆಯುತ್ತಿರೊ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಶ್ರೀರಂಗಪಟ್ಟಣ ಕಾಂಗ್ರೆಸ್ ಶಾಸಕ ರಮೇಶ್ ಬಾಬು ಬಂಡಿಸಿದ್ದೇಗೌಡ ಟೀಕೆ ಮಾಡಿದರು. ನಮ್ಮತುಮಕೂರಿನ ಕ್ಷಣ…
ಬೆಂಗಳೂರು: ಜ.23ರಂದು ನಡೆಸಿದ್ದ ಪೊಲೀಸ್ ಸಬ್ ಇನ್ ಸ್ಪೆಕ್ಟರ್ ಹುದ್ದೆಗಳ ನೇಮಕಾತಿಗಾಗಿ, ಮರುಪರೀಕ್ಷೆಗೆ ಹಾಜರಾಗಿದ್ದ ಅಭ್ಯರ್ಥಿಗಳ, ಪತ್ರಿಕೆ-1 ಮತ್ತು 2ರಲ್ಲಿ ಗಳಿಸಿರುವ ಅಂಕಗಳ ಅಂತಿಮ ಪಟ್ಟಿಯನ್ನು ಪ್ರಕಟಿಸಲಾಗಿದೆ. ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕಿ ಎಸ್. ರಮ್ಯಾ ಪತ್ರಿಕಾ ಪ್ರಕಟಣೆಯಲ್ಲಿ ಈ ವಿಷಯ ತಿಳಿಸಿದ್ದಾರೆ. ಒಟ್ಟು 545 ಹುದ್ದೆಗಳ ನೇಮಕಕ್ಕೆ ಕೆಇಎ ಮರು ಪರೀಕ್ಷೆ ನಡೆಸಿತ್ತು. ಅಭ್ಯರ್ಥಿಗಳು ಪಡೆದ ಅಂಕಗಳ ಮಾಹಿತಿಯನ್ನು ಸದ್ಯದಲ್ಲೇ ಗೃಹ ಇಲಾಖೆಗೆ ಸಲ್ಲಿಸಲಾಗುತ್ತದೆ. ಅದರ ನಂತರ ರೋಸ್ಟರ್ ಆಧಾರದ ಮೇಲೆ ಆಯ್ಕೆ ಪಟ್ಟಿ ಪ್ರಕಟಿಸಲಾಗುವುದು ಎಂದಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ನವದೆಹಲಿ: ಕೃಷಿ, ಶಿಕ್ಷಣ ಮತ್ತು ಆರೋಗ್ಯ ಈ ಮೂರು ಕ್ಷೇತ್ರಗಳಲ್ಲಿ ತಂತ್ರಜ್ಞಾನವು ದೊಡ್ಡ ಪಾತ್ರವನ್ನು ವಹಿಸುತ್ತದೆ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಹೇಳಿದ್ದಾರೆ. ಈ ಕ್ಷೇತ್ರಗಳಲ್ಲಿ ತಮ್ಮ ಸರ್ಕಾರದ ಪ್ರಯತ್ನಗಳನ್ನು ಎತ್ತಿ ತೋರಿಸಿದ್ದಾರೆ. ಲೋಕೋಪಕಾರಿ ಮತ್ತು ಮೈಕ್ರೋಸಾಫ್ಟ್ ಸಹ-ಸಂಸ್ಥಾಪಕ ಬಿಲ್ ಗೇಟ್ಸ್ ಅವರೊಂದಿಗೆ ದೆಹಲಿಯ ತಮ್ಮ ನಿವಾಸದಲ್ಲಿ ನಡೆಸಿದ ಸಂವಾದದಲ್ಲಿ ಅವರು, “ಜಗತ್ತಿನಲ್ಲಿ ಡಿಜಿಟಲ್ ವಿಭಜನೆಯ ಬಗ್ಗೆ ಕೇಳುತ್ತಿದ್ದೇನೆ. ಭಾರತದಲ್ಲಿ ಇದು ಸಂಭವಿಸಲು ಬಿಡುವುದಿಲ್ಲ” ಎಂದು ಹೇಳಿದ್ದಾರೆ. ಗರ್ಭಕಂಠದ ಕ್ಯಾನ್ಸರ್ ಗೆ ಕನಿಷ್ಠ ವೆಚ್ಚದಲ್ಲಿ ಲಸಿಕೆಗಳ ಅಭಿವೃದ್ಧಿ: ಗರ್ಭಕಂಠದ ಕ್ಯಾನ್ಸರ್ ಗೆ ಕನಿಷ್ಠ ವೆಚ್ಚದಲ್ಲಿ ಲಸಿಕೆಗಳನ್ನು ಅಭಿವೃದ್ಧಿಪಡಿಸಲು ಸ್ಥಳೀಯ ಸಂಶೋಧನೆಗಾಗಿ ವಿಜ್ಞಾನಿಗಳಿಗೆ ಹಣವನ್ನು ವಿನಿಯೋಗಿಸಲು ಮುಂದೆ ಬರಲಿರುವ ತಮ್ಮ ಹೊಸ ಸರ್ಕಾರವು ವಿಶೇಷವಾಗಿ ಎಲ್ಲಾ ವರ್ಗದ ಹುಡುಗಿಯರಿಗೆ ಲಸಿಕೆಯನ್ನು ನೀಡಲು ಶ್ರಮವಹಿಸುತ್ತದೆ ಎಂದಿದ್ದಾರೆ. ಸಾರ್ವತ್ರಿಕ ಚುನಾವಣೆಯ ನಂತರ ಸತತ ಮೂರನೇ ಅವಧಿಗೆ ಅಧಿಕಾರಕ್ಕೆ ಮರಳುವ ವಿಶ್ವಾಸವನ್ನು ಮೋದಿ ವ್ಯಕ್ತಪಡಿಸಿದ್ದಾರೆ. “ಡಿಜಿಟಲ್ ಸಾರ್ವಜನಿಕ ಮೂಲಸೌಕರ್ಯ ಅಗತ್ಯವಿದೆ, ಭಾರತವು ಈ ನಿಟ್ಟಿನಲ್ಲಿ ಮುನ್ನಡೆಯಲಿದೆ” ಎಂದು ಹೇಳಿದರು. ಹವಾಮಾನ…
ಬೆಂಗಳೂರು: ಬೆಂಗಳೂರಿನ ಟಿ. ದಾಸರಹಳ್ಳಿಯಲ್ಲಿ ಆಸ್ತಿಯಲ್ಲಿ ಪಾಲು ಕೇಳಿದ್ದಕ್ಕೆ ಮಗನ ಮೇಲೆ ತಂದೆ ಕೆಮಿಕಲ್ ಮಿಶ್ರಿತ ಆ್ಯಸಿಡ್ ದಾಳಿ ಮಾಡಿರುವ ಘಟನೆ ನಡೆದಿದೆ. ಆರೋಪಿ ರಾಮಕೃಷ್ಣಯ್ಯ ನಿವೃತ್ತ ಪಿಎಸ್ಐ ಆಗಿದ್ದಾರೆ. ಆ್ಯಸಿಡ್ ದಾಳಿಯಿಂದ ಕಿರಣ್ ಅವರ ಒಂದು ಕಣ್ಣಿಗೆ ಮತ್ತು ದೇಹಕ್ಕೆ ಗಾಯಗಳಾಗಿವೆ. ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ದೃಷ್ಟಿ ಬರುವುದು ಡೌಟು ಎಂದು ನಾರಾಯಣ ನೇತ್ರಾಲಯದ ವೈದ್ಯರು ಹೇಳಿದ್ದಾರೆ. ಮಾರ್ಚ್ 25 ರಂದು ಈ ಘಟನೆ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ. ನಿವೃತ್ತ ಪಿಎಸ್ಐ ರಾಮಕೃಷ್ಣಯ್ಯ ಈ ಕೃತ್ಯ ಎಸಗಿದ್ದು ಅವರ ಜೊತೆ ಅಣ್ಣ ಉಪೇಂದ್ರ ಕುಮಾರ್, ಅಕ್ಕ ಕಲಾವತಿಯೂ ಸೇರಿರುವ ಆರೋಪ ಮಾಡಲಾಗಿದೆ. ಸದ್ಯ ಆರೋಪಿಗಳ ಪತ್ತೆಗಾಗಿ ಬಾಗಲಗುಂಟೆ ಪೊಲೀಸರು ಶೋಧ ನಡೆಸುತ್ತಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ಬೆಂಗಳೂರು: ಬಿಎಂಟಿಸಿ ಬಸ್ ನಲ್ಲಿ ಪ್ರಯಾಣಿಸುತ್ತಿದ್ದ 60ರ ವೃದ್ಧರೊಬ್ಬರು ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ನಡೆದಿದ್ದು, ಕೃಷ್ಣ(60) ಮೃತ ವ್ಯಕ್ತಿಯಾಗಿದ್ದಾರೆ. ಬಸ್ ನಲ್ಲಿ ಕುಳಿತಿದ್ದ ವ್ಯಕ್ತಿ ದಿಢೀರ್ ಹೃದಯಾಘಾತ ಸಂಭವಿಸಿ ಸಾವನ್ನಪ್ಪಿದ್ದಾರೆ. ಮೆಜೆಸ್ಟಿಕ್ ನಲ್ಲಿ ಬಸ್ ಹತ್ತಿದ್ದ ಮೃತ ವ್ಯಕ್ತಿ, ರಾಜಾಜೀನಗರದ ನವರಂಗ್ ವೃತ್ತದ ಬಳಿ ಬರುತ್ತಿದ್ದ ವೇಳೆ ಸಾವು ಸಂಭವಿಸಿದೆ. ಕೂಡಲೇ ಆತನನ್ನ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಚಿಕಿತ್ಸೆ ಕೊಡಿಸುವಷ್ಟರಲ್ಲಿ ವ್ಯಕ್ತಿ ಆಸ್ಪತ್ರೆಯಲ್ಲೇ ಮೃತಪಟ್ಟಿದ್ದಾನೆ ಎಂದು ಮೂಲಗಳು ತಿಳಿಸಿವೆ. ಬಸವೇಶ್ವರ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296