Subscribe to Updates
Get the latest creative news from FooBar about art, design and business.
- ದಳವಾಯಿಹಳ್ಳಿಯಲ್ಲಿ ಕುಡಿಯುವ ನೀರಿಗೆ ಹಾಹಾಕಾರ: ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಗ್ರಾಮಸ್ಥರ ಆಕ್ರೋಶ, BPS ನಿಂದ ಟ್ಯಾಂಕರ್ ನೀರು ಪೂರೈಕೆ
- ಪಾವಗಡ: ದೊಡ್ಡಹಳ್ಳಿ ಸರ್ಕಾರಿ ಪ್ರೌಢಶಾಲೆಯಲ್ಲಿ 2026–27ನೇ ಸಾಲಿನ ದಾಖಲಾತಿ ಆರಂಭ
- ರಾಜ್ಯಸಭೆ ಚುನಾವಣೆಗೂ ಸಚಿವ ಸಂಪುಟ ಪುನರಾಚನೆಗೂ ಯಾವುದೇ ಸಂಬಂಧವಿಲ್ಲ: ಗೃಹ ಸಚಿವ ಜಿ. ಪರಮೇಶ್ವರ್ ಸ್ಪಷ್ಟನೆ
- ಸಿರಾದಲ್ಲಿ ಮೇ 26 ರಂದು ಜೆಡಿಎಸ್ ಪಕ್ಷದ ಪದಾಧಿಕಾರಿಗಳ ನೇಮಕಾತಿ ಕಾರ್ಯಕ್ರಮ
- ಮಕ್ಕಳ ಕೈಗೆ ಮೊಬೈಲ್ ಕೊಡುವ ಮುನ್ನ ಈ ಸುದ್ದಿ ಓದಿ: 1.98 ಲಕ್ಷ ರೂಪಾಯಿ ಕಳೆದುಕೊಂಡ ತುಮಕೂರಿನ ವ್ಯಕ್ತಿ!
- ಚಿಲ್ಲರೆಗಳಿಗೆ ನಾನು ಹೆದರುವ ಮಗನೇ ಅಲ್ಲ ಕೀಳುಮಟ್ಟದ ರಾಜಕಾರಣ ನನಗೆ ಗೊತ್ತಿಲ್ಲ: ಶಾಸಕ ಎಸ್. ಆರ್.ಶ್ರೀನಿವಾಸ್ ತಿರುಗೇಟು
- ತುಮಕೂರು ಜಿಲ್ಲೆಯಲ್ಲಿ 0.3 ಮಿ.ಮೀ. ಮಳೆ
- ಕೆಎಸ್ ಆರ್ ಟಿಸಿ ಬಸ್ ದರ ಏರಿಕೆ ಖಚಿತ: ಸಾರಿಗೆ ಸಂಸ್ಥೆ ಅಧ್ಯಕ್ಷ ಎಸ್.ಆರ್. ಶ್ರೀನಿವಾಸ್
Author: admin
ಬೀದರ್: ಬೀದರ್ ತಾಲೂಕಿನ ಅಣದೂರ್ ಗ್ರಾಮದಲ್ಲಿ ವ್ಯಕ್ತಿಯೊಬ್ಬ ಕುಡಿಯುವ ನೀರಿನ ಟ್ಯಾಂಕ್ಗೆ ಹಾರಿ ಆತ್ಮಹತ್ಯೆಗೆ ಶರಣಾ ಘಟನೆ ನಡೆದಿದೆ. ಮೃತಪಟ್ಟ ವ್ಯಕ್ತಿಯನ್ನು ದಾಸರ್ (27) ಎಂದು ಗುರುತಿಸಲಾಗಿದೆ. ಪತ್ನಿಗೆ ಬೇರೊಬ್ಬನ ಜೊತೆ ಅನೈತಿಕ ಸಂಬಂಧ ಹೊದಿದ್ದು, ಆತನೊಂದಿಗೆ ಪರಾರಿಯಾಗಿದ್ದಕ್ಕೆ ಮನನೊಂದು ಆತ್ಮಹತ್ಯೆಗೆ ಶರಣಾಗಿದ್ದಾನೆ ಎಂದು ಪೊಲೀಸರು ಶಂಕಿಸಿದ್ದಾರೆ. ನಲ್ಲಿಯಲ್ಲಿ ಬರುತ್ತಿದ್ದ ನೀರು ವಾಸನೆ ಬರುತ್ತಿದ್ದ ಕಾರಣ, ಟ್ಯಾಂಕ್ನ್ನು ಜನ ಪರಿಶೀಲಿಸಿದಾಗ ದಾಸರ್ ನ ಮೃತದೇಹ ಪತ್ತೆಯಾಗಿದೆ. ಬಳಿಕ ಅಗ್ನಿಶಾಮಕ ದಳದ ಸಿಬ್ಬಂದಿ ಮೃತದೇಹ ಹೊರಗೆ ತೆಗೆದಿದ್ದಾರೆ. ಎರಡು ದಿನಗಳ ಹಿಂದೆಯೇ ಟ್ಯಾಂಕ್ಗೆ ಬಿದ್ದು ಆತ್ಮಹತ್ಯೆ ಮಾಡಿಕೊಂಡಿದ್ದು ತಡವಾಗಿ ಬೆಳಕಿಗೆ ಬಂದಿದೆ. ಈ ಸಂಬಂಧ ಜನವಾಡ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಟ್ಯಾಂಕ್ ನಲ್ಲಿ ಮೃತದೇಹ ಇರುವುದನ್ನು ನೋಡಿ ಗ್ರಾಮಸ್ಥರು ಶಾಕ್ ಗೆ ಒಳಗಾಗಿದ್ದಾರೆ. ತಕ್ಷಣ ಸ್ಥಳಕ್ಕೆ ಆರೋಗ್ಯ ಇಲಾಖೆಯ ಅಧಿಕಾರಿಗಳ ತಂಡ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದೆ. ಅದೇ ರೀತಿ ಸಿಬ್ಬಂದಿ ಟ್ಯಾಂಕ್ ಶುದ್ಧೀಕರಣಕ್ಕೆ ಮುಂದಾಗಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ…
ದಾವಣಗೆರೆ: ದಾವಣಗೆರೆ ಜಿಲ್ಲೆಯ ಬಸವಾ ಪಟ್ಟಣದಲ್ಲಿ ಸ್ನಾನಕ್ಕೆ ಹೋಗಿದ್ದ ವಿದ್ಯಾರ್ಥಿಯೊಬ್ಬ ಆಯತಪ್ಪಿ ಭದ್ರಾ ನಾಲೆಗೆ ಬಿದ್ದು ಮೃತಪಟ್ಟಿರುವ ಘಟನೆ ನಡೆದಿದೆ. ಮಣಿಕಂಠ(16) ಮೃತ ಬಾಲಕನಾಗಿದ್ದಾನೆ. ಎಸ್ ಎಸ್ ಎಲ್ ಸಿ ಪರೀಕ್ಷೆ ಬರೆಯಲು ಹೋಗಿದ್ದ ಮಣಿಕಂಠ ಪರೀಕ್ಷೆ ಮುಗಿಸಿ ವಾಪಸ್ ಬರುವಾಗ ಭದ್ರಾ ಕಾಲುವೆಯಲ್ಲಿ ಸ್ನಾನಕ್ಕೆಂದು ಹೋಗಿದ್ದಾನೆ. ಅವಾಗ ಈ ದುರ್ಘಟನೆ ಸಂಭವಿಸಿದೆ. ಹರೋಸಾಗರದ ಬಳಿ ವಿದ್ಯಾರ್ಥಿಯ ಮೃತದೇಹ ಪತ್ತೆಯಾಗಿದ್ದು, ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನಿಸಲಾಗಿದೆ. ಈ ಕುರಿತು ಬಸವಾಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ಕೊಡಗಿನ ಬೆಡಗಿ, ಕನ್ನಡ ಚಿತ್ರರಂಗವನ್ನು ಹಲವು ಸಮಯಗಳ ಕಾಲ ಆಳಿದ ನಟಿ, ಕನ್ನಡದ ಟಾಪ್ ನಟಿಯರಲ್ಲಿ ಪ್ರೇಮಾ ಒಬ್ಬರಾಗಿದ್ದರು. 2006 ರಲ್ಲಿ ಪ್ರೇಮಾ ಜೀವನ್ ಅಪ್ಪಾಚು ಜೊತೆ ದಾಂಪತ್ಯ ಜೀವನಕ್ಕೆ ಕಾಲಿಟ್ಟ ಬಳಿಕ ಸಿನಿರಂಗದಿಂದ ದೂರ ಉಳಿದರು. ಜೀವನ್ ಅಪ್ಪಾಚು ಜೊತೆ ದಾಂಪತ್ಯದಲ್ಲಿ ಹಲವಾರು ಸಮಸ್ಯೆಗಳು ಎದುರಾಯ್ತು. ಬಳಿಕ ಸಂಬಂಧ ಮುರಿದು ಹೋಯಿತು. ಇದಾದ ನಂತರ ಇವರ ಬಾಂಧವ್ಯ ಅಷ್ಟೊಂದು ಗಟ್ಟಿಯಾಗಿ ಉಳಿಯಲಿಲ್ಲ. ಡಿವೋರ್ಸ್ ಪಡೆದು ಇಬ್ಬರೂ ದೂರವಾದರು. ಸಂದರ್ಶನವೊಂದರಲ್ಲಿ ಎರಡನೇ ಮದುವೆ ಬಗ್ಗೆ ಮಾತನಾಡಿದ್ದ ನಟಿ ಪ್ರೇಮಾ, ಇದು ನನ್ನ ವೈಯಕ್ತಿಕ ನಿರ್ಧಾರ. ಒಳ್ಳೆಯ ಹುಡುಗ ಸಿಕ್ಕರೆ ಖಂಡಿತ ಎರಡನೇ ಮದುವೆ ಆಗುತ್ತೇನೆ ಎಂದು ಹೇಳಿದ್ದರು. ಕೆಲ ವರ್ಷಗಳ ಹಿಂದೆ ನಟಿ ಪ್ರೇಮಾ ಅವರು ಕೂದಲನ್ನು ಚಿಕ್ಕದಾಗಿ ಕತ್ತರಿಸಿಕೊಂಡಿದ್ದರು. ಈ ವೇಳೆ ಅವರಿಗೆ ಕ್ಯಾನ್ಸರ್ ಆಗಿದೆ ಎಂಬ ಗುಸುಗುಸು ಕೇಳಿಬಂದಿತ್ತು. ನಾನು ಡಿಪ್ರೆಷನ್ ಗೆ ಹೋಗಿದ್ದೆ. ಆಸ್ಟ್ರೇಲಿಯಾ, ನ್ಯೂಜಿಲೆಂಡ್ ನಲ್ಲಿ ಇದ್ದೆ. ನಾನು ಕ್ಯಾನ್ಸರ್ ಚಿಕಿತ್ಸೆಗೆ ವಿದೇಶಕ್ಕೆ ಹೋಗಿದ್ದೇನೆ ಎಂಬ…
ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರನ್ನು, ಅಬಕಾರಿ ನೀತಿ ಸಂಬಂಧಿತ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಇಡಿ ಬಂಧಿಸಿದ ನಂತರ, ಮುಖ್ಯಮಂತ್ರಿ ಸ್ಥಾನದಿಂದ ವಜಾಗೊಳಿಸುವಂತೆ ಕೋರಿ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ದೆಹಲಿ ಹೈಕೋರ್ಟ್ ವಜಾಗೊಳಿಸಿದೆ. ಹಂಗಾಮಿ ಮುಖ್ಯ ನ್ಯಾಯಮೂರ್ತಿ ಮನಮೋಹನ್ ನೇತೃತ್ವದ ಪೀಠವು ಈ ವಿಷಯದ ಅರ್ಹತೆಯ ಬಗ್ಗೆ ಪ್ರತಿಕ್ರಿಯಿಸಲು ನಿರಾಕರಿಸಿತು. ಇದು ನ್ಯಾಯಾಂಗ ಹಸ್ತಕ್ಷೇಪದ ವ್ಯಾಪ್ತಿಯಿಂದ ಹೊರಗಿದೆ ಎಂದು ಹೇಳಿದೆ. “ಕಾನೂನಿಗೆ ಅನುಸಾರವಾಗಿ ಪರಿಶೀಲಿಸುವುದು ಸರ್ಕಾರದ ಇತರ ವಿಭಾಗಗಳಿಗೆ” ಎಂದು ನ್ಯಾಯಮೂರ್ತಿ ಮಲ್ಮೀತ್ ಪಿಎಸ್ ಅರೋರಾ ಅವರನ್ನೊಳಗೊಂಡ ಪೀಠ ಹೇಳಿದೆ. ವಿಚಾರಣೆಯ ಸಂದರ್ಭದಲ್ಲಿ, ಕೇಜ್ರಿವಾಲ್ ಅವರನ್ನು ಮುಖ್ಯಮಂತ್ರಿಯಾಗಿ ಮುಂದುವರಿಸಲು ಕಾನೂನು ಅಡ್ಡಿಯನ್ನು ತೋರಿಸುವಂತೆ, ನ್ಯಾಯಾಲಯವು ಅರ್ಜಿದಾರರಾದ ಸುರ್ಜಿತ್ ಸಿಂಗ್ ಯಾದವ್ ಅವರ ವಕೀಲರನ್ನು ಕೇಳಿತು. ಪ್ರಾಯೋಗಿಕ ತೊಂದರೆಗಳಿರಬಹುದು, ಆದರೆ ಅದು ಬೇರೆಯದು. ಕಾನೂನು ತಡೆ ಎಲ್ಲಿದೆ?” ಎಂದು ನ್ಯಾಯಾಲಯ ಕೇಳಿದೆ. ಪ್ರಸ್ತುತ ನ್ಯಾಯಾಲಯವು ಕೇಜ್ರಿವಾಲ್ ಅವರ ಇಡಿ ಕಸ್ಟಡಿಯನ್ನು ಏಪ್ರಿಲ್ ಒಂದರವರೆಗೂ ವಿಸ್ತರಿಸಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ…
ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ (ಎಚ್ ಎಎಲ್), ಬೆಂಗಳೂರಿನಲ್ಲಿ ಸ್ವದೇಶಿ ಲಘು ಯುದ್ಧ ವಿಮಾನದ (ಎಲ್ಸಿಎ) ತೇಜಸ್ ಮಾರ್ಕ್ 1 ಎ ಫೈಟರ್ ಜೆಟ್ ನ ಮೊದಲ ಹಾರಾಟವನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದೆ. “ಭಾರತದಲ್ಲಿಯೇ ತಯಾರಿಸಿದ ಸ್ಥಳೀಯ LCA ಮಾರ್ಕ್ 1A ತೇಜಸ್ ಯುದ್ಧ ವಿಮಾನದ ಮೊದಲ ಹಾರಾಟವನ್ನು ಬೆಂಗಳೂರಿನ ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ ಇಂದು ಪೂರ್ಣಗೊಳಿಸಿದೆ” ಎಂದು ಸಂಸ್ಥೆ HAL ಅಧಿಕಾರಿಗಳು ತಿಳಿಸಿದ್ದಾರೆ. ವಿಮಾನವು 15 ನಿಮಿಷಗಳ ಕಾಲ ಹಾರಾಟ ನಡೆಸಿರುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ. ಪಾಕಿಸ್ತಾನದ ಗಡಿಯ ಸಮೀಪವಿರುವ ರಾಜಸ್ಥಾನದ ಬಿಕಾನೇರ್ ನಲ್ಲಿರುವ ನಲ್ ವಾಯುನೆಲೆಯಲ್ಲಿ ಯುದ್ಧ ವಿಮಾನವನ್ನು ನಿಯೋಜಿಸುವ ಸಾಧ್ಯತೆಯಿದೆ. ವಿಮಾನದ ಮೊದಲ ಸ್ಕ್ಯಾಡ್ರನ್ ಅನ್ನು ನಲ್ ವಾಯುನೆಲೆಯಲ್ಲಿ ನಿಯೋಜಿಸಲು ಯೋಜಿಸಲಾಗಿದೆ, ಅದು ಪಶ್ಚಿಮ ದಿಕ್ಕಿನಿಂದ ಎದುರಾಳಿಗಳನ್ನು ನಿಯಂತ್ರಿಸಲು ಸಾಧ್ಯವಾಗುತ್ತದೆ. “ಈ ತಿಂಗಳ ಆರಂಭದಲ್ಲಿ ಏಜೆನ್ಸಿಯು ಸರ್ಕಾರಿ ಸ್ವಾಮ್ಯದ ಸಾರ್ವಜನಿಕ ವಲಯದ ಘಟಕವು, ಮೊದಲ ಅವಳಿ-ಆಸನಗಳ ತರಬೇತುದಾರ ಆವೃತ್ತಿಯ ವಿಮಾನವನ್ನು, ಐಎಎಫ್ ಗೆ ತಲುಪಿಸುವ ನಿಟ್ಟಿನಲ್ಲಿ ಕಾರ್ಯನಿರ್ವಹಿಸುತ್ತಿದೆ” ಎಂದು ರಕ್ಷಣಾ ಮೂಲಗಳನ್ನು…
ಚಿತ್ರದುರ್ಗ ಲೋಕಸಭಾ ಕ್ಷೇತ್ರದಿಂದ ಮಾಜಿ ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ ಅವರನ್ನು, ಕಣಕ್ಕಿಳಿಸುವ ಬಿಜೆಪಿ ನಿರ್ಧಾರಕ್ಕೆ ಬೇಸರ ವ್ಯಕ್ತಪಡಿಸಿರುವ ಹೊಳಲ್ಕೆರೆ ಶಾಸಕ ಎಂ. ಚಂದ್ರಪ್ಪ ಅವರ ಪುತ್ರ ಎಂ.ಸಿ. ರಘು ಚಂದನ್, ಪಕ್ಷದ ನಿರ್ಧಾರವನ್ನು ಖಂಡಿಸಿ ಸಭೆ ನಡೆಸಿ ಮುಂದಿನ ರಾಜಕೀಯ ನಡೆ ಪ್ರಕಟಿಸುವುದಾಗಿ ಹೇಳಿದ್ದಾರೆ. ಚಿತ್ರದುರ್ಗ ಲೋಕಸಭಾ ಚುನಾವಣೆಗೆ ಬಿಜೆಪಿ ಟಿಕೆಟ್ ಮೇಲೆ ಕಣ್ಣಿಟ್ಟಿರುವ ರಘು ಚಂದನ್ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿ, ಕಳೆದ ಹಲವು ವರ್ಷಗಳಿಂದ ವಿಧಾನಸಭಾ ಚುನಾವಣೆಯಲ್ಲಿ ಸೋತವರ ಪುನರ್ವಸತಿ ಕೇಂದ್ರವಾಗಿ ಚಿತ್ರದುರ್ಗ ಮಾರ್ಪಟ್ಟಿದೆ. ಮೂಡಿಗೆರೆ ಮತ್ತು ಆನೇಕಲ್ ವಿಧಾನಸಭಾ ಚುನಾವಣೆಯಲ್ಲಿ ಸೋತವರನ್ನು ಚಿತ್ರದುರ್ಗದಿಂದ ಪಕ್ಷದ ಅಭ್ಯರ್ಥಿಯಾಗಿ ಕಣಕ್ಕಿಳಿಸಿ ಸಂಸದರಾಗಿ ಆಯ್ಕೆಯಾಗಿದ್ದರು. ಇದೀಗ ಮುಧೋಳದಲ್ಲಿ ವಿಧಾನಸಭಾ ಚುನಾವಣೆಯಲ್ಲಿ ಸೋತ ಕಾರಜೋಳ ಅವರನ್ನು ಕಣಕ್ಕಿಳಿಸಲು ಪಕ್ಷ ನಿರ್ಧರಿಸಿದೆ. “ಮದಕರಿ ನಾಯಕ ಸೇರಿದಂತೆ ಯೋಧರ ನಾಡಿನಲ್ಲಿ ಪುರುಷರೇ ಇಲ್ಲವೇ? ಎಂದು ಪ್ರಶ್ನಿಸಿದರು. ಪಕ್ಷದ ನಿರ್ಧಾರ ನೋವು ತಂದಿದ್ದು, ಜಿಲ್ಲೆಯಿಂದ ಯಾರನ್ನಾದರೂ ನಾಮನಿರ್ದೇಶನ ಮಾಡಬೇಕಿತ್ತು. ಇದು ಚಿತ್ರದುರ್ಗದ ಸ್ವಾಭಿಮಾನದ ಪ್ರಶ್ನೆ ಎಂದು ತಿಳಿಸಿದ್ದಾರೆ. ನಮ್ಮತುಮಕೂರಿನ…
ಈ ವರ್ಷದ ಮೊದಲ ಸೂರ್ಯಗ್ರಹಣವು ಏಪ್ರಿಲ್ 8, 2024 ರಂದು ಸಂಭವಿಸಲಿದೆ. ಈ ಗ್ರಹಣವು ಸಂಪೂರ್ಣ ಸೂರ್ಯಗ್ರಹಣವಾಗಿದ್ದು, ಇದು 50 ವರ್ಷಗಳಲ್ಲಿ ಅತ್ಯಂತ ದೀರ್ಘವಾದ ಸೂರ್ಯಗ್ರಹಣವಾಗಲಿದೆ. ಈ ಸೂರ್ಯಗ್ರಹಣವು ಒಟ್ಟು 4 ಗಂಟೆ 25 ನಿಮಿಷಗಳ ಕಾಲ ಇರುತ್ತದೆ. ಈ ಗ್ರಹಣವು ಮೀನ ಮತ್ತು ರೇವತಿ ನಕ್ಷತ್ರದಲ್ಲಿ ಸಂಭವಿಸಲಿದೆ. ಈ ಸೂರ್ಯಗ್ರಹಣವು ಏಪ್ರಿಲ್ 8 ರ ರಾತ್ರಿ 9:12 ಕ್ಕೆ ಪ್ರಾರಂಭವಾಗುತ್ತದೆ ಮತ್ತು ಮಧ್ಯರಾತ್ರಿ 01:25 ಕ್ಕೆ ಕೊನೆಗೊಳ್ಳುತ್ತದೆ. ಅಮೆರಿಕದ ಪ್ರಕಾರ, ಆ ಸಮಯದಲ್ಲಿ ಮಧ್ಯಾಹ್ನ 2:15. ಸಂಪೂರ್ಣ ಸೂರ್ಯಗ್ರಹಣದ ಒಟ್ಟು 4 ಗಂಟೆ 25 ನಿಮಿಷಗಳಲ್ಲಿ, ಸುಮಾರು 7 ನಿಮಿಷಗಳ ಅವಧಿಯು ಇಡೀ ಭೂಮಿಯನ್ನು ಕತ್ತಲೆಯಲ್ಲಿ ಆವರಿಸುತ್ತದೆ. ಈ ಸೂರ್ಯಗ್ರಹಣವನ್ನು ಹಲವು ದೇಶಗಳಲ್ಲಿ ನೋಡಬಹುದಾದರೂ, ಅಮೆರಿಕದಲ್ಲಿ ಇದು ಅತ್ಯಂತ ಸ್ಪಷ್ಟವಾಗಿ ಗೋಚರಿಸಲಿದೆ. ಈ ಸಂಪೂರ್ಣ ಸೂರ್ಯಗ್ರಹಣವು ವಿಶೇಷವಾಗಿ ಅಮೆರಿಕದ ಉತ್ತರ ಭಾಗದಲ್ಲಿ ಸ್ಪಷ್ಟವಾಗಿ ಗೋಚರಿಸುತ್ತದೆ. ಇದಲ್ಲದೆ, ಈ ಸೂರ್ಯಗ್ರಹಣವು ಪಶ್ಚಿಮ ಯುರೋಪ್, ಪೆಸಿಫಿಕ್, ಅಟ್ಲಾಂಟಿಕ್, ಆರ್ಕ್ಟಿಕ್ ಮೆಕ್ಸಿಕೋ, ಕೆನಡಾ, ಮಧ್ಯ…
ಬೆಂಗಳೂರು: ಸ್ನೇಹಿತನ ಖಾಸಗಿ ಅಂಗ (ಗುದದ್ವಾರ) ಕ್ಕೆ ಸ್ನೇಹಿತನೋರ್ವ ಗಾಳಿ ಬಿಟ್ಟ ಪರಿಣಾಮ ಯುವಕನ ಕರುಳು ಬ್ಲಾಸ್ಟ್ ಆಗಿ ಮೃತ ಹೊಂದಿದ ಘಟನೆಯೊಂದು ಬೆಂಗಳೂರಿನಲ್ಲಿ ನಡೆದಿದೆ. ಯೋಗೀಶ್(28) ಎಂಬಾತನೇ ಮೃತ ಯುವಕ. ಈ ಘಟನೆ ಮಾರ್ಚ್ 25 ರಂದು ನಡೆದಿದೆ. ಅಂದು ಬೈಕ್ ರಿಪೇರಿಗೆಂದು ಸಂಪಿಗೆಹಳ್ಳಿಯ ನಿವಾಸಿ ಯೋಗೇಶ್ ಬೈಕ್ ಸರ್ವಿಸ್ ಸೆಂಟರ್ಗೆ ಹೋಗಿದ್ದಾನೆ. ಅಲ್ಲಿ ಸ್ನೇಹಿತ ಮುರಳಿ ಕೆಲಸ ಮಾಡುತ್ತಿದ್ದು, ಆತ ಗಾಡಿ ಸರ್ವಿಸ್ ಮಾಡಿದ್ದಾನೆ. ಅನಂತರ ಮುರಳಿ ಏರ್ ಫ್ರೆಶರ್ ಪೈಪ್ ನಿಂದ ಸ್ನೇಹಿತ ಯೋಗೇಶ್ ಗುದದ್ವಾರಕ್ಕೆ ಗಾಳಿ ಬಿಟ್ಟಿದ್ದಾನೆ. ಪರಿಣಾಮ ಆತನ ಕರುಳು ಬ್ಲಾಸ್ಟ್ ಆಗಿ ಯುವಕ ಮೃತ ಹೊಂದಿದ್ದಾನೆ. ಇದೀಗ ಈ ಘಟನೆ ಸಂಬಂಧ ಸಂಪಿಗೆಹಳ್ಳಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಮುರಳಿಯ ಬಂಧನ ಮಾಡಲಾಗಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ಉತ್ತರಪ್ರದೇಶದ 5 ಬಾರಿಯ ಶಾಸಕ ಗ್ಯಾಂಗ್ ಸ್ಟರ್ ಮುಖ್ತಾರ್ ಅನ್ಸಾರಿ(60) ಗುರುವಾರ ಮೃತ ಹೊಂದಿದ್ದಾರೆ. 2005 ರಿಂದಲೂ ಜೈಲಿನಲ್ಲಿದ್ದ ಅನ್ಸಾರಿ ಗುರುವಾರ ಸಂಜೆ ರಂಜಾನ್ ಉಪವಾಸ ಮುಗಿಯುತ್ತಿದ್ದಂತೆ ತೀವ್ರ ಅಸ್ವಸ್ಥರಾಗಿದ್ದು, ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಯಿತಾದರೂ ಹೃದಯಾಘಾತದಿಂದ ಮೃತ ಹೊಂದಿದರು. ಮಂಗಳವಾರ ಕಿಬ್ಬೊಟ್ಟೆ ನೋವು ಎಂದು ಅಸ್ವಸ್ಥರಾಗಿ 14 ಗಂಟೆಗಳ ಕಾಲ ಆಸ್ಪತ್ರೆಯಲ್ಲಿದ್ದು ಚಿಕಿತ್ಸೆ ಪಡೆದು ಮರಳಿದ್ದರು. 68ಕ್ಕೂ ಹೆಚ್ಚು ಅಧಿಕ ಕ್ರಿಮಿನಲ್ ಪ್ರಕರಣಗಳನ್ನು ಎದುರಿಸುತ್ತಿದ್ದ ಗ್ಯಾಂಗ್ಸ್ಟಾರ್ 8 ಪ್ರಕರಣಗಳಲ್ಲಿ ದೋಷಿ ಎಂದು ಸಾಬೀತಾಗಿ ಜೈಲಿನಲ್ಲಿದ್ದರು. ಇತ್ತ ಉ.ಪ್ರದೇಶದಾದ್ಯಂತ ಅನ್ಸಾರಿ ಸಾವಿನ ಕಾರಣ ನಿಷೇಧಾಜ್ಞೆ ಹೊರಡಿಸಲಾಗಿದೆ. ಮುಖ್ತಾರ್ ಅನ್ಸಾರಿ ಸಾವಿನ ಹಿಂದೆ ಸಂಚು ಇದ್ದು, ಯಾರೋ ಜೈಲಲ್ಲಿ ವಿಷವುಣಿಸಿ ಕೊಲೆ ಮಾಡಿದ್ದಾರೆ ಎಂದು ಅವರ ಸಹೋದರ, ಘಾಜಿಪುರ ಸಂಸದ ಅಫ್ಜಲ್ ಅನ್ಸಾರಿ ಆರೋಪ ಮಾಡಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ರಾಮನಗರ ಲೋಕಸಭಾ ಕ್ಷೇತ್ರದ ಅಭ್ಯರ್ಥಿಯಾಗಿ ಇಂದು ನಾಮಪತ್ರ ಸಲ್ಲಿಸಿದ ಡಿ.ಕೆ. ಸುರೇಶ್ ತಮ್ಮ ಆಸ್ತಿ ವಿವರ ಘೋಷಣೆ ಮಾಡಿಕೊಂಡಿದ್ದಾರೆ. ಭರ್ಜರಿ ರೋಡ್ ಶೋ ನಡೆಸಿದ ಡಿ.ಕೆ. ಸುರೇಶ್ ರಾಮನಗರ ಜಿಲ್ಲಾಧಿಕಾರಿ ಕಚೇರಿಗೆ ಆಗಮಿಸಿ ನಾಮಪತ್ರ ಸಲ್ಲಿಸಿದ್ದಾರೆ. ಇನ್ನು ನಾಮಪತ್ರ ಅಫಿಡವಿಟ್ ನಲ್ಲಿ ಡಿ.ಕೆ. ಸುರೇಶ್ ಅವರು ಬರೋಬ್ಬರಿ 593.04 ಕೋಟಿ ರೂ. ಆಸ್ತಿ ಘೋಷಣೆ ಮಾಡಿಕೊಂಡಿದ್ದಾರೆ. ಡಿ.ಕೆ. ಸುರೇಶ್ ಅವರು ಕಳೆದ ಲೋಕಸಭಾ ಚುನಾವಣೆಯಲ್ಲಿ (2019ರಲ್ಲಿ) ಆಸ್ತಿ ಮೌಲ್ಯ 333.86 ಕೋಟಿ ರೂಪಾಯಿ ಇದೆ ಎಂದು ಘೋಷಿಸಿಕೊಂಡಿದ್ದರು. ಅಲ್ಲದೇ 8 ತಿಂಗಳ ಹಿಂದೆ ಅಷ್ಟೇ ಸುರೇಶ್ ಅವರು ವಿಧಾನಸಭೆ ಚುನಾವಣೆ ವೇಳೆ ಅಭ್ಯರ್ಥಿಯಾಗಿ ಕನಕಪುರ ಕ್ಷೇತ್ರದಿಂದ ನಾಮಪತ್ರ ಸಲ್ಲಿಸಿದ್ದರು. ಆ ವೇಳೆ ತಮ್ಮ ಹೆಸರಿನಲ್ಲಿ ಒಟ್ಟು ಆಸ್ತಿ ಮೌಲ್ಯ 353.7 ಕೋಟಿ ರೂ. ಎಂದು ಘೋಷಿಸಿಕೊಂಡಿದ್ದರು. ಇದೀಗ ಬೆಂಗಳೂರು ಗ್ರಾಮಾಂತರ ಕ್ಷೇತ್ರದಿಂದ ಕಣಕ್ಕಿಳಿಯುತ್ತಿರುವ ಡಿ.ಕೆ. ಸುರೇಶ್ ಒಟ್ಟು 593.04 ಕೋಟಿ ರೂ. ಮೌಲ್ಯದ ಆಸ್ತಿ ಇದೆ ಎಂದು ಅಫಿಡವಿಟ್ ನಲ್ಲಿ ತಿಳಿಸಿದ್ದಾರೆ…