Subscribe to Updates
Get the latest creative news from FooBar about art, design and business.
- ದಳವಾಯಿಹಳ್ಳಿಯಲ್ಲಿ ಕುಡಿಯುವ ನೀರಿಗೆ ಹಾಹಾಕಾರ: ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಗ್ರಾಮಸ್ಥರ ಆಕ್ರೋಶ, BPS ನಿಂದ ಟ್ಯಾಂಕರ್ ನೀರು ಪೂರೈಕೆ
- ಪಾವಗಡ: ದೊಡ್ಡಹಳ್ಳಿ ಸರ್ಕಾರಿ ಪ್ರೌಢಶಾಲೆಯಲ್ಲಿ 2026–27ನೇ ಸಾಲಿನ ದಾಖಲಾತಿ ಆರಂಭ
- ರಾಜ್ಯಸಭೆ ಚುನಾವಣೆಗೂ ಸಚಿವ ಸಂಪುಟ ಪುನರಾಚನೆಗೂ ಯಾವುದೇ ಸಂಬಂಧವಿಲ್ಲ: ಗೃಹ ಸಚಿವ ಜಿ. ಪರಮೇಶ್ವರ್ ಸ್ಪಷ್ಟನೆ
- ಸಿರಾದಲ್ಲಿ ಮೇ 26 ರಂದು ಜೆಡಿಎಸ್ ಪಕ್ಷದ ಪದಾಧಿಕಾರಿಗಳ ನೇಮಕಾತಿ ಕಾರ್ಯಕ್ರಮ
- ಮಕ್ಕಳ ಕೈಗೆ ಮೊಬೈಲ್ ಕೊಡುವ ಮುನ್ನ ಈ ಸುದ್ದಿ ಓದಿ: 1.98 ಲಕ್ಷ ರೂಪಾಯಿ ಕಳೆದುಕೊಂಡ ತುಮಕೂರಿನ ವ್ಯಕ್ತಿ!
- ಚಿಲ್ಲರೆಗಳಿಗೆ ನಾನು ಹೆದರುವ ಮಗನೇ ಅಲ್ಲ ಕೀಳುಮಟ್ಟದ ರಾಜಕಾರಣ ನನಗೆ ಗೊತ್ತಿಲ್ಲ: ಶಾಸಕ ಎಸ್. ಆರ್.ಶ್ರೀನಿವಾಸ್ ತಿರುಗೇಟು
- ತುಮಕೂರು ಜಿಲ್ಲೆಯಲ್ಲಿ 0.3 ಮಿ.ಮೀ. ಮಳೆ
- ಕೆಎಸ್ ಆರ್ ಟಿಸಿ ಬಸ್ ದರ ಏರಿಕೆ ಖಚಿತ: ಸಾರಿಗೆ ಸಂಸ್ಥೆ ಅಧ್ಯಕ್ಷ ಎಸ್.ಆರ್. ಶ್ರೀನಿವಾಸ್
Author: admin
ವಿದ್ಯಾರ್ಥಿಗಳಿಗೆ ಒಳ್ಳೆಯ ಶಿಕ್ಷಣ ಕೊಡಬೇಕಾದ ಶಿಕ್ಷಕನೇ ದಿನಾ ಶಾಲೆಗೆ ಕುಡಿದು ಬಂದು ಪಾಠ ಮಾಡದೇ ಕೊಠಡಿಯಲ್ಲಿ ಮಲಗುತ್ತಿರುವ ಘಟನೆ ಛತ್ತೀಸ್ ಗಢದ ಬಸ್ತಾರ್ ನಲ್ಲಿ ನಡೆದಿದೆ. ಶಿಕ್ಷಕನ ಕಾರ್ಯಕ್ಕೆ ರೊಚ್ಚಿಗೆದ್ದ ಅದೇ ಶಾಲೆಯ ವಿದ್ಯಾರ್ಥಿಗಳು ಕುಡುಕ ಶಿಕ್ಷಕನಿಗೆ ಸರಿಯಾದ ಪಾಠ ಕಲಿಸಿದ್ದಾರೆ. ಶಾಲೆಯ ಶಿಕ್ಷರೊಬ್ಬರು ದಿನಾ ಕುಡಿದು ಶಾಲೆಗೆ ಬರುತ್ತಿದ್ದರು ಇದರಿಂದ ರೋಸಿಹೋದ ಶಾಲೆಯ ವಿದ್ಯಾರ್ಥಿಗಳು ಶಿಕ್ಷಕ ಬೈಕ್ ನಲ್ಲಿ ಬರುತ್ತಿದ್ದ ವೇಳೆ ಎಲ್ಲರೂ ಜೊತೆಯಾಗಿ ಚಪ್ಪಲಿ, ಕಲ್ಲುಗಳಿಂದ ಹೊಡೆದು ಓಡಿಸಿದ್ದಾರೆ. ಈ ಘಟನೆಯ ವೀಡಿಯೋ ಕೂಡ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದ್ದು ಶಿಕ್ಷಕನ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ. ಇದರ ಕುರಿತು ಕೆಲವರು ಏನೇ ಆದರೂ ಶಿಕ್ಷಕರಿಗೆ ವಿದ್ಯಾರ್ಥಿಗಳ ಕೈಯಿಂದ ಹಾಗೆ ಮಾಡಬಾರದಿತ್ತು, ಶಿಕ್ಷಕರು ಯಾವತ್ತಿದ್ದರೂ ಶಿಕ್ಷಕರೇ ಹಾಗಾಗಿ ಮಕ್ಕಳ ಕೈಯಿಂದ ಈ ರೀತಿ ಚಪ್ಪಲಿ ಎಸೆದಿರುವುದು ತಪ್ಪು. ಬದಲಾಗಿ ವಿದ್ಯಾರ್ಥಿಗಳ ಪೋಷಕರು ಬಂದು ಈ ವಿಚಾರದಲ್ಲಿ ಮಾತುಕತೆ ನಡೆಸಬಹುದಿತ್ತು. ಅಲ್ಲದೆ, ಶಿಕ್ಷಕನ ವಿರುದ್ಧ ಶಾಲಾ ಆಡಳಿತ ಮಂಡಳಿಗೆ ದೂರು ನೀಡಿ…
ಸಾಮಾನ್ಯ ಆಟೋ ಚಾಲಕನೊಬ್ಬ ರಾತ್ರೋ ರಾತ್ರಿ ಕೋಟ್ಯಾಧಿಪತಿಯಾದ ಭಾರಿ ಅಪರೂಪದ ಘಟನೆ ಬಗ್ಗೆ ವರದಿಯಾಗಿದೆ. ಹೌದು, ಈ ವ್ಯಕ್ತಿಗೆ ಅದೃಷ್ಟ ದೇವತೆಯೇ ಒಲಿದು ಬಂದಿದ್ದಾಳೆ. ಲಾಟರಿಯಲ್ಲಿ ಬರೋಬ್ಬರಿ 10 ಕೋಟಿ ರೂ. ಗೆಲ್ಲುವ ಮೂಲಕ ಆ ವ್ಯಕ್ತಿಯ ಬಾಳಿಗೆ ಬೆಳಕಾಗಿದ್ದಾಳೆ. ಕೇರಳದ ಕಣ್ಣೂರಿನ ಆಳಕೋಡ್ ನಿವಾಸಿ ನಾಸರ್ ಅವರು 10 ಕೋಟಿ ರೂ. ಬಂಪರ್ ಲಾಟರಿ ಗೆದ್ದವರು. ವೃತ್ತಿಯಲ್ಲಿ ಆಟೋ ಡ್ರೈವರ್ ಆಗಿರುವ ನಾಸರ್ ಇದೀಗ ಬಂಪರ್ ಲಾಟರಿ ಗೆಲ್ಲುವ ಮೂಲಕ ರಾತ್ರೋರಾತ್ರಿ ಕೋಟ್ಯಾಧಿಪತಿಯಾಗಿದ್ದಾರೆ. ಕೇರಳದ ಕಾರ್ತಿಕಪುರದ ರಾರರಾಜೇಶ್ವರಿ ಲಾಟರಿ ಏಜನ್ಸಿಯಿಂದ ನಾಸರ್ ಲಾಟರಿ ಟಿಕೆಟ್ ಖರೀಸಿದ್ದು, ಅವರ ಅದೃಷ್ಟ ಖುಲಾಯಿಸಿ ಈ ಲಾಟರಿಯಲ್ಲಿ ಪ್ರಥಮ ಬಹುಮಾನ 10 ಕೋಟಿ ರೂ. ಹಣವನ್ನು ಗೆದ್ದಿದ್ದಾರೆ. ಕಾರ್ತಿಕಪುರದಲ್ಲಿ ಆಟೋ ಚಾಲಕನಾಗಿ ಕೆಲಸ ಮಾಡುವ ನಾಸರ್ ನಿನ್ನೆ ರಾತ್ರಿಯಷ್ಟೇ ಲಾಟರಿ ಟಿಕೆಟ್ ಖರೀದಿಸಿದ್ದರು ಎಂದು ಲಾಟರಿ ಏಜೆಂಟ್ ರಾಜು ಹೇಳಿದ್ದಾರೆ. ಇದೀಗ ಟಿಕೆಟ್ ಖರೀದಿ ಮಾಡಿದ ಮರು ದಿನವೇ ನಾಸಿರ್ ಅವರಿಗೆ 10. ಕೋಟಿ…
ಮಧುಗಿರಿ: ದಾದಗೊಂಡನಹಳ್ಳಿ ಗ್ರಾಮದಲ್ಲಿ ಗುರುವಾರ ಜಂಗಲ್ ತೆರವುಗೊಳಿಸುವ ವೇಳೆ ವಿದ್ಯುತ್ ಗುತ್ತಿಗೆ ನೌಕರ ದೊಡ್ಡಯನ್ನೂರು ಗ್ರಾಮದ ಅಂಜಪ್ಪ ಎಂಬುವರ ಪುತ್ರ ನರೇಂದ್ರ (30) ವಿದ್ಯುತ್ ಕಂಬದಿಂದ ಬಿದ್ದು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ನಡೆದಿದೆ. ಘಟನೆಗೆ ಐ.ಡಿ.ಹಳ್ಳಿ ಬೆಸ್ಕಾಂ ಇಲಾಖೆಯ ಶಾಖಾಧಿಕಾರಿ ವೀರೇಂದ್ರ ನಿರ್ಲಕ್ಷ್ಯವೇ ನರೇಂದ್ರ ಸಾವಿಗೆ ಕಾರಣ, ತಕ್ಷಣ ಅವರನ್ನು ಅಮಾನತು ಮಾಡಬೇಕು ಮತ್ತು ಮೃತ ಕುಟುಂಬಕ್ಕೆ ಸೂಕ್ತ ಪರಿಹಾರ ನೀಡಬೇಕು, ಇಲ್ಲವಾದರೆ ಮೃತದೇಹವನ್ನು ಬೆಸ್ಕಾಂ ಕಚೇರಿ ಮುಂಭಾಗ ಇಟ್ಟು ಪ್ರತಿಭಟನೆ ಮಾಡುವುದಾಗಿ ಮೃತ ನರೇಂದ್ರ ಅಕ್ಕನ ಮಗ ತಿಪ್ಪೇಸ್ವಾಮಿ ಹಾಗೂ ವಿವಿಧ ದಲಿತ ಪರ ಸಂಘಟನೆಯ ಪದಾಧಿಕಾರಿಗಳು ಪಟ್ಟಣದ ಸಾರ್ವಜನಿಕ ಆಸ್ಪತ್ರೆಯ ಮುಂಭಾಗ ಆಗ್ರಹಿಸಿದರು. ಘಟನಾ ಸ್ಥಳಕ್ಕೆ ಬೆಸ್ಕಾಂ ಇಇ ಜಗದೀಶ್, ಸಿಪಿಐ ಎಸ್. ರವಿ, ಮಿಡಿಗೇಶಿ ಪಿಎಸ್ ಐ ಅಮ್ಮಣಗಿ ಭೇಟಿ ನೀಡಿದ್ದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ಆಂಟೋನಿ ಬೇಗೂರು HSRP: ಲೋಕಸಭಾ ಚುನಾವಣೆ ದಿನಾಂಕ ಘೋಷಣೆಯಾಗಿದ್ದು ಇದೀಗ ಎಲ್ಲೆಡೆ ನೀತಿ ಸಂಹಿತೆ ಜಾರಿಯಾಗುತ್ತಿದೆ. ಈ ಹಿನ್ನೆಲೆಯಲ್ಲಿ ಹಲವಾರು ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳಲಾಗಿದೆ. ಇದರ ಬಿಸಿ ಇದುವರೆಗೂ HSRP ನಂಬರ್ ಪ್ಲೇಟ್ ಹಾಕಿಸದ ವಾಹನಗಳಿಗೂ ಮುಟ್ಟಿದೆ. ದೇಶಾದ್ಯಂತ ಚುನಾವಣಾ ಮಾದರಿ ನೀತಿ ಸಂಹಿತೆ ಜಾರಿಯಾಗಿದ್ದು ಸಾಕಷ್ಟು ನಿಯಮಗಳಲ್ಲಿ ಕಟ್ಟು ನೆಟ್ಟಿನ ಕ್ರಮ ಕೈಗೊಳ್ಳಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಹೆಚ್ಎಸ್ಆರ್ಪಿ (HSRP) ಇಲ್ಲದೆ ಇರುವ ವಾಹನಗಳ ಚಲಾವಣೆ ನಿರ್ಬಂಧಿಸಲಾಗುತ್ತಿದೆ. ಅಂದ ಹಾಗೆ HSRP ನಂಬರ್ ಪ್ಲೇಟ್ ಅಳವಡಿಕೆಗೆ ಮೇ 31ರ ವರೆಗೆ ಸಮಯವಕಾಶವಿದ್ದರೂ ಚುನಾವಣೆ ನಿಮಿತ್ತ ಈ ನಿರ್ಧಾರ ಮಾಡಲಾಗಿದೆ ಎನ್ನಲಾಗಿದೆ. ಅಲ್ಲದೆ ರಾಷ್ಟ್ರ ರಾಜಧಾನಿ ದೆಹಲಿ, ನೋಯಿಡಾ, ಗ್ರೇಟರ್ ನೋಯಿಡಾ, ಫರೀದಾಬಾದ್, ಗೌತಮ್ ಬುದ್ಧ ನಗರ ಮೊದಲಾದ ಕಡೆ ಅಧಿಕಾರಿಗಳು ನಂಬರ್ ಪ್ಲೇಟ್ ಪರೀಕ್ಷೆಯಲ್ಲಿ ಹೈ ಸೆಕ್ಯೂರಿಟಿ ನಂಬರ್ ಪ್ಲೇಟ್ (HSRP Number Plate) ಇಲ್ಲದೇ ಇರುವ ವಾಹನಗಳನ್ನು ತಡೆಹಿಡಿದು ಫೈನ್ ಹಾಕಲಾಗುತ್ತಿದೆ. ಸದ್ಯಕ್ಕೆ ದೆಹಲಿಯಲ್ಲಿ ಇರುವ ನಿಯಮ ಆಗಿದ್ದರೂ ಕೂಡ…
ಹಾರ್ದಿಕ್ ಪಾಂಡ್ಯ ನಾಯಕತ್ವದ ಮುಂಬೈ ಇಂಡಿಯನ್ಸ್ ತಂಡವು ಬುಧವಾರ ಟಾಸ್ ಗೆದ್ದ ಸಂದರ್ಭದಲ್ಲಿ ಕ್ರೀಡಾಂಗಣದ ಹೊರಗಿನ ಟಿವಿಯಲ್ಲಿ ಹಾರ್ದಿಕ್ ಪಾಂಡ್ಯ ಮಾತನಾಡುತ್ತಿರುವ ವೇಳೆ ರೋಹಿತ್ ಶರ್ಮ ಅಭಿಮಾನಿಗಳು ಚಪ್ಪಲಿಗಳನ್ನು ಎಸೆಯುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ರೋಹಿತ್ ಶರ್ಮಾ ಅವರನ್ನು ಕ್ಯಾಪ್ಟನ್ಸಿಪ್ ನಿಂದ ಇಳಿಸಿದ ಬಳಿಕ ರೋಹಿತ್ ಶರ್ಮ ಅಭಿಮಾನಿಗಳು ತುಂಬಾ ಬೇಸರ ವ್ಯಕ್ತಪಡಿಸಿದ್ದರು. ಅದಾಗ್ಯೂ ಇತ್ತೀಚಿಗೆ ನಡೆದ ಮ್ಯಾಚ್ ಒಂದರಲ್ಲಿ ಹಾರ್ದಿಕ್ ಪಾಂಡ್ಯ ಅವರು ರೋಹಿತ್ ಶರ್ಮಾ ಅವರನ್ನು ಫೀಲ್ಡಿಂಗ್ ನಲ್ಲಿ ನಿಲ್ಲಿಸುವ ಸಂದರ್ಭದಲ್ಲಿ ಆದ ಗೊಂದಲಗಳಿಂದ ರೋಹಿತ್ ಶರ್ಮಾ ಅಭಿಮಾನಿಗಳು ಪಾಂಡ್ಯ ಮೇಲೆ ಸಾಕಷ್ಟು ಕುಪಿತಗೊಂಡಿದ್ದರು. ಆದರೆ ರೋಹಿತ್ ಶರ್ಮ ಅವರಿಗೆ ಕ್ಯಾಪ್ಟನ್ಸಿ ಬಿಟ್ಟುಕೊಡಲು ಮನಸ್ಸಿಲ್ಲದಿದ್ದರೂ ಅವರನ್ನು ಕ್ಯಾಪ್ಟನ್ಸಿ ಇಂದ ಇಳಿಸಲಾಗಿದೆ ಎಂದು ಅಭಿಮಾನಿಗಳು ಬೇಸರಗೊಂಡಿದ್ದರು. ಆದರೆ ರೋಹಿತ್ ಶರ್ಮ ಈ ಕುರಿತು ಎಲ್ಲಿಯೂ ಸಹ ತಮ್ಮ ಬೇಸರ ವ್ಯಕ್ತಪಡಿಸಿಲ್ಲ. ನಾವು ಸಕಾರಾತ್ಮಕವಾಗಿದ್ದೇವೆ ಮತ್ತು ಸವಾಲನ್ನು ಎದುರು ನೋಡುತ್ತಿದ್ದೇವೆ. ಎಲ್ಲಾ ಆಟಗಾರರೊಂದಿಗೆ ಸಮಯ ಕಳೆಯಲು ಪ್ರಯತ್ನಿಸುತ್ತಿದ್ದೇನೆ, ಆಟಗಾರರನ್ನು ಚೆನ್ನಾಗಿ…
ಚೆನ್ನೈನ ಅಲ್ವಾರ್ ಪೇಟ್ ಪಬ್ ನ ಛಾವಣಿ ಕುಸಿದು ಮೂವರು ಸಾವನ್ನಪ್ಪಿದ್ದಾರೆ. ಮೃತರನ್ನು ಮಣಿಪುರ ಮೂಲದ ಮ್ಯಾಕ್ಸ್ ಮತ್ತು ಲಾಲಿ ಎಂದು ಗುರುತಿಸಲಾಗಿದ್ದು, ಅವರು ಪಬ್ ಉದ್ಯೋಗಿಗಳಾಗಿದ್ದಾರೆ. ಮೃತ ಮೂರನೇ ವ್ಯಕ್ತಿಯ ಗುರುತು ಪತ್ತೆಯಾಗಿಲ್ಲ. ರಾತ್ರಿ 8 ಗಂಟೆ ಸುಮಾರಿಗೆ ಅಪಘಾತ ಸಂಭವಿಸಿದೆ. ಆಳ್ವಾರಪೇಟೆಯ ಶೆಕ್ಮೆಟ್ ಪಬ್ನ ಮೇಲ್ಛಾವಣಿ ಕುಸಿದಿದೆ. ಅಪಘಾತದ ಕಾರಣ ಇನ್ನೂ ಸ್ಪಷ್ಟವಾಗಿಲ್ಲ. ಈ ವೇಳೆ ಪಬ್ ನಲ್ಲಿ ಯಾರೂ ಸಿಕ್ಕಿಹಾಕಿಕೊಂಡಿಲ್ಲ ಎಂದು ರಕ್ಷಣಾ ಕಾರ್ಯಕರ್ತರು ಮತ್ತು ಅಗ್ನಿಶಾಮಕ ದಳ ತಿಳಿಸಿದ್ದಾರೆ. ಐಪಿಎಲ್ ನಡೆಯುತ್ತಿದ್ದು ನಾಳೆ ರಜೆ ಇದ್ದ ಕಾರಣ ಹಲವರು ಪಬ್ ನಲ್ಲಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ. ಅಷ್ಟರಲ್ಲಿ ಮೇಲ್ಛಾವಣಿ ಸಂಪೂರ್ಣ ಕುಸಿದು ಕೆಳಗೆ ಬಿದ್ದಿದೆ. ಪಬ್ ಒಳಗೆ ಬೇರೆ ಯಾರೂ ಸಿಕ್ಕಿಹಾಕಿಕೊಂಡಿಲ್ಲ ಎಂದು ಖಚಿತಪಡಿಸಿದ ನಂತರ ರಕ್ಷಣಾ ಕಾರ್ಯಾಚರಣೆಯನ್ನು ಈಗ ಹಿಂತೆಗೆದುಕೊಳ್ಳಲಾಗಿದೆ. ಮೃತ ಮೂರನೇ ವ್ಯಕ್ತಿಯ ಗುರುತು ಪತ್ತೆಗೆ ಪೊಲೀಸರು ಪ್ರಯತ್ನ ನಡೆಸುತ್ತಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್…
ಗದಗ: ಬಸವರಾಜ ಬೊಮ್ಮಾಯಿ ದಾವಣಗೆರೆ ಚಾರ್ಲಿ ಇದ್ದಂತೆ. ಆದರೆ ಇದೀಗ ಮುದುಕರಾಗಿದ್ದಾರೆ. ಆದರೆ ಹೊಸ ಕುಸ್ತಿ ಪಟು ಬಿಟ್ಟಾಗ ಯಾರು ಗೆಲ್ಲುತ್ತಾರೆಂದು ಗೊತ್ತಾಗುತ್ತದೆ ಸಚಿವ ಎಚ್.ಕೆ.ಪಾಟೀಲ ವ್ಯಂಗ್ಯವಾಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದಾವಣಗೆರೆ ಚಾರ್ಲಿ ಜೊತೆಗೆ ಹೊಸ ಜಾಣ ಕುಸ್ತಿಪಟು ಇಂದು ಕಣದಲ್ಲಿ ಇದ್ದಾನೆ. ಹೀಗಾಗಿ ಆನಂದ ಗಡ್ಡದ್ದೇವರಮಠ ಗೆಲುವು ನಿಶ್ಚಿತ ಎಂದು ಅವರು ಹೇಳಿದರು. ಕುಸ್ತಿಯಲ್ಲಿ ಬೊಮ್ಮಾಯಿ ಅವರು ದಾವಣಗೆರೆ ಚಾರ್ಲಿ ಇದ್ದರು ಆದರೆ ಇದೀಗ ಮುದುಕರಾಗಿದ್ದಾರೆ. ಮಾಜಿ ಮುಖ್ಯಮಂತ್ರಿಗಳ ಹಿಂದೆ ದೊಡ್ಡದೊಂದು ಲಗೇಜ್ ಇದೆ. ದೊಡ್ಡ ಭಾರ ಇದೆ. ಅವರು ಜನರಿಗೆ ಏನು ಹೇಳುತ್ತಾರೋ ಗೊತ್ತಿಲ್ಲ ಎಂದರು. ಮೋದಿ ಅಂತ ಹೇಳಿದಾಕ್ಷಣ 15 ಲಕ್ಷ ಆಪ್ ಕಿ ಅಕೌಂಟ್ ಗೆ ಪಂದ್ರಾಲಾಕ್ ಡಾಲೂಂಗಾ ಇದು ಜನರ ಮನಸ್ಸಿಗೆ ಒಮ್ಮೆಲೆ ಥಟ್ಟನೆ ಅಂತ ಬರುತ್ತದೆ. ರೈತರಿಗೆ ಆದಾಯ ದುಪ್ಪಟ್ಟಾಗುತ್ತೆ ಅಂತ ಹೇಳಿದ್ದರು. ಯುವಕರಿಗೆ 2 ಕೋಟಿ ಉದ್ಯೋಗ ಸೃಷ್ಠಿ ಮಾಡ್ತಿವಿ ಅಂದಿದ್ರು ಇವೆಲ್ಲ ಅವರ ಹಿಂದೆ ದೊಡ್ಡ ಭಾರಗಳಿವೆ ಬಿಜೆಪಿಯ ಸುಳ್ಳು…
ತಿಪಟೂರು: ಕಾಂಗ್ರೆಸ್ ಮುಖಂಡ ಸಮಾಜ ಸೇವಕ ನಿವೃತ್ತ ಎಸಿಪಿ ಲೋಕೇಶ್ವರ್ ಅವರ ಮನೆಗೆ ಇಂದು ತುಮಕೂರು ಕಾಂಗ್ರೆಸ್ ಲೋಕಸಭಾ ಅಭ್ಯರ್ಥಿ ಮುದ್ದಹನುಮೇಗೌಡ ಭೇಟಿ ನೀಡಿ ಲಘು ಉಪಹಾರ ಸೇವಿಸಿದರು. ಲೋಕೇಶ್ವರ್ ಮತ್ತು ಲೋಕೇಶ್ವರ್ ಬೆಂಬಲಿಗರಿಗೆ ನಾನು ಮುಂದಿನ ದಿನಗಳಲ್ಲಿ ಎಲ್ಲಾ ವೈ ಮನಸುಗಳನ್ನು ಸರಿಪಡಿಸಿ ಲೋಕೇಶ್ವರ್ ಬೆಂಬಲಿತರಿಗೆ ಉತ್ತಮ ಸ್ಥಾನಮಾನ ದೊರಕಿಸಿ ಕೊಡುವಲ್ಲಿ ಸಂಪೂರ್ಣ ಪ್ರಯತ್ನ ಮಾಡುತ್ತೇನೆ ಎಂದು ಭರವಸೆ ನೀಡಿದರು. ನೀವು ನನ್ನ ಜೊತೆ ಕೈ ಜೋಡಿಸಿ ಈ ಬಾರಿ ಗೆಲ್ಲಿಸಿದರೆ, ನಾನು ಲೋಕೇಶ್ವರ್ ಮತ್ತು ಅವರ ಹಿಂಬಾಲಕರು ಮತ್ತು ಬೆಂಬಲಕರಿಗೆ ಕಾರ್ಯಕರ್ತರಿಗೆ ಏನು ಸ್ಥಾನಮಾನಗಳು ಮತ್ತು ಕಾರ್ಯ ಚಟುವಟಿಕೆಗಳು ಬರಬೇಕು ಎಂಬುದನ್ನು ನಾನು ಉತ್ತಮ ರೀತಿಯಲ್ಲಿ ಅವರಿಗೆ ಒದಗಿಸಿಕೊಡುವಲ್ಲಿ ಯಶಸ್ವಿ ಆಗುತ್ತೇನೆ ಎಂದು ನಿಮಗೆ ಭರವಸೆ ನೀಡುತ್ತಿದ್ದೇನೆ ಎಂದರು. ವರದಿ: ಆನಂದ್, ತಿಪಟೂರು ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ತುಮಕೂರು: ಬೈಕ್ ವ್ಹೀಲಿಂಗ್ ಮಾಡುತ್ತಿದ್ದ ಪುಂಡರನ್ನು ಕೊರಟಗೆರೆ ಪೊಲೀಸರು ಹೆಡೆಮುರಿಕಟ್ಟಿದ್ದು, ಸಾರ್ವಜನಿಕರಿಗೆ ಆಗುತ್ತಿದ್ದ ತೊಂದರೆಯನ್ನು ನಿವಾರಿಸಿದ್ದಾರೆ. ಕೊರಟಗೆರೆ ತುಮಕೂರು ಮಾರ್ಗ ಮಧ್ಯದಲ್ಲಿ ಅಜ್ಜಿಹಳ್ಳಿ ಸಮೀಪಗ ರಾಜ್ಯ ಹೆದ್ದಾರಿಯಲ್ಲಿ ರಾತ್ರಿ ಬೈಕ್ ವೀಲಿಂಗ್ ಮಾಡುತ್ತಿದ್ದ ಸುಮಾರು ನಾಲ್ಕು ಬೈಕ್ ವಶಪಡಿಸಿಕೊಂಡು 7 ಜನ ಪುಂಡರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಶಾಯಿದ್ ಖಾನ್(19), ಸಲ್ಮಾನ್ (20), ಸಾದತ್ ಪಾಷ(20), ನಸೀಬ್ಉಲ್ಲಾ (19) ಸಾಧಿಕ್ ಪಾಷ(19), ಫರ್ದೀನ್ ಖಾನ್(21), ಇಸ್ಮಾಯಿಲ್(20) ವರ್ಷದ ಬಂಧಿತ ಆರೋಪಿಗಳಾಗಿದ್ದಾರೆ. ತುಮಕೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಶೋಕ್ ರವರ ಮಾಹಿತಿ ಮೇರೆಗೆ ಕೊರಟಗೆರೆ ಪೊಲೀಸ್ ಅಧಿಕಾರಿಗಳು ಕ್ಷಿಪ್ರವಾಗಿ ಕ್ರಮಕೈಗೊಂಡಿದ್ದು, ಪುಂಡರ ಬೈಕ್ ವ್ಹೀಲಿಂಗ್ ಗೆ ಬ್ರೇಕ್ ಹಾಕಿದ್ದಾರೆ. ರಸ್ತೆಗಳಲ್ಲಿ ಬೈಕ್ ನಲ್ಲಿ ಹೋಗುವಾಗ ಹೆಲ್ಮೆಟ್ ಇಲ್ಲದೆ ಹೋಗುವುದೇ ಮೊದಲನೇ ತಪ್ಪು, ಅದರಲ್ಲಿಯೂ ಈ ಪುಂಡರು ವೀಲಿಂಗ್ ಮಾಡುತ್ತಾ ವಾಹನ ಸವರರಿಗೆ ಕಿರಿಕಿರಿ ಮಾಡಿದ್ದಾರೆ. ಇತರ ವಾಹನ ಸವಾರರಿಗೆ ಸೈಡ್ ಕೊಡದೆ ರಸ್ತೆ ಮಧ್ಯದಲ್ಲಿ ವೀಲಿಂಗ್ ಮಾಡುತ್ತಾ ಪುಂಡಾಟಿಕೆ ಮೆರೆದಿದ್ದಾರೆ. ಇನ್ನು ಮುಂದಾದರೂ…
ನಮ್ಮ ಹಿರಿಯರು ಮೊದಲಿನಿಂದಲೂ ಅಡುಗೆಗೆಂದು, ಆರೋಗ್ಯಕರ ಜೀವನಕ್ಕಾಗಿ, ಕಬ್ಬಿಣದ ಬಾಣಲೆಯಲ್ಲಿ ಬೇಯಿಸಿದ ಆಹಾರವನ್ನು ಮಾತ್ರ ಸೇವಿಸಬೇಕು ಎಂದು ಹೇಳಿದ್ದಾರೆ. ಜೊತೆಗೆ ಸಂಶೋಧನೆ ಕೂಡಾ ಉಲ್ಲೇಖಿಸಿದೆ. ಪ್ರಸ್ತುತ ಕಾಲ ಬದಲಾದಂತೆ ಮಾರುಕಟ್ಟೆಯಲ್ಲಿ ಈಗ ಅನೇಕ ಆಯ್ಕೆಗಳಿವೆ. ಇವುಗಳು ಮನುಷ್ಯನ ಅಡುಗೆ ಕೆಲಸವನ್ನು ಸುಲಭ ಮಾಡಿದೆ. ಆದರೆ ನಾವು ಆರೋಗ್ಯದ ಬಗ್ಗೆ ಮಾತನಾಡಿದರೆ, ಕಬ್ಬಿಣದ ಪಾತ್ರೆಯಿಂದ ಸಿಗುವ ಪ್ರಯೋಜನ ಅನೇಕ. ಹಾಗಾದರೆ ಇದಕ್ಕೆ ಸಂಬಂಧಿಸಿದ ಅದ್ಭುತ ಪ್ರಯೋಜನಗಳ ಬಗ್ಗೆ ತಿಳಿಯೋಣ. ಕಬ್ಬಿಣದ ಬಾಣಲೆಯಲ್ಲಿ ನಾವು ಏನೇ ಅಡುಗೆ ಮಾಡಿದರೂ ಅದರಲ್ಲಿ ಕಬ್ಬಿಣದ ಅಂಶ ಹೇರಳವಾಗಿ ಇರುತ್ತದೆ. ಇದರಿಂದಾಗಿ ನಮ್ಮ ದೇಹದಲ್ಲಿನ ರಕ್ತದ ಕೊರತೆ (ರಕ್ತಹೀನತೆ) ಸಮಸ್ಯೆಗಳು ದೂರವಾಗುತ್ತವೆ. ಆದರೆ ಟೊಮೆಟೊಗಳು ಅಥವಾ ಇತರ ಹುಳಿ ಆಹಾರವನ್ನು ಅಡುಗೆ ಮಾಡುವ ಮೊದಲು, ಕಬ್ಬಿಣದ ಪ್ಯಾನ್ ಅನ್ನು ಸರಿಯಾಗಿ ಸ್ವಚ್ಛಗೊಳಿಸಿ ಎಂಬುದನ್ನು ನೆನಪಿನಲ್ಲಿಡಿ. ಕಬ್ಬಿಣದ ಹರಿವಾಣವನ್ನು ಕಬ್ಬಿಣದ ನಿಧಿ ಎಂದು ಕರೆದರೆ ತಪ್ಪಾಗದು. ಕಬ್ಬಿಣದ ಪ್ಯಾನ್ ಅನ್ನು ಸ್ವಚ್ಛಗೊಳಿಸಲು ಸುಲಭ, ಅದರಲ್ಲಿ ಅಂಟಿಕೊಂಡಿರುವ ಪದಾರ್ಥದ ಜಿಡ್ಡನ್ನು ಸೋಪಿನಿಂದ…