Author: admin

ಹಿಂದಿನಿಂದಲೂ ಬ್ರಿಟೀಷರ ಕಾಯಿಲೆ ಎಂದೇ ಜನರಿಗೆ ಪರಿಚಿತವಾಗಿದ್ದ ಮಧುಮೇಹ(ಸಕ್ಕರೆ ಕಾಯಿಲೆ) ಇಂದು ವಿಶ್ವದಾದ್ಯಂತ ಲಕ್ಷಾಂತರ ಜನರನ್ನು ಆವರಿಸಿಬಿಟ್ಟಿದೆ. ಮಧುಮೇಹದ ಬಂದರೆ ಆದರ ಲಕ್ಷಣಗಳು ನಮಗೆ ಗೊತ್ತಾಗಿ ಬಿಡುತ್ತವೆ ಎಂದು ನೀವು ಭಾವಿಸಬಹುದು. ಆದರೆ ದುರದೃಷ್ಟವಶಾತ್, ಮಧುಮೇಹವು ಇನ್ನೂ ಆರಂಭದಲ್ಲಿರುವಾಗ ನೀಡುವ ಸೂಚನೆಗಳು ಸ್ಪಷ್ಟವಾಗಿದ್ದರೂ ಯಾವುದೋ ಒಂದು ಪರಿಣಾಮ ಕಂಡುಬಂದ ಬಳಿಕವೇ ಮಧುಮೇಹ ಆವರಿಸಿರುವುದು ಗೊತ್ತಾಗುತ್ತದೆ. ಅಲ್ಲಿಯವರೆಗೆ ಮಧುಮೇಹ ಪ್ರಾರಂಭಿಕ ಹಂತದಲ್ಲಿದ್ದುದೇ ಹೆಚ್ಚಿನವರಿಗೆ ಗೊತ್ತಿರುವುದಿಲ್ಲ. ಹೀಗಾಗಿ ನಿಮ್ಮ ದೇಹದಲ್ಲಿ ಈ 6 ಲಕ್ಷಣಗಳು ಕಂಡುಬಂದರೆ ನಿಮಗೆ ಶುಗರ್ ಬಂದಿದೆ ಎಂಬುದು ಪಕ್ಕಾ ಆಗುತ್ತದೆ. ಹಾಗಿದ್ರೆ ಆ ಲಕ್ಷಣಗಳು ಯಾವುವು? ಕಾಲುಗಳಲ್ಲಿ ನೋವು ಅಥವಾ ಗಾಯ ಒಣಗದಿರುವುದು: ಸಕ್ಕರೆಯ ಮಟ್ಟವು ಹೆಚ್ಚಾದಾಗ, ಪಾದಗಳು ಎರಡು ರೀತಿಯಲ್ಲಿ ತೋರಿಸುತ್ತವೆ. ಮೊದಲನೆಯದಾಗಿ ಕಾಲಿನಲ್ಲಿ ಕೆಲವು ರೀತಿಯ ಸಂವೇದನೆಯನ್ನು ಅನುಭವಿಸಬಹುದು. ಎರಡನೆಯದು- ಕಾಲುಗಳಲ್ಲಿ ರಕ್ತದ ಹರಿವು ಸರಿಯಾಗಿ ಆಗುವುದಿಲ್ಲ. ನಿಮ್ಮ ಕಾಲಿನ ಗಾಯಗಳು ಎಷ್ಟು ದಿನವಾದರೂ ಗುಣವಾಗುವುದಿಲ್ಲ. ಈ ಲಕ್ಷಣಗಳು ಕಂಡುಬಂದಾಗ ಎಂದಿಗೂ ಉದಾಸೀನ ಮಾಡಬೇಡಿ. ಯಾಕೆಂದರೆ ಶುಗರ್…

Read More

ಲೋಕಸಭೆ ಚುನಾವಣೆಯಲ್ಲಿ ಮಂಡ್ಯ ಕ್ಷೇತ್ರದಲ್ಲಿ ಸುಮಲತಾ ಅಂಬರೀಶ್ ಬೆಂಬಲ ವಿಚಾರ ಕುರಿತು ಪ್ರತಿಕ್ರಿಯಿಸಿದ ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ, ಸುಮಲತಾ ಅಂಬರೀಶ್ ಏನು ಶಾಶ್ವತ ಶತ್ರುನಾ..? ಅಗತ್ಯವಿದ್ದರೆ ಸಂಸದೆ ಸುಮಲತಾರನ್ನ ಭೇಟಿ ಮಾಡುತ್ತೇವೆ ಎಂದಿದ್ದಾರೆ. ಮೈಸೂರಿನಲ್ಲಿ ಈ ವಿಚಾರವಾಗಿ ಮಾತನಾಡಿದ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ, ಸುಮಲತಾ ಅಂಬರೀಶ್ ನಮಗೆ ಶಾಶ್ವತ ಶತ್ರುವಲ್ಲ. ರಾಮಾಂಜನೇಯ ಯುದ್ದವೇ ಈ ಮಣ್ಣಿನಲ್ಲಿ ನಡೆದು ಹೋಗಿದೆ. ನಾವೆಲ್ಲಾ ಹುಲು ಮಾನವರು ಅದರ ಮುಂದೆ ಯಾವ ಲೆಕ್ಕ ಹೇಳಿ. ರಾಜಕೀಯದಲ್ಲಿ ಹೋರಾಟ ಜಗಳಿದ್ದೇ ಇರುತ್ತದೆ. ನಮಗೇನು ಸುಮಲತಾ ದೂರ ಅಲ್ಲ. ಅಂಬರೀಶ್ ಇದ್ದ ಕಾಲದಲ್ಲಿ ಪರಸ್ಪರ ಜೊತೆಗಿದ್ದವು. ಅಗತ್ಯವಿದ್ದರೆ ಸಂಸದೆ ಸುಮಲತಾರನ್ನ ಭೇಟಿ ಮಾಡುತ್ತೇವೆ ಎಂದರು. ಡಿಎಂಕೆ ಮೇಕೆದಾಟು ಯೋಜನೆ ಮಾಡಲು ಬಿಡಲ್ಲ ಎಂದಿದ್ದಾರೆ. ನೀರಾವರಿ ಯೋಜನೆಗಳ ಬಗ್ಗೆ ಕಾಂಗ್ರೆಸ್ ನವರು ಮಾತನಾಡುತ್ತಾರೆ. ನೀರಾವರಿಗೆ ಹೆಚ್. ಡಿ ದೇವೇಗೌಡರು ಸಾಕಷ್ಟು ಕೊಡುಗೆ ನೀಡಿದ್ದಾರೆ. ದೇವೇಗೌಡರ ಬಗ್ಗೆ ಮಾತನಾಡುವ ನೈತಿಕತೆ ಕಾಂಗ್ರೆಸ್ ಗೆ ಇಲ್ಲ ಎಂದರು. ನಮ್ಮತುಮಕೂರಿನ ಕ್ಷಣ…

Read More

ಬೆಂಗಳೂರು ಗ್ರಾಮಾಂತರ: ನೆಲಮಂಗಲ ತಾಲೂಕಿನ ತೊಣಚಿನಕುಪ್ಪೆ ಗ್ರಾಮದ ಬಳಿಯ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಕಂಟೇನರ್ ಮತ್ತು ಈರುಳ್ಳಿ ತುಂಬಿದ ಕ್ಯಾಂಟರ್ ನಡುವೆ ಡಿಕ್ಕಿಯಾದ ಘಟನೆ ನಡೆದಿದೆ. ಕಂಟೇನರ್ ಚಾಲಕನಿಗೆ ಸಣ್ಣಪುಟ್ಟ ಗಾಯವಾಗಿದ್ದು, ಕೂಡಲೇ ಗಾಯಾಳುವನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಇನ್ನು ಅಪಘಾತದಿಂದಾಗಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಕೆಲಕಾಲ ಟ್ರಾಫಿಕ್ ಜಾಮ್ ಉಂಟಾಗಿದ್ದು, ನೆಲಮಂಗಲ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

Read More

ಆಂಧ್ರಪ್ರದೇಶ: ಲೋಕಸಭಾ ಚುನಾವಣೆ ಕಣ ದೇಶಾದ್ಯಂತ ರಂಗೇರಿದ್ದು ಹೈಕಮಾಂಡ್‌ ಟಿಕೆಟ್‌ ಘೋಷಣೆ ಮಾಡುತ್ತಿದ್ದಂತೆ ಸಂಭ್ರಮಾಚರಣೆಗಳು ಜೋರಾಗಿವೇ. ಟಿಕೆಟ್‌ ಸಿಕ್ಕಿದ್ದು ಚುನಾವಣೆ ಗೆದ್ದಂತೆ ಎನ್ನುವ ರೀತಿ ಅಭ್ಯರ್ಥಿಗಳು ಭಾವೋದ್ವೇಗಕ್ಕೆ ಒಳಗಾದ ಘಟನೆಗಳೂ ನಡೆದಿವೆ. ಅದರಂತೆ ಆಂಧ್ರಪ್ರದೇಶದ ನರಸಾಪುರಂ ಲೋಕಸಭಾ ಕ್ಷೇತ್ರದ ಅಭ್ಯರ್ಥಿಯಾಗಿ ಭೂಪತಿ ರಾಜು ಶ್ರೀನಿವಾಸ್‌ ಹೆಸರು ಘೋಷಣೆಯಾಗಿದ್ದು, ತಮ್ಮ ಹೆಸರು ಕೇಳಿ ಬರುತ್ತಿದ್ದಂತೆ ಪಕ್ಷದ ಕಚೇರಿ ಎದುರು ಮಲಗಿ ಕಣ್ಣೀರಿಟಿದ್ದಾರೆ. 30 ವರ್ಷಗಳಿಂದ ಈ ಕ್ಷಣಕ್ಕಾಗಿ ಕಾದಿದ್ದೇ, ಇಂದು ಆ ಘಳಿಗೆ ಬಂದಿದೆ ಎನ್ನುತ್ತಾ ಪಕ್ಷದ ಕಚೇರಿ ಎದುರಿನ ಕಮಲ ಚಿತ್ರದ ಮೇಲೆ ಬೋರಲು ಮಲಗಿ ಭೂಪತಿ ರಾಜು ಶ್ರೀನಿವಾಸ್‌ ಬಿಕ್ಕಿ ಬಿಕ್ಕಿ ಅತ್ತಿದ್ದಾರೆ. ತನ್ನ ಮೇಲೆ ಭರವಸೆ ಇಟ್ಟು ಲೋಕಸಭಾ ಟಿಕೆಟ್‌ ನೀಡಿದ್ದಕ್ಕೆ ವರಿಷ್ಟರಿಗೆ ಧನ್ಯವಾದ ಕೂಡ ತಿಳಿಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

Read More

ನವದೆಹಲಿ: ಟೈಮ್ಸ್​ ನೌ ಶೃಂಗಸಭೆ 2024 ಯಲ್ಲಿ ಮಾತನಾಡಿದ ಸೀತಾರಾಮನ್​, ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಲು ಬಿಜೆಪಿ ಪಕ್ಷವು ನನಗೆ ಆಫರ್​ ನೀಡಿತು. ಈ ಬಗ್ಗೆ ಹತ್ತು ದಿನಗಳ ಕಾಲ ಯೋಚಿಸಿ, ಹಿಂದಿರುಗಿ ಹೋಗಿ, ನನ್ನಿಂದ ಸ್ಪರ್ಧಿಸಲು ಸಾಧ್ಯವಿಲ್ಲ ಎಂದು ಹೇಳಿದೆ. ನನ್ನತ್ರ ಚುನಾವಣೆಗೆ ಖರ್ಚು ಮಾಡುವಷ್ಟು ಹಣವಿಲ್ಲದ ಕಾರಣ ನಾನು ಸ್ಫರ್ಧೆ ಮಾಡುವುದಿಲ್ಲ ಎಂದು ಹೇಳಿಬಂದೆ ಎಂದು ವಿತ್ತಸಚಿವೆ ಬಹಿರಂಗಪಡಿಸಿದರು. ಆಂಧ್ರಪ್ರದೇಶ ಅಥವಾ ತಮಿಳುನಾಡಿನಿಂದ ಲೋಕಸಭೆಗೆ ಸ್ಪರ್ಧಿಸಲು ಬಿಜೆಪಿ ರಾಷ್ಟ್ರಾಧ್ಯಕ್ಷ ಜೆಪಿ ನಡ್ಡಾ ಅವರು ಆಫರ್​ ನೀಡಿ, ಆಯ್ಕೆಯನ್ನು ನನಗೇ ಬಿಟ್ಟಿದ್ದರು. ಆದರೆ, ಬಿಜೆಪಿ ಬಳಸುವ ವಿವಿಧ ಗೆಲುವಿನ ಮಾನದಂಡಗಳು ಮತ್ತು ಆ ಪಾತ್ರಕ್ಕೆ ತನ್ನ ಸೂಕ್ತತೆಯ ಬಗ್ಗೆ ಕಳವಳ ವ್ಯಕ್ತಪಡಿಸಿ, ಚುನಾವಣೆಯಿಂದ ಹಿಂದೆ ಸರಿದಿದ್ದಾರೆ. ನನ್ನ ಸಂಬಳ, ನನ್ನ ಗಳಿಕೆ ಮತ್ತು ನನ್ನ ಉಳಿತಾಯ ನನ್ನದೇ ಹೊರತು ಭಾರತದ ಕ್ರೋಡೀಕರಿಸಿದ ನಿಧಿ ಅಲ್ಲ ಎಂದು ಸೀತಾರಾಮನ್ ಹೇಳಿದ್ದಾರೆ. ನಿರ್ಮಲಾ ಸೀತಾರಾಮನ್​ ಕರ್ನಾಟಕದಿಂದ ಆಯ್ಕೆಯಾದ ರಾಜ್ಯಸಭಾ ಸದಸ್ಯೆಯಾಗಿದ್ದೂ ಮುಂಬರುವ ಲೋಕಸಭೆ ಚುನಾವಣೆಯಲ್ಲಿ…

Read More

ಕಲಬುರಗಿ: ಎನ್ ಕೌಂಟರ್ ನಲ್ಲಿ ಕೊಲ್ಲುವುದಾಗಿ ಸಚಿವ `ಪ್ರಿಯಾಂಕ್ ಖರ್ಗೆ’ ಗೆ ಜೀವ ಬೆದರಿಕೆ ಪತ್ರ ಬಂದಿದ್ದು, ವಿಧಾನಸೌಧದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸುದ್ದಿಗೋಷ್ಠಿಯಲ್ಲಿ ಈ ಕುರಿತು ಮಾಹಿತಿ ನೀಡಿರುವ ಸಚಿವ ಪ್ರಿಯಾಂಕ್ ಖರ್ಗೆ ಅವರು, ಬಿಜೆಪಿಯ ಮನುವಾದಿಗಳು ನನ್ನನ್ನು ಎನ್‌ ಕೌಂಟರ್ ಮಾಡುವುದಾಗಿ ಜೀವ ಬೆದರಿಕೆಯ ಪತ್ರ ಬರೆದು ನನ್ನ ಕಚೇರಿಗೆ ಕಳುಹಿಸಿದ್ದಾರೆ. ಜಾತಿ ಹೆಸರನ್ನು ಸಹ ಉಲ್ಲೇಖಿಸಿ ಅವಾಚ್ಯ ಶಬ್ದಗಳಿಂದ ನನ್ನ ಕುಟುಂಬವನ್ನು ನಿಂದಿಸಿದ್ದಾರೆ ಎಂದು ತಿಳಿಸಿದ್ದಾರೆ. ಕಲಬುರಗಿಯಿಂದ ಬೆಂಗಳೂರಿನ ವಿಕಾಸಸೌಧದ ನನ್ನ ಕಚೇರಿಗೆ ಪತ್ರ ಬಂದಿದ್ದು, ವಿಧಾನಸೌಧದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ಹೇಳಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

Read More

ಚಿಕ್ಕಬಳ್ಳಾಫುರ: ಐದು ಹೆಣ್ಣು ಮಕ್ಕಳಿಗೆ ವಿಷ ಕುಡಿಸಿ ತಾಯಿ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಆಂಧ್ರ ಪ್ರದೇಶದ ಚಿಲಮತ್ತೂರು ಬಳಿಯ ಮರ್ಕತ್ ಪಲ್ಲಿಯಲ್ಲಿ ನಡೆದಿದೆ. ತಾಯಿ ಅನಿತಾ, ಮಕ್ಕಳಾದ ಲಾವಣ್ಯ (11), ಧರಣಿ(9), ಕಾವ್ಯ(8), ರಕ್ಷಿತಾ(5), ಶ್ರೀವಲ್ಲಿ(2) ವಿಷ ಸೇವಿಸಿದವರು. ವಿಷ ಕುಡಿದು ಅಸ್ವಸ್ಥರಾಗಿದ್ದ ಆರು ಮಂದಿಗೆ ಬಾಗೇಪಲ್ಲಿ ತಾಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿದ ಬಳಿಕ, ಹೆಚ್ಚಿನ ಚಿಕಿತ್ಸೆಗಾಗಿ ಚಿಕ್ಕಬಳ್ಳಾಪುರ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ತಾಯಿ ಅನಿತಾ ಸ್ಥಿತಿ ಗಂಭೀರವಾಗಿದ್ದರಿಂದ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಅನಿತಾ ಗರ್ಭಿಣಿಯಾಗಿದ್ದು, ಪತಿಯ ಕಿರುಕುಳದಿಂದ ಆತ್ಮಹತ್ಯೆಗೆ ಯತ್ನಿಸಿದ್ದಾರೆ ಎನ್ನಲಾಗಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

Read More

ಕೊಡಗು: ಜಿಲ್ಲೆಯ ಸೋಮವಾರಪೇಟೆಯ ಸುವಿದ್ ಲಾಡ್ಜ್ ‌ನಲ್ಲಿ ದಂಪತಿ ನೇಣು ಬಿಗಿದುಕೊಂಡು‌ ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದೆ. ತೆಲಂಗಾಣದ ರಾಜು (55) ಮತ್ತು ಸ್ವಾತಿ (53) ನೇಣಿಗೆ ಶರಣಾದ ದಂಪತಿಗಳಾಗಿದ್ದಾರೆ. ಎರಡೂವರೆ ತಿಂಗಳಿಂದ ಲಾಡ್ಜ್ ‌ನಲ್ಲಿದ್ದ ದಂಪತಿ, ಇದ್ದಕ್ಕಿದ್ದಂತೆ ಆತ್ಮಹತ್ಯೆಗೆ ಮಾಡಿಕೊಂಡಿರುವುದು ಕಂಡುಬಂದಿದೆ. ಎರಡೂವರೆ ತಿಂಗಳಿಂದ ನಿತ್ಯವೂ ಲಾಡ್ಜ್ ಬಿಲ್ ಪಾವತಿಸುತ್ತಿದ್ದ ದಂಪತಿ, ಏನೂ ಕೆಲಸ ಮಾಡದೇ ಸುತ್ತಾಡಿಕೊಂಡಿದ್ದರು ಎನ್ನಲಾಗಿದೆ. ಹಣಕಾಸಿನ ಸಮಸ್ಯೆಯಿಂದ ದಂಪತಿ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಸ್ಥಳಕ್ಕೆ ಸೋಮವಾರಪೇಟೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

Read More

ತೆಲುಗು ಸ್ಟಾರ್ ನಟ ಚಿರಂಜೀವಿಯವರು ನಟನೆ ಮಾತ್ರವಲ್ಲದೆ ಸಾಮಾಜಿಕ ಕಾರ್ಯಗಳಲ್ಲಿಯೂ ಸಹ ತೊಡಗಿಸಿಕೊಂಡಿದ್ದಾರೆ.  ಇದೀಗ ಅವರು ಬೆಂಗಳೂರಿನ ನೀರಿನ ಸಮಸ್ಯೆ ಕುರಿತು ಮಾತನಾಡಿದ್ದು, ನೀರನ್ನು ಸಂಗ್ರಹಿಸಿ ಉಳಿಸುವ ವಿಧಾನವನ್ನು ತಿಳಿಸಿದ್ದು, ವಿಶೇಷವಾಗಿ ಕನ್ನಡದಲ್ಲಿ ಪೋಸ್ಟ್ ಮಾಡಿದ್ದಾರೆ. ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಈ ಕುರಿತು ಬರೆದಿರುವ ನಟ ಚಿರಂಜೀವಿಯವರು, “ನಮಗೆಲ್ಲರಿಗೂ ತಿಳಿದಿರುವಂತೆ, ನೀರು ಅತ್ಯಂತ ಅಮೂಲ್ಯವಾದ ವಸ್ತು, ನೀರಿನ ಕೊರತೆಯು ದೈನಂದಿನ ಜೀವನವನ್ನು ಕಷ್ಟಕರವಾಗಿಸುತ್ತದೆ. ಇಂದು ಬೆಂಗಳೂರಿನಲ್ಲಿ ನೀರಿನ ಕೊರತೆ ಎದುರಾಗಬಹುದು. ನಾಳೆ ಎಲ್ಲಿ ಬೇಕಾದರೂ ಸಂಭವಿಸಬಹುದು. ಆದ್ದರಿಂದ ನೀರನ್ನು ಸಂರಕ್ಷಿಸಲು ಸಹಾಯ ಮಾಡುವ ಗುಂಡಿಗಳನ್ನು ನಿರ್ಮಿಸುವ ಅಗತ್ಯವನ್ನು ಒತ್ತಿಹೇಳಲು ನಾನು ಈ ಅವಕಾಶವನ್ನು ಬಳಸಿಕೊಳ್ಳಲು ಬಯಸುತ್ತೇನೆ. ಬೆಂಗಳೂರಿನ ನನ್ನ ಫಾರ್ಮ್ ಹೌಸ್‌ ಗಾಗಿ ನಾನು ಮಾಡಿದ್ದನ್ನು ಇಲ್ಲಿ ಹಂಚಿಕೊಳ್ಳುತ್ತಿದ್ದೇನೆ. 20-36 ಅಡಿ ಆಳದ ರೀಚಾರ್ಜ್ ಬಾವಿಗಳನ್ನು ಸೈಟ್‌ ನಾದ್ಯಂತ ಆಯಕಟ್ಟಿನ ಬಿಂದುಗಳಲ್ಲಿ ಸ್ಥಾಪಿಸಲಾಗಿದ್ದು, ರೀಚಾರ್ಜ್ ಬಾವಿಗಳಿಗೆ ಮೇಲ್ಮೈ ನೀರಿನ ಹರಿವನ್ನು ನಿರ್ದೇಶಿಸಲು ಸಾಕಷ್ಟು ಇಳಿಜಾರುಗಳಿವೆ. ಪ್ರತಿಯೊಂದು ಬಾವಿಯು ಫಿಲ್ಟರ್ ವ್ಯವಸ್ಥೆಯನ್ನು…

Read More

ರಾಜ್ಯದ ಹೈವೋಲ್ಟೇಜ್ ಕ್ಷೇತ್ರಗಳಲ್ಲಿ ಒಂದಾದ ಉತ್ತರ ಕನ್ನಡ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸಲು ನಿರ್ಧರಿಸಿದ್ದ ಅಲ್ಲಿನ ಹಾಲಿ ಸಂಸದ ಅನಂತ ಕುಮಾರ್ ಹೆಗಡೆಯವರಿಗೆ, ಈ ಬಾರಿ ಬಿಜೆಪಿ ಟಿಕೆಟ್ ಮಿಸ್ ಮಾಡಿದೆ. ಆದರೆ ಈ ಬೆನ್ನಲ್ಲೇ ಅನಂತ್ ಕುಮಾರ್ ಹೆಗಡೆ ಗೆ ಭರ್ಜರಿ ಗುಡ್ ನ್ಯೂಸ್ ಸಿಗಲಿದೆ ಎಂದು ಮೂಲಗಳು ಹೇಳುತ್ತಿವೆ. ಹೇಳಿಕೆಗಳ ಮೂಲಕ ಸುದ್ದಿಯಾಗುವ, ಐದಾರು ಬಾರಿ ಸಂಸದರಾಗಿರುವ ಕಟ್ಟಾ ಹಿಂದುತ್ವವಾದಿ ಅನಂತ್ ಕುಮಾರ್ ಹೆಗಡೆ ಪಾಲಿನ ಟಿಕೆಟ್ ಈ ಸಲ ವಿಶ್ವೇಶ್ವರ ಹೆಗಡೆ ಕಾಗೇರಿ ಪಾಲಾಗಿದೆ. ಟಿಕೆಟ್ ಮಿಸ್ ಆದ ಬೆನ್ನಲ್ಲೇ ಹೆಗಡೆ ತಮ್ಮ ಕ್ಷೇತ್ರದ ಜನಕ್ಕೆ ಭಾವುಕ ಪತ್ರವನ್ನೂ ಬರೆದಿದ್ದರು. ಇದೆಲ್ಲದರ ನಡುವೆ ಅನಂತ್ ಕುಮಾರ್ ಹೆಗಡೆಯವರನ್ನು ರಾಜ್ಯ ರಾಜಕಾರಣಕ್ಕೆ ತಂದು ಮುಖ್ಯಮಂತ್ರಿ ಮಾಡುವ ಉದ್ದೇಶ ಹೈಕಮಾಂಡ್ ಮುಂದಿದೆ ಎನ್ನುವ ವಿಚಾರ ಭಾರೀ ಚರ್ಚೆಯಾಗುತ್ತಿದೆ. ಅನಂತಣ್ಣ ಮನಸ್ಸುಮಾಡಿದರೆ ಏನು ಬೇಕಾದರೂ ಮಾಡಿಯಾರು..! ಎಂಬುದು ಉತ್ತರ ಕನ್ನಡದ ಎಲ್ಲೆಡೆ ಕೇಳುವ ಮಾತು. ಈಗಾಗಲೇ ಅವರು 5 ಬಾರಿ ಸಂಸದರಾಗಿರುವದೇ ಇದಕ್ಕೆ…

Read More