Author: admin

ಉದ್ಯಮಿಯೋರ್ವರಿಗೆ ಟಿಕೆಟ್‌ ನೀಡುವುದಾಗಿ ನಂಬಿಸಿ ಕೋಟ್ಯಾಂತರ ರೂಪಾಯಿ ತೆಗೆದುಕೊಂಡ ಪ್ರಕರಣಕ್ಕೆ ಸಂಬಂಧಪಟ್ಟಂತೆ, ಈ ಪ್ರಕರಣದ ಪ್ರಮುಖ ಆರೋಪಿಯಾದ ಧನರಾಜ್‌ ಎಂಬಾತ ಬೇಲ್‌ ಮೇಲಿಂದ ಜೈಲಿನಿಂದ ಹೊರಬಂದಿದ್ದು, ಸಾಕ್ಷಿ ಹೇಳಿದರೆ ಕೊಲೆ ಮಾಡುವುದಾಗಿ ಸಲೂನ್‌ ಮಾಲೀಕ ರಾಮು ಮೇಲೆ ಹಲ್ಲೆ ಮಾಡಿ ಜೀವ ಬೆದರಿಕೆ ಹಾಕಿದ ಘಟನೆ ಬೆಳಕಿಗೆ ಬಂದಿರುವ ಕುರಿತು ವರದಿಯಾಗಿದೆ. ಜೈಲಿನಿಂದ ಹೊರ ಬಂದಿರುವ ಧನರಾಜ್‌ ಗೆ ನ್ಯಾಯಾಲಯವು ಕಳೆದ ತಿಂಗಳು ಷರತ್ತುಬದ್ಧ ಜಾಮೀನನ್ನು ನೀಡಿತ್ತು. ಮಾ.25ರಂದು ಕಡೂರಿನ ಹೋಟೆಲ್ ‌ನಲ್ಲಿ ಹಲ್ಲೆ ಆಗಿರುವ ಕುರಿತು ರಾಮು ಅವರು ಬೀರೂರು ಪೊಲೀಸರಿಗೆ ದೂರನ್ನು ನೀಡಿದ್ದಾರೆ ಎಂದು ವರದಿಯಾಗಿದೆ. ಆದರೆ ಬೀರೂರು ಪೊಲೀಸರು ಮಾತ್ರ ಪ್ರಕರಣ ದಾಖಲು ಮಾಡಿಲ್ಲ ಎಂದು ವರದಿಯಾಗಿದೆ. ಹಾಗಾಗಿ ನ್ಯಾಯಕ್ಕಾಗಿ ರಾಮು ಕುಟುಂಬ ಎಸ್ಪಿ ಕಚೇರಿಯ ಬಾಗಿಲು ತಟ್ಟಿದ್ದಾರೆ ಎನ್ನಲಾಗಿದೆ. ಚೈತ್ರಾ ವಂಚನೆ ಪ್ರಕರಣದಲ್ಲಿ ಕಡೂರಿನ ರಾಮು ಸಲೂನ್‌ ನಲ್ಲಿ ಚೆನ್ನಾ ನಾಯ್ಕಗೆ ಗೋಪಾಲ್‌ ಜೀ ಪಾತ್ರ ಸೃಷ್ಟಿಸಿ ಧನರಾಜ್‌ ಮೇಕಪ್‌ ಮಾಡಿಸಿದ್ದ. ಈ ಕಾರಣದಿಂದ ಈ…

Read More

ಲೋಕಸಭಾ ಚುನಾವಣೆಯ ಟಿಕೆಟ್ ವಿಚಾರವಾಗಿ ರಾಜ್ಯದಲ್ಲಿ ಮಹತ್ವದ ಬೆಳವಣಿಗೆಗಳು ನಡೆಯುತ್ತಿದ್ದು, ಭಾರೀ ಹೈಡ್ರಾಮಗಳು ನಡೆಯುತ್ತಿವೆ. ಅಂತೆಯೇ ಇದೀಗ ಕೋಲಾರ ಕಾಂಗ್ರೆಸ್ ಟಿಕೆಟ್ ವಿಚಾರವಾಗಿ ಸಿಡಿದೆದ್ದಿರುವ ಕೋಲಾರ ಜಿಲ್ಲೆಯ ಐವರು ಶಾಸಕರು ರಾಜೀನಾಮೆಗೆ ಮುಂದಾಗಿದ್ದಾರೆ. ಹೌದು, ಕೋಲಾರ ಲೋಕಸಭಾ ಕ್ಷೇತ್ರದಿಂದ ಸಚಿವ ಮುನಿಯಪ್ಪ ಅಳಿಯ ಕೆ.ಜಿ. ಚಿಕ್ಕಪೆದ್ದಣ್ಣರನ್ನು ಕಣಕ್ಕಿಳಿಸುವ ವಿಚಾರ ಇದೀಗ ಸ್ಥಳೀಯ ಶಾಸಕರ ಹಾಗೂ ವಿಧಾನ ಪರಿಷತ್ ಸದಸ್ಯರ ಆಕ್ರೋಶಕ್ಕೆ ಕಾರಣವಾಗಿದ್ದು ಎಲ್ಲರೂ ರಾಜಿನಾಮೆ ನೀಡುವ ಬೆದರಿಕೆ ಹಾಕಿದ್ದಾರೆ. ಚುನಾವಣೆ ಹೊತ್ತಲ್ಲೇ ಕೈ ಪಡೆಗೆ ತಮ್ಮ ಶಾಸಕರೇ ದೊಡ್ಡ ಆಘಾತ ಎದುರಾಗಿದೆ. ಅಂದಹಾಗೆ,ಕೋಲಾರ ಟಿಕೆಟ್ ವಿಚಾರ ಇದೀಗ ರಾಜ್ಯ ಕಾಂಗ್ರೆಸ್​ ನಲ್ಲಿ ಆಂತರಿಕ ಕಲಹ ತಾರಕಕ್ಕೇರಿದ್ದು ಸಚಿವ ಎಂ ಸಿ ಸುಧಾಕರ್, ಶಾಸಕರಾದ ಕೊತ್ತೂರು ಮಂಜುನಾಥ್, ಕೆ.ವೈ.ನಂಜೇಗೌಡ, ಮಂಜುನಾಥ್, ವಿಧಾನ ಪರಿಷತ್ ಸದಸ್ಯ ಅನಿಲ್ ಕುಮಾರ್, ನಜೀರ್ ಅಹಮದ್ ತೀವ್ರವಾಗಿ ವಿರೋಧಿಸಿದ್ದಾರೆ. ಇಷ್ಟೇ ಅಲ್ಲದೆ ಇದೀಗ ಕೆಲವರು ಸ್ಪೀಕರ್ ಗೆ ರಾಜಿನಾಮೆ ಪತ್ರವನ್ನೂ ನೀಡಿದ್ದಾರೆ ಎಂಬ ಸುದ್ದಿ ಬಂದಿದೆ. ಈ ಬಗ್ಗೆ…

Read More

ಇನ್ನೇನು ಕೆಲವೇ ದಿನಗಳಲ್ಲಿ ಲೋಕಸಭಾ ಚುನಾವಣೆ ನಡೆಯಲಿದ್ದು, ಈ ನಡುವೆ ರಾಜಕೀಯ ನಾಯಕರ ನಡುವೆ ಪರಸ್ಪರ ಕಚ್ಚಾಟಗಳು ಸಹ ಶುರುವಾಗಿವೆ. ಇತ್ತೀಚೆಗೆ ಮೇಕೆದಾಟು ವಿಚಾರವಾಗಿ ದೇವೇಗೌಡರ ನಿಲುವಿನ ಕುರಿತು ಮಾತನಾಡಿರುವ ಸಿದ್ದರಾಮಯ್ಯ ಎಚ್.ಡಿ. ದೇವೇಗೌಡರದ್ದು ಅನುಕೂಲ ಸಿಂಧು ರಾಜಕಾರಣ ಎಂದು ತಮ್ಮ ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ತಿಳಿಸಿದ್ದಾರೆ. ಜೆಡಿಎಸ್ ಅಂದರೆ ಜಾತ್ಯಾತೀತ ಜನತಾದಳ. ಜನತಾದಳ ಇಂದು ಜಾತ್ಯಾತೀತವಾಗಿ ಉಳಿದಿದೆಯೇ? ನರೇಂದ್ರ ಮೋದಿ ಅವರು ಪ್ರಧಾನಿಯಾದರೆ ದೇಶವನ್ನೇ ಬಿಟ್ಟು ಹೋಗುತ್ತೇನೆ, ನಾನು ಮುಂದಿನ ಜನ್ಮದಲ್ಲಿ ಮುಸಲ್ಮಾನನಾಗಿ ಹುಟ್ಟುತ್ತೇನೆ ಎಂದಿದ್ದ ಮಾಜಿ ಪ್ರಧಾನಿ ದೇವೇಗೌಡರ ಅನುಕೂಲಸಿಂಧು ರಾಜಕಾರಣ ಎಲ್ಲಿಯವರೆಗೆ ನಡೆಯುತ್ತದೆ? ಮೇಕೆದಾಟು ಯೋಜನೆಯನ್ನು ಎನ್‍ಡಿಎ ಮೂಲಕ ಮಾಡಿಸುವುದಾಗಿ ಹೇಳುತ್ತಾರೆ. ಬಿಜೆಪಿ ಕಡೆಯಿಂದ ಯಾಕೆ ಮಾಡಿಸಲಿಲ್ಲ? ಎಂದು ಪ್ರಶ್ನಿಸಿದ್ದಾರೆ. ಮೈಸೂರು, ಚಾಮರಾಜನಗರ ಕ್ಷೇತ್ರಕ್ಕೆ ಬಿಜೆಪಿಯವರ ಕೊಡುಗೆಗಳೇನು? ಬಿಜೆಪಿ ಎಂದರೆ ಲೂಟಿಕೋರರು. ನಮ್ಮ ಪಕ್ಷಕ್ಕೆ ಸೇರ್ಪಡೆಯಾಗಿರುವವರನ್ನು ಜನರು ಬೆಂಬಲಿಸಬೇಕು. ಸಾಮಾಜಿಕವಾಗಿ, ಆರ್ಥಿಕವಾಗಿ, ರಾಜಕೀಯವಾಗಿ ಜ್ಞಾನವಿರುವ ಈ ಎಲ್ಲರೂ ಜನರ ಧ್ವನಿಯಾಗಿ ದೇಶದ ಸಂಸತ್ತಿನಲ್ಲಿ ಕೆಲಸ ಮಾಡುವಂತಾಗಬೇಕು.…

Read More

ಇತ್ತೀಚೆಗೆ ಬೆಂಗಳೂರಿನಲ್ಲಿ ರೌಡಿಶೀಟರ್ ಗಳು ಮತ್ತೆ ತಮ್ಮ ಬಾಲ ಬಿಚ್ಚಲು ಶುರು ಮಾಡಿದ್ದು, ಅದರ ಭಾಗವಾಗಿ ಸುಪಾರಿ ಕಿಲ್ಲರ್ ದಿನೇಶ್ ನನ್ನು ಹೋಟೆಲ್ ರೂಮಿನಲ್ಲಿಯೇ ದುಷ್ಕರ್ಮಿಗಳು ಕೊಚ್ಚಿ ಕೊಲೆಗೈದಿದ್ದಾರೆ. ಬೆಂಗಳೂರಿನ ಕಮನಹಳ್ಳಿಯಲ್ಲಿರುವ ಓಯೋ ಹೋಟೆಲ್ ರೂಮ್ ನಲ್ಲಿ ರೌಡಿಶೀಟರ್ ದಿನೇಶ್ ತನ್ನ ಸ್ನೇಹಿತನ ಜೊತೆಗಿದ್ದ. ಈ ಸಮಯದಲ್ಲಿ ಏಳು ಮಂದಿ ದುಷ್ಕರ್ಮಿಗಳು ಇದ್ದಕ್ಕಿದ್ದಂತೆ ಬಂದು ಲಾಂಗು, ಮಚ್ಚುಗಳಿಂದ ದಿನೇಶ್ ನನ್ನು ಬರ್ಬರವಾಗಿ ಕೊಚ್ಚಿ ಮಾಡಿದ್ದಾರೆ. ಇನ್ನು ಈ‌ ಕೊಲೆ ಪ್ರಕರಣ ದಾಖಲಿಸಿಕೊಂಡಿರುವ ಬಾಣಸವಾಡಿ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಆರೋಪಿಗಳ ಪತ್ತೆಗೆ ಬಲೆ ಬೀಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

Read More

ನಾಗಾಲ್ಯಾಂಡ್‌ ನಲ್ಲಿ ಕೇಂದ್ರ ಸರ್ಕಾರ ಎಎಫ್‌ ಎಸ್‌ ಪಿಎ ಕಾಯ್ದೆಯನ್ನು ಇನ್ನೂ ಆರು ತಿಂಗಳ ಕಾಲ ವಿಸ್ತರಿಸಿದೆ. ಅಫ್ಸಾ ಕಾನೂನನ್ನು ಈ ವರ್ಷ ಸೆಪ್ಟೆಂಬರ್ 30 ರವರೆಗೆ 8 ಜಿಲ್ಲೆಗಳು ಮತ್ತು 21 ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ವಿಸ್ತರಿಸಲಾಗಿದೆ. AFSPA ಕಾಯಿದೆಯು ಸಶಸ್ತ್ರ ಪಡೆಗಳಿಗೆ ವಿಶೇಷ ಅಧಿಕಾರವನ್ನು ನೀಡುತ್ತದೆ. ಕಾನೂನು ಮತ್ತು ಸುವ್ಯವಸ್ಥೆಯನ್ನು ಪರಿಶೀಲಿಸಿದ ನಂತರ ಕೇಂದ್ರ ಗೃಹ ಸಚಿವಾಲಯದ ಕ್ರಮ ಬಂದಿದೆ. 1958 ರ ಸಶಸ್ತ್ರ ಪಡೆಗಳ ವಿಶೇಷ ಅಧಿಕಾರ ಕಾಯಿದೆ (AFSPA) ಸೈನ್ಯಕ್ಕೆ ವಿಶೇಷ ಅಧಿಕಾರವನ್ನು ನೀಡುವ ಕಾನೂನು. AFSPA ಕಾಯಿದೆಯು ಸಶಸ್ತ್ರ ಪಡೆಗಳಿಗೆ ಪೂರ್ವ ವಾರಂಟ್ ಇಲ್ಲದೆ ಶೋಧಗಳನ್ನು ನಡೆಸಲು ಮತ್ತು ತಪ್ಪಿತಸ್ಥರೆಂದು ಕಂಡುಬಂದಲ್ಲಿ ಅವರನ್ನು ಬಂಧಿಸಲು ಅಧಿಕಾರ ನೀಡುತ್ತದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

Read More

ಇತ್ತೀಚಿನ ದಿನಗಳಲ್ಲಿ ಹೃದಯಾಘಾತದ ಪ್ರಕರಣಗಳು ವೇಗವಾಗಿ ಹೆಚ್ಚಾಗುತ್ತಿವೆ. ಕೆಟ್ಟ ಜೀವನಶೈಲಿ ಮತ್ತು ಆಹಾರ ಪದ್ಧತಿಯಿಂದಾಗಿ ಸಣ್ಣ ಮಕ್ಕಳಿಂದ ಹಿಡಿದು ಮುದುಕರವರೆಗೂ ಜನರು ಹೃದಯಾಘಾತಕ್ಕೆ ಬಲಿಯಾಗುತ್ತಿದ್ದಾರೆ. ಇಂತಹ ಪರಿಸ್ಥಿತಿಯಲ್ಲಿ ಮಕ್ಕಳಲ್ಲಿ ಹೃದಯಾಘಾತ ಏಕೆ ಹೆಚ್ಚುತ್ತಿದೆ ಮತ್ತು ಅದನ್ನು ತಡೆಯುವುದು ಹೇಗೆ? ಬನ್ನಿ ತಿಳಿಯೋಣ. ವೈದ್ಯರ ಪ್ರಕಾರ, ಕೆಲವು ಮಕ್ಕಳು ಹುಟ್ಟಿನಿಂದಲೇ ಹೃದಯ ಸಂಬಂಧಿ ಕಾಯಿಲೆಗಳನ್ನು ಹೊಂದಿರುತ್ತಾರೆ. ತಾಯಿಯ ಗರ್ಭದಲ್ಲಿರುವಾಗಲೇ ಮಗು ಜನ್ಮಜಾತ ಹೃದ್ರೋಗಕ್ಕೆ ಬಲಿಯಾಗುತ್ತದೆ. ಇವುಗಳಲ್ಲಿ ಹೃದಯದ ರಂಧ್ರಗಳು ಮತ್ತು ಕೆಲವು ಹೃದ್ರೋಗಗಳು ಕಂಡುಬರುತ್ತವೆ. ಈ ಕಾರಣದಿಂದಾಗಿ, ಮಗುವಿನ ಹೃದಯ ಕವಾಟಗಳು ಮತ್ತು ನಾಳಗಳು ಋಣಾತ್ಮಕವಾಗಿ ಪರಿಣಾಮ ಬೀರುತ್ತವೆ. ಅನೇಕ ಸಂದರ್ಭಗಳಲ್ಲಿ, ತಮ್ಮ ಮಗುವಿಗೆ ಅಂತಹ ಅಪಾಯಕಾರಿ ಕಾಯಿಲೆ ಇದೆ ಎಂದು ಪೋಷಕರಿಗೆ ತಿಳಿದಿರುವುದಿಲ್ಲ. ಆರೋಗ್ಯ ತಜ್ಞರ ಪ್ರಕಾರ, ಮಕ್ಕಳಲ್ಲಿ ಹೃದ್ರೋಗಗಳು ಹೆಚ್ಚಾಗಲು ಸ್ಥೂಲಕಾಯತೆ ದೊಡ್ಡ ಕಾರಣ. ಕೆಟ್ಟ ಆಹಾರ ಪದ್ಧತಿ ಮತ್ತು ಹಾಳಾದ ಜೀವನಶೈಲಿಯಿಂದ ಅವರಲ್ಲಿ ಸ್ಥೂಲಕಾಯತೆ ಹೆಚ್ಚುತ್ತಿದೆ, ಇದು ಹೃದಯ ಕಾಯಿಲೆಗಳನ್ನು ಹೆಚ್ಚಿಸುತ್ತಿದೆ. ಇಷ್ಟೇ ಅಲ್ಲ ಇಂದಿನ ದಿನಗಳಲ್ಲಿ ಮಕ್ಕಳು…

Read More

ಏ.1 ರಿಂದ ಅನ್ವಯವಾಗುವಂತೆ ಬೆಂಗಳೂರು- ಮೈಸೂರು ಎಕ್ಸ್ ಪ್ರೆಸ್ ವೇ ಟೋಲ್ ದರ ಏರಿಕೆಯಾಗುತ್ತಿದ್ದು, ವಾಹನ ಸವಾರರ ಜೇಬಿಗೆ ಕತ್ತರಿ ಬೀಳಲಿದೆ. ಹೆದ್ದಾರಿ ಲೋಕಾರ್ಪಣೆಗೊಂಡ ಒಂದು ವರ್ಷದ ಅವಧಿಯಲ್ಲಿ ಎರಡನೇ ಬಾರಿ ಟೋಲ್ ದರ ಹೆಚ್ಚಳವಾಗಿದ್ದು, ಮೂರನೇ ದರ ನಿಗದಿಯಾಗಿದೆ. 2023ರ ಮಾರ್ಚ್ ನಲ್ಲಿ ಟೋಲ್ ಸಂಗ್ರಹ ಆರಂಭವಾಗಿತ್ತು. ನಂತರ ಜೂನ್ ನಲ್ಲಿ ಶೇ.22 ರಷ್ಟು ಟೋಲ್ ದರ ಏರಿಕೆಯಾಗಿತ್ತು. ಈಗ ರಾಷ್ಟ್ರೀಯ ಹೆದ್ದಾರಿ ಶುಲ್ಕ ನಿಯಮ 2008-ನಿಯಮ 5ರ ಪ್ರಕಾರ ಬಳಕೆದಾರರ ಶುಲ್ಕ ದರದ ವಾರ್ಷಿಕ ಪರಿಷ್ಕರಣೆಯಂತೆ ಮತ್ತೆ ಟೋಲ್ ದರ ಹೆಚ್ಚಳ ಮಾಡಲಾಗಿದೆ. ಶುಲ್ಕ ಹೆಚ್ಚಳದ ಬಗ್ಗೆ ಟೋಲ್ ಸಿಬ್ಬಂದಿ ವಾಹನ ಸವಾರರಿಗೆ ಕರಪತ್ರ ಹಂಚುತ್ತಿದ್ದಾರೆ. ದರಪಟ್ಟಿ ಫಲಕ ತಿದ್ದುಪಡಿ ಮಾಡಲಾಗುತ್ತಿದೆ. ಹೂತನ ಪರಿಷ್ಕರಣೆಯಲ್ಲಿ ಶೇ.3 ತಷ್ಟು ಶುಲ್ಕ ಹೆಚ್ಚಳ ಮಾಡಲಾಗಿದೆ. ಏಕಮುಖ ಸಂಚಾರ ಕಾರು/ವ್ಯಾನ್ / ಜೀಪ್‌ ಗಳಿಗೆ ಶುಲ್ಕ 155 ರೂ.ನಿಂದ 160ಕ್ಕೆ, ಲಘು ವಾಣಿಜ್ಯ ಬಳಕೆ ವಾಹನಗಳಿಗೆ 250ರಿಂದ 260ಕ್ಕೆ, ಟ್ರಕ್ / ಬಸ್/ಎರಡು…

Read More

ಚಿತ್ರದುರ್ಗ: ಚಿತ್ರದುರ್ಗ ಜಿಲ್ಲೆಯ ಹಿರಿಯೂರು ಪಟ್ಟಣದಲ್ಲಿ ಪೊಲೀಸರಿಂದ ಭರ್ಜರಿ ಕಾರ್ಯಾಚರಣೆ ನಡೆದಿದ್ದು, ದಾಖಲೆ ಇಲ್ಲದೇ ಸಂಗ್ರಹಿಸಿದ್ದ 3.55 ಕೋಟಿ ರೂ. ಮೌಲ್ಯದ ಚಿನ್ನಾಭರಣವನ್ನು ಪೊಲೀಸರು ವಶಕ್ಕೆ ಪಡೆದಿರುವ ಘಟನೆ ನಡೆದಿದೆ. ವಶಪಡಿಸಿಕೊಂಡ ಚಿನ್ನಾಭರಣವು ದಾವಣಗೆರೆಯ ವರ್ಧಮಾನ ಜುವೆಲ್ಲೆರಿಗೆ ಸೇರಿದ್ದು ಎಂದು ತಿಳಿದುಬಂದಿದೆ. ದಾಖಲೆ ಇಲ್ಲದ ಚಿನ್ನ ಸಂಗ್ರಹಿಸಿದ್ದ ಹಿನ್ನೆಲೆಯಲ್ಲಿ ತಹಸೀಲ್ದಾರ್ ರಾಜೇಶ್ ಹಾಗೂ ಸಿಪಿಐ ರಾಘವೇಂದ್ರ ನೇತೃತ್ವದಲ್ಲಿ ದಾಳಿ ನಡೆಸಿ ಚಿನ್ನವನ್ನು ಜಪ್ತಿ ಮಾಡಲಾಗಿದ್ದು, ಈ ಸಂಬಂಧ ಹಿರಿಯೂರು ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

Read More

ತಮಿಳುನಾಡು ಸಂಸದ ಗಣೇಶಮೂರ್ತಿ ಅವರು ಎರಡು ದಿನಗಳ ಹಿಂದೆ ಆತ್ಮಹತ್ಯೆಗೆ ಯತ್ನಿಸಿದ್ದು, ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಇದೀಗ ಅವರು ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ. ಇವರು ಕೀಟನಾಶಕ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದು, ಇದೀಗ ಡಿಎಂಕೆ ಸಂಸದ ಗಣೇಶಮೂರ್ತಿ ನಿಧನರಾಗಿದ್ದಾರೆ. ಸಂಸದರು ಕೀಟನಾಶಕವಾದ ಸಲ್ಫೇಟ್ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದು ಗೊತ್ತಾದ ಕೂಡಲೇ ಅವರ ಕುಟುಂಬದವರು ಈರೋಡ್‌ ನ ಆಸ್ಪತ್ರೆಗೆ ಕರೆದೊಯ್ದರು. ನಂತರ ಅವರನ್ನು ಕೊಯಮತ್ತೂರಿನ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಿದ್ದರು. ಅಂದಿನಿಂದ ಅವರು ಎಕ್ಸ್‌ಟ್ರಾಕಾರ್ಪೋರಿಯಲ್ ಮೆಂಬರೇನ್ ಆಕ್ಸಿಜನೇಷನ್ ಬೆಂಬಲದೊಂದಿಗೆ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ, ಅವರ ದೇಹ ಚಿಕಿತ್ಸೆಗೆ ಸ್ಪಂದಿಸದೆ ಇಂದು (ಗುರುವಾರ) ಬೆಳಗ್ಗೆ 5.05ರ ಸುಮಾರಿಗೆ ನಿಧನರಾಗಿರುವ ವರದಿಯಾಗಿದೆ. ಪಾರ್ಥಿವ ಶರೀರವನ್ನು ಈರೋಡ್‌ ನ ಪೆರಿಯಾರ್ ನಗರದಲ್ಲಿರುವ ಅವರ ನಿವಾಸಕ್ಕೆ ಕೊಂಡೊಯ್ದು ಸಾರ್ವಜನಿಕರ ದರ್ಶನಕ್ಕೆ ಇಡಲಾಗುವುದು ಎಂದು ಪಕ್ಷದ ಮೂಲಗಳು ತಿಳಿಸಿವೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149…

Read More

ವಿರಾಟ್ ಕೊಹ್ಲಿ ಕುಡಿಯುವ ನೀರಿಗೆ ಪ್ರತಿ ಲೀಟರ್ ಗೆ 700 ರೂಪಾಯಿಯಂತೆ. ಅಂದರೆ ಕೊಹ್ಲಿ ವರ್ಷಕ್ಕೆ ಸುಮಾರು 8 ಲಕ್ಷವನ್ನು ನೀರಿನ ಮೇಲೆ ಹರಿಸುತ್ತಾರೆ ಅಂದ್ರೆ ನೀವು ನಂಬಲೇ ಬೇಕು. ಹಾಗಾದರೆ ವಿರಾಟ್‌ ಕೊಹ್ಲಿಯವರು ಕುಡಿಯುವ ನೀರಿನ ವಿಶೇಷತೆಗಳೇನು? ಅವರು ಕುಡಿಯೋ ನೀರಿನಲ್ಲಿ ಅಂಥದ್ದೇನಿದೆ ಎನ್ನುವ ಕುತೂಹಲ ಕಾಡದೇ ಇರದು. ಹೌದು ಇದು ಸಾಮಾನ್ಯ ನೀರಲ್ಲ. ಇದೊಂದು ವಿಶೇಷ ಬ್ರಾಂಡ್ ನ ನೀರು. ವಿರಾಟ್ ಕೊಹ್ಲಿ ಫ್ರಾನ್ಸ್‌ ನಿಂದ ಬರುವ ಇವಿಯನ್ ನ್ಯಾಚುರಲ್ ಮಿನರಲ್ ವಾಟರ್ ಅನ್ನು ಕುಡಿಯುತ್ತಾರೆ. ವಿರಾಟ್ ಕೊಹ್ಲಿ ಎಲ್ಲಿಗೆ ಹೋಗಬೇಕಾದರೂ ಈ ನೀರನ್ನು ತಮ್ಮ ಜೊತೆಗೆ ತೆಗೆದುಕೊಂಡು ಹೋಗುತ್ತಾರಂತೆ. ಈ ನೀರನ್ನು ಎವಿಯನ್–ಲೆಸ್-ಬೈನ್ಸ್ ಪ್ರದೇಶದಿಂದ ತೆಗೆದುಕೊಳ್ಳಲಾಗಿದೆ. ಅಂದ ಹಾಗೆ ಇದನ್ನು ರಾಸಾಯನಿಕವಾಗಿ ಸಂಸ್ಕರಿಸಲಾಗುವುದಿಲ್ಲ. ಇವಿಯನ್ ನೀರು ಜಗತ್ತಿನಾದ್ಯಂತ ಅತ್ಯಂತ ಖನಿಜಯುಕ್ತ ನೀರಿನಲ್ಲಿ ಒಂದಾಗಿದೆ. ಅದರ ನೈಸರ್ಗಿಕ ಗುಣಲಕ್ಷಣಗಳನ್ನು 100% ಉಳಿಸಿಕೊಂಡಿರುತ್ತದೆ. ಇದರಲ್ಲಿ ಕ್ಯಾಲ್ಸಿಯಂ, ಕ್ಲೋರೈಡ್, ಮೆಗ್ನೀಸಿಯಮ್, ಪೊಟ್ಯಾಸಿಯಮ್ ಮತ್ತು ಸೋಡಿಯಂ ಅಂಶವು ಸಾಮಾನ್ಯ ನೀರಿಗಿಂತ ಉತ್ತಮ ಪ್ರಮಾಣದಲ್ಲಿರುತ್ತದೆ.…

Read More