Subscribe to Updates
Get the latest creative news from FooBar about art, design and business.
- ದಳವಾಯಿಹಳ್ಳಿಯಲ್ಲಿ ಕುಡಿಯುವ ನೀರಿಗೆ ಹಾಹಾಕಾರ: ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಗ್ರಾಮಸ್ಥರ ಆಕ್ರೋಶ, BPS ನಿಂದ ಟ್ಯಾಂಕರ್ ನೀರು ಪೂರೈಕೆ
- ಪಾವಗಡ: ದೊಡ್ಡಹಳ್ಳಿ ಸರ್ಕಾರಿ ಪ್ರೌಢಶಾಲೆಯಲ್ಲಿ 2026–27ನೇ ಸಾಲಿನ ದಾಖಲಾತಿ ಆರಂಭ
- ರಾಜ್ಯಸಭೆ ಚುನಾವಣೆಗೂ ಸಚಿವ ಸಂಪುಟ ಪುನರಾಚನೆಗೂ ಯಾವುದೇ ಸಂಬಂಧವಿಲ್ಲ: ಗೃಹ ಸಚಿವ ಜಿ. ಪರಮೇಶ್ವರ್ ಸ್ಪಷ್ಟನೆ
- ಸಿರಾದಲ್ಲಿ ಮೇ 26 ರಂದು ಜೆಡಿಎಸ್ ಪಕ್ಷದ ಪದಾಧಿಕಾರಿಗಳ ನೇಮಕಾತಿ ಕಾರ್ಯಕ್ರಮ
- ಮಕ್ಕಳ ಕೈಗೆ ಮೊಬೈಲ್ ಕೊಡುವ ಮುನ್ನ ಈ ಸುದ್ದಿ ಓದಿ: 1.98 ಲಕ್ಷ ರೂಪಾಯಿ ಕಳೆದುಕೊಂಡ ತುಮಕೂರಿನ ವ್ಯಕ್ತಿ!
- ಚಿಲ್ಲರೆಗಳಿಗೆ ನಾನು ಹೆದರುವ ಮಗನೇ ಅಲ್ಲ ಕೀಳುಮಟ್ಟದ ರಾಜಕಾರಣ ನನಗೆ ಗೊತ್ತಿಲ್ಲ: ಶಾಸಕ ಎಸ್. ಆರ್.ಶ್ರೀನಿವಾಸ್ ತಿರುಗೇಟು
- ತುಮಕೂರು ಜಿಲ್ಲೆಯಲ್ಲಿ 0.3 ಮಿ.ಮೀ. ಮಳೆ
- ಕೆಎಸ್ ಆರ್ ಟಿಸಿ ಬಸ್ ದರ ಏರಿಕೆ ಖಚಿತ: ಸಾರಿಗೆ ಸಂಸ್ಥೆ ಅಧ್ಯಕ್ಷ ಎಸ್.ಆರ್. ಶ್ರೀನಿವಾಸ್
Author: admin
ಮೊಟ್ಟೆ ಆರೋಗ್ಯಕ್ಕೆ ತುಂಬಾ ಒಳ್ಳೆಯದು ಎಂದು ಹೇಳುತ್ತಾರೆ.ಆದರೆ ಬೇಸಿಗೆಯಲ್ಲಿ ಮೊಟ್ಟೆಗಳನ್ನು ತಿನ್ನುವುದು ಆರೋಗ್ಯಕ್ಕೆ ಹಾನಿಯಾಗುತ್ತದೆ ಎನ್ನಲಾಗುತ್ತಿದೆ. ಹಾಗಾದರೆ ಬೇಸಿಗೆಯಲ್ಲಿ ಮೊಟ್ಟೆಗಳನ್ನು ತಿನ್ನುವುದು ನಿಜವಾಗಿಯೂ ದೇಹದಲ್ಲಿ ಅತಿಯಾದ ಶಾಖವನ್ನು ಉಂಟುಮಾಡಬಹುದೇ? ಈ ಬಗೆಗಿನ ಡಿಟೇಲ್ಸ್ ಇಲ್ಲಿದೆ ನೋಡಿ… ಹೆಚ್ಚಿನ ಸಂಖ್ಯೆಯ ಜನರು ತಮ್ಮ ದಿನವನ್ನು ಮೊಟ್ಟೆಗಳೊಂದಿಗೆಯೇ ಪ್ರಾರಂಭಿಸುತ್ತಾರೆ. ಇದು ಉತ್ತಮ ಪ್ರಮಾಣದ ಪ್ರೋಟೀನ್ ಅನ್ನು ಹೊಂದಿದೆ. ಮಾತ್ರವಲ್ಲ ಸ್ನಾಯುಗಳನ್ನು ಬಲಪಡಿಸುತ್ತದೆ. ಹಾಗಾಗಿ ಮುಂಜಾನೆ ಮೊಟ್ಟೆ ತಿಂದರೆ ದಿನವಿಡೀ ನೀವು ಎನರ್ಜಿಟಿಕ್ ಆಗಿ ಇರಬಹುದು ಎಂದು ಅನೇಕರು ನಂಬಿದ್ದಾರೆ. ಆದರೆ ಬೇಸಿಗೆಯಲ್ಲಿ ಮೊಟ್ಟೆಗಳನ್ನು ತಿನ್ನುವುದರಿಂದ ಆರೋಗ್ಯಕ್ಕೆ ಹಾನಿ ಎಂದು ಜನರು ಭಾವಿಸುತ್ತಾರೆ. ಮೊಟ್ಟೆಯ ಉಷ್ಣ ಗುಣದಿಂದ ಅನಾರೋಗ್ಯ ಉಂಟಾಗಬಹುದು ಎಂದು ಸಹ ಜನರು ಹೇಳುತ್ತಾರೆ. ಬೇಸಿಗೆಯಲ್ಲಿ ಮೊಟ್ಟೆ ತಿನ್ನುವುದು ನಿಜವಾಗಿಯೂ ಆರೋಗ್ಯಕ್ಕೆ ಹಾನಿ ಯಾಗುತ್ತದೆಯೇ? ಆಹಾರ ತಜ್ಞರು ತಿಳಿಸುವಂತೆ ಮೊಟ್ಟೆಗಳಲ್ಲಿ ಪೋಷಕಾಂಶಗಳು ಸಮೃದ್ಧವಾಗಿವೆ. ಹಾಗಾಗಿ ಯಾವುದೇ ಸೀಸನ್ ನಲ್ಲಿ ಮೊಟ್ಟೆ ತಿನ್ನೋದು ಹಾನಿಕಾರಕವಲ್ಲ. ಜನರು ಬೇಸಿಗೆಯಲ್ಲಿ ಮೊಟ್ಟೆ ತಿನ್ನಬಹುದು, ಆದರೆ ಅವುಗಳ ಪ್ರಮಾಣವು ಚಳಿಗಾಲಕ್ಕಿಂತ…
ಸಿಎಂ ಸಿದ್ದು ಸರ್ಕಾರ ಶಕ್ತಿ ಯೋಜನೆಯಡಿಯಲ್ಲಿ ಬಸ್ ಪ್ರಯಾಣಕ್ಕೆ ಮಹಿಳೆಯರಿಗೆ ಮಾತ್ರ ಫ್ರೀ ಕೊಟ್ಟಿರೋದು.. ಅದು ಬಿಟ್ಟು ಬಸ್ ನಲ್ಲಿ ಪ್ರಾಣಿ-ಪಕ್ಷಿಗಳನ್ನು ಕೊಂಡೊಯ್ದರೆ ಆಗುತ್ತಾ..? ಹೌದು, ಬಸ್ ನಿರ್ವಾಹಕನೊಬ್ಬ ಬಸ್ ನಲ್ಲಿ ಪ್ರಯಾಣಿಸಿದ ಅಜ್ಜಿ ಮೊಮ್ಮಗಳಿಗೆ ಫ್ರೀ ಟಿಕೆಟ್ ಕೊಟ್ಟಿದ್ದು, ಅವರು ತೆಗೆದುಕೊಂಡು ಹೋದ ಪಕ್ಷಿಗಳಿಗೆ ಮಾತ್ರ ದುಡ್ಡು ಕೊಟ್ಟು ಪ್ರಯಾಣಿಸಿರುವ ರೋಚಕ ಘಟನೆ ಬಗ್ಗೆ ವರದಿಯಾಗಿದೆ. ಒಂದು ಪಕ್ಷಿಗೆ 111 ರಂತೆ ಟಿಕೇಟ್ ಕೊಟ್ಟಿರೋದನ್ನು ನೋಡಿ ಅಜ್ಜಿಗೆ ಶಾಕ್ ಆಗಿದೆ. ಈ ಹಿಂದೆ ಕೋಳಿಗೆ ಟಿಕೆಟ್ ತೆಗೆದುಕೊಳ್ಳುವ ವಿಚಾರಕ್ಕೂ ಕೂಡ ಅನೇಕ ಕಡೆ ಬಸ್ ಕಂಡಕ್ಟರ್ ಹಾಗೂ ಜನರ ನಡುವೆ ಗಲಾಟೆಗಳಾಗಿವೆ. ಪ್ರಾಣಿ – ಪಕ್ಷಿಗಳಿಗೆ ಟಿಕೆಟ್ ನೀಡದ ನಿರ್ವಾಹಕರು ಪರಿಶೀಲನೆ ವೇಳೆ ಸಿಕ್ಕಾಕಿಕೊಂಡು ಅಮಾನತು ಆದ ಉದಾಹರಣೆಗಳು ಇವೆ. ಇದೀಗ ಈ ನಾಲ್ಕು ಪಕ್ಷಿಗಳಿಗೆ ಬರೋಬ್ಬರಿ 444 ರೂಪಾಯಿ ಕೊಟ್ಟು, ಇವರು ಫ್ರೀ ಟಿಕೆಟ್ ನಲ್ಲಿ ಪ್ರಯಾಣಿಸಿದ್ದಾರೆ. ಮಾರ್ಚ್ 27ರಂದು ಈ ಘಟನೆ ನಡೆದಿದ್ದು,ಬೆಂಗಳೂರಿನಿಂದ ಮೈಸೂರಿಗೆ ತೆರಳುತ್ತಿದ್ದ ಬಸ್…
ಪಾವಗಡ: ತಾಲ್ಲೂಕು ವೈ.ಎನ್.ಹೊಸಕೋಟೆ ಹೋಬಳಿಯಿಂದ ಆಂಧ್ರಪ್ರದೇಶಕ್ಕೆ ಹಾದುಹೋಗುವ ರಸ್ತೆಯ ಗಡಿಯಾದ ನಾಗಲಾಪುರ ಗೇಟ್ ಬಳಿ ನಿರ್ಮಿಸಿರುವ ತಾತ್ಕಾಲಿಕ ಚೆಕ್ ಪೋಸ್ಟ್ ಗೆ ಜಿಲ್ಲಾಧಿಕಾರಿ ಶುಭಕಲ್ಯಾಣ್ ರವರು ಬುಧವಾರ ಭೇಟಿ ನೀಡಿ ಪರಿಶೀಲನೆ ಮಾಡಿದರು. ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ರಾಜ್ಯದ ಗಡಿಭಾಗಗಳಲ್ಲಿ ಚೆಕ್ ಪೋಸ್ಟ್ ಗಳನ್ನು ನಿರ್ಮಿಸಿದ್ದು, ಪಕ್ಕದ ಆಂಧ್ರಪ್ರದೇಶದಿಂದ ವೈ.ಎನ್.ಹೊಸಕೋಟೆ ಹೋಬಳಿಯ ಮೂಲಕ ರಾಜ್ಯಕ್ಕೆ ಅಕ್ರಮ ಸಾಗಾಣಿಕೆ ತಡೆಯುವಲ್ಲಿ ಈ ಚೆಕ್ ಪೋಸ್ಟ್ ಪ್ರಮುಖವಾಗಿದೆ. ಅದರಂತೆ ಆಂಧ್ರಪ್ರದೇಶದಲ್ಲಿ ವಿಧಾನಸಭೆ ಮತ್ತು ಲೋಕ ಸಭೆ ಚುನಾವಣೆ ನಡೆಯುತ್ತಿದ್ದು, ರಾಜ್ಯದಿಂದಲೂ ಮಧ್ಯ ಇನ್ನಿತರೆ ರವಾನೆಯಾಗುವ ಸಾಧ್ಯತೆ ಇದೆ. ಈ ನಿಟ್ಟಿನಲ್ಲಿ ನಾಗಲಾಪುರ ಚೆಕ್ ಪೋಸ್ಟಿನಲ್ಲಿ ಕಟ್ಟು ನಿಟ್ಟಿನ ಕ್ರಮ ವ್ಯವಸ್ಥೆ ಮಾಡಲಾಗಿದ್ದು, ಜಿಲ್ಲಾಧಿಕಾರಿಗಳು ಬೇಟಿ ನೀಡಿ ಪರಿಶೀಲನೆ ನಡೆಸಿದರು. ಈ ಸಂದರ್ಭದಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಶೋಕ್ ವೆಂಕಟ್, ಉಪವಿಭಾಗಾಧಿಕಾರಿ ಗೋಟೂರು ಶಿವಪ್ಪ , ಡಿಓಎಸ್ ಪಿ ರಾಮಕೃಷ್ಣಪ್ಪ, ಚುನಾವಣಾ ಶಿರಸ್ತೇದಾರ್ ಪ್ರತಾಪ್ ಕುಮಾರ್, ತಹಶೀಲ್ದಾರ್ ಸಂತೋಷ್ ಕುಮಾರ್, ಎಇಇ ಹನುಮಂತರಾಯಪ್ಪ, ಸಿಪಿಐ ಗಿರೀಶ್ …
ಸರಗೂರು : ಗ್ರಾಮ ದೇವತೆ ಶ್ರೀ ಕಾಳಿಕಾಂಬ ಮಹೇಶ್ವರಿ ಕಾಳಮ್ಮ ದೇವಿಯ ಜಾತ್ರೆ ಬುಧವಾರ ನಡೆಯಿತು. ಜಾತ್ರೆಯಲ್ಲಿ ಸಾವಿರಾರು ಭಕ್ತರು ದೇವಿ ದರ್ಶನ ಪಡೆದು ಪೂಜೆ ಸಲ್ಲಿಸಿ ದೇವರ ಕೃಪೆಗೆ ಪಾತ್ರರಾದರು. ತಾಲ್ಲೂಕಿನ ಹೆಗ್ಗನೂರು ಗ್ರಾ.ಪಂ. ವ್ಯಾಪ್ತಿಯ ಹೆಗ್ಗನೂರು ಗ್ರಾಮದಲ್ಲಿ ಮಂಗಳವಾರ ಆರಂಭವಾದ ಜಾತ್ರೆಯ ಎರಡನೇ ದಿನವಾದ ಬುಧವಾರ ರಂದು ಬೆಳಿಗ್ಗೆಯಿಂದಲೇ ದೇವಿಗೆ ಜಾತ್ರೆಯ ದಿನದಂದು ದೇವಸ್ಥಾನದಲ್ಲಿ ವಿಶೇಷ ಹೋಮ, ಮುಂಜಾನೆ 5 ಗಂಟೆಗೆ ಸುಪ್ರಭಾತ ಸೇವೆ, ವಿಶೇಷ ಪಂಚಾಮೃತ ಅಭಿಷೇಕ 4 ಗಂಟೆಗೆ ಭಕ್ತಾದಿಗಳಿಂದ ಉರುಳು ಸೇವೆ ಮಾಡಿ, ಕ್ಷೇತ್ರದ ಈಶಾನ್ಯ ದಿಕ್ಕಿನಲ್ಲಿರುವ ಹೆಬ್ಬಳದ ತೊರೆಯಿಂದ ಗಂಗಾ ಪೂಜೆ ಮಾಡಿ, ನಂತರ ಅದೇ ದಿನದ 9 ಗಂಟೆಗೆ ಭಕ್ತಾದಿಗಳು ಬಾಯಿಬೀಗ ಹರಕೆ, ಮುಡಿ ಮುಗಿಸಿ ಸುತ್ತಿಗೆಗಳು, ನಂದಿಧ್ವಜ ಉಮಾ ಮಹೇಶ್ವರಸ್ವಾಮಿ ದೇವರ ರುದ್ರಾಕ್ಷಿ ಮಂಟಪದೊಂದಿಗೆ ಪೆಂಜಿನಸೇವೆ, ನಾದಸ್ವರ, ವಾದ್ಯಗೋಷ್ಠಿ, ಬ್ಯಾಂಡ್ ಸೆಟ್, ವೀರಗಾಸೆ ನೃತ್ಯ, ಗಾರುಡಿಗೊಂಬೆ, ಕೋಲಾಟ, ನೃತ್ಯವಾದ್ಯ, ಚಂಡಿವಾದ್ಯ, ಮಂಗಳವಾದ್ಯದ ಸಮೇತ ಗ್ರಾಮದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ಮಾಡಿದ.ನಂತರ …
ತುರುವೇಕೆರೆ : ಪಟ್ಟಣ ಪಂಚಾಯಿತಿ ವತಿಯಿಂದ ಮತದಾನ ಜಾಗೃತಿ ಅಭಿಯಾನವನ್ನು ಆಯೋಜನೆ ಮಾಡಲಾಗಿತ್ತು. ಪಟ್ಟಣದ ಪ್ರಮುಖ ಬೀದಿಗಳಲ್ಲಿ ಅಂಗನವಾಡಿ ಕಾರ್ಯಕರ್ತರು ಆಶಾ ಕಾರ್ಯಕರ್ತರು ಪೌರಕಾರ್ಮಿಕರೊಂದಿಗೆ ಜಾಥಾ ಮೂಲಕ ಸಂಚರಿಸಿ ಮತದಾನದ ಅರಿವು ಮೂಡಿಸಲಾಯಿತು. ಈ ಸಂದರ್ಭದಲ್ಲಿ ಪಟ್ಟಣ ಪಂಚಾಯಿತಿಯ ಮುಖ್ಯ ಅಧಿಕಾರಿ ಶ್ರೀನಾಥ್ ಬಾಬು ಮಾತನಾಡಿ, ಕಡ್ಡಾಯವಾಗಿ ಮತದಾನ ಮಾಡಿ, ಮತದಾನವನ್ನು ಹಬ್ಬವನ್ನಾಗಿ ಆಚರಿಸಿ ತಮ್ಮ ಹಕ್ಕನ್ನು ತಪ್ಪದೇ ಚಲಾವಣೆ ಮಾಡಿ ಎಂದು ಹೇಳಿದರು. ಈ ಅಭಿಯಾನದಲ್ಲಿ ಸೆಕ್ಟರ್ ಆಫೀಸರ್ ರಾಘವೇಂದ್ರ, ಕಂದಾಯ ಹಾಗೂ ಆರೋಗ್ಯ ನಿರೀಕ್ಷಕ ರಂಗನಾಥ್, ಸಿಬ್ಬಂದಿಗಳಾದ ಸದಾನಂದ, ನರಸಿಂಹಮೂರ್ತಿ, ಕೃಷ್ಣಮೂರ್ತಿ ಸೇರಿದಂತೆ ಅಂಗನವಾಡಿ ಆಶಾ ಕಾರ್ಯಕರ್ತೆಯರು ಮತ್ತು ಪೌರಕಾರ್ಮಿಕರು ಭಾಗವಹಿಸಿದ್ದರು. ವರದಿ: ಸುರೇಶ್ ಬಾಬು ಎಂ. ತುರುವೇಕೆರೆ ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ತುಮಕೂರು: ಲೋಕಸಭೆ ಅತ್ಯಂತ ಪ್ರಮುಖವಾದ ಮನೆ. ದೇಶ ಯಾವರೀತಿ ಸಾಗಬೇಕು ಎಂಬುದರ ಬಗ್ಗೆ ಗಂಭೀರವಾದ ತೀರ್ಮಾನ ತೆಗೆದುಕೊಳ್ಳುವ ಮನೆಯಾಗಿದೆ. ಕಾನೂನುಗಳನ್ನು ರಚನೆ ಮಾಡುವ ಮನೆಯಾಗಿದೆ ಎಂದು ತುಮಕೂರು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಎಸ್.ಪಿ.ಮುದ್ದಹನುಮೇಗೌಡ ಹೇಳಿದರು. ನಗರದ ಪತ್ರಿಕಾ ಭವನದಲ್ಲಿ ಆಯೋಜಿಸಿದ್ದ ಪತ್ರಕರ್ತರೊಂದಿಗಿನ ಸಂವಾದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಲೋಕಸಭಾ ಚುನಾವಣೆಗೆ ಸ್ಪರ್ಧಿಸುವ ಬಹುತೇಕ ಸ್ಪರ್ಧಿಗಳು ವಕೀಲರಾಗಿದ್ದಾರೆ ಎಂದರು. ನಾನು ಲೋಕಸಭಾ ಸದಸ್ಯನಾದ ಮೇಲೆ ಎಚ್ ಎಎಲ್ ಕಾರ್ಖಾನೆ ಜಾಗವನ್ನು ಇಸ್ರೊಗೆ ನೀಡಲಾಗಿದೆ. ಎಚ್ ಎಂಟಿ ಶಿಫ್ಟ್ ಮಾಡಬೇಕು ಅಂತಾ ಗೋವಾಕ್ಕೆ ನಿರ್ಧಾರ ಆಯಿತು. ಆದರೆ ನಾನು ಅದಕ್ಕೆ ಅವಕಾಶ ಮಾಡಿಕೊಡಲಿಲ್ಲ. ಬಹಳ ಹೋರಾಟ ಮಾಡಿದ ಕಾರಣ ಅದನ್ನು ಉಳಿಸಿಕೊಳ್ಳಲು ಸಾಧ್ಯವಯಿತು. ಜನಗಳ ಹಣವನ್ನು ಸದ್ವಿನಿಯೋಗ ಪಡಿಸುವ ನಿಟ್ಟಿನಲ್ಲಿ ಅಭಿವೃದ್ಧಿ ಕಾರ್ಯಕ್ರಮ ಮಾಡಿದ್ದೇನೆ. ತೆಂಗು ಬೆಲೆ ಕುಸಿತವಾಗಿದೆ. ನಾನು ಇದ್ದಾಗ ಅದರ ಬಗ್ಗೆ ಚರ್ಚೆ ಮಾಡಿ 18 ಸಾವಿರ ನೀಡಲಾಗಿತ್ತು. ಆದರೆ ಈಗ ಕುಸಿತವಾಗುತ್ತಿದೆ. ರೈತರು ಆತ್ಮಹತ್ಯೆ ಮಾಡಿಕೊಳ್ಳುವ ಸ್ಥಿತಿ ನಿರ್ಮಾಣವಾಗಿದೆ…
ಬೆಂಗಳೂರು: ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಹೆಚ್ ಡಿ ಕೆ ಕಣಕ್ಕಿಳಿದಿದ್ದು ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಪ್ರತಿಕ್ರಯಿಸಿದ್ದಾರೆ. ಮಗನನ್ನೇ ಗೆಲ್ಲಿಸಲಾಗದವರು ತಾವು ಗೆಲ್ಲುವರೇ ಎಂಬ ಪ್ರಶ್ನೆ ಇಟ್ಟಿದ್ದಾರೆ. ಬೆಂಗಳೂರಿನಲ್ಲಿ ಮಾಧ್ಯಮದ ಪ್ರಶ್ನೆಗಳಿಗೆ ಪ್ರತಿಕ್ರಯಿಸಿದ ಸಿಎಂ ಸಿದ್ದರಾಮಯ್ಯ, ಕುಮಾರಸ್ವಾಮಿ ಎಷ್ಟೇ ಭಾವನಾತ್ಮಕವಾಗಿ ಮಾತನಾಡಿದರೂ ಮಂಡ್ಯದಲ್ಲಿ ಗೆಲ್ಲಲು ಸಾಧ್ಯವಿಲ್ಲ. ಹಾಸನದವರಾದ ಅವರಿಗೆ ಮಂಡ್ಯ ಹೇಗೆ ಕರ್ಮಭೂಮಿಯಾದಿತು ಎಂದು ಪ್ರಶ್ನಿಸಿದರು. ಇನ್ನು ಹೆಚ್ ಡಿಕೆ ಎದುರು ಕಾಂಗ್ರೆಸ್ ಅಭ್ಯರ್ಥಿ ವೀಕ್ ಆದರೆ? ಎಂಬ ಪ್ರಶ್ನೆಗೆ ಪ್ರತಿಕ್ರಯಿಸಿದ ಅವರು ಸ್ಟಾರ್ ಚಂದ್ರು ವೀಕ್ ಕ್ಯಾಂಡಿಡೇಟ್ ಅಲ್ಲ, ಮಂಡ್ಯ ಕ್ಷೇತ್ರಕ್ಕೆ ಅಪರಿಚಿತರೂ ಅಲ್ಲ ನಾಗಮಂಗಲದವರು, ಯಾವ ರೀತಿಯಲ್ಲೂ ದುರ್ಬಲ ಅಭ್ಯರ್ಥಿ ಅಲ್ಲ ಎಂದರು. ರಾಜ್ಯದ ಮುಖ್ಯಮಂತ್ರಿಯಾಗಿದ್ದಾಗಲೇ ಅವರಿಗೆ ತಮ್ಮ ಮಗನನ್ನ ಗೆಲ್ಲಿಸಲು ಆಗಲಿಲ್ಲ ಈಗ ಅವರು ಗೆಲ್ಲುತ್ತಾರೆಯೇ ಎಂದು ಸಿಎಂ ವ್ಯಂಗ್ಯವಾಡಿದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ನವದೆಹಲಿ: ದೇಶಾದ್ಯಂತ ನಡೆದ ವಿವಿಧ ದಾಳಿಗಳಲ್ಲಿ ಇಡಿ ವಶಪಡಿಸಿಕೊಂಡಿರುವ ಸುಮಾರು 3000 ಕೋಟಿ ರೂ. ಅನ್ನು ವಿವಿಧ ಯೋಜನೆಗಳ ಮೂಲಕ ಬಡ ಜನರಿಗೆ ನೀಡುವುದಾಗಿ, ರಾಜ್ಯದ ಜನತೆಗೆ ತಿಳಿಸುವಂತೆ ಪ್ರಧಾನಿ ನರೇಂದ್ರ ಮೋದಿ ಅವರು ಪಶ್ಚಿಮ ಬಂಗಾಳದ ಕೃಷ್ಣನಗರ ಬಿಜೆಪಿ ಅಭ್ಯರ್ಥಿ ರಾಜಮಾತಾ ಅಮೃತಾ ರಾಯ್ ಅವರಿಗೆ ತಿಳಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರು ಅಮೃತಾ ರಾಯ್ ಅವರಿಗೆ ಕರೆ ಮಾಡಿದ ಸಂದರ್ಭ ಈ ವಿಚಾರವನ್ನು ತಿಳಿಸಿದ್ದಾರೆ. ಅಮೃತಾ ರಾಯ್ ಅವರು ಲೋಕಸಭಾ ಚುನಾವಣೆಗೆ ಕೃಷ್ಣನಗರ ಕ್ಷೇತ್ರದಿಂದ ಟಿಎಂಸಿಯ ಮಹುವಾ ಮೊಯಿತ್ರಾ ವಿರುದ್ಧ ಸ್ಪರ್ಧಿಸುತ್ತಿದ್ದಾರೆ. ಅಮೃತಾ ರಾಯ್ ಜೊತೆಗೆ ದೂರವಾಣಿ ಕರೆಯಲ್ಲಿ ಮಾತನಾಡಿದ ಮೋದಿ, ಕೇಂದ್ರದಲ್ಲಿ ಹೊಸ ಸರ್ಕಾರ ರಚನೆಯಾದ ನಂತರ ಇಡಿ ಭ್ರಷ್ಟರಿಂದ ವಶಪಡಿಸಿಕೊಂಡ ಹಣವನ್ನು ಬಡ ಜನರಿಗೆ ನೀಡಲು ಕಾನೂನು ರೂಪಿಸುವ ಬಗ್ಗೆ ಯೋಚಿಸುವುದಾಗಿ ಹೇಳಿದ್ದಾರೆ. ಬಿಜೆಪಿ ಅಭ್ಯರ್ಥಿ ಬಗ್ಗೆ ಪ್ರತಿಪಕ್ಷಗಳು ಏನು ಹೇಳುತ್ತವೆ ಎಂಬುದರ ಬಗ್ಗೆ ನೀವು ಬೇಸರಿಸಿಕೊಳ್ಳದಿರಿ. ರಾಜಕೀಯವನ್ನು ಈಗ ಎರಡು ಭಾಗಗಳಾಗಿ ವಿಂಗಡಿಸಲಾಗಿದೆ. ಒಂದು…
ಮಡಿಕೇರಿ: ಮಡಿಕೇರಿಯಲ್ಲಿ ಆಯೋಜಿಸಿದ್ದ ಬಿಜೆಪಿ ಕಾರ್ಯಕರ್ತರ ಸಮಾವೇಶದಲ್ಲಿ ಮಾತನಾಡಿದ ವಿಜಯೇಂದ್ರ, ಲೋಕಸಭೆ ಚುನಾವಣೆಯಲ್ಲಿ 400ಕ್ಕೂ ಹೆಚ್ಚು ಸ್ಥಾನಗಳನ್ನು ಗೆಲ್ಲುವ ವಿಶ್ವಾಸ ವ್ಯಕ್ತಪಡಿಸಿದರು. ಮೈಸೂರು-ಕೊಡಗು ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಪ್ರಧಾನಿ ನರೇಂದ್ರ ಮೋದಿ ಅವರ ಮನವಿ ಮೇರೆಗೆ ಬಿಜೆಪಿ ಸೇರಿದ್ದಾರೆ. ಎಲ್ಲಾ ಬಿಜೆಪಿ ಕಾರ್ಯಕರ್ತರ ಪ್ರಯತ್ನದಿಂದ ಯದುವೀರ್ ಒಡೆಯರ್ ಅವರು 2 ಲಕ್ಷಕ್ಕೂ ಹೆಚ್ಚು ಮತಗಳಿಂದ ಗೆಲ್ಲುತ್ತಾರೆ ಎಂಬ ವಿಶ್ವಾಸ ನನಗಿದೆ ಎಂದರು. 2004ರಿಂದ ಯುಪಿಎ ಸರ್ಕಾರದ ಹತ್ತು ವರ್ಷಗಳ ಆಡಳಿತ ಹಗರಣಗಳಿಂದ ತುಂಬಿ ತುಳುಕುತ್ತಿತ್ತು. ಹೀಗಾಗಿ ದೇಶದ ಜನ ಯುಪಿಎ ಸೋಲಿಸಿ ಬಿಜೆಪಿ ಗೆಲ್ಲಿಸಿದರು. ಆಡಳಿತಾತ್ಮಕ ಯಶಸ್ಸಿನ ನಂತರ ನರೇಂದ್ರ ಮೋದಿ ಮತ್ತೆ ಅಧಿಕಾರಕ್ಕೆ ಬರುತ್ತಾರೆ. ಪ್ರಧಾನಿಯವರ ಜನಪ್ರಿಯತೆ ಇನ್ನೂ ಮುಂದುವರೆದಿರುವುದರಿಂದ ಮತದಾರರು ಮೂರನೇ ಬಾರಿಗೆ ಮೋದಿಯವರನ್ನು ಮರು ಆಯ್ಕೆ ಮಾಡುತ್ತಾರೆ ” ಎಂದು ವಿಶ್ವಾಸ ವ್ಯಕ್ತಪಡಿಸಿದರು. ಪಕ್ಷದ ತಪ್ಪುಗಳಿಂದಾಗಿ ರಾಜ್ಯ ಚುನಾವಣೆಯಲ್ಲಿ ಬಿಜೆಪಿ ಸೋತಿದೆ ಎಂದು ವಿಶ್ಲೇಷಿಸಿದ ವಿಜಯೇಂದ್ರ, ”ಕಳೆದ ಹತ್ತು ತಿಂಗಳಲ್ಲಿ ಕಾಂಗ್ರೆಸ್ ಸರ್ಕಾರ ಅಭಿವೃದ್ಧಿ ಯೋಜನೆಗಳಿಗೆ ಒಂದು ರೂಪಾಯಿ…
ಬೆಂಗಳೂರು: ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಚುನಾವಣೆ ಎದುರಿಸಲಿದ್ದೇವೆ. ಅಗತ್ಯಬಿದ್ದರೆ ಸುಮಲತಾ ಅಂಬರೀಷ್ ಜೊತೆಗೆ ಮಾತನಾಡಲು ಸಿದ್ಧ ಎಂದು ನಿಖಿಲ್ ಕುಮಾರಸ್ವಾಮಿ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹೆಚ್.ಡಿ. ಕುಮಾರಸ್ವಾಮಿ ನಾರಾಯಣಗೌಡರ ಮನವೊಲಿಸಿದ್ದಾರೆ, ಅವರು ನಮ್ಮ ಪಕ್ಷದಿಂದಲೇ ಶಾಸಕರಾಗಿದ್ದರು ಸಣ್ಣ ಪುಟ್ಟ ಭಿನ್ನಾಭಿಪ್ರಾಯಗಳಿದ್ದವು ಈಗ ಎಲ್ಲ ಸರಿ ಹೋಗಿದೆ. ವೈಯಕ್ತಿಕವಾಗಿ ಹೆಚ್ ಡಿಕೆ ಮೇಲೆ ನಾರಾಯಣಗೌಡರಿಗೆ ಗೌರವ ಇದೆ, ಕುಮಾರಸ್ವಾಮಿ ಪರ ಕೆಲಸ ಮಾಡುತ್ತೇನೆ ಎಂದಿದ್ದಾರೆ ಎಂದು ನಿಖಿಲ್ ಹೇಳಿದರು. ನಮಗೆ ಆರೋಗ್ಯಕರ ಚುನಾವಣೆ ಬೇಕು, ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಳ್ಲುತ್ತೇವೆ. ಅಗತ್ಯ ಬಿದ್ದರೆ ಸುಮಲತಾ ಅಂಬರೀಷ್ ಜೊತೆಗೆ ಮಾತನಾಡಲು ಸಿದ್ಧರಿದ್ದೇವೆ ಎಂದು ಹೇಳುವ ಮೂಲಕ, ಎಲ್ಲಾ ಭಿನ್ನಾಭಿಪ್ರಾಯಗಳನ್ನೂ ತಿಳಿಗೊಳಿಸಿ ಒಟ್ಟಾಗಿ ಕೆಲಸ ಮಾಡಲು ಸಿದ್ಧ ಎಂದು ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಹೇಳಿದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296