Author: admin

ತುಮಕೂರು: ನಾನು ಸಮಾಜಮುಖಿಯಾಗಿ ಕೆಲಸ ಮಾಡಲು ಮುಖ್ಯ ಕಾರಣ ಮಾಜಿ ಪ್ರಧಾನಿ ದೇವೇಗೌಡರು. ನಾನು ಈ ಕ್ಷೇತ್ರಕ್ಕೆ ಬರುವ ವೇಳೆ ಆನಂದ ಆಗುವ ಬದಲಾಗಿ ಸ್ವಲ್ಪ ಎಮೋಷನಲ್ ಆಗಿದೆ. 1996ರಲ್ಲಿ ದೇವೇಗೌಡರು ಪ್ರಧಾನಿ ಆಗಿರಲಿಲ್ಲ ಎಂದಾಗಿದ್ದರೆ, ಪಶ್ಚಿಮ ಬಂಗಾಳದಲ್ಲಿ ಜ್ಯೋತಿ ಬಸ್ಸು, ನಿರಂತರವಾಗಿ 30 ವರ್ಷಗಳ  ಮುಖ್ಯಮಂತ್ರಿಗಳು ಆಗಿದ್ದಂತೆ ದೇವೇಗೌಡರು ರಾಜ್ಯದಲ್ಲಿ ಮುಖ್ಯಮಂತ್ರಿ ಆಗಿರುತ್ತಿದ್ದರು. ವಿಧಿ ನಿಯಮದಂತೆ ಯಾವ ಕಾಲದಲ್ಲಿ ಏನು ಆಗಬೇಕೋ ಅದು ಆಗಿದೆ ಎಂದು ಬಿಜೆಪಿ ಅಭ್ಯರ್ಥಿ ಸೋಮಣ್ಣ ತಿಳಿಸಿದರು. ತುಮಕೂರು ಜಿಲ್ಲಾ ಜೆಡಿಎಸ್ ಕಚೇರಿಯಲ್ಲಿ ನಡೆದ ಜೆಡಿಎಸ್ ಮತ್ತು ಬಿಜೆಪಿ ಮುಖಂಡರ ವೇದಿಕೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷವನ್ನು ಕಟ್ಟಿ ಹಾಕಬೇಕೆಂದ್ರೆ ಜೆಡಿಎಸ್ ಮತ್ತು ಬಿಜೆಪಿ ಒಂದಾಗಬೇಕಿದೆ ಎಂಬ ಚಿಂತನೆಯನ್ನು ಮಾಜಿ ಪ್ರಧಾನಿ ದೇವೇಗೌಡರು ಮಾಡಿದ್ದಾರೆ. ಎಚ್.ಡಿ. ಕುಮಾರಸ್ವಾಮಿ ಅವರು ಪಕ್ಷದ ಮುಖಂಡರು ಮತ್ತು ಕಾರ್ಯಕರ್ತರಿಗೆ ಎಂಟು ಸೂಚನೆಗಳನ್ನು ನೀಡಿದ್ದು, ಅದನ್ನು ಎಲ್ಲರೂ ಪಾಲಿಸಬೇಕಿದೆ ಎಂದು ಹೇಳಿದರು. ಎರಡೂ ಪಕ್ಷಗಳ ಕಾರ್ಯಕರ್ತರಿಗೆ ಗೊಂದಲವಾದ್ರೆ ಅದನ್ನು…

Read More

ಭೋಪಾಲ್: ಮಧ್ಯಪ್ರದೇಶದ ಭೋಪಾಲ್​ ನಲ್ಲಿ ಮಹಿಳೆಯೊಬ್ಬರು ಗಂಡು ಮಗು ಹೆರಲಿಲ್ಲ ಎನ್ನುವ ಕಾರಣಕ್ಕೆ ಪತಿ ನೀಡುತ್ತಿದ್ದ ಕಿರುಕುಳದಿಂದ ಬೇಸತ್ತ ಮಹಿಳೆಯು ಇಬ್ಬರು ಹೆಣ್ಣುಮಕ್ಕಳನ್ನು ಹತ್ಯೆ ಮಾಡಿ, ತಾನೂ ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದೆ. ಇಬ್ಬರು ಹೆಣ್ಣುಮಕ್ಕಳು ಸಾವನ್ನಪ್ಪಿದ್ದರೆ, ಮೂರನೇ ಮಗುವನ್ನು ಆಸ್ಪತ್ರೆಗೆ ಸಾಗಿಸಲಾಗಿದ್ದು, ಆಕೆಯ ಸ್ಥಿತಿ ಸ್ಥಿರವಾಗಿದೆ ಎಂದು ಹೇಳಲಾಗಿದೆ. ಆತ್ಮಹತ್ಯೆಗೂ ಮುನ್ನ ಮಹಿಳೆ ತನ್ನ ಸಹೋದರಿನಿಗೆ ವಾಯ್ಸ್​ ಮೆಸೇಜ್ ಕಳುಹಿಸಿದ್ದಳು. “ತಾನು ಗಂಡು ಮಗು ಹೆತ್ತಿಲ್ಲ ಎನ್ನುವ ಕಾರಣಕ್ಕೆ ಅತ್ತೆಯ ಮನೆಯಲ್ಲಿ ಎಲ್ಲರೂ ಕಿರುಕುಳ ನೀಡುತ್ತಿದ್ದಾರೆ” ಎಂದು ಹೇಳಿದ್ದಳು. ಭೋಪಾಲ್ ಜಿಲ್ಲೆಯ ಗುಂಗಾ ಪೊಲೀಸ್ ಠಾಣೆ ವ್ಯಾಪ್ತಿಯ ರೋಡಿಯಾ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಘಟನೆ ಸ್ಥಳದಲ್ಲಿ ಪತ್ರವೊಂದು ಸಿಕ್ಕಿದ್ದು ಅದರ ತನಿಖೆ ಮಾಡಲಾಗುತ್ತಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

Read More

ತುಮಕೂರು: “ಬಿಜೆಪಿ ಅಭ್ಯರ್ಥಿ ಸೋಮಣ್ಣ ಪರವಾಗಿ ಕೆಲಸ ಮಾಡುವುದಿಲ್ಲ” ಎಂಬ ಹೇಳಿಕೆಗಳನ್ನು ಪದೇಪದೇ ಕೊಡುತ್ತಲೇ ಇರುವ ಮಾಜಿ ಸಚಿವ ಮಾಧುಸ್ವಾಮಿ ಅವರ ಮನವೊಲಿಸುವ ಪ್ರಯತ್ನ ಮುಂದುವರಿದಿದೆ. ಇಂದು ಬೆಳಗ್ಗೆ ಅಭ್ಯರ್ಥಿ ವಿ. ಸೋಮಣ್ಣ, ಚಿಕ್ಕನಾಯಕನಹಳ್ಳಿಯ ಅವರ ಮನೆಗೆ ಮಾಜಿ ಸಚಿವ ಬಿಸಿ ನಾಗೇಶ್ ಅವರೊಂದಿಗೆ ತೆರಳಿ ಸುದೀರ್ಘ ಕಾಲ ಮಾತುಕತೆ ನಡೆಸಿದರು. ಮಾತುಕತೆಯ ನಂತರ ಮಾಧುಸ್ವಾಮಿ ಕುದ್ದು ಇಬ್ಬರನ್ನು ಕಳುಹಿಸಿಕೊಡಲು ಮನೆಯವರೆಗೂ ಬಂದು ಸಂಭಾಷಣೆಯಲ್ಲಿ ತೊಡಗಿದರು. ಈ ಮೂಲಕ ಮಾಜಿ ಸಚಿವ ಮಾಧುಸ್ವಾಮಿ ಅವರಿಗೆ ಪರಿಸ್ಥಿತಿಯ ಮನವರಿಕೆ ಮಾಡಿಕೊಡುವಂತಹ ಸರ್ವ ಪ್ರಯತ್ನಗಳು ಮುಂದುವರಿದಿದೆ ಎಂದು ಹೇಳಬಹುದಾಗಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

Read More

ಬೆಂಗಳೂರು:  ವಿಶೇಷ ಚೇತನಳನ್ನ ಮದುವೆ ಆಗುವುದಾಗಿ ಹಣ ಪಡೆದು ವಂಚನೆ ಮಾಡಿರುವ ಆರೋಪ ಕೇಳಿಬಂದಿದೆ. ಸುರೇಂದ್ರ ಮೂರ್ತಿ ಎಂಬುವವರು ವಿಶೇಷ ಚೇತನ ಯುವತಿಗೆ ಮದುವೆಯಾಗುವುದಾಗಿ ನಂಬಿಸಿ ವಂಚನೆ ಮಾಡಿದ್ದಾರೆ. ಸುರೇಂದ್ರ ಮೂರ್ತಿ ಹಾಗೂ ವಿಶೇಷ ಚೇತನ ಯುವತಿಗೆ ಮೊದಲು ಪರಿಚಯವಾಗಿ ಪರಿಚಯ ಪ್ರೀತಿಗೆ ತಿರುಗಿತ್ತು. ಇಬ್ಬರಲ್ಲಿ ಸಲುಗೆ, ನಂಬಿಕೆ ಹೆಚ್ಚಾದ ಬಳಿಕ, ಸುರೇಂದ್ರ ಮೂರ್ತಿ ತನ್ನೊಂದು ಬ್ಯುಸಿನೆಸ್ ಮಾಡುವ ಸಲುವಾಗಿ ಹಣ ಬೇಕೆಂದು ಯುವತಿ ಬಳಿ ಕೇಳಿದ್ದ. ಇದನ್ನು ನಂಬಿದ ಯುವತಿಯು, ತನ್ನ ಪ್ರಿಯತಮನಿಗಾಗಿ ತನ್ನ ಬಳಿಯಿದ್ದ ಚಿನ್ನ ಅಡವಿಟ್ಟು, ಸಾಲ ಮಾಡಿ ಪ್ರಿಯತಮನಿಗೆ ಹಣ ನೀಡಿದ್ದರು. ಆದರೆ ಹಣವೆಲ್ಲ ಪಡೆದ ಬಳಿಕ ಮದುವೆಯಾಗದೆ ವಂಚನೆ ಮಾಡಿದ್ದಾನೆ ಎನ್ನಲಾಗುತ್ತಿದೆ. ಅಲ್ಲದೆ ಪ್ರೀತಿಯಲ್ಲಿದ್ದ ವೇಳೆ ಲೈಂಗಿಕವಾಗಿಯೂ ಬಳಸಿಕೊಂಡಿರುವುದಾಗಿ ಯುವತಿ ಆರೋಪ ಮಾಡಿದ್ದಾಳೆ. ಸದ್ಯ ವಿಶೇಷ ಚೇತನ ಯುವತಿ ಪೊಲೀಸ್ ಠಾಣೆಗೆ ದೂರು ಸಲ್ಲಿಸಿದ್ದು,  ಘಟನೆ ಸಂಬಂಧ ಪೊಲೀಸ್ ಠಾಣೆಯಲ್ಲಿ ಎಫ್​ಐಆರ್ ದಾಖಲಾಗಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್…

Read More

ಮುಂಬೈ: ತನ್ನ ಹೆಂಡತಿಯನ್ನು ‘ಸೆಕೆಂಡ್ ಹ್ಯಾಂಡ್’ ಎಂದು ಕರೆದ ವ್ಯಕ್ತಿಗೆ ಕೌಟುಂಬಿಕ ಹಿಂಸಾಚಾರದಿಂದ ಮಹಿಳೆಯರ ರಕ್ಷಣೆ ಕಾಯ್ದೆ, 2005 ರ ಅಡಿಯಲ್ಲಿ 3 ಕೋಟಿ ರೂ.ಗಳ ಪರಿಹಾರ ಮತ್ತು ಮಾಸಿಕ 1.5 ಲಕ್ಷ ರೂ.ಗಳ ಜೀವನಾಂಶವನ್ನು ಪಾವತಿಸುವಂತೆ ನಿರ್ದೇಶಿಸಿದೆ. ಮುಂಬೈನಲ್ಲಿ ವಿವಾಹವಾದ ಇವರಿಬ್ಬರು, ವೈವಾಹಿಕ ಭಿನ್ನಾಭಿಪ್ರಾಯದಿಂದಾಗಿ, ಹೆಂಡತಿ ತನ್ನ ತಾಯಿಯ ಮನೆಗೆ ಸ್ಥಳಾಂತರಗೊಂಡರೆ, ಪತಿ 2014 ರಲ್ಲಿ ಯುಎಸ್ ‌ಎಗೆ ಸ್ಥಳಾಂತರಗೊಂಡರು. ಅದಾದ ನಂತರ ಪತಿ ಯುಎಸ್‌ ಎದಲ್ಲಿ ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದರು ಮತ್ತು ಪತ್ನಿ ಮುಂಬೈನಲ್ಲಿ ಕೌಟುಂಬಿಕ ಹಿಂಸಾಚಾರ ಕಾಯ್ದೆಯಡಿ ಅವರ ವಿರುದ್ಧ ದೂರು ದಾಖಲಿಸಿದರು. ಯುಎಸ್ ನ್ಯಾಯಾಲಯವು ವಿಚ್ಛೇದನಕ್ಕೆ ಅನುಮತಿ ನೀಡಿತು. ನೇಪಾಳದಲ್ಲಿ ಮಧುಚಂದ್ರದ ಸಮಯದಲ್ಲಿ ನಡೆದ ಒಂದು ಅವಮಾನಕರ ಘಟನೆ ಸೇರಿದಂತೆ ತಮ್ಮ ಮದುವೆಯ ಸಮಯದಲ್ಲಿ ನಡೆದ ಭಯಾನಕ ಘಟನೆಗಳ ಸರಣಿಯನ್ನು ಪತ್ನಿ ತನ್ನ ಅರ್ಜಿಯಲ್ಲಿ ವಿವರಿಸಿದ್ದಾರೆ. ತನ್ನ ಪತಿ, ಕ್ರೌರ್ಯದಿಂದ, ಹಿಂದಿನ ಮುರಿದುಬಿದ್ದ ನಿಶ್ಚಿತಾರ್ಥದಿಂದಾಗಿ ತನ್ನನ್ನು ‘ಸೆಕೆಂಡ್ ಹ್ಯಾಂಡ್’ ಎಂದು ಹೇಗೆ ಬ್ರಾಂಡ್ ಮಾಡುತ್ತಾನೆ ಎಂದು…

Read More

ಮುಂಬೈ ಬಂದರು ಪ್ರದೇಶದ ಹುಕ್ಕಾ ಬಾರ್‌ ನಲ್ಲಿ ಪೊಲೀಸರು ದಾಳಿ ನಡೆಸಿದ್ದು, ಬಿಗ್ ಬಾಸ್ ರಿಯಾಲಿಟಿ ಶೋ ವಿನ್ನರ್ ಹಾಗೂ ಹಾಸ್ಯನಟ ಮುನಾವರ್ ಫಾರೂಕಿ ಅವರನ್ನು ನಿನ್ನೆ ತಡರಾತ್ರಿ ಮುಂಬೈ ಪೊಲೀಸರು ವಶಕ್ಕೆ ಪಡೆದ್ದಾರೆ. ಇದೀಗ ಆರೋಪಿಗಳ ವಿರುದ್ಧ ಪ್ರಕರಣ ದಾಖಲಾಗಿದ್ದು, ವಿಚಾರಣೆ ಬಳಿಕ ಬಿಡುಗಡೆ ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ವರದಿಯ ಪ್ರಕಾರ, ಮುಂಬೈ ಪೊಲೀಸ್‌ ಸಮಾಜ ಸೇವಾ ಶಾಖೆಯು ‘ಸಬಲನ್‌ ಹುಕ್ಕಾ ಬಾರ್‌’ ಮೇಲೆ ದಾಳಿ ನಡೆಸಿತ್ತು. ತಂಬಾಕು ಆಧಾರಿತ ಹುಕ್ಕಾ ಬಳಕೆ ಮಾಡುತ್ತಿದ್ದಾರೆ ಎನ್ನುವ ಖಚಿತ ಮಾಹಿತಿಯ ಮೇರೆಗೆ ಮುಂಬೈ ಪೊಲೀಸರು ಹುಕ್ಕಾಬಾರ್ ಮೇಲೆ ದಾಳಿ ಮಾಡಿದ್ದರು ಎನ್ನಲಾಗುತ್ತಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

Read More

ಅಂಚೆ ಮತದಾನದ ಪದ್ಧತಿ ನಮ್ಮ ದೇಶದಲ್ಲಿ ಹಿಂದಿನಿಂದಲೂ ನಡೆದುಕೊಂಡು ಬಂದಿದೆ. ವಿವಿಧ ಕಾರಣಗಳಿಂದ ತಮ್ಮ ಕ್ಷೇತ್ರದಲ್ಲಿ ಮತ ಚಲಾಯಿಸಲು ಭೌತಿಕವಾಗಿ ಹಾಜರಾಗಲು ಸಾಧ್ಯವಾಗದ ಮತದಾರರು ಈ ವ್ಯವಸ್ಥೆಯನ್ನು ಬಳಸುತ್ತಾರೆ. ಇಂತಹ ಪರಿಸ್ಥಿತಿಯಲ್ಲಿ ಚುನಾವಣಾ ಆಯೋಗವು ಈ ಮತದಾರರಿಗೆ ಅಂಚೆ ಮತದಾನದ ಮೂಲಕ ಮತದಾನ ಮಾಡುವ ಸೌಲಭ್ಯವನ್ನು ಕಲ್ಪಿಸಿದೆ. ಕಾಲಾನಂತರದಲ್ಲಿ ಅದರ ವ್ಯವಸ್ಥೆಗಳನ್ನು ಸಹ ನವೀಕರಿಸಲಾಗಿದೆ. ಈಗ ಇ-ಮೇಲ್ ಮತದಾನ ವ್ಯವಸ್ಥೆಯ ಮೂಲಕವೂ ಅಂಚೆ ಮತದಾನ ಮಾಡಲಾಗುತ್ತಿದೆ. ಇದರೊಂದಿಗೆ ಪ್ರತಿ ಚುನಾವಣೆಯಲ್ಲಿ ಮತಯಂತ್ರಗಳನ್ನು ಎಣಿಕೆ ಮಾಡುವಾಗ ಮೊದಲು ಅಂಚೆ ಮತಪತ್ರಗಳನ್ನು ಎಣಿಸಲಾಗುತ್ತದೆ. ಈ ವ್ಯವಸ್ಥೆಯನ್ನು ಚುನಾವಣಾ ಕರ್ತವ್ಯದಲ್ಲಿ ಸೇವೆ ಸಲ್ಲಿಸುತ್ತಿರುವ ಅಧಿಕಾರಿಗಳು, ಭಾರತ ಸರ್ಕಾರದ ಸಶಸ್ತ್ರ ಪಡೆಗಳ ನೌಕರರು, ದೇಶದ ಹೊರಗೆ ಕೆಲಸ ಮಾಡುವ ಸರ್ಕಾರಿ ಅಧಿಕಾರಿಗಳು, ಸೇನಾ ಕಾಯಿದೆ 1950 ರ ಅಡಿಯಲ್ಲಿ ಎಲ್ಲಾ ಪಡೆಗಳು ಬಳಸುತ್ತಾರೆ. ಮತಗಟ್ಟೆಗೆ ತಲುಪಲು ಸಾಧ್ಯವಾಗದ ಅಂಗವಿಕಲರು ಮತ್ತು 80 ವರ್ಷ ಮೇಲ್ಪಟ್ಟ ಹಿರಿಯ ನಾಗರಿಕರು ಸಹ ನೋಂದಾಯಿಸಿದ ನಂತರ ಮತ ಚಲಾಯಿಸಬಹುದು. ಅವರು ಈಗಾಗಲೇ…

Read More

ಬಸ್ ಟಿಕೆಟ್ ವಿಚಾರವಾಗಿ  ಮಹಿಳೆ ಮೇಲೆ ಹಲ್ಲೆ ಮಾಡಿದ ಬಿಎಂಟಿಸಿ ಬಸ್ ನಿರ್ವಾಹಕರೊಬ್ಬರನ್ನ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಹೊನ್ನಪ್ಪ ಎಂಬುವವರೇ ಮಹಿಳೆ ಮೇಲೆ ಹಲ್ಲೆ ಮಾಡಿದ್ದ ಬಿಎಂಟಿಸಿ ಕಂಡಕ್ಟರ್. ಸಿದ್ದಾಪುರ ವ್ಯಾಪ್ತಿಯಲ್ಲಿ ಘಟನೆ ನಡೆದಿತ್ತು. ತನ್ಜಿಲಾ ಇಸ್ಮಾಯಿಲ್ ಎಂಬ ಮಹಿಳೆ ಟಿಕೆಟ್​ ಕೇಳಿದ್ದಾರೆ. ಈ ವೇಳೆ ಕಂಡಕ್ಟರ್, ಕೊಡ್ತಿನಿ‌ ಇರಿ ಎಂದಿದ್ದು, ಇದೇ ವಿಚಾರಕ್ಕೆ ಮಾತಿಗೆ ಮಾತು ಬೆಳೆದು ಗಲಾಟೆ ನಡೆದಿದೆ. ಈ ವೇಳೆ ಮಹಿಳೆ ಮೇಲೆ ಕಂಡಕ್ಟರ್ ಹೊನ್ನಪ್ಪ ಹಲ್ಲೆ ಮಾಡಿದ್ದಾರೆ ಎನ್ನಲಾಗಿದೆ. ಈ ಕುರಿತು ಸಿದ್ದಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಕಂಡಕ್ಟರ್ ಹೊನ್ನಪ್ಪರನ್ನು  ಸಿದ್ದಾಪುರ ಪೊಲೀಸರು ವಶಕ್ಕೆ ಪಡೆದಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.  ಹೊನ್ನಪ್ಪ ಜಂಬೂಸವಾರಿದಿಣ್ಣೆಯಲ್ಲಿರುವ ಬಿಎಂಟಿಸಿ ಬಸ್ ಡಿಪೋ 34ರ ಕಂಡಕ್ಟರ್ ಆಗಿದ್ದಾರೆ.  ಹಲ್ಲೆ ನಡೆದಿರುವ ದೃಶ್ಯ ಪ್ರಯಾಣಿಕರ ಮೊಬೈಲ್​ನಲ್ಲಿ ಸೆರೆಯಾಗಿತ್ತು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

Read More

ಇಸ್ಲಾಮಿಕ್ ರಾಷ್ಟವಾದ ಸೌದಿ ಅರೇಬಿಯಾದಲ್ಲಿ ಮೊಟ್ಟ ಮೊದಲ ಬಾರಿಗೆ ವಿಶ್ವ ಸುಂದರಿ ಸ್ಪರ್ಧೆಗೆ ಭಾಗವಹಿಸಲು ಅವಕಾಶ ನೀಡಿದೆ. ರೂಮಿ ಅಲ್ ಕಹ್ತಾನಿ ಅಂತಾರಾಷ್ಟ್ರೀಯ ಸೌಂದರ್ಯ ಸ್ಪರ್ಧೆಯಲ್ಲಿ ಭಾಗವಹಿಸುವ ಮೊದಲ ಸೌದಿ ಯುವತಿ ಎಂಬ ಇತಿಹಾಸ ಸೃಷ್ಟಿಸಲಿದ್ದಾರೆ. ಸೌಂದರ್ಯ ಸ್ಪರ್ಧೆಯ ಹೆಸರುಗಳಿಸಿರುವ ರೂಮಿ ಅಲ್ಕಹ್ತಾನಿ ತಮ್ಮ ಇನ್ಸ್ಟಾಗ್ರಾಮ್ ನಲ್ಲಿ  ಈ ಸುದ್ದಿಯನ್ನು ಪ್ರಕಟಿಸಿದ್ದು, ಅವರು ವಿಶ್ವದ ಅತ್ಯಂತ ಜನಪ್ರಿಯ ಸ್ಪರ್ಧೆಗಳಲ್ಲಿ ಇಸ್ಲಾಮಿಕ್ ರಾಷ್ಟವನ್ನು ಪ್ರತಿನಿಧಿಸಲಿದ್ದಾರೆ. ಅವರು ತಮ್ಮ ಮನಮೋಹಕ ಚಿತ್ರಗಳನ್ನು ತಮ್ಮ ಇನ್ಸ್ಟಾಗ್ರಾಮ್ ಹಂಚಿಕೊಂಡಿದ್ದಾರೆ. ಚಿತ್ರದಲ್ಲಿ, ಮಾಡೆಲ್ ಸ್ಟ್ರಾಪ್ಲೆಸ್ ಸೀಕ್ವಿನ್ಡ್ ಗೌನ್ ಧರಿಸಿರುವುದನ್ನು ಕಾಣಬಹುದು. ಫೋಟೋಗಳ ಜೊತೆಗೆ, “ಮಿಸ್ ಯೂನಿವರ್ಸ್ 2024 ಸ್ಪರ್ಧೆಯಲ್ಲಿ ಭಾಗವಹಿಸಲು ನನಗೆ ಅಭಿಮಾನವಿದೆ ಎಂದು ಅವರು ತಿಳಿಸಿದ್ದಾರೆ.. ಇದು ವಿಶ್ವ ಸುಂದರಿ ಸ್ಪರ್ಧೆಯಲ್ಲಿ ಸೌದಿ ಅರೇಬಿಯಾದ ಮೊದಲ ಭಾಗವಹಿಸುವಿಕೆ” ಎಂದು ಬರೆದಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

Read More

ಬೆಂಗಳೂರು: ಮೊಬೈಲ್ ನಲ್ಲಿ ಜೋರಾಗಿ ಮಾತನಾಡಿದಳೆಂಬ ಕಾರಣಕ್ಕೆ ತಂಗಿಯೇ ಅಕ್ಕನನ್ನು ಕೊಲೆ ಮಾಡಿರುವ ಘಟನೆ ಬಗ್ಗೆ ವರದಿಯಾಗಿದೆ. ಬೆಂಗಳೂರಿನ ಪರಪ್ಪನ ಅಗ್ರಹಾರ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು,ಗುಡಿಯಾ ದೇವಿ( 29) ಕೊಲೆಯಾದವರು. ತಂಗಿ ಗೀತಾಕುಮಾರಿ ಹಾಗೂ ಗೆಳೆಯ ರಾಜೇಶ್‌ ಕುಮಾರ್‌(29) ಎಂಬುವನನ್ನು ಪೊಲೀಸರು ಬಂಧಿಸಿದ್ದಾರೆ. ರಾತ್ರಿ 8.15 ರ ಸುಮಾರಿಗೆ ಗುಡಿಯಾದೇವಿ ಮೊಬೈಲ್‌ ನಲ್ಲಿ ಜೋರಾಗಿ ಮಾತನಾಡುತ್ತಿದ್ದಕ್ಕೆ ತಂಗಿ ಗೀತಾ ಆಕ್ಷೇಪಿಸಿದ್ದರು. ಇದಕ್ಕೆ ಇಬ್ಬರ ನಡುವೆ ಜೋರು ಜಗಳ ನಡೆದಿತ್ತು. ಮನೆಯಲ್ಲಿಯೇ ಇದ್ದ ರಾಜೇಶ್‌, ಜಗಳ ಬಿಡಿಸಲು ಮುಂದಾಗಿದ್ದರು. ಆದರೆ, ಮಾತು ಕೇಳದ ಗುಡಿಯಾ ಮೇಲೆ ಹಲ್ಲೆನಡೆಸಿದ್ದ.ಕುಸಿದು ಬಿದ್ದ ಗುಡಿಯಾ ಅವರ ಕತ್ತನ್ನು ದೊಣ್ಣೆಯಿಂದ ಅದುಮಿಕೊಂಡಿದ್ದ. ಪರಿಣಾಮ ಉಸಿರುಗಟ್ಟಿ ಗುಡಿಯಾ ಮೃತಪಟ್ಟಿದ್ದರು ಎಂಬ ವಿಚಾರ ಪ್ರಾಥಮಿಕ ತನಿಖೆಯಲ್ಲಿಗೊತ್ತಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

Read More