Subscribe to Updates
Get the latest creative news from FooBar about art, design and business.
- ದಳವಾಯಿಹಳ್ಳಿಯಲ್ಲಿ ಕುಡಿಯುವ ನೀರಿಗೆ ಹಾಹಾಕಾರ: ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಗ್ರಾಮಸ್ಥರ ಆಕ್ರೋಶ, BPS ನಿಂದ ಟ್ಯಾಂಕರ್ ನೀರು ಪೂರೈಕೆ
- ಪಾವಗಡ: ದೊಡ್ಡಹಳ್ಳಿ ಸರ್ಕಾರಿ ಪ್ರೌಢಶಾಲೆಯಲ್ಲಿ 2026–27ನೇ ಸಾಲಿನ ದಾಖಲಾತಿ ಆರಂಭ
- ರಾಜ್ಯಸಭೆ ಚುನಾವಣೆಗೂ ಸಚಿವ ಸಂಪುಟ ಪುನರಾಚನೆಗೂ ಯಾವುದೇ ಸಂಬಂಧವಿಲ್ಲ: ಗೃಹ ಸಚಿವ ಜಿ. ಪರಮೇಶ್ವರ್ ಸ್ಪಷ್ಟನೆ
- ಸಿರಾದಲ್ಲಿ ಮೇ 26 ರಂದು ಜೆಡಿಎಸ್ ಪಕ್ಷದ ಪದಾಧಿಕಾರಿಗಳ ನೇಮಕಾತಿ ಕಾರ್ಯಕ್ರಮ
- ಮಕ್ಕಳ ಕೈಗೆ ಮೊಬೈಲ್ ಕೊಡುವ ಮುನ್ನ ಈ ಸುದ್ದಿ ಓದಿ: 1.98 ಲಕ್ಷ ರೂಪಾಯಿ ಕಳೆದುಕೊಂಡ ತುಮಕೂರಿನ ವ್ಯಕ್ತಿ!
- ಚಿಲ್ಲರೆಗಳಿಗೆ ನಾನು ಹೆದರುವ ಮಗನೇ ಅಲ್ಲ ಕೀಳುಮಟ್ಟದ ರಾಜಕಾರಣ ನನಗೆ ಗೊತ್ತಿಲ್ಲ: ಶಾಸಕ ಎಸ್. ಆರ್.ಶ್ರೀನಿವಾಸ್ ತಿರುಗೇಟು
- ತುಮಕೂರು ಜಿಲ್ಲೆಯಲ್ಲಿ 0.3 ಮಿ.ಮೀ. ಮಳೆ
- ಕೆಎಸ್ ಆರ್ ಟಿಸಿ ಬಸ್ ದರ ಏರಿಕೆ ಖಚಿತ: ಸಾರಿಗೆ ಸಂಸ್ಥೆ ಅಧ್ಯಕ್ಷ ಎಸ್.ಆರ್. ಶ್ರೀನಿವಾಸ್
Author: admin
ಲೋಕಸಭೆ ಚುನಾವಣೆಗೆ ಮೈಸೂರು-ಕೊಡಗು ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರ ರೇಡಿಯೋ ಮಿರ್ಚಿ ಕಾರ್ಯಕ್ರಮ ಸಂಬಂಧ ಕೆಪಿಸಿಸಿ ವಕ್ತಾರ ಎಚ್.ಎ. ವೆಂಕಟೇಶ್ ಚುನಾವಣಾ ಆಯೋಗಕ್ಕೆ ದೂರು ನೀಡಿದ್ದಾರೆ ಎನ್ನಲಾಗಿದೆ. ಮೈಸೂರಿನ 104.8 ರೇಡಿಯೋ ಮಿರ್ಚಿ ಚಾನೆಲ್ ನಲ್ಲಿ ಮೈಸೂರು ಕೊಡಗು ಕ್ಷೇತ್ರದ ಲೋಕಸಭಾ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಮೈಸೂರು ಸಂಸ್ಥಾನದ ಇತಿಹಾಸದ ಬಗ್ಗೆ ಸಂದರ್ಶನದ ರೂಪದಲ್ಲಿ ʼರಾಜರಿಂದಲೇ ರಾಜರ ಕಥೆಗಳುʼ ಎಂಬ ಶೀರ್ಷಿಕೆಯಲ್ಲಿ ಮಾತನಾಡುತ್ತಾರೆ ಎಂದು ವರದಿ ತಿಳಿಸಿದೆ. ರೇಡಿಯೋದಲ್ಲಿ ಮಾತನಾಡುವ ಬಗ್ಗೆ ಕ್ಷಣ ಕ್ಷಣಕ್ಕೂ ರೇಡಿಯೋದಲ್ಲಿ ಜಾಹೀರಾತನ್ನು ಕೂಡ ಪ್ರಕಟಿಸಲಾಗುತ್ತಿದೆ. ಒಬ್ಬ ವ್ಯಕ್ತಿಯಾಗಿ ರಾಜರ ಬಗ್ಗೆ ಮಾತನಾಡುವುದರಲ್ಲಿ ತಪ್ಪಿಲ್ಲ. ಆದರೆ ದಿನಾಂಕ 26.04.2024 ರ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸುವುದರಿಂದ ಚುನಾವಣೆ ನೀತಿ ಸಂಹಿತೆ ಉಲ್ಲಂಘನೆ ಆಗುತ್ತದೆ. ಯದುವೀರ್ ಮಾತುಗಳು ಮತದಾರರ ಮೇಲೆ ಪರಿಣಾಮ ಬೀರುವುದರಿಂದ ಈ ಕೂಡಲೇ ರೇಡಿಯೋದಲ್ಲಿ ಕಾರ್ಯಕ್ರಮ ಪ್ರಸಾರವಾಗದಂತೆ ನಿರ್ಬಂಧನೆ ವಿಧಿಸಬೇಕು ಎಂದು ದೂರಿನಲ್ಲಿ…
ಹಾವು ಎಂದಾಕ್ಷಣ ಭಯಪಡುವವರೇ ಹೆಚ್ಚು. ಅತ್ಯಂತ ಅಪಾಯಕಾರಿ ಜೀವಿಗಳಲ್ಲಿ ಹಾವೂ ಕೂಡಾ ಒಂದು. ಆದರೆ ಕೆಲವು ಸ್ಥಳಗಳಲ್ಲಿ ಜನರು ಹಾವುಗಳ ಜತೆ ವಾಸಮಾಡುತ್ತಾರೆ ಅನ್ನೋದರ ಬಗ್ಗೆ ನಿಮ್ಗೊತ್ತಾ?ಹೆಚ್ಯಾಕೆ ಅವುಗಳ ರಕ್ತವನ್ನು ಕುಡಿಯುತ್ತಾರೆ ಅನ್ನೋದನ್ನನೀವು ಕೇಳಿದ್ದೀರಾ?ಹಾಗಾದರೆ ಇದು ಎಲ್ಲಿ? ಯಾಕೆ? ಎನ್ನುವ ಪ್ರಶ್ನೆಗೆ ಇಲ್ಲಿದೆ ಉತ್ತರ… ಹೌದು, ಹಾವಿನ ರಕ್ತವು ಅನೇಕ ಗುಣಗಳನ್ನು ಹೊಂದಿದೆ ಎಂದು ಚೀನಿಯರು ನಂಬುತ್ತಾರೆ. ಇದಲ್ಲದೆ, ಹಾವಿನ ರಕ್ತವು ಮಾನವನ ಚರ್ಮಕ್ಕೆ ಒಳ್ಳೆಯದು ಎಂದು ಅನೇಕ ಜನರು ನಂಬುತ್ತಾರೆ. ಹಾವಿನ ವಿಷವು ಅನೇಕ ಮಾರಣಾಂತಿಕ ಕಾಯಿಲೆಗಳಿಗೆ ಪ್ರತಿವಿಷವಾಗಿ ಕಾರ್ಯನಿರ್ವಹಿಸುತ್ತದೆ ಎಂದು ಚೀನೀಯರು ನಂಬುತ್ತಾರೆ. ಅದಕ್ಕಾಗಿಯೇ ಕೆಲವರು ಹಾವಿನ ರಕ್ತವನ್ನು ಕುಡಿಯುತ್ತಾರೆ ಎನ್ನಲಾಗಿದೆ. ವಿಯೆಟ್ನಾಮೀಸ್ ಸಂಸ್ಕೃತಿಯಲ್ಲಿ ಸ್ನೇಕ್ ವೈನ್ ಆರೋಗ್ಯ ಮತ್ತು ಪುರುಷತ್ವವನ್ನು ಸುಧಾರಿಸುತ್ತದೆ ಎಂದು ಕೆಲವು ವ್ಯಕ್ತಿಗಳು ನಂಬುತ್ತಾರೆ. ಹಾವಿನ ಮಾಂಸವನ್ನು ಚರ್ಮಕ್ಕೆ ಸಂಬಂಧಿಸಿದ ಕಾಯಿಲೆಗಳಿಗೆ ಬಳಸಲಾಗುತ್ತದೆ, ಆದರೆ ಪಿತ್ತ, ಮೂಳೆಗಳು ಮತ್ತು ಹಾವಿನ ಚರ್ಮವನ್ನು ಮೈಗ್ರೇನ್ ಮತ್ತು ಕೀಲು ನೋವಿನಂತಹ ಕಾಯಿಲೆಗಳನ್ನು ಗುಣಪಡಿಸಲು ಬಳಸಲಾಗುತ್ತದೆ. ಚೀನಾದಲ್ಲಿ ‘ದೈವಿಕ…
ಬೆಂಗಳೂರಿನಲ್ಲಿ ನಡೆದ ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣ ಕುರಿತು ಇದೀಗ ಮಹತ್ವದ ಮಾಹಿತಿಯೊಂದು ತಿಳಿದು ಬಂದಿದೆ. ಬುಧವಾರ ಬೆಳ್ಳಂಬೆಳಗ್ಗೆ ತೀರ್ಥಹಳ್ಳಿಯಲ್ಲಿ ಎನ್ ಐಎ ಅಧಿಕಾರಿಗಳು ದಾಳಿ ನಡೆಸಿರುವ ಘಟನೆ ನಡೆದಿದೆ. ಸೊಪ್ಪುಗುಡ್ಡೆ, ಇಂದಿರಾನಗರ, ಬೆಟಮಕ್ಕಿಯಲ್ಲಿ ಬೆಂಗಳೂರಿನಿಂದ ಹೊರಟ ಐದು ವಾಹನದಲ್ಲಿ ಬಂದ ಎನ್ಐಎ ತಂಡ ತನಿಖೆ ನಡೆದಿದೆ. ತೀರ್ಥಹಳ್ಳಿ ಪಟ್ಟಣದಲ್ಲಿ 15 ಕ್ಕೂ ಹೆಚ್ಚು ಎನ್ಐಎ ಅಧಿಕಾರಿಗಳು ತನಿಖೆ ಮಾಡುತ್ತಿದ್ದಾರೆ. ಸ್ಥಳೀಯ ಪೊಲೀಸರ ನೆರವಿನ ಮೂಲಕ ಕೆಲ ಶಂಕಿತರ ಮನೆಗಳಲ್ಲಿ ಮಾಹಿತಿ ಕಲೆ ಹಾಕಲಾಗುತ್ತಿದೆ. ಸ್ಫೋಟ ಪ್ರಕರಣಕ್ಕೆ ಕುರಿತು ಕೆಲವರನ್ನು ವಶಕ್ಕೆ ಪಡೆಯುವ ಸಾಧ್ಯತೆ ಇದೆ ಎನ್ನಲಾಗಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ಉದರಂಪೊಯಿಲ್ ನಲ್ಲಿ ಎರಡೂವರೆ ವರ್ಷದ ಬಾಲಕಿಯ ಅಸಹಜ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ತಂದೆಯನ್ನು ಪೊಲೀಸರು ಬಂಧಿಸಿದ್ದಾರೆ. ಕಲಿಕಾವ್ ನಿವಾಸಿ ಮುಹಮ್ಮದ್ ಫೈಝ್ ಮತ್ತು ಶಹಬಾತ್ ದಂಪತಿಯ ಪುತ್ರಿ ಫಾತಿಮಾ ನಸ್ರಿನ್ ನಿನ್ನೆ ಸಂಜೆ ಮೃತಪಟ್ಟ ಬಾಲಕಿಯಾಗಿದ್ದಾರೆ. ಮಗುವಿನ ಸಾವು ಅಸ್ವಾಭಾವಿಕ ಎಂದು ತಾಯಿ ಹಾಗೂ ಸಂಬಂಧಿಕರು ಆರೋಪಿಸಿದ ಹಿನ್ನೆಲೆಯಲ್ಲಿ ಪೊಲೀಸರು ತಂದೆ ಫಯೀಜ್ ನನ್ನು ಬಂಧಿಸಿದ್ದಾರೆ. ಮರಣೋತ್ತರ ಪರೀಕ್ಷೆ ವರದಿ ಬಂದ ಬಳಿಕವಷ್ಟೇ ನರ್ಸ್ ಸಾವಿಗೆ ನಿಜವಾದ ಕಾರಣ ತಿಳಿಯಲಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ನನಶಹಬಾತ್ ಮತ್ತು ಆತನ ಸಂಬಂಧಿಕರು ಫಯೀಜ್ ಮಗುವನ್ನು ಹೊಡೆದು ಕೊಂದಿದ್ದಾರೆ ಎಂದು ಆರೋಪ ಮಾಡಿದ್ದಾರೆ. ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ಮಗುವಿಗೆ ಗಂಟಲಲ್ಲಿ ಆಹಾರ ಸಿಕ್ಕಿದೆ ಎಂಬ ನೆಪದಲ್ಲಿ ವಂದೂರಿನ ಖಾಸಗಿ ಆಸ್ಪತ್ರೆಗೆ ಕರೆತರಲಾಗಿತ್ತು. ಆದರೆ ಆಸ್ಪತ್ರೆಗೆ ತಲುಪುವ ಮೊದಲೇ ನಸ್ರೀನ್ ಮೃತಪಟ್ಟಿದ್ದಾಳೆ ಎಂದು ಅಧಿಕಾರಿಗಳು ಮಾಹಿತಿ ನೀಡಿ ನಂತರ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ನಂತರ ಮಗುವಿನ ಮೃತದೇಹವನ್ನು ಮಂಚೇರಿ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ರವಾನಿಸಲಾಗಿದೆ. ಕಾಳಿಕಾವು…
ಕಾಂಗ್ರೆಸ್ ಬೆಂಬಲಿಗರು ಕರೆ ಮಾಡಿ ನನ್ನನ್ನು ಬೆಂಬಲಿಸುವುದಾಗಿ ತಿಳಿಸಿದ್ದಾರೆ. ಕಾಂಗ್ರೆಸ್ ಬೆಂಬಲಿಗರೂ ತಮಗೆ ಬೆಂಬಲ ನೀಡುತ್ತಿದ್ದು, ಲೋಕಸಭೆ ಚುನಾವಣೆಯಲ್ಲಿ ತಮ್ಮ ಗೆಲುವಿಗೆ ಶ್ರಮಿಸುವುದಾಗಿ ಭರವಸೆ ನೀಡಿದ್ದಾರೆ ಎಂದು ಬಿಜೆಪಿಯ ಹಿರಿಯ ನಾಯಕ ಮತ್ತು ಮಾಜಿ ಉಪ ಮುಖ್ಯಮಂತ್ರಿ ಕೆಎಸ್ ಈಶ್ವರಪ್ಪ ಹೇಳಿದ್ದಾರೆ. ಶಿವಮೊಗ್ಗದಲ್ಲಿ ‘ಶುಭ ಮಂಗಳ’ಸಮಾವೇಶದಲ್ಲಿ ಗ್ರಾಮೀಣ ಮತಗಟ್ಟೆ ಮಟ್ಟದ ಕಾರ್ಯಕರ್ತರನ್ನುದ್ದೇಶಿಸಿ ಮಾತನಾಡಿದ ಅವರು, ಕಾಂಗ್ರೆಸ್ ಬೆಂಬಲಿಗರು ನನಗೆ ಕರೆ ಮಾಡಿ ಲೋಕಸಭೆ ಚುನಾವಣೆಯಲ್ಲಿ ನನ್ನನ್ನು ಬೆಂಬಲಿಸುವುದಾಗಿ ಭರವಸೆ ನೀಡಿದರು, ಆದರೆ ಅವರು ನನಗೆ ನೇರವಾಗಿ ಬೆಂಬಲ ವ್ಯಕ್ತಪಡಿಸದಿರಬಹುದು, ಆದರೆ ಚುನಾವಣೆಯಲ್ಲಿ ಅವರು ನನಗೆ ಮತ ಹಾಕಬಹುದು ಅಥವಾ ಹಾಕದೆಯೂ ಇರಬಹುದು. ಸಾರ್ವಜನಿಕವಾಗಿ, ಇದೆಲ್ಲ ತಿಳಿದಿದ್ದರೂ, ನಿಮ್ಮಲ್ಲಿ ಅನೇಕರು ಇಲ್ಲಿಗೆ ಬಂದಿದ್ದೀರಿ, ನಾನು ನಿಮ್ಮನ್ನು ಅಭಿನಂದಿಸಬೇಕು. ಚುನಾವಣಾ ರಾಜಕೀಯದಿಂದ ನಿವೃತ್ತಿಯಾಗುವಂತೆ ಕೇಳಿದಾಗ ಕೇಂದ್ರ ನಾಯಕರ ಮಾತಿಗೆ ಒಪ್ಪಿದ್ದೇನೆ ಎಂದರು. ಆದರೆ ನನ್ನ ಮಗನಿಗೂ ಲೋಕಸಭೆ ಚುನಾವಣೆಗೆ ಟಿಕೆಟ್ ನಿರಾಕರಿಸಲಾಗಿದೆ. ಇದು ನನ್ನ ತಪ್ಪೇ?” ಎಂದು ಪ್ರಶ್ನಿಸಿದ ಅವರು, “ನಾನು ರಾಷ್ಟ್ರೀಯ ನಾಯಕರ…
ಪತ್ನಿಯ ಅಕ್ರಮ ಸಂಬಂಧಕ್ಕೆ ಬೇಸತ್ತು ಗೋಡೆ ಮೇಲೆ ಡೆತ್ ನೋಟ್ ಬರೆದಿಟ್ಟು ಟೆಕ್ಕಿಯೊಬ್ಬ ಆತ್ಮಹತ್ಯೆ ಮಾಡಿಕೊಂಡಿದ್ದಾರೆಂಬ ಆರೋಪ ಬೆಂಗಳೂರಿನ ಗೋವಿಂದಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಮೃತ ಟೆಕ್ಕಿಯನ್ನು ಸೈಯ್ಯದ್ ಅಕ್ಮಲ್ ಅನ್ಸರ್ ಎಂದು ಗುರುತಿಸಲಾಗಿದ್ದು, ದಂಪತಿಗೆ ಇಬ್ಬರು ಮಕ್ಕಳಿದ್ದಾರೆ ಎನ್ನಲಾಗಿದೆ. ಇಬ್ಬರು ಮಕ್ಕಳಾದ ಬಳಿಕ ಮಹಿಳೆ ಅಕ್ರಮ ಸಂಬಂಧ ಇಟ್ಟುಕೊಂಡು, ಪತಿಗೆ ನಿರಂತರ ಕಿರುಕುಳ ನೀಡುತ್ತಿದ್ದಳು. ಇದೇ ಕಾರಣಕ್ಕೆ ಬೇಸತ್ತು, ಗೋಡೆಯ ಮೇಲೆ ತನ್ನ ಸಾವಿಗೆ ಕಾರಣರಾದವರ ಹೆಸರುಗಳನ್ನ ಬರೆದಿಟ್ಟು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ ಎಂದು ಮೃತನ ಪೋಷಕರು ಆರೋಪಿಸಿದ್ದಾರೆ. 7 ವರ್ಷಗಳ ಹಿಂದೆ ಅಕ್ಮಲ್ ಅನ್ಸರ್ಗೆ ವಿವಾಹವಾಗಿತ್ತು. ಆರಂಭದಲ್ಲಿ ಇಬ್ಬರೂ ಚೆನ್ನಾಗಿಯೇ ಇದ್ದರು. ಮಕ್ಕಳಾದ ಬಳಿಕ, ಮೃತ ಅಕ್ಮಲ್ ಅನ್ಸರ್ ಮೇಲೆ ಅನುಮಾನ ಪಟ್ಟು ಪತ್ನಿ ಕಿರುಕುಳ ಕೊಡುತ್ತಿದ್ದಳು ಎನ್ನಲಾಗಿದೆ. ಅಷ್ಟೇ ಅಲ್ಲದೇ ಆಗಾಗ ಪತಿ ಬಳಿ ಹಣಕ್ಕೆ ಬೇಡಿಕೆ ಸಹ ಇಡುತ್ತಿದ್ದಳು. ಒಂದು ತಿಂಗಳ ಹಿಂದೆ ಗಲಾಟೆ ಮಾಡಿಕೊಂಡು ಗೋವಿಂದಪುರದ ಗಂಡನ ಮನೆಯಿಂದ ಬಿಟಿಎಂ ಲೇಔಟ್…
ಹೋಟೆಲ್, ಪಿಜಿಗಳನ್ನೇ ಟಾರ್ಗೆಟ್ ಮಾಡಿ ಲ್ಯಾಪ್ ಟಾಪ್ ಗಳನ್ನು ಜೆಸ್ಸಿ ಅಗರ್ ವಾಲ್ ಎಂಬಾಕೆ ಕದಿಯುತ್ತಿದ್ದಳು ಎನ್ನಲಾಗಿದ್ದು, ಈಕೆ ಬ್ಯಾಂಕ್ ಉದ್ಯೋಗಿಯಾಗಿದ್ದಳು ಎಂದು ವರದಿ ತಿಳಿಸಿದೆ. ಹೋಟೆಲ್, ಪಿಜಿಗಳಲ್ಲಿ ರೂಂ ಪಡೆಯುವ ಈಕೆ ಕಳ್ಳತನಕ್ಕೆ ಸಂಚು ರೂಪಿಸುತ್ತಿದ್ದಳು. ಹೋಟೆಲ್ ಹಾಗೂ ಪಿಜಿಯಲ್ಲಿರವವರು ಟಿಫಿನ್, ಊಟಕ್ಕೆ ತೆರಳಿದ ಸಂದರ್ಭದಲ್ಲಿ ಕ್ಷಣಾರ್ಧದಲ್ಲಿ ಲ್ಯಾಪ್ ಟಾಪ್ ಕದ್ದು ಎಸ್ಕೇಪ್ ಆಗುತ್ತಿದ್ದಳು. ಎಚ್ ಎಎಲ್ ಪೊಲೀಸರು ಕಾರ್ಯಾಚರಣೆ ನಡೆಸಿ ಕಿಲಾಡಿ ಕಳ್ಳಿಯನ್ನು ಬಂಧಿಸಿದ್ದಾರೆ. ಇನ್ನೂ ಈಕೆ ಐಸಿಐಸಿಐ ಬ್ಯಾಂಕಿನಲ್ಲಿ ಕೆಲಸ ಮಾಡುತ್ತಿದ್ದಳು ಎಂದು ತಿಳಿದು ಬಂದಿದೆ. ಕೆಲಸ ಬಿಟ್ಟು ಕೋರಮಂಗಲ, ಇಂದಿರಾನಗರ, ಎಚ್ ಎಎಲ್ ಸುತ್ತಮುತ್ತ ಲ್ಯಾಪ್ ಟಾಪ್ ಗಳನ್ನು ಕಳ್ಳತನ ಮಾಡಿದ್ದಳು. ಸದ್ಯ ಲ್ಯಾಪ್ ಟಾಪ್ ಕಳ್ಳಿಯನ್ನು ಪೊಲೀಸರು ಬಂಧಿಸಿ ಹೆಚ್ಚಿನ ವಿಚಾರಣೆಯನ್ನು ನಡೆಸುತ್ತಿದ್ದಾರೆ. ಬಂಧಿತಳಿಂದ 10 ಲಕ್ಷ ಮೌಲ್ಯದ 24 ಲ್ಯಾಪ್ ಟಾಪ್ ಗಳನ್ನು ಸೀಜ್ ಮಾಡಲಾಗಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್…
ನಮ್ಮ ಬೆಂಗಳೂರು ಗ್ರೀನ್ ಸಿಟಿ, ಐಟಿ ಸಿಟಿ ಹೀಗೆ ವಿವಿಧ ಹೆಸರುಗಳಿಂದ ಕರೆಯಲ್ಪಡುವ ಬೆಂಗಳೂರು, ಇಡೀ ವಿಶ್ವದಲ್ಲಿ ಅತ್ಯುತ್ತಮ ವೈದ್ಯಕೀಯ ಸಿಬ್ಬಂದಿಯನ್ನು ಹೊಂದಿದೆ ಎಂದರೆ ತಪ್ಪಾಗಲಾರದು. ಅದಕ್ಕೆ ನಿದರ್ಶನವೆಂಬಂತೆ 21 ವರ್ಷ ವಯಸ್ಸಿನ ಯುವಕನ ದೇಹದಲ್ಲಿ ಎರಡು ವರ್ಷಗಳಿಂದ ಸಿಲುಕಿದ್ದ ಬುಲೆಟ್’ನ್ನು ನಮ್ಮ ಬೆಂಗಳೂರು ವೈದ್ಯರು ಯಶಸ್ವಿ ಶಸ್ತ್ರಚಿಕಿತ್ಸೆಯ ಮೂಲಕ, ಹೊರತೆಗೆದಿದ್ದಾರೆ. ಸಾಮಾನ್ಯವಾಗಿ ಅರಬ್ ದೇಶಗಳಲ್ಲಿ ಆಗಾಗ ಯುದ್ಧಗಳು ಸಂಭವಿಸುತ್ತಿರುತ್ತವೆ. ಆ ರೀತಿಯ ಯುದ್ಧಗಳಲ್ಲಿ ಪಾಲ್ಗೊಂಡಿದ್ದ ಯುವಕನಿಗೆ ಒಮ್ಮೆ ಯುದ್ಧದಲ್ಲಿ ಅನೇಕ ಗುಂಡುಗಳು ಹೊಕ್ಕಿದ್ದವು. ಈ ವೇಳೆ ಆತನ ತೋಳಿನ ಮೂಳೆ ಮುರಿದಿತ್ತು. ತದನಂತರ ಅಲ್ಲಿನ ವೈದ್ಯರು ಗುಂಡುಗಳನ್ನು ಹೊರ ತೆಗೆದು ಅದನ್ನು ಸರಿಪಡಿಸಿದ್ದರು. ಆದರೆ ಅದರಲ್ಲಿ ಒಂದು ಗುಂಡು ಮಾತ್ರ ಅವನ ಬಲ ಶ್ವಾಸಕೋಶದಲ್ಲಿ ಸಿಲುಕಿಕೊಂಡಿತ್ತು. ಆದರೆ ಗುಂಡು ಪತ್ತೆಹಚ್ಚಲು ಯೆಮನ್ ವೈದ್ಯರಿಗೆ ಸಾಧ್ಯವಾಗಲಿಲ್ಲ. ಬಳಿಕ ವಾಸಿಮ್ ನಗರದಲ್ಲಿ ಲಭ್ಯವಿರುವ ಇಂತಹ ಶಸ್ತ್ರಚಿಕಿತ್ಸೆಗಳ ಬಗ್ಗೆ ಓದಿದ ನಂತರ ಬೆಂಗಳೂರಿಗೆ ಶಸ್ತ್ರ ಚಿಕಿತ್ಸೆಗೆ ಬಂದಿದ್ದರು. ಆದರೆ ಆತನಿಗೆ ನಿರಂತರ ಕೆಮ್ಮು, ಉಸಿರಾಟದ…
ಕಳೆದ ವಿಧಾನಸಭಾ ಚುನಾವಣೆಯಲ್ಲಿ ಚಿಕ್ಕಬಳ್ಳಾಪುರ ಕ್ಷೇತ್ರದಿಂದ ಹೀನಾಯವಾಗಿ ಸೋತ ಡಾ.ಕೆ. ಸುಧಾಕರ್ ಅವರಿಗೆ ಇದೀಗ ಅದೇ ಲೋಕಸಭಾ ಕ್ಷೇತ್ರದಿಂದ ಬಿಜೆಪಿ ಟಿಕೆಟ್ ನೀಡುತ್ತಿದೆ. ಆದರೀಗ, ಟಿಕೆಟ್ ಘೋಷಣೆ ಆಗುತ್ತಿದ್ದಂತೆ ಚಿಕ್ಕಬಳ್ಳಾಪುರದ ಸ್ಥಳೀಯ ಬಿಜೆಪಿ ಕಾರ್ಯಕರ್ತರು ಸುಧಾಕರ್ ವಿರುದ್ಧ ರೊಚ್ಚಿಗೆದ್ದಿದ್ದಾರೆ. ಚಿಕ್ಕಬಳ್ಳಾಪುರದಲ್ಲಿ ಮಾಜಿ ಸಚಿವ ಡಾ.ಕೆ. ಸುಧಾಕರ್ ಅವರಿಗೆ ಬಿಜೆಪಿಯವರು ಲೋಕಸಭೆ ಟಿಕೆಟ್ ನೀಡಿದ್ದಾರೆ. ಆದರೆ ಈ ಬೆನ್ನಲ್ಲೇ ಬೀದಿಗಿಳಿದ ಬಿಜೆಪಿ ಕಾರ್ಯಕರ್ತರು ಸುಧಾಕರ್ ವಿರುದ್ಧ ರೊಚ್ಚಿಗೆದ್ದು, ಪೋಸ್ಟರ್ ಹಿಡಿದು ಪ್ರತಿಭಟನೆ ನಡೆಸಿದ್ದಾರೆ. ವೈರಲ್ ಆಗಿರುವ ಕರಿಮಣಿ ಮಾಲಿಕ ಹಾಡನ್ನು ತಿರುಚಿ ‘ಓ ನಲ್ಲಾ ನೀ ನಲ್ಲಾ, ಚಿಕ್ಕಬಳ್ಳಾಪುರಕ್ಕೆ ನೀ ಲಾಯಕ್ಕಲಾ’ ಎಂದು ಘೋಷಣೆ ಕೂಗಿದ್ದಾರೆ. ಸದ್ಯ ಈ ವಿಡಿಯೋ ಸೋಷಿಯಲ್ ಮೀಡಿಯಾಗಳಲ್ಲಿ ಭಾರೀ ವೈರಲ್ ಆಗ್ತಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ತಿರುವನಂತಪುರಂ ವೈದ್ಯಕೀಯ ಕಾಲೇಜಿನ ಯುವ ವೈದ್ಯರೊಬ್ಬರ ಮೃತದೇಹ ಪತ್ತೆಯಾಗಿದೆ. ವೈದ್ಯೆ ಅಭಿರಾಮಿ ಮೃತಪಟ್ಟಿದ್ದಾರೆ. ವೈದ್ಯೆ ಅಭಿರಾಮಿ ತಿರುವನಂತಪುರದ ವೆಲ್ಲನಾಡು ಮೂಲದವರು. ಮೆಡಿಕಲ್ ಕಾಲೇಜು ಸಮೀಪದ ಪಿಟಿ ಚಾಕೋ ನಗರದ ಫ್ಲ್ಯಾಟ್ ನಲ್ಲಿ ಮೃತದೇಹ ಪತ್ತೆಯಾಗಿದೆ. ಅರಿವಳಿಕೆ ಔಷಧಿಯ ಮಿತಿಮೀರಿದ ಸೇವನೆಯೇ ಸಾವಿಗೆ ಕಾರಣ ಎಂಬುದು ಪ್ರಾಥಮಿಕ ತನಿಖೆಯಿಂದ ತಿಳಿದು ಬಂದಿದೆ. ಪೊಲೀಸರ ಪ್ರಕಾರ ಇವರು ಮಧ್ಯಾಹ್ನದ ಊಟದ ನಂತರ ತನ್ನ ಮನೆ ಲಾಕ್ ಮಾಡಿದ್ದರು. ಈಕೆಯ ಫ್ಲ್ಯಾಟ್ ಮೇಟ್ಸ್ ಬಲವಂತದಿಂದ ಬಾಗಿಲು ಒಡೆದು ಒಳಗೆ ಹೋಗಿದ್ದಾರೆ. ಅಲ್ಲಿ ಆಕೆ ಪ್ರಜ್ಞಾಹೀನ ಸ್ಥಿತಿಯಲ್ಲಿ ತನ್ನ ಬೆಡ್ ಮೇಲೆ ಬಿದ್ದಿದ್ದರು. ಕೂಡಲೇ ಆಕೆಯನ್ನು ಆಸ್ಪತ್ರೆಗೆ ದಾಖಲು ಮಾಡಿದ್ದು, ಅಲ್ಲಿ ವೈದ್ಯರು ಆಕೆಯನ್ನು ಮೃತ ಎಂದು ಘೋಷಣೆ ಮಾಡಿದ್ದಾರೆ. ಪೊಲೀಸರು ಕೊಠಡಿಯಿಂದ ಸಿರಿಂಜ್ ಮತ್ತು ಡೆತ್ ನೋಟ್ ವಶಪಡಿಸಿಕೊಂಡಿದ್ದಾರೆ. ಮೃತದೇಹವನ್ನು ವೈದ್ಯಕೀಯ ಕಾಲೇಜು ಶವಾಗಾರಕ್ಕೆ ಸಾಗಿಸಲಾಗಿದೆ. ಮಿತಿಮೀರಿದ ಮಾದಕ ದ್ರವ್ಯ ಸೇವನೆಯಿಂದ ಆಕೆ ಸಾವನ್ನಪ್ಪಿದ್ದಾಳೆ ಎಂದು ಪೊಲೀಸರು ಶಂಕಿಸಿದ್ದಾರೆ. ಯುವ ವೈದ್ಯೆ ಕೊಲ್ಲಂನ ರಾಮನ್ ಕುಲಂಗರ…