Subscribe to Updates
Get the latest creative news from FooBar about art, design and business.
- ದಳವಾಯಿಹಳ್ಳಿಯಲ್ಲಿ ಕುಡಿಯುವ ನೀರಿಗೆ ಹಾಹಾಕಾರ: ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಗ್ರಾಮಸ್ಥರ ಆಕ್ರೋಶ, BPS ನಿಂದ ಟ್ಯಾಂಕರ್ ನೀರು ಪೂರೈಕೆ
- ಪಾವಗಡ: ದೊಡ್ಡಹಳ್ಳಿ ಸರ್ಕಾರಿ ಪ್ರೌಢಶಾಲೆಯಲ್ಲಿ 2026–27ನೇ ಸಾಲಿನ ದಾಖಲಾತಿ ಆರಂಭ
- ರಾಜ್ಯಸಭೆ ಚುನಾವಣೆಗೂ ಸಚಿವ ಸಂಪುಟ ಪುನರಾಚನೆಗೂ ಯಾವುದೇ ಸಂಬಂಧವಿಲ್ಲ: ಗೃಹ ಸಚಿವ ಜಿ. ಪರಮೇಶ್ವರ್ ಸ್ಪಷ್ಟನೆ
- ಸಿರಾದಲ್ಲಿ ಮೇ 26 ರಂದು ಜೆಡಿಎಸ್ ಪಕ್ಷದ ಪದಾಧಿಕಾರಿಗಳ ನೇಮಕಾತಿ ಕಾರ್ಯಕ್ರಮ
- ಮಕ್ಕಳ ಕೈಗೆ ಮೊಬೈಲ್ ಕೊಡುವ ಮುನ್ನ ಈ ಸುದ್ದಿ ಓದಿ: 1.98 ಲಕ್ಷ ರೂಪಾಯಿ ಕಳೆದುಕೊಂಡ ತುಮಕೂರಿನ ವ್ಯಕ್ತಿ!
- ಚಿಲ್ಲರೆಗಳಿಗೆ ನಾನು ಹೆದರುವ ಮಗನೇ ಅಲ್ಲ ಕೀಳುಮಟ್ಟದ ರಾಜಕಾರಣ ನನಗೆ ಗೊತ್ತಿಲ್ಲ: ಶಾಸಕ ಎಸ್. ಆರ್.ಶ್ರೀನಿವಾಸ್ ತಿರುಗೇಟು
- ತುಮಕೂರು ಜಿಲ್ಲೆಯಲ್ಲಿ 0.3 ಮಿ.ಮೀ. ಮಳೆ
- ಕೆಎಸ್ ಆರ್ ಟಿಸಿ ಬಸ್ ದರ ಏರಿಕೆ ಖಚಿತ: ಸಾರಿಗೆ ಸಂಸ್ಥೆ ಅಧ್ಯಕ್ಷ ಎಸ್.ಆರ್. ಶ್ರೀನಿವಾಸ್
Author: admin
ಬಾಗಲಕೋಟೆ ಲೋಕಸಭಾ ಕ್ಷೇತ್ರದಿಂದ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿ ಆಗಿದ್ದ ಕಾಂಗ್ರೆಸ್ ಮಹಿಳಾ ನಾಯಕಿ, ಕಾಂಗ್ರೆಸ್ ಶಾಸಕನ ಪತ್ನಿ ವೀಣಾ ಕಾಶಪ್ಪನವರ್ ಗೆ ಟಿಕೆಟ್ ಮಿಸ್ ಆದ ಹಿನ್ನೆಲೆಯಲ್ಲಿ ಅವರು ಬಾಗಲಕೋಟೆಯಿಂದ ಪಕ್ಷೇತರ ಸ್ಪರ್ಧೆಗೆ ಮುಂದಾಗಿದ್ದಾರೆ. ಈ ಮೂಲಕ ಕಾಂಗ್ರೆಸ್ ಶಾಸಕನ ಪತ್ನಿಯೇ ರಾಜ್ಯ ಕಾಂಗ್ರೆಸ್ ಪಾರ್ಟಿಗೆ ಮುಳುವಾಗಿದ್ದಾರೆ. ಬಾಗಲಕೋಟೆಯಿಂದ ಕಾಂಗ್ರೆಸ್, ಸಂಯುಕ್ತಾ ಪಾಟೀಲ್ಗೆ ಲೋಕಸಭಾ ಟಿಕೆಟ್ ಘೋಷಣೆ ಮಾಡಿದ ಬೆನ್ನಲ್ಲೇ ಭಾರೀ ನಿರಾಸೆಗೊಂಡ ವೀಣಾ ಕಾಶಪ್ಪನವರ್ ಕಾಂಗ್ರೆಸ್ಗೆ ಬಂಡಾಯದ ಬಿಸಿ ಮುಟ್ಟಿಸಲು ರೆಡಿಯಾಗಿದ್ದಾರೆ. ಪಕ್ಷವು ಟಿಕೆಟ್ ನಿರಾಕರಿಸಿದ್ದಕ್ಕೆ ಹಿನ್ನೆಲೆಯಲ್ಲಿ ಅಸಮಾಧಾನಗೊಂಡಿರುವ ಜಿಪಂ ಮಾಜಿ ಅಧ್ಯಕ್ಷೆ ಹಾಗೂ ಕಾಂಗ್ರೆಸ್ ಶಾಸಕ ವಿಜಯಾನಂದ ಕಾಶಪ್ಪನವರ್ ಅವರ ಪತ್ನಿ ವೀಣಾ ಕಾಶಪ್ಪನವರ್ ಸ್ವತಂತ್ರ ಅಭ್ಯರ್ಥಿಯಾಗಿ ಕಣಕ್ಕಿಳಿಯಲು ನಿರ್ಧರಿಸಿದ್ದಾರೆ. ಈ ಮೂಲಕ ಕಾಂಗ್ರೆಸ್ ಗೆ ದೊಡ್ಡ ಆಘಾತ ಎದುರಾಗಿದೆ. ವೀಣಾ ಅವರು ಪಕ್ಷೇತರವಾಗಿ ಸ್ಪರ್ಧಿಸುವುದನ್ನು ಅನೌನ್ಸ್ ಮಾಡಿದ ಬಳಿಕ ಎಚ್ಚೆತ್ತ ಕಾಂಗ್ರೆಸ್ ಕೆಪಿಸಿಸಿ ಕಾರ್ಯಾಧ್ಯಕ್ಷ ವಿನಯ್ ಕುಲಕರ್ಣಿ ಮುಂದಾಳತ್ವದಲ್ಲಿ ಸಂಧಾನ ಸಭೆ ನಡೆಸಿದೆ. ಆದರೂ ಕೂಡ ಇದು…
ತುಮಕೂರು: ಹಾಡಹಗಲೇ ತೋಟದ ಮನೆಗೆ ನುಗ್ಗಿದ ದರೋಡೆಕೋರರು ಮನೆ ಮಾಲೀಕನ ಮೇಲೆ ಗುಂಡು ಹಾರಿಸಿ ಮೂರು ಲಕ್ಷ ರೂ. ಹಣವನ್ನು ದೋಚಿರುವ ಘಟನೆ ಕುಣಿಗಲ್ ತಾಲೂಕಿನ ಕಸಬಾ ಹೋಬಳಿ ಉರ್ಕಿಹಳ್ಳಿ ಗ್ರಾಮದಲ್ಲಿ ನಡೆದಿದೆ. ಉರ್ಕೆಹಳ್ಳಿ ಗ್ರಾಮದ ಗಂಗಯ್ಯ (56) ಗುಂಡು ತಗುಲಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಗಂಗಯ್ಯ ಮತ್ತು ಅವರ ಕುಟುಂಬ ಕುಣಿಗಲ್ ತಾಲೂಕಿನ ರಾಷ್ಟ್ರೀಯ ಹೆದ್ದಾರಿ 75 ಕ್ಕೆ ಹೊಂದಿಕೊಂಡಂತೆ ಇರುವ ಉರ್ಕಹಳ್ಳಿ ಗ್ರಾಮದ ತೋಟದ ಮನೆಯಲ್ಲಿ ವಾಸಿಸುತ್ತಿದ್ದರು. ಬೈಕ್ ನಲ್ಲಿ ಬಂದಿದ್ದ ಇಬ್ಬರು ದರೋಡೆಕೋರರು ಮನೆ ಬಳಿ ಬಂದು ಕುಡಿಯಲು ನೀರು ಕೊಡಿ ಎಂದು ಪುಷ್ಪಲತಾ ಅವರನ್ನು ಕೇಳಿದ್ದಾರೆ. ಈ ವೇಳೆ ಪುಷ್ಪಲತಾ ತನ್ನ ತಾಯಿ ಗಂಗಮ್ಮನಿಗೆ ಯಾರೋ ಕುಡಿಯಲು ನೀರು ಕೇಳುತ್ತಿದ್ದಾರೆ ಎಂದು ತಿಳಿಸಿದ್ದು ಗಂಗಮ್ಮ ಕುಡಿಯಲು ನೀರು ತರಲೆಂದು ಮನೆ ಒಳಗೆ ಹೋಗಿದ್ದ ವೇಳೆ ಏಕಾಏಕಿ ದರೋಡೆಕೋರರು ಒಳಗೆ ನುಗ್ಗಿ ಮನೆಯಲ್ಲಿದ್ದ ಮೂರು ಲಕ್ಷ ರೂ. ನಗದನ್ನು ದೋಚಲು ಯತ್ನಿಸಿದ್ದಾರೆ. ಇದರಿಂದ ಗಾಬರಿಗೊಂಡ ಪುಷ್ಪಲತಾ ತೀವ್ರ ವಿರೋಧ…
ಸ್ಯಾಂಡಲ್ ವುಡ್ ನ ಬ್ಯೂಟಿ ಕ್ವೀನ್ ರಮ್ಯಾ ಅವರು ರಾಜಕೀಯದ ಕಾರಣಕ್ಕೆ ಸಡನ್ ಆಗಿ ನಟನೆಯಿಂದ ದೂರಾಗಿದ್ದರು. ಆದರೆ ಹಲವು ಸಮಯಗಳ ನಂತರ ‘ಉತ್ತರಕಾಂಡ’ ಸಿನಿಮಾವನ್ನು ಅವರು ಒಪ್ಪಿಕೊಂಡಾಗ ಜನರು ತುಂಬಾ ಉತ್ಸುಕರಾಗಿದ್ದರು. ಆದರೆ ಈಗ ರಮ್ಯಾ ಅವರು ತಮ್ಮ ಅಭಿಮಾನಿಗಳಿಗೆ ನಿರಾಸೆ ಮಾಡಿದ್ದಾರೆ. ‘ಉತ್ತರಕಾಂಡ’ ಸಿನಿಮಾದಿಂದ ಹೊರಬಂದಿರುವುದಾಗಿ ಅವರು ಬ್ರೇಕಿಂಗ್ ನ್ಯೂಸ್ ನೀಡಿದ್ದಾರೆ. ಸೋಶಿಯಲ್ ಮೀಡಿಯಾದಲ್ಲಿ ರಮ್ಯಾ ಅವರು ಆ್ಯಕ್ಟೀವ್ ಆಗಿದ್ದು, ಇನ್ಸ್ಟಾಗ್ರಾಮ್ ಸ್ಟೋರಿ ಮೂಲಕ ಅವರು ಈ ಸುದ್ದಿ ನೀಡಿದ್ದಾರೆ. ‘ಉತ್ತರಕಾಂಡ’ ಸಿನಿಮಾದಲ್ಲಿ ತಾವು ನಟಿಸುತ್ತಿಲ್ಲ ಎಂಬುದನ್ನು ಅವರು ತಿಳಿಸಿದ್ದಾರೆ. ಹಾಗಂತ ರಾಜಕೀಯದಲ್ಲಿ ತೊಡಗಿಕೊಳ್ಳಬಹುದೇ ಎಂಬ ಅನುಮಾನ ಮೂಡುವುದು ಸಹಜ. ಆದರೆ ಆ ಬಗ್ಗೆ ಕೂಡ ಅವರು ಸ್ಪಷ್ಟನೆ ನೀಡಿಲ್ಲ. ಡೇಟ್ಸ್ ಕೊರತೆಯಿಂದಾಗಿ ನಾನು ಉತ್ತರಕಾಂಡದಲ್ಲಿ ಕೆಲಸ ಮಾಡುತ್ತಿಲ್ಲ.ಚಿತ್ರತಂಡಕ್ಕೆ ನಾನು ಶುಭ ಹಾರೈಸುತ್ತೇನೆ’ ಎಂದು ರಮ್ಯಾ ಅವರು ಬರೆದುಕೊಂಡಿದ್ದಾರೆ. ರಮ್ಯಾ ಅವರು ಸಿನಿಮಾದಿಂದ ಹೊರಬಂದಿರುವುದರಿಂದ ಚಿತ್ರದ ಕೆಲಸಗಳು ಇನ್ನಷ್ಟು ತಡವಾಗಬಹುದು.ಎಲ್ಲವೂ ಅಂದುಕೊಂಡಂತೆ ಆಗಿದ್ದರೆ ರಮ್ಯಾ ಅವರು ರಾಜ್ ಬಿ.…
ಬೆಂಗಳೂರು: ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷವು ಪ್ರಸ್ತುತ ಲೋಕಸಭಾ ಚುನಾವಣೆಗೆ ಇಲ್ಲಿಯವರೆಗೆ ಒಟ್ಟು 23 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಣೆ ಮಾಡಿದ್ದು. ಈ ಹಿಂದೆ ದಿನಾಂಕ 15-03-2024, 19-03-2024, 23-03-2024 ರಂದು ಮೊದಲ, ಎರಡನೇ ಮತ್ತು ಮೂರನೇ ಪಟ್ಟಿಯಲ್ಲಿ 21 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಈಗಾಗಲೇ ಘೋಷಣೆ ಮಾಡಲಾಗಿತ್ತು. ಇಂದು ಚಿಕ್ಕೋಡಿ ಹಾಗೂ ಬಳ್ಳಾರಿ ಕ್ಷೇತ್ರಗಳಿಗೆ ಘೋಷಣೆ ಮಾಡಲಾಗಿದೆ. KRS ಪಕ್ಷವು ಲೋಕಸಭಾ ಚುನಾವಣೆಯಲ್ಲಿ ರಾಜ್ಯದ ಎಲ್ಲಾ 28 ಕ್ಷೇತ್ರಗಳಿಂದ ಸ್ಪರ್ಧಿಸಲಿದ್ದು, ಈ ನಿಟ್ಟಿನಲ್ಲಿ ಉಳಿದ ಕ್ಷೇತ್ರಗಳಿಗೆ ಅಭ್ಯರ್ಥಿಗಳ ಆಯ್ಕೆ ಪ್ರಕ್ರಿಯೆ ಮುಂದುವರೆದಿದ್ದು ಆ ಕ್ಷೇತ್ರಗಳಿಗೆ ಶೀಘ್ರದಲ್ಲಿಯೆ ಅಭ್ಯರ್ಥಿಗಳನ್ನು ಘೋಷಣೆ ಮಾಡಲಿದೆ. ಇಂದು ನಡೆದ ಪತ್ರಿಕಾಘೋಷ್ಠಿಯ ಸಂದರ್ಭದಲ್ಲಿ ಪಕ್ಷದ ರಾಜ್ಯಾಧ್ಯಕ್ಷರಾದ ರವಿ ಕೃಷ್ಣಾರೆಡ್ಡಿಯವರು ಅಭ್ಯರ್ಥಿಗಳನ್ನು ಮಾದ್ಯಮಗಳ ಮೂಲಕ ನಾಡಿನ ಜನತೆಗೆ ಪರಿಚಯಿಸಿದರು. ಇದೇ ಸಂದರ್ಭದಲ್ಲಿ ಅಭ್ಯರ್ಥಿಗಳಿಗೆ ಪಕ್ಷದ ಧ್ಯೇಯ, ತತ್ವ-ಸಿದ್ದಾಂತಗಳಿಗೆ ಹಾಗು ಪ್ರಾಮಾಣಿಕವಾಗಿ ಚುನಾವಣಾ ಪ್ರಚಾರ ಮಾಡುವ ಬಗ್ಗೆ ವಾಗ್ದಾನ ಮತ್ತು ಪ್ರತಿಜ್ಞೆ ಮಾಡಿಸಲಾಯಿತು. ಅಭ್ಯರ್ಥಿಗಳ ಪಟ್ಟಿ: ಚಿಕ್ಕೋಡಿ — ಕುಮಾರ್ ಸಂಭಾಜಿ ಡೋಂಗರೆ…
ಎಚ್. ಡಿ. ಕೋಟೆ: ವಿಧಾನಸಭಾ ಕ್ಷೇತ್ರವು ಚಾಮರಾಜನಗರ ಪರಿಶಿಷ್ಟ ಜಾತಿ ಮೀಸಲು ಕ್ಷೇತ್ರದ ವ್ಯಾಪ್ತಿಗೆ ಒಳಪಟ್ಟಿದ್ದು, ಈ ಕ್ಷೇತ್ರದಲ್ಲಿ ಒಟ್ಟು 282 ಮತಗಟ್ಟೆಗಳಿವೆ ಎಂದು ಸಹಾಯಕ ಚುನಾವಣಾಧಿಕಾರಿ ಕುಮುದಾ ತಿಳಿಸಿದರು. ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಎಚ್.ಡಿ.ಕೋಟೆಯಲ್ಲಿ ಒಟ್ಟು 2 ಲಕ್ಷದ 27ಸಾವಿರದ 921 ಮತದಾರರಿದ್ದು, 1ಲಕ್ಷದ 13 ಸಾವಿರದ 769 ಪುರುಷರು, 1ಲಕ್ಷ 14 ಸಾವಿರದ 140 ಮಹಿಳೆಯರು , 3,433 ವಿಶೇಷ ಚೇತನರು ಹಾಗೂ 85 ವರ್ಷಕ್ಕೆ ಮೇಲ್ಪಟ್ಟವರು 3713 ಮತದಾರರಿದ್ದಾರೆ ಎಂದು ತಿಳಿಸಿದರು. ಚುನಾವಣೆಯಲ್ಲಿ ಅಕ್ರಮಗಳನ್ನು ತಡೆಯಲು ಮೂರು ಚೆಕ್ ಪೋಸ್ಟ್ ಗಳನ್ನು ಹಾಕಲಾಗಿದೆ. ಮತ್ತೆ ಹೊಸ ಮತದಾರರನ್ನ ಹಾಗೂ ಕಳೆದ ಸಾಲಿಗಿಂತಲೂ ಹೆಚ್ಚಿನ ಮತದಾನಕ್ಕಾಗಿ Ekhon ರೀತಿಯ ಜಾಗೃತಿ ಕಾರ್ಯಕ್ರಮ ಮಾಡಲಾಗುತ್ತಿದೆ. ವಿಶೇಷವಾಗಿ ಯಾವುದೇ ರೀತಿಯಲ್ಲಿ ಅಹಿತಕರ ಘಟನೆಗಳು ನಡೆಯದಂತೆ ಕಟ್ಟುನಿಟ್ಟಿನ ಕ್ರಮವಹಿಸಲಾಗಿದೆ ಎಂದರು. ಪತ್ರಿಕಾಗೋಷ್ಠಿಯಲ್ಲಿ ತಹಶೀಲ್ದಾರ ಶ್ರೀನಿವಾಸ್, ಪೋಲಿಸ್ ಉಪ ನಿರೀಕ್ಷಕ ಶಬೀರ್ ಹುಸೇನ್ ಹಾಜರಿದ್ದರು. ವರದಿ: ಮಲಾರ ಮಹದೇವಸ್ವಾಮಿ ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು…
ಪಾವಗಡ: ವದನಕಲ್ಲು ಗ್ರಾಮದಲ್ಲಿ ಪಾವಗಡ ಮತ್ತು ಚಳ್ಳಕೆರೆ ರಸ್ತೆಯಲ್ಲಿರುವ ನೆಲೆಸಿರುವಂತಹ ಇತಿಹಾಸ ಪ್ರಸಿದ್ಧ ಶ್ರೀ ಗುರು ತಿಪ್ಪೇರುದ್ರಸ್ವಾಮಿ ಬ್ರಹ್ಮರಥೋತ್ಸವ ಸಹಸ್ರಾರು ಭಕ್ತರ ಸಮ್ಮುಖದಲ್ಲಿ ವಿಜೃಂಭಣೆಯಿಂದ ನಡೆಯಿತು. ಮಂಗಳವಾರ ಸಾಯಂಕಾಲ 4:30 ಗಂಟೆಗೆ ದೇವಸ್ಥಾನದ ಎದುರು ಹೂವಿನಿಂದ ಅಲಂಕರಿಸಿದ ರಥದಲ್ಲಿ ಉತ್ಸವ ಮೂರ್ತಿಯನ್ನು ಪ್ರತಿಷ್ಠಾಪಿಸಿ ಪೂಜಾ ಕಾರ್ಯಗಳನ್ನು ನೆರವೇರಿಸಲಾಯಿತು ನಂತರ ರಥವನ್ನು ಎಳೆಯಲಾಯಿತು. ಭಕ್ತರು ರಥದ ಮೇಲೆ ಬಾಳೆ ಹಣ್ಣು, ಮಡಕ್ಕಿ ಎಸೆದು ತಮ್ಮ ಹರಕೆ ತೀರಿಸಿಕೊಂಡರು. ದೇವಾಲಯದಿಂದ ಸ್ವಲ್ಪ ದೂರದವರೆಗೂ ರಥವನ್ನು ಎಳೆಯಲಾಯಿತು. ಆಂಧ್ರಪ್ರದೇಶ ಸೇರಿದಂತೆ ತಾಲೂಕಿನ ವಿವಿಧ ಹಳ್ಳಿಗಳಿಂದ ಭಕ್ತರು ಆಗಮಿಸಿ ತಮ್ಮ ಹರಕೆ ತೀರಿಸಿಕೊಂಡರು. ದೇವಸ್ಥಾನಕ್ಕೆ ಬಂದಿರುವಂತ ಭಕ್ತಾದಿಗಳಿಗೆ ಅನ್ನದಾನ ವ್ಯವಸ್ಥೆ ಮಾಡಲಾಗಿತ್ತು. ಜೊತೆಗೆ ಮಜ್ಜಿಗೆ ಪಾನಕ, ಹೆಸರುಬೇಳೆ, ಪ್ರಸಾದ ವಿತರಣೆ ಮಾಡಲಾಯಿತು. ಇದೇ ಗ್ರಾಮದ ಗ್ರಾಮ ಪಂಚಾಯಿತಿ ಸದಸ್ಯ ನಾಗೇಂದ್ರಪ್ಪ ಅವರು ತಿಪ್ಪೇರುದ್ರ ಸ್ವಾಮಿಗೆ ಸುಮಾರುಮುಕ್ಕಾಲು ಕೆ.ಜಿ. ಬೆಳ್ಳಿ ಕಿರೀಟವನ್ನು ಅರ್ಪಿಸಿದರು. ಇದೇ ವೇಳೆ ಚುನಾವಣಾ ಸ್ವೀಪ್ ಸಮಿತಿ, ತಾಲೂಕು ಪಂಚಾಯಿತಿ, ತಾಲೂಕು ಆಡಳಿತದ ವತಿಯಿಂದ ಮತದಾರರ…
ಮಧುಗಿರಿ: ತಾಲೂಕಿನ ಜಿಡಿಪಾಳ್ಯ ಮಜರೆ ಆರ್.ಗೊಲ್ಲಹಳ್ಳಿಯಲ್ಲಿ ಸರ್ಕಾರಿ ನಿಯಮಗಳನ್ನು ಗಾಳಿಗೆ ತೂರಿ ಅಕ್ರಮವಾಗಿ ನಡೆಸುತ್ತಿರುವ ಬಾರ್ ಅಂಡ್ ರೆಸ್ಟೋರೆಂಟ್ ಅನ್ನು ಜಪ್ತಿ ಮಾಡಬೇಕು ಎಂದು ಒತ್ತಾಯಿಸಿ, ಕಾಳಜಿ ಫೌಂಡೇಶನ್ ವತಿಯಿಂದ ತಹಶೀಲ್ದಾರ್ ಸಿಬ್ಗತ್ ಉಲ್ಲಾ ಅವರಿಗೆ ಮನವಿ ಪತ್ರ ಸಲ್ಲಿಸಲಾಯಿತು. ತಾಲೂಕಿನ ಮಿಡಿಗೇಶಿ ಹೋಬಳಿಯ ಜಿಡಿಪಾಳ್ಯ ಮಜರೆ ಆರ್.ಗೊಲ್ಲಹಳ್ಳಿಯ ಖಾತ ನಂಬರ್ – 11 ಸರ್ವೇ ನಂಬರ್ 29/19 ರಲ್ಲಿ 30 ಗುಂಟೆ ಜಮೀನಿದ್ದು, ಸದರಿ ಜಮೀನು ವ್ಯವಸಾಯಕ್ಕೆ ಯೋಗ್ಯವಾಗಿದ್ದು, ಯಾವುದೇ ಭೂ ಪರಿವರ್ತನೆ ಆಗಿಲ್ಲದಿದ್ದರೂ ಸಹ ಅಧಿಕಾರಿಗಳು ವಾಣಿಜ್ಯ ಭೂ ಪ್ರದೇಶ ಎಂದು ವರದಿ ನೀಡಿ ತರಾತುರಿಯಲ್ಲಿ ಬಾರ್ ಅಂಡ್ ರೆಸ್ಟೋರೆಂಟ್ ತೆರೆಯಲು ಅನುಕೂಲ ಮಾಡಿಕೊಟ್ಟಿರುತ್ತಾರೆ ಹಾಗೂ ಗಡಿ ಭಾಗವಾಗಿರುವುದರಿಂದ ಆಂಧ್ರ ಜನರು ಮದ್ಯ ಸೇವನೆಗಾಗಿ ಈ ಸ್ಥಳಕ್ಕೆ ಬಂದು ಅನೇಕ ಗಲಭೆಗಳನ್ನು ನಡೆಸುವ ಸಂಭವವಿದ್ದು, ಇದಕ್ಕೆ ಕಾರಣರಾದ ಸಂಬಂಧಿಸಿದ ಅಧಿಕಾರಿಗಳನ್ನು ಕೂಡಲೇ ಅಮಾನತು ಮಾಡಿ ಭೂ ಪರಿವರ್ತನೆ ಆಗದೆ ವ್ಯವಸಾಯಕ್ಕೆ ಯೋಗ್ಯವಿರುವ ಜಮೀನನ್ನು ವಾಣಿಜ್ಯಕ್ಕೆ ನೀಡಿರುವ ಜಮೀನು ಮಾಲೀಕರ…
ಬೆಂಗಳೂರು: ಕೇಂದ್ರ ಸರ್ಕಾರ ರಾಜ್ಯಕ್ಕೆ 2.30 ಲಕ್ಷ ಸಾವಿರ ಕೋಟಿ ಹಣ ಬರ ಪರಿಹಾರಕ್ಕೆ ನೀಡಿದೆ. ಆದರೂ ಕಾಂಗ್ರೆಸ್ ಹಣ ನೀಡಿಲ್ಲವೆಂದು ವ್ಯವಸ್ಥಿತವಾಗಿ ಸುಳ್ಳು ಹೇಳುವ ಕೆಲಸ ಮಾಡುತ್ತಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹೇಳಿದರು. ಹುಬ್ಬಳ್ಳಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ರಾಜ್ಯಕ್ಕೆ ಕೇಂದ್ರ ಸರ್ಕಾರ 2.30 ಲಕ್ಷ ಸಾವಿರ ಕೋಟಿ ಹಣ ಬಿಡುಗಡೆ ಮಾಡಿದೆ. ರಾಜ್ಯಕ್ಕೆ ಹಣಕಾಸು ಆಯೋಗ ಯಾವುದೇ ಶಿಫಾರಸು ಮಾಡಿಲ್ಲ. ಸಿಎಂ ಸಿದ್ದರಾಮಯ್ಯ ಅವರ ಆರೋಪಕ್ಕೆ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಉತ್ತರ ನೀಡಿದ್ದಾರೆ. ಬರ ನಿರ್ವಹಣೆಯಲ್ಲಿ ಕಾಂಗ್ರೆಸ್ ಸರ್ಕಾರ ಸಂಪೂರ್ಣ ವಿಫಲವಾಗಿದೆ ಎಂದು ವಾಗ್ದಾಳಿ ನಡೆಸಿದರು. ರಾಜ್ಯದಲ್ಲಿ ತೀವ್ರ ಬರಗಾಲ ಆವರಿಸಿದ್ದು, ಬರ ಪರಿಹಾರಕ್ಕಾಗಿ ಮನವಿ ಸಲ್ಲಿಸಿ 5 ತಿಂಗಳ ಕಳೆದರೂ ಕೇಂದ್ರ ಇನ್ನೂ ಬಿಡುಗಡೆ ಮಾಡಿಲ್ಲ. ಬರ ಪರಿಹಾರ ಸುಪ್ರೀಂ ಕೋರ್ಟ್ನಲ್ಲಿ ಆರ್ಟಿಕಲ್ 32ರ ಅಡಿಯಲ್ಲಿ ಕೇಂದ್ರ ಸರ್ಕಾರದ ವಿರುದ್ಧ ರಿಟ್ ಅರ್ಜಿ ಸಲ್ಲಿಸಿದ್ದೇವೆ ಎಂದು ಸಿಎಂ ಸಿದ್ದರಾಮಯ್ಯ ಅವರು…
ತುಮಕೂರು: ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಇಂಡಿಯಾ ಮೈತ್ರಿ ಕೂಟ ಅಧಿಕಾರಕ್ಕೆ ಬಂದರೆ ಇಡೀ ದೇಶದ ರೈತರ ಸಾಲಮನ್ನಾ ಮಾಡುವುದಾಗಿ ಗೃಹ ಸಚಿವ ಡಾ. ಜಿ ಪರಮೇಶ್ವರ್ ಹೇಳಿಕೆ ನೀಡಿದ್ದಾರೆ. ತುಮಕೂರಿನಲ್ಲಿ ಕಾಂಗ್ರೆಸ್ ಗ್ಯಾರಂಟಿಗಳನ್ನು ತಿಳಿಸಿದ ಗೃಹ ಸಚಿವ ಪರಮೇಶ್ವರ್, ಇಂಡಿಯಾ ಮೈತ್ರಿ ಕೂಟ ಅಧಿಕಾರಕ್ಕೆ ಬಂದರೆ ಇಡೀ ದೇಶದ ರೈತರ ಸಾಲಮನ್ನಾ, ರೈತರ ರಕ್ಷಣೆ ಖಾಯ್ದೆ ಹೊಸ ಕಾನೂನು ರಚನೆ ಮತ್ತು ಕೃಷಿ ಕ್ಷೇತ್ರಕ್ಕೆ ಜಿಎಸ್ಟಿ ಹಾಕಲ್ಲ ಎಂದು ತಿಳಿಸಿದ್ದಾರೆ. ಯುವಕರಿಗೆ ಕೌಶಲ್ಯ ಅಭಿವೃದ್ಧಿ ಟ್ರೈನಿಂಗ್ ಜೊತೆಗೆ 1 ಲಕ್ಷ ರೂ. ಬೆಂಬಲ. ಮಹಾಲಕ್ಷ್ಮಿ ಯೋಜನೆ ಅಡಿ ಮಹಿಳೆಯರಿಗೆ 1 ಲಕ್ಷ ರೂ. ಖಾತೆಗೆ ಹಾಕಲಾಗುತ್ತದೆ. ಜೊತೆಗೆ ಮೇಕೆದಾಟು ಯೋಜನೆಯನ್ನು ಕಾರ್ಯಗತ ಮಾಡೇ ಮಾಡುತ್ತೇವೆ ಎಂದು ಭರವಸೆ ನೀಡಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ತುಮಕೂರು: ಎಸ್ ಎಸ್ ಎಲ್ ಸಿ ಪರೀಕ್ಷೆ ಬರೆಯುತ್ತಿದ್ದ ವಿದ್ಯಾರ್ಥಿ ಒಬ್ಬ ಕುಸಿದು ಬಿದ್ದು ಮೃತಪಟ್ಟಿದ್ದಾನೆ, ಅಲ್ಲದೇ ಮತ್ತೊಂದು ಪರೀಕ್ಷೆ ಕೇಂದ್ರದಲ್ಲಿ ಮತ್ತೊಬ್ಬ ವಿದ್ಯಾರ್ಥಿ ಅಸ್ವಸ್ಥಗೊಂಡಿರುವ ಘಟನೆ ತುರುವೇಕೆರೆ ಪಟ್ಟಣದಲ್ಲಿ ಇರುವ ಎಸ್ ಎಸ್ ಎಲ್ ಸಿ ಪರೀಕ್ಷಾ ಕೇಂದ್ರದಲ್ಲಿ ನಡೆದಿದೆ. ಮೋಹನ್ ಕುಮಾರ್ 16 ಮೃತ ವಿದ್ಯಾರ್ಥಿಯಾಗಿದ್ದಾನೆ. ಮತ್ತೊಬ್ಬ ವಿದ್ಯಾರ್ಥಿ ರೋಹಿತ್ ಎಂಬಾತ ಅಸ್ವಸ್ಥಗೊಂಡಿದ್ದಾನೆ. ಚಿಕ್ಕನಾಯಕನಹಳ್ಳಿ ತಾಲೂಕಿನ ಚಿಕ್ಕರಾಪುರ ನಿವಾಸಿ ಮೋಹನ್ ಕುಮಾರ್ ತುರುವೇಕೆರೆ ತಾಲೂಕಿನ ಲೋಕಮ್ಮನಹಳ್ಳಿ ಗೇಟ್ ಕಂಚಿರಾಯ ನಿವಾಸ ಪ್ರೌಢಶಾಲೆಯಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದ. ಸೋಮವಾರ ತುರುವೇಕೆರೆ ಪಟ್ಟಣದ ದಬ್ಬೇಘಟ್ಟ ರಸ್ತೆಯ ಸರಸ್ವತಿ ಬಾಲಿಕಾ ಪ್ರೌಢಶಾಲೆಯ ಪರೀಕ್ಷಾ ಕೇಂದ್ರದಲ್ಲಿ ಪರೀಕ್ಷೆ ಬರೆಯುವೆ ವೇಳೆ ಅಶ್ವಸ್ಥಗೊಂಡಿದ್ದ. ತಕ್ಷಣವೇ ತುರುವೇಕೆರೆ ತಾಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿ ಜಿಲ್ಲಾ ಆಸ್ಪತ್ರೆಗೆ ಕರೆದುಕೊಂಡು ಹೋಗುವ ಮಾರ್ಗ ಮಧ್ಯೆ ಆಂಬುಲೆನ್ಸ್ ನಲ್ಲಿಯೇ ಮೃತಪಟ್ಟಿದ್ದಾನೆ. ಮೋಹನ್ ಕುಮಾರ್ ಕೆಲ ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಎಂದು ತಿಳಿದು ಬಂದಿದೆ. ಪರೀಕ್ಷೆಗೆ ಸುಮಾರು ಒಂದು ಗಂಟೆಗಳವರೆಗೆ ಉತ್ತರ ಪತ್ರಿಕೆ ಬರೆದಿದ್ದ.…