Subscribe to Updates
Get the latest creative news from FooBar about art, design and business.
- ದಳವಾಯಿಹಳ್ಳಿಯಲ್ಲಿ ಕುಡಿಯುವ ನೀರಿಗೆ ಹಾಹಾಕಾರ: ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಗ್ರಾಮಸ್ಥರ ಆಕ್ರೋಶ, BPS ನಿಂದ ಟ್ಯಾಂಕರ್ ನೀರು ಪೂರೈಕೆ
- ಪಾವಗಡ: ದೊಡ್ಡಹಳ್ಳಿ ಸರ್ಕಾರಿ ಪ್ರೌಢಶಾಲೆಯಲ್ಲಿ 2026–27ನೇ ಸಾಲಿನ ದಾಖಲಾತಿ ಆರಂಭ
- ರಾಜ್ಯಸಭೆ ಚುನಾವಣೆಗೂ ಸಚಿವ ಸಂಪುಟ ಪುನರಾಚನೆಗೂ ಯಾವುದೇ ಸಂಬಂಧವಿಲ್ಲ: ಗೃಹ ಸಚಿವ ಜಿ. ಪರಮೇಶ್ವರ್ ಸ್ಪಷ್ಟನೆ
- ಸಿರಾದಲ್ಲಿ ಮೇ 26 ರಂದು ಜೆಡಿಎಸ್ ಪಕ್ಷದ ಪದಾಧಿಕಾರಿಗಳ ನೇಮಕಾತಿ ಕಾರ್ಯಕ್ರಮ
- ಮಕ್ಕಳ ಕೈಗೆ ಮೊಬೈಲ್ ಕೊಡುವ ಮುನ್ನ ಈ ಸುದ್ದಿ ಓದಿ: 1.98 ಲಕ್ಷ ರೂಪಾಯಿ ಕಳೆದುಕೊಂಡ ತುಮಕೂರಿನ ವ್ಯಕ್ತಿ!
- ಚಿಲ್ಲರೆಗಳಿಗೆ ನಾನು ಹೆದರುವ ಮಗನೇ ಅಲ್ಲ ಕೀಳುಮಟ್ಟದ ರಾಜಕಾರಣ ನನಗೆ ಗೊತ್ತಿಲ್ಲ: ಶಾಸಕ ಎಸ್. ಆರ್.ಶ್ರೀನಿವಾಸ್ ತಿರುಗೇಟು
- ತುಮಕೂರು ಜಿಲ್ಲೆಯಲ್ಲಿ 0.3 ಮಿ.ಮೀ. ಮಳೆ
- ಕೆಎಸ್ ಆರ್ ಟಿಸಿ ಬಸ್ ದರ ಏರಿಕೆ ಖಚಿತ: ಸಾರಿಗೆ ಸಂಸ್ಥೆ ಅಧ್ಯಕ್ಷ ಎಸ್.ಆರ್. ಶ್ರೀನಿವಾಸ್
Author: admin
ಅಯೋಧ್ಯೆ ರಾಮಮಂದಿರಕ್ಕಾಗಿ ರಾಮಲಲ್ಲಾ ವಿಗ್ರಹವನ್ನು ರಚಿಸಿದ ಶಿಲ್ಪಿ ಅರುಣ್ ಯೋಗಿರಾಜ್ ‘ಬಾಲ ರಾಮನʼ ದೇವರ ಶಿಲ್ಪ ಕೆತ್ತಿದ್ದಾರೆ. ಈ ವಿಷಯವನ್ನು ಸ್ವತಃ ಅರುಣ್ ಯೋಗಿರಾಜ್ ಹಂಚಿಕೊಂಡಿದ್ದಾರೆ. ಮೈಸೂರು ಮೂಲದ ಕಲಾವಿದ ಅರುಣ್ ಯೋಗಿರಾಜ್ ತಾವು ಅಯೋಧ್ಯೆಯಲ್ಲಿ ಬಿಡುವಿನ ವೇಳೆಯಲ್ಲಿ ʻಚಿಕ್ಕ ರಾಮಲಲ್ಲಾ ಮೂರ್ತಿ’ಯನ್ನು ಕೆತ್ತಿರುವುದಾಗಿ ಹಂಚಿಕೊಂಡಿದ್ದಾರೆ. “ರಾಮ ಲಲ್ಲಾನ ಮುಖ್ಯ ಮೂರ್ತಿಯನ್ನು ಆಯ್ಕೆ ಮಾಡಿದ ನಂತರ ನಾನು ಅಯೋಧ್ಯೆಯಲ್ಲಿ ನನ್ನ ಬಿಡುವಿನ ವೇಳೆಯಲ್ಲಿ ಮತ್ತೊಂದು ಸಣ್ಣ ರಾಮ್ ಲಲ್ಲಾ ಮೂರ್ತಿಯನ್ನು ಕಲ್ಲಿನಲ್ಲಿ ಕೆತ್ತಿದ್ದೇನೆ” ಎಂದು ಯೋಗಿರಾಜ್ ಎಕ್ಸ್ ನಲ್ಲಿ ಪ್ರಕಟಿಸಿದ್ದಾರೆ. ಈ ಸಣ್ಣ ವಿಗ್ರಹವು ಮೂಲ ವಿಗ್ರಹದ ಕಪ್ಪು ಕಲ್ಲಿಗಿಂತ ಭಿನ್ನವಾದ, ತುಸು ಬಿಳುಪಾದ ಕಲ್ಲಿನಲ್ಲಿ ಕೆತ್ತಲ್ಪಟ್ಟಿದೆ. ಆದರೆ ʼಬಾಲಕ ರಾಮ’ನ ಶಿಲ್ಪದ ಪಡಿಯಚ್ಚಿನಂತಿದೆ. ಮೂಲ ಮೂರ್ತಿಯ ಎಲ್ಲ ಲಕ್ಷಣಗಳು ಇದರಲ್ಲೂ ಇವೆ. ಆದರೆ ಇದನ್ನು ಒಂದು ಕೈಯಲ್ಲಿ ಹಿಡಿದುಕೊಳ್ಳಬಹುದು ಎನ್ನಲಾಗಿದೆ. ಕಳೆದ ತಿಂಗಳು ಅಯೋಧ್ಯೆಯ ದೇವಾಲಯದ ಗರ್ಭಗುಡಿಯೊಳಗೆ ಎಂಟು ಅಡಿ ಎತ್ತರದ ಚಿನ್ನ ಲೇಪಿತ ಅಮೃತಶಿಲೆಯ ಸಿಂಹಾಸನದ ಮೇಲೆ ಇರಿಸಲಾಗಿರುವ…
ಆಮ್ ಆದ್ಮಿ ಪಕ್ಷಕ್ಕೆ (ಎಎಪಿ) 2014ರಿಂದ 2022ರವರೆಗೆ ಸುಮಾರು 133.54 ಕೋಟಿ ರೂ.ಗಳ ಆರ್ಥಿಕ ನೆರವು ನೀಡಿವೆ ಎಂದು ಖಲಿಸ್ತಾನಿ ಭಯೋತ್ಪಾದಕ ಗುರುಪತ್ ವಂತ್ ಸಿಂಗ್ ಪನ್ನುನ್ ಆಮ್ ಆದ್ಮಿ ಪಕ್ಷದ ವಿರುದ್ಧ ಆರೋಪಿಸಿದ್ದಾನೆ. ಸಾಮಾಜಿಕ ಮಾಧ್ಯಮದಲ್ಲಿ ಪ್ರಸಾರವಾಗಿರುವ ವೀಡಿಯೊದಲ್ಲಿ, ಪನ್ನುನ್ ಅವರು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಆರ್ಥಿಕ ನೆರವಿನ ಬದಲಾಗಿ ,ದೇವಿಂದರ್ ಪಾಲ್ ಸಿಂಗ್ ಭುಲ್ಲರ್ ನನ್ನು ಬಿಡುಗಡೆ ಮಾಡಲು ಪ್ರಸ್ತಾಪಿಸಿದ್ದಾಗಿ ಎಂದು ಹೇಳಿದ್ದಾನೆ. ಭುಲ್ಲರ್ 1993 ರ ದೆಹಲಿ ಬಾಂಬ್ ಸ್ಫೋಟ ಪ್ರಕರಣದಲ್ಲಿ ಅಪರಾಧಿಯಾಗಿದ್ದು, ಈ ಬಾಂಬ್ ದಾಳಿಯ ಪರಿಣಾಮವಾಗಿ ಒಂಬತ್ತು ಸಾವುಗಳು ಮತ್ತು 31 ಮಂದಿ ಗಾಯಗೊಂಡಿದ್ದರು. ಭಯೋತ್ಪಾದಕ ಗುರುಪತ್ವಂತ್ ಸಿಂಗ್ ಪನ್ನುನ್ ಈ ಹಿಂದೆ ಭಾರತದ ವಿರುದ್ಧ ಬೆದರಿಕೆಗಳನ್ನು ಹಾಕಿದ್ದಾನೆ, ಅದರಲ್ಲೂ ಸಂಸತ್ತಿಗೆ ಬಾಂಬ್ ಬೆದರಿಕೆಯನ್ನು ಹಾಕಿದ್ದ. ಅದೃಷ್ಟವಶಾತ್, ಈ ಬೆದರಿಕೆಗಳು ಕಾರ್ಯರೂಪಕ್ಕೆ ಬಂದಿಲ್ಲ. ಪ್ರಸ್ತುತ ದೆಹಲಿ ಅಬಕಾರಿ ನೀತಿ “ಹಗರಣ” ದಲ್ಲಿ ಕೇಜ್ರೀವಾಲ್ ಬಂಧನದ ನಂತರ ಜಾರಿ ನಿರ್ದೇಶನಾಲಯದ ವಶದಲ್ಲಿದ್ದಾರೆ. ಬಂಧನದಿಂದ…
ಬೆಂಗಳೂರು , ಮುಂಬೈಯಂತಹ ಮಹಾನಗರಗಳಲ್ಲಿ ಟ್ರಾಫಿಕ್ ಜಾಂನದ್ದೇ ಕಿರಿ ಕಿರಿ.. ಸುಸ್ತಾಗಿ ಹೋಗುವಷ್ಟು ಟ್ರಾಫಿಕ್, ಅದರ ಜತೆಗೆ ಗಂಟೆಗಟ್ಟಲೆ ಕಾಯಬೇಕಾದ ಸ್ಥಿತಿ.. ಹೀಗಾಗಿ ಇಂತಹ ನಗರಗಳಲ್ಲಿ ಓಡಾಡುವುದನ್ನೇ ಜನ ನಿರಾಕರಿಸುತ್ತಾರೆ. ಹೀಗೆ ಇದೀಗ ಜೀವನವೇ ಒಂದು ಒತ್ತಡವಾಗಿ ಪರಿಣಮಿಸಿದೆ. ಸಾಮಾನ್ಯವಾಗಿ ಕೆಲಸದ ಒತ್ತಡ ಇರುವ ಉದ್ಯೋಗಿ ಆಫೀಸು ಕ್ಯಾಬಿನಲ್ಲಿ, ಅಥವಾ ಹೋಟೆಲ್ ಇನ್ನಿತರ ಸ್ಥಳಗಳಲ್ಲಿ ಕುಳಿತು ಕೆಲಸ ಮಾಡುವವರನ್ನು ಕಾಣಬಹುದು. ಅದರಲ್ಲೂ ಬೆಂಗಳೂರಿನಂತ ನಗರದಲ್ಲಿ ಇಂತಹ ದೃಶ್ಯ ಕಾಣಬಹುದು. ಆದರೆ ಇಲ್ಲೊಬ್ಬ ವ್ಯಕ್ತಿ ಸ್ಕೂಟರಿನಲ್ಲಿ ಪ್ರಯಾಣಿಸುತ್ತಾ ತನ್ನ ತೊಡೆಯ ಮೇಲೆ ಲ್ಯಾಪ್ಟಾಪ್ ಇರಿಸುತ್ತಾ ಆಫೀಸು ಕೆಲಸ ಮಾಡುತ್ತಾ ಹೋಗುತ್ತಿದ್ದಾನೆ. ಸದ್ಯ ಈ ದೃಶ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಸದ್ಯ ಬೆಂಗಳೂರಿನಲ್ಲಿ ನಡೆದ ದೃಶ್ಯ ಎಂದು ವೈರಲ್ ಆಗುತ್ತಿದೆ. ಆದರೆ ಇದಕ್ಕೆ ಯಾವುದೇ ಪುರಾವೆಗಳಲಿಲ್ಲ. ಅದರಲ್ಲೂ ಟ್ರೋಲ್ ಪೇಜ್ ಗಳು ಇದು ಬೆಂಗಳೂರಿನಲ್ಲಿ ನಡೆದ ಕತೆ ಎನ್ನುತ್ತಾ ಟ್ರೋಲ್ ಮಾಡುತ್ತಿದೆ. ಅಚ್ಚರಿ ಸಂಗತಿ ಎಂದರೆ ಸ್ಕೂಟಿ ಅಥವಾ ಬೈಕ್ ನಲ್ಲಿ ಮೊಬೈಲ್…
ಆಟೋ ಪಾರ್ಕಿಂಗ್ ವಿಚಾರವಾಗಿ ಬೆಂಗಳೂರಿನ ಬನಶಂಕರಿಯ ಪ್ರಗತಿಪರ ಬಡಾವಣೆಯಲ್ಲಿ ನಡೆದ ಗಲಾಟೆ ಪ್ರಕರಣ ಸಂಬಂಧ ಪೊಲೀಸರು ಮೂವರನ್ನು ಬಂಧಿಸಿದ್ದಾರೆ ಎಂದು ವರದಿ ತಿಳಿಸಿದೆ. ಸೈಯದ್ ತಾಹ, ತಾಹ ತಂದೆ ಕರೀಮ್ ಹಾಗು ಅಫ್ರೀದ್ ಸೇರಿದಂತೆ ಮೂವರನ್ನು ಪೊಲೀಸರು ಬಂಧಿಸಿದ್ದು, ಐಪಿಸಿ ಸೆಕ್ಷನ್ 143, 148 , 358 ಅಡಿ ಎಫ್ಐಆರ್ ದಾಖಲಾಗಿದೆ. ಘಟನೆಯಲ್ಲಿ ಬೇರೆಯವರ ಪಾತ್ರದ ಬಗ್ಗೆ ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ. ಇನ್ನು ಮತ್ತೊಂದೆಡೆ ಮನೆ ಮೇಲೆ ಹಾರಿಸಲಾಗಿರುವ ಭಗವಾಧ್ವಜದ ಕಾರಣಕ್ಕೆ ಹಲ್ಲೆ ಮಾಡಿರೋ ಶಂಕೆ ವ್ಯಕ್ತವಾಗಿದೆ. ಸಣ್ಣ ರಸ್ತೆಯ ಏರಿಯಾದ ಅಕ್ಕಪಕ್ಕದ ನಿವಾಸಿಗಳಾದ ಸುಕುಮಾರ್ ಹಾಗೂ ಸೈಯದ್ ತಾಹ ಎಂಬವರು ಆಟೋ ಪಾರ್ಕಿಂಗ್ ವಿಚಾರಕ್ಕೆ ಜಗಳವಾಡಿಕೊಂಡಿದ್ದರು. ಸುಕುಮಾರ್ ತಮ್ಮ ಮನೆಯ ಮುಂದೆ ಆಟೋ ನಿಲ್ಲಿಸಿಕೊಂಡಿದ್ದರು. ಸೈಯದ್ ತಾಹ ಮನೆಯ ಮುಂದೆ ಆತನ ಸಂಬಂಧಿ ಆಟೋ ನಿಲ್ಲಿಸಿದ್ದ. ವೇಗವಾಗಿ ಬಂದು ಆಟೋ ನಿಲ್ಲಿಸಿದ್ದಕ್ಕೆ ತಾಹ ಸಂಬಂಧಿಯನ್ನು ಪಕ್ಕದ ಮನೆ ನಿವಾಸಿ ಸುಕುಮಾರ್ ಹಾಗೂ ಕುಟುಂಬಸ್ಥರು ಪ್ರಶ್ನಿಸಿದ್ದರು. ಇದೇ ವಿಚಾರಕ್ಕೆ ಗಲಾಟೆ ನಡೆದಿದ್ದು…
ಮದ್ಯ ನೀತಿ ಪ್ರಕರಣದಲ್ಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಬಂಧನದ ವಿರುದ್ಧ ದೆಹಲಿ ಪೊಲೀಸರು ಪ್ರತಿಭಟನಾ ಮೆರವಣಿಗೆಗೆ ಅನುಮತಿ ನಿರಾಕರಿಸಿದ್ದಾರೆ. ಇಂದು ಪ್ರಧಾನಿ ನರೇಂದ್ರ ಮೋದಿ ಅವರ ಅಧಿಕೃತ ನಿವಾಸಕ್ಕೆ ಮುತ್ತಿಗೆ ಹಾಕಿ ಪ್ರತಿಭಟನೆಗೆ ಪಕ್ಷದ ನಾಯಕತ್ವ ಕರೆ ನೀಡಿದೆ. ಪೊಲೀಸರು ಅನುಮತಿ ನಿರಾಕರಿಸಿದ್ದರು. ಆದರೆ ಆಮ್ ಆದ್ಮಿ ಪಕ್ಷ ಅನುಮತಿಯಿಲ್ಲದೆ ಪಾದಯಾತ್ರೆ ನಡೆಸಲು ನಿರ್ಧರಿಸಿದೆ. ಈ ಹಿನ್ನೆಲೆಯಲ್ಲಿ ಪೊಲೀಸರು ಬಿಗಿ ಭದ್ರತೆ ಏರ್ಪಡಿಸಿದ್ದಾರೆ. ದೆಹಲಿಯ ಆಯಕಟ್ಟಿನ ಪ್ರಮುಖ ಪ್ರದೇಶಗಳಲ್ಲಿ ಕರ್ಫ್ಯೂ ವಿಧಿಸಲಾಗುವುದು. ತುಘಲಕ್ ರಸ್ತೆ, ಸಫ್ದರ್ ಜಂಗ್ ರಸ್ತೆ ಮತ್ತು ಕಮಲ್ ಅತಾತುರ್ಕ್ ಮಾರ್ಗದಲ್ಲಿ ಸಂಚಾರ ನಿರ್ಬಂಧಗಳನ್ನು ವಿಧಿಸಲು ನಿರ್ಧರಿಸಲಾಗಿದೆ. ಇಡಿ ಕಸ್ಟಡಿಯಲ್ಲಿ ಕೇಜ್ರಿವಾಲ್ ಅವರನ್ನು ಇನ್ನೂ ವಿಚಾರಣೆ ನಡೆಸಲಾಗುತ್ತಿದೆ. ಸಾಮಾಜಿಕ ಮಾಧ್ಯಮದಲ್ಲಿ ‘ಮೋದಿಯ ದೊಡ್ಡ ಭಯ, ಕೇಜ್ರಿವಾಲ್’ ಎಂಬ ಶೀರ್ಷಿಕೆಯೊಂದಿಗೆ ಪ್ರಚಾರವನ್ನು ಪ್ರಾರಂಭಿಸಿದ್ದರು. ಇದೇ ವೇಳೆ ಬಿಜೆಪಿ ಕೂಡ ಕೇಜ್ರಿವಾಲ್ ರಾಜೀನಾಮೆಗೆ ಆಗ್ರಹಿಸಿದೆ. ವೀರೇಂದ್ರ ಸಚ್ದೇವ ಅವರ ನೇತೃತ್ವದಲ್ಲಿ ಬಿಜೆಪಿ ಫಿರೋಜ್ ಷಾ ಕೋಟ್ಲಾ ಕ್ರೀಡಾಂಗಣದಿಂದ ದೆಹಲಿ ಸೆಕ್ರೆಟರಿಯೇಟ್ ಗೆ…
ಹೋಳಿ ಹಬ್ಬದ ಸಂಭ್ರಮ ಎಲ್ಲ ಕಡೆ ಆಚರಣೆ ಮಾಡಲಾಗುತ್ತಿದೆ. ಹಾಗೆನೇ ಇಲ್ಲೊಂದು ಕಡೆ ಮೆಟ್ರೋದಲ್ಲಿ ಯುವತಿಯರು ಹೋಳಿ ಸಂಭ್ರಮಾಚರಣೆಯಲ್ಲಿ ಪರಸ್ಪರ ರೋಮ್ಯಾನ್ಸ್ ಮೂಲಕ ಮಾಡಿದ್ದು, ಇದರ ವೀಡಿಯೋ ಇದೀಗ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗ್ತಿದೆ. ಈ ವೀಡಿಯೋಗೆ ಇದೀಗ ಎಲ್ಲಾ ಕಡೆ ನೆಟ್ಟಿಗರಿಂದ ಭಾರೀ ಟೀಕೆಗಳು ವ್ಯಕ್ತವಾಗುತ್ತಿದೆ. ಕೆಲವು ನೆಟ್ಟಿಗರಂತೂ ಯುವತಿಯರ ವಿರುದ್ಧ ದೆಹಲಿ ಮೆಟ್ರೋ ರೈಲು ನಿಗಮ ಈ ಕುರಿತು ಕ್ರಮ ಕೈಗೊಳ್ಳಬೇಕೆಂದು ಆಗ್ರಹ ಮಾಡಿದ್ದಾರೆ. ಲಹುನ್ ಮೂ ಲಗ್ ಗಯಾ ಎಂಬ ಹಾಡಿಗೆ ಯುವತಿಯರು ರೀಲ್ಸ್ ಮಾಡುತ್ತಾ ಬಣ್ಣ ಎರಚಿಕೊಳ್ಳುತ್ತಾ ರೊಮ್ಯಾನ್ಸ್ ಮಾಡುವ ದೃಶ್ಯವಿದೆ. ಇದನ್ನು ಮೆಟ್ರೋದಲ್ಲಿ ಕೆಲವು ನೋಡಿದರೂ ಗಮನ ಹರಿಸದೇ ತಮ್ಮ ಪಾಡಿಗೆ ತಾವಿದ್ದಾರೆ. ಮೆಟ್ರೋದಲ್ಲಿ ಈ ವೀಡಿಯೋವನ್ನು ನಿಜವಾಗಿಯೂ ಚಿತ್ರೀಕರಿಸಲಾಗಿದೆಯೇ ಎಂದು ಪರಿಶೀಲನೆ ಮಾಡಲಾಗುತ್ತಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
“‘ಭಾರತ್ ಮಾತಾ ಕೀ ಜೈ’ ಮತ್ತು ‘ಜೈ ಹಿಂದ್’ ಘೋಷಣೆಗಳನ್ನು ಆರಂಭಿಸಿದ್ದು ಇಬ್ಬರು ಮುಸ್ಲಿಮರು” ಎಂದು ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಹೇಳಿದ್ದಾರೆ. ಈ ಘೋಷಣೆಗಳನ್ನು ಬಿಟ್ಟುಕೊಡಲು ಸಂಘಪರಿವಾರ ಸಿದ್ಧವಿದೆಯೇ? ಎಂದು ಪ್ರಶ್ನಿಸಿದ್ದಾರೆ. ಪೌರತ್ವ ತಿದ್ದುಪಡಿ ಕಾಯ್ದೆ(ಸಿಎಎ) ವಿರುದ್ಧ ಸಿಪಿಐಎಂ ರಾಜ್ಯದಲ್ಲಿ ಆಯೋಜಿಸಿದ್ದ ನಾಲ್ಕನೇ ಸತತ ರ್ಯಾಲಿಯನ್ನು ಉದ್ದೇಶಿಸಿ ವಿಜಯನ್ ಮಾತನಾಡಿದ್ದು, ದೇಶದ ಇತಿಹಾಸ ಮತ್ತು ಸ್ವಾತಂತ್ರ್ಯ ಚಳವಳಿಗೆ ಮುಸ್ಲಿಂ ಆಡಳಿತಗಾರರು, ಸಾಂಸ್ಕೃತಿಕ ಪ್ರತಿಮೆಗಳು ಮತ್ತು ಅಧಿಕಾರಿಗಳ ಮಹತ್ವದ ಕೊಡುಗೆ ನೀಡಿದ್ದಾರೆ ಎಂದು ತಿಳಿಸಿದ್ದಾರೆ. ಐತಿಹಾಸಿಕ ಉದಾಹರಣೆಗಳೊಂದಿಗೆ ತಮ್ಮ ಸಮರ್ಥನೆಯನ್ನು ಬೆಂಬಲಿಸಿದ ವಿಜಯನ್, ಅಜೀಮುಲ್ಲಾ ಖಾನ್ ಎಂಬ ಮುಸ್ಲಿಂ ವ್ಯಕ್ತಿ ‘ಭಾರತ್ ಮಾತಾ ಕಿ ಜೈ’ ಘೋಷಣೆಯನ್ನು ರಚಿಸಿದ್ದಾರೆ ಎಂದು ಉಲ್ಲೇಖಿಸಿದ್ದಾರೆ. “ಈ ವೇಳೆ ಸಂಘಪರಿವಾರದ ಮುಖಂಡರು ‘ಭಾರತ್ ಮಾತಾ ಕಿ ಜೈ’ ಘೋಷಣೆ ಕೂಗುವಂತೆ ಹೇಳಿದ್ದಾರೆ. ಈ ಘೋಷಣೆಯನ್ನು ರೂಪಿಸಿದವರು ಅಜೀಮುಲ್ಲಾ ಖಾನ್ ಎಂದು ಸಂಘ ಪರಿವಾರಕ್ಕೆ ತಿಳಿದಿದೆಯೇ ಎಂದು ನನಗೆ ಖಚಿತವಿಲ್ಲ ಎಂದು ಸಂಘ ಪರಿವಾರದ ವಿರುದ್ಧ ಹರಿಹಾಯ್ದಿದ್ದಾರೆ.…
ನೀರಿನ ಬಿಕ್ಕಟ್ಟು ಉಲ್ಬಣಗೊಳ್ಳುತ್ತಿದ್ದಂತೆ, 15 ಲಕ್ಷಕ್ಕೂ ಹೆಚ್ಚು ಉದ್ಯೋಗಿಗಳು ಐಟಿ ಕಂಪನಿಗಳಿಗೆ ಮನೆಯಿಂದಲೇ ಕೆಲಸ ಮಾಡಲು ಅವಕಾಶ ನೀಡುವಂತೆ ಒತ್ತಾಯಿಸಿದ್ದಾರೆ, ಇದಕ್ಕೆ ತಜ್ಞರು ಸಹಮತ ವ್ಯಕ್ತಪಡಿಸಿದ್ದು, ಇದರಿಂದ ನಗರದಲ್ಲಿನ ಒತ್ತಡ ಕಡಿಮೆಯಾಗಲಿದೆ. ಜತೆಗೆ ನೀರಿನ ಬಿಕ್ಕಟ್ಟನ್ನು ನಿವಾರಿಸಲು ಸಹಾಯ ಮಾಡುತ್ತದೆ ಎಂದು ನಂಬಿದ್ದಾರೆ. 2,600 MLD ಗಳ ಅವಶ್ಯಕತೆಯ ವಿರುದ್ಧ ಬೆಂಗಳೂರು ದಿನಕ್ಕೆ ಸುಮಾರು 500 ಮಿಲಿಯನ್ ಲೀಟರ್ ನೀರಿನ (MLD) ಕೊರತೆಯನ್ನು ಎದುರಿಸುತ್ತಿರುವ ಕಾರಣ ಈ ಬೆಳವಣಿಗೆಯಾಗಿದೆ. ಆದ್ದರಿಂದ, ನೀರಿನ ಬಿಕ್ಕಟ್ಟು ಶಮನಗೊಳ್ಳುವ ತನಕ ಮನೆಯಿಂದಲೇ ಕೆಲಸ ಮಾಡಲು ಪ್ರೋತ್ಸಾಹಿಸುವಂತೆ ತಜ್ಞರು ಸರಕಾರವನ್ನು ಒತ್ತಾಯಿಸಿದ್ದಾರೆ. ಒಂದು ವರ್ಷದವರೆಗೆ ಮನೆಯಿಂದ ಕೆಲಸ ಮಾಡಲು ಅವಕಾಶ ನೀಡುವುದರಿಂದ ಸುಮಾರು 10 ಲಕ್ಷ ಜನರು ತಮ್ಮ ಊರುಗಳಿಗೆ ಮರಳಬಹುದು, ಇದರಿಂದಾಗಿ ಬೆಂಗಳೂರಿನ ಸಂಪನ್ಮೂಲಗಳ ಮೇಲೆ ಸ್ವಲ್ಪ ಒತ್ತಡ ಕಡಿಮೆ ಮಾಡಬಹುದು ಎನ್ನಲಾಗಿದೆ. 1980 ರ ದಶಕದಲ್ಲಿ, ನಗರದ ಜನಸಂಖ್ಯೆಯು 25 ರಿಂದ 30 ಲಕ್ಷದ ನಡುವೆ ಇತ್ತು, ಆದರೆ ಈಗ ಅದು 1.5 ಕೋಟಿಗೆ…
ಲೋಖಸಭೆ ಚುನಾವಣೆಗೆ ಬೆಂಗಳೂರು ಗ್ರಾಮಾಂತರ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ಡಾ.ಸಿ.ಎನ್. ಮಂಜುನಾಥ್ ಚುನಾವಣೆಯಲ್ಲಿ ಗೆಲ್ಲುವ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಕನಕಪುರದಲ್ಲಿ ಮಾತನಾಡಿದ ಡಾ.ಸಿ.ಎನ್. ಮಂಜುನಾಥ್, ಕನಕಪುರದಲ್ಲಿ ಬಿಜೆಪಿ-ಜೆಡಿಎಸ್ ಸಮ್ಮಿಲನ ಸಭೆ ನನಗೆ ಆತ್ಮವಿಶ್ವಾಸ ಹಿಮ್ಮಡಿಗೊಳಿಸಿದೆ. ಉರಿ ಬಿಸಿಲಿನಲ್ಲೂ ಜನರು ಕಿಕ್ಕಿರಿದು ತುಂಬಿದ್ದರು. ಈ ಬಾರಿ ನಾನು ಗೆಲ್ಲುವುದು ಶೇ. 100 ರಷ್ಟು ಖಚಿತವಾಗಿದೆ. ಟೀಕೆ ಟಿಪ್ಪಣಿಗಳಿಗೆ ನಗುವೇ ನನ್ನ ಉತ್ತರ ಎಂದರು. ಮಂಜುನಾಥ್ ಅವರಿಗೆ ಕ್ಷೇತ್ರ ಪರಿಚಯ ಇಲ್ಲ ಎಂದು ಕಾಂಗ್ರೆಸ್ ನಾಯಕರು ಹೇಳಿದ್ದಾರೆ. ನನಗೆ ಕ್ಷೇತ್ರ ಪರಿಚಯ ಇಲ್ಲದೇ ಇರಬಹುದು. ಆದರೆ ಜನ ಪರಿಚಯ ಇದ್ದಾರೆ. ನಿಮ್ಮ ಋಣ ತೀರಿಸುತ್ತೇವೆ ಅಂತಾ ಕ್ಷೇತ್ರದ ಜನರೇ ಹೇಳುತ್ತಿದ್ದಾರೆ. ಹೀಗಾಗಿ ವಿರೋಧಿಗಳ ಟೀಕೆ ಟಿಪ್ಪಣಿಗಳಿಗೆ ನಗುವೇ ನನ್ನ ಉತ್ತರ ಎಂದು ಮಂಜುನಾಥ್ ತಿಳಿಸಿದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ಬೆಂಗಳೂರು ನಗರಗಳಲ್ಲಿ ಇತ್ತೀಚೆಗೆ ಲೈಂಗಿಕ ದೌರ್ಜನ್ಯ ಪ್ರಕರಣಗಳು ವಿಪರೀತ ಆಗುತ್ತಿವೆ. ಕಾಮುಕರಿಗೆ ಎಷ್ಟೇ ಬುದ್ಧಿ ಕಲಿಸಿದರೂ ಮತ್ತೆ ಮತ್ತೆ ಹುಟ್ಟಿಕೊಳ್ಳುತ್ತಿದ್ದಾರೆ. ಹುಡಗಿಯರು, ಯುವತಿಯರು ಒಂಟಿಯಾಗಿ ಓಡಾಡದಂತಾಗಿದೆ. ಅಂತೆಯೇ ಬೆಂಗಳೂರು ನಗರದಲ್ಲಿ ಇದೀಗ ಮತ್ತೊಂದು ಇಂತಹ ಪ್ರಕರಣ ಬೆಳಕಿಗೆ ಬಂದಿದೆ. ಹೌದು, ಬೆಂಗಳೂರು ನಗರದ ನಡು ರಸ್ತೆಯಲ್ಲಿ ಕಾಮುಕನೋರ್ವ ವಿದ್ಯಾರ್ಥಿನಿಯೋರ್ವಳನ್ನು ಹಿಂಬಾಲಿಸಿ ಬಂದು ಆಕೆಯ ಖಾಸಗಿ ಅಂಗ ಮುಟ್ಟಿ ಅಸಭ್ಯವಾಗಿ ವರ್ತಿಸಿ ಕಿರುಕುಳ ನೀಡಿದ ಘಟನೆ ನಡೆದಿದೆ. ಈ ಘಟನೆಯು ಸುರಾನ ಕಾಲೇಜು ಸಮೀಪದ ಚಾಯ್ ಪಾಯಿಂಟ್ ಬಳಿ ನಡೆದಿದೆ ಎನ್ನಲಾಗಿದೆ. ಅಂದಹಾಗೆ, ಕಾಮುಕ ಕಿರುಕುಳ ನೀಡುತ್ತಿದ್ದಂತೆ ವಿದ್ಯಾರ್ಥಿನಿಯು ಸಹಾಯಕ್ಕೆ ಕೂಗಿದ್ದು, ಕೂಡಲೇ ಸ್ಥಳೀಯರು ಹಾಗೂ ವಿದ್ಯಾರ್ಥಿಗಳು ಅಲ್ಲಿಗೆ ಧಾವಿಸಿ ಆ ಪಾಪಿಯನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ. ಪೊಲೀಸರು ಲೈಂಗಿಕ ದೌರ್ಜನ್ಯ ಪ್ರಕರಣದಡಿ ಆರೋಪಿಯನ್ನು ಬಂಧಿಸಿದ್ದಾರೆ. ಬಂಧಿತನನ್ನು ಜಯನಗರ ನಿವಾಸಿ ಸುರೇಶ್(26) ಎಂದು ಗುರುತಿಸಲಾಗಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ…