Author: admin

ವೀಳ್ಯದೆಲೆ ಜೊತೆ ತುಳಸಿ ಬೀಜ ತಿಂದ್ರೆ ಹಲವು ಆರೋಗ್ಯ ಪ್ರಯೋಜನಗಳು: ವೀಳ್ಯದೆಲೆ ಮತ್ತು ತುಳಸಿ ಬೀಜಗಳನ್ನ ಒಟ್ಟಿಗೆ ಸೇವಿಸುವುದರಿಂದ ದೇಹಕ್ಕೆ ಹಲವಾರು ಆರೋಗ್ಯ ಪ್ರಯೋಜನಗಳಿವೆ ಎಂದು ಆರೋಗ್ಯ ತಜ್ಞರು ಹೇಳುತ್ತಾರೆ. ಇದನ್ನುಸೇವಿಸುದರಿಂದ ವಸಡು ಉರಿಯೂತ ಮತ್ತು ಹಲ್ಲುಗಳ ಹಳದಿ ಬಣ್ಣದಿಂದ ಪರಿಹಾರವನ್ನು ನೀಡುತ್ತದೆ. ಜೀರ್ಣಾಂಗ ವ್ಯವಸ್ಥೆಯು ಬಲಗೊಳ್ಳುತ್ತದೆ. ಹೊಟ್ಟೆಯ ಸಮಸ್ಯೆಗಳಿಗೆ ಪರಿಹಾರ ನೀಡುತ್ತದೆ. ಮಲಬದ್ಧತೆ ಮತ್ತು ಗ್ಯಾಸ್ ಸಮಸ್ಯೆಗಳು ನಿವಾರಣೆಯಾಗುತ್ತವೆ. ದೇಹದಲ್ಲಿ ರೋಗನಿರೋಧಕ ಶಕ್ತಿ ಹೆಚ್ಚಾಗುತ್ತದೆ. ಬಾಳೆಹಣ್ಣು – ತುಪ್ಪ ಜೊತೆಗೆ ತಿಂದರೆ ಇಷ್ಟೆಲ್ಲಾ ಪ್ರಯೋಜನ…!! ಬಾಳೆಹಣ್ಣು ಮತ್ತು ತುಪ್ಪ ಆರೋಗ್ಯಕ್ಕೆ ಬಹಳ ಪ್ರಯೋಜನಕಾರಿ ಪದಾರ್ಥಗಳಾಗಿವೆ. ಎರಡರಲ್ಲೂ ದೇಹಕ್ಕೆ ಅಗತ್ಯವಿರುವ ಎಲ್ಲಾ ಪೋಷಕಾಂಶಳು ಸಿಗುತ್ತವೆ. ಬಾಳೆಹಣ್ಣು ತಿನ್ನುವುದರಿಂದ ದೇಹಕ್ಕೆ ಸಾಕಷ್ಟು ಪ್ರೊಟೀನ್, ಫೈಬರ್ ಮತ್ತು ವಿಟಮಿನ್ ಸಿಗುತ್ತದೆ. ದೈಹಿಕ ದೌರ್ಬಲ್ಯಗಳನ್ನೂ ದೂರ ಮಾಡುತ್ತದೆ. ಜೀರ್ಣಕ್ರಿಯೆಯನ್ನು ಸುಧಾರಿಸುತ್ತದೆ. ಒತ್ತಡವನ್ನು ಕಡಿಮೆ ಮಾಡುತ್ತದೆ. ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸಲು ತುಪ್ಪ ತುಂಬಾ ಉಪಯುಕ್ತವಾಗಿದೆ. ವೈರಸ್, ಜ್ವರ, ಕೆಮ್ಮು, ಶೀತ ಇತ್ಯಾದಿಗಳಿಂದ ರಕ್ಷಣೆ ನೀಡುತ್ತದೆ. ನಮ್ಮತುಮಕೂರಿನ…

Read More

ಭಾರತದೊಂದಿಗೆ ರಾಜತಾಂತ್ರಿಕ ಸಂಬಂಧದಲ್ಲಿ ಬದಲಾವಣೆಯಾಗಲಿದೆ ಎಂದು, ಪಾಕಿಸ್ತಾನ ವಿದೇಶಾಂಗ ಸಚಿವ ಮೊಹಮ್ಮದ್ ಇಶಾಕ್ ದಾರ್ ಸುಳಿವು ನೀಡಿದ್ದಾರೆ. ಆಗಸ್ಟ್ 2019 ರಿಂದ ಸ್ಥಗಿತಗೊಂಡಿರುವ ಭಾರತದೊಂದಿಗೆ ವ್ಯಾಪಾರ ಸಂಬಂಧಗಳನ್ನು ಮರುಸ್ಥಾಪಿಸಲು ಪರಿಗಣಿಸುವುದಾಗಿ ಪಾಕಿಸ್ತಾನ ಹೇಳಿದೆ. ಕೇಂದ್ರ ಸರ್ಕಾರವು 370 ನೇ ವಿಧಿಯನ್ನು ರದ್ದುಗೊಳಿಸಿದ ನಂತರ, ಭಾರತದೊಂದಿಗಿನ ರಾಜತಾಂತ್ರಿಕ ಸಂಬಂಧವನ್ನು ಕಡಿದುಕೊಂಡಿರುವ ಪಾಕಿಸ್ತಾನವು ಮಂದಗತಿಯ ಆರ್ಥಿಕ ಬೆಳವಣಿಗೆ ಮತ್ತು ಹೊಸ ಹೂಡಿಕೆಗಳ ಕೊರತೆಯಿಂದಾಗಿ ವಿದೇಶಿ ಸಾಲಗಳನ್ನು ಮರುಪಾವತಿಸಲು ಹೆಣಗಾಡುತ್ತಿದೆ. ಬ್ರಸೆಲ್ಸ್‌ ನಲ್ಲಿ ನಡೆದ ಪರಮಾಣು ಶಕ್ತಿ ಶೃಂಗಸಭೆಯಲ್ಲಿ ಭಾಗವಹಿಸಿದ ನಂತರ ಲಂಡನ್ ‌ನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಇಶಾದ್, ಭಾರತದೊಂದಿಗೆ ವ್ಯಾಪಾರವನ್ನು ಪುನರಾರಂಭಿಸುವ ಬಗ್ಗೆ ಯೋಚಿಸುವುದಾಗಿ ಹೇಳಿದರು. ಭಾರತದೊಂದಿಗೆ ವ್ಯಾಪಾರ ವ್ಯವಹಾರಗಳನ್ನು ಗಂಭೀರವಾಗಿ ಪರಿಶೀಲಿಸಲಾಗುವುದು ಎಂದು ಪಾಕಿಸ್ತಾನ್ ಎಕ್ಸ್ ಪ್ರೆಸ್ ಟ್ರಿಬ್ಯೂನ್ ವರದಿ ಮಾಡಿದೆ. ಇತ್ತೀಚೆಗೆ ನಡೆದ ಪಾಕಿಸ್ತಾನ ಚುನಾವಣೆಯಲ್ಲಿ ಅಧಿಕಾರಕ್ಕೆ ಬಂದ ನಂತರ ಪ್ರಧಾನಿ ಮೋದಿ ಶಹಬಾಜ್ ಷರೀಫ್ ಅವರನ್ನು ಅಭಿನಂದಿಸಿದರು. ಇದು ಪಾಕಿಸ್ತಾನ ಮತ್ತು ಭಾರತ ನಡುವಿನ ವ್ಯಾಪಾರ ಸಂಬಂಧಗಳಲ್ಲಿ ಸುಧಾರಣೆಯನ್ನು ಸೂಚಿಸುತ್ತದೆ.…

Read More

ಭಾರತದಲ್ಲಿ ಜಾಸ್ತಿ ಮನೆ ಕೆಲಸ ಮಾಡುವವರು ಯಾರು ಗಂಡಸರಾ ಹೆಂಗಸರಾ ಅಂತ ಯಾರನ್ನಾದರೂ ಕೇಳಿದರೆ ಥಟ್ಟನೆ ಸರಿ ಉತ್ತರ ಬಂದೇ ಬರುತ್ತೆ. ಅದು ಹೆಂಗಸರು ಅಂತ. ಅದೇ ಪ್ರಶ್ನೆಯನ್ನು ಸ್ವಲ್ಪ ವಿಸ್ತರಿಸಿ ಕೇಳಿ. “ವಿಶ್ವದ ಇತರೆ ರಾಷ್ಟ್ರಗಳಿಗೆ ಹೋಲಿಸಿದರೆ ಭಾರತೀಯ ಮಹಿಳೆಯರು ಪುರುಷರಿಗಿಂತ ಎಷ್ಟು ಪಟ್ಟು ಹೆಚ್ಚು, ಈ ವೇತನವಿಲ್ಲದ ಮನೆಕೆಲಸ ಹಾಗೂ ಆರೈಕೆ ಕೆಲಸಗಳನ್ನು ಮಾಡುತ್ತಾರೆಂದು? ರೆಡಿಮೇಡ್ ಉತ್ತರ ನಿಮ್ಮಲ್ಲಿ ಇಲ್ಲ ಅಲ್ಲವೇ? ಈಗ ಅದಕ್ಕಾಗಿ ಉತ್ತರ ಹುಡುಕುತ್ತಾ ಅಧ್ಯಯನವೊಂದು ನಡೆದಿದೆ. ಆ ಸ್ಟಡಿ, ಇಂಟರೆಸ್ಟಿಂಗ್ ಮಾಹಿತಿಯನ್ನು ಹೊರಹಾಕಿದೆ. ಭಾರತದ ಮಹಿಳೆಯರು ವಿಶ್ವದ ಇತರ ದೇಶಗಳಿಗಿಂತ ಬರೋಬ್ಬರಿ 10 ಪಟ್ಟು ಹೆಚ್ಚು ಮನೆ ಕೆಲಸ ಮಾಡುತ್ತಾರಂತೆ! ಇದು ಮುಂಬೈನಲ್ಲಿರುವ ಇಂಟರ್ನ್ಯಾಶನಲ್ ಇನ್ಸ್ಟಿಟ್ಯೂಟ್ ಫಾರ್ ಪಾಪ್ಯುಲೇಶನ್ ಸೈನ್ಸಸ್ (ಐಐಪಿಎಸ್) ಮತ್ತು ಟಾಟಾ ಇನ್ಸ್ಟಿಟ್ಯೂಟ್ ಆಫ್ ಸೋಶಿಯಲ್ ಸೈನ್ಸಸ್ (ಟಿಐಎಸ್ಎಸ್) ಜಂಟಿಯಾಗಿ ನಡೆಸಿದ ಸಂಶೋಧನೆಯಾಗಿದ್ದು, ಅಲ್ಲಿ ನಮ್ಮ ಭಾರತೀಯ ಮಹಿಳೆಯರ ಮನೆಕೆಲಸದ ತೀವ್ರತೆಯ ಮಾಹಿತಿಯನ್ನು ಹಂಚಿಕೊಳ್ಳಲಾಗಿದೆ. ಮನೆ ಕೆಲಸದಲ್ಲೂ ವಿಶ್ವದಲ್ಲಿ ನಮ್ಮ ಮಹಿಳೆಯರೇ…

Read More

ವಿಶ್ವದ ಮೊದಲ ಫ್ಲೈಯಿಂಗ್ ಟ್ಯಾಕ್ಸಿ ಸೇವೆಯನ್ನು ಆರಂಭಿಸಲು ಕಾಲ ಸನ್ನಿಹಿತವಾಗಿದೆ. ಜಟಕಾ ಗಾಡಿ ಆಯ್ತು, ತದನಂತರ ಆಟೋರಿಕ್ಷಾ ಬಂತು. ಮುಂದೆ ಓಲಾ ಉಬರ್ ಕಾರುಗಳ ಅಬ್ಬರ. ಈಗ ಅದೂ ಹಳೆಯದಾಗಿದೆ. ಇನ್ಮುಂದೆ ಏರ್ ಟ್ಯಾಕ್ಸಿ ಬರಲಿದೆ. ಯಾವುದೇ ಸ್ಟಾಪ್ ಇಲ್ಲ, ಸಿಗ್ನಲ್ ಟ್ರಾಫಿಕ್ ಸಮಸ್ಯೆ ಇರಲ್ಲ. ಕೆಲವೇ ನಿಮಿಷಗಳ ಪ್ರಯಾಣದಲ್ಲಿ ಗಮ್ಯವನ್ನು ಸುರಕ್ಷಿತವಾಗಿ ಸೇರಿಕೊಳ್ಳಬಹುದು. ಎಲ್ಲ ಅಂದುಕೊಂಡಂತೆ 2025ರ ವೇಳೆ ಏರ್ ಟ್ಯಾಕ್ಸಿ ಸೇವೆ ಆರಂಭವಾಗುತ್ತದೆ. ಆದರೆ ಇದು ಶುರುವಾಗುತ್ತಿರುವುದು ಭಾರತದಲ್ಲಿ ಅಲ್ಲ, ಬದಲಿಗೆ ತೈಲ ಸಂಪತ್ ಭರಿತ ರಾಷ್ಟ್ರ ದುಬೈನಲ್ಲಿ. ದುಬೈನಲ್ಲಿ, ಅಮೆರಿಕಾ ಮೂಲದ ಜಾಬಿ ಏವಿಷೇಯನ್ ತನ್ನ ಸ್ವದೇಶಕ್ಕಿಂತ ಮೊದಲು ಅರಬ್ ರಾಷ್ಟ್ರದಲ್ಲಿ ಫ್ಲೈಯಿಂಗ್ ಟ್ಯಾಕ್ಸಿಯನ್ನು ಹಾರಿಸಲು ಎಲ್ಲಾ ರೀತಿಯಲ್ಲೂ ಸಿದ್ಧತೆಗಳನ್ನು ಮಾಡಿಕೊಳ್ಳುತ್ತಿದೆ. ಗಲ್ಫ್ ಎಮಿರೇಟ್‌ ನೊಂದಿಗೆ ಈ ವರ್ಷದ ಆರಂಭದಲ್ಲಿ ಶುರುವಾದ ಏರ್ ಟ್ಯಾಕ್ಸಿಯ ಕೆಲಸವು ವೇಗವಾಗಿ ಮುಂದುವರಿದಿದೆ ಎಂದು, ಜಾಬಿ ಏವಿಯೇಷನ್ ಕಾರ್ಯಾಚರಣೆಗಳ ಅಧ್ಯಕ್ಷ ಬೊನ್ನಿ ಸಿಮಿ ಸಂದರ್ಶನವೊಂದರಲ್ಲಿ ಹೇಳಿದ್ದಾರೆ. ಮೊದಲು ನಾವು ದುಬೈನಲ್ಲಿ ಈ…

Read More

ಬಿಯರ್ ಬಾಟಲ್ ಮೇಲೆ 50 ರೂಪಾಯಿ ಹೆಚ್ಚುವರಿ ಶುಲ್ಕ ವಿಧಿಸಿದ್ದಕ್ಕೆ ವ್ಯಕ್ತಿಯೊಬ್ಬ ಮರ ಏರಿ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಬಗ್ಗೆ ವರದಿಯಾಗಿದೆ. ಮಧ್ಯಪ್ರದೇಶದ ರಾಜ್ ‌ಗಢ್ ಜಿಲ್ಲೆಯಲ್ಲಿ ಈ ಘಟನೆ ನಡೆದಿದ್ದು, ರಾಜ್ ಗಢ್ ಜಿಲ್ಲೆಯ ನಿವಾಸಿ ಬ್ರಿಜ್‌ ಮೋಹನ್ ಶಿವಹರೆ ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿಯೆಂದು ತಿಳಿದು ಬಂದಿದೆ. ಮಧ್ಯಪ್ರದೇಶ ರಾಜ್ಯ ಸರ್ಕಾರವು 100 ಇರುವ ಮದ್ಯದ ಮೇಲೆ 20 ರೂ. ಹಾಗೂ ಬಿಯರ್ ಬಾಟಲ್ ಗೆ​ 30 ರೂ. ಹೆಚ್ಚಳ ಮಾಡಿದೆ. ಒಟ್ಟು 50 ರೂ. ಹೆಚ್ಚುವರಿ ಶುಲ್ಕ ವಿಧಿಸಿದಂತೆ ಆಗಿದೆ. ಇದನ್ನು ಪ್ರಶ್ನಿಸಿ ಬ್ರಿಜ್‌ ಮೋಹನ್ ಮುಖ್ಯಮಂತ್ರಿ ಸಹಾಯವಾಣಿ, ಜಿಲ್ಲಾಧಿಕಾರಿಗಳಿಗೆ, ಮಾನವ ಹಕ್ಕುಗಳ ಆಯೋಗ ಹಾಗೂ ಸ್ಥಳೀಯ ಪೊಲೀಸ್ ಠಾಣೆಗೆ ಫೆಬ್ರವರಿ ತಿಂಗಳಿನಲ್ಲಿಯೇ ದೂರು ನೀಡಿದ್ದರು. ಏಕಾಏಕಿ ಮದ್ಯದ ಬೆಲೆ ಏರಿಕೆ ಮಾಡಿದ್ದಕ್ಕೆ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದ. ಮದ್ಯದ ಹೆಚ್ಚುವರಿ ಶುಲ್ಕ ವಿಚಾರವಾಗಿ ಅಧಿಕಾರಿಗಳು ಯಾವುದೇ ಕ್ರಮ ತೆಗೆದುಕೊಳ್ಳುತ್ತಿಲ್ಲವೆಂದು ಬೇಸರಗೊಂಡಿದ್ದ ಬ್ರಿಜ್‌ ಮೋಹನ್‌, ಮರ ಏರಿ ಆತ್ಮಹತ್ಯೆಗೆ…

Read More

ಮೋದಿ ಹೆಸರನ್ನು ಹಾಕಿ ಕಾಗದ ಪ್ರಿಂಟ್‌ ಆಗಿರೋದ್ರ ಬಗೆಗಿನ ಸುದ್ದಿ ಈ ಹಿಂದೆಯೂ ವೈರಲ್ ಆಗಿತ್ತು. ಇದೀಗ ಈ ವಿಭಿನ್ನ ಮದುವೆ ಕಾಗದ ಕೂಡ ವೈರಲಾಗುತ್ತಿದೆ. ಸಂಗಾರೆಡ್ಡಿ ಜಿಲ್ಲೆಯ ಪಠಾಣ್ ಚೆರುವಿನ ವ್ಯಕ್ತಿಯೊಬ್ಬರು ತಮ್ಮ ಮಗನ ಮದುವೆಯ ಆಮಂತ್ರಣ ಪತ್ರಿಕೆ ಮುದ್ರಿಸಿದ, ಮದುವೆ ಕಾರ್ಡ್ ಈಗ ವೈರಲ್ ಆಗಿದೆ. ನಂದಿಕಾಂತಿ ನರಸಿಂಹ ಪಟಾನ್ ಚೆರುವಿನಲ್ಲಿ ಬಾಂಗ್ ಡೀಲರ್. ಇವರು ಪ್ರಧಾನಿ ನರೇಂದ್ರ ಮೋದಿಯವರ ಕಟ್ಟಾ ಅಭಿಮಾನಿ. ನರಸಿಂಹ ಅವರ ಪುತ್ರ ಸಾಯಿಕುಮಾರ್ ಮದುವೆ ಪತ್ರಿಕೆಗಳಲ್ಲಿ ನರೇಂದ್ರ ಮೋದಿ ಅವರ ಚಿತ್ರ ಮುದ್ರಿಸಿ, ‘ನನ್ನ ಮದುವೆಗೆ ನಿಮ್ಮ ಉಡುಗೊರೆ ನರೇಂದ್ರ ಮೋದಿ ಅವರಿಗೆ ಮತ ನೀಡಿ’ ಎಂದು ಮೋದಿ ಅವರ ಫೋಟೋವನ್ನು ಮುದ್ರಿಸಿ ಪ್ರಧಾನಿ ನರೇಂದ್ರ ಮೋದಿ ಕುರಿತಾಗಿ ಕುಟುಂಬಕ್ಕೆ ಇರುವ ಪ್ರೀತಿಯನ್ನು ವ್ಯಕ್ತಪಡಿಸಿದ್ದಾರೆ. ಮದುವೆಗೆ ಬರುವವರು ವಿಶೇಷ ಉಡುಗೊರೆಗಳನ್ನು ನೀಡುವ ಅಗತ್ಯವಿಲ್ಲ, ಬಿಜೆಪಿ ಪಕ್ಷಕ್ಕೆ ಮತ ನೀಡಿ ಎಂದು ಹೇಳಿದ್ದಾರೆ. ಈ ಮದುವೆಯ ಪತ್ರಿಕೆಯನ್ನು ಬಿಜೆಪಿ ಪಕ್ಷದ ನಾಯಕರು ನರೇಂದ್ರ ಮೋದಿ…

Read More

ಯೂಟ್ಯೂಬ್ ನಿಂದ ಕಾಶ್ಮೀರ್ ನಲ್ಲಿ ಬೆಳೆಯುವ ಸೇಬನ್ನು ಸಿಲಿಕಾನ್ ಸಿಟಿಯ ಹೊರವಲಯದಲ್ಲಿ ಬೆಳೆದು ಎಲ್ಲರನ್ನು ನಿಬ್ಬೆರಗಾಗುವಂತೆ ಮಾಡಿದ್ದಾರೆ. ಅಂದಹಾಗೆ ಕಾಶ್ಮಿರದ ಚುಮು ಚುಮು ಚಳಿ ಮಳೆಯಂತೆ ಬೀಳುವ ಮಂಜಿನ ನಡುವೆ ಬೆಳೆಯ ಬೇಕಾದ ಸೇಬನ್ನು ಸಿಲಿಕಾನ್ ಸಿಟಿ ಹೊರವಲಯದ ಹೊಸಕೋಟೆ ಬಳಿ ಬೆಳೆದಿದ್ದು, ರುಚಿಯಲ್ಲೂ ಕಾಶ್ಮೀರಿ ಸೇಬುವಿನಂತೆ ಎಲ್ಲರ ಮನಸೆಳೆದಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲೂಕಿನ ಸೂಲಿಬೆಲೆ ಬಳಿಯ ಸಿದ್ದೇನಹಳ್ಳಿ ಗ್ರಾಮದ ರೈತ ಬಸವರಾಜು, ಏನಾದ್ರು ವಿಭಿನ್ನವಾಗಿ ಬೆಳೆ ಬೆಳೆದು ಎಲ್ಲರಿಗೂ ಮಾದರಿಯಾಗಬೇಕು ಅಂತಿರುವಾಗಲೇ ಸೇಬು ಬೆಳೆ ಬೆಳೆಯುವ ವೀಡಿಯೋವನ್ನ ಯೂಟ್ಯೂಬ್ ನಲ್ಲಿ ನೋಡಿದ್ದರಂತೆ. ಹೀಗಾಗಿ ಯೂಟ್ಯೂಬ್ ನಲ್ಲಿ ವೀಡಿಯೋ ನೋಡಿ ಬಿಜಾಪುರದ ರೈತರನ್ನ ಸಂಪರ್ಕಿಸಿದ ರೈತ ಬಸವರಾಜು ನಂತರ ಬಿಜಾಪುರದಿಂದ 450 ಗಿಡಗಳನ್ನ ತಂದು ಇಲ್ಲಿ ನಾಟಿ ಮಾಡಿದ್ದಾರೆ. ಜೊತೆಗೆ ಸೇಬು ಗಿಡಗಳಿಗೆ ಯಾವುದೇ ರಾಸಾಯನಿಕ ಔಷದಿಗಳನ್ನ ಬಳಸದೆ ಕಪ್ಪು ಮಣ್ಣು, ಹೊಂಗೆ ಹಿಂಡಿ ಮತ್ತು ಬೇವಿನ ಹಿಂಡಿಯನ್ನ ಹಾಕಿ ಬೆಳೆ ಬೆಳೆದಿದ್ದು ಇದೀಗ ಭರ್ಜರಿ ಸೇಬು ಬೆಳೆ…

Read More

ಇದು ಇತಿಹಾಸದಲ್ಲಿಯೇ ಮೊದಲ ಪ್ರಕರಣವಾಗಿರಲಿದ್ದು, ಕೇರಳ ಸರ್ಕಾರವು ರಾಷ್ಟ್ರಪತಿ ದ್ರೌಪದಿ ಮುರ್ಮು ವಿರುದ್ದ ಸರ್ವೋಚ್ಚ ನ್ಯಾಯಾಲದ ಮೊರೆ ಹೋಗಿದೆ ಎಂದು ವರದಿ ತಿಳಿಸಿದೆ. ಕಳೆದ ನವೆಂಬರ್ ತಿಂಗಳಲ್ಲಿ ರಾಜ್ಯಪಾಲರು, ಮಸೂದೆಗಳನ್ನು ಅಂಗೀಕರಿಸದೇ ಬಾಕಿಯಿಟ್ಟು, ಸರ್ಕಾರದ ವಿರುದ್ದ ಪದೇಪದೇ ಗದಾಪ್ರಹಾರ ನಡೆಸುತ್ತಿದ್ದಾರೆಂದು ಕೇರಳ ಸರ್ಕಾರ, ಸುಪ್ರೀಂಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಿತ್ತು. ಈಗ, ಅದೇ ರೀತಿ ರಾಷ್ಟ್ರಪತಿಗಳ ವಿರುದ್ದ ಕೇರಳ ಸರ್ಕಾರ ಸುಪ್ರೀಂ ಮೆಟ್ಟಲೇರಿದೆ. ಇತ್ತೀಚೆಗೆ ಕೇರಳದ ಪಿಣರಾಯಿ ವಿಜಯನ್ ಸರ್ಕಾರ, ವಿಧಾನಸಭೆಯಲ್ಲಿ ನಾಲ್ಕು ಮಸೂದೆಗಳನ್ನು ಮಂಡಿಸಿ, ಅಂಗೀಕರಿಸಿ ರಾಷ್ಟ್ರಪತಿಯವರ ಅಂಕಿತಕ್ಕೆ ಕಳುಹಿಸಿತ್ತು. ಆದರೆ, ಇದುವರೆಗೂ ರಾಷ್ಟ್ರಪತಿಗಳಿಂದ ಅಂಕಿತ ಬಿದ್ದಿರಲಿಲ್ಲ. ಇದರಿಂದಾಗಿ, ಸರ್ಕಾರ ಸುಪ್ರೀಂಕೋರ್ಟ್ ನಲ್ಲಿ ಮಸೂದೆ ತ್ವರಿತ ವಿಲೇವಾರಿಗೆ ಅರ್ಜಿ ಸಲ್ಲಿಸಿದೆ. ಕೇರಳ ಸರ್ಕಾದ ಪರವಾಗಿ ಹಿರಿಯ ವಕೀಲ ಸಿ.ಕೆ. ಶಶಿ ವಾದ ಮಂಡಿಸಲಿದ್ದಾರೆ. ಕೇರಳ ಸರ್ಕಾರ, ರಾಷ್ಟ್ರಪತಿಯವರ ಕಾರ್ಯದರ್ಶಿ, ಕೇರಳದ ರಾಜ್ಯಪಾಲ ಆಸಿಫ್ ಮೊಹಮ್ಮದ್ ಖಾನ್, ರಾಜ್ಯಪಾಲರ ಕಾರ್ಯದರ್ಶಿ ಮತ್ತು ಕೇಂದ್ರ ಸರ್ಕಾರವನ್ನು ಪ್ರತಿವಾದಿಗಳು ಎಂದು ಅರ್ಜಿಯಲ್ಲಿ ಹೆಸರಿಸಲಾಗಿದೆ. ವಿಶ್ವವಿದ್ಯಾಲಯ ಕಾನೂನುಗಳ…

Read More

ಕರ್ನಾಟಕದ ಮತ್ತು ತಮಿಳುನಾಡಿನ ಕಾಡುಗಳ್ಳ, ಆನೆ ದಂತ ಚೋರ ವೀರಪ್ಪನ್‌ ಪುತ್ರಿ ವಿದ್ಯಾರಾಣಿ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸಲು ಮುಂದಾಗಿದ್ದಾರೆ ಎಂದು ವರದಿ ತಿಳಿಸಿದೆ. ತಮಿಳುನಾಡಿನ ಕೃಷ್ಣಗಿರಿ ಲೋಕಸಭೆ ಕ್ಷೇತ್ರದಲ್ಲಿ ನಾಮ್‌ ತಮಿಳರ್ ಕಚ್ಚಿ‌ (NTK) ಪಕ್ಷದಿಂದ ವಿದ್ಯಾರಾಣಿ ಸ್ಪರ್ಧಿಸುವುದು ಖಚಿತವಾಗಿದೆ ಎಂದು ವರದಿ ತಿಳಿಸಿದೆ. ಈ ಕುರಿತು ಎನ್‌ ಟಿಕೆ ಪಕ್ಷದ ಮುಖ್ಯಸ್ಥ ಸೀಮನ್‌ ಘೋಷಣೆ ಮಾಡಿದ್ದಾರೆ ಎನ್ನಲಾಗಿದೆ. ಕೆಲ ದಿನಗಳ ಹಿಂದಷ್ಟೇ ವಿದ್ಯಾರಾಣಿ ಎನ್‌ ಟಿಕೆ ಪಕ್ಷವನ್ನು ಸೇರ್ಪಡೆಯಾಗಿದ್ದರು. ನಟ-ನಿರ್ದೇಶಕ ಸೀಮನ್‌ ನೇತೃತ್ವದ ಪಕ್ಷ ಅದಾಗಿದೆ. “ವಿದ್ಯಾರಾಣಿ ತಮಿಳುನಾಡಿನ ಕೃಷ್ಣಗಿರಿ ಲೋಕಸಭೆ ಕ್ಷೇತ್ರದಲ್ಲಿ ಎನ್‌ ಟಿಕೆ ಪಕ್ಷದ ಅಭ್ಯರ್ಥಿಯಾಗಿ ಸ್ಪರ್ಧಿಸಲಿದ್ದಾರೆ” ಎಂಬುದಾಗಿ ಎನ್‌ ಟಿಕೆ ಮುಖ್ಯಸ್ಥ ಸೀಮನ್‌ ಮಾಹಿತಿ ನೀಡಿದ್ದಾರೆ. ವಿದ್ಯಾರಾಣಿ ವೃತ್ತಿಯಿಂದ ವಕೀಲರಾಗಿದ್ದಾರೆ. ಇವರು ಬೆಂಗಳೂರಿನಲ್ಲಿ ಐದು ವರ್ಷ ಕಾನೂನು ಅಧ್ಯಯನ ಮಾಡಿದ್ದಾರೆ ಮತ್ತು ಕೃಷ್ಣಗಿರಿಯಲ್ಲಿ ಶಾಲೆಯೊಂದನ್ನು ಮುನ್ನಡೆಸುತ್ತಿದ್ದಾರೆ ಎನ್ನಲಾಗಿದೆ. ಆ ಮೂಲಕ ಬಡಮಕ್ಕಳ ಶಿಕ್ಷಣಕ್ಕೆ ಆದ್ಯತೆ ನೀಡಿದ್ದಾರೆ. 2020ರಲ್ಲಿ ಬಿಜೆಪಿ ಸೇರ್ಪಡೆಯಾಗಿದ್ದ ವಿದ್ಯಾರಾಣಿ, ರಾಜ್ಯ ಬಿಜೆಪಿ ಯುವ…

Read More

ಸೈಬರ್ ಕಳ್ಳರು ಮುಂಬೈ ಪೊಲೀಸರ ಸೋಗಿನಲ್ಲಿ ಹೈಕೋರ್ಟ್ ನ ಇಬ್ಬರು ನ್ಯಾಯಮೂರ್ತಿಗಳಿಗೆ, ಕರೆ ಮಾಡಿ ಬೆದರಿಕೆ ಹಾಕಿರುವ ಆರೋಪದಡಿ, ಬೆಂಗಳೂರಿನ ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ಪ್ರತ್ಯೇಕ ಎರಡು ಪ್ರಕರಣಗಳು ದಾಖಲಾಗಿವೆ. ನ್ಯಾಯಮೂರ್ತಿಗಳ ನಿರ್ದೇಶನದ ಮೇರೆಗೆ ಹೈಕೋರ್ಟ್‍ನ ಭದ್ರತಾ ಅಧಿಕಾರಿಗಳಾದ ಇನ್‍ಸ್ಪೆಕ್ಟರ್ ಜಿ. ಶೋಭಾ ಮತ್ತು ಸಬ್ ‍ಇನ್‍ಸ್ಪೆಕ್ಟರ್ ಎ.ಆರ್. ರಘುನಾಯ್ಕ ನೀಡಿದ ದೂರಿನನ್ವಯ, ಪ್ರತ್ಯೇಕ ಎರಡು ಪ್ರಕರಣಗಳು ದಾಖಲಿಸಿಕೊಂಡಿರುವ ವಿಧಾನಸೌಧ ಠಾಣಾ ಪೊಲೀಸರು ತನಿಖೆ ಕೈಗೊಂಡಿರುವುದಾಗಿ ತಿಳಿಸಿದ್ದಾರೆ. ಮಾ.15ರಂದು ಹೈಕೋರ್ಟ್‍ನ ಇಬ್ಬರು ನ್ಯಾಯಮೂರ್ತಿಗಳಿಗೆ ಕರೆ ಮಾಡಿರುವ ಅಪರಿಚಿತ ಇಬ್ಬರು ಆರೋಪಿಗಳು, ಡಿ.ಒ.ಪಿ.ಟಿ ಇಲಾಖೆಯಿಂದ ಕರೆ ಮಾಡುತ್ತಿದ್ದೇನೆ. ತಾವು ಒಂದು ಸಿಮ್ ಕಾರ್ಡ್ ಹೊಂದಿದ್ದೀರಿ. ಆ ಸಿಮ್ ಕಾರ್ಡ್‍ನಿಂದ ಕಾನೂನು ಬಾಹಿರವಾಗಿ ಜಾಹೀರಾತು ಹಾಗೂ ಆಕ್ಷೇಪಾರ್ಹ ಮೆಸೇಜ್ ಹಾಕುತ್ತಿದ್ದೀರಿ. ಇದರಿಂದ ನಿಮ್ಮ ಮೇಲೆ ಮುಂಬೈನ ಅಂದೇರಿ ಈಸ್ಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ಹೇಳಿದ್ದಾರೆ ಎನ್ನಲಾಗಿದೆ. ಬೇಕಾದರೆ ಈ ಕರೆಯನ್ನು ಪೊಲೀಸರಿಗೆ ವರ್ಗಾವಣೆ ಮಾಡುತ್ತೇನೆ, ಅವರ ಜೊತೆ ಮಾತನಾಡಿ ನಿಮ್ಮ ಪ್ರಕರಣವನ್ನು…

Read More