Author: admin

ಕಾಂಗ್ರೆಸ್ ಪಕ್ಷದವರು ತೆರಿಗೆ ಕಟ್ಟಿಲ್ಲ. ಹೀಗಾಗಿ ಅವರ ಬ್ಯಾಂಕ್ ಖಾತೆಗಳು ಸೀಜ್ ಆಗಿವೆ. ಈ ವಿಚಾರದಲ್ಲಿ ಕೇಂದ್ರ ಸರ್ಕಾರದ ಯಾವುದೇ ಪಾತ್ರವಿಲ್ಲ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹೇಳಿದರು. ಮಾಧ್ಯಮಗಳ ಜೊತೆ ಮಾತನಾಡಿದ ಪ್ರಹ್ಲಾದ್ ಜೋಶಿ, ನಾವು ಯಾವುದೇ ಆಕೌಂಟ್ ಗಳನ್ನ ಸೀಜ್ ಮಾಡಿಲ್ಲ. ಕಾಂಗ್ರೆಸ್ ನವರು ಟ್ಯಾಕ್ಸ್ ಕಟ್ಟಬೇಕಿತ್ತು ಆದರೆ ಕಟ್ಟಿಲ್ಲ ಹೀಗಾಗಿ ಅಕೌಂಟ್ ಸೀಜ್ ಆಗಿದೆ ನಾವು ಕಾಂಗ್ರೆಸ್ ವೀಕ್ ಮಾಡಿಲ್ಲ.  ಜನರೇ ಕಾಂಗ್ರೆಸ್ ವೀಕ್  ಮಾಡಿದ್ದಾರೆ ಎಂದು ಲೇವಡಿ ಮಾಡಿದರು. ದೆಹಲಿ ಸಿಎಂ ಅರವಿಂದ ಕೇಜ್ರಿವಾಲ್ ದುರಹಂಕಾರದಿಂದ ಇಡಿ ಸಮನ್ಸ್ ಗಳಿಗೆ ಉತ್ತರಿಸಿಲ್ಲ. ಹೀಗಾಗಿ ಅವರ ಬಂಧನ ವಾಗಿದೆ. ಇದರಲ್ಲಿ ಯಾವುದೇ ರಾಜಕೀಯ ಇಲ್ಲ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ತಿಳಿಸಿದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

Read More

ರಾಜಕುಮಾರಿ ಕೇಟ್‌ ಮಿಡಲ್ಟನ್‌ ಅವರು ಕ್ಯಾನ್ಸರ್‌ ನಿಂದ ಬಳಲುತ್ತಿರುವುದಾಗಿ  ಸಂದೇಶವೊಂದು ಸಾಮಾಜಿಕ ಜಾಲತಾಣದಲ್ಲಿ ವೀಡಿಯೋ ಬಿಡುಗಡೆಯಾಗಿದೆ. ಹೌದು, ವೇಲ್ಸ್‌ ರಾಜಕುಮಾರಿ ಅವರಿಗೆ ಕಿಮೋಥೆರಪಿ  ಪ್ರಾರಂಭವಾಗಿದ್ದು, ಅವರು ಸಂದೇಶವೊಂದನ್ನು ಜನತೆಗೆ ನೀಡಿದ್ದಾರೆ. ಹಾಗೆನೇ ಯಾವ ಕ್ಯಾನ್ಸರ್‌ ಇದೆ ಎಂಬುವುದು ಇನ್ನೂ ತಿಳಿದು ಬಂದಿಲ್ಲ. ತಮ್ಮ ಖಾಸಗಿತನವನ್ನು ಗೌರವಿಸುವಂತೆ ಅವರು ತಮ್ಮ ಸಂದೇಶದಲ್ಲಿ ಹೇಳಿದ್ದಾರೆ. ಗುಣವಾಗಲು ನಮಗೆ ಸ್ವಲ್ಪ ಸಮಯ, ಸ್ಥಳ ಮತ್ತು ಗೌಪ್ಯತೆಯ ಅಗತ್ಯವಿದೆ. ಹೊಟ್ಟೆ ಶಸ್ತ್ರಚಿಕಿತ್ಸೆ ಮಾಡಿದಾಗ ನನಗೆ ಕ್ಯಾನ್ಸರ್‌ನಂತಹ ಖಾಯಿಲೆ ಇದೆ ಎಂದು ಭಾವಿಸಿದ್ದೆವು. ಶಸ್ತ್ರಚಿಕಿತ್ಸೆ ಯಶಸ್ವಿಯಾಗಿದ್ದು, ಆದರೆ ಅನಂತರ ವೈದ್ಯರು ನನ್ನಲ್ಲಿ ಕ್ಯಾನ್ಸರ್‌ ಲಕ್ಷಣವಿದೆ ಎಂದು ಹೇಳಿದರು. ಈಗ ಕಿಮೊಥೆರಪಿ ಪ್ರಾರಂಭವಾಗಿದೆ ಎಂದು ವಿಡಿಯೋ ಸಂದೇಶದಲ್ಲಿ ರಾಜಕುಮಾರಿ ಹೇಳಿದ್ದಾರೆ. ಬ್ರಿಟನ್ ರಾಜ ಚಾರ್ಲ್ಸ್ ವೇಲ್ಸ್ ರಾಜಕುಮಾರಿ ಕೇಟ್ ಬಗ್ಗೆ ಹೆಮ್ಮೆಪಡುವುದಾಗಿ ಬಕಿಂಗ್ಹ್ಯಾಮ್ ಅರಮನೆ ಹೇಳಿದೆ. ಏಕೆಂದರೆ ಕೇಟ್ ಚಿಕಿತ್ಸೆಯ ಬಗ್ಗೆ ಧೈರ್ಯದಿಂದ ಮಾತನಾಡಿದ್ದಾರೆ. ಈ ಕಷ್ಟದ ಸಮಯದಲ್ಲಿ ರಾಜ ಮತ್ತು ಅವರ ಪತ್ನಿ ಕ್ಯಾಮಿಲ್ಲಾ ಇಡೀ ಕುಟುಂಬದೊಂದಿಗೆ ಇದ್ದಾರೆ…

Read More

ಬೆಂಗಳೂರು: ವಿಪಕ್ಷ ನಾಯಕರಿಗೆ ಗಾಳ ಹಾಕುತ್ತಿರುವ ಬಿಜೆಪಿ, ಶಾಸಕರಿಗೆ ಐವತ್ತು ಕೋಟಿ ರೂ. ಆಮಿಷ ಒಡ್ಡಿರುವುದಲ್ಲದೇ ರಾಜೀನಾಮೆ ನೀಡಿದ ಬಳಿಕ ಮರು ಚುನಾವಣೆಯ ವೆಚ್ಚವನ್ನೂ ಸಹ ತಾವೇ ಭರಿಸುವುದಾಗಿ ಹೇಳುತ್ತಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಆರೋಪಿಸಿದರು. ವಿವಿಧ ನಾಯಕರ ಕಾಂಗ್ರೆಸ್‌ ಪಕ್ಷ ಸೇರ್ಪಡೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಬಿಜೆಪಿ ಈ ರೀತಿಯಲ್ಲಿ ಪ್ರಜಾಪ್ರಭುತ್ವದ ಮೌಲ್ಯಗಳನ್ನು ನಾಶಪಡಿಸುತ್ತಿದೆ ಎಂದು ಹರಿಹಾಯ್ದರು. ಕೇಂದ್ರ ಬಿಜೆಪಿ ಸರ್ಕಾರದಿಂದ ಪ್ರೇರಿತವಾದ ತನಿಖಾ ಸಂಸ್ಥೆಗಳು ಕ್ಷುಲ್ಲಕ ಕಾರಣಗಳನ್ನು ಒಡ್ಡಿ ಕಾಂಗ್ರೆಸ್‌ ನಾಯಕರ ಬ್ಯಾಂಕ್‌ ಖಾತೆಗಳನ್ನು ಸ್ಥಗಿತಗೊಳಿಸುತ್ತಿದೆ. ಇದು ಚುನಾವಣೆಯಲ್ಲಿ ಪ್ರತಿಪಕ್ಷನ್ನು ದುರ್ಬಲಗೊಳಿಸುವ ಬಿಜೆಪಿ ತಂತ್ರವಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಆರೋಪಿಸಿದರು ದೇಶದ ಸ್ವಾತಂತ್ರ್ಯಕ್ಕೆ ದುಡಿದ ಪಕ್ಷವಾದ ಕಾಂಗ್ರೆಸ್‌ ಇಂದು ಸಂಕಷ್ಟದಲ್ಲಿದೆ. ಸ್ವಾತಂತ್ರ್ಯಕ್ಕೆ ಯಾವುದೇ ಕೊಡುಗೆ ನೀಡದ ಬಿಜೆಪಿ ಅಧಿಕಾರದಲ್ಲಿದೆ. ವಾಜಪೇಯಿ ಅವರ ಅವಧಿಯಲ್ಲಿ ಐದು ವರ್ಷ ಹಾಗೂ ನರೇಂದ್ರ ಮೋದಿ ನೇತೃತ್ವದಲ್ಲಿ ಹತ್ತು ವರ್ಷಗಳ ಕಾಲ ಆಡಳಿತ ನಡೆಸಿರುವ ಬಿಜೆಪಿ ಇದೇ ರೀತಿಯಲ್ಲಿ ಅಧಿಕಾರ ಪಡೆಯಲು ಹಾತೊರೆಯುತ್ತಿದೆ…

Read More

ಹುಬ್ಬಳ್ಳಿ: ಪಕ್ಷ ಕಟ್ಟಿದವರನ್ನು ಎಂದಿಗೂ ಬಿಟ್ಟುಕೊಡಲು ಸಾಧ್ಯವಿಲ್ಲ. ಬಿಜೆಪಿಯಿಂದ ಬಂಡಾಯ ಎದ್ದಿರುವ ಮಾಜಿ ಉಪಮುಖ್ಯಮಂತ್ರಿ ಕೆ.ಎಸ್.‌ ಈಶ್ವರಪ್ಪ ಅವರನ್ನು ಮನವೊಲಿಸುವ ಕೆಲಸ ಹೈಕಮಾಂಡ್‌ ಮಾಡುತ್ತದೆ ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಹೇಳಿಕೆ ನೀಡಿದ್ದಾರೆ. ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಬೊಮ್ಮಾಯಿ, ನರೇಂದ್ರ ಮೋದಿ ಅವರು ಮತ್ತೆ ಪ್ರಧಾನಿಯಾಗಬೇಕೆಂಬ ಬಯಕೆ ಈಶ್ವರಪ್ಪ ಅವರಿಗಿದೆ. ಅವರ ಮನವೊಲಿಕೆಗೆ ನಮ್ಮ ನಾಯಕರು ಖಂಡಿತಾ ಯಶಸ್ವಿಯಾಗುತ್ತಾರೆ. ಚುನಾವಣೆ ಸಂದರ್ಭ ಅಸಮಾಧಾನ ಸಹಜ. ಸಂಗಣ್ಣ ಕರಡಿ, ಪ್ರತಾಪ್‌ ಸಿಂಹ, ಸದಾನಂದ ಗೌಡ ಅವರೆಲ್ಲರೊಂದಿಗೂ ಮಾತನಾಡಲಾಗುತ್ತಿದೆ. ಇವರೆಲ್ಲರೂ ಪಕ್ಷ ಕಟ್ಟಿದವರು ನಮ್ಮ ಜೊತೆಯಲ್ಲಿಯೇ ಇರುತ್ತಾರೆ ಎಂದರು. ಮೇಕೆದಾಟು ಪಾದಯಾತ್ರೆ ಕಾಂಗ್ರೆಸ್‌ ರಾಜಕೀಯ ನಾಟಕದ ಒಂದು ಭಾಗ. ಅವರು ಮತಗಳಿಗಾಗಿ ದೊಡ್ಡ ಮಟ್ಟದಲ್ಲಿ ಪಾದಯಾತ್ರೆ ಮಾಡಿದ್ದರು. ಕಾಂಗ್ರೆಸ್‌ಗೆ ನಿಜವಾಗಿಯೂ ಕಾಳಜಿ ಇದ್ದರೆ ಇಂಡಿಯಾ ಕೂಟದಿಂದ ಹೊರಬರಬೇಕು. ಮೇಕೆದಾಟು ಯೋಜನೆ ಬಗ್ಗೆ ಕಾಂಗ್ರೆಸ್‌ ತಮ್ಮ ನಿಲುವನ್ನು ಸ್ಪಷ್ಟಪಡಿಸಬೇಕು ಎಂದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು…

Read More

ತುಮಕೂರು: ಮಾಜಿ ಸಚಿವ ಮಾಧುಸ್ವಾಮಿ ಪಕ್ಷ ಬಿಡುವುದಿಲ್ಲ, ನಮ್ಮ ಜೊತೆಯಲ್ಲೇ ಇರ್ತಾರೆ. ಅಲ್ಲದೆ ಈ ಬಗ್ಗೆ ನನಗೆ ಭರವಸೆ ಕೂಡ ನೀಡಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ತಿಳಿಸಿದ್ದಾರೆ. ಜಿಲ್ಲೆಯ ತುರುವೇಕೆರೆ ಪಟ್ಟಣದಲ್ಲಿರುವ ಮಾಜಿ ಶಾಸಕ ಮಸಾಲೆ ಜಯರಾಮ್ ಮನೆಯಲ್ಲಿ ಇಂದು, ಮಾಧುಸ್ವಾಮಿ ಜೊತೆ ಸುದೀರ್ಘ ಮಾತುಕತೆ ನಡೆಸಿದ ನಂತರ ಪತ್ರಕರ್ತರೊಂದಿಗೆ ಮಾತನಾಡಿದ ಯಡಿಯೂರಪ್ಪ ಅವರು, ಮಾಧುಸ್ವಾಮಿ ಪಕ್ಷದಲ್ಲಿ ಇದ್ದರೆ ದೊಡ್ಡ ಶಕ್ತಿ ಇದ್ದಂತೆ ನಮಗೆ. ಪಕ್ಷ ಬಿಡೊಲ್ಲ ಅಂತ ಒಪ್ಪಿಕೊಂಡಿದ್ದಾರೆ. ನಾವು ಚುನಾವಣೆ ಬಗ್ಗೆ ಯಾವುದೇ ಚರ್ಚೆ ಮಾಡಿಲ್ಲ ಎಂದು ಹೇಳಿದರು. ಇನ್ನು ಇದೇ ಸಂದರ್ಭದಲ್ಲಿ ಹಾಜರಿದ್ದ ಮಾಧುಸ್ವಾಮಿ ಮಾತನಾಡಿ, ನಾನು ಕಾಂಗ್ರೆಸ್ ಸೇರಲು ಮುಂದಾಗಿದ್ದು ನಿಜ. ಯಾರು ಯಾರು ಸಂಪರ್ಕ ಮಾಡಿದ್ರು ಎಂದು ಯಡಿಯೂರಪ್ಪ ಅವರ ಜೊತೆ ಚರ್ಚೆ ಮಾಡಿದ್ದೇನೆ. ಸದ್ಯ ಬಿಜೆಪಿಯಲ್ಲಿಯೇ ಉಳಿಯುವುದಾಗಿ ಹೇಳಿದರು. ತುಮಕೂರು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಸೋಮಣ್ಣ ಅವರಿಗೆ ಬೆಂಬಲ ನೀಡುವ ಬಗ್ಗೆ ಯಾವುದೇ ಚರ್ಚೆ ನಡೆದಿಲ್ಲ. ಸೋಮಣ್ಣ ಅವರಿಗೆ…

Read More

ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ ( ISRO ) ಕರ್ನಾಟಕದ ಚಲ್ಲಕೆರೆ ಏರೋನಾಟಿಕಲ್ ಟೆಸ್ಟ್ ರೇಂಜ್ ( ಎಟಿಆರ್ ) ನಿಂದ ‘ ಪುಷ್ಪಕ್ ‘ ಎಂಬ ಮರುಬಳಕೆ ಮಾಡಬಹುದಾದ, ಉಡಾವಣಾ ವಾಹನದ ( ಆರ್ ಎಲ್ ವಿ ) ಲ್ಯಾಂಡಿಂಗ್ ಕಾರ್ಯಾಚರಣೆಯನ್ನು ಯಶಸ್ವಿಯಾಗಿ ನಡೆಸಿದೆ. ಇದು ರಾಮಾಯಣದಲ್ಲಿ ಹೆಸರಿಸಲಾದ ಪೌರಾಣಿಕ ಬಾಹ್ಯಾಕಾಶ ನೌಕೆಯ ಹೆಸರಿನಿಂದ ಕರೆಯಲ್ಪಟ್ಟ, ಆರ್ಎಲ್ವಿ ಯ ಮೂರನೇ ಲ್ಯಾಂಡಿಂಗ್ ಮಿಷನ್ ಆಗಿದೆ. ಬಾಹ್ಯಾಕಾಶ ಸಂಸ್ಥೆಯು 2016 ಮತ್ತು ಕಳೆದ ವರ್ಷದ ಏಪ್ರಿಲ್ನಲ್ಲಿ ಹಿಂದಿನ ಕಾರ್ಯಾಚರಣೆಗಳನ್ನು ಯಶಸ್ವಿಯಾಗಿ ನಡೆಸಿದೆ. ಉಡಾವಣಾ ವಾಹನವನ್ನು ಭಾರತೀಯ ವಾಯುಪಡೆಯ ಹೆಲಿಕಾಪ್ಟರ್ ಸುಮಾರು 4.5 ಕಿ . ಮೀ. ಎತ್ತರಕ್ಕೆ ಕೊಂಡೊಯ್ದು, ಪೂರ್ವನಿರ್ಧರಿತ ಪಿಲ್ಬಾಕ್ಸ್ ನಿಯತಾಂಕಗಳನ್ನು ಸಾಧಿಸಿದ ನಂತರ ಬಿಡುಗಡೆ ಮಾಡಿ ಲ್ಯಾಂಡಿಂಗ್ ಮಾಡಿಸಲಾಯಿತು. ಇಸ್ರೊ ಪ್ರಕಾರ, ಈ ಕಾರ್ಯಾಚರಣೆಯು  “ಬಾಹ್ಯಾಕಾಶಕ್ಕೆ ಕಡಿಮೆ ವೆಚ್ಚದಲ್ಲಿ ಪ್ರವೇಶವನ್ನು ಸಕ್ರಿಯಗೊಳಿಸಲು ಮತ್ತು ಸಂಪೂರ್ಣವಾಗಿ ಮರುಬಳಕೆ ಮಾಡಬಹುದಾದ ಉಡಾವಣಾ ವಾಹನಕ್ಕಾಗಿ ಅಗತ್ಯ ತಂತ್ರಜ್ಞಾನಗಳನ್ನು ಅಭಿವೃದ್ಧಿಪಡಿಸುವ ” ಬಾಹ್ಯಾಕಾಶ ಸಂಸ್ಥೆಯ…

Read More

ಸದಾ ಒಂದಿಲ್ಲೊಂದು ವಿವಾದಗಳಿಂದ ಸುದ್ದಿಯಾಗುತ್ತಿರುವ ಸಾನ್ಯಾ ಅಯ್ಯರ್‌ ತಮ್ಮ ಚೊಚ್ಚಲ ಸಿನಿಮಾ ‘ಗೌರಿ’ಯ ಶೂಟಿಂಗ್ ಮುಗಿಸಿದ್ದಾರೆ. ಡಬ್ಬಿಂಗ್ ಮಾಡುತ್ತಿರುವ ಫೋಟೋವನ್ನು ಸೋಷಿಯಲ್ ಮೀಡಿಯಾದಲ್ಲಿ ಹಂಚಿ ಕೊಂಡಿದ್ದು, ಇದೀಗ ಡಬ್ಬಿಂಗ್ ಕೆಲಸ ಕಾರ್ಯಗಳು ಮುಗಿದಿವೆ. ಇದೀಗ ಸಮ್ಮರ್ ಹಾಲಿಡೇ ಕಳೆಯಲ್ಲಿ ತಾಯಿ ಜೊತೆ ಕೂರ್ಗಿಗೆ ಹೋಗಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ. ಅಲ್ಲಿ ಫೋಟೋಗೆ ಸಖತ್ ಪೋಸ್ ಕೂಡ ಕೊಟ್ಟಿದ್ದು, ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ಓಡಾಡುತ್ತಿವೆ. ‘ಗೌರಿ’ ಸಿನಿಮಾದಲ್ಲಿ ನಾಯಕಿಯಾಗಿ ನಟಿಸುತ್ತಿದ್ದಂತೆಯೇ ಕಿರುತೆರೆಯ ಪುಟ್ಟಗೌರಿ ಸಾಕಷ್ಟು ಬದಲಾವಣೆ ಕಾಣುತ್ತಿದ್ದಾರೆ. ಸಖತ್ ಹಾಟ್ ಹಾಟ್ ಆಗಿ ಫೋಟೋಶೂಟ್ ಮಾಡಿಸಿಕೊಂಡಿದ್ದ ಸಾನ್ಯಾ ಅಯ್ಯರ್, ಈ ಚಿತ್ರಕ್ಕಾಗಿ ಮತ್ತೊಂದು ಫೋಟೋ ಶೂಟ್ ನಲ್ಲಿ ಭಾಗಿಯಾಗಿದ್ದರು. ಈ ಹಿಂದೆಯೂ ಸಾನ್ಯಾ ಬಿಕಿನಿ ಫೋಟೋಶೂಟ್‌ ನಲ್ಲಿ ಬೋಲ್ಡ್ ಆಗಿ ಕಾಣಿಸಿಕೊಳ್ಳುವ ಮೂಲಕ ಸೋಶಿಯಲ್ ಮೀಡಿಯಾದಲ್ಲಿ ಸೆನ್ಸೇಷನ್ ಕ್ರಿಯೇಟ್ ಮಾಡಿದ್ದರು. ಗೌರಿ ಚಿತ್ರಕ್ಕಾಗಿ ಹೊಸ ಲುಕ್ ನಲ್ಲಿ ಸ್ಟೈಲಿಶ್ ಗೆಟಪ್‌ ನಲ್ಲಿ ಕ್ಯಾಮೆರಾ ಕಣ್ಣಿಗೆ ನಟಿ ಪೋಸ್ ನೀಡಿದ್ದರು. ಸದ್ಯ ಈ ಚಿತ್ರದ…

Read More

ಚುನಾವಣೆ ಹತ್ತಿರ ಬರುತ್ತಿದ್ದಂತೆ ಸೈಬರ್‌ ಕಳ್ಳರ ಹಾವಳಿ ಹೆಚ್ಚಾಗಿದೆ. ಸೈಬರ್ ವಂಚಕರು ಹೇಗೆಲ್ಲಾ ವಂಚನೆ ಮಾಡಲು ಸಾಧ್ಯವಿದೆಯೋ ಅದನ್ನೆಲ್ಲ ಪ್ರಯೋಗ ಮಾಡಿ ಜನರನ್ನು ಯಮಾರಿಸುತ್ತಿದ್ದಾರೆ. ಇದೀಗ ನಕಲಿ ಸಂದೇಶಗಳನ್ನು ಕಳುಹಿಸಿ ಜನರ ಬ್ಯಾಂಕ್ ಖಾತೆಗಳಿಂದ ಹಣ ಎಗರಿಸುವ ದಂಧೆ ನಡೆಯುತ್ತಿದೆ. ಚುನಾವಣೆ ಸಮೀಪಿಸುತ್ತಿದ್ದಂತೆ ಸೈಬರ್ ಖದೀಮರು ಕೂಡ ಫುಲ್ ಅಲರ್ಟ್ ಆಗಿದ್ದು, ಚುನಾವಣೆ ಹೊತ್ತಲ್ಲೇ ನಕಲಿ ಮೆಸೇಜ್‌ ಗಳ (Fake Messages) ಹಾವಳಿ ಸಹ ಹೆಚ್ಚಾಗುತ್ತಿವೆ. ಇಲ್ಲಿ ಸ್ವಲ್ಪ ಯಾಮಾರಿದ್ರೂ ನಿಮ್ಮ ಬ್ಯಾಂಕ್ ಖಾತೆಗೆ ಕನ್ನ ಬೀಳೋದು ಗ್ಯಾರಂಟಿ. ಹೌದು. ಚುನಾವಣೆ ಸಂದರ್ಭದಲ್ಲಿ ಪ್ರಧಾನಿಗಳ ಫೋಟೋ ಬಳಸಿ ಫೇಕ್ ಮೆಸೇಜ್ ಹರಿಬಿಡಲಾಗುತ್ತಿದೆ. ಎಲ್ಲರ ಖಾತೆಗೆ ಮೋದಿಯವರ ಕಡೆಯಿಂದ 5,000 ರೂಪಾಯಿ ಅನ್ನೋ ಫೇಕ್ ಮೆಸೇಜ್ ಸಾಮಾಜಿಕ ಜಾಲತಾಣದಲ್ಲಿ ಹೆಚ್ಚಾಗಿದೆ. 5,000 ಪಡೆದಿದ್ದೀರಿ, ಇದನ್ನ ನಿಮ್ಮ ಅಕೌಂಟ್‌ ಗೆ ಹಾಕಲು ಲಿಂಕ್ ಮಾಡಿ ಎಂಬ ಸಂದೇಶ ಕಳುಹಿಸುತ್ತಾರೆ. ಲಿಂಕ್ ಕ್ಲಿಕ್ ಮಾಡಿದರೆ ಕೂಡಲೇ ಖಾತೆಯಿಂದ ಹಣ ಎಗರಿಸುವಂತೆ ವ್ಯವಸ್ಥಿತವಾಗಿ ಸಂಚು ರೂಪಿಸಿದ್ದಾರೆ. ಈಗಾಗಲೇ…

Read More

ಎಚ್ ಡಿ ಕೋಟೆ: ಅಂಗನವಾಡಿಯ ನೀರಿನ ಸಂಪ್ ಗೆ ಬಿದ್ದು ಬಾಲಕಿ ಸಾವನ್ನಪ್ಪಿರುವ ಘಟನೆ ಎಚ್.ಡಿ.ಕೋಟೆಯ ಬಂಗ್ಲಿಹುಂಡಿ ಗ್ರಾಮದಲ್ಲಿ ನಡೆದಿದೆ. ಮೃತ ಬಾಲಕಿಯನ್ನುಅಂತರ ಸಂತೆಯ ಬಂಗ್ಲಿ ಹುಂಡಿ ನಿವಾಸಿ ಸ್ವಾಮಿ ಮತ್ತು ಅಂಜು ದಂಪತಿಗಳ ಪುತ್ರಿ ಸನ್ನಿಧಿ (3) ಎಂದು ಗುರುತಿಸಲಾಗಿದೆ. ಅಂಗನವಾಡಿಗೆ ತೆರಳಿದ ಬಾಲಕಿ ಕತ್ತಲಾದರೂ ಮನೆಗೆ ಹಿಂದುರುಗಿ ಬಾರದ ಕಾರಣ ಗಾಬರಿಗೊಂಡ ಪೋಷಕರು ಬಾಲಕಿಗಾಗಿ ಹುಡುಕಾಟ ನಡೆಸಿದ ವೇಳೆ ಅಂಗನವಾಡಿಯ ಸಂಪ್ ನಲ್ಲಿ ಬಾಲಕಿಯ ಮೃತದೇಹ ಪತ್ತೆಯಾಗಿತ್ತು. ಕೂಡಲೇ ಆಸ್ಪತ್ರೆಗೆ ಕೊಂಡೊಯ್ದರೂ ಆದಾಗಲೇ ಸಾವನ್ನಪ್ಪಿರುವುದಾಗಿ ವೈದ್ಯರು ತಿಳಿಸಿದ್ದಾರೆ.ಬಾಲಕಿಯನ್ನು ಕಳೆದುಕೊಂಡ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಘಟನೆಗೆ ಅಂಗನವಾಡಿಯ ಸಿಬ್ಬಂದಿಯು ಸಂಪ್ ನ ಬಾಗಿಲನ್ನು ಬೇಜವಾಬ್ದಾರಿತನದಿಂದ ಮುಚ್ಚದೆ ತೆರೆದುಬಿಟ್ಟಿದ್ದ ಪರಿಣಾಮ ಈ ಅವಘಡ ಸಂಭವಿಸಿದೆ ಎಂದು ಸ್ಥಳೀಯರು ಅಂಗನವಾಡಿ ಸಿಬ್ಬಂದಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅಂಗನವಾಡಿ ಶಿಕ್ಷಕಿ ಗೀತಾ, ಸಹಾಯಕಿ ನಾಗಮ್ಮ, ಮೇಲ್ವಿಚಾರಕಿ ಚಿನ್ನಮ್ಮ, CDPO, ಆಶಾರನ್ನು ಸೇವೆಯಿಂದ ಅಮಾನತುಗೊಳಿಸುವಂತೆ ಗ್ರಾಮಸ್ಥರ ಒತ್ತಾಯಿಸಿದ್ದಾರೆ. ಸರ್ಕಾರಿ ಕಟ್ಟಡದಲ್ಲಿರುವ ನೀರನ್ನು ದೇವಸ್ಥಾನ ಕಟ್ಟಲು…

Read More

ಸಾಮಾಜಿಕ ಜಾಲತಾಣವಾದ ಫೇಸ್ಬುಕ್ ನಲ್ಲಿ ಕಿರಾತಕನೋರ್ವ ದಲಿತರ ಬಗ್ಗೆ ಅವಾಚ್ಯವಾಗಿ ಬರೆದ ಬರಹವೊಂದು ವೈರಲ್ ಆಗುತ್ತಿದ್ದಂತೆ ದಲಿತ ಸಂಘಟನೆಗಳು, ದಲಿತ ನಾಯಕರು ಆಕ್ರೋಶ ಹೊರಹಾಕಿದ್ದಾರೆ. ಜಗತ್ತಿನಲ್ಲಿ ಅತ್ಯಂತ ಹೆಚ್ಚು ಮರ್ಯಾದಿ ಕೆಟ್ಟ ನಿಯತ್ತು ಇಲ್ಲದ ಜನ ದಲಿತರು, ನೀಲಿ ಶಾಲ್ ಹಾಕಿದ ಜನಗಳಿಗೆ ಬಿಟ್ಟಿ ಎಣ್ಣೆ ಸಿಕ್ಕರೆ ತಾಯಿಯನ್ನೇ ಮಾರುತ್ತಾರೆ’ ಎಂದು ಬರೆಯಲಾಗಿದ್ದು ಸದ್ಯ ಭಾರೀ ಆಕ್ರೋಶಕ್ಕೆ ಕಾರಣವಾಗಿದೆ. ಈಗಾಗಲೇ ಸುದ್ದಿಯಲ್ಲಿರುವ ಧರ್ಮಸ್ಥಳದ ಕಾಲೇಜು ವಿದ್ಯಾರ್ಥಿನಿ ಸೌಜನ್ಯ ಹತ್ಯೆ ಪ್ರಕರಣದ ನ್ಯಾಯಕ್ಕಾಗಿ ನಡೆಯುತ್ತಿರುವ ಹೋರಾಟ, ಹಾಗೂ ಹೋರಾಟಗಾರರ ವಿರುದ್ಧ ಫೇಸ್ಬುಕ್ ನಲ್ಲಿ ಬರೆಯುವ ಬರದಲ್ಲಿ ದಲಿತರನ್ನು ಹಿಯಾಳಿಸಿ ಅವಾಚ್ಯವಾಗಿ ನಿಂದನೆ ನಡೆಸಲಾಗಿದೆ. ಪ್ರವೀಣ್ ಮದ್ದಡ್ಕ ಎಂಬಾತನ ಅಕೌಂಟ್ ನಲ್ಲಿ ಇಂತಹದೊಂದು ಬರಹ ಬರೆಯಲಾಗಿದ್ದು, ಕಾನೂನು ಹೋರಾಟಕ್ಕೆ ದಲಿತ ಸಂಘಟನೆಗಳು ಮಣೆ ಹಾಕಿದೆ ಎಂದು ತಿಳಿದುಬಂದಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

Read More