Author: admin

ತುಮಕೂರು: ತಾಲೂಕಿನ ಕುಚ್ಚಂಗಿ ಗ್ರಾಮದ ಕೆರೆಯಲ್ಲಿ ಕಾರೊಂದರಲ್ಲಿ ಮೂವರು ವ್ಯಕ್ತಿಗಳ ಮೃತದೇಹಗಳು ಸಂಪೂರ್ಣ ಸುಟ್ಟು ಕರಕಲಾದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಕೆರೆ ಸಂಪೂರ್ಣ ಬತ್ತಿ ಹೋಗಿದ್ದು ಇದರ ಮಧ್ಯ ಭಾಗದಲ್ಲಿ ಕಾರು ಕೂಡ ಸುಟ್ಟು ಕರಕಲಾಗಿದೆ. ವಿಷಯ ತಿಳಿದ ತಕ್ಷಣ ಸ್ಥಳಕ್ಕೆ ತೆರಳಿದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಶೋಕ್ ನೇತೃತ್ವದ ಪೊಲೀಸ್ ಅಧಿಕಾರಿಗಳ ತಂಡ ಪರಿಶೀಲನೆ ನಡೆಸಿದೆ. ಫೋರೆನ್ಸಿ ತಜ್ಞರ ತಂಡ ಕೂಡ ಸ್ಥಳದಲ್ಲಿ ಮೊಕ್ಕಂ ಹೂಡಿದ್ದು ಮಾಹಿತಿ ಸಂಗ್ರಹಿಸುತ್ತಿದೆ. ಕಾರಿನ ನಂಬರ್ ಕೂಡ ಪತ್ತೆಯಾಗಿದ್ದು ಇದರ ಮೂಲಕ ಸುಟ್ಟು ಕರಕಲಾಗಿರುವ ಮೃತದೇಹಗಳ ಕುರಿತು ಮಾಹಿತಿ ಸಂಗ್ರಹಿಸಲಾಗುತ್ತಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಶೋಕ್ ತಿಳಿಸಿದ್ದಾರೆ. ಈ ಸಂಬಂಧ ಕೋರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

Read More

ಸೂಪರ್‌ ಸ್ಟಾರ್ ಶಿವರಾಜ್‌ ಕುಮಾರ್ ಮುಂಬರುವ ಚಿತ್ರ ‘RC 16’ ಮೂಲಕ ಟಾಲಿವುಡ್‌ ಗೆ ಪಾದಾರ್ಪಣೆ ಮಾಡಲು ಸಿದ್ಧರಾಗಿದ್ದಾರೆ. ಬುಚ್ಚಿ ಬಾಬು ಸನಾ ನಿರ್ದೇಶನದ ಈ ಚಿತ್ರದಲ್ಲಿ ರಾಮ್ ಚರಣ್, ಜಾನ್ವಿ ಕಪೂರ್ ಮತ್ತು ಶಿವರಾಜ್‌ ಕುಮಾರ್ ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ. ಮಾರ್ಚ್ 20 ರಂದು ಚಿತ್ರಕ್ಕೆ ಮುಹೂರ್ತ ಪೂಜೆ ನೆರವೇರಿತು. ಈ ಸಿನಿಮಾದ ಮೂಲಕ ಶಿವಣ್ಣ, ತೆಲುಗು ಚಿತ್ರರಂಗಕ್ಕೆ ಪಾದಾರ್ಪಣೆ ಮಾಡುತ್ತಿದ್ದಾರೆ. ತಮ್ಮ ಚೊಚ್ಚಲ ಚಿತ್ರಪ್ರವೇಶದ ಬಗ್ಗೆ ಪ್ರತಿಕ್ರಿಯಿಸಿರುವ ಶಿವರಾಜ್‌ ಕುಮಾರ್, ಬುಚ್ಚಿ ಬಾಬು ಸನಾ ಅವರ ಮೇಲೆ ನನಗೆ ಸಂಪೂರ್ಣ ನಂಬಿಕೆ ಇದೆ ಎಂದು ಹೇಳಿದ್ದಾರೆ. ಬುಚಿ ಬಾಬು ಸಾನಾ ಅವರು ಚಿತ್ರದಲ್ಲಿನ ಪಾತ್ರಗಳನ್ನು ಹೇಗೆ ಪರಿಕಲ್ಪನೆ ಮಾಡಿದ್ದಾರೆ ಮತ್ತು ಅವರು ‘RC 16’ ಗಾಗಿ ನವೀನ ವಿಧಾನದೊಂದಿಗೆ ನಿರೂಪಣೆ ಮತ್ತು ದೃಶ್ಯ ಕಥೆಯನ್ನು ಹೇಗೆ ಅಭಿವೃದ್ಧಿಪಡಿಸಿದ್ದಾರೆ ಎಂಬುದರ ಬಗ್ಗೆ ಸ್ಯಾಂಡಲ್‌ ವುಡ್ ಸ್ಟಾರ್  ಶಿವಣ್ಣ ಪ್ರಭಾವಿತವಾಗಿದ್ದಾರೆ. ಸಹನಟ ರಾಮ್ ಚರಣ್‌  ಅನ್ನು ಶ್ಲಾಘಿಸಿರುವ ಶಿವಣ್ಣ, ಅವರು ಅತ್ಯುತ್ತಮ…

Read More

17ನೇ ಆವೃತ್ತಿಯ ಐಪಿಎಲ್  ಆರಂಭಕ್ಕೂ ಮುನ್ನವೇ, ಚೆನ್ನೈ ಸೂಪರ್ ಕಿಂಗ್ಸ್ ತಂಡದ ಅಭಿಮಾನಿಗಳಿ ಶಾಕಿಂಗ್ ಸುದ್ದಿ ಸಿಕ್ಕಿದ್ದು, ಸಿಎಸ್ ಕೆ ತಂಡದ ನಾಯಕತ್ವಕ್ಕೆ ಮಹೇಂದ್ರ ಸಿಂಗ್ ಧೋನಿ ವಿದಾಯ ಹೇಳಿದ್ದಾರೆ. ಐಪಿಎಲ್ ಹಬ್ಬ ಪ್ರಾರಂಭವಾಗಲು ಒಂದು ದಿನ  ಬಾಕಿ ಉಳಿದಿದ್ದು, ನಾಳೆ ಚೆನ್ನೈನ ಪಿ.ಚಿದಂಬರಂ ಕ್ರೀಡಾಂಗಣದಲ್ಲಿ ನಡೆಯುವ ಮೊದಲ ಪಂದ್ಯದಲ್ಲಿ ಹಾಲಿ ಚಾಂಪಿಯನ್ ಚೆನ್ನೈ ಸೂಪರ್ ಕಿಂಗ್ಸ್ ಹಾಗೂ ರಾಯಲ್ ಚಾಲೆಂಜರ್ಸ್​ ಬೆಂಗಳೂರು ತಂಡ ಮುಖಾಮುಖಿಯಾಗಲಿವೆ. ಈ ನಡುವೆ ಸಿಎಸ್ ಕೆ ತಂಡದ ನಾಯಕ ಎಂಎಸ್ ಧೋನಿ ನಾಯಕತ್ವಕ್ಕೆ ಗುಡ್ ಬೈ ಹೇಳಿದ್ದು, ಅವರ ಬದಲಿಗೆ ತಂಡದ ಯುವ ಆರಂಭಿಕ ಆಟಗಾರ ರುತುರಾಜ್ ಗಾಯಕ್ವಾಡ್​ ಗೆ ತಂಡದ ನಾಯಕತ್ವ ಜವಾಬ್ದಾರಿ ನೀಡಲಾಗಿದೆ. ಕಳೆದ ಆವೃತ್ತಿಯಲ್ಲೇ ಮಂಡಿ ನೋವಿನೊಂದಿಗೆ ಇಡೀ ಲೀಗ್ ಆಡಿದ್ದ ಧೋನಿ ತಂಡವನ್ನು ದಾಖಲೆಯ ಐದನೇ ಬಾರಿಗೆ ಚಾಂಪಿಯನ್ ಮಾಡಿದ್ದರು. ಆ ವೇಳೆಯೆ ಧೋನಿ ಐಪಿಎಲ್​ ಗೆ ವಿದಾಯ ಹೇಳಲಿದ್ದಾರೆ ಎಂಬ ಸುದ್ದಿ ಹರಿದಾಡಿತ್ತು. ಆದರೆ ಎಲ್ಲಾ ಊಹಾಪೋಹಗಳನ್ನು ಸುಳ್ಳು…

Read More

ಅಫಜಲಪುರ(ಕಲಬುರಗಿ): ದ್ವಿತೀಯ ಪಿಯು ಪರೀಕ್ಷೆಯಲ್ಲಿ ನಕಲು ಮಾಡಲು ಸಹಕಾರ ನೀಡಿಲ್ಲ ಎಂದು ಕರ್ತವ್ಯನಿರತ ಪೊಲೀಸ್ ಹೆಡ್ ಕಾನ್ಸ್‌ಟೆಬಲ್ ಮೇಲೆ ಹಲ್ಲೆ ನಡೆಸಿರುವ ಬಗ್ಗೆ ಅಫಜಲಪುರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಇಬ್ಬರನ್ನು ಬಂಧಿಸಲಾಗಿದೆ. ತಾಲೂಕಿನ ಕರಜಗಿ ಪರೀಕ್ಷಾ ಕೇಂದ್ರದಲ್ಲಿ ಮಾರ್ಚ್ 20ರಂದು ಈ ಘಟನೆ ನಡೆದಿದೆ. ಪರೀಕ್ಷಾ ಕೇಂದ್ರದ ಬಳಿ ಹೆಡ್ ಕಾನ್ಸ್‌ಟೇಬಲ್ ಪಂಡಿತ್ ಪಾಂಡ್ರೆ ಕರ್ತವ್ಯ ನಿರ್ವಹಿಸುತ್ತಿದ್ದರು. ಈ ವೇಳೆ ಕೈಲಾಸ ಸಕ್ಕರಗಿ ಎಂಬಾತ ಪದೇಪದೆ ಪೊಲೀಸ್ ಸಿಬ್ಬಂದಿ ಬಳಿ ತೆರಳಿ “ನನ್ನ ತಂಗಿ ಪರೀಕ್ಷೆಗೆ ಕುಳಿತಿದ್ದಾಳೆ. ಹೀಗಾಗಿ ನನಗೆ ಒಳಗಡೆ ಹೋಗಲು ಬಿಡಿ,” ಎಂದು ಕಿರಿಕಿರಿ ಮಾಡಿದ್ದಾನೆ. ”ನೀ ಏನು ದೊಡ್ಡನೌಕರಿ ಮಾಡುತ್ತಿದ್ವಿ, ನಮಗೆ ಒಳಗಡೆ ಹೋಗಲು ಬಿಡು, ಇಲ್ಲ ಅಂದ್ರೆ ನಿನಗೆ ಬೇರೆ ಮಾಡಬೇಕಾಗುತ್ತದೆ ನೋಡು,” ಎಂದು ಧಮ್ಕಿ ಹಾಕಿದ್ದಾನೆ. ಪರೀಕ್ಷಾ ಕೇಂದ್ರದ ಒಳಕ್ಕೆ ನುಗ್ಗಲು ಯತ್ನಿಸಿದ್ದರಿಂದ ಆತನನ್ನು ಪಾಂಡ್ರೆ ತಡೆದರು. ಈ ವೇಳೆ ಕೈಲಾಸ ಸಕ್ಕರಗಿ ಹಾಗೂ ಸಮೀರ ನಡುವಿನಕೇರಿ, ಪಾಂಡ್ರೆ ಅವರಲ್ಲಿದ್ದ ಲಾಠಿಯನ್ನು ಕಸಿದುಕೊಂಡು…

Read More

ನಿಮ್ಮ ಮನೆಯ ಟೈಲ್ಸ್ ಕಲೆಗಳಿಂದ ತುಂಬಿದ್ದರೆ ಚಿಂತೆ ಮಾಡಬೇಡಿ. ನಿಮ್ಮ ಟೈಲ್ಸ್‌ ಗಳು ಮತ್ತೆ ಹೊಳೆಯುವ ಸರಳ ಮತ್ತು ಸುಲಭವಾದ ವಿಧಾನಗಳನ್ನು ಇಲ್ಲಿ ನೀಡಿದೆ. ಹೆಚ್ಚು ಗಂಟೆಗಳ ಶ್ರಮವಿಲ್ಲದೆ, ಈ ವಿಧಾನಗಳನ್ನು ಅಳವಡಿಸಿಕೊಳ್ಳುವುದರಿಂದ, ನಿಮ್ಮ ಸಮಯವನ್ನು ಉಳಿಸುವುದು ಮಾತ್ರವಲ್ಲದೆ ನಿಮ್ಮ ಟೈಲ್ಸ್ ಕೂಡ ಹೊಸದಾಗಿ ಹೊಳೆಯುತ್ತದೆ. ಅಡಿಗೆ ಸೋಡಾ ಮತ್ತು ನೀರು: ಅಡಿಗೆ ಸೋಡಾ ಮತ್ತು ನೀರನ್ನು ಪೇಸ್ಟ್ ಮಾಡಿ ಮತ್ತು ಅದನ್ನು ಟೈಲ್ಸ್ ಮೇಲೆ ಅನ್ವಯಿಸಿ. ಕೆಲವು ನಿಮಿಷಗಳ ಕಾಲ ಅದನ್ನು ಬಿಡಿ, ನಂತರ ಸ್ಕ್ರಬ್ಬಿಂಗ್ ಬ್ರಷ್‌ ನಿಂದ ಸ್ಕ್ರಬ್ ಮಾಡಿ ಮತ್ತು ತೊಳೆಯಿರಿ. ವಿನೆಗರ್ ಮತ್ತು ನೀರು: ಸ್ಪ್ರೇ ಬಾಟಲಿಯಲ್ಲಿ ಸಮಾನ ಪ್ರಮಾಣದ ವಿನೆಗರ್ ಮತ್ತು ನೀರನ್ನು ಮಿಶ್ರಣ ಮಾಡಿ ಮತ್ತು ಟೈಲ್ಸ್ ಮೇಲೆ ಸಿಂಪಡಿಸಿ. ಸ್ವಲ್ಪ ಸಮಯದ ನಂತರ, ಅದನ್ನು ಶುದ್ಧ ನೀರಿನಿಂದ ತೊಳೆಯಿರಿ. ಹೈಡ್ರೋಜನ್ ಪೆರಾಕ್ಸೈಡ್: ಗಡುಸಾದ ಕಲೆಗಳಿಗಾಗಿ, ಹೈಡ್ರೋಜನ್ ಪೆರಾಕ್ಸೈಡ್ ಅನ್ನು ಬಳಸಿ, ಅದನ್ನು ನೇರವಾಗಿ ಸ್ಟೇನ್ ಮೇಲೆ ಹಾಕಿ ಮತ್ತು ಸ್ವಲ್ಪ ಸಮಯದ…

Read More

ಬೆಳಗಾವಿ: ಮೂಡಬಿದಿರೆ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದಿಂದ, ಈ ಬಾರಿಯೂ ಪಿಯುಸಿ ವಿದ್ಯಾರ್ಥಿಗಳಿಗೆ ಎರಡು ವರ್ಷಕ್ಕೆ 10 ಕೋಟಿ ಮೌಲ್ಯದ ಶೈಕ್ಷಣಿಕ ವಿದ್ಯಾರ್ಥಿ ವೇತನ ಘೋಷಿಸಿದೆ ಎಂದು ಸಂಸ್ಥೆಯ ಪತ್ರಿಕೋದ್ಯಮ ವಿಭಾಗದ ಮುಖ್ಯಸ್ಥ ಪ್ರಸಾದ ಶೆಟ್ಟಿ ಹೇಳಿದರು. ಬೆಳಗಾವಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, “10ನೇ ತರಗತಿಯಲ್ಲಿ ಸಿಬಿಎಸ್ಸಿ(ಕೇಂದ್ರೀಯ ಪ್ರೌಢ ಶಿಕ್ಷಣ ಮಂಡಳಿ), ಐಸಿಎಸ್ಇ(ಭಾರತೀಯ ಪ್ರೌಢಶಿಕ್ಷಣದ ಪ್ರಮಾಣ ಪತ್ರ) ಹಾಗೂ ರಾಜ್ಯ ಪಠ್ಯಕ್ರಮ(ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ) ಪರೀಕ್ಷೆ ಬರೆದ ವಿದ್ಯಾರ್ಥಿಗಳು ಈ ಶೈಕ್ಷಣಿಕ ವಿದ್ಯಾರ್ಥಿ ವೇತನ ಪರೀಕ್ಷೆ ಬರೆಯಬಹುದು. ವಿದ್ಯಾರ್ಥಿಗಳ ಪ್ರವೇಶ ಪರೀಕ್ಷೆ ಅಂಕಗಳನ್ನು ಪರಿಗಣಿಸಿ ವಿದ್ಯಾರ್ಥಿ ವೇತನಕ್ಕೆ ಆಯ್ಕೆ ಮಾಡಲಾಗುವುದು. ಅರ್ಹತೆ ಪಡೆದ ವಿದ್ಯಾರ್ಥಿಗಳು ಆಳ್ವಾಸ್ ಪದವಿ ಪೂರ್ವ ಕಾಲೇಜಿನಲ್ಲಿ ವಿಜ್ಞಾನ, ವಾಣಿಜ್ಯ ಅಥವಾ ಕಲಾ ವಿಭಾಗದಲ್ಲಿ ಪದವಿ ಪೂರ್ವ ಶಿಕ್ಷಣ ಪಡೆಯಲು ಅರ್ಹರಾಗುತ್ತಾರೆ ಎಂದರು. ಗಣಿತ, ವಿಜ್ಞಾನ ಹಾಗೂ ಸಾಮಾನ್ಯ ಸಾಮರ್ಥ್ಯ ಕುರಿತು 100 ಅಂಕಗಳ ಪರೀಕ್ಷೆಯು ಮಾರ್ಚ್ 31ರಂದು ಸಿಬಿಎಸ್ಸಿ ಮತ್ತು ಐಸಿಎಸ್ಇ ವಿದ್ಯಾರ್ಥಿಗಳಿಗೆ…

Read More

ರಾಜ್ಯದಲ್ಲಿ ಲೋಕಸಭೆ ಚುನಾವಣೆಯ ಕಾವು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಅಭ್ಯರ್ಥಿಗಳು ಮತದಾರರನ್ನು ಸೆಳೆಯಲು ನಾನಾ ತಂತ್ರಗಳನ್ನು ಹೆಣೆಯುತ್ತಿದ್ದಾರೆ. ಇದೀಗ ಮಿಕ್ಸಿ, ಕುಕ್ಕರ್, ಫ್ಯಾನ್, ನಾನ್​ ಸ್ಟಿಕ್ ತವಾದಂತಹ ಗೃಹೋಪಯೋಗಿ ವಸ್ತುಗಳನ್ನು ನೀಡಲಾಗುತ್ತಿದೆ ಎಂದು ಹೇಳಲಾಗುತ್ತಿದೆ. ಹೀಗಾಗಿ ಕೆಲ ಕ್ಷೇತ್ರಗಳಲ್ಲಿ ಚುನಾವಣೆ ದಿನಾಂಕ ಘೋಷಣೆಗೂ ಮುನ್ನವೇ ಲೋಡ್​ ಗಟ್ಟಲೆ ಗೃಹೋಪಯೋಗಿ ವಸ್ತುಗಳನ್ನು ಸಂಗ್ರಹಿಸಿಟ್ಟು ಕೊಂಡಿದ್ದು, ದಿನಾಂಕ ನಿಗದಿಯಾಗುತ್ತಿದ್ದಂತೆ ವಿತರಣೆ ಕಾರ್ಯ ಆರಂಭಿಸಿದ್ದಾರೆ ಎನ್ನುವ ಸುದ್ದಿ ಹರಿದಾಡುತ್ತಿದೆ. ಇದೀಗ ಚುನಾವಣೆಯ ಪ್ರಚಾರದ ವೇಳೆ ತಮಗೆ ಕುಕ್ಕರ್​ ನೀಡದೆ ಇರುವುದನ್ನು ಪ್ರಶ್ನಿಸಿದ ವೃದ್ಧೆಯೊಬ್ಬರ ಮೇಲೆ ಕಾಂಗ್ರೆಸ್​ ಮುಖಂಡ ಅಮಾನುಷವಾಗಿ ಹಲ್ಲೆ ಮಾಡಿರುವ ಆರೋಪ ಕೇಳಿ ಬಂದಿದೆ. ಬೆಂಗಳೂರು ಗ್ರಾಮಾಂತರ ಲೋಕಸಭೆ ಕ್ಷೇತ್ರ ವ್ಯಾಪ್ತಿಯ ಕುಣಿಗಲ್​ ತಾಲ್ಲೂಕಿನ ಹುಲಿಯೂರು ದುರ್ಗದ ಉಜ್ಜನಿ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಹಲ್ಲೆಗೊಳಗಾದವರನ್ನು ಗಂಗಮ್ಮ(75) ಎಂದು ಗುರುತಿಸಲಾಗಿದೆ. ಕಾಂಗ್ರೆಸ್​ ಕಾರ್ಯಕರ್ತ ನಾರಾಯಣ್ ಎಂಬಾತ ವೃದ್ಧೆಯ ಮೇಲೆ ಹಲ್ಲೆ ನಡೆಸಿದ್ದಾನೆ ಎನ್ನಲಾಗಿದೆ ಗಾಯಾಳುವಿಗೆ ಹುಲಿಯೂರುದುರ್ಗ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆ ಕೊಡಿಸಲಾಗಿದೆ. ಹುಲಿಯೂರುದುರ್ಗ…

Read More

ತಮಿಳುನಾಡಿನ ರಾಜಕೀಯ ರಂಗದಲ್ಲಿ ಬಿರುಸಿನ ಚಟುವಟಿಕೆ ಆರಂಭವಾಗಿದೆ. ಬಿಜೆಪಿ ತನ್ನ ಅಭ್ಯರ್ಥಿಗಳ ಮೂರನೇ ಪಟ್ಟಿಯನ್ನು ಬಿಡುಗಡೆ ಮಾಡಿದ್ದು ತಮಿಳುನಾಡಿನಲ್ಲಿ ಬಿಜೆಪಿ ರಣಕಹಳೆಯೂದಿದೆ. ಈ ಪ್ರಕಾರವಾಗಿ ಕೊಯಮತ್ತೂರಿನಿಂದ ಕರ್ನಾಟಕದ ಸಿಂಗಂ ಎಂದೇ ಪ್ರಖ್ಯಾತಿಯಾಗಿದ್ದ ಕೆ. ಅಣ್ಣಾಮಲೈ ಕಣಕ್ಕೆ ಇಳಿಯಲಿದ್ದಾರೆ. ಚೆನ್ನೈ ದಕ್ಷಿಣದಿಂದ ತಮಿಳಿಸೈ ಸೌಂದರರಾಜನ್ ಮತ್ತು ನೀಲಗಿರಿಯಿಂದ ಎಲ್. ಮುರುಗನ್ ಸ್ಪರ್ಧಿಸಲಿದ್ದಾರೆ. ಬಿಜೆಪಿಯ ಮೂರನೇ ಪಟ್ಟಿ ತಮಿಳುನಾಡಿನ ಕ್ಷೇತ್ರಗಳಿಗೆ ಮಾತ್ರ ಮೀಸಲಾಗಿದೆ ಹಾಗೂ 9 ಅಭ್ಯರ್ಥಿಗಳ ಹೆಸರನ್ನು ಮಾತ್ರ ಘೋಷಿಸಲಾಗಿದೆ. ತೆಲಂಗಾಣ ರಾಜ್ಯಪಾಲ ಹುದ್ದೆಯಿಂದ ರಾಜೀನಾಮೆ ನೀಡಿದ್ದ ಅಮಿಲಿಸೈ ಸೌಂದರರಾಜನ್ ಚೆನ್ನೈ ದಕ್ಷಿಣದಿಂದ ಬಿಜೆಪಿ ಪರ ಕಣಕ್ಕೆ ಇಳಿದಿದ್ದಾರೆ. ವಿನೋಜ್ ಪಿ ಸೆಲ್ವನ್ ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಚೆನ್ನೈ ಸೆಂಟ್ರಲ್ ನಿಂದ ಸ್ಪರ್ಧಿಸಲಿದ್ದಾರೆ. ಕನ್ಯಾಕುಮಾರಿಯಿಂದ ಪೊನ್ನು ರಾಧಾಕೃಷ್ಣನ್ ಸ್ಪರ್ಧೆ ಮಾಡಲಿದ್ದಾರೆ. ವೆಲ್ಲೂರಿನಿಂದ ಎ ಸಿ ಷಣ್ಮುಗಂ, ಕೃಷ್ಣಗಿರಿಯಿಂದ ಸಿ ನರಸಿಂಹನ್​, ಪೆರಂಬಲೂರಿನಿಂದ ಟಿ. ಆರ್​ ಪಾರಿವೆಂದಾರ್​, ತೂತುಕುಡಿಯಿಂದ ನೈನಾರ್ ನಾಗೇಂದ್ರನ್​ ಅವರ ಹೆಸರನ್ನು ಬಿಜೆಪಿ ಹೈಕಮಾಂಡ್​ ಅಂತಿಮಗೊಳಿಸಿದೆ. ಚೆನ್ನೈ ದಕ್ಷಿಣ – ತಮಿಳಿಸೈ…

Read More

ಸರಗೂರು: ತಾಲ್ಲೂಕಿನ ಹೆಗ್ಗನೂರು ಗ್ರಾಪಂ ವ್ಯಾಪ್ತಿಯ ಕಾಟವಾಳು ಗ್ರಾಮದಲ್ಲಿ, ಗ್ರಾಮ ದೇವತೆ ಶ್ರೀಹುಲಿ ಮಾಸ್ತಮ್ಮ ದೇವಿ ಜಾತ್ರಾ ಕೊಂಡ ಮತ್ತು ರಥೋತ್ಸವ ಮಂಗಳವಾರದಿಂದ ಆರಂಭವಾಗಿ ಗುರುವಾರದವರೆಗೆ ವಿಜೃಂಭಣೆಯಿಂದ ಜರುಗಿತು. ಮಾಸ್ತಮ್ಮ ದೇವಸ್ಥಾನದಲ್ಲಿ ಬೆಳ್ಳಿಗೆಯಿಂದ ಧಾರ್ಮಿಕ ಕಾರ್ಯ ಮಾಡಲಾಯಿತು. ನಂತರ ಗಂಗೆಗೆ ಪೂಜೆ ಸಲ್ಲಿಸಿದರು. ನಂತರ ಅದೇ ಮಾರ್ಗವಾಗಿ ಬೀದಿಗಳಲ್ಲಿ ಹುಲಿ ಮಾಸ್ತಮ್ಮ ರಥವನ್ನು ಎಳೆಯುವ ಮೂಲಕ ಮೆರವಣಿಯಲ್ಲಿ ದೇವಸ್ಥಾನವನ್ನು ತಲುಪಿದರು. ನಂದಿಕಂಬ ಕುಳಿತ, ಮಂಗಳವಾದ್ಯ, ಕೆರಳ ತಮಟೆಯನ್ನೊಳಗೊಂಡ ಕಲಾತಂಡಗಳು ಮೆರವಣಿಗೆಯನ್ನು ಮತ್ತಷ್ಟು ಮೆರುಗುಗೊಳಿಸಿತು.. ಕೊಂಡೋತ್ಸವ: ಮಾಸ್ತಮ್ಮನ ದೇವಿಯ ದೇವಾಲಯದ ಮುಂಭಾಗದಲ್ಲಿ ಗ್ರಾಮಸ್ಥರು ಕೊಂಡೋತ್ಸವ ಸಿದ್ಧಪಡಿಸಿದ್ದರು. ನಂತರ ಉತ್ಸವ ಮೂರ್ತಿಯನ್ನು ದೇವಾಲಯ ಮುಂಭಾಗದ ತಂದು ವಿವಿಧ ಪೂಜೆ, ಪುನಸ್ಕಾರ ನೆರವೇರಿಸಿದ ಬಳಿಕ ಕೊಂಡೋತ್ಸವಕ್ಕೆ ಅನುವು ಮಾಡಿಕೊಡಲಾಯಿತು. ಈ ವೇಳೆ ನೂರಾರು ಭಕ್ತರು ಕೊಂಡ ಆಯ್ದರು. ನಂತರ ಭಕ್ತರು ಕೊಂಡಕ್ಕೆ ಉಪ್ಪು ಹಾಗೂ ಅರಳು ಸುರಿಯುವ ಮೂಲಕ ತಮ್ಮ ಇಷ್ಟಾರ್ಥ ಹರಕೆ ಸಲ್ಲಿಸಿದರು. ಸಾಕ್ಷಿಯಾದ ಸಾವಿರಾರು ಭಕ್ತರು: ಅಕ್ಕಪಕ್ಕದ ಹಾಗೂ ಗ್ರಾಮದ ಗ್ರಾಮಸ್ಥರು ಎಲ್ಲ…

Read More

ಕೊರಟಗೆರೆ: KSRTC ಬಸ್ ಮತ್ತು ಲಗೇಜ್ ಆಟೋ ನಡುವೆ ಡಿಕ್ಕಿಯಾದ ಪರಿಣಾಮ, ಲಗೇಜ್ ಚಾಲಕ ಗಾಯಗೊಂಡ ಘಟನೆ ಕೊರಟಗೆರೆ ಪಟ್ಟಣದ ಸುವರ್ಣಮುಖಿ ಪೇಟ್ರೋಲ್ ಬಂಕ್ ಸಮೀಪದ ಬೈಪಾಸ್ ರಸ್ತೆ ಬಳಿ ನಡೆದಿದೆ. ಮಧುಗಿರಿ ತಾಲೂಕಿನ  ಬೂದೇನಹಳ್ಳಿ ಗ್ರಾಮದ ಲಗೇಜ್  ಆಟೋ ಚಾಲಕ ರಾಮಾಂಜಿ(40) ಗಾಯಗೊಂಡವರಾಗಿದ್ದಾರೆ.  ಕೆ ಎಸ್ ಆರ್ ಟಿ ಸಿ ಬಸ್ಸಿನಲ್ಲಿದ್ದ 40ಕ್ಕೂ ಹೆಚ್ಚು ಪ್ರಯಾಣಿಕರು ಅಪಾಯದಿಂದ ಪಾರಾಗಿದ್ದಾರೆ. ಕೊರಟಗೆರೆ ಪಟ್ಟಣದ ಬೈಪಾಸ್ ರಸ್ತೆಯಲ್ಲಿ ಮನಸ್ಸಿಗೆ ಬಂದ ಹಾಗೇ ವಾಹನಗಳ ಸಂಚಾರ ಕಂಡು ಬಂದಿದೆ.  ಟ್ರಾಫಿಕ್ ರೂಲ್ಸ್ ಪಾಲನೆ ಮಾಡದ ವಾಹನ ಸವಾರರಿಗೆ ಸಾರಿಗೆ ಇಲಾಖೆಯ ಭಯವೇ ಇಲ್ಲದಂತಾಗಿದೆ. ಕೊರಟಗೆರೆಯಲ್ಲಿ ವಾಹನ ಸವಾರರು ಇಷ್ಟ ಬಂದ ಹಾಗೇ ವಾಹನಗಳನ್ನು ಚಲಾಯಿಸುತ್ತಿದ್ದಾರೆ.  ನಿರ್ಲಕ್ಷದ ವಾಹನ ಚಾಲನೆಯಿಂದ ಅತಿ ಹೆಚ್ಚು ಅಪಘಾತಗಳು ಸಂಭವಿಸುತ್ತಿವೆ. ಘಟನೆ ಹಿನ್ನೆಲೆ  ಸರ್ಕಲ್ ಇನ್ಸ್ಪೆಕ್ಟರ್ ಅನಿಲ್ ಸ್ಥಳಕ್ಕೆ ಭೇಟಿ ಪರಿಶೀಲನೆ ನಡೆಸಿದ್ದಾರೆ. ಕೊರಟಗೆರೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ಸಂಭವಿಸಿದೆ. ವರದಿ: ಮಂಜುಸ್ವಾಮಿ ಎಂ.ಎನ್. ಕೊರಟಗೆರೆ ನಮ್ಮತುಮಕೂರಿನ…

Read More