Author: admin

ರಾಜ್ಯ ಪಠ್ಯಕ್ರಮ ಅಳವಡಿಸಿಕೊಂಡಿರುವ ಸರಕಾರಿ ಹಾಗೂ ಅನುದಾನಿತ ಶಾಲೆಗಳ 5, 8 ಮತ್ತು 9ನೇ ತರಗತಿಗಳಿಗೆ ಬೋರ್ಡ್ ಪರೀಕ್ಷೆ ನಡೆಸುವ ವಿಚಾರ ಕುರಿತಂತೆ ಹೈಕೋರ್ಟ್ ಇಂದು ತೀರ್ಪು ಪ್ರಕಟಿಸಿದೆ. ನ್ಯಾ.ಕೆ. ಸೋಮಶೇಖರ್ ಮತ್ತು ನ್ಯಾ. ರಾಜೇಶ್ ಕೆ.ರೈ. ಅವರಿದ್ದ ವಿಭಾಗೀಯ ಪೀಠ ಸರಕಾರ ಸಲ್ಲಿಸಿರುವ ಮೇಲ್ಮನವಿ ಸಂಬಂಧ ಕಳೆದ ಸೋಮವಾರ ವಾದ-ಪ್ರತಿವಾದ ಆಲಿಸುವು ದನ್ನು ಪೂರ್ಣಗೊಳಿಸಿದ ಬಳಿಕ ತೀರ್ಪು ಕಾಯ್ದಿರಿಸಿತು. ಕರ್ನಾಟಕ ಶಿಕ್ಷಣ ಕಾಯಿದೆಯಡಿ ರಾಜ್ಯ ಶಿಕ್ಷಣ ಇಲಾಖೆ 2023ರ ಅ.6 ಮತ್ತು 9 ರಂದು ಎರಡು ಸುತ್ತೋಲೆಗಳನ್ನು ಹೊರಡಿಸಿ 5, 8, 9 ಮತ್ತು 11ನೇ ತರಗತಿಗಳಿಗೆ ಬೋರ್ಡ್ ಮಟ್ಟದ ಪರೀಕ್ಷೆ ನಡೆಸುವುದಕ್ಕೆ  ತೀರ್ಮಾನಿಸಿತ್ತು. ಅದನ್ನು ಪ್ರಶ್ನಿಸಿದ್ದ ಅರ್ಜಿದಾರರ ಸಂಘಗಳು, “ಸರಕಾರದ ಈ ಸುತ್ತೋಲೆ ಕಡ್ಡಾಯ ಶಿಕ್ಷಣ ಹಕ್ಕು ಕಾಯಿದೆ ಸೆಕ್ಷನ್ 30 ಮತ್ತು – ಕರ್ನಾಟಕ ಶಿಕ್ಷಣ ಕಾಯಿದೆಯ ವಿವಿಧ ಸೆಕ್ಷನ್‌ ಗಳ ಉಲ್ಲಂಘನೆ ಯಾಗಿದ್ದು, ಬೋರ್ಡ್ ಪರೀಕ್ಷೆ ರದ್ದುಪಡಿಸಬೇಕು,” ಎಂದು ಕೋರಿದ್ದರು. ಈ ಅರ್ಜಿಗಳ ವಿಚಾರಣೆ ನಡೆಸಿದ್ದ…

Read More

ಮಾರ್ಚ್ 31ರ ಭಾನುವಾರ ದೇಶದ ಪ್ರಮುಖ ಬ್ಯಾಂಕ್‌ ಗಳು ಎಂದಿನಂತೆ ಕಾರ್ಯನಿರ್ವಹಿಸಲಿವೆ. ಸಾರ್ವ ಜನಿಕರು ಬ್ಯಾಂಕ್ ವ್ಯವಹಾರಗಳನ್ನು ಮಾಡಬಹುದಾಗಿದೆ. ಸರಕಾರದ ವಹಿವಾಟುಗಳನ್ನು ನಿರ್ವಹಿಸುತ್ತಿರುವ ಎಲ್ಲಾ ಏಜೆನ್ಸಿ ಬ್ಯಾಂಕುಗಳು ಆರ್ಥಿಕ ವರ್ಷದ ಕೊನೆ ದಿನ(ಮಾ.31) ಕಾರ್ಯನಿರ್ವಹಿಸಬೇಕು ಎಂದು ಭಾರತೀಯ ರಿಸರ್ವ್ ಬ್ಯಾಂಕ್ ನಿರ್ದೇಶನ ನೀಡಿದೆ. ಮಾ.31ರಂದು ಸೇವೆ ನೀಡಲಿರುವ ಬ್ಯಾಂಕ್ ‌ಗಳ ಮಾಹಿತಿ ಇಲ್ಲಿದೆ. ಸರಕಾರಿ ಸ್ವಾಮ್ಯದ ಬ್ಯಾಂಕ್ ‌ಗಳು: ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ, ಕೆನರಾ ಬ್ಯಾಂಕ್, ಬ್ಯಾಂಕ್ ಆಫ್ ಮಹಾರಾಷ್ಟ್ರ, ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾ, ಇಂಡಿಯನ್ ಬ್ಯಾಂಕ್, ಇಂಡಿಯನ್ ಓವರ್ಸೀಸ್ ಬ್ಯಾಂಕ್, ಪಂಜಾಬ್ ನ್ಯಾಷನಲ್ ಬ್ಯಾಂಕ್, ಯುಸಿಒ ಬ್ಯಾಂಕ್, ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ. ಖಾಸಗಿ ವಲಯದ ಬ್ಯಾಂಕ್‌ಗಳು: ಎಕ್ಸಿಸ್ ಬ್ಯಾಂಕ್, ಸಿಟಿ ಯೂನಿಯನ್ ಬ್ಯಾಂಕ್, ಡಿಸಿಬಿ ಬ್ಯಾಂಕ್, ಫೆಡರಲ್ ಬ್ಯಾಂಕ್, ಎಚ್‌ ಡಿಎಫ್‌ ಸಿ ಬ್ಯಾಂಕ್, ಐಸಿಐಸಿಐ ಬ್ಯಾಂಕ್, ಐಡಿಬಿಐ ಬ್ಯಾಂಕ್, ಐಡಿಎಫ್‌ ಸಿ ಫಸ್ಟ್ ಬ್ಯಾಂಕ್, ಇಂಡಸ್ ಇಂಡ್ ಬ್ಯಾಂಕ್, ಜಮ್ಮು ಮತ್ತು ಕಾಶ್ಮೀರ ಬ್ಯಾಂಕ್,…

Read More

ಕೇಂದ್ರ ಸರಕಾರ ಎಂದು ನಾಫೆಡ್ ಕರ್ನಾಟಕ ವಿಭಾಗದ ಬಡವರಿಗಾಗಿ ವಿತರಿಸುತ್ತಿರುವ ಭಾರತ್‌ ಅಕ್ಕಿ, ಮಾಲ್ ಗಳಲ್ಲಿ ಮಾರಾಟ ಮಾಡಲು ನ್ಯಾಷನಲ್ ಅಗ್ರಿಕಲ್ಚರ್ ಕೋ ಅಪರೇಟಿವ್ ಮಾರ್ಕೆಟಿಂಗ್ ಆಫ್ ಇಂಡಿಯಾ ಲಿಮಿಟೆಡ್ (ನಾಫೆಡ್) ನಿರ್ಧರಿಸಿದೆ. “ಈ ಹಿಂದೆ ರಿಲಯನ್ಸ್ ಮಳಿಗೆಗಳಲ್ಲಿ ಮಾತ್ರ ಸಿಗುತ್ತಿದ್ದ ರಿಯಾಯಿತಿ ದರದ ಭಾರತ್ ಅಕ್ಕಿ, ಈಗ ವಿಶಾಲ್ ಮೆಗಾ ಮಾರ್ಟ್, ಸ್ಟಾರ್ ಬಜಾರ್, ಜಿಯೋ ಮಾರ್ಟ್ ಸೇರಿದಂತೆ ಹಲವು ಮಾಲ್ ಗಳಿಗೂ ವಿಸ್ತರಣೆ ಮಾಡಲಾಗಿದ್ದು, ಆನ್ ಲೈನ್‌ ಮತ್ತು ಆಫ್‌ ಲೈನ್ ‌ನಲ್ಲಿ ಖರೀದಿಸಲು ಗ್ರಾಹಕರಿಗೆ ಅವಕಾಶ ಕಲ್ಪಿಸಲಾಗಿದೆ ಎಂದು, ನಾಫೆಡ್ ಕರ್ನಾಟಕ ವಿಭಾಗದ ಮುಖ್ಯಸ್ಥೆ ಜ್ಯೋತಿ ಪಾಟೀಲ್ ತಿಳಿಸಿದರು. ಚುನಾವಣೆ ನೀತಿ ಸಂಹಿತೆ ಅಕ್ಕಿ ವಿತರಣೆಗೆ ಯಾವುದೇ ರೀತಿ ಅಡ್ಡಿ ಬರುವುದಿಲ್ಲ. ಕೇಂದ್ರ ಸರಕಾರದ ಯೋಜನೆಯಾಗಿದ್ದರೂ ಪ್ರಧಾನ ಮಂತ್ರಿ ಸೇರಿದಂತೆ ಯಾವುದೇ ವ್ಯಕ್ತಿಗಳ ಭಾವಚಿತ್ರ ಅಕ್ಕಿಯ ಬ್ಯಾಗ್ ಮೇಲೆ ಇಲ್ಲ. ಅಲ್ಲದೆ, ಈ ಕುರಿತಾದ ಬ್ಯಾನರ್ ಗಳನ್ನು ಕೂಡ ತೆಗೆಯಲಾಗಿದೆ. ಬ್ಯಾನ‌ರ್ ರಹಿತವಾಗಿ ಅಕ್ಕಿ ವಿತರಣೆ ಮಾಡಲಾಗುತ್ತಿದೆ.…

Read More

ಮಾದರಿ ನೀತಿ ಸಂಹಿತೆಯನ್ನು ಜಾರಿ ಮಾಡಿರುವ ಚುನಾವಣಾ ಆಯೋಗವು ಇದೀಗ ವಾಟ್ಸ್ ಆ್ಯಪ್ ಮೂಲಕ ಕಳುಹಿಸಲಾಗುವ ‘ವಿಕಸಿತ ಭಾರತ‘ ಸಂದೇಶಗಳನ್ನು ತಕ್ಷಣವೇ ನಿಲ್ಲಿಸುವಂತೆ ಕೇಂದ್ರ ಸರ್ಕಾರಕ್ಕೆ ನಿರ್ದೇಶನ ನೀಡಿದೆ. ಚುನಾವಣಾ ಆಯೋಗವು ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವಾಲಯಕ್ಕೆ ತಕ್ಷಣವೇ ವರದಿಯನ್ನು ಸಲ್ಲಿಸುವಂತೆ ಸೂಚಿಸಿದೆ. ಎಂಇಐಟಿವೈ ಸಂದೇಶಗಳನ್ನು ಕಳುಹಿಸುವ ಮೂಲಕ ಮಾದರಿ ಸಂಹಿತೆಯನ್ನು ಉಲ್ಲಂಘಿಸಿದ ಬಗ್ಗೆ ಹಲವಾರು ದೂರುಗಳನ್ನು ಸ್ವೀಕರಿಸಿದ ನಂತರ, ಚುನಾವಣಾ ಆಯೋಗವು ಗುರುವಾರದ ಈ ಕ್ರಮವನ್ನು ಕೈಗೊಂಡಿದೆ. ಇದಕ್ಕೆ ಪ್ರತಿಕ್ರಿಯೆ ನೀಡಿರುವ ಸಚಿವಾಲಯ, ಪ್ರಧಾನ ಮಂತ್ರಿಯವರ ಪತ್ರವನ್ನು ಒಳಗೊಂಡಿರುವ ಸಂದೇಶಗಳನ್ನು ಮಾರ್ಚ್ 15 ರಂದು ಮಾದರಿ ನೀತಿ ಸಂಹಿತೆ ( ಎಂಸಿಸಿ ) ಜಾರಿಗೆ ಬರುವ ಮೊದಲು ಕಳುಹಿಸಲಾಗಿದೆ ಮತ್ತು ಅವುಗಳಲ್ಲಿ ಕೆಲವನ್ನು” ವ್ಯವಸ್ಥೆಯ ರಚನೆ ಮತ್ತು ಜಾಲದ ಮಿತಿಗಳ ” ಕಾರಣದಿಂದಾಗಿ ವಿಳಂಬದೊಂದಿಗೆ ತಲುಪಿಸಬಹುದೆಂದು ಸಚಿವಾಲಯವು ಸಮಿತಿಗೆ ತಿಳಿಸಿತ್ತು . ಏಪ್ರಿಲ್ 19 ಮತ್ತು ಜೂನ್ 1ರ ನಡುವೆ ಏಳು ಹಂತಗಳಲ್ಲಿ ನಡೆಯಲಿರುವ ಲೋಕಸಭಾ ಚುನಾವಣೆಯ ದಿನಾಂಕಗಳನ್ನು,…

Read More

ಭಾರತೀಯ ಹವಾಮಾನ ಇಲಾಖೆಯು ಮುಂಬರುವ ಕೆಲವು ದಿನಗಳಲ್ಲಿ ಗುಡುಗು, ಮಿಂಚು ಮತ್ತು ಆಲಿಕಲ್ಲು ಸಹಿತ ಸಾಧಾರಣ ಮಳೆಯಾಗುವ ಕುರಿತು ಮುನ್ಸೂಚನೆಯನ್ನು ನೀಡಿದೆ. ಮಾರ್ಚ್‌ 22 ರಿಂದ ಮಾರ್ಚ್‌ 24 ರವರೆಗೆ ಪಶ್ಚಿಮ ಹಿಮಾಲಯದಲ್ಲಿ ವಿರಳವಾದ ಲಘು ಮಳೆ, ಹಿಮಪಾತ ಆಗುವ ಮುನ್ಸೂಚನೆಯನ್ನು ಭಾರತೀಯ ಹವಾಮಾನ ಇಲಾಖೆ ನೀಡಿದೆ. ಜಮ್ಮು ಕಾಶ್ಮೀತ, ಲಡಾಖ್‌, ಗಿಲ್ಗಿಟ್‌ ಬಾಲ್ಚಿಸ್ತಾನ್‌, ಮುಜಫರಾಬಾದ್‌, ಹಿಮಾಚಲ ಪ್ರದೇಶ ಮತ್ತು ಉತ್ತರಾಖಂಡದಲ್ಲಿ ಲಘು ಮಳೆ ಅಥವ ಹಿಮಪಾತದ ಲಕ್ಷಣವಿರಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ. ನಾಳೆ (ಮಾರ್ಚ್‌ 23) ಅರುಣಾಚಲ ಪ್ರದೇಶದಲ್ಲಿ ಅಲ್ಲಲ್ಲಿ ಭಾರೀ ಮಳೆಯಾಗುವ ಸಂಭವದ ಜೊತೆಗೆ ಹಿಮಪಾತವಾಗುವ ಮುನ್ಸೂಚನೆ ಇದೆ. ಮಾ.22, 24 ರಂದು ಪಂಜಾಬ್ ‌ನಲ್ಲಿ, ಮಾ.24 ರಂದು ಹರಿಯಾಣ ಮತ್ತು ಪಶ್ಚಿಮ ಉತ್ತರ ಪ್ರದೇಶದ ಮೇಲೆ ಚದುರಿದ ಮಳೆ ಬೀಳಲಿದೆ. ಅರುಣಾಚಲ ಪ್ರದೇಶ, ಅಸ್ಸಾಂ, ಮೇಘಾಲಯ, ನಾಗಾಲ್ಯಾಂಡ್‌, ಮಣಿಪುರ, ಮಿಜೋರಾಂ, ತ್ರಿಪುರಾ, ಉಪ ಹಿಮಾಲಯನ್‌ ಪಶ್ಚಿಮ ಬಂಗಾಳ ಮತ್ತು ಸಿಕ್ಕಿಂನಂತಹ ಈಶಾನ್ಯ ಮತ್ತು ಪೂರ್ವ ಭಾರತದ…

Read More

ನವದೆಹಲಿ: ಅಬಕಾರಿ ನೀತಿ ಪರಿಷ್ಕರಣೆಯಲ್ಲಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಸಿಎಂ ಅರವಿಂದ್‌ ಕೇಜ್ರಿವಾಲ್‌ ಅವರನ್ನು ಇಡಿ ಅಧಿಕಾರಿಗಳು ಗುರುವಾರ ಬಂಧಿಸಿದ್ದಾರೆ. ಅರವಿಂದ ಕೇಜ್ರಿವಾಲ್​ ರನ್ನು ಬಂಧನದಿಂದ ರಕ್ಷಣೆ ನೀಡಲು ದೆಹಲಿ ಹೈಕೋರ್ಟ್‌ ನಿರಾಕರಿಸಿತ್ತು. ಇಡಿ ಸಮನ್ಸ್ ನೀಡಿದ್ದನ್ನು ಪ್ರಶ್ನಿಸಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ಬಲವಂತದ ಕ್ರಮ ತೆಗೆದುಕೊಳ್ಳದಂತೆ ಇಡಿಗೆ ನಿರ್ದೇಶನ ನೀಡುವಂತೆ ಅರ್ಜಿ ಸಲ್ಲಿಸಿದ್ದ. ಆದರೆ ಅರ್ಜಿ ವಜಾ ಹಿನ್ನೆಲೆ ಕೇಜ್ರಿವಾಲ್‌ ನಿವಾಸಕ್ಕೆ ಇಡಿ ಅಧಿಕಾರಿಗಳು ಭೇಟಿ ನೀಡಿದ್ದರು. ಕೇಜ್ರಿವಾಲ್‌ರನ್ನು ನಾಳೆ ಕೋರ್ಟ್‌ಗೆ ಜಾರಿ ನಿರ್ದೇಶನಾಲಯ ಅಧಿಕಾರಿಗಳು ಹಾಜರುಪಡಿಸಲಿದ್ದಾರೆ ಎಂದು ತಿಳಿದು ಬಂದಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

Read More

ತುಮಕೂರು: ಜಿಲ್ಲಾಧಿಕಾರಿಗಳ ಕಚೇರಿ ಸಮೀಪವಿರುವ ಶತಮಾನ ಕಂಡಿರುವ ಸರ್ಕಾರಿ ಹಿರಿಯ ಪ್ರಾಥಮಿಕ   ಶಾಲೆಗೆ ಸರಿಯಾದ ಮೂಲಭೂತ ಸೌಕರ್ಯ ಕಲ್ಪಿಸಲು ಆಗ್ರಹಿಸಿ AIDSO ಜಿಲ್ಲಾ ಸಮಿತಿ ನಿಯೋಗವು ಎನ್.ಎಸ್.ಎ.ಪಿ. ವಿಭಾಗದ ಸಹ ನಿರ್ಧೇಶಕರು ಸವಿತಾರವರ ಮೂಲಕ ಮಾನ್ಯ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿತು. ಶಾಲೆಗೆ ಸರಿಯಾದ ಕಾಂಪೌಂಡ್ ಇಲ್ಲದೆ ಅನೈತಿಕ ಕೃತ್ಯಗಳ ತಾಣವಾಗಿದೆ, ಸರಿಯಾದ ಕಟ್ಟಡ ಹಾಗೂ ಮೇಲ್ಛಾವಣಿ ವ್ಯವಸ್ಥೆ ಇಲ್ಲ, ಶೌಚಾಲಯಗಳು ಒಡೆದು ಹೋಗಿವೆ. ಶಾಲಾ ಆವರಣದಲ್ಲಿ ಚೆಲ್ಲಾಪಿಲ್ಲಿಯಾಗಿ ಬಿದ್ದಿರುವ ಕಲ್ಲುಗಳು ಮತ್ತು ಕಸದ ಗುಂಡಿಗಳಿರುವುದು ಪತ್ರಿಕೆಗಳಲ್ಲಿ ವರದಿ ಆಗಿರುತ್ತದೆ. ಶೈಕ್ಷಣಿಕ ನಗರಿ ತುಮಕೂರು ನಗರದ ಹೃದಯ ಭಾಗದ ಡಿಸಿ ಕಚೇರಿ ಹತ್ತಿರದಲ್ಲೇ ಇರುವ ಶತಮಾನದ ಇತಿಹಾಸ ಬರೆದಿರುವ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಇಂದು ಕನಿಷ್ಟ ಮೂಲಭೂತ ಸೌಕರ್ಯಗಳ ಕೊರತೆಯಿಂದ ನಲುಗುತ್ತಿದೆ ಮತ್ತು ನಗರದಲ್ಲೇ ಇಂತಹ ದುಸ್ಥಿತಿಯಲ್ಲಿರುವ ಶಾಲೆಗಳು ಬಹಳಷ್ಟಿರುವುದು ಶೋಚನೀಯ ಸಂಗತಿ. ಇನ್ನು ಪತ್ರಿಕೆಯಲ್ಲಿ ವರದಿಯಾದ ಹಿನ್ನೆಲೆಯಲ್ಲಿ ಈಗಾಗಲೇ ತುಮಕೂರು ತಾಲೂಕು ಕ್ಷೇತ್ರ ಶಿಕ್ಷಣಾಧಿಕಾರಿಗಳು ಶಾಲೆಗೆ ಬೇಟಿ ಮಾಡಿರುತ್ತಾರೆ ಆದರೆ…

Read More

ಶಿವಮೊಗ್ಗ: “ಕಾಂಗ್ರೆಸ್ ಪಕ್ಷದಲ್ಲಿನ ಕುಟುಂಬ ರಾಜಕಾರಣ ಸಂಸ್ಕೃತಿ ರಾಜ್ಯ ಬಿಜೆಪಿಗೂ ತಟ್ಟಿದೆ” ಎಂದು ಮಾಜಿ ಉಪಮುಖ್ಯಮಂತ್ರಿ ಕೆ.ಎಸ್. ಈಶ್ವರಪ್ಪ, ಶಿವಮೊಗ್ಗದ ತಮ್ಮ ನಿವಾಸದಲ್ಲಿ ನಡೆದ ಗ್ರಾಮೀಣ ಭಾಗದ ಕಾರ್ಯಕರ್ತರ ಸಮಾವೇಶದಲ್ಲಿ ಹೇಳಿದರು. ಕಳೆದ ವಿಧಾನ ಸಭಾ ಚುನಾವಣೆ ವೇಳೆ ತಾವೇಕೆ ಬಂಡಾಯ ಏಳಲಿಲ್ಲ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ಕಳೆದ ವಿಧಾನ ಸಭಾ ಚುನಾವಣೆಯಲ್ಲಿ ಮೋದಿ ಅವರು ಒಂದು ಕುಟುಂಬದ ಹಿಡಿತದಲ್ಲಿ ಪಕ್ಷ ಇರಬಾರದು ಎನ್ನುತ್ತಿದ್ದರು. ಹೀಗಾಗಿ ವರಿಷ್ಠರು ಚುನಾವಣೆ ಸ್ಪರ್ಧಿಸುವುದು ಬೇಡ ಎಂದಾಗ ಒಪ್ಪಿಕೊಂಡಿದ್ದೆ. ಆದರೆ ಈಗ ಯಡಿಯೂರಪ್ಪ ಕುಟುಂಬ ರಾಜ್ಯದಲ್ಲಿ ಬಿಜೆಪಿ ಪಕ್ಷವನ್ನು ಆಳುತ್ತಿದೆ ಎಂದು ಆರೋಪಿಸಿದರು. ಒಂದು ಕುಟುಂಬದಲ್ಲಿ ಪಕ್ಷದ ಅಧಿಕಾರ ಇರಬಾರದು ಎನ್ನುವ ಸಿದ್ದಾಂತ ಈಗ ಎಲ್ಲಿ ಹೋಯಿತು ಎಂದು ಪ್ರಶ್ನಿಸಿರುವ ಅವರು, ಕುಟುಂಬ ರಾಜಕಾರಣದ ವಿರುದ್ಧ ಹೋರಾಡಬೇಕು ಎಂಬ ಕಾರಣಕ್ಕೆ ಈಗ ಚುನಾವಣೆಗೆ ಸ್ಪರ್ಧಿಸಬೇಕಾಗಿದೆ ಎಂದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ…

Read More

ಚಿಕ್ಕಮಗಳೂರು: ಸಾಮಾಜಿಕ ಮಾಧ್ಯಮ ಪ್ಲಾಟ್‌ ಫಾರ್ಮ್‌ ಎಕ್ಸ್‌ ನಲ್ಲಿ ದ್ವೇಷದ ಪೋಸ್ಟ್‌ ಅನ್ನು ಹಂಚಿಕೊಂಡ ಮಾಜಿ ಸಚಿವ ಸಿಟಿ ರವಿ ವಿರುದ್ಧ ಚಿಕ್ಕಮಗಳೂರು ಪೊಲೀಸ್‌ ಠಾಣೆಯಲ್ಲಿ ಎಫ್‌ ಐಆರ್‌ ದಾಖಲಾಗಿದೆ. ಸಾಮಾಜಿಕ ಜಾಲತಾಣವಾದ ಎಕ್ಸ್ ನಲ್ಲಿ ಸಿಟಿ ರವಿ ರಾಹುಲ್ ಗಾಂಧಿ ಹೇಳಿಕೆ ಉಲ್ಲೇಖಿಸಿ ಬರೆದುಕೊಂಡಿದ್ದ ಪೋಸ್ಟ್ ಚುನಾವಣಾ ನೀತಿ ಸಂಹಿತೆಯ ಸ್ಪಷ್ಟ ಉಲ್ಲಂಘನೆಯಾಗಿದೆ, ಎಂದು ಆರೋಪಿಸಿ ಚುನಾವಣಾ ಆಯೋಗದ ಸಾಮಾಜಿಕ ಜಾಲತಾಣಗಳ ಮೇಲ್ವಿಚಾರಣ ಸಮಿತಿಯ ಸಹಾಯಕ ಚುನಾವಣಾಧಿಕಾರಿಯೊಬ್ಬರು ನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಅವರ ದೂರಿನ ಆಧಾರದ ಮೇರೆಗೆ ಪೊಲೀಸರು ಸಿಟಿ ರವಿ ವಿರುದ್ಧ ಎಫ್‌ಐಆರ್ ದಾಖಲಿಸಿಕೊಂಡಿದ್ದಾರೆ. “ಸಾಗರದ ಆಳವನ್ನಾದರೂ ಅಳೆಯಬಹುದು, ಆದರೆ ರಾಹುಲ್ ಗಾಂಧಿ ಮನಸಿನಲ್ಲಿ ಹಿಂದೂಗಳು ಮತ್ತು ಹಿಂದೂ ಧರ್ಮದ ಬಗ್ಗೆ ಇರುವ ದ್ವೇಷವನ್ನು ಅಳೆಯಲಾಗದು. ರಾಹುಲ್ ಗಾಂಧಿ ಅವರು, ಶಕ್ತಿ ವಿರುದ್ಧ ನಮ್ಮ ಹೋರಾಟ ಎಂದಿದ್ದಾರೆ. ಹಿಂದೂ ಧರ್ಮದಲ್ಲಿ ಶಕ್ತಿ ಎಂಬುದಕ್ಕೆ ವಿಶೇಷ ಅರ್ಥ, ಗೌರವ ಇದೆ, ಇದರ ವಿರುದ್ಧ ಹೋರಾಟ ಮಾಡುವವರು, ಹಿಂದೂ…

Read More

ಕೇಂದ್ರ ಸರ್ಕಾರ ತನಿಖಾ ಸಂಸ್ಥೆಗಳ ದುರ್ಬಳಕೆ ಮಾಡಿಕೊಳ್ಳುತ್ತಿದ್ದು, ಚುನಾವಣಾ ಬಾಂಡ್ ಗಳ ಮೂಲಕ ತನ್ನ ಖಜಾನೆ ತುಂಬಿಸಿಕೊಂಡಿದೆ. ಆದರೆ ವಿಪಕ್ಷಗಳ ಬ್ಯಾಂಕ್ ಖಾತೆಗಳನ್ನ ಸೀಜ್ ಮಾಡಿದ್ದಾರೆ. ಹೀಗಾದರೇ ಚುನಾವಣೆಗಳು ನ್ಯಾಯ ಸಮ್ಮತವಾಗಿ ನಡೆಯಲು ಸಾಧ್ಯವೇ..? ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವಾಗ್ದಾಳಿ ನಡೆಸಿದ್ದಾರೆ. ನವದೆಹಲಿಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಕಾಂಗ್ರೆಸ್‌ ಹಿರಿಯ ನಾಯಕಿ ಸೋನಿಯಾ ಗಾಂಧಿ ಮತ್ತು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಜಂಟಿ ಸುದ್ದಿಗೋಷ್ಠಿ ನಡೆಸಿ ಕೇಂದ್ರ ಸರ್ಕಾರದ ವಿರುದ್ದ ಆಕ್ರೋಶ ವ್ಯಕ್ತಪಡಿಸಿದರು. ಸರ್ಕಾರ ಇಡಿ ಐಟಿ ಸಿಬಿಐ ದುರ್ಬಳಕೆ ಮಾಡಿಕೊಳ್ಳುತ್ತಿದೆ. ನಮ್ಮ ಹಣವನ್ನ ಕಿತ್ತುಕೊಳ್ಳುವ ಪ್ರಯತ್ನ ಮಾಡಿತ್ತಿದೆ. ಚುನಾವಣಾ ಬಾಂಡ್ ಗಳು ಅಕ್ರಮ ಎಂದು ಸುಪ್ರೀಂ ಹೇಳಿದೆ. ಚುನಾವಣಾ ಬಾಂಡ್ ಮೂಲಕ ಹಣ ಪಡೆಯಲಾಗುತ್ತದೆ. ಆದರೆ ನಮ್ಮ ಬ್ಯಾಂಕ್ ಅಕೌಂಟ್ ಗಳನ್ನ ಸೀಜ್ ಮಾಲಾಗಿದೆ ಮೋದಿ ಕಾಂಗ್ರೆಸ್ ವಿರುದ್ದ ಷಡ್ಯಂತ್ರ ನಡೆಸುತ್ತಿದ್ದಾರೆ. ನಮ್ಮ ಅಕೌಂಟ್ ನ 250 ಕೋಟಿ ಬಳಕೆ ಮಾಡಲು ಆಗುತ್ತಿಲ್ಲ. 31 ವರ್ಷಗಳ…

Read More